ರಾಜ್ಯ

ಸುಳ್ಯ: ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು

ಸುಳ್ಯ: ಇಲ್ಲಿನ ಎಣ್ಮೂರು ಸಮೀಪದ ಕರಿಂಬಿಲ ನರ್ಲಡ್ಕ ಎಂಬಲ್ಲಿ ಮನೆ ಗೋಡೆ ಕುಸಿದು ಇಬ್ಬರು ಮಹಿಳೆಯರು ಮೃತ ಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟವರನ್ನು ನೆಬಿಸಾ ಮತ್ತು ಬಿಪಾತುಮ್ಮ ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಬ್ಬರು ತಮ್ಮ ನೆರೆಮನೆಯಲ್ಲಿ ನಡೆಯುತ್ತಿದ್ದ ಹೊಸ ಶೌಚಾಲಯ ನಿರ್ಮಾಣದ ಕಾಮಗಾರಿ ವೇಳೆ ಕೆಲಸ ಮಾಡುತ್ತಿದ್ದರು. ಈ ವೇಳೆ ಈ ಹಿಂದೆ ಇದ್ದ ಹಳೆ ಕಟ್ಟಡದ ಗೋಡೆ ಕುಸಿದು ಬಿದ್ದಿದ್ದು ಇಬ್ಬರೂ ಇಟ್ಟಿಗೆ ಗೋಡೆಯ ಕೆಳಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅಲ್ಲಿದ್ದವರು ಇವರನ್ನು […]

ಸುಳ್ಯ: ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು Read More »

ರಾಜ್ಯ ಪೊಲೀಸ್ ‌ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ| ಇಲ್ಲಿದೆ ಸಂಪೂರ್ಣ ಮಾಹಿತಿ|

ಕರ್ನಾಟಕ ಪೊಲೀಸ್​ ಇಲಾಖೆಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಉದ್ಯೋಗಾಂಕ್ಷಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ನ್ಯಾಯ ವಿಜ್ಞಾನ ಪ್ರಯೋಗಾಲಯ ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಹಲವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 206 ಸೀನ್​ ಆಫ್​ ಕ್ರೈಂ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 15,

ರಾಜ್ಯ ಪೊಲೀಸ್ ‌ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ| ಇಲ್ಲಿದೆ ಸಂಪೂರ್ಣ ಮಾಹಿತಿ| Read More »

ದತ್ತ ಜಯಂತಿ ಹಿನ್ನೆಲೆ: ಚಿಕ್ಕಮಗಳೂರಲ್ಲಿ ಕೇಸರಿ ಕಲರವ

ಚಿಕ್ಕಮಗಳೂರು: ದತ್ತ ಜಯಂತಿ ಅಂಗವಾಗಿ ಶುಕ್ರವಾರ ಜರುಗಿದ ಅನಸೂಯಾ ದೇವಿ ಪೂಜಾ ಕಾರ್ಯದಲ್ಲಿ ನಾಡಿನ ವಿವಿಧೆಡೆ ಮಹಿಳೆಯರು ಪಾಲ್ಗೊಂಡಿದ್ದರು. ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾದಲ್ಲಿ ದತ್ತಪಾದುಕೆ ದರ್ಶನ ಮಾಡಿ ಪುನೀತಭಾವ ಮೆರೆದರು. ಭಕ್ತೆಯರು ಬೆಳಿಗ್ಗೆ ನಗರದಲ್ಲಿ ಸಂಕೀರ್ತನಾ ಯಾತ್ರೆ ಮುಗಿಸಿ ವಾಹನಗಳಲ್ಲಿ ಗಿರಿಗೆ ತೆರಳಿದರು. ಗಿರಿಯಲ್ಲಿ ಸಾಲಾಗಿ ಗುಹೆಯೊಳಗೆ ತೆರಳಿ ದರ್ಶನ ಮಾಡಿ ಭಕ್ತಿ ಸಮರ್ಪಿಸಿದರು. ಗಿರಿಯಲ್ಲಿ ಸಭಾಮಂಟಪದಲ್ಲಿ ಅನಸೂಯಾ ದೇವಿ, ಅತ್ರಿ ಮಹರ್ಷಿ, ಶ್ರೀಗುರುದತ್ತಾತ್ರೇಯರ ಮೂರ್ತಿಗಳಿಗೆ ವಿವಿಧ ಪೂಜೆಗಳು ನೆರವೇರಿದವು. ಗಣಪತಿ ಹೋಮ, ದುರ್ಗಾ

