ರಾಜ್ಯ

ಕೋವಿಡ್ ಹಿನ್ನಲೆ| ವಾಹನ ದಾಖಲೆ ಸಿಂಧುತ್ವ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ|

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮೋಟಾರು ವಾಹನ ದಾಖಲೆಗಳಾದ ಚಾಲನಾ ಪರವಾನಗಿ, ನೋಂದಣಿ ಪ್ರಮಾಣಪತ್ರ ಮತ್ತು ಇತರ ಪರವಾನಗಿಗಳ ಸಿಂಧುತ್ವವನ್ನು 2021ರ ಅಕ್ಟೋಬರ್ 31ರವರೆಗೆ ವಿಸ್ತರಿಸಿದೆ. ಈ ಆದೇಶವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದ್ದು, ನಾಗರಿಕರು, ಸಾಗಾಣಿಕೆದಾರರು ಮತ್ತು ಇತರ ಸಂಘಟನೆಗಳು ತೊಂದರೆಗಳನ್ನ ಎದುರಿಸದಂತೆ ಜಾರಿಗೆ ತರುವಂತೆ ವಿನಂತಿಸಿದೆ. ಮೋಟಾರು ವಾಹನ ಕಾಯ್ದೆ, 1988 ಮತ್ತು ಕೇಂದ್ರ ಮೋಟಾರು ವಾಹನ ನಿಯಮಗಳು, 1989ಕ್ಕೆ ಸಂಬಂಧಿಸಿದ ದಾಖಲೆಗಳ […]

ಕೋವಿಡ್ ಹಿನ್ನಲೆ| ವಾಹನ ದಾಖಲೆ ಸಿಂಧುತ್ವ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ| Read More »

ಈ ಬಾರಿ ನಡೆಯುತ್ತೆ ತಲಕಾವೇರಿ ಜಾತ್ರೆ| ಅ.17 ರಂದು ತೀರ್ಥಸ್ವರೂಪಿಣಿಯಾಗಿ ಉದ್ಭವಿಸಲಿದ್ದಾಳೆ ಕಾವೇರಿ|

ಕೊಡಗು : ಪ್ರತಿವರ್ಷದಂತೆ ಈ ವರ್ಷವೂ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಅಕ್ಟೋಬರ್ 17ರಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ಪವಿತ್ರ ಕಾವೇರಿ ತೀರ್ಥೋದ್ಭವವಾಗಲಿದೆ ಕೊರೋನಾ ಸೋಂಕಿನ ಕಾರಣದಿಂದಾಗಿ ಕಾವೇರಿ ತೀರ್ಥೋದ್ಭವ ನಡೆಯೋದು ಅನುಮಾನವಾಗಿತ್ತು.ಆದರೆ ಈ ಬಾರಿ ಕೊರೋನಾ ಆತಂಕದ ನಡುವೆಯೂ ಕಾವೇರಿ ತೀರ್ಥೋದ್ಭವ ಕಾರ್ಯಕ್ರಮಕ್ಕೆ ಮುಹೂರ್ತ ನಿಗದಿ ಮಾಡಲಾಗಿದೆ. ಅ. 17 ರಂದು ಮಧ್ಯಾಹ್ನ 1.11 ನಿಮಿಷಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ. ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪದಲ್ಲಿ ತಲಕಾವೇರಿಯಲ್ಲಿ ಉಗಮವಾಗಲಿದ್ದಾಳೆ.

ಈ ಬಾರಿ ನಡೆಯುತ್ತೆ ತಲಕಾವೇರಿ ಜಾತ್ರೆ| ಅ.17 ರಂದು ತೀರ್ಥಸ್ವರೂಪಿಣಿಯಾಗಿ ಉದ್ಭವಿಸಲಿದ್ದಾಳೆ ಕಾವೇರಿ| Read More »

