ರಾಜ್ಯ

ಹಿರಿಯ ನಟ ರಾಜೇಶ್ ಇನ್ನಿಲ್ಲ

ಸಮಗ್ರ ನ್ಯೂಸ್ ಡೆಸ್ಕ್: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಯಾಂಡಲ್​ವುಡ್ ಹಿರಿಯ ನಟ ರಾಜೇಶ್ (87) ಶನಿವಾರ ಕೊನೆಯುಸಿರೆಳೆದಿದ್ದಾರೆ. ಶನಿವಾರ ಮುಂಜಾನೆ 2.30ರ ಸುಮಾರಿಗೆ ಇಹಲೋಕವನ್ನು ತ್ಯಜಿಸಿದ್ದಾರೆ ಎಂದು ರಾಜೇಶ್ ಅವರ ಅಳಿಯ ಮತ್ತು ನಟ ಅರ್ಜುನ್ ಸರ್ಜಾ ಮಾಹಿತಿ ನೀಡಿದ್ದಾರೆ. ಬಹು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಜೇಶ್, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವಿದ್ಯಾರಣ್ಯಪುರದ ನಿವಾಸದಲ್ಲಿ ರಾಜೇಶ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅರ್ಜುನ್ ಸರ್ಜಾ ಹೇಳಿದ್ದಾರೆ. ಮಧ್ಯಾಹ್ನ 3:30ರ ನಂತರ […]

ಹಿರಿಯ ನಟ ರಾಜೇಶ್ ಇನ್ನಿಲ್ಲ Read More »

ವಿಜಯಪುರ: ಕುಂಕುಮ ಇಟ್ಟು ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ ಕಾಲೇಜು

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ಮುಂದುವರೆದಿದ್ದು, ಇದೀಗ ಹಣೆಗೆ ಕುಂಕುಮ ಇಟ್ಟು ಬಂದ ವಿದ್ಯಾರ್ಥಿಗೆ ಕಾಲೇಜು ಪ್ರವೇಶಕ್ಕೆ ನಿರಾಕರಿಸಿದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ಇಂಡಿ ಪಟ್ಟಣದ ಸರ್ಕಾರಿ ಮಹಾ ವಿದ್ಯಾಲಯದಲ್ಲಿ ವಿದ್ಯಾರ್ಥಿಯೊಬ್ಬ ಹಣೆಗೆ ಕುಂಕುಮ ಇಟ್ಟುಕೊಂಡು ಬಂದಿದ್ದ. ಈ ವೇಳೆ ದೈಹಿಕ ಶಿಕ್ಷಕರು ವಿದ್ಯಾರ್ಥಿಯನ್ನು ತಡೆದು ಕುಂಕುಮ ತೆಗೆದು ಕಾಲೇಜಿಗೆ ಬರುವಂತೆ ಹೇಳಿದ್ದಾರೆ. ಹೀಗಾಗಿ ವಿದ್ಯಾರ್ಥಿ ಹಾಗೂ ಶಿಕ್ಷಕರ ನಡುವೆ ವಾಗ್ವಾದ ನಡೆದಿದೆ. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ

ವಿಜಯಪುರ: ಕುಂಕುಮ ಇಟ್ಟು ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ ಕಾಲೇಜು Read More »

ಬೆಳಗಾವಿ: ಹಿಜಾಬ್ ತೆಗೆದಿರಿಸಿ ತರಗತಿಗೆ ಹಾಜರಾದ ವಿದ್ಯಾರ್ಥಿನಿಯರು

ಸಮಗ್ರ ನ್ಯೂಸ್ ಡೆಸ್ಕ್: ಹಿಜಾಬ್​ ವಿವಾದದ ಹಿನ್ನೆಲೆಯಲ್ಲಿ ಬೆಳಗಾವಿ ಸದಾಶಿವ ನಗರದಲ್ಲಿರುವ ವಿಜಯ ಪ್ಯಾರಾ ಮೆಡಿಕಲ್ ಸೈನ್ಸ್ ಕಾಲೇಜು ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ವಿಜಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ನಿನ್ನೆ ಹಿಜಾಬ್​ಗೆ ಅವಕಾಶ ಕೋರಿದ್ದರು.ಇಂದು ಕೂಡ ಪ್ರತಿಭಟನೆ ನಡೆಸುವ ಸಾಧ್ಯತೆಯಿದ್ದು, ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ. ಕಾಲೇಜಿಗೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿಜಾಬ್, ಬುರ್ಖಾ ಧರಿಸಿ ಕಾಲೇಜಿಗೆ ಆಗಮಿಸುತ್ತಿರುವ ಕೆಲ ವಿದ್ಯಾರ್ಥಿನಿಯರು ಪ್ರತ್ಯೇಕ ಕೊಠಡಿಯಲ್ಲಿ ಹಿಜಾಬ್ ತಗೆದಿಟ್ಟು ತರಗತಿಗೆ ಹಾಜರಾಗಿದ್ದಾರೆ.

