ರಾಜ್ಯ

ಐಪಿಎಸ್ ಅಧಿಕಾರಿ ರವಿ‌ ಡಿ. ಚೆನ್ನಣ್ಣನವರ್ ವರ್ಗಾವಣೆಗೆ ಬ್ರೇಕ್

ಸಮಗ್ರ ನ್ಯೂಸ್ ಡೆಸ್ಕ್: ಐಪಿಎಸ್ ಅಧಿಕಾರಿ ರವಿ.ಡಿ.ಚೆನ್ನಣ್ಣನವರ್ ರನ್ನು ವಾಲ್ಮೀಕಿ ಬುಡಕಟ್ಟು ನಿಗಮದ ಎಂಡಿ ಆಗಿ ವರ್ಗಾಯಿಸಿದ್ದ ರಾಜ್ಯ ಸರ್ಕಾರ ಇದೀಗ ಆದೇಶಕ್ಕೆ ತಡೆ ಹಿಡಿದಿದೆ.ರಾಜ್ಯ ಸರ್ಕಾರವು ಜನವರಿ 26 ರಂದು ರವಿ ಡಿ.ಚೆನ್ನಣ್ಣನವರ್ ಸೇರಿ ಒಟ್ಟು 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ರವಿ.ಡಿ.ಚೆನ್ನಣ್ಣನವರ್ ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ಸರ್ಕಾರ ರವಿ. ಡಿ.ಚೆನ್ನಣ್ಣನವರ್ ರನ್ನು ವಾಲ್ಮೀಕಿ ಬುಡಕಟ್ಟು ನಿಗಮದ ಎಂಡಿ ಆಗಿ ವರ್ಗಾವಣೆ ಮಾಡಿತ್ತು. ರವಿ ಚೆನ್ನಣ್ಣನವರ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳ […]

ಐಪಿಎಸ್ ಅಧಿಕಾರಿ ರವಿ‌ ಡಿ. ಚೆನ್ನಣ್ಣನವರ್ ವರ್ಗಾವಣೆಗೆ ಬ್ರೇಕ್ Read More »

ಮರಗಳ್ಳರ ರಕ್ಷಣೆಗೆ ನಿಂತರಾ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ? ಮಹಿಳಾ ಅರಣ್ಯಾಧಿಕಾರಿಗೆ ಏಕಾಏಕಿ ವರ್ಗಾವಣೆ ಯಾಕೆ? ಇದರ ಹಿಂದಿನ ಮಸಲತ್ತೇನು?

ಸಮಗ್ರ ವರದಿ: ಅರಣ್ಯ ಸಂಚಾರಿ ದಳ ಉಡುಪಿ ವಲಯ ಅರಣ್ಯಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅರಣ್ಯ ಸಂಚಾರಿ ದಳದ ಪ್ರಭಾರ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಸಚಿನ್ ಅವರನ್ನು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಮುಖ್ಯಮಂತ್ರಿಗೆ ಮನವಿ ಮಾಡಿ ಬೀದರ್ ನ ನೌಬಾದ್ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಿರುವುದು ರಾಜಕೀಯ ದ್ವೇಷ ಮತ್ತು ದಂಧೆಕೋರರ ಮಸಲತ್ತು ಎಂಬ ಮಾತುಗಳು ಕೇಳಿಬರುತ್ತಿದೆ. ಮರಗಳ್ಳರಿಗೆ ಬೆಳ್ತಂಗಡಿ ಶಾಸಕರೇ ರಕ್ಷಕರಾದರಾ? ಎಂಬ ಅನುಮಾನ ಈಗ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಮರಗಳ್ಳರ ರಕ್ಷಣೆಗೆ ನಿಂತರಾ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ? ಮಹಿಳಾ ಅರಣ್ಯಾಧಿಕಾರಿಗೆ ಏಕಾಏಕಿ ವರ್ಗಾವಣೆ ಯಾಕೆ? ಇದರ ಹಿಂದಿನ ಮಸಲತ್ತೇನು? Read More »

‘ಪದೇ ಪದೇ ಹೇಳುವ ಅಭ್ಯಾಸ ನನಗಿಲ್ಲ, ಕಾಲಮಿತಿಯೊಳಗೆ ಕೆಲಸ ಮಾಡಿ’ – ಅಧಿಕಾರಿಗಳಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ತಾಕೀತು