ದತ್ತ ಜಯಂತಿ ಹಿನ್ನೆಲೆ: ಚಿಕ್ಕಮಗಳೂರಲ್ಲಿ ಕೇಸರಿ ಕಲರವ Read More »

ಬೆಳಗಾವಿಯಲ್ಲಿ ಸಂಘಟನೆ ಕಾರ್ಯಕರ್ತರಿಂದ ಕಲ್ಲು ತೂರಾಟ|ತಪ್ಪಿತಸ್ಥರನ್ನು ಬೆಂಡೆತ್ತದೆ ಬಿಡಲ್ಲವೆಂದ ಗೃಹ ಸಚಿವ

ಬೆಳಗಾವಿ : ನಗರದ ಸಂಭಾಜಿ ವೃತ್ತದಲ್ಲಿ ಶುಕ್ರವಾರ ಕೆಲ‌ ಸಂಘಟನೆಗಳ ಕಾರ್ಯಕರ್ತರು ರಾತ್ರೋರಾತ್ರಿ ದಿಢೀರ್ ಪ್ರತಿಭಟನೆ ನಡೆಸಿ ಕಲ್ಲು ತೂರಾಟ ಮಾಡಿದ ಬಗ್ಗೆ ಗೃಹ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರನ್ನು ಸರ್ಕಾರ ಸುಮ್ಮನೆ ಬಿಡಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಪುಂಡರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರನ್ನು ಸರ್ಕಾರ ಸುಮ್ಮನೆ ಬಿಡಲ್ಲ. ಇಂತಹ ಪುಂಡರನ್ನು ಹತ್ತಿಕ್ಕುತ್ತೇವೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಈಗಾಗಲೇ ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಪೊಲೀಸರು ತೆಗೆದುಕೊಳ್ಳುವ ಕ್ರಮವನ್ನು ನೋಡಿ ಎಂದಿದ್ದಾರೆ. ಇದು ಬೆರಳೆಣಿಕೆಯಷ್ಟು ಪುಂಡರು ಮಾಡುತ್ತಿರುವ

ಬೆಳಗಾವಿಯಲ್ಲಿ ಸಂಘಟನೆ ಕಾರ್ಯಕರ್ತರಿಂದ ಕಲ್ಲು ತೂರಾಟ|ತಪ್ಪಿತಸ್ಥರನ್ನು ಬೆಂಡೆತ್ತದೆ ಬಿಡಲ್ಲವೆಂದ ಗೃಹ ಸಚಿವ Read More »

ಬ್ಯಾಂಕ್ ಆಪ್ ಬರೋಡಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ‌ ಆಹ್ವಾನ

ಡಿಜಿಟಲ್ ಡೆಸ್ಕ್: ಬ್ಯಾಂಕ್ ಆಫ್ ಬರೋಡಾ ಡೆವಲಪರ್ ಹಾಗೂ ಇನ್ನಿತರ ಹುದ್ದಗಳಿಗೆ ಅರ್ಜಿ ಆಹ್ವಾನಿಸಿ ಸೂಚನೆ ಹೊರಡಿಸಿದೆ.ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ಲೈನ್‌ ಮೂಲಕ, bankofbaroda.in ಗೆ ಭೇಟಿ ಕೊಟ್ಟು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆಯಲ್ಲಿ ಖಾಲಿ ಇರುವ 52 ಹುದ್ದೆಗಳಿಗೆ ಈ ನೇಮಕಾತಿ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್‌ 28, 2021. ಖಾಲಿ ಇರುವ ಹುದ್ದೆಗಳ ವಿವರಗಳು ಇಂತಿವೆ: ಕ್ವಾಲಿಟಿ ಅಶ್ಶೂರೆನ್ಸ್ ಲೀಡ್: 2 ಹುದ್ದೆಗಳು ಕ್ವಾಲಿಟಿ ಅಶ್ಶೂರೆನ್ಸ್ ಇಂಜಿನಿಯರ್‌: 2

