ರಾಜ್ಯ

ಇಂದು ಇಡೀ ದಿನ “ಅಭಿಮಾನಿ”ಗಳೊಂದಿಗೆ ”ಅಪ್ಪು”| ನಾಳೆ ಅಂತಿಮ ವಿಧಿವಿಧಾನ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದು, ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ದರ್ಶನ ಪಡೆಯುತ್ತಿದ್ದಾರೆ. ನಾಳೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ‌ ಗೌರವಗಳೊಂದಿಗೆ ಪುನೀತ್ ರಾಜಕುಮಾರ್ ಪಾರ್ಥಿವ ಶರೀರದ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಭಾನುವಾರ ನಟ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುವುದು. ವಿದೇಶದಿಂದ ಮಗಳು ದೃತಿ ಬಂದ ಬಳಿಕ ನಾಳೆ ಅಂತ್ಯಕ್ರಿಯೆ ನೆರವೇರಲಿದೆ. ಕುಟುಂಬದವರು ಮತ್ತು ಸರ್ಕಾರದ […]

ಇಂದು ಇಡೀ ದಿನ “ಅಭಿಮಾನಿ”ಗಳೊಂದಿಗೆ ”ಅಪ್ಪು”| ನಾಳೆ ಅಂತಿಮ ವಿಧಿವಿಧಾನ Read More »

ಪುನಿತ್ ವಿಧಿವಶ ಹಿನ್ನಲೆ| ನಾಳೆ ಖಾಸಗಿ‌ ಶಾಲೆಗಳಿಗೆ ರಜೆ

ಬೆಂಗಳೂರು: ನಾಳೆ ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ರಾಜ್ಯದ ಖಾಸಗಿ ಶಾಲೆಗಳಿಗೆ ರುಪ್ಸಾ ಕರ್ನಾಟಕದಿಂದ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಶಾಲೆಗಳಿಗೆ ರಜೆ ನೀಡುವ ಕುರಿತಾಗಿ ಚರ್ಚೆ ನಡೆದಿದ್ದು, ಶೀಘ್ರವೇ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನು ನಾಳೆ ನಡೆಯಬೇಕಿದ್ದ ಎಂಬಿಎ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ನಟ ಪುನೀತ್ ರಾಜ್ ಕುಮಾರ್ ವಿಧಿವಶ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ

ಪುನಿತ್ ವಿಧಿವಶ ಹಿನ್ನಲೆ| ನಾಳೆ ಖಾಸಗಿ‌ ಶಾಲೆಗಳಿಗೆ ರಜೆ Read More »

ಪುನಿತ್ ರಾಜ್ ಕುಮಾರ್ ಆರೋಗ್ಯ ಗಂಭೀರ| ಆಸ್ಪತ್ರೆಗೆ ಸಿಎಂ ಭೇಟಿ

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರು ಜಿಮ್ ನಲ್ಲಿ ಕಸರತ್ತು ನಡೆಸುತ್ತಿರುವಂತ ಸಂದರ್ಭದಲ್ಲಿ, ಅನಾರೋಗ್ಯಕ್ಕೆ ಒಳಗಾಗಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇಂದು ನಟ ಪುನೀತ್ ರಾಜ್ ಕುಮಾರ್ ಅವರು ಜಿಮ್ ನಲ್ಲಿ ಕಸರತ್ತು ನಡೆಸುತ್ತಿದ್ದಂತ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಇಂತಹ ಅವರ ಆರೋಗ್ಯ ಸ್ಥಿತಿ ಗಂಭೀರ

ಪುನಿತ್ ರಾಜ್ ಕುಮಾರ್ ಆರೋಗ್ಯ ಗಂಭೀರ| ಆಸ್ಪತ್ರೆಗೆ ಸಿಎಂ ಭೇಟಿ Read More »

ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಇನ್ನಿಲ್ಲ|

ಬೆಂಗಳೂರು: ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್‌ ರಾಜಕುಮಾರ್‌ (46)ಇಹಲೋಕ ತ್ಯಜಿಸಿದ್ದಾರೆ. ಇಂದು ಮುಂಜಾನೆ ತೀವ್ರ ರೀತಿಯ ಹೃದಯಾಘಾತ ‌ಸಂಭವಿಸಿದ್ದು, ಚಿಕಿತ್ಸೆಗಾಗಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ. ಇಂದು ಬೆಳಗ್ಗೆ ಅವರು ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡುವ ವೇಳೆಯಲ್ಲಿ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೂಡಲೇ ಅವರನ್ನು ನಗರದ‌ ವಿಕ್ರಂ ಆಸ್ಪತ್ರೆಗೆ ‌ದಾಖಲಿಸಲಾಗಿತ್ತು. ಅಪ್ಪು ಸಿನಿಮಾದಿಂದ ನಾಯಕ ನಟನಾಗಿ ಸಿನಿಮಾ ರಂಗದಲ್ಲಿ ‌ಮಿಂಚಿದ ಪುನಿತ್ ಬಾಲನಟನಾಗಿ

ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಇನ್ನಿಲ್ಲ| Read More »

ಮಂಡ್ಯದಲ್ಲಿ ಎಸ್‌ಪಿ ಹುದ್ದೆ ಹರಾಜಿಗಿದೆ, ” ಹೆಚ್ಚು ಬಿಡ್ ಕೂಗಿದವರಿಗೆ ಅವಕಾಶ”

ಮಂಡ್ಯ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ಗವಣೆ ಬಳಿಕ ಈ ಹುದ್ದೆ ನೇಮಕ ವಿಚಾರ ಬಗೆಹರಿಯುವಂತೆ ಕಾಣುತ್ತಿಲ್ಲ. ಇದರಿಂದ ಸರ್ಕಾರ ಹಾಗೂ ಗೃಹ ಇಲಾಖೆ ವಿರುದ್ಧ ಸಾರ್ವಜನಿಕರು ಎಸ್‌ಪಿ ಹುದ್ದೆ ಹರಾಜಿಗಿದೆ, `ಹೆಚ್ಚು ಬಿಡ್ ಕೂಗಿದವರಿಗೆ ಅವಕಾಶ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಎಸ್‌ಪಿ ಅವರನ್ನು ವರ್ಗಾವಣೆ ಮಾಡಿ ಒಂದು ವಾರ ಕಳೆದರೂ ಬೇರೆ ಎಸ್‌ಪಿ ನೇಮಕ ಮಾಡದೆ ಹುದ್ದೆ ಖಾಲಿ ಉಳಿದಿದೆ. ಈ ಹಿನ್ನೆಲೆ ಎಸ್‌ಪಿ ಹುದ್ದೆ ಬಿಕರಿಗಿದೆ ಎಂದು ಸಾಮಾಜಿಕ

ಮಂಡ್ಯದಲ್ಲಿ ಎಸ್‌ಪಿ ಹುದ್ದೆ ಹರಾಜಿಗಿದೆ, ” ಹೆಚ್ಚು ಬಿಡ್ ಕೂಗಿದವರಿಗೆ ಅವಕಾಶ” Read More »

ರಾಜ್ಯದಲ್ಲಿ ಚುರುಕುಗೊಂಡ‌ ಹಿಂಗಾರು| ಅ.30 ಮತ್ತು 31ರಂದು ಭಾರೀ ಮಳೆ ಸಾಧ್ಯತೆ|

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಅ.30ರಿಂದ ಹಿಂಗಾರು ಮಳೆ ಚುರುಕಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ದಕ್ಷಿಣ ಒಳನಾಡಿನ ರಾಮನಗರ ಮಂಡ್ಯ, ಮೈಸೂರು ಮತ್ತು ಚಾಮರಾಜನಗರದಲ್ಲಿ ಅ.30, 31ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಅ.31ರಂದು ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನಲ್ಲಿ

ರಾಜ್ಯದಲ್ಲಿ ಚುರುಕುಗೊಂಡ‌ ಹಿಂಗಾರು| ಅ.30 ಮತ್ತು 31ರಂದು ಭಾರೀ ಮಳೆ ಸಾಧ್ಯತೆ| Read More »

ಎತ್ತಿನ ಭುಜದಲ್ಲಿ ಕಾಡಾನೆ ಹಿಂಡು – ಚಾರಣಿಗರೇ ಎಚ್ಚರ ಎಚ್ಚರ ಎಚ್ಚರ !!