ಬೆಳಗಾವಿ: ಹಿಜಾಬ್ ತೆಗೆದಿರಿಸಿ ತರಗತಿಗೆ ಹಾಜರಾದ ವಿದ್ಯಾರ್ಥಿನಿಯರು Read More »

ಉಡುಪಿ: ಪಿ.ಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

ಉಡುಪಿ: ಇಂದಿನಿಂದ ಪ್ರಾರಂಭಗೊಳ್ಳಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರಾಯೋಗಿಕ ಪರೀಕ್ಷೆಗಳನ್ನು ತಾಂತ್ರಿಕ ಕಾರಣಗಳಿಗಾಗಿ ನಾಳೆಗೆ ಮುಂದೂಡಲಾಗಿದೆ ಎಂದು ಡಿಡಿಪಿಯು ಮಾರುತಿ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆಗಳು ಪ್ರಾರಂಭಗೊಳ್ಳಲಿವೆ ಎಂದವರು ಹೇಳಿದ್ದಾರೆ. ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗಳನ್ನು ಇಂದಿನಿಂದ ಮಾ.25ರೊಳಗೆ ಮುಗಿಸಲು ರಾಜ್ಯ ಪ.ಪೂ. ಶಿಕ್ಷಣ ಮಂಡಳಿ ಸೂಚನೆ ನೀಡಿದೆ. ಅದರಂತೆ ಜಿಲ್ಲೆಯ ವೇಳಾಪಟ್ಟಿ ತಯಾರಿಸಲಾಗುವುದು ಎಂದು ಮಾರುತಿ ತಿಳಿಸಿದ್ದಾರೆ. ಇಂದು ನಡೆಯಬೇಕಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮಾ.11ರಂದು ನಡೆಸಲಾಗುತ್ತಿದೆ ಎಂದೂ ಅವರು

ಉಡುಪಿ: ಪಿ.ಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ Read More »

ಸುರತ್ಕಲ್ ‌: ಆಸಿಫ್ ಆಪದ್ಬಾಂಧವ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದ ಮಂಗಳಮುಖಿಯರು ಪೋಲಿಸ್ ವಶಕ್ಕೆ

ಸುರತ್ಕಲ್ : ಎನ್ಐಟಿಕೆ ಟೋಲ್ ಗೇಟ್ ವಿರುದ್ಧದ ಧರಣಿ ಸ್ಥಳಕ್ಕೆ ಮಧ್ಯರಾತ್ರಿ ನುಗ್ಗಿ ಮಂಗಳಮುಖಿಯರ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‌ಆರು ಮಂದಿ ಮಂಗಳಮುಖಿಯರನ್ನು‌ ಪೋಲಿಸರು‌ ಬಂಧಿಸಿದ್ದಾರೆ. ಬಂಧಿತರನ್ನು ಮಂಡ್ಯ ಮೂಲದ ವಾಸವಿ‌ ಗೌಡ(32), ದಾವಣಗೆರೆ ಮೂಲದ ಲಿಪಿಕಾ‌(19) , ಹಾಸನ ಮೂಲದ ಹಿಮಾ(24), ಮೈಸೂರು ಮೂಲದ ಆದ್ಯ (22) ಹಾಗೂ ಮಾಯಾ(28) ಮತ್ತು ರಾಮನಗರ ಜಿಲ್ಲೆಯ ಮೈತ್ರಿ(28) ಎಂದು ಗುರುತಿಸಲಾಗಿದೆ.

