ರಾಜ್ಯ

ವಿವಾದಾತ್ಮಕ ಹೇಳಿಕೆ ಪ್ರಕರಣ| ಕ್ಷಮೆಯಾಚಿಸಿದ ನಾದಬ್ರಹ್ಮ ಹಂಸಲೇಖ

ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ, ಸಿನಿಮಾ ಸಾಹಿತಿ ನಾದ ಬ್ರಹ್ಮ ಹಂಸಲೇಖ ಅವರು ಪೇಜಾವರ ಶ್ರೀಗಳ ಕುರಿತು ಆಡಿದ ಮಾತುಗಳಿಗೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರು ಕ್ಷಮೆಯಾಚಿಸಿದ್ದಾರೆ. ನಾನು ಒಬ್ಬ ಸಂಗೀತಗಾರ.ನನಗೆ ಯಾರಿಗೂ ನೋವು ಕೊಡಲು ಇಷ್ಟವಿಲ್ಲ. ನನ್ನ ಸಂಗೀತದಂತೆ ನನ್ನ ಮಾತು, ಬದುಕು ಕೂಡ ಎಲ್ಲರಿಗೂ ಸುಖ ಕೊಡಬೇಕು. ಆದರೆ, ಎಲ್ಲಾ ಅನಿಷ್ಠಗಳನ್ನು ತೊಡೆದು ಹಾಕುವ ದಿಸೆಯಲ್ಲಿ ನನ್ನ ಪಾತ್ರವೂ ಯಾವುದೇ ಮೂಲಕ ಇದ್ದರೆ ಅದನ್ನು ನಾನು ಮಾಡಿಯೇ ಮಾಡುತ್ತೇನೆ ಎಂದು ಹೇಳಿದ್ದಾರೆ. […]

ವಿವಾದಾತ್ಮಕ ಹೇಳಿಕೆ ಪ್ರಕರಣ| ಕ್ಷಮೆಯಾಚಿಸಿದ ನಾದಬ್ರಹ್ಮ ಹಂಸಲೇಖ Read More »

ಪೇಜಾವರ ಶ್ರೀ, ಬಿಳಿಗಿರಿ ರಂಗನಾಥ ಸ್ವಾಮಿ ಕುರಿತು ವಿವಾದಾತ್ಮಕ ಹೇಳಿಕೆ| ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆಯಾಚನೆಗೆ ಆಗ್ರಹ|

ಬೆಂಗಳೂರು : ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಗೀತ ನಿರ್ದೇಶಕ ಹಂಸಲೇಖ ಮಾತನಾಡಿದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಭಾರೀ ವಿವಾದ ಸೃಷ್ಟಿಸಿದೆ. ದಲಿತರನ್ನು ಒಳಗೊಳ್ಳುವಿಕೆ ಕುರಿತು ಉಡುಪಿ ಪೇಜಾವರ ಮಠದ ಸ್ವಾಮೀಜಿ ನಡೆಸಿದ ಪಾದಯಾತ್ರೆಗಳು, ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ನಡೆಸಿದ ಗ್ರಾಮ ವಾಸ್ತವ್ಯ ಹಾಗೂ ಬಿಳಿಗಿರಿ ರಂಗನಾಥಸ್ವಾಮಿ ಕುರಿತು ಹಂಸಲೇಖ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಪೇಜಾವರ ಸ್ವಾಮಿಗಳು ದಲಿತ ಮನೆಯಲ್ಲಿ ಇದ್ದು ಬಂದಿದ್ದರು ಎಂದು ಇತ್ತೀಚೆಗೆ ನೋಡಿದೆ. ಅವರು ಮನೆಯಲ್ಲಿ ಕೋಳಿ ಕೊಟ್ಟರೆ ತಿನ್ನೋಕಾಗುತ್ತ?

ಪೇಜಾವರ ಶ್ರೀ, ಬಿಳಿಗಿರಿ ರಂಗನಾಥ ಸ್ವಾಮಿ ಕುರಿತು ವಿವಾದಾತ್ಮಕ ಹೇಳಿಕೆ| ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆಯಾಚನೆಗೆ ಆಗ್ರಹ| Read More »

ರಾಜ್ಯದಲ್ಲಿ ಮತ್ತೊಂದು ವಾರ ಮಳೆಕಾಟ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 17ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದನ್ನು ಹೊರತುಪಡಿಸಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಲಿದೆ.

