ರಾಜ್ಯ

ಹಿಜಾಬ್ ಗೆ ಅವಕಾಶ ನೀಡದ ಕಾರಣ ಪರೀಕ್ಷೆಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿನಿಯರು!

ಶಿವಮೊಗ್ಗ: ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಹಿಜಾಬ್ ವಿವಾದ ಇದೀಗ ಮತ್ತೊಂದು ಹಂತ ತಲುಪಿದೆ. ಶಿವಮೊಗ್ಗದ ಮೇನ್ ಮಿಡ್ಲ್ ಸ್ಕೂಲ್ ನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆಯನ್ನೇ ಬಹಿಷ್ಕರಿಸಿದ್ದಾರೆ. ಇಂದು ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿದೆ. ಆದರೆ ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಬಿಡಲಿಲ್ಲ ಎಂಬ ಕಾರಣಕ್ಕೆ 13 ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ಮನೆಗೆ ತೆರಳಿದ್ದಾರೆ.

ಹಿಜಾಬ್ ಗೆ ಅವಕಾಶ ನೀಡದ ಕಾರಣ ಪರೀಕ್ಷೆಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿನಿಯರು! Read More »

ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ|ಡಿಪ್ಲೋಮಾ ಆದವರು Apply ಮಾಡಿ

ಸಮಗ್ರ ಮಾಹಿತಿ: ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್(Telecommunications Consultants Indian Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ(Technician Apprentice Trainee) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ dot.gov.in ಗೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ,

ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ|ಡಿಪ್ಲೋಮಾ ಆದವರು Apply ಮಾಡಿ Read More »

ಕಡಬ: ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯಧರ್ಮೀಯನ ಕಾರುಬಾರು| ಮತಾಂತರ ಯತ್ನ ಆರೋಪಿಸಿ ಹಿಂದೂ‌ ಸಂಘಟನಾ ಕಾರ್ಯಕರ್ತರಿಂದ ಆಕ್ರೋಶ

ಸಮಗ್ರ ನ್ಯೂಸ್ ಡೆಸ್ಕ್: ದ.ಕ ಜಿಲ್ಲೆಯ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳದ ಕೊಠಾರಿ ಎಂಬಲ್ಲಿ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯ ಕೋಮಿನ ವ್ಯಕ್ತಿಯೊಬ್ಬ ಪತ್ತೆಯಾಗಿದ್ದು, ಈತನನ್ನು ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರು ಶುಕ್ರವಾರ ಮುಂಜಾನೆ ವೇಳೆಗೆ ಪತ್ತೆ ಹಚ್ಚಿ ಪೋಲಿಸ್ ವಶಕ್ಕೆ ನೀಡಿದ್ದಾರೆ. ಕೋಡಿಂಬಾಳ ಗ್ರಾಮದ ಕೊಠಾರಿ ಎಂಬಲ್ಲಿ ವಾಸವಿರುವ ಮಹಿಳೆಯ ಮನೆಯಲ್ಲಿ ಅನ್ಯ ಕೋಮಿನ ವ್ಯಕ್ತಿಯೋರ್ವರು ತಂಗಿರುವ ವಿಚಾರ ಬೆಳಕಿಗೆ ಬಂದಿತ್ತು. ಆತ ಮಹಿಳೆಯನ್ನು ಆಸೆ ಆಮಿಷ ಒಡ್ಡಿ ಮತಾಂತರ ಮಾಡುವ ಉದ್ದೇಶದಿಂದ ಹಲವಾರು ಸಮಯಗಳಿಂದ

ಕಡಬ: ಆ್ಯಸಿಡ್ ದಾಳಿಗೊಳಗಾದ ಸಂತ್ರಸ್ತ ಹಿಂದೂ ಮಹಿಳೆಯ ಮನೆಯಲ್ಲಿ ಅನ್ಯಧರ್ಮೀಯನ ಕಾರುಬಾರು| ಮತಾಂತರ ಯತ್ನ ಆರೋಪಿಸಿ ಹಿಂದೂ‌ ಸಂಘಟನಾ ಕಾರ್ಯಕರ್ತರಿಂದ ಆಕ್ರೋಶ Read More »

ಬಿಜೆಪಿ ರಾಜ್ಯಾಧ್ಯಕ್ಷರ ಹುಟ್ಟೂರಲ್ಲೇ ಗೊಂದಲ| ಶಾಲೆಯಲ್ಲೇ ನಮಾಜ್ ಮಾಡಿದ ವಿದ್ಯಾರ್ಥಿಗಳು| ತಕ್ಷಣಕ್ಕೆ ಬಗೆಹರಿಯಿತು ಸಮಸ್ಯೆ|

