ರಾಜ್ಯ

ಕನ್ನಡ ರಾಜ್ಯೋತ್ಸವ ಹಿನ್ನೆಲೆ| ಇಂದು ಲಕ್ಷ ಕಂಠಗಳ ಗೀತಗಾಯನ| ಕಂಡು ಕೇಳರಿಯದ ಗಳಿಗೆಗೆ ಸಾಕ್ಷಿಯಾಗಲಿದೆ ಕರ್ನಾಟಕ|

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 1 ಕನ್ನಡ ರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವಲ್ಲೇ ಹಿಂದೆಂದೂ ನಡೆದಿರದ ಅಭೂತಪೂರ್ವ ಕನ್ನಡ ಉತ್ಸವ ನಡೆಸಲು ಸಕಲ ಸಿದ್ಧತೆಗಳೂ ನಡೆದಿವೆ. ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ಅಕ್ಟೋಬರ್ 28 ರಂದು ಆಯೋಜಿಸಿರುವ ಲಕ್ಷ ಕಂಠಗಳ ಕನ್ನಡ ಗೀತಗಾಯನ ಕಾರ್ಯಕ್ರಮ ಅಸಾಧಾರಣ ರೀತಿಯಲ್ಲಿ ಆಯೋಜಿಸಿ ಯಶಸ್ವಿಗೊಳಿಸಲು ರಾಜ್ಯದ ಎಲ್ಲ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆ ಚರ್ಚಿಸಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ರಾಜ್ಯದ ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಐದು […]

ಕನ್ನಡ ರಾಜ್ಯೋತ್ಸವ ಹಿನ್ನೆಲೆ| ಇಂದು ಲಕ್ಷ ಕಂಠಗಳ ಗೀತಗಾಯನ| ಕಂಡು ಕೇಳರಿಯದ ಗಳಿಗೆಗೆ ಸಾಕ್ಷಿಯಾಗಲಿದೆ ಕರ್ನಾಟಕ| Read More »

ಕನ್ನಡಿಗರ ಆಸ್ಮಿತೆ ಕೆಣಕುವ ಎಂಇಎಸ್ ಪುಂಡರಿಗೆ ತಕ್ಕ ಶಾಸ್ತಿ‌ ಮಾಡಿ- ಸರ್ಕಾರಕ್ಕೆ ಎಚ್.ಡಿ.ಕೆ ಒತ್ತಾಯ

ಬೆಂಗಳೂರು: ವಿನಾಕಾರಣ ಬೆಳಗಾವಿಯಲ್ಲಿ ಕನ್ನಡಿಗರನ್ನು ಕೆಣಕುತ್ತಾ ಕನ್ನಡಕ್ಕೆ ಅಪಮಾನ ಮಾಡುತ್ತಿರುವ ಎಂಇಎಸ್​ಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್’ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಕುಂದಾನಗರಿಯ ಪ್ರತಿಷ್ಠೆಗೆ ಧಕ್ಕೆ ತಂದು ಅಲ್ಲಿನ ಸೌಹಾರ್ದ ವಾತಾವರಣವನ್ನು ಹಾಳು ಮಾಡುತ್ತಿರುವ ಎಂಇಎಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಹಲವು ಚುನಾವಣೆಗಳಲ್ಲಿ ರಾಜಕೀಯವಾಗಿ ಮುಖಭಂಗ ಅನುಭವಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ- ಎಂಇಎಸ್, ಈಗ ಕನ್ನಡ

ಕನ್ನಡಿಗರ ಆಸ್ಮಿತೆ ಕೆಣಕುವ ಎಂಇಎಸ್ ಪುಂಡರಿಗೆ ತಕ್ಕ ಶಾಸ್ತಿ‌ ಮಾಡಿ- ಸರ್ಕಾರಕ್ಕೆ ಎಚ್.ಡಿ.ಕೆ ಒತ್ತಾಯ Read More »

ದ.ಕ ಡಿಸಿ ವಿರುದ್ದ ಸ್ವಯಂಪ್ರೇರಿತ ದೂರು ದಾಖಲಿಸಿದ ಲೋಕಾಯುಕ್ತ| ಅಷ್ಟಕ್ಕೂ ದೂರಿಗೆ ಕಾರಣವೇನು ಗೊತ್ತೇ?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರ ವಿರುದ್ಧ ಸ್ವಯಂ ಪ್ರೇರಿತವಾಗಿ ಕರ್ನಾಟಕ ‌ಲೋಕಾಯುಕ್ತ ದೂರು ದಾಖಲಿಸಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಮಂಗಳೂರು ನಗರದ ಕೈಗಾರಿಕಾ ಸಂಸ್ಥೆ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್)ನಿಂದ ಸ್ಥಳೀಯ ತೋಡು ಮತ್ತು ಫಲ್ಗುಣಿ ನದಿಗೆ ಅಪಾಯಕಾರಿ ರಾಸಾಯನಿಕ ತ್ಯಾಜ್ಯ ಹರಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ವರದಿ ನೀಡುವಂತೆ ಆಗ್ರಹಿಸಿ ನೋಟಿಸ್ ಜಾರಿ ಮಾಡಿದೆ. ತ್ಯಾಜ್ಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಾಯುಕ್ತ,

