ರಾಜ್ಯ

ಅ.13ರ ವರೆಗೂ ಭಾರೀ ಮಳೆ ಮುನ್ಸೂಚನೆ| ಹಲವು ಜಿಲ್ಲೆಗಳಲ್ಲಿ ಅಲರ್ಟ್| ದಸರಾ ಹಬ್ಬಕ್ಕೆ ಮಳೆ ಕಾಟ|

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮೂರು ದಿನ ಭಾರಿ ಮಳೆಯಾಗಲಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಈ ಬಗ್ಗೆ ಮುನ್ಸೂಚನೆ ನೀಡಲಾಗಿದ್ದು, ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕಲಬುರ್ಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಅನೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ […]

ಅ.13ರ ವರೆಗೂ ಭಾರೀ ಮಳೆ ಮುನ್ಸೂಚನೆ| ಹಲವು ಜಿಲ್ಲೆಗಳಲ್ಲಿ ಅಲರ್ಟ್| ದಸರಾ ಹಬ್ಬಕ್ಕೆ ಮಳೆ ಕಾಟ| Read More »

ಅಮಲು ಪದಾರ್ಥ ನೀಡಿ ಅಪ್ರಾಪ್ತೆಯ ಅತ್ಯಾಚಾರ| ಬಂಟ್ವಾಳದಲ್ಲಿ ನಡೆಯಿತು ಗ್ಯಾಂಗ್ ರೇಪ್|

ಬಂಟ್ವಾಳ: ಇಲ್ಲಿನ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಅಪ್ರಾಪ್ತೆ ಬಾಲಕಿಯೊಬ್ಬಳಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಅಪ್ರಾಪ್ತೆ ಬಾಲಕಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್ ಕೃತ್ಯ ನಡೆದಿದ್ದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರುವಾರ ಬಂಟ್ವಾಳದ ಎಸ್ ವಿ ಎಸ್ ಶಾಲೆಯ ಆಟೋ ಸ್ಟಾಂಡ್ ನಲ್ಲಿ ನಿಂತಿದ್ದ ಬಾಲಕಿಗೆ ಅಮಲು ಹತ್ತಿಸುವ ಚಾಕಲೇಟ್ ನೀಡಿ ಅಪಹರಿಸಸಲಾಗಿದೆ. ಬಳಿಕ ಆಕೆಯನ್ನು ಬಂಟ್ವಾಳದ ಅಮ್ಟಾಡಿಯ ರೂಂ ಒಂದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಲಾಗಿದೆ

ಅಮಲು ಪದಾರ್ಥ ನೀಡಿ ಅಪ್ರಾಪ್ತೆಯ ಅತ್ಯಾಚಾರ| ಬಂಟ್ವಾಳದಲ್ಲಿ ನಡೆಯಿತು ಗ್ಯಾಂಗ್ ರೇಪ್| Read More »

ದಸರಾ ಜಂಬೂಸವಾರಿ|ಮದವೇರಿದ ವಿಕ್ರಮನಿಗೆ ಗೇಟ್‌ಪಾಸ್..!

ಮಂಡ್ಯ: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದಂದು ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುತ್ತಿದ್ದ ಆನೆ ವಿಕ್ರಮನಿಗೆ ಮದವೇರಿದ ಕಾರಣ ಈ ಬಾರಿಯ ಮೆರವಣಿಗೆಯಿಂದ ಗೇಟ್‌ಪಾಸ್ ಆಗಿದ್ದಾನೆ.ಮೈಸೂರಿಗೆ ದಸರಾ ನೋಡಲು ಬರುವ ಜನರಿಗೆ ಅಂಬಾರಿ ಹೊರುವ ಆನೆಗಳಾದ ಅರ್ಜುನನ್ನು ಮತ್ತು ವಿಕ್ರಮನನ್ನು ಕಂಡರೆ ಅಚ್ಚು-ಮೆಚ್ಚು. ಅದಲ್ಲದೆ ಕಳೆದ ಐದು ವರ್ಷಗಳಿಂದ ಸತತವಾಗಿ ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಜರುಗುವ ಖಾಸಗಿ ದಬಾರ‍್ನ ಪೂಜಾ ವಿಧಿ ವಿಧಾನಗಳಲ್ಲಿ ಪಟ್ಟದ ಆನೆಯಾಗಿ ಜವಾಬ್ದಾರಿ