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಹಿಜಾಬ್- ಕೇಸರಿ ಶಾಲು ಗೊಂದಲ ಜೀವಂತವಾಗಿರುವಾಗಲೇ ಇನ್ನೊಂದು ಇದೇ ರೀತಿಯ ಪ್ರಕರಣ ಸಮಾಜದಲ್ಲಿ ಮತ್ತೆ ಅಶಾಂತಿ ಮೂಡಿಸಲು ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಂಕತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಶುಕ್ರವಾರದ ನಮಾಜ್ ಮಾಡಿರುವ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಸದ್ಯಕ್ಕೆ ಅಧಿಕಾರಿಗಳು ವಿವಾದಕ್ಕೆ ತೆರೆ ಎಳೆದಿದ್ದಾರೆ. ಆದರೆ ಪರಿಸ್ಥಿತಿ ಬೂದಿ‌ ಮುಚ್ಚಿದ ಕೆಂಡದಂತಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹುಟ್ಟೂರಿನಲ್ಲಿನ ಅಂಕತ್ತಡ್ಕದ ಸರಕಾರಿ ಶಾಲೆಯಲ್ಲಿ ಕಳೆದ

ಬಿಜೆಪಿ ರಾಜ್ಯಾಧ್ಯಕ್ಷರ ಹುಟ್ಟೂರಲ್ಲೇ ಗೊಂದಲ| ಶಾಲೆಯಲ್ಲೇ ನಮಾಜ್ ಮಾಡಿದ ವಿದ್ಯಾರ್ಥಿಗಳು| ತಕ್ಷಣಕ್ಕೆ ಬಗೆಹರಿಯಿತು ಸಮಸ್ಯೆ| Read More »

ಎಸ್ಎಸ್ಎಲ್ ಸಿ, ಪಿಯುಸಿ ಪೂರ್ಣಗೊಂಡ ವಿದ್ಯಾರ್ಥಿಗಳ ಗಮನಕ್ಕೆ| ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್ ಡೆಸ್ಕ್ : ಭಾರತ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್ ವ್ಯಾಪ್ತಿಗೆ ಒಳಪಡುವ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಕೆಳ ವಿಭಾಗದ ಕ್ಲರ್ಕ್, ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ, ಅಂಚೆ ಸಹಾಯಕ/ ವಿಂಗಡಣೆ ಸಹಾಯಕ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಸಂಯೋಜಿತ ಉನ್ನತ ಮಾಧ್ಯಮಿಕ ಹಂತದ (10+2) ಪರೀಕ್ಷೆ-2021 ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಅರ್ಹ ಅಭ್ಯರ್ಥಿಗಳು ಆನ್‍ಲೈನ್ https://ssc.nic.in ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 7 ಕೊನೆಯ ದಿನವಾಗಿದೆ. ಡಾಟಾ ಎಂಟ್ರಿ ಆಪರೇಟರ್

ಎಸ್ಎಸ್ಎಲ್ ಸಿ, ಪಿಯುಸಿ ಪೂರ್ಣಗೊಂಡ ವಿದ್ಯಾರ್ಥಿಗಳ ಗಮನಕ್ಕೆ| ಅಂಚೆ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಅಪ್ಪು ‘ಜೇಮ್ಸ್’ ಹವಾ ಶುರು| ಟೀಸರ್ ಬಿಡುಗಡೆ, ಭರ್ಜರಿ ರೆಸ್ಪಾನ್ಸ್

ಸಮಗ್ರ ಪಿಲಂ ಡೆಸ್ಕ್: ಪುನೀತ್​ ರಾಜ್​ಕುಮಾರ್​ ಅಭಿನಯದ ಕೊನೇ ಸಿನಿಮಾ ಜೇಮ್ಸ್​ ಚಿತ್ರದ ಮೇಲೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡು ಕಾಯ್ತಿದ್ದಾರೆ. ಈಗಾಗಲೇ ಸಿನಿಮಾದ ಎರಡು ಪೋಸ್ಟರ್​ಗಳು ಬಿಡುಗಡೆಯಾಗಿದ್ದು ಅದಕ್ಕೆ ಅಭಿಮಾನಿಗಳು ಸಾಕಷ್ಟು ಸಂಭ್ರಮ ಪಟ್ಟಿದ್ದರು. ಈಗ ಸಿನಿಮಾ ತಂಡ ಚಿತ್ರದ ಟೀಸರ್​ ಬಿಡುಗಡೆ ಮಾಡಿದೆ. ಒಂದು ನಿಮಿಷ ಇರುವ ಟೀಸರ್​ನಲ್ಲಿ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅಬ್ಬರಿಸಿದ್ದಾರೆ. ಮಾಫಿಯಾ, ರೌಡಿಸಂ ನೇತೃತ್ವದಲ್ಲಿ ಮೂಡಿ ಬಂದಿರುವ ಈ ಸಿನಿಮಾ ಸಾಕಷ್ಟು ಲಾವಿಶ್​ಗೆ ಮೂಡಿ ಬಂದಿದೆ. ಅದ್ಬುತ ಲೊಕೇಶ್​