ದ.ಕ ಡಿಸಿ ವಿರುದ್ದ ಸ್ವಯಂಪ್ರೇರಿತ ದೂರು ದಾಖಲಿಸಿದ ಲೋಕಾಯುಕ್ತ| ಅಷ್ಟಕ್ಕೂ ದೂರಿಗೆ ಕಾರಣವೇನು ಗೊತ್ತೇ? Read More »

ರಾಜ್ಯಾದ್ಯಂತ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸೂಚನೆ

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ 2021-22 ನೇ ಸಾಲಿನಲ್ಲಿ ಒಟ್ಟು 8 ಸಾವಿರ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಹಿಂದೆ ಆಯಾ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಅತಿಥಿ ಉಪನ್ಯಾಸಕರನ್ನು ಕಾಲೇಜು ಹಂತದಲ್ಲೇ ಅರ್ಜಿ ಪಡೆದು ನೇಮಕಾತಿ ಮಾಡಿಕೊಳ್ಳಬೇಕು. ನಂತರವೂ ಬೋಧನಾ ಕಾರ್ಯಭಾರ ಉಳಿಕೆಯಾದಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಪಡೆದು, ಮೆರಿಟ್

ರಾಜ್ಯಾದ್ಯಂತ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸೂಚನೆ Read More »

ಮಲೆನಾಡಿನ ಸೊಗಡು ಪರಿಚಯಿಸುತ್ತಿದೆ ಕಾರ್ಟೂನ್ ಚಾನೆಲ್| ಆರಂಭದಿಂದಲೇ‌ ಅದ್ಭುತ ಪ್ರತಿಕ್ರಿಯೆ ಪಡೆದ ‘ಮಲ್ನಾಡ್ ಪುಟಾಣಿಗಳು’

ಶಿವಮೊಗ್ಗ: ಮಲೆನಾಡಿನ ಭಾಷಾ ಸೊಗಡು ಹಾಗೂ ಇಲ್ಲಿನ ಆಹಾರ ಪದ್ಧತಿ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಬೇಕು ಎಂಬ ಮಹತ್ವಾ ಕಾಂಕ್ಷೆಯೊಂದಿಗೆ ತೀರ್ಥಹಳ್ಳಿಯಲ್ಲಿ ಒಂದೇ ಕುಟುಂಬದವರು ‘ಮಲ್ನಾಡ್ ಪುಟಾಣಿಗಳು’ ಕನ್ನಡ ಯೂ‌ ಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ. ಕೊರೊನಾ 2ನೇ ಅಲೆ ಸಂದರ್ಭದಲ್ಲಿ ಆರಂಭಿಸಿರುವ ಈ ಚಾನೆಲ್‌ಗೆ ವಿದೇಶದಲ್ಲೂ ವೀಕ್ಷಕರಿದ್ದಾರೆ. ವಿಶೇಷವೆಂದರೆ, ಶುರುವಾದ ಎರಡೇ ತಿಂಗಳಲ್ಲಿ 20 ಲಕ್ಷ ವೀಕ್ಷಕರನ್ನು ಚಾನೆಲ್ ಸಂಪಾದಿಸಿದೆ. ಮಲೆನಾಡಿನ ಸಂಸ್ಕೃತಿ, ಭಾಷೆಯನ್ನು ಉಳಿಸಿ ಬೆಳೆಸುವ ಹಾಗೂ ಜಾಗತಿಕ ಮಟ್ಟ ದಲ್ಲಿ ಜನರಿಗೆ ಇದನ್ನು ತಲುಪಿಸುವುದಕ್ಕಾಗಿ ಉಪನ್ಯಾಸಕಿ

ಮಲೆನಾಡಿನ ಸೊಗಡು ಪರಿಚಯಿಸುತ್ತಿದೆ ಕಾರ್ಟೂನ್ ಚಾನೆಲ್| ಆರಂಭದಿಂದಲೇ‌ ಅದ್ಭುತ ಪ್ರತಿಕ್ರಿಯೆ ಪಡೆದ ‘ಮಲ್ನಾಡ್ ಪುಟಾಣಿಗಳು’ Read More »

