ರಾಜ್ಯದಲ್ಲಿ ಅಬ್ಬರಿಸಿದ ಸ್ವಾತಿಮಳೆ| ಪ್ರತ್ಯೇಕ ಘಟನೆಗಳಲ್ಲಿ ನಾಲ್ಕು ಸಾವು| ಅಪಾರ ಹಾನಿ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರ ಉತ್ತಮವಾಗಿ ಮಳೆ ಸುರಿದಿದ್ದು ಸಿಡಿಲಿಗೆ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿರುವ ಪ್ರತ್ಯೇಕ ಘಟನೆಗಳು ವರದಿಯಾಗಿವೆ. ಹಳೇ ಮೈಸೂರಿನ ಕೆಲ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡು ಕೃಷಿಗೂ ಅಪಾರ ನಷ್ಟವಾಗಿದೆ.ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮದ ರೈತ ಲಾಡೆನ್ಸಾಬ್(29), ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಸಿದ್ದಪ್ಪ(40), ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮೀಸೆತಿಮ್ಮನಹಳ್ಳಿಯ ಲೋಕೇಶ್ ನಾಯಕ (47)ಯಲ್ಲಾಪುರ ತಾಲೂಕಿನ ಕಿರವತ್ತಿಯ ಖಾರೇವಾಡದ ಜನಾಬಾಯಿ ಕಾನು ಶೆಳಕೆ (40) ಮೃತಪಟ್ಟವರು. […]
ರಾಜ್ಯದಲ್ಲಿ ಅಬ್ಬರಿಸಿದ ಸ್ವಾತಿಮಳೆ| ಪ್ರತ್ಯೇಕ ಘಟನೆಗಳಲ್ಲಿ ನಾಲ್ಕು ಸಾವು| ಅಪಾರ ಹಾನಿ Read More »