ಅಪ್ಪು ‘ಜೇಮ್ಸ್’ ಹವಾ ಶುರು| ಟೀಸರ್ ಬಿಡುಗಡೆ, ಭರ್ಜರಿ ರೆಸ್ಪಾನ್ಸ್ Read More »

‘ ಹಿಜಾಬ್ ಕುರಿತು ಮಧ್ಯಪ್ರವೇಶ ಮಾಡಲ್ಲ’ – ಸುಪ್ರೀಂ ಮೆಟ್ಟಿಲೇರಿದ ಅರ್ಜಿದಾರರಿಗೆ ಖಡಕ್ ಉತ್ತರ ನೀಡಿದ ಕೋರ್ಟ್| ಅರ್ಜಿದಾರರಿಗೆ ಹಿನ್ನಡೆ

ಸಮಗ್ರ ನ್ಯೂಸ್ ಡೆಸ್ಕ್ : ಹಿಜಾಬ್ ವಿವಾದದಲ್ಲಿ ಸದ್ಯಕ್ಕೆ ತನ್ನ ಮಧ್ಯಪ್ರವೇಶ ಇಲ್ಲ ಎಂಬುದನ್ನು ಸುಪ್ರೀಂ ಕೋರ್ಟ್ ಇಂದು ಸ್ಪಷ್ಟಪಡಿಸಿದೆ. ಶಾಲಾ – ಕಾಲೇಜುಗಳಲ್ಲಿ ಹಿಜಾಬ್ ಅನುಮತಿ ನೀಡುವಂತೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನಿನ್ನೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ತ್ರಿ ಸದಸ್ಯ ಪೀಠವು, ಮುಂದಿನ ಆದೇಶದವರೆಗೆ ಧಾರ್ಮಿಕ ಗುರುತುಗಳ ಉಡುಪು ಧರಿಸಿ ಶಾಲೆಗಳಿಗೆ ತೆರಳದಂತೆ ಮಧ್ಯಂತರ ಆದೇಶ ಹೊರಡಿಸಿತ್ತು. ಇದೀಗ ಈ ಆದೇಶವನ್ನು ಪ್ರಶ್ನಿಸಿ, ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ

‘ ಹಿಜಾಬ್ ಕುರಿತು ಮಧ್ಯಪ್ರವೇಶ ಮಾಡಲ್ಲ’ – ಸುಪ್ರೀಂ ಮೆಟ್ಟಿಲೇರಿದ ಅರ್ಜಿದಾರರಿಗೆ ಖಡಕ್ ಉತ್ತರ ನೀಡಿದ ಕೋರ್ಟ್| ಅರ್ಜಿದಾರರಿಗೆ ಹಿನ್ನಡೆ Read More »

ದೇಶಾದ್ಯಂತ ಏರ್ ಟೆಲ್ ಸರ್ವರ್‌ ಡೌನ್| ಹಲವು ಸೇವೆಗಳು ಸ್ಥಗಿತ

ಸಮಗ್ರ ನ್ಯೂಸ್ ಡೆಸ್ಕ್: ಏರ್‌ಟೆಲ್‌ನ ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ಸೇವೆಗಳು ಸ್ಥಗಿತಗೊಂಡಿವೆ. ಏರ್‌ಟೆಲ್‌ನ ನೆಟ್‌ವರ್ಕ್‌ನಲ್ಲಿನ ಸ್ಥಗಿತವನ್ನು ವರದಿ ಮಾಡಲು ಭಾರತದ ವಿವಿಧ ಸ್ಥಳಗಳಿಂದ ಅನೇಕ ಬಳಕೆದಾರರು Twitter ನಲ್ಲಿ ಪೋಸ್ಟ್ ಮಾಡಿದ್ದಾರೆ. ಕಂಪನಿಯು ಸದ್ಯಕ್ಕೆ ಸಮಸ್ಯೆಯನ್ನು ಒಪ್ಪಿಕೊಂಡಿಲ್ಲ, ಆದರೆ ಆನ್‌ಲೈನ್ ವರದಿಗಳು ಈ ಸಮಸ್ಯೆಯು ವ್ಯಾಪಕವಾಗಿರಬಹುದು ಮತ್ತು ಏರ್‌ಟೆಲ್ ಮೊಬೈಲ್ ಇಂಟರ್ನೆಟ್ ಮತ್ತು ಕಂಪನಿಯ ಬ್ರಾಡ್‌ಬ್ಯಾಂಡ್ ಮತ್ತು ವೈ-ಫೈ ಸೇವೆಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಸೂಚಿಸುತ್ತದೆ. ಈ ಕ್ಷಣದಲ್ಲಿ Airtel ನ ಅಪ್ಲಿಕೇಶನ್ ಸಹ ಕಾರ್ಯನಿರ್ವಹಿಸುತ್ತಿಲ್ಲ

