ರಾಜ್ಯ

ಕೇಸ್ ಹಿಂಪಡೆಯಲೊಪ್ಪದ‌ ಪತ್ನಿಯ ಮೂಗು‌ ಕತ್ತರಿಸಿದ ಪತಿರಾಯ! ಕೋಪದಲ್ಲಿ ತುಂಡಾಗಿದ್ದು ಮತ್ತೆ ಬಂದೀತೇ?

ಭೋಪಾಲ್: ಮೂಗು ಮನುಷ್ಯನ ಸೌಂದರ್ಯಕ್ಕೆ ಹಿಡಿದ ಕೈಗನ್ನಡಿ. ಅಂತಹ‌ ಮೂಗು ಇಲ್ಲವಾದರೆ ಆ ದೃಶ್ಯ ಊಹಿಸಲೂ ಆಗದು. ಆದರೆ ಕೋಪದಲ್ಲೊಬ್ಬ ಪತಿ ಮಹಾಶಯ ತನ್ನ ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸುವುದೇ? ಇಂತಹ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಲ್ಲಿನ ರಾತ್ಲಾಮ್ ಜಿಲ್ಲೆಯಲ್ಲಿ ಘಟನೆ ನಡೆದಿದೆ.ತನ್ನ ಇಬ್ಬರು ಹೆಣ್ಣು ಮಕ್ಕಳ ಎದುರಲ್ಲೇ ಪತ್ನಿಯ ಮೂಗನ್ನು ಕಚ್ಚಿದ ಪತಿ ಕ್ರೌರ್ಯ ಮೆರೆದಿದ್ದು, ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಆಲೌಟ್ ಆಂಜುಮನ್ ಕಾಲೋನಿಯಯಲ್ಲಿರುವ ಪತ್ನಿ […]

ಕೇಸ್ ಹಿಂಪಡೆಯಲೊಪ್ಪದ‌ ಪತ್ನಿಯ ಮೂಗು‌ ಕತ್ತರಿಸಿದ ಪತಿರಾಯ! ಕೋಪದಲ್ಲಿ ತುಂಡಾಗಿದ್ದು ಮತ್ತೆ ಬಂದೀತೇ? Read More »

17 ಕಾರುಗಳ ಗಾಜು ಒಡೆದು ಪುಂಡಾಟ| 5 ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅರೆಸ್ಟ್ |

ಬೆಂಗಳೂರು: ಎರಡು ದಿನಗಳ ಹಿಂದೆ ಮನೆ ಮುಂದೆ ನಿಲ್ಲಿಸಿದ್ದ 17ಕ್ಕೂ ಹೆಚ್ಚು ಕಾರುಗಳ ಗಾಜನ್ನು ಒಡೆದು ದುಷ್ಕರ್ಮಿಗಳು ಪುಂಡಾಟ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 5 ಜನ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರ್.ಆರ್. ನಗರ ಹಾಗೂ ಕೆಂಗೇರಿಗಳಲ್ಲಿ ಎರಡು ದಿನಗಳ ಹಿಂದೆ ಮಧ್ಯ ರಾತ್ರಿ 2 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ಮನೆಗಳ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ದೊಣ್ಣೆಯಿಂದ ಒಡೆದು ಪುಡಿ ಪುಡಿ ಮಾಡಿ ತೆರಳಿದ್ದರು. ಈ ದೃಶ್ಯ ಸಿಸಿ ಟಿವಿ

17 ಕಾರುಗಳ ಗಾಜು ಒಡೆದು ಪುಂಡಾಟ| 5 ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅರೆಸ್ಟ್ | Read More »

ಕೃಷಿ‌ಕಾಯ್ದೆ ವಿರೋದಿಸಿ ನಾಳೆ ‘ಭಾರತ್ ಬಂದ್’| ರೈತಪರ ಸಂಘಟನೆಗಳಿಂದ ದೇಶಾದ್ಯಂತ ಹೋರಾಟ| ಬಂದ್ ಹೆಸರಲ್ಲಿ ತೊಂದರೆ ಕೊಡಬೇಡಿ- ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು: ಕೇಂದ್ರದ 3 ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸೆಪ್ಟೆಂಬರ್ 27ರಂದು ಸಂಯುಕ್ತ ಕಿಸಾನ್ ಮೋರ್ಚಾ ಭಾರತ ಬಂದ್‌ಗೆ ಕರೆ ಕೊಟ್ಟಿದೆ. ದೇಶಾದ್ಯಂತ ಬಂದ್ ಪ್ರಯುಕ್ತ ಪ್ರತಿಭಟನೆಗಳು ನಡೆಯಲಿರುವ ಸರ್ಕಾರ ಅಗತ್ಯ‌ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಬಂದ್ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘಟಣೆಗಳು ಕರ್ನಾಟಕ ಬಂದ್ ನಡೆಸಲು ಮುಂದಾಗಿದ್ದು ಬಂದ್ ಯಶಸ್ಸಿಗೆ ಎಲ್ಲಾ ಸಂಘಟನೆಗಳ ಬೆಂಬಲ ವ್ಯಕ್ತವಾಗಿದೆ ಎಂದು ರೈತ ಸಂಘದ ಮುಖಂಡ ಬಡಗಲಪುರ ನಾಗೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಹತ್ತು ತಿಂಗಳಿನಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ

ಕೃಷಿ‌ಕಾಯ್ದೆ ವಿರೋದಿಸಿ ನಾಳೆ ‘ಭಾರತ್ ಬಂದ್’| ರೈತಪರ ಸಂಘಟನೆಗಳಿಂದ ದೇಶಾದ್ಯಂತ ಹೋರಾಟ| ಬಂದ್ ಹೆಸರಲ್ಲಿ ತೊಂದರೆ ಕೊಡಬೇಡಿ- ಸಿಎಂ ಬೊಮ್ಮಾಯಿ ಮನವಿ Read More »

ಸಮಾಧಿಯಲ್ಲಿದ್ದ ಶವ ಮಾಯ|ಅಂತ್ಯಕ್ರೀಯೆ ಬಳಿಕ ರಾತ್ರೋರಾತ್ರಿ ಆ ಸ್ಮಶಾನದಲ್ಲಿ ‌ನಡೆದಿದ್ದೇನು?

ಹಾಸನ: ಅಂತ್ಯಕ್ರಿಯೆ ನಡೆದು ಮೂರು ತಿಂಗಳ ಬಳಿಕ ಮೃತದೇಹ ನಾಪತ್ತೆಯಾಗಿದ್ದು, ಸಮಾಧಿಯನ್ನು ಅಗೆದು ಶವ ತೆಗೆದುಕೊಂಡು ಹೋಗಲಾಗಿದೆ. ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಯಾದಾಪುರ ಗ್ರಾಮದಲ್ಲಿ ಸಮಾಧಿಯಲ್ಲಿದ್ದ ಮಹಿಳೆಯ ಮೃತದೇಹ ನಾಪತ್ತೆಯಾಗಿದೆ. ಕಳೆದ ಜೂನ್ ನಲ್ಲಿ ವಯೋಸಹಜ ಕಾಯಿಲೆಯಿಂದ ಲಕ್ಷ್ಮಮ್ಮ ಅವರು ಮೃತಪಟ್ಟಿದ್ದರು. ಅವರ ಜಮೀನಿನಲ್ಲಿ ಕುಟುಂಬದವರು ಅಂತ್ಯಕ್ರಿಯೆ ನೆರವೇರಿಸಿದ್ದರು. ಸೆಪ್ಟೆಂಬರ್ 21 ರಂದು ರಾತ್ರಿ ಮೃತದೇಹವನ್ನು ಹೊತ್ತುಕೊಂಡು ಹೋಗಲಾಗಿದೆ. ವಾಮಾಚಾರಕ್ಕಾಗಿ ಶವ ತೆಗೆದುಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪುತ್ರ ಮೃತದೇಹ ಹುಡುಕಿಕೊಡುವಂತೆ ಅರಸೀಕೆರೆ ಗ್ರಾಮಾಂತರ ಠಾಣೆ

ಸಮಾಧಿಯಲ್ಲಿದ್ದ ಶವ ಮಾಯ|ಅಂತ್ಯಕ್ರೀಯೆ ಬಳಿಕ ರಾತ್ರೋರಾತ್ರಿ ಆ ಸ್ಮಶಾನದಲ್ಲಿ ‌ನಡೆದಿದ್ದೇನು? Read More »

ಸ್ಯಾಂಡಲ್‍ವುಡ್ ನಟ ನಿಖಿಲ್, ರೇವತಿ ದಂಪತಿಗೆ ಗಂಡು ಮಗು

ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ದಂಪತಿಗೆ ಇಂದು ಗಂಡು ಮಗು ಜನನವಾಗಿದೆ.ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನಿಡಿದ್ದಾರೆ. ಈ ಹಿನ್ನಲೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಮಾಜಿ ಸಿಎಂ ಹೆಚ್‍ಡಿಕೆ ಆಸ್ಪತ್ರೆಗೆ ಭೇಟಿ ನೀಡಿ ತಾಯಿ, ಮಗುವಿನ ಆರೋಗ್ಯ ವಿಚಾರಿಸಿದ್ದಾರೆ. ಹೆಚ್.ಡಿ ಕುಮಾರಸ್ವಾಮಿಯವರ ಪ್ರೀತಿಯ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಪತ್ನಿ ರೇವತಿಗೆ ಕೆಲವು ದಿನಗಳ ಹಿಂದೆ ನಗರದ ಹೆಚ್‍ಎಸ್‍ಆರ್