ಸಮಗ್ರ ನ್ಯೂಸ್ ಡೆಸ್ಕ್: ‘ಒಂದು ಕೆಲಸವನ್ನು ಮಾಡುವಂತೆ ಅಥವಾ ಆದೇಶವನ್ನು ಪಾಲಿಸುವಂತೆ ಒಂದು ಬಾರಿ ಮಾತ್ರ ಹೇಳುವ ಸ್ವಭಾವ ನನ್ನದು. ಅದೇ ಕೆಲಸವನ್ನು ಮಾಡುವಂತೆ ಅಥವಾ ಆದೇಶವನ್ನು ಪಾಲಿಸುವಂತೆ ಎರಡನೇ ಬಾರಿ ನೆನಪಿಸುವ ಅಭ್ಯಾಸ ನನಗಿಲ್ಲ. ಹಾಗಾಗಿ ಅಧಿಕಾರಿ, ಸಿಬ್ಬಂದಿಗಳೆಲ್ಲರೂ ಕಾಲಮಿತಿಯೊಳಗೆ ಕೆಲಸ ಮಾಡಬೇಕು’ ಎಂದು ದ.ಕ.ಜಿಲ್ಲಾ ನೂತನ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು. ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ

‘ಪದೇ ಪದೇ ಹೇಳುವ ಅಭ್ಯಾಸ ನನಗಿಲ್ಲ, ಕಾಲಮಿತಿಯೊಳಗೆ ಕೆಲಸ ಮಾಡಿ’ – ಅಧಿಕಾರಿಗಳಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ತಾಕೀತು Read More »

ಮಳೆ ಬರುವ ಹಾಗಿದೆ…| ಹವಾಮಾನ ಇಲಾಖೆಯಿಂದ ಎಚ್ಚರಿಕೆ ಸಂದೇಶ|

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಚಳಿಯ ತೀವ್ರತೆ ಕೊಂಚ ಕಡಿಮೆಯಾಗಿದ್ದು ಮತ್ತೆ ಮಳೆಯಾಗುವ ಲಕ್ಷಣಗಳು ಕಂಡು ಬರುತ್ತಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಲಘು ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಚಳಿಗಾಲದಲ್ಲಿ ಮಳೆಯಾಗುವುದು ಸಹಜ ಮತ್ತು ಹವಾಮಾನದಲ್ಲಿ ಬದಲಾವಣೆಯಾಗುತ್ತಿರುವುದರಿಂದ ಮುಂದಿನ ತಿಂಗಳ ಮಧ್ಯ ಭಾಗದವರೆಗೂ ಮಳೆ, ಚಳಿಯ ಕಣ್ಣಾಮುಚ್ಚಾಲೆ ಆಟ

ಮಳೆ ಬರುವ ಹಾಗಿದೆ…| ಹವಾಮಾನ ಇಲಾಖೆಯಿಂದ ಎಚ್ಚರಿಕೆ ಸಂದೇಶ| Read More »

ಕೋವಿಡ್ ಟೆಸ್ಟಿಂಗ್ ಗೆ ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ| ಕೊರೊನಾ ಮನೆ ಪರೀಕ್ಷೆಗೆ ಸಿದ್ಧತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಸಾಕಷ್ಟು ಜನ ಆಸ್ಪತ್ರೆಗೆ ತೆರಳದೇ ಮನೆಯಲ್ಲಿಯೇ ಕೊರೊನಾ ಪರೀಕ್ಷೆ ತೆಗೆದುಕೊಳ್ಳುತ್ತಿದ್ದಾರೆ. ಇದಕ್ಕಾಗಿ ಮನೆಯಲ್ಲಿಯೇ ಕೊರೊನಾ ಮನೆ ಪರೀಕ್ಷೆಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ. ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಈ ಮಾಹಿತಿಯನ್ನ ಟ್ವಿಟ್‌ ಮೂಲಕ ಹಂಚಿಕೊಂಡಿದ್ದಾರೆ. ಕೋವಿಡ್ ಮನೆ ಪರೀಕ್ಷೆಗೆ ಹೊಸ ಮಾರ್ಗಸೂಚಿಗಳನ್ವಯ ಪರೀಕ್ಷೆಯು ಕೋವಿಡ್ ಪಾಸಿಟಿವ್ ತೋರಿಸಿದರೆ ಈ ಕೆಳಗಿನ ಲಿಂಕ್ ಮೂಲಕ ನವೀಕರಿಸಿಕೊಳ್ಳಬಹುದು. https://cvstatus.icmr.gov.in. ಒಂದು ವೇಳೆ ನೆಗೆಟಿವ್ ವರದಿ ಬಂದಿದ್ದು, ಕೋವಿಡ್