ದೀಪಾವಳಿ ದಿನ ರಾಜ್ಯದ ಎಲ್ಲಾ ‌ಮುಜುರಾಯಿ ದೇವಾಲಯಗಳಲ್ಲಿ ಗೋಪೂಜೆ‌ ನಡೆಸಲು ಆದೇಶಿಸಿದ ರಾಜ್ಯ‌ಸರ್ಕಾರ

ಬೆಂಗಳೂರು: ದೀಪಾವಳಿ ಹಬ್ಬದಂದು ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಮುಜರಾಯಿ ಇಲಾಖೆಯ ಎಲ್ಲಾ ದೇವಸ್ಥಾನದಲ್ಲಿ ಗೋಪೂಜೆ ಮಾಡಲು ರಾಜ್ಯ ಸರ್ಕಾರದಿಂದ ಆದೇಶ ನೀಡಿದೆ. ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ನವೆಂಬರ್‌ 5ರಂದು ಆಚರಣೆ ಮಾಡುವ ಬಲಿಪಾಡ್ಯಮಿಯಂದು ಗೋವಿನ ಪೂಜೆಯನ್ನು ಅಂದು ಸಂಜೆ 5.30ರಿಂದ 6.30ರ ಗೋಧೂಳಿ ಲಗ್ನದಲ್ಲಿ ಪೂಜೆ ಮಾಡುವಂತೆ ಆದೇಶ ನೀಡಲಾಗಿದೆ.

ದೀಪಾವಳಿ ದಿನ ರಾಜ್ಯದ ಎಲ್ಲಾ ‌ಮುಜುರಾಯಿ ದೇವಾಲಯಗಳಲ್ಲಿ ಗೋಪೂಜೆ‌ ನಡೆಸಲು ಆದೇಶಿಸಿದ ರಾಜ್ಯ‌ಸರ್ಕಾರ Read More »

ಟೂರ್ ಪ್ಯಾಕೇಜ್ ಹೆಸರಲ್ಲಿ ಮತ್ತೊಮ್ಮೆ ವಂಚಿಸಿದ “ರಾಯಲ್ ಹಾಲಿಡೇಸ್”

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾಯಲ್ ಹಾಲಿಡೇಸ್ ಮತ್ತೆ ವಂಚನೆ ಮಾಡಿ ಸಿಕ್ಕಿಬಿದ್ದಿದೆ. ಈ ಹಿಂದೆ ಎರಡು ಬಾರಿ ಕ್ರಿಮಿನಲ್ ಕೇಸು ದಾಖಲಾಗಿದ್ದ ರಾಯಲ್ ಹಾಲಿಡೇಸ್ ಚೈನ್ ಲಿಂಕ್ ವಹಿವಾಟಿನ ಅಕ್ರಮವನ್ನು ಈ ಬಾರಿ ಸಿಸಿಬಿ ಪೊಲೀಸರು ಬಯಲಿಗೆ ಎಳೆದಿದ್ದಾರೆ. ಚಂದ್ರಾ ಬಡಾವಣೆಯಲ್ಲಿ ದೊಡ್ಡ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಯಲ್ ಹಾಲಿಡೇಸ್ ಟೂರ್ ಪ್ಯಾಕೇಜ್ ಹೆಸರಿನಲ್ಲಿ ಲಕ್ಷಾಂತರ ಜನರಿಂದ ಹಣ ಪಡೆದು ಮೋಸ ಮಾಡಿತ್ತು. ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಜೈನ್ ಲಿಂಕ್ ಜಾಲ ವಿಸ್ತರಿಸಿತ್ತು. ಚೈನ್ ಲಿಂಕ್ ವಹಿವಾಟಿನ

ಟೂರ್ ಪ್ಯಾಕೇಜ್ ಹೆಸರಲ್ಲಿ ಮತ್ತೊಮ್ಮೆ ವಂಚಿಸಿದ “ರಾಯಲ್ ಹಾಲಿಡೇಸ್” Read More »