ಸ್ಯಾಂಡಲ್‍ವುಡ್ ನಟ ನಿಖಿಲ್, ರೇವತಿ ದಂಪತಿಗೆ ಗಂಡು ಮಗು Read More »

ಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಪೋಟ| ಮೂವರು ದೇಹ ಛಿದ್ರಗೊಂಡು ದಾರುಣ ಸಾವು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಸಿಲಿಂಡರ್ ಸ್ಪೋಟದ ಸದ್ದು ಕೇಳಿಸಿದ್ದು, ಮತ್ತೊಂದು ದುರಂತ ಸಂಭವಿಸಿದೆ. ಮೊನ್ನೆಯಷ್ಟೇ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನಗೊಂಡ ಘಟನೆ ಮಾಸುವ ಮುನ್ನವೇ ಇದೀಗ ಅಂಥದ್ದೇ ಮತ್ತೊಂದು ಅವಘಡ ಸಂಭವಿಸಿದೆ. ಬೆಂಗಳೂರಿನ ನಗರ್ತಪೇಟೆಯಲ್ಲಿ ಮನೆಯೊಳಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದೆ

ಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಪೋಟ| ಮೂವರು ದೇಹ ಛಿದ್ರಗೊಂಡು ದಾರುಣ ಸಾವು Read More »

ಪಾಣತ್ತೂರು ಬಸ್ ದುರಂತ ಪ್ರಕರಣ| ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ಮಂಜೂರು|

ಪುತ್ತೂರು: ಪುತ್ತೂರಿನ ಬಲ್ನಾಡುವಿನಿಂದ ಕೇರಳದ ಪಾಣತ್ತೂರಿಗೆ ಹೊರಟಿದ್ದ ಮದುವೆ ದಿಬ್ಬಣದ ಬಸ್ ಕೇರಳದ ಕಾಸರಗೋಡು ಜಿಲ್ಲೆಯ ಪಾಣತ್ತೂರು ಸಮೀಪದ ಪರಿಯಾರಂ ಎಂಬಲ್ಲಿ ಪಲ್ಟಿಯಾಗಿ ಬಸ್‌ನಲ್ಲಿದ್ದ 7 ಮಂದಿ ದಾರುಣ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದೆ. ವಿಮೆ ಅವಕಾಶ ಇಲ್ಲದಿದ್ದರೂ ಅಪಘಾತದಲ್ಲಿ ಮೃತಪಟ್ಟಿರುವ ಕುಟುಂಬಕ್ಕೆ ಪರಿಹಾರಕ್ಕಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರ ಮನವಿಯಂತೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೃತರ ಕುಟುಂಬಕ್ಕೆ ತಲಾ

ಪಾಣತ್ತೂರು ಬಸ್ ದುರಂತ ಪ್ರಕರಣ| ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ಮಂಜೂರು| Read More »

ರಾಜ್ಯದಲ್ಲಿ ವಿಚಿತ್ರ ಜ್ವರ ಪತ್ತೆ| 170ಕ್ಕೂ ಅಧಿಕ ಮಕ್ಕಳು ಆಸ್ಪತ್ರೆಗೆ ದಾಖಲು|

ದಾವಣಗೆರೆ : ರಾಜ್ಯದಲ್ಲಿ ಮಕ್ಕಳಿಗೆ ವಿಚಿತ್ರ ರೀತಿಯ ಜ್ವರ ಕಂಡುಬಂದಿದ್ದು, ನೂರಾರು ಮಕ್ಕಳನ್ನು ಬಾಧಿಸುತ್ತಿದ್ದು, 171 ಮಕ್ಕಳು ಆಸ್ಪತ್ರೆಗೆ ದಾಖಲಾಗುವಂತಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಹೀಗೆ ಹೊಸ ಮಾದರಿಯ ಜ್ವರ ಕಾಣಿಸಿಕೊಂಡಿದ್ದು, ಇಲ್ಲಿ ಹೊಸ ಥರದ ಡೆಂಘೆ ಜ್ವರ ಕಂಡುಬಂದಿದೆ. 171 ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ದಾವಣಗೆರೆ ಜಿಲ್ಲಾಸ್ಪತ್ರೆಯ ಮಕ್ಕಳ ವಿಭಾಗ, ಬಾಪೂಜಿ ಆಸ್ಪತ್ರೆ ಹಾಗೂ ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ಒಟ್ಟು 171 ಮಕ್ಕಳು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇವರಲ್ಲಿ 45 ಮಕ್ಕಳು ಶಂಕಿತ ಡೆಂಘೆ ಜ್ವರದಿಂದ ಬಳಲುತ್ತಿದ್ದಾರೆ. ಎಲ್ಲರಿಗೂ