ದಸರಾ ಜಂಬೂಸವಾರಿ|ಮದವೇರಿದ ವಿಕ್ರಮನಿಗೆ ಗೇಟ್‌ಪಾಸ್..! Read More »

ದಸರಾ ಬಳಿಕ ರಾಜ್ಯದಲ್ಲಿ 1ನೇ ತರಗತಿಯಿಂದಲೇ‌ ಶಾಲಾರಂಭ – ಸಚಿವ ಬಿ.ಸಿ ನಾಗೇಶ್

ಮಂಗಳೂರು : ರಾಜ್ಯದಲ್ಲಿ ಈಗಾಗಲೇ 6 ರಿಂದ 12ನೇ ತರಗತಿ ಶಾಲಾ ಕಾಲೇಜುಗಳು ಆರಂಭಗೊಂಡಿವೆ. ಆದರೆ 1 ರಿಂದ 5ನೇ ತರಗತಿಗಳು ಆರಂಭಗೊಂಡಿಲ್ಲ. ಈ ಶಾಲೆಗಳು ಯಾವಾಗ ಆರಂಭವಾಗಲಿದೆ ಎನ್ನುವ ಬಗ್ಗೆ ಮುಹೂರ್ತವನ್ನು ರಾಜ್ಯ ಸರ್ಕಾರ ಫಿಕ್ಸ್ ಮಾಡಿದೆ. ದಸರಾ ಬಳಿಕ 1 ರಿಂದ 5ನೇ ತರಗತಿಗಳನ್ನು ಆರಂಭಿಸೋದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಕುರಿತಂತೆ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇದುವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಶಾಲಾ ಹಾಜರಾತಿ ಕಡ್ಡಾಯಗೊಳಿಸಿಲ್ಲ. ಇದೀಗ

ದಸರಾ ಬಳಿಕ ರಾಜ್ಯದಲ್ಲಿ 1ನೇ ತರಗತಿಯಿಂದಲೇ‌ ಶಾಲಾರಂಭ – ಸಚಿವ ಬಿ.ಸಿ ನಾಗೇಶ್ Read More »

ಈದ್ ಸಾಮೂಹಿಕ ‌ಮೆರವಣಿಗೆಗೆ‌ ನಿಷೇಧ| ವಾಲ್ಮೀಕಿ ಜಯಂತಿ, ಈದ್ ಮಿಲಾದ್ ಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ ರಾಜ್ಯ‌ ಸರ್ಕಾರ|

ಬೆಂಗಳೂರು- ವಾಲ್ಮೀಕಿ ಜಯಂತಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಸರಳವಾಗಿ ಆಚರಿಸಲು ಸೂಚಿಸಿರುವ ರಾಜ್ಯ ಸರ್ಕಾರ ಸಾಮೂಹಿಕ ಮೆರವಣಿಗೆ ನಡೆಸದಂತೆ ನಿಷೇಧಿಸಿದೆ. ಅ.20ರಂದು ನಡೆಯುವ ವಾಲ್ಮೀಕಿ ಜಯಂತಿ ಮತ್ತು ಈದ್ ಮಿಲಾದ್ ಆಚರಣೆ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಕಂದಾಯ ಇಲಾಖೆ ಹೊರಡಿಸಿದ್ದು, ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿ, ಎಸ್‍ಪಿ, ಬಿಬಿಎಂಪಿ ಆಯುಕ್ತರು ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ. ಹಬ್ಬದ ಅಂಗವಾಗಿ ನಡೆಯುವ ಕಾರ್ಯಕ್ರಮ, ಸಭೆ-ಸಮಾರಂಭಗಳಲ್ಲಿ ನೂರು ಜನಕ್ಕಿಂತ ಹೆಚ್ಚು ಮಂದಿ

