ರಾಜ್ಯ

‘ರೇಪ್ ಆಗೋದನ್ನು ತಡೆಯಲಾಗ್ತಿಲ್ಲ ಅಂದ್ರೆ ಮಲಗಿ ಎಂಜಾಯ್ ಮಾಡ್ಬೇಕು!’ – ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ರಮೇಶ್ ಕುಮಾರ್| ಖಂಡಿಸದೇ ನಕ್ಕ ಸ್ಪೀಕರ್ ಕಾಗೇರಿ|

ಬೆಳಗಾವಿ: ಅತ್ಯಾಚಾರ ಆಗುವಾಗ ತಡೆಯಲು ಸಾಧ್ಯವಾಗದಿದ್ದರೆ ಮಲಗಿ ಎಂಜಾಯ್ ಮಾಡಿಬಿಡಬೇಕು ಎಂದು ಕಾಂಗ್ರೆಸ್ ಶಾಸಕ ಕೆ.ಆರ್.ರಮೇಶ್​ ಕುಮಾರ್ ಹೇಳಿದರು. ಈ ಹೇಳಿಕೆಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಕ್ಕರು. ಸದನದಲ್ಲಿದ್ದ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಈ ಹೇಳಿಕೆ ಸಹಜ ವಿದ್ಯಮಾನ ಎನ್ನುವಂತೆ ವರ್ತಿಸಿದರು. ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಜೆ 5ರ ವೇಳೆ ಚರ್ಚೆಗೆ ಹೆಚ್ಚಿನ ಸಮಯಬೇಕು ಎಂದು ಸದಸ್ಯರು ವಿನಂತಿಸಿದ್ದರು. ಆಗ ಸಂಜೆ […]

‘ರೇಪ್ ಆಗೋದನ್ನು ತಡೆಯಲಾಗ್ತಿಲ್ಲ ಅಂದ್ರೆ ಮಲಗಿ ಎಂಜಾಯ್ ಮಾಡ್ಬೇಕು!’ – ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ರಮೇಶ್ ಕುಮಾರ್| ಖಂಡಿಸದೇ ನಕ್ಕ ಸ್ಪೀಕರ್ ಕಾಗೇರಿ| Read More »

ಕರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ

ಕರ್ನಾಟಕ ವಿಧಾನ ಸಭಾ ಅಧಿವೇಶನವು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿದ್ದು, ಸದನ ಸಭೆಯ ನೇರಪ್ರಸಾರಕ್ಕಾಗಿ ಇಲ್ಲಿ ಕ್ಲಿಕ್ಕಿಸಿ… ಕೃಪೆ: ಡಿಡಿ ಚಂದನ

ಕರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ Read More »

ಕರಾವಳಿಯಲ್ಲಿ ಶಾಂತಿ ಸ್ಥಾಪನೆಗೆ ಸರ್ವ ಧರ್ಮೀಯರು ಸಹಕರಿಸಬೇಕು – ಸಚಿವ ಅರಗ ಜ್ಞಾನೇಂದ್ರ

ಬೆಳಗಾವಿ: ಕರ್ನಾಟಕದ ಕರಾವಳಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರ ನಿಯಂತ್ರಣಕ್ಕೆ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ವ ಧರ್ಮೀಯರ ಸಹಕಾರ ಅಗತ್ಯ ಎಂದು ರಾಜ್ಯ ಸರ್ಕಾರ ಹೇಳಿದೆ. ಬುಧವಾರ ವಿಧಾನಸಭೆಯ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಟಿ.ಖಾದರ್, ಉಪ್ಪಿನಂಗಡಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸಂಭವಿಸಿದ ಘಟನೆಗಳ ಬಗ್ಗೆ ಪ್ರಸ್ತಾಪಿಸಿದ ವಿಷಯಕ್ಕೆ ಅವರು ಉತ್ತರಿಸಿದ ಅವರು, ‘ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ, ಕೋಮುಸೌಹಾರ್ದತೆ ಕಾಪಾಡುವುದು ನಮ್ಮ ಪಾಲಿಗೆ ಮುಖ್ಯ. ಕರಾವಳಿಯಲ್ಲಿ ಶಾಂತಿಯನ್ನು ಕಾಪಾಡಲು ಎಲ್ಲ ಧರ್ಮೀಯರು ಸರ್ಕಾರಕ್ಕೆ ಸಹಕಾರ ನೀಡಬೇಕು.