ರಾಜ್ಯದಲ್ಲಿ ವಿಚಿತ್ರ ಜ್ವರ ಪತ್ತೆ| 170ಕ್ಕೂ ಅಧಿಕ ಮಕ್ಕಳು ಆಸ್ಪತ್ರೆಗೆ ದಾಖಲು| Read More »

ಅರಣ್ಯಕ್ಕೆ ಬಿಟ್ಟ ಕೋತಿ ಗೊಬ್ಬರದ ಲಾರಿ ಏರಿ ಮತ್ತೆ ಪೇಟೆಗೆ | ಆ ಮರ್ಕಟನ ಕತೆಯೇ ರೋಚಕ|

ಚಿಕ್ಕಮಗಳೂರು: ರೇಗಿಸಿದವನ ಮೇಲೆ ಮತ್ತು ಇತರರ ಮೇಲೆ ದಾಳಿ ಮಾಡಿದ ಹಿನ್ನಲೆ ಕೋತಿಯನ್ನು ಸೆರೆಹಿಡಿದು 22 ಕಿ.ಮೀ. ದೂರದ ದಟ್ಟ ಅರಣ್ಯಕ್ಕೆ ಬಿಡಲಾಗಿದ್ದ ಕೋತಿ ನಾಲ್ಕೇ ದಿನಕ್ಕೆ ಗೊಬ್ಬರದ ಲಾರಿ ಏರಿ ಮತ್ತೆ ಅದೇ ಜಾಗಕ್ಕೆ ಬಂದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಸೆಪ್ಟೆಂಬರ್ 16 ರಂದು ಕೊಟ್ಟಿಗೆಹಾರ ಸಮೀಪದ ತುರುವೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿದ್ದ ಕೋತಿಯನ್ನು ಹಿಡಿಯಲು ಹೋದಾಗ ಅರಣ್ಯ ಇಲಾಖೆ ಸಿಬ್ಬಂದಿ ಜೊತೆ ಹೋಗಿದ್ದ ಆಟೋ ಚಾಲಕ ಕೋತಿಗೆ ರೇಗಿಸಿದ್ದರಿಂದ

ಅರಣ್ಯಕ್ಕೆ ಬಿಟ್ಟ ಕೋತಿ ಗೊಬ್ಬರದ ಲಾರಿ ಏರಿ ಮತ್ತೆ ಪೇಟೆಗೆ | ಆ ಮರ್ಕಟನ ಕತೆಯೇ ರೋಚಕ| Read More »

ಲಾರಿ- ಕ್ಯಾಂಟರ್ ಢಿಕ್ಕಿ| 8 ಎಮ್ಮೆಗಳ ಸಹಿತ ಓರ್ವ ಸ್ಥಳದಲ್ಲೇ ಸಾವು, ಮೂವರು ಗಂಭೀರ|

ವಿಜಯಪುರ: ಲಾರಿ-ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಬಳಿ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ. ಎಮ್ಮೆಗಳನ್ನು ತುಂಬಿಕೊಂಡು ಹುಬ್ಬಳ್ಳಿಯಿಂದ ಸೋಲಾಪುರ ಕಡೆಗೆ ಹೊರಟಿದ್ದ ಕ್ಯಾಂಟರ್ ಹಾಗೂ ವಿಜಯಪುರದಿಂದ ಹುಬ್ಬಳ್ಳಿ ಕಡೆಗೆ ಸರಕು ತುಂಬಿಕೊಂಡು ಹೊರಟಿದ್ದ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಕ್ಯಾಂಟರ್ ನಲ್ಲಿದ್ದ ಎಂಟು ಎಮ್ಮೆಗಳೂ ಅಪಘಾತದ ರಭಸಕ್ಕೆ ವಾಹನದ ಒಳಗೇ ಜೀವ ಕಳೆದುಕೊಂಡಿವೆ. ಲಾರಿಯಲ್ಲಿ ಸಿಲುಕಿದವರನ್ನು ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ಹೊರತೆಗೆಯುವ ಕಾರ್ಯಾಚರಣೆ

ಲಾರಿ- ಕ್ಯಾಂಟರ್ ಢಿಕ್ಕಿ| 8 ಎಮ್ಮೆಗಳ ಸಹಿತ ಓರ್ವ ಸ್ಥಳದಲ್ಲೇ ಸಾವು, ಮೂವರು ಗಂಭೀರ| Read More »