ಸುರತ್ಕಲ್ ‌: ಆಸಿಫ್ ಆಪದ್ಬಾಂಧವ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದ ಮಂಗಳಮುಖಿಯರು ಪೋಲಿಸ್ ವಶಕ್ಕೆ Read More »

ಸುಳ್ಯದ ಕಾಲೇಜೊಂದರಲ್ಲಿ ಹಿಜಾಬ್ ಸಂಘರ್ಷ

ಸುಳ್ಯ: ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾದ ಹಿಜಾಬ್ ವಿವಾದ ಸುಳ್ಯಕ್ಕೂ ಕಾಲಿಟ್ಟಿದ್ದು, ನೆಹರೂ ಮೆಮೊರಿಯಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೆಲವರು ಹಿಜಾಬ್ ಧರಿಸಿ ಬಂದ ಘಟನೆ ಇಂದು ವರದಿಯಾಗಿದೆ. ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಪ್ರವೇಶ ನಿರಾಕರಿಸಿದ ಹಿನ್ನೆಲೆ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಒಂದುಗೂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬಂದೋಬಸ್ತ್ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸುಳ್ಯದ ಕಾಲೇಜೊಂದರಲ್ಲಿ ಹಿಜಾಬ್ ಸಂಘರ್ಷ Read More »

ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್ ಸಂಘರ್ಷ – ಕಾಲೇಜುಗಳ ಮುಂದೆ ಹಿಜಾಬ್ ಮುಸ್ಲಿಂ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಂಗಳೂರು: ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೂ, ಕೋರ್ಟ್ ಆದೇಶಕ್ಕೆ ಡೋಂಟ್ ಕೇರ್ ಎನ್ನುವಂತೆ ವಿದ್ಯಾರ್ಥಿಗಳು ಇಂದು ಕೂಡ ಹಿಜಾಬ್ ಧರಿಸಿಯೇ ಕಾಲೇಜುಗಳಿಗೆ ಆಗಮಿಸಿದ್ದಾರೆ. ಹಿಜಾಬ್ ಧರಿಸಿ ಬಂದಂತ ವಿದ್ಯಾರ್ಥಿಗಳು ಪ್ರಾಂಶುಪಾಲರು, ಉಪನ್ಯಾಸಕರೊಂದಿಗೆ ವಾಗ್ವಾದ ನಡೆಸಿರೋದು, ಗಲಾಟೆ ಮಾಡಿರೋ ಘಟನೆಗಳು ರಾಜ್ಯಾಧ್ಯಂತ ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಇಂದು ಆರಂಭಗೊಂಡಂತ ಪಿಯು, ಪದವಿ ಕಾಲೇಜು ಮೊದಲ ದಿನವೇ ಹಿಜಾಬ್ ಸಂಘರ್ಷ ತಾರಕಕ್ಕೇರಿದೆ. ವಿಜಯಪುರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದಂತ ವಿದ್ಯಾರ್ಥಿಗಳು, ತರಗತಿಗೂ

ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್ ಸಂಘರ್ಷ – ಕಾಲೇಜುಗಳ ಮುಂದೆ ಹಿಜಾಬ್ ಮುಸ್ಲಿಂ ವಿದ್ಯಾರ್ಥಿಗಳಿಂದ ಪ್ರತಿಭಟನೆ Read More »

ಉಡುಪಿ: ಹಿಜಾಬ್ ಹೋರಾಗಾರ್ತಿಯರು ತರಗತಿಗೆ ಗೈರು – ಅಜ್ಜರಕಾಡು ಸರ್ಕಾರಿ ಕಾಲೇಜಿನಲ್ಲಿ ಗೊಂದಲ

ಉಡುಪಿ: ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಒತ್ತಾಯಿಸಿ ಹೋರಾಟ ನಡೆಸಿದ ಕುಂದಾಪುರದ ಸರಕಾರಿ ಪಿಯು ಕಾಲೇಜಿನ 23 ವಿದ್ಯಾರ್ಥಿಗಳು ಹಾಗೂ ಉಡುಪಿಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ 6 ಜನ ವಿದ್ಯಾರ್ಥಿನಿಯರು ಇಂದು ತರಗತಿಗೆ ಗೈರು ಹಾಜರಾಗಿದ್ದಾರೆ. ಇದೇ ವೇಳೆ ಇಲ್ಲಿನ ಎಂಜಿಎಂ ಕಾಲೇಜಿನ ಪಿಯು ತರಗತಿಗೆ ಇಂದು ರಜೆ ಘೋಷಿಸಲಾಗಿದೆ. ಕುಂದಾಪುರದಲ್ಲಿ ಕಳೆದ ಬಾರಿ 23 ವಿದ್ಯಾರ್ಥಿನಿಯರು ಧರಣಿ ನಡೆಸಿದಾಗ ಪ್ರತ್ಯೇಕ ಕೊಠಡಿಯಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಅವರನ್ನು ಗೇಟ್ ಹೊರಗೆ ಕಳುಹಿಸಿದಾಗ, ವಿವಾದ ಹುಟ್ಟಿಕೊಂಡಿತು.