ಕರಾವಳಿಯಲ್ಲಿ ಶಾಂತಿ ಸ್ಥಾಪನೆಗೆ ಸರ್ವ ಧರ್ಮೀಯರು ಸಹಕರಿಸಬೇಕು – ಸಚಿವ ಅರಗ ಜ್ಞಾನೇಂದ್ರ Read More »

ಓಮಿಕ್ರಾನ್ ಗೆ ಮೊದಲ ಬಲಿ| ಕೊರೊನಾ ರೂಪಾಂತರಿಗೆ ಯುಕೆ ನಲ್ಲಿ ಹೆಲ್ತ್ ಎಮರ್ಜೆನ್ಸಿ

ಸಮಗ್ರ ಸುದ್ದಿಮನೆ: ಪ್ರಪಂಚದಾದ್ಯಂತ ಓಮಿಕ್ರಾನ್ ಪ್ರಕರಣಗಳು ವರದಿಯಾಗುತ್ತಿವೆ. ಈ ನಡುವೆ ಯುಕೆಯಲ್ಲಿ ಮೊದಲ ಕರೋನಾ ಸಾವು ವರದಿಯಾಗಿದೆ. ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆತಂಕದ ವಾತಾವರಣವನ್ನು ಹೆಚ್ಚಳ ಮಾಡಿದೆ. ಈ ನಡುವೆ ವಿಶ್ವದ ಮೊದಲ ಓಮಿಕ್ರಾನ್ ಸಾವು ಇತ್ತೀಚೆಗೆ ಯುಕೆಯಲ್ಲಿ ಸಂಭವಿಸಿದೆ. ಇದನ್ನು ಪ್ರಧಾನಿ ಬೋರಿಸ್ ಜಾನ್ಸನ್ ಖಚಿತಪಡಿಸಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕೆಲವೇ ತಿಂಗಳಲ್ಲಿ 75 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪುವ ಸಾಧ್ಯತೆ ಇದೆ ಎಂದು ಅಲ್ಲಿನ ಸಂಶೋಧನಾ ಸಂಸ್ಥೆಗಳು ಎಚ್ಚರಿಸಿವೆ. ವಿಶ್ವದಾದ್ಯಂತ ಹೋಲಿಸಿದರೆ ಯುಕೆಯಲ್ಲಿ

ಓಮಿಕ್ರಾನ್ ಗೆ ಮೊದಲ ಬಲಿ| ಕೊರೊನಾ ರೂಪಾಂತರಿಗೆ ಯುಕೆ ನಲ್ಲಿ ಹೆಲ್ತ್ ಎಮರ್ಜೆನ್ಸಿ Read More »

ನಟ ದಿ. ಪುನಿತ್ ರಾಜ್ ಕುಮಾರ್ ಗೆ ಪದ್ಮಶ್ರೀ ನೀಡಲು ಶಿಪಾರಸ್ಸು- ಸಿಎಂ

ಬೆಳಗಾವಿ: ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದ್ದು, ಪದ್ಮಶ್ರೀ ಪ್ರಶಸ್ತಿಗೂ ಹೆಸರು ಶಿಫಾರಸ್ಸು ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ಮೊದಲ ದಿನದ ಅಧಿವೇಶನದ ಸಂದರ್ಭದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸುತ್ತಾ ಮಾತನಾಡಿದಂತ ಅವರು, ನಟ ಪುನೀತ್ ರಾಜ್ ಕುಮಾರ್ ಅವರಿಗೆ ಅವರೇ ಸರಿ ಸಾಟಿ. ಅವರಿಗೆ ಮತ್ತೊಬ್ಬರು ಸರಿಸಾಟಿಯಿಲ್ಲ. ಸರ್ಕಾರ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸಿದೆ.

ನಟ ದಿ. ಪುನಿತ್ ರಾಜ್ ಕುಮಾರ್ ಗೆ ಪದ್ಮಶ್ರೀ ನೀಡಲು ಶಿಪಾರಸ್ಸು- ಸಿಎಂ Read More »

‘ರಾಜ್ಯದಲ್ಲಿ ಲವ್ ಜಿಹಾದ್ ಕಾಯ್ದೆ ಜಾರಿಗೆ ಚಿಂತನೆ’ ಸಚಿವ ಸುನಿಲ್ ಕುಮಾರ್

ಬೆಳಗಾವಿ : ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿಗೆ ತರುತ್ತೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾಯ್ದೆ ಜಾರಿಗೆ ತರುತ್ತೇವೆ. ಗೋಹತ್ಯೆ ನಿಷೇಧ ತರುವುದಾಗಿ ಹೇಳಿದ್ದೇವು. ತಂದಿದ್ದೇವೆ. ಅದೇ ರೀತಿ ಮತಾಂತರ ನಿಷೇಧ ಕಾಯ್ದೆ ತರುತ್ತೇವೆ ಎಂದು ಹೇಳಿದ್ದೇವೆ. ಅದನ್ನು ಜಾರಿಗೆ ತರುತ್ತಿದ್ದೇವೆ. ಇದೀಗ ಲವ್ ಜಿಹಾದ್ ವಿರುದ್ಧ ಕಾಯ್ದೆ ಜಾರಿಗೆ ತರುತ್ತೇವೆ ಎಂದರು. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್

‘ರಾಜ್ಯದಲ್ಲಿ ಲವ್ ಜಿಹಾದ್ ಕಾಯ್ದೆ ಜಾರಿಗೆ ಚಿಂತನೆ’ ಸಚಿವ ಸುನಿಲ್ ಕುಮಾರ್ Read More »

ವಾಯುಭಾರ ಕುಸಿತ| ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ|

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಡಿ.15ರವರೆಗೆ ಮಳೆ ಸುರಿಯಲಿದೆ. ಕರ್ನಾಟಕದ ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ತುಮಕೂರು, ರಾಮನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ವಾಯುಭಾರ ಕುಸಿತ| ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ| Read More »