ಕೋವಿಡ್ ಟೆಸ್ಟಿಂಗ್ ಗೆ ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ| ಕೊರೊನಾ ಮನೆ ಪರೀಕ್ಷೆಗೆ ಸಿದ್ಧತೆ Read More »

ಬೆಂಗಳೂರಿನ ಸುತ್ತಮುತ್ತ ನಕಲಿ ನಂದಿನಿ ತುಪ್ಪ ಜಾಲ

ಬೆಂಗಳೂರು: ಮೈಸೂರಿನ ಬಳಿಕ ಬೆಂಗಳೂರಿನಲ್ಲಿಯೂ ನಕಲಿ ತುಪ್ಪದ ಜಾಲ ಪತ್ತೆಯಾಗಿದ್ದು ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ ಮೈಸೂರಿನಲ್ಲಿ ಉತ್ಪಾದಿಸಲ್ಪಟ್ಟ ನಕಲಿ ತುಪ್ಪ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಕೆಎಂಎಫ್ ಅಧಿಕಾರಿಗಳ ಪರಿಶೀಲನೆ ವೇಳೆ ನಕಲಿ ತುಪ್ಪದ ಜಾಲ ಬಯಲಾಗಿದೆ. ನಕಲಿ ತುಪ್ಪ ಪತ್ತೆಗಾಗಿ ಹಲವು ತಂಡಗಳನ್ನು ರಚನೆ ಮಾಡಿದ್ದ ಕೆಎಂಎಫ್ ಅಧಿಕಾರಿಗಳು ಬೆಂಗಳೂರಿನ ಹನುಮಂತನಗರ, ಜಯನಗರ, ರಾಜಾಜಿನಗರ ನೆಲಮಂಗಲ ಬಳಿಯ ಮಾಕಳಿ, ಹೊಸಕೋಟೆಯ ದೇವನಗೊಂದಿ ಹಾಗೂ ಇನ್ನಿತರ ಕಡೆಗಳಲ್ಲಿ ಸಗಟು ಮಾರಾಟದ ಅಂಗಡಿಗಳು ಮತ್ತು ಗೋದಾಮುಗಳಲ್ಲಿ

ಬೆಂಗಳೂರಿನ ಸುತ್ತಮುತ್ತ ನಕಲಿ ನಂದಿನಿ ತುಪ್ಪ ಜಾಲ Read More »

ವೀಕೆಂಡ್ ಕರ್ಪ್ಯೂ ರದ್ದು ಹಿನ್ನೆಲೆ| ಶನಿವಾರದ ರಜೆ ಹಿಂಪಡೆದ ರಾಜ್ಯ ಸರ್ಕಾರ| ಈ ವಾರದಿಂದ ಮತ್ತೆ ಫುಲ್ ಡ್ಯೂಟಿ

ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಿ, ಶನಿವಾರದಂದು ರಜೆ ಘೋಷಣೆ ಮಾಡಲಾಗಿತ್ತು. ವೀಕೆಂಡ್ ಕರ್ಪ್ಯೂ ರದ್ದುಗೊಂಡ ಕಾರಣ, ಈಗ ಆ ಆದೇಶವನ್ನು ವಾಪಾಸ್ ಪಡೆಯಲಾಗಿದೆ. ಹೀಗಾಗಿ ಇನ್ಮುಂದೆ ವಾರದ 6 ದಿನ ರಜೆ ಮಾಡುವಂತೆ ತಿಳಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟೀಕರಣ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು

ವೀಕೆಂಡ್ ಕರ್ಪ್ಯೂ ರದ್ದು ಹಿನ್ನೆಲೆ| ಶನಿವಾರದ ರಜೆ ಹಿಂಪಡೆದ ರಾಜ್ಯ ಸರ್ಕಾರ| ಈ ವಾರದಿಂದ ಮತ್ತೆ ಫುಲ್ ಡ್ಯೂಟಿ Read More »

ಸದ್ಯದಲ್ಲೇ ನಡೆಯಲಿದೆ 400 ಪಶುವೈದ್ಯರ ನೇಮಕ| ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ

ಬೆಂಗಳೂರು: ಪಶು ವೈದ್ಯ ಇಲಾಖೆಗೆ 400 ಪಶು ವೈದ್ಯರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸುಮಾರು 800 ಹುದ್ದೆಗಳು ಖಾಲಿ ಇದ್ದು, ಪಶು ವೈದ್ಯರ ತೀವ್ರ ಕೊರತೆ ಅನುಭವಿಸುತ್ತಿರುವುದರಿಂದ, 400 ವೈದ್ಯರನ್ನು ಇಲಾಖಾ ನೇಮಕಾತಿ ಮೂಲಕ ಭರ್ತಿ ಮಾಡಲು ಒಪ್ಪಿಗೆ ನೀಡಲಾಯಿತು ಎಂದು ಗುರುವಾರ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, 14 ಎಂಜಿನಿಯರಿಂಗ್‌

ಸದ್ಯದಲ್ಲೇ ನಡೆಯಲಿದೆ 400 ಪಶುವೈದ್ಯರ ನೇಮಕ| ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ Read More »

ಪ್ರ.ದ.ಕಾಲೇಜು ಅತಿಥಿ ಉಪನ್ಯಾಸಕರ ನೇಮಕಾತಿಗೆ ನಾಳೆ(ಜ.27)ಯಿಂದ ಆನ್ ಲೈನ್ ಕೌನ್ಸಲಿಂಗ್

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿಗೆ ಜನವರಿ 27 ರಿಂದ ಕೌನ್ಸೆಲಿಂಗ್ ನಡೆಯಲಿದೆ. ಜನವರಿ 27 ರಿಂದ 30 ರವರೆಗೆ ಆನ್ ಲೈನ್ ಕೌನ್ಸೆಲಿಂಗ್ ನಡೆಯಲಿದೆ. ಈ ಕುರಿತು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. 10,636 ಅತಿಥಿ ಉಪನ್ಯಾಸಕರ ನೇಮಕಾತಿ ನಡೆಯಲಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು ಜೇಷ್ಠತೆ ಆಧಾರದಲ್ಲಿ ತಮಗೆ ಬೇಕಾದ ಕಾಲೇಜು ಆಯ್ಕೆ ಮಾಡಿಕೊಳ್ಳಬಹುದು. ನೇಮಕವಾದ ಬಳಿಕ ಎರಡು ದಿನಗಳಲ್ಲಿ ವರದಿ ಮಾಡಿಕೊಳ್ಳಬೇಕಿದೆ.

ಪ್ರ.ದ.ಕಾಲೇಜು ಅತಿಥಿ ಉಪನ್ಯಾಸಕರ ನೇಮಕಾತಿಗೆ ನಾಳೆ(ಜ.27)ಯಿಂದ ಆನ್ ಲೈನ್ ಕೌನ್ಸಲಿಂಗ್ Read More »

ಚಾರ್ಮಾಡಿ: ಹೊತ್ತಿ ಉರಿದ ನೂರಾರು ಎಕರೆ ಅರಣ್ಯ

ಚಿಕ್ಕಮಗಳೂರು: ಗುಡ್ಡಕ್ಕೆ ಬೆಂಕಿ ತಗುಲಿ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾವುತಿಯಾಗಿರೋ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ನಡೆದಿದೆ. ಮಳೆಗಾಲದಲ್ಲಿ ಯಥೇಚ್ಛವಾಗಿ ಮಳೆ ಸುರಿದ ಕೊಟ್ಟಿಗೆಹಾರ ಭಾಗದಲ್ಲಿ ಈಗ ಅಷ್ಟೆ ಪ್ರಮಾಣದಲ್ಲಿ ಬಿಸಿಲು ಸುಡುತ್ತಿದೆ. ಬಿರುಬಿಸಿಲಿಗೆ ಗುಡ್ಡಗಳೆಲ್ಲಾ ಒಣಗಿ ನಿಂತಿದೆ. ಮಲಯ ಮಾರುತ ಗುಡ್ಡ ವ್ಯೂ ಪಾಯಿಂಟ್ ಆಗಿರುವುದರಿಂದ ಪ್ರವಾಸಿಗರು ಯಾರೋ ಸಿಗರೇಟ್ ಸೇದಿ ಎಸೆದಿರುವುದರಿಂದ ಬೆಂಕಿ ತಗುಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಗುಡ್ಡಕ್ಕೆ ಬೆಂಕಿ ತಗುಲಿದೆ ಎಂದು

ಚಾರ್ಮಾಡಿ: ಹೊತ್ತಿ ಉರಿದ ನೂರಾರು ಎಕರೆ ಅರಣ್ಯ Read More »