ರಾಜ್ಯದಲ್ಲಿ ಮತ್ತೊಂದು ವಾರ ಮಳೆಕಾಟ Read More »

ಕೆನರಾ ಬ್ಯಾಂಕ್ ಸಿಬ್ಬಂದಿಯಿಂದ ಕನ್ನಡಿಗನಿಗೆ ಅವಮಾನ| ಕ್ರಮ ಜರುಗಿಸಿದ ಬ್ಯಾಂಕ್|

ಬೆಂಗಳೂರು: ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಕೆನರಾ ಬ್ಯಾಂಕ್ ನಲ್ಲಿ ಕನ್ನಡಿಗನಿಗೆ ಅವಮಾನ ಮಾಡಿದ ಘಟನೆ ಸಂಬಂಧ ಕೆನರಾ ಬ್ಯಾಂಕ್ ವಿಷಾದ ವ್ಯಕ್ತಪಡಿಸಿದ್ದು, ಕನ್ನಡಿಗನಿಗೆ ಅವಮಾನ ಮಾಡಿದ ಬ್ಯಾಂಕ್ ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಂಡಿದೆ. ರೈತರೊಬ್ಬರು ಕೆನರಾ ಬ್ಯಾಂಕ್ ಗೆ ತೆರಳಿದ್ದಾಗ, ಅವರು ಕನ್ನಡದಲ್ಲಿ ಸೇವೆ ಕೊಡಿ ಎಂದು ಕೇಳಿದ್ದರು. ಇದಕ್ಕೆ ಧಿಮಾಕಿನಿಂದ ಪ್ರತಿಕ್ರಿಯೆ ನೀಡಿದ್ದ ಉತ್ತರ ಭಾರತ ಮೂಲದ ಸಿಬ್ಬಂದಿ ಕನ್ನಡ ಮಾತನಾಡೋದಿಲ್ಲ. ಬೇಕಾದರೆ ಅಕೌಂಟ್ ಕ್ಲೋಸ್ ಮಾಡಿ. ಬ್ಯಾಂಕ್ ನಿಂದ ಹೊರಗೆ ಹೋಗಿ,

ಕೆನರಾ ಬ್ಯಾಂಕ್ ಸಿಬ್ಬಂದಿಯಿಂದ ಕನ್ನಡಿಗನಿಗೆ ಅವಮಾನ| ಕ್ರಮ ಜರುಗಿಸಿದ ಬ್ಯಾಂಕ್| Read More »

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ‌ಮುಂದುವರಿದ ಮಳೆ| ಜಿಲ್ಲೆಗಳಲ್ಲಿ ಎಚ್ಚರದಿಂದಿರಲು‌ ಸೂಚನೆ|

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರಲ್ಲಿ ತಾಪಮಾನ ಕುಸಿದಿದ್ದು, ಶೀತಗಾಳಿ ಬೀಸುತ್ತಿದೆ. ನಗರದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಗುರುವಾರ ದಿನ ಪೂರ್ತಿ ಮಳೆಯಾಗಿದೆ. ಜಿಟಿ ಜಿಟಿ ಮಳೆ ಹಾಗೂ ಶೀತದ ವಾತಾವರಣ ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುತ್ತಿದೆ. ಬೆಂಗಳೂರು ನಗರದ ತಾಪಮಾನ 17 ರಿಂದ 18 ಡಿಗ್ರಿಗೆ ಕುಸಿದಿದೆ. ಗುರುವಾರ ದಿನಪೂರ್ತಿ ತುಂತುರು

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ‌ಮುಂದುವರಿದ ಮಳೆ| ಜಿಲ್ಲೆಗಳಲ್ಲಿ ಎಚ್ಚರದಿಂದಿರಲು‌ ಸೂಚನೆ| Read More »