ಬ್ಯಾಂಕ್ ಆಪ್ ಬರೋಡಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ‌ ಆಹ್ವಾನ Read More »

ಮೊಟ್ಟೆ ತಿನ್ನದ ಮಕ್ಕಳಿಗೆ ಹಾಲು, ಶೇಂಗಾ ಚಿಕ್ಕಿ| ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್|

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ತಿನ್ನದ ಮಕ್ಕಳಿಗೆ ಶಾಲೆಯಲ್ಲಿ ಮೊಟ್ಟೆಯ ಬದಲಿಗೆ ಬಾಳೆಹಣ್ಣು ನೀಡುವುದರ ಜೊತೆಗೆ ಶೇಂಗಾಚಿಕ್ಕಿ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಮೊಟ್ಟೆ ನೀಡುವ ಯೋಜನೆಗೆ ವಿವಿಧ ಮಠಾಧೀಶರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಈ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದರು. ಇದೀಗ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಪೋಷಕಾಂಶ ಒಳಗೊಂಡಿರುವ ಕಾರಣಕ್ಕೆ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ

ಮೊಟ್ಟೆ ತಿನ್ನದ ಮಕ್ಕಳಿಗೆ ಹಾಲು, ಶೇಂಗಾ ಚಿಕ್ಕಿ| ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್| Read More »

ಮೇಲುಕೋಟೆ ಸನ್ನಿಧಿಯಲ್ಲಿ ಬೆತ್ತಲಾದ ಎಎಪಿ ಕಾರ್ಯಕರ್ತ| ಚೆಲುವ ನಾರಾಯಣನ ಎದುರು ದೇಹಸಿರಿ ಪ್ರದರ್ಶನ ನಡೆಸಲು ಕಾರಣವೇನು ಗೊತ್ತಾ?

ಮಂಡ್ಯ : ಇತಿಹಾಸ ಪ್ರಸಿದ್ದ ಮೇಲುಕೋಟೆ ದೇಗುಲದ ಗರ್ಭಗುಡಿ ಮುಂದೆ ರಾಜಕೀಯ ನಾಯಕನೊಬ್ಬ ಬೆತ್ತಲೆಯಾಗಿ ನಿಂತುಕೊಂಡು ಸ್ಥಳದಲ್ಲಿ ಕೆಲ ಕಾಲ ಗೊಂದಲ ಮೂಡಿಸಿರುವ ಘಟನೆ ನಡೆದಿದೆ ಎನ್ನಲಾಗಿದೆ. ದೇವರದ ದರ್ಶನಕ್ಕೆ ಬಂದಿದ್ದ, ಎಎಪಿ ಪಾರ್ಟಿಯ ರಾಮ್‌ಕುಮಾರ್‌ ಬಂದಿದ್ದ ಎನ್ನಲಾಗಿದೆ, ಈ ವೇಳೇಯಲ್ಲಿ ದೇವರ ಮುಂದೆ ನಿಂತುಕೊಂಡು ನಾನೇ ಅಲ್ಲ, ನಾನೇ ಈಶ್ವರನೆಂದು ಕಿರುಚಿಕೊಂಡು, ಬೆತ್ತಲಾಗಿದ್ದಾನೆ ಎನ್ನಲಾಗಿದೆ. ಕೂಡಲೇ ಸ್ಥಳದಲ್ಲಿದ್ದ ಜನತೆ ಆತನಿಗೆ ಧರ್ಮದ ಏಟು ನೀಡಿ, ಹೊರಗೆ ಹಾಕಿದ್ದಾರೆ ಎನ್ನಲಾಗಿದೆ. ಇನ್ನೂ ರಾಮ್‌ಕುಮಾರ್‌ ಗಾಂಜಮತ್ತಿನಲ್ಲಿ ಇದ್ದ ಎನ್ನುವ

