ರಾಜ್ಯ

ರಾಜ್ಯದಲ್ಲಿ ಮತ್ತೆ ಏರಿಕೆಯಾದ ಕೊರೊನಾ ಪ್ರಕರಣಗಳು| 25 ಸಾವಿರಕ್ಕೂ ಅಧಿಕ ಜನರಿಗೆ ಸೋಂಕು ದೃಢ|

ಬೆಂಗಳೂರು: ರಾಜ್ಯದಲ್ಲಿ ಇಂದು 25 ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 18 ಸಾವಿರಕ್ಕೂ ಅಧಿಕ ಮಂದಿಗೆ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದ್ದು 25,005 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ಪಾಸಿಟಿವಿಟಿ ದರ ಶೇಕಡ 12.39 ರಷ್ಟು ಏರಿಕೆಯಾಗಿದೆ. ಇವತ್ತು 2363 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,15,733 ಕ್ಕೆ ಏರಿಕೆಯಾಗಿದೆ. ಇವತ್ತು 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 2,01,704 ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಿನಲ್ಲಿ […]

ರಾಜ್ಯದಲ್ಲಿ ಮತ್ತೆ ಏರಿಕೆಯಾದ ಕೊರೊನಾ ಪ್ರಕರಣಗಳು| 25 ಸಾವಿರಕ್ಕೂ ಅಧಿಕ ಜನರಿಗೆ ಸೋಂಕು ದೃಢ| Read More »

ಐದನೇ ದಿನದಲ್ಲಿ ಮೊಟಕುಗೊಂಡ ಮೇಕೆದಾಟು ಪಾದಯಾತ್ರೆ

ರಾಮನಗರ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾದಯಾತ್ರೆಗೆ ಬ್ರೇಕ್ ಹಾಕಲು ಹೈಕಮಾಂಡ್ ಸೂಚಿಸಿದ ಬೆನ್ನಲ್ಲೇ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಲು ರಾಜ್ಯ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಹೈಕೋರ್ಟ್ ನೋಟೀಸ್, ರಾಜ್ಯ ಸರ್ಕಾರದ ಎಚ್ಚರಿಕೆ, ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆಯಲ್ಲಿ, ಕೊರೊನಾ ಸೋಂಕು ಕಡಿಮೆಯಾದ ಬಳಿಕ ಪಾದಯಾತ್ರೆಯನ್ನು ಮತ್ತೆ ಮುಂದುವರಿಸೋದು, ಸಧ್ಯಕ್ಕೆ ಪಾದಯಾತ್ರೆ ಮೊಟಕುಗೊಳಿಸುವ ಬಗ್ಗೆ

ಐದನೇ ದಿನದಲ್ಲಿ ಮೊಟಕುಗೊಂಡ ಮೇಕೆದಾಟು ಪಾದಯಾತ್ರೆ Read More »

ಮಂಗಳೂರು: ಕಳ್ಳನನ್ನು ರಸ್ತೆಯಲ್ಲಿ ಅಟ್ಟಿಸಿಕೊಂಡು ಹೋಗಿ ಹಿಡಿದ ಪೊಲೀಸ್ ಕಾರ್ಯಕ್ಕೆ ಶ್ಲಾಘನೆ|ಪೊಲೀಸ್ ಆಡಿದ ಮಾತಿಗೆ ಜಾಲತಾಣಗಳಲ್ಲಿ ಪರ ವಿರೋಧ ಕಮೆಂಟ್|

ಮಂಗಳೂರು : ನಗರದಲ್ಲಿ ಕಳ್ಳತನ ನಡೆದ 10 ನಿಮಿಷದಲ್ಲಿ ಪ್ರಕರಣದ ಆರೋಪಿಯನ್ನು ಮಂಗಳೂರಿನ ಪೊಲೀಸ್ ಓರ್ವರು ಬೆನ್ನಟ್ಟಿ ಹಿಡಿದ ಘಟನೆ ನಡೆದಿದೆ. ಪೊಲೀಸ್ ಅಧಿಕಾರಿಯನ್ನು ವರುಣ್ ಎಂದು ಗುರುತಿಸಲಾಗಿದೆ. ಇವರು ಮೊಬೈಲ್ ಕಳ್ಳತನ ಮಾಡಿ ಓಡಿ ಹೋಗುತ್ತಿದ್ದ ಕಳ್ಳನನ್ನು ರಸ್ತೆಯಲ್ಲಿ ವಾಹನಗಳ ಮಧ್ಯೆಯೇ ಅಟ್ಟಿಸಿಕೊಂಡು ಹೋಗಿ ಹಿಡಿದಿದ್ದಾರೆ. ಈ ವಿಡಿಯೋ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು ಪೊಲೀಸ್ ಕಾರ್ಯಕ್ಕೆ ಜನರಿಂದ ಶ್ಲಾಘನೆ ವ್ಯಕ್ತವಾಗಿದೆ. ಈ ನಡುವೆ ಪೊಲೀಸ್ ಅಧಿಕಾರಿ ಆರೋಪಿಯನ್ನು ವಿಚಾರಿಸಿದ ಭಾಷೆ ಬಗ್ಗೆ ಜನರಲ್ಲಿ ಪರ