ದೇಶಾದ್ಯಂತ ಏರ್ ಟೆಲ್ ಸರ್ವರ್‌ ಡೌನ್| ಹಲವು ಸೇವೆಗಳು ಸ್ಥಗಿತ Read More »

ಸೋಮವಾರ ಹೈಸ್ಕೂಲ್ ವರೆಗೆ ತರಗತಿಗಳು ರೀಓಪನ್| ಕಾಲೇಜು ಭವಿಷ್ಯ ತೂಗುಯ್ಯಾಲೆಯಲ್ಲಿ

ಸಮಗ್ರ ನ್ಯೂಸ್ ಡೆಸ್ಕ್: ಕಾಲೇಜಿನ ತರಗತಿಯೊಳಗೆ ಹಿಜಾಬ್​​ ಧರಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​​ ಪ್ರಕರಣದ ಮುಂದಿನ ವಿಚಾರಣೆಯನ್ನು ಫೆ.14ಕ್ಕೆ ಮುಂದೂಡಿದೆ. ಅಲ್ಲಿಯವರೆಗೆ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಯಾವುದೇ ಧಾರ್ಮಿಕ ಗುರುತುಗಳನ್ನು ಬಳಸಬಾರದು ಎಂದು ಸೂಚಿಸಿದೆ. ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೆ ಹಿಜಾಬ್​, ಕೇಸರಿ ಶಾಲು ಎರಡೂ ಬೇಡ ಎಂದು ಹೈಕೋರ್ಟ್​ ಹೇಳಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಚಿವರೊಂದಿಗೆ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಸಿಎಂ, ಸೋಮವಾರದಿಂದ ಶಾಲೆಗಳು ಸಂಪೂರ್ಣವಾಗಿ ಆರಂಭವಾಗಲಿದೆ

ಸೋಮವಾರ ಹೈಸ್ಕೂಲ್ ವರೆಗೆ ತರಗತಿಗಳು ರೀಓಪನ್| ಕಾಲೇಜು ಭವಿಷ್ಯ ತೂಗುಯ್ಯಾಲೆಯಲ್ಲಿ Read More »

ಹಿಜಾಬ್ ವಿವಾದ| ಶೈಕ್ಷಣಿಕ ಸಂಸ್ಥೆಗಳಿಗೆ ಮತ್ತೆ ರಜೆ ವಿಸ್ತರಣೆ ಸಾಧ್ಯತೆ|

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಹಿಜಾಬ್ ವಿವಾದವು ಬೂದಿ ಮುಚ್ಚಿದ ಕೆಂಡದಂತೆ ಇರುವ ಕಾರಣ ಈಗಾಗಲೇ ಶಾಲಾಕಾಲೇಜುಗಳಿಗೆ ಘೋಷಣೆ ಮಾಡಿರುವ ರಜೆಯನ್ನು ಇನ್ನಷ್ಟು ದಿನಗಳ ಕಾಲ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಎರಡು ದಿನಗಳ ಹಿಂದೆ ರಾಜ್ಯ ಸರ್ಕಾರ ಮೂರು ದಿನ ರಜೆ ಘೋಷಣೆ ಮಾಡಿತ್ತು. ನಾಳೆ ಈ ಅವಧಿ ಮುಗಿಯಲಿದ್ದು, ಇನ್ನು ಮೂರ್ನಾಲ್ಕು ದಿನಗಳ ಕಾಲ ವಿಸ್ತರಣೆ ಮಾಡಲು ಸರ್ಕಾರ ಒಲವು ತೋರಿದೆ. ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು

ಹಿಜಾಬ್ ವಿವಾದ| ಶೈಕ್ಷಣಿಕ ಸಂಸ್ಥೆಗಳಿಗೆ ಮತ್ತೆ ರಜೆ ವಿಸ್ತರಣೆ ಸಾಧ್ಯತೆ| Read More »