ಉಪ್ಪಿನಂಗಡಿ: ನೀರೆಂದು ತಿಳಿದು ಪೆಟ್ರೋಲ್ ‌ಕುಡಿದ ಮಹಿಳೆ ಸಾವು

ಉಪ್ಪಿನಂಗಡಿ: ಮಹಿಳೆಯೊಬ್ಬರು ತಪ್ಪಾಗಿ ನೀರಿನ ಬದಲು ಪೆಟ್ರೋಲ್‌ ಕುಡಿದು ಅಸ್ವಸ್ಥಗೊಂಡು ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಪೆರ್ನೆಯ ಸಂಪದಕೋಡಿ ಎಂಬಲ್ಲಿ ನಡೆದಿದೆ. ಮೃತ ಮಹಿಳೆ ಪದ್ಮಾವತಿ (79) ಎಂದು ಗುರುತಿಸಲಾಗಿದೆ. ದೃಷ್ಟಿ ದೋಷದಿಂದ ಬಳಲುತ್ತಿದ್ದ ಈಕೆ ಪೆರ್ನೆಯ ಸಂಪದಕೋಡಿಯಲ್ಲಿರುವ ತನ್ನ ಮಗಳ ಮನೆಗೆ ಬಂದಿದ್ದಾಗ ಅಲ್ಲಿ ಹುಲ್ಲು ಕತ್ತರಿಸುವ ಯಂತ್ರದ ಬಳಕೆಯ ಉದ್ದೇಶದಿಂದ ಮನೆಯಲ್ಲಿ ಬಾಟಲಿಯಲ್ಲಿ ತಂದಿರಿಸಿದ ಪೆಟ್ರೋಲನ್ನು ತಿಳಿಯದೇ ಕುಡಿದಿದ್ದಾರೆ ಎಂದು ಹೇಳಲಾಗಿದೆ. ಆ ಬಳಿಕ ಅಸ್ವಸ್ಥರಾದ ಅವರನ್ನು ಮಂಗಳೂರಿನ ವೆನ್‌

ಉಪ್ಪಿನಂಗಡಿ: ನೀರೆಂದು ತಿಳಿದು ಪೆಟ್ರೋಲ್ ‌ಕುಡಿದ ಮಹಿಳೆ ಸಾವು Read More »

ನದಿಗೆ ಉರುಳಿದ‌ ಬಸ್| ಆರು ಮಂದಿ ದುರ್ಮರಣ|

ಮೇಘಾಲಯ: ಇಲ್ಲಿನ ಶಿಲ್ಲಾಂಗ್‌ ಜಿಲ್ಲೆಯಲ್ಲಿ ನಡುರಾತ್ರಿಯಲ್ಲಿ ಪ್ರಯಾಣಿಸುತ್ತಿದ್ದ ಬಸ್‌ವೊಂದು ನದಿಗೆ ಉರುಳಿದ್ದು, ಆರು ಜನರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಖಾಸಗಿ ಬಸ್‌ನಲ್ಲಿ ಸುಮಾರು 21 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬಸ್ ಶಿಲ್ಲಾಂಗ್‌ ಸಮೀಪದಲ್ಲಿರುವ ರಿಂಗ್ಡಿ ನದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಆರು ಜನರು ಸಾವನ್ನಪ್ಪಿದ್ದಾರೆ. 16 ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದುರಂತದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾ ಆರಂಭಿಸಿದ್ದರು. ಆದರೆ,

ನದಿಗೆ ಉರುಳಿದ‌ ಬಸ್| ಆರು ಮಂದಿ ದುರ್ಮರಣ| Read More »

ವಿವಾಹ ವಾರ್ಷಿಕೋತ್ಸವ ಆಚರಿಸುವ ಹೃದಯದ ಚೆಕಪ್ ಮಾಡಿಸಿಕೊಳ್ಳಿ| ವೈದ್ಯಕೀಯ ತಪಾಸಣೆಯಿಂದ ಹೃದಯ ಹಗುರಾಗಿಸಿ- ಡಾ| ಸಿ.ಎನ್ .ಮಂಜುನಾಥ್

ಬೆಂಗಳೂರು: 40 ವರ್ಷ ಮೇಲ್ಪಟ್ಟ ಪುರುಷರು ಹಾಗೂ 45 ವರ್ಷ ಮೇಲ್ಪಟ್ಟ ಮಹಿಳೆಯರು ಪ್ರತಿ ವರ್ಷ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವ ಬದಲು ಮೆಡಿಕಲ್ ಚೆಕಪ್ ವಾರ್ಷಿಕೋತ್ಸವ ಆಚರಿಸಿಕೊಂಡರೆ ಹೃದಯಾಘಾತ ಆಗುವುದರಿಂದ ಬಚಾವ್ ಆಗಬಹುದು ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಇಂದಿಲ್ಲಿ ಹೇಳಿದರು. ಬಿಬಿಎಂಪಿ ಮತ್ತು ಜಯದೇವ ಹೃದ್ರೋಗ ಸಂಸ್ಥೆ ಸಹಯೋಗದಲ್ಲಿ ಬಾಬು ಜಗಜೀವನರಾಮ್ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹೃದಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಒಂದೇ ಜಾಗದಲ್ಲಿ

ವಿವಾಹ ವಾರ್ಷಿಕೋತ್ಸವ ಆಚರಿಸುವ ಹೃದಯದ ಚೆಕಪ್ ಮಾಡಿಸಿಕೊಳ್ಳಿ| ವೈದ್ಯಕೀಯ ತಪಾಸಣೆಯಿಂದ ಹೃದಯ ಹಗುರಾಗಿಸಿ- ಡಾ| ಸಿ.ಎನ್ .ಮಂಜುನಾಥ್ Read More »