ಉಡುಪಿ: ಹಿಜಾಬ್ ಹೋರಾಗಾರ್ತಿಯರು ತರಗತಿಗೆ ಗೈರು – ಅಜ್ಜರಕಾಡು ಸರ್ಕಾರಿ ಕಾಲೇಜಿನಲ್ಲಿ ಗೊಂದಲ Read More »

ಸುರತ್ಕಲ್‌ ಟೋಲ್ ಬಳಿ ಮಂಗಳಮುಖಿಯರಿಂದ ಸಾಮಾಜಿಕ ಕಾರ್ಯಕರ್ತ ಆಸೀಫ್ ಮೇಲೆ ಹಲ್ಲೆಗೆ ಯತ್ನ

ಸುರತ್ಕಲ್: ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಕೆಲವು ದಿನಗಳಿಂದ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಆಸೀಫ್ ಆಪತ್ಬಾಂಧವ ಮೇಲೆ ಮಂಗಳಮುಖಿಯರು ಹಲ್ಲೆಗೆ ಯತ್ನ ನಡೆದಿದೆ. ಸ್ಥಳೀಯ ಆಡಳಿತದ ಗಮನ ಸೆಳೆಯುವ ಸಲುವಾಗಿ ಆಸಿಫ್ ನಿರಂತರ ಪ್ರತಿಭಟನೆ ನಡೆಸುತ್ತಿದ್ದರು, ಅದರಂತೆ ಕಳೆದ ಮಧ್ಯರಾತ್ರಿ ಪ್ರತಿಭಟನೆಯಲ್ಲಿ ನಿರತರಾಗಿದ್ದ ಆಸಿಫ್‌ಅವರ ಬಳಿ ಇಬ್ಬರು ಮಂಗಳಮುಖಿಯರು ಆಗಮಿಸಿದ್ದರು, ಸ್ವಲ್ಪ ಸಮಯದ ನಂತರ ಮಂಗಳಮುಖಿಯರ ತಂಡ ಆಗಮಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಂಗಳಮುಖಿಯರು ಹಲ್ಲೆಗೆ

ಸುರತ್ಕಲ್‌ ಟೋಲ್ ಬಳಿ ಮಂಗಳಮುಖಿಯರಿಂದ ಸಾಮಾಜಿಕ ಕಾರ್ಯಕರ್ತ ಆಸೀಫ್ ಮೇಲೆ ಹಲ್ಲೆಗೆ ಯತ್ನ Read More »

ರಾಜ್ಯದಲ್ಲಿ ಇಂದಿನಿಂದ ಕಾಲೇಜುಗಳು ಮತ್ತೆ ಶುರು| ಕ್ಯಾಂಪಸ್ ಸುತ್ತ‌ ಸೆಕ್ಷನ್ ಜಾರಿ

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಸಮವಸ್ತ್ರ ವಿವಾದದಲ್ಲಿ ಮುಚ್ಚಲ್ಪಟ್ಟಿದ್ದ ಕಾಲೇಜುಗಳು ಇಂದು ಮತ್ತೆ ಆರಂಭಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ಕಾಲೇಜು ಕ್ಯಾಂಪಸ್ ಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ’ ನೇತೃತ್ವದಲ್ಲಿ ಮಹತ್ವದ ನಡೆದಿದೆ. ಆ ಬಳಿಕ ಮಾತನಾಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು, ಬುಧವಾರದಿಂದ ಪಿಯುಸಿ, ಪದವಿ ತರಗತಿಗಳು ಆರಂಭವಾಗಲಿವೆ ಎಂದು ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್

ರಾಜ್ಯದಲ್ಲಿ ಇಂದಿನಿಂದ ಕಾಲೇಜುಗಳು ಮತ್ತೆ ಶುರು| ಕ್ಯಾಂಪಸ್ ಸುತ್ತ‌ ಸೆಕ್ಷನ್ ಜಾರಿ Read More »