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜದ ಭಾಗದಲ್ಲಿ ಆಗಾಗ್ಗೆ ಕಾಡಾನೆಗಳು ಹಿಂಡು ಗೋಚರವಾಗುತ್ತಿರೋದು ಸ್ಥಳಿಯರು ಹಾಗೂ ಕೆಲ ಪ್ರವಾಸಿಗರಲ್ಲಿ ಆತಂಕ ತಂದಿದೆ.ಇಲ್ಲಿನ ಕಾಡು ಸದಾ ಹಚ್ಚಹಸಿರಿನಿಂದ ಕಂಗೊಳಿಸುತ್ತೆ. ಹಾಗಾಗಿ, ಈ ಭಾಗದಲ್ಲಿ ಸದಾ ಕಾಡುಪ್ರಾಣಿಗಳು ಯತೇಚ್ಛವಾಗಿರುತ್ತವೆ. ಇದೀಗ, ಈ ಬೈರಾಪುರ ಗ್ರಾಮದ ಸುತ್ತಮುತ್ತ ಕಾಡಾನೆಗಳು ಹಿಂಡು ಸ್ಥಳಿಯರಲ್ಲಿ ಭಯ ತರಿಸಿದೆ. ಎತ್ತಿನಭುಜಕ್ಕೆ ಭೇಟಿ ನೀಡಿದ್ದ ಪ್ರವಾಸಿಗರಿಗೆ ಕಾಡಾನೆಗಳು ದರ್ಶನ ನೀಡಿವೆ. ಹಾಗಾಗಿ, ಸ್ಥಳೀಯರು ಈ ಭಾಗಕ್ಕೆ ಬರುವ ಪ್ರವಾಸಿಗರು ಎಚ್ಚರದಿಂದಿರಬೇಕು ಎಂದು ಮನವಿ ಮಾಡಿದ್ದಾರೆ.

ಎತ್ತಿನ ಭುಜದಲ್ಲಿ ಕಾಡಾನೆ ಹಿಂಡು – ಚಾರಣಿಗರೇ ಎಚ್ಚರ ಎಚ್ಚರ ಎಚ್ಚರ !! Read More »

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಭೀತಿ: ಸ್ಪಷ್ಟನೆ ನೀಡಿದ ತಾಂತ್ರಿಕ ಸಮಿತಿ

ಬೆಂಗಳೂರು : ಕೊರೊನಾ ರೂಪಾಂತರದ ಎವೈ 4.2 ಬೆಂಗಳೂರಿನಲ್ಲಿ ಎರಡು ಪ್ರಕರಣ ಪತ್ತೆಯಾಗಿದೆ. ಈ ಬೆನ್ನಲ್ಲೆ ಕರ್ನಾಟಕದ ಜನರು ಆತಂಕಗೊಂಡಿದ್ದಾರೆ. ಇದರ ಜೊತೆ ಕರ್ನಾಟಕದಲ್ಲಿ ಲಾಕ್ ಡೌನ್ ಜಾರಿಯಾಗಲಿದೆ ಎಂಬ ಸುದ್ದಿ ಹಬ್ಬಿದೆ. ಈ ಬಗ್ಗೆ ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿ ಸ್ಪಷ್ಟನೆ ನೀಡಿದೆ. ಕಳೆದ ಬಾರಿ ರಾಜ್ಯದಲ್ಲಿ ಪ್ರತಿದಿನ ಸುಮಾರು 50,000 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗುತ್ತಿತ್ತು. ಆಗ ಲಾಕ್‌ಡೌನ್ ಶಿಫಾರಸು ಮಾಡಲಾಗಿತ್ತು. ಕಳೆದ ಎರಡು ದಿನಗಳಿಂದ ಕೊರೊನಾ ಸಂಖ್ಯೆ 350 ಕ್ಕಿಂತ