ಮಂಗಳೂರು: ಕಳ್ಳನನ್ನು ರಸ್ತೆಯಲ್ಲಿ ಅಟ್ಟಿಸಿಕೊಂಡು ಹೋಗಿ ಹಿಡಿದ ಪೊಲೀಸ್ ಕಾರ್ಯಕ್ಕೆ ಶ್ಲಾಘನೆ|ಪೊಲೀಸ್ ಆಡಿದ ಮಾತಿಗೆ ಜಾಲತಾಣಗಳಲ್ಲಿ ಪರ ವಿರೋಧ ಕಮೆಂಟ್| Read More »

ಬೆಂಗಳೂರು: ಶಾಲೆಗಳಿಗೆ ಮತ್ತೆ ರಜೆ ವಿಸ್ತರಣೆ| ಜ.31ರವರೆಗೂ ತರಗತಿ ತೆರೆಯಲು ನಿರ್ಬಂಧ

ಬೆಂಗಳೂರು: ಈಗಾಗಲೇ ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ 1 ರಿಂದ 9ನೇ ತರಗತಿವರೆಗೆ ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಆದೇಶವನ್ನು ಈಗ ಜನವರಿ 31ರವರೆಗೆ ವಿಸ್ತರಿಸಿರುವುದಾಗಿ ಶಿಕ್ಷಣ ಸಚಿವರು ಘೋಷಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜನವರಿ 31 ರವರೆಗೆ 1 ರಿಂದ 9ನೇ ತರಗತಿಗಳಿಗೆ ರಜೆ ವಿಸ್ತರಿಸಿರುವುದಾಗಿ ತಿಳಿಸಿದರು. ಕೋವಿಡ್ ನಿಯಂತ್ರಣ ಕ್ರಮಗಳೊಂದಿಗೆ 10, 11

ಬೆಂಗಳೂರು: ಶಾಲೆಗಳಿಗೆ ಮತ್ತೆ ರಜೆ ವಿಸ್ತರಣೆ| ಜ.31ರವರೆಗೂ ತರಗತಿ ತೆರೆಯಲು ನಿರ್ಬಂಧ Read More »

ರಾಜ್ಯದಲ್ಲಿ ಕೊರೊನಾ ಹೊಸ ನಿಯಮ ಜಾರಿ| ಜ.31ರವರೆಗೂ‌ ನಿರ್ಬಂಧ ಮುಂದುವರಿಕೆ|

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆ ಸರಕಾರವು ಕಠಿಣ ನಿರ್ಬಂಧಗಳನ್ನು ಜಾರಿ ಮಾಡಲಾಗಿತ್ತು. ಇಗ ಇದರಲ್ಲಿ ರಾಜ್ಯಾದ್ಯಂತ ಎಲ್ಲಾ ರೀತಿಯ ರ್‍ಯಾಲಿಗಳು, ಧರಣಿಗಳು ಮತ್ತು ಪ್ರತಿಭಟನೆಗಳನ್ನು ನಿಷೇಧಿಸಿದೆ.ಸರಕಾರವು ನಿರ್ಬಂಧಗಳನ್ನು ಜನವರಿ 31ರ ವರೆಗೆ ಮುಂದುವರಿಕೆ ಮಾಡಿದೆ. ಈಗ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಈ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ, ಕೊರೊನ ಪಾಸಿಟಿವ್ ಬಂದ ಮಕ್ಕಳಿಗೆ ಚಿಕಿತ್ಸೆ ನೀಡಲು ತಾಲ್ಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲಿರಿಸಬೇಕು, ಮಕ್ಕಳಿಗೆ ಅಗತ್ಯವಿರುವ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಸ್ತಾನು