ದಟ್ಟ ಅರಣ್ಯದೊಳಗೆ ಸುಟ್ಟ ಕಾರು, ಜೊತೆಗೊಂದು ಮೃತದೇಹ| ತನಿಖೆ ಕೈಗೊಂಡ ಪೊಲೀಸರು|

ಶಿವಮೊಗ್ಗ: ಇಲ್ಲಿನ ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಣ್ಯದಲ್ಲಿ ಸುಟ್ಟ ಕಾರು ಮತ್ತು ಮೃತದೇಹ ಪತ್ತೆಯಾಗಿದೆ. ಕೆಲವು ದಿನಗಳ ಹಿಂದೆ ಕಾರು ಸುಟ್ಟು ಹೋಗಿರುವ ಶಂಕೆ ಇದ್ದು, ಬುಧವಾರ ಪ್ರಕರಣ ಬೆಳಕಿಗೆ ಬಂದಿದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಮಿಟ್ಲುಗೋಡು ಎಂಬ ಹಳ್ಳಿಯ ಸನಿಹದ ದಟ್ಟ ಅರಣ್ಯ ಪ್ರದೇಶದಲ್ಲಿ ಕಾರು ಸುಟ್ಟು ಕರಕಲಾಗಿ ಪತ್ತೆಯಾಗಿದೆ. ಕಾರಿನೊಳಗೆ ಮೃತದೇಹ ಸಹ ಸುಟ್ಟ ಸ್ಥಿತಿಯಲ್ಲಿ ಸಿಕ್ಕಿದೆ. ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ದಟ್ಟ ಅರಣ್ಯದೊಳಗೆ ಸುಟ್ಟ ಕಾರು, ಜೊತೆಗೊಂದು ಮೃತದೇಹ| ತನಿಖೆ ಕೈಗೊಂಡ ಪೊಲೀಸರು| Read More »

ವಿಶ್ವವಿಖ್ಯಾತ ದಸರಾ‌ ಉತ್ಸವಕ್ಕೆ ದಿನಗಣನೆ| ಈ ಬಾರಿ ಮಾಜಿ ಸಿಎಂ ಎಸ್ ಎಂ ಕೃಷ್ಣರಿಂದ ನಾಡಹಬ್ಬಕ್ಕೆ ಚಾಲನೆ

ಮೈಸೂರು: ನಾಡ ಹಬ್ಬ ದಸರಾ ಉದ್ಘಾಟಕರ ಹೆಸರು ಘೋಷಣೆಯಾಗಿದ್ದು ಈ ಬಾರಿಯ ದಸರಾ ಹಬ್ಬವನ್ನು ಮಾಜಿ ಸಿಎಂ ಎಸ್‍.ಎಂ ಕೃಷ್ಣ ಉದ್ಘಾಟಿಸಲಿದ್ದಾರೆ. ಮಂಗಳವಾರ (ಸೆ.28) ಸಂಜೆ ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರವರಿಗೆ ಆಹ್ವಾನ ನೀಡಲು ರಾಜ್ಯಸರ್ಕಾರ ನಿರ್ಧರಿಸಿದೆ. ಅಕ್ಟೋಬರ್ 7 ರಿಂದ ಪ್ರಾರಂಭವಾಗಲಿರುವ ದಸರಾ

ವಿಶ್ವವಿಖ್ಯಾತ ದಸರಾ‌ ಉತ್ಸವಕ್ಕೆ ದಿನಗಣನೆ| ಈ ಬಾರಿ ಮಾಜಿ ಸಿಎಂ ಎಸ್ ಎಂ ಕೃಷ್ಣರಿಂದ ನಾಡಹಬ್ಬಕ್ಕೆ ಚಾಲನೆ Read More »

ಮತ್ತೆ ಗ್ರಾಹಕರ ಜೇಬಿಗೆ ಕತ್ತರಿ| ಸ್ಥಿರತೆಯಲ್ಲಿದ್ದ ತೈಲ ದರ ಮತ್ತೆ ಏರಿಕೆ|

ನವದೆಹಲಿ: ಕಳೆದ ಮೂರು ವಾರಗಳಿಂದ ಯಥಾಸ್ಥಿತಿ ಕಾಪಾಡಿಕೊಂಡಿದ್ದ ಪೆಟ್ರೋಲ್ ದರವನ್ನು ಇಂದು (ಸೆ.28) ಏರಿಕೆ ಮಾಡಲಾಗಿದ್ದು, ಜೊತೆಗೆ ಡೀಸೆಲ್ ದರ ಕೂಡಾ ಮತ್ತೆ ಏರಿಕೆ ಕಂಡಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಲೀಟರ್ ಪೆಟ್ರೋಲ್ ಬೆಲೆಯಲ್ಲಿ 20ರಿಂದ 25 ಪೈಸೆ ಹೆಚ್ಚಳ ಮಾಡಿದ್ದರೆ, ಕಳೆದ ಐದು ದಿನಗಳಲ್ಲಿ ನಾಲ್ಕನೇ ಬಾರಿಗೆ ಏರಿಕೆ ಕಾಣುತ್ತಿರುವ ಲೀಟರ್ ಡೀಸೆಲ್ ದರ 75 ಪೈಸೆ ಹೆಚ್ಚಳವಾಗಿದೆ. ಮಂಗಳವಾರದ ಇಂಧನ ದರ ಏರಿಕೆಯ ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.39 ರೂಪಾಯಿ