ಬ್ರಹ್ಮಾವರ: ಜಮೀನಿನಲ್ಲಿ ತಲೆಬುರುಡೆ ಮತ್ತು ಅಸ್ಥಿಪಂಜರ ಪತ್ತೆ

ಬ್ರಹ್ಮಾವರ: ತಾಲೂಕಿನ ಯಡಾಡಿ ಮತ್ಯಾಡಿ ಗ್ರಾಮದ ಕ್ಯಾಸನಮಕ್ಕಿ ಬಳಿಯ ಹಡ್ಕದಲ್ಲಿ ವ್ಯಕ್ತಿಯೊಬ್ಬರ ಜಮೀನಿನಲ್ಲಿ ಅಪರಿಚಿತ ವ್ಯಕ್ತಿಯ ತಲೆಬುರುಡೆ ಮತ್ತು ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿವೆ.ಸ್ಥಳೀಯರಾದ ಸುದರ್ಶನ್ ಎಂಬುವವರ ಮಾಲೀಕತ್ವದ ಜಮೀನಿನಲ್ಲಿ ಪೆತ್ತೆಯಾಗಿದೆ. ಇವರ ಜಮೀನಿನಲ್ಲಿ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರು ತರಗೆಲೆ ಹಾಗೂ ಇತರ ತ್ಯಾಜ್ಯಗಳನ್ನು ತೆರವುಗೊಳಿಸುತ್ತಿದ್ದಾಗ ಅವರಿಗೆ ತಲೆಬುರುಡೆ, ಕೈ ಕಾಲುಗಳ ಮೂಳೆಗಳು ಮತ್ತು ಬಟ್ಟೆಗಳು ಕಂಡುಬAದಿದೆ.ಈ ಹಿನ್ನೆಲೆ ಸ್ಥಳಕ್ಕೆ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಅನಂತಪದ್ಮನಾಭ, ಕೋಟ ಠಾಣಾಧಿಕಾರಿ ಸಂತೋಷ್ ಬಿ ಪಿ ಹಾಗೂ ಸಿಬ್ಬಂದಿ ಭೇಟಿ

ಬ್ರಹ್ಮಾವರ: ಜಮೀನಿನಲ್ಲಿ ತಲೆಬುರುಡೆ ಮತ್ತು ಅಸ್ಥಿಪಂಜರ ಪತ್ತೆ Read More »

ಜೆಡಿಎಸ್ ಶಾಸಕ ಎಸ್.ಮಂಜುನಾಥ್ ಬಂಧನ

ಬೆಂಗಳೂರು: ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಎನ್‌ಒಸಿ ಪಡೆದು ಕಟ್ಟಿದ್ದ ಮನೆಗಳನ್ನು ನೆಲಸಮ ಮಾಡುವುದನ್ನು ತಡೆಯಲು ಹೋದ ಜೆಡಿಎಸ್ ಪಕ್ಷದ ದಾಸರಹಳ್ಳಿ‌ ಕ್ಷೇತ್ರದ ಶಾಸಕ ಮಂಜುನಾಥ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಎನ್‌ಒಸಿ ಪಡೆದು ಕಟ್ಟಿದ್ದಂತ ಮನೆಗಳನ್ನೇ, ಪೊಲೀಸರ ನೆರವಿನಿಂದ ಬಿಡಿಎ ಅಧಿಕಾರಿಗಳು ಅಕ್ರಮದ ಹೆಸರಿನಲ್ಲಿ ನೆಲಸಮ ಮಾಡಲು ತೊಡಗಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ತೆರಳಿದಂತ ಜೆಡಿಎಸ್ ಶಾಸಕ ಮಂಜುನಾಥ್ ಅವರು ನೆಲಸಮ ಕಾರ್ಯಾಚರಣೆ ಅಡ್ಡಿ ಪಡಿಸಿದ್ದಾರೆ. ಇದರಿಂದ

ಜೆಡಿಎಸ್ ಶಾಸಕ ಎಸ್.ಮಂಜುನಾಥ್ ಬಂಧನ Read More »

ಉಗ್ರ ಸಂಘಟನೆಯೊಂದಿಗೆ ಸಂಪರ್ಕ| ಬೆಂಗಳೂರಿನ ಯುವಕ ಅರೆಸ್ಟ್

ಬೆಂಗಳೂರು: ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಎನ್ನಲಾದ ಯುವಕನೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಶನಿವಾರ ಬಂಧಿಸಿ ಘಟನೆ ನಡೆದಿದೆ.ಬಂಧಿತ ಆರೋಪಿ ಬೆಂಗಳೂರಿನ ಮುಹಮ್ಮದ್ ತಾಖಿರ್ ಮೊಹಮ್ಮದ್ (33) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಸೆಕ್ಷನ್ 120ಬಿ, ಐಪಿಸಿ 125 ಮತ್ತು ಸೆಕ್ಷನ್ 17,18 ಹಾಗೂ ಯುಎ (ಪಿ) 18ಬಿ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಎನ್‌ಐಎಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಮುಸ್ಲಿಂ ಸಮುದಾಯದ ಯುವಕರಲ್ಲಿ ಮೂಲಭೂತವಾದವನ್ನು ಪಸರಿಸಿ, ಅವರನ್ನು ಐಎಸ್ ಉಗ್ರ ಸಂಘಟನೆಗೆ ಸೇರಲು ಸಿರಿಯಾಕ್ಕೆ ಕಳುಹಿಸುತ್ತಿದ್ದ ಎಂಬ

ಉಗ್ರ ಸಂಘಟನೆಯೊಂದಿಗೆ ಸಂಪರ್ಕ| ಬೆಂಗಳೂರಿನ ಯುವಕ ಅರೆಸ್ಟ್ Read More »