ಈದ್ ಸಾಮೂಹಿಕ ‌ಮೆರವಣಿಗೆಗೆ‌ ನಿಷೇಧ| ವಾಲ್ಮೀಕಿ ಜಯಂತಿ, ಈದ್ ಮಿಲಾದ್ ಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ ರಾಜ್ಯ‌ ಸರ್ಕಾರ| Read More »

ರೈತರಿಗೆ ಗುಡ್ ನ್ಯೂಸ್| ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಸರ್ಕಾರದ ಚಿಂತನೆ|

ಮೈಸೂರು : ರಾಜ್ಯದ ರೈತ ಸಮುದಾಯಕ್ಕೆ ಸಿಎಂ ಸಿಹಿಸುದ್ದಿ ನೀಡಿದ್ದು, ಎಸ್.ಎಂ.ಕೃಷ್ಣ ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ಜಾರಿ ಮಾಡಿದ್ದ ಯಶಸ್ವಿನಿ ಯೋಜನೆಯ ಮರು ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಮೈಸೂರು ದಸರಾ ಉದ್ಘಾಟನೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತರಿಗೆ ಅನಾರೋಗ್ಯ ಉಂಟಾದರೆ ಸುಲಭವಾಗಿ, ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ನೀಡುವ ಉದ್ದೇಶದಿಂದ ಯಶಸ್ವಿ ಯೋಜನೆಯನ್ನು ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಜಾರಿಗೆ ತರಲಾಗಿತ್ತು. ಇದೀಗ ಈ ಯೋಜನೆಯನ್ನು ಮರು ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ಸಿಎಂ

ರೈತರಿಗೆ ಗುಡ್ ನ್ಯೂಸ್| ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಸರ್ಕಾರದ ಚಿಂತನೆ| Read More »

ಪದವಿ ತರಗತಿಯಲ್ಲಿ ಕನ್ನಡ ಕಡ್ಡಾಯ- ಹೈಕೋರ್ಟ್ ಆದೇಶ

ಬೆಂಗಳೂರು : ಪದವಿ ಕೋರ್ಸ್‌ಗೆ ದಾಖಲಾಗುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ವಿಷಯವನ್ನಾಗಿ ಅಧ್ಯಯನ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. “ಇದು ಸೂಕ್ಷ್ಮ ವಿಚಾರ” ಎಂದು ಗಮನಿಸಿದ ಕರ್ನಾಟಕ ಉಚ್ಚ ನ್ಯಾಯಾಲಯವು ಇಂದು ಎರಡು ಸರ್ಕಾರಿ ಆದೇಶಗಳ ಕಾರ್ಯಾಚರಣೆಯನ್ನು ತಡೆಹಿಡಿಯಲು ಕೋರಿ ಸಲ್ಲಿಸಲಾಗಿರುವ ಅರ್ಜಿಯಲ್ಲಿ ಮಧ್ಯಂತರ ಪರಿಹಾರಕ್ಕಾಗಿ ಪ್ರಾರ್ಥನೆಯನ್ನು ಪರಿಗಣಿಸುವುದಾಗಿ ಹೇಳಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ವಿಭಾಗೀಯ ಪೀಠವು “ರಾಜ್ಯ

ಪದವಿ ತರಗತಿಯಲ್ಲಿ ಕನ್ನಡ ಕಡ್ಡಾಯ- ಹೈಕೋರ್ಟ್ ಆದೇಶ Read More »