ರಾಜ್ಯದಲ್ಲಿ ಕೊರೊನಾ ಹೊಸ ನಿಯಮ ಜಾರಿ| ಜ.31ರವರೆಗೂ‌ ನಿರ್ಬಂಧ ಮುಂದುವರಿಕೆ| Read More »

ಸಮಗ್ರ ಸಮಾಚಾರ ದಿನದ ಪ್ರಮುಖ ಸುದ್ದಿಗಳು

ಜ.13ರಿಂದ ‘ಚಂದನ’ ದಲ್ಲಿ ಮತ್ತೆ ಪಾಠ ಪ್ರಸಾರ ಬೆಂಗಳೂರು: ಕೊರೋನಾ ಕಾರಣದಿಂದಾಗಿ 1 ರಿಂದ 9ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಕೆಲವು ಜಿಲ್ಲೆಗಳಲ್ಲಿ ಬಂದ್ ಆಗಿದ್ದು, ಮಕ್ಕಳಿಗೆ ಪರ್ಯಾಯ ಕಲಿಕೆ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸೋಮವಾರದಿಂದ ಶುಕ್ರವಾರದವರೆಗೆ ಚಂದನ ವಾಹಿನಿಯಲ್ಲಿ ವಿಡಿಯೋ ಪಾಠ ಪ್ರಸಾರ ಮಾಡಲು ನಿರ್ಧರಿಸಿದೆ. ಜನವರಿ 13ರಿಂದ ದೂರದರ್ಶನ ಚಂದನ ವಾಹಿನಿಯಲ್ಲಿ ವಿಡಿಯೋ ಮೂಲಕ ಪಾಠಗಳನ್ನು ಪ್ರಸಾರಿಸಲಾಗುತ್ತದೆ. ಕಾಲುವೆಯಲ್ಲಿ ಸಿಕ್ಕಿ‌ ಒದ್ದಾಡಿದ ಗಜಪಡೆ| ಅರಣ್ಯ

ಸಮಗ್ರ ಸಮಾಚಾರ ದಿನದ ಪ್ರಮುಖ ಸುದ್ದಿಗಳು Read More »

ಕರ್ನಾಟಕ ಬ್ಯಾಂಕ್ ನಲ್ಲಿ ಮ್ಯಾನೇಜರ್ ಹುದ್ದೆಗೆ ನೇಮಕಾತಿ

ಮಂಗಳೂರು: ಕರ್ನಾಟಕ ಬ್ಯಾಂಕಿನಲ್ಲಿ ಅಗತ್ಯವಿರುವ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ: ಮ್ಯಾನೇಜರ್ (Scale -2) ಚಾರ್ಟರ್ಡ್ ಅಕೌಂಟೆಂಟ್ಸ್ ಕರ್ತವ್ಯ ಸ್ಥಳ: ಮಂಗಳೂರು ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಚಾರ್ಟರ್ಡ್ ಅಕೌಂಟೆಂಟ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (01-12-2021ಕ್ಕೆ ಚಾರ್ಟರ್ಡ್ ಅಕೌಂಟೆಂಟ್ ಆಗಿರಬೇಕು) ವಯೋಮಾನ: ಅಭ್ಯರ್ಥಿಗಳಿಗೆ ದಿನಾಂಕ 01/12/2021ಕ್ಕೆ ಒಳಗೊಂಡಂತೆ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.(ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ) ವೇತನ: ಮಾಸಿಕ ರೂ.

ಕರ್ನಾಟಕ ಬ್ಯಾಂಕ್ ನಲ್ಲಿ ಮ್ಯಾನೇಜರ್ ಹುದ್ದೆಗೆ ನೇಮಕಾತಿ Read More »