ಕಡಬ: ಒಂದೂವರೆ ವರ್ಷದಿಂದ ನಿರಂತರ ಲೈಂಗಿಕ ದೌರ್ಜನ್ಯ| ಗರ್ಭಿಣಿಯಾದ ಅಪ್ರಾಪ್ತೆ, ಆರೋಪಿ ಅಂದರ್|

ಕಡಬ: ತಾಲೂಕಿನ ಕೋಡಿಂಬಾಳ ಗ್ರಾಮದಲ್ಲಿ ಅಪ್ರಾಪ್ತೆ ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಾಲಕಿಯ ಸಂಬಂಧಿಕನನ್ನು ಪೊಕ್ಸೊ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಕೋಡಿಂಬಾಳ ಗ್ರಾಮದ ಪಾಜೋವು ಸಮೀಪದ ರಮೇಶ್ ಎಂಬಾತ ತನ್ನ ಸಂಬಂಧಿಕರಾಗಿರುವ ಅಪ್ರಾಪ್ತೆಯನ್ನು ಕಳೆದ ಒಂದೂವರೆ ವರ್ಷದಿಂದ ಲೈಂಗಿಕವಾಗಿ ಬಳಸಿಕೊಂಡಿದ್ದು, ಇದೀಗ ಆಕೆ ಗರ್ಭವತಿಯಾಗಿದ್ದು ಪ್ರಕರಣ ಬೆಳಕಿಗೆ ಬಂದಿದೆ.ಆರೋಪಿ ರಮೇಶನನ್ನು ಕಡಬ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಪೊಕ್ಸೊ ಪ್ರಕರಣ ದಾಖಲಿಸಿದ್ದಾರೆ. 2020ರ ಏಪ್ರಿಲ್ ತಿಂಗಳಿನಿಂದ ರಮೇಶ್ ಆಗಾಗ ಬಾಲಕಿಯ ಮನೆಗೆ ಬರುತ್ತಿದ್ದ

ಕಡಬ: ಒಂದೂವರೆ ವರ್ಷದಿಂದ ನಿರಂತರ ಲೈಂಗಿಕ ದೌರ್ಜನ್ಯ| ಗರ್ಭಿಣಿಯಾದ ಅಪ್ರಾಪ್ತೆ, ಆರೋಪಿ ಅಂದರ್| Read More »

ಅಷ್ಟಕ್ಕೂ ಹಾಜಬ್ಬರ ಕೈಗೆ ಏನಾಗಿತ್ತು?: ಕೈಗೆ ಗಾಯವಾಗಲು ಕಾರಣ ಏನು ಗೊತ್ತಾ?

ಮಂಗಳೂರು: ಹರೇಕಳ ಹಾಜಬ್ಬರ ವ್ಯಕ್ತಿತ್ವದ‌ ಬಗ್ಗೆ ತಿಳಿದುಕೊಳ್ಬೇಕಾದ್ರೆ ಈ ಸ್ಟೋರಿ ಓದ್ಲೇ ಬೇಕು. ಇದು ಅವರ ವ್ಯಕ್ತಿತ್ವದ ಅನಾವರಣ. ಹಾಜಬ್ಬ ಕಡುಬಡತನ ಹೊಂದಿದರೂ ಮನೆಗೆ ಬಂದವರಿಗೆ ಸತ್ಕಾರ ಮಾಡದೇ ಕಳುಹಿಸಿದವರಲ್ಲ. ತಮ್ಮ ಕುಟುಂಬ ಸದಸ್ಯರಿಗೆ ಅನಾರೋಗ್ಯವಿದ್ದರೂ ಯಾರ ಮುಂದೆಯೂ ವೈಯುಕ್ತಿಕವಾಗಿ ಹಣ ಕೇಳಿದವರಲ್ಲ. ಮನೆಗೆ ಬಂದವರಿಗೆ ಸೀಯಾಳ ನೀಡಿ ಸತ್ಕರಿಸೋದು ಹಾಜಬ್ಬರ ಸಂಪ್ರದಾಯ. ನವೆಂಬರ್ 8ರಂದು ಹಾಜಬ್ಬರು ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ್ದರು. ನವೆಂಬರ್ 7ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ

ಅಷ್ಟಕ್ಕೂ ಹಾಜಬ್ಬರ ಕೈಗೆ ಏನಾಗಿತ್ತು?: ಕೈಗೆ ಗಾಯವಾಗಲು ಕಾರಣ ಏನು ಗೊತ್ತಾ? Read More »