ಮತ್ತೆ ಗ್ರಾಹಕರ ಜೇಬಿಗೆ ಕತ್ತರಿ| ಸ್ಥಿರತೆಯಲ್ಲಿದ್ದ ತೈಲ ದರ ಮತ್ತೆ ಏರಿಕೆ| Read More »

ನಂಜನಗೂಡು ದೇಗುಲ ತೆರವು ಪ್ರಕರಣ| ತಹಶಿಲ್ದಾರ್ ತಲೆದಂಡ|

ಮೈಸೂರು : ಮೈಸೂರು ಜಿಲ್ಲೆಯ ನಂಜನಗೂಡು ದೇವಸ್ಥಾನ ತೆರವುಗೊಳಿಸಿದ ತಹಶೀಲ್ದಾರ್ ವರ್ಗಾವಣೆಗೊಳಿಸಲಾಗಿದೆ. ಹುಚ್ಚಗಣಿ ಮಹದೇವಮ್ಮ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿಯನ್ನು ವರ್ಗಾಣೆಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಚ್ಚಗಣಿ ದೇವಾಲಯ ತೆರವು ವಿಚಾರ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು, ರಾಜ್ಯ ಸರ್ಕಾರದ ವಿರುದ್ಧ ಭಾರೀ ಆಕ್ರೋಶದ ಕೂಗು ಕೇಳಿಬಂದಿತ್ತು, ಇದೀಗ ಮೈಸೂರು ಜಿಲ್ಲೆಯ ನಂಜನಗೂಡು ದೇವಸ್ಥಾನ ತೆರವುಗೊಳಿಸಿದ ತಹಶೀಲ್ದಾರ್ ವರ್ಗಾವಣೆಗೊಳಿಸಿ ರಾಜ್ಯ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.ಸುಪ್ರೀಂ

ನಂಜನಗೂಡು ದೇಗುಲ ತೆರವು ಪ್ರಕರಣ| ತಹಶಿಲ್ದಾರ್ ತಲೆದಂಡ| Read More »

ಬೆಂಗಳೂರು| ಕಣ್ಣೆದುರಲ್ಲೇ ಕುಸಿದು ಬಿದ್ದ ಕಟ್ಟಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದುರಂತವೊಂದು ಸಂಭವಿಸಿದ್ದು, ಮೂರು ಅಂತಸ್ತಿನ ಕಟ್ಟಡ ಕಣ್ಣೆದುರಲ್ಲೇ ಕುಸಿದು ಬಿದ್ದಿರುವ ಘಟನೆ ಲಕ್ಕಸಂದ್ರದಲ್ಲಿ ನಡೆದಿದೆ. ಮೆಟ್ರೋ ಕಾಮಗಾರಿಗೆ ಆಗಮಿಸಿದ್ದ ಕಾರ್ಮಿಕರು ವಾಸವಾಗಿದ್ದ ಬಹುಮಹಡಿ ಕಟ್ಟಡ ಸಂಪೂರ್ಣ ನೆಲಸಮವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 1974ರಲ್ಲಿ ನಿರ್ಮಿಸಲಾಗಿದ್ದ ಹಳೆ ಕಟ್ಟಡ ಇದಾಗಿದ್ದು, ಮೂರು ಅಂತಸ್ಥಿನ ಕಟ್ಟಡವಾಗಿತ್ತು. ಕಟ್ಟಡ ತೆರವುಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ತೆರವುಗೊಳಿಸುವುದಕ್ಕಿಂತಲೂ ಮೊದಲೇ ಕಟ್ಟಡ ನೋಡನೋಡುತ್ತಿದ್ದಂತೆಯೇ ಕುಸಿದು ಬಿದ್ದಿದೆ. ಕಟ್ಟಡ ಕುಸಿಯುವ ಅಪಾಯವಿರುವುದರಿಂದ ಮೆಟ್ರೋ ಕಾರ್ಮಿಕರನ್ನು ತೆರವುಗೊಳಿಸಲಾಗಿತ್ತು ಎನ್ನಲಾಗಿದೆ. ಹಾಗಾಗಿ ಯಾವುದೇ

ಬೆಂಗಳೂರು| ಕಣ್ಣೆದುರಲ್ಲೇ ಕುಸಿದು ಬಿದ್ದ ಕಟ್ಟಡ Read More »