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಭೀತಿ: ಸ್ಪಷ್ಟನೆ ನೀಡಿದ ತಾಂತ್ರಿಕ ಸಮಿತಿ Read More »

ಇಂದಿನಿಂದ ಹಾಸನಾಂಬೆ ದರ್ಶನ ಪ್ರಾರಂಭ| ಏಳು‌ ದಿನ ಭಕ್ತರಿಗೆ ಅಭಯ ನೀಡಲಿದ್ದಾಳೆ ಶ್ರೀದೇವಿ

ಹಾಸನ: ಇಂದಿನಿಂದ ಹಾಸನಾಂಬೆ ದರ್ಶನ ಆರಂಭವಾಗಲಿದೆ. ವರ್ಷಕ್ಕೊಮ್ಮೆ ಮಾತ್ರ ದರುಶನ ನೀಡುವ ಹಾಸನಾಂಬಾ ದೇವಿ ಇನ್ಮುಂದೆ ಭಕ್ತರಿಗೆ ದರ್ಶನ ಕೊಡಲಿದ್ದಾಳೆ. ಇಂದು ಮಧ್ಯಾಹ್ನ 12 ಗಂಟೆ ನಂತರ ಹಾಸನಾಂಬೆ ದೇವಾಲಯ ಬಾಗಿಲು ತೆರೆಯಲಿದೆ. ಬಾಗಿಲು ತೆರೆಯುವ ಮೊದಲ ದಿನ ಮತ್ತು ಬಾಗಿಲು ಹಾಕುವ ಕೊನೆಯ ದಿನ ಭಕ್ತರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಉಳಿದ ಏಳು ದಿನಗಳು ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶವಿದೆಬೆಳಗ್ಗೆ 6 ರಿಂದ ಮಧ್ಯಾಹ್ನ 1 ಹಾಗೂ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ಭಕ್ತರ

ಇಂದಿನಿಂದ ಹಾಸನಾಂಬೆ ದರ್ಶನ ಪ್ರಾರಂಭ| ಏಳು‌ ದಿನ ಭಕ್ತರಿಗೆ ಅಭಯ ನೀಡಲಿದ್ದಾಳೆ ಶ್ರೀದೇವಿ Read More »

ಧರ್ಮಸ್ಥಳ: ದೀಪಾವಳಿ ಬಳಿಕ ದೇವರ ದರ್ಶನದ ಸಮಯ ಬದಲು

ಧರ್ಮಸ್ಥಳ: ದೀಪಾವಳಿ (ನ. 4)ರ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ರಂಗಪೂಜೆ, ಬೆಳ್ಳಿ ರಥೋತ್ಸವ, ಪಲ್ಲಕ್ಕಿ ಉತ್ಸವ ಸೇರಿದಂತೆ ವಿಶೇಷಪೂಜೆ, ಉತ್ಸವಾದಿ ಸೇವೆಗಳು ಆರಂಭವಾಗಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.ವಿಶೇಷ ಪೂಜೆ, ಉತ್ಸವಾದಿ ಸೇವೆಗಳು ನಡೆಯುವ ಕಾರಣ ದೇವರ ದರ್ಶನಕ್ಕೆ ಸಮಯಾವಕಾಶ ಹೊಂದಿಸಲಾಗಿದೆ. ಬೆಳಗ್ಗೆ 6ರಿಂದ ಅಪರಾಹ್ನ 2.30, ಸಂಜೆ 5ರಿಂದ ರಾತ್ರಿ 8.30ರ ವರೆಗೆ (ವಿಶೇಷ ದಿನಗಳಲ್ಲಿ ಸಮಯ ವ್ಯತ್ಯಾಸವಾಗುವ ಸಾಧ್ಯತೆಯಿದೆ). ಅನ್ನಪೂರ್ಣ ಛತ್ರದಲ್ಲಿ ಬೆಳಗ್ಗೆ 10.30ರಿಂದ 3 ಹಾಗೂ ರಾತ್ರಿ 7ರಿಂದ

ಧರ್ಮಸ್ಥಳ: ದೀಪಾವಳಿ ಬಳಿಕ ದೇವರ ದರ್ಶನದ ಸಮಯ ಬದಲು Read More »