ಕಣ್ಣೀರು ತರಿಸುತ್ತೆ ಈ ಕಥೆ..! ಮೃತ ಗರ್ಭಿಣಿ ಹೊಟ್ಟೆಯಲ್ಲಿ ಜೀವಂತ ಮಗು| ವೈದ್ಯಲೋಕದ ಅಚ್ಚರಿ

ಗದಗ : ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಮೃತ ಗರ್ಭಿಣಿ ಹೊಟ್ಟೆಯಿಂದ ಜೀವಂತ ಮಗುವನ್ನು ಹೊರತೆಗೆದಿದ್ದಾರೆ. ಗರ್ಭಿಣಿ ಅನ್ನಪೂರ್ಣ ಎಂಬುವವರು ಲೋ ಬಿಪಿ, ಮೂರ್ಛೆ ರೋಗದಿಂದ ಬಳಲುತ್ತಿದ್ದರು. ಊರಿನಿಂದ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಗರ್ಭಿಣಿ ಮೃತಪಟ್ಟಿದ್ದಾರೆ. ಆದರೆ ಹೊಟ್ಟೆಯಲ್ಲಿದ್ದ ಮಗು ಜೀವಂತವಿರುವುದು ವೈದ್ಯರಿಗೆ ತಿಳಿದ ತಕ್ಷಣ ಆಪರೇಷನ್ ಮಾಡಿದ್ದಾರೆ. ಆಪರೇಷನ್ ನಡೆಸಿದ ವೈದ್ಯರ ತಂಡ ಹೆಣ್ಣು ಮಗುವನ್ನು ಹೊರತೆಗೆದಿದ್ದಾರೆ. ನವೆಂಬರ್ 4ರಂದು ನಡೆದ ಅಪರೂಪದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗದಗ ಜಿಲ್ಲೆಯ ರೋಣ

ಕಣ್ಣೀರು ತರಿಸುತ್ತೆ ಈ ಕಥೆ..! ಮೃತ ಗರ್ಭಿಣಿ ಹೊಟ್ಟೆಯಲ್ಲಿ ಜೀವಂತ ಮಗು| ವೈದ್ಯಲೋಕದ ಅಚ್ಚರಿ Read More »

ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ| ಟಿವಿ ತೋರಿಸುವ ನೆಪದಲ್ಲಿ 3 ವರ್ಷದ ಕಂದಮ್ಮನ ಅತ್ಯಾಚಾರ|

ಶಿವಮೊಗ್ಗ: 3 ವರ್ಷದ ಕಂದಮ್ಮನ ಮೇಲೆ ಪಕ್ಕದ ಮನೆಯ ಯುವಕನೇ ಅತ್ಯಾಚಾರವೆಸಗಿರುವ ಘೋರ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಮಗುವಿಗೆ ಟಿವಿ ತೋರಿಸುವ ಆಮಿಷವೊಡ್ಡಿ ಕರೆದೊಯ್ದ ನೆರೆಮನೆ ಯುವಕ ಬಳಿಕ ನೀಚ ಕೃತ್ಯವೆಸಗಿದ್ದಾನೆ. ಮಗುವಿಗೆ ರಕ್ತಸ್ರಾವವಾಗುತ್ತಿರುವುದನ್ನು ಕಂಡ ಪೋಷಕರು ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಕೃತ್ಯದ ಬಗ್ಗೆ ಗೊತ್ತಾಗಿದೆ. ಆರೋಪಿ ಯುವಕನನ್ನು ಹಿಡಿದು ಪೋಷಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ| ಟಿವಿ ತೋರಿಸುವ ನೆಪದಲ್ಲಿ 3 ವರ್ಷದ ಕಂದಮ್ಮನ ಅತ್ಯಾಚಾರ| Read More »

ಧಾರವಾಡ: ಖ್ಯಾತ ತಬಲಾ ಕಲಾವಿದ ಪಂ. ಷಡಾಕ್ಷರಯ್ಯ ಗುಡ್ಡದಮಠ ನಿಧನ

ಧಾರವಾಡ: ಉತ್ತರ ಕರ್ನಾಟಕದ ಪ್ರಸಿದ್ಧ ತಬಲಾ ಕಲಾವಿದ ಪಂ. ಷಡಾಕ್ಷರಯ್ಯ ಗುಡ್ಡದಮಠ (74) ಇಂದು (ಗುರುವಾರ) ಬೆಳಿಗ್ಗೆ ನಿಧನರಾಗಿದ್ದಾರೆ. ಪಂ.ಷಡಕ್ಷರಯ್ಯ ಅವರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂದು ಬಳಗ ಹಾಗೂ ಶಿಷ್ಯ ವೃಂದವನ್ನು ಅಗಲಿದ್ದಾರೆ. ಪಂ.ಷಡಕ್ಷರಯ್ಯ ಅವರು ರಾಜ್ಯ ಹಾಗೂ ದೇಶದ ವಿವಿಧ ಭಾಗದಲ್ಲಿ ತಬಲಾ ಕಾರ್ಯಕ್ರಮ ನೀಡಿದ್ದರು. ಅವರ ತಬಲಾ ಸೇವೆಗೆ ವಿವಿಧ ಪ್ರಶಸ್ತಿ, ಪುರಸ್ಕಾರ ಒಲಿದು ಬಂದಿವೆ. ಅವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

ಧಾರವಾಡ: ಖ್ಯಾತ ತಬಲಾ ಕಲಾವಿದ ಪಂ. ಷಡಾಕ್ಷರಯ್ಯ ಗುಡ್ಡದಮಠ ನಿಧನ Read More »