ಕಾಲುವೆಯಲ್ಲಿ ಸಿಕ್ಕಿ‌ ಒದ್ದಾಡಿದ ಗಜಪಡೆ| ಅರಣ್ಯ ಇಲಾಖೆಯಿಂದ ಯಶಸ್ವಿ ಕಾರ್ಯಾಚರಣೆ|

ಮೈಸೂರು : ಕಾಲುವೆಯಲ್ಲಿ ಸಿಲುಕಿದ್ದ ಆನೆಗಳ ಹಿಂಜನ್ನು ಅರಣ್ಯಾಧಿಕಾರಿಗಳು ರಕ್ಷಿಸಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಕಾಲುವೆಯಿಂದ ಹೊರಬರಲು ಆನೆಗಳು ಹರಸಾಹಸ ಪಡುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ಭಾರಿ ಸದ್ದು ಮಾಡಿತ್ತು. ಸಾಮಾಜಿಕ ಮಾಧ್ಯಮ ಸೈಟ್‌ಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ, ಐದು ಆನೆಗಳು ಕಾಲುವೆಯಿಂದ ಹೊರಬರಲು ಅನೇಕ ಬಾರಿ ಪ್ರಯತ್ನಿಸಿದ್ರೂ ಸಾಧ್ಯವಾಗಿಲ್ಲ. ಅವುಗಳು ಕಾಲುವೆ ಏರಲು ಪ್ರಯತ್ನಿಸಿದರೂ ಜಾರಿ ಕಾಲುವೆಗೆ ಬೀಳುತ್ತಿದ್ದವು. ಕಾಲುವೆಯಿಂದ ಹೊರಬರಲು ಹೆಣಗಾಡುತ್ತಿರುವ ಗಜಪಡೆಯ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ

ಕಾಲುವೆಯಲ್ಲಿ ಸಿಕ್ಕಿ‌ ಒದ್ದಾಡಿದ ಗಜಪಡೆ| ಅರಣ್ಯ ಇಲಾಖೆಯಿಂದ ಯಶಸ್ವಿ ಕಾರ್ಯಾಚರಣೆ| Read More »

ಕೊರೊನಾ ಹಿನ್ನೆಲೆ| ಜ.13ರಿಂದ ‘ಚಂದನ’ ದಲ್ಲಿ ಮತ್ತೆ ಪಾಠ ಶುರು|

ಬೆಂಗಳೂರು: ಕೊರೋನಾ ಕಾರಣದಿಂದಾಗಿ 1 ರಿಂದ 9ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಕೆಲವು ಜಿಲ್ಲೆಗಳಲ್ಲಿ ಬಂದ್ ಆಗಿವೆ. ಮಕ್ಕಳಿಗೆ ಪರ್ಯಾಯ ಕಲಿಕೆ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸೋಮವಾರದಿಂದ ಶುಕ್ರವಾರದವರೆಗೆ ಚಂದನ ವಾಹಿನಿಯಲ್ಲಿ ವಿಡಿಯೋ ಪಾಠ ಪ್ರಸಾರ ಮಾಡಲು ನಿರ್ಧರಿಸಿದೆ. ಜನವರಿ 13ರಿಂದ ದೂರದರ್ಶನ ಚಂದನ ವಾಹಿನಿಯಲ್ಲಿ ವಿಡಿಯೋ ಮೂಲಕ ಪಾಠಗಳನ್ನು ಪ್ರಸಾರ ಮಾಡಲಾಗುವುದು. ಈ ಕುರಿತಾದ ವೇಳಾಪಟ್ಟಿಯನ್ನು ನೀಡಲಾಗಿದ್ದು, ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮಾಹಿತಿ

ಕೊರೊನಾ ಹಿನ್ನೆಲೆ| ಜ.13ರಿಂದ ‘ಚಂದನ’ ದಲ್ಲಿ ಮತ್ತೆ ಪಾಠ ಶುರು| Read More »

ಕೊರೊನಾ ಎಫೆಕ್ಟ್| ಮೈಸೂರಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ|

ಮೈಸೂರು: ಕೊರೊನಾ ತೀವ್ರತೆ ಪರಿಣಾಮ ಮೈಸೂರು ನಗರ ಮತ್ತು ಮೈಸೂರು ತಾಲೂಕಿನಾದ್ಯಂತ ಶಾಲೆಗಳು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಒಂದರಿಂದ 9 ರವರೆಗೆ ಶಾಲೆಗಳನ್ನು ಬಂದ್ ಮಾಡಿ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಜನವರಿ 18 ರವರೆಗೆ 1 ರಿಂದ 9ನೇ ತರಗತಿಗಳನ್ನು ಬಂದ್ ಮಾಡಲಾಗಿದೆ. ವಸತಿ ಶಾಲೆಗಳನ್ನು ಒಳಗೊಂಡು ಬೆಳಗಾವಿ ಜಿಲ್ಲೆಯ ಎಲ್ಲ ಮಾಧ್ಯಮಗಳ 1 ರಿಂದ 9ನೇ ತರಗತಿ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕೊರೊನಾ ಎಫೆಕ್ಟ್| ಮೈಸೂರಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ| Read More »