ಮೇಲುಕೋಟೆ ಸನ್ನಿಧಿಯಲ್ಲಿ ಬೆತ್ತಲಾದ ಎಎಪಿ ಕಾರ್ಯಕರ್ತ| ಚೆಲುವ ನಾರಾಯಣನ ಎದುರು ದೇಹಸಿರಿ ಪ್ರದರ್ಶನ ನಡೆಸಲು ಕಾರಣವೇನು ಗೊತ್ತಾ? Read More »

ರಾಜ್ಯದಲ್ಲಿ ಜೋರಾಗ್ತಿದೆ ಒಮೆಕ್ರಾನ್ ಹವಾ| ಕ್ರಿಸ್ಮಸ್‌, ಹೊಸವರ್ಷ ಸಂಭ್ರಮಾಚರಣೆಗೆ ಬ್ರೇಕ್ ಸಾಧ್ಯತೆ| ಮತ್ತೆ ಟೈಟ್ ರೂಲ್ಸ್ ಗೆ ಚಿಂತನೆ?

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ಆರ್ಭಟ ಮುಂದುವರೆದಿದೆ. ನಿನ್ನೆ ಹೊಸದಾಗಿ ಐವರಿಗೆ ಓಮಿಕ್ರಾನ್ ವೈರಸ್ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಕೊರೋನಾದಂತೆ ಒಮಿಕ್ರಾನ್ ವೈರಸ್ ಸೋಂಕು ಕಂಟಕವಾಗುವ ಆತಂಕ ಶುರುವಾಗಿದೆ. ನಿನ್ನೆ ಯುಕೆ ಸೇರಿದಂತೆ ವಿವಿಧ ದೇಶಗಳಲ್ಲಿ ಕರ್ನಾಟಕಕ್ಕೆ ಆಗಮಿಸಿದ್ದಂತ ಐವರು ವಿದೇಶಿಗರಿಗೆ ಓಮಿಕ್ರಾನ್ ವೈರಸ್ ಸೋಂಕು ಇರುವುದು ದೃಢಪಟ್ಟಿತ್ತು. ಒಮೆಕ್ರಾನ್ ನಿಂದಾಗಿ ಸಾರ್ವಜನಿಕ ಪ್ರದೇಶಗಳ ಪ್ರವೇಶಕ್ಕೆ ಸರ್ಕಾರ ಪಾಸ್ ವಿತರಣೆ ಮಾಡುವ ಚಿಂತನೆ ನಡೆಸಿದೆ ಎನ್ನಲಾಗಿದೆ. ಕೋವಿಡ್ ಲಸಿಕೆ

ರಾಜ್ಯದಲ್ಲಿ ಜೋರಾಗ್ತಿದೆ ಒಮೆಕ್ರಾನ್ ಹವಾ| ಕ್ರಿಸ್ಮಸ್‌, ಹೊಸವರ್ಷ ಸಂಭ್ರಮಾಚರಣೆಗೆ ಬ್ರೇಕ್ ಸಾಧ್ಯತೆ| ಮತ್ತೆ ಟೈಟ್ ರೂಲ್ಸ್ ಗೆ ಚಿಂತನೆ? Read More »

ಇನ್ಮುಂದೆ‌ ಅಂಗನವಾಡಿಯಲ್ಲೂ ಎಲ್ ಕೆಜಿ, ಯುಕೆಜಿ ಶಿಕ್ಷಣ – ಸಚಿವ ಬಿ.ಸಿ ನಾಗೇಶ್

ಬೆಳಗಾವಿ: “ಅಂಗನವಾಡಿಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿ, ಯುಕೆಜಿ ಪರಿಚಯಿಸಲು ಯೋಜನೆ ಮಾಡಿದ್ದೇವೆ” ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್‌‌ ತಿಳಿಸಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಮಾಹಿತಿ ನೀಡಿದ ಅವರು, “ಅಂಗನವಾಡಿಯಲ್ಲಿ ಎಲ್‌ಕೆಜಿ, ಯುಕೆಜಿ ಪರಿಚಯಿಸಲು ಯೋಜನೆ ಮಾಡಿದ್ದೇವೆ. ಈಗಿರುವ ಸಿಬ್ಬಂದಿಗೆ ಈ ಸಂಬಂಧ ತರಬೇತಿ ನೀಡಿ ಬಳಸಿಕೊಳ್ಳಲಾಗುವುದು” ಎಂದಿದ್ದಾರೆ “ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಹಂತ ಹಂತವಾಗಿ ಎನ್‌ಇಪಿ ಜಾರಿ ಮಾಡಲಾಗುತ್ತದೆ. 26 ಪೊಸಿಶನ್‌ ಪೇಪರ್‌ ಸಲ್ಲಿಕೆಯಾಗುತ್ತಿದೆ.