ನಾಯಿಯಿಂದ ಮತ್ತೊಂದು ನಾಯಿಗೆ ರಕ್ತದಾನ| ಇದು ಪ್ರಕೃತಿಯ ಅಚ್ಚರಿ|

ಧಾರವಾಡ: ಒಂದು ನಾಯಿಯಿಂದ ಮತ್ತೊಂದು ನಾಯಿಗೆ ರಕ್ತದಾನ ಮಾಡಿದ ಪ್ರಸಂಗ ಧಾರವಾಡದಲ್ಲಿ ನಡೆದಿದೆ. ವಿಜಯಪುರ ಮೂಲದ 7 ತಿಂಗಳ ರಾಟ್ ವಿಲ್ಲರ್ ತಳಿ ನಾಯಿಗೆ ಹೊಟ್ಟೆ ನೋವಿನ ಸಮಸ್ಯೆ ಇದ್ದ ಕಾರಣ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಈ ವೇಳೆ ಆ ನಾಯಿದ ಹೊಟ್ಟೆಯಲ್ಲಿ ರಕ್ತ ಸ್ರಾವವಾಗಿದ್ದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇತ್ತು. ಹೀಗಾಗಿ ರಾಟ್ ವಿಲ್ಲರ್ ಮಾಲಿಕ ಧಾರವಾಡ ಕೃಷಿ ವಿವಿಯಲ್ಲಿರುವ ಪಶು ಆಸ್ಪತ್ರೆಗೆ ತಂದಿದ್ದರು. ಕೃಷಿ ವಿವಿಯ ಪಶು ಆಸ್ಪತ್ರೆ ವೈದ್ಯ ಅನಿಲ್ ಪಾಟೀಲ್ ರಾಟ್

ನಾಯಿಯಿಂದ ಮತ್ತೊಂದು ನಾಯಿಗೆ ರಕ್ತದಾನ| ಇದು ಪ್ರಕೃತಿಯ ಅಚ್ಚರಿ| Read More »

ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್| ಬಿಡುಗಡೆ ದಿನವೇ ದಾಖಲೆ ಸೃಷ್ಟಿ|

ಫಿಲ್ಮ್ ಡೆಸ್ಕ್: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಶಿವಕಾರ್ತಿಕ್ ನಿರ್ದೇಶನದ ಬಹುನಿರೀಕ್ಷೆಯ ‘ಕೋಟಿಗೊಬ್ಬ3’ ಸಿನಿಮಾ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ 30 ನಿಮಿಷಗಳಲ್ಲಿ 1 ಲಕ್ಷದ 50 ಸಾವಿರ ವೀಕ್ಷಣೆ ಪಡೆದುಕೊಂಡಿದ್ದು ಹೊಸ ಟ್ರೆಂಡ್ ಸೃಷ್ಟಿಸಿದೆ. ಆ್ಯಕ್ಷನ್ ಥ್ರಿಲ್ಲರ್ ಆಧಾರಿತ ಈ ಚಿತ್ರವನ್ನು ಸೂರಪ್ಪ ಬಾಬು ನಿರ್ಮಾಣ ಮಾಡಿದ್ದು ಮಡೋನ್ನಾ ಸೆಬಾಸ್ಟಿಯನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಈ

ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್| ಬಿಡುಗಡೆ ದಿನವೇ ದಾಖಲೆ ಸೃಷ್ಟಿ| Read More »

ಕಾನೂನು ಪದವೀಧರರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ

ನವದೆಹಲಿ: ಭಾರತೀಯ ಸೇನೆಯಲ್ಲಿ ಕಾನೂನು ಪದವಿ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಹ‌ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೇನೆಯಲ್ಲಿ ಕೆಲಸ ಮಾಡಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಕಾನೂನು ಪದವಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಕಂಡ ಮಾರ್ಗಗಳನ್ನು ಅನುಸರಿಸಬೇಕು. ಒಟ್ಟು 7 ಕಾನೂನು ಪದವಿ ಉದ್ಯೋಗಗಳು ಖಾಲಿ ಇದ್ದು, ಕಾನೂನು ಪದವೀಧರರು ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 29ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅಕ್ಟೋಬರ್ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ

ಕಾನೂನು ಪದವೀಧರರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ Read More »