ಇನ್ಮುಂದೆ‌ ಅಂಗನವಾಡಿಯಲ್ಲೂ ಎಲ್ ಕೆಜಿ, ಯುಕೆಜಿ ಶಿಕ್ಷಣ – ಸಚಿವ ಬಿ.ಸಿ ನಾಗೇಶ್ Read More »

ಅಬ್ಬಬ್ಬಾ..! ಆತನ ಕಿಡ್ನಿಯಲ್ಲಿತ್ತು 156 ಕಿಡ್ನಿಕಲ್ಲು!| ಹುಬ್ಬಳ್ಳಿ ಮೂಲದ ವ್ಯಕ್ತಿಯ ಕೀಹೋಲ್ ಶಸ್ತ್ರಚಿಕಿತ್ಸೆ ಮಾಡಿ ಕಲ್ಲು ಹೊರತೆಗೆದ ವೈದ್ಯರು‌|

ಹೈದರಾಬಾದ್:ನಗರದ ಪ್ರತಿಷ್ಠಿತ ಆಸ್ಪತ್ರೆಯೊಂದರ ವೈದ್ಯರು 50 ವರ್ಷ ವಯಸ್ಸಿನ ರೋಗಿಯೊಬ್ಬರಿಗೆ ಕೀಹೋಲ್ ಶಸ್ತ್ರಚಿಕಿತ್ಸೆ ನಡೆಸಿ 156 ಕಿಡ್ನಿ ಕಲ್ಲುಗಳನ್ನು ಹೊರತೆಗೆದ ಅಪರೂಪದ ಪ್ರಕರಣ ವರದಿಯಾಗಿದೆ. ದೊಡ್ಡ ಶಸ್ತ್ರಚಿಕಿತ್ಸೆ ಬದಲಾಗಿ ಲ್ಯಾಪ್ರೊಸ್ಕೋಪಿ ಮತ್ತು ಎಂಡೋಸ್ಕೋಪಿ ಬಳಸಿ ವೈದ್ಯರು ಈ ದಾಖಲೆ ಸಂಖ್ಯೆಯ ಕಿಡ್ನಿ ಕಲ್ಲುಗಳನ್ನು ಹೊರತೆಗೆದಿದ್ದಾರೆ. ಇದು ಈ ವಿಧಾನದ ಮೂಲಕ ಗರಿಷ್ಠ ಸಂಖ್ಯೆಯ ಕಿಡ್ನಿಕಲ್ಲುಗಳನ್ನು ಹೊರತೆಗೆದ ಪ್ರಕರಣ ಎನಿಸಿಕೊಂಡಿದೆ. ಈ ಶಸ್ತ್ರಚಿಕಿತ್ಸೆಗೆ ವೈದ್ಯರು ಸುಮಾರು 3 ಗಂಟೆ ಕಾಲ ತೆಗೆದುಕೊಂಡರು. ಹುಬ್ಬಳ್ಳಿ ಮೂಲದ ರೋಗಿ ಇದೀಗ ಚೇತರಿಸಿಕೊಂಡಿದ್ದು,

ಅಬ್ಬಬ್ಬಾ..! ಆತನ ಕಿಡ್ನಿಯಲ್ಲಿತ್ತು 156 ಕಿಡ್ನಿಕಲ್ಲು!| ಹುಬ್ಬಳ್ಳಿ ಮೂಲದ ವ್ಯಕ್ತಿಯ ಕೀಹೋಲ್ ಶಸ್ತ್ರಚಿಕಿತ್ಸೆ ಮಾಡಿ ಕಲ್ಲು ಹೊರತೆಗೆದ ವೈದ್ಯರು‌| Read More »