ಕೇರಳದಲ್ಲೂ ಪತ್ತೆಯಾಯ್ತು ಮೊದಲ ‘ಓಮಿಕ್ರಾನ್’| 37 ಕ್ಕೆ ಏರಿಕೆಯಾದ ಪ್ರಕರಣ

ಕೊಚ್ಚಿ: ಕೇರಳವು ಕೊಚ್ಚಿಯಿಂದ ಒಮಿಕ್ರಾನ್ ಕೋವಿಡ್ -19 ರೂಪಾಂತರದ ಮೊದಲ ಪ್ರಕರಣವನ್ನು ವರದಿ ಮಾಡಿದೆ. ಸೋಂಕಿತ ರೋಗಿಯು ಯುಕೆಯಿಂದ ಡಿಸೆಂಬರ್ 6 ರಂದು ಕೇರಳಕ್ಕೆ ಹಿಂದಿರುಗಿದ್ದಾರೆ. ಅವರಿಗೆ ಡಿಸೆಂಬರ್ 8 ರಂದು ಕೋವಿಡ್ -19 ಟೆಸ್ಟ್‌ ಮಾಡಿಸಲಾಗಿದ್ದು, ಅದರ ವರದಿ ಇಂದು,ಕೇರಳದ ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿನ ಹೊಸ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಮತ್ತೊಂದು ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಕರ್ನಾಟಕದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ

ಕೇರಳದಲ್ಲೂ ಪತ್ತೆಯಾಯ್ತು ಮೊದಲ ‘ಓಮಿಕ್ರಾನ್’| 37 ಕ್ಕೆ ಏರಿಕೆಯಾದ ಪ್ರಕರಣ Read More »

ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಲ್ಕದಲ್ಲಿ ಹೆಚ್ಚಳ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಮಾರ್ಗಸೂಚಿ ಅನುಸರಿಸಿದ್ದರಿಂದ ಹೊರೆಯಾದ ವೆಚ್ಚ ಸರಿದೂಗಿಸಲು ಹಾಗೂ ಪರೀಕ್ಷಾ ಪ್ರಕ್ರಿಯೆ ವೆಚ್ಚ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎಸ್ ಎಸ್‌ಎಲ್‌ಸಿ ಪರೀಕ್ಷಾ ಶುಲ್ಕವನ್ನು 100 ರು. ಹೆಚ್ಚಿಸಿ ಶಿಕ್ಷಣ ಇಲಾಖೆ ದೇಶ ಹೊರಡಿಸಿದೆ. ಅದರಿಂದಾಗಿ ಶುಲ್ಕ 485 ರು.ನಿಂದ 585 ರು.ಗೆ ಏರಿಕೆಯಾಗಿದೆ. ಪುನರಾವರ್ತಿತ ಶಾಲಾ, ಖಾಸಗಿ ಅಭ್ಯರ್ಥಿಗಳು ಒಂದು ವಿಷಯಕ್ಕೆ ಕಟ್ಟಬೇಕಿದ್ದ ಶುಲ್ಕವನ್ನು 320 ರಿಂದ 370 ಕ್ಕೆ ಹೆಚ್ಚಳ ಮಾಡಲಾಗಿದೆ. 2 ವಿಷಯಕ್ಕೆ 386 ರು. ಪಾವತಿಸಬೇಕಿದ್ದ ವಿದ್ಯಾರ್ಥಿಗಳು 461 ರು. ಹಾಗೂ

ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಲ್ಕದಲ್ಲಿ ಹೆಚ್ಚಳ Read More »

ಸಿಎಂ ಬಸವರಾಜ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಕಾಡಿದ ಲ್ಯಾಂಡಿಂಗ್ ಸಮಸ್ಯೆ

ಹುಬ್ಬಳ್ಳಿ: ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಲ್ಯಾಂಡಿಂಗ್ ಸಮಸ್ಯೆಯಾಗಿದೆ. ಇದರಿಂದಾಗಿ ಅರ್ಧ ಗಂಟೆ ವಿಮಾನ ಆಗಸದಲ್ಲಿ ಸುತ್ತು‌ ಹೊಡೆದಿದೆ. ಲ್ಯಾಂಡಿಂಗ್ ಗೆ ಕ್ಲಿಯರೆನ್ಸ್ ಸಿಗದ ಕಾರಣ ಅರ್ಧ ಗಂಟೆಯಿಂದ ವಿಮಾನ ಹಾರಾಟ ನಡೆಸಿದೆ. ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಈ ಸಮಸ್ಯೆ ಎದುರಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದು, ಆದರೆ ದಟ್ಟ ಮಂಜು ಸಮಸ್ಯೆಯ ಕಾರಣ ಆಕಾಶದಲ್ಲಿ ವಿಮಾನ

ಸಿಎಂ ಬಸವರಾಜ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಕಾಡಿದ ಲ್ಯಾಂಡಿಂಗ್ ಸಮಸ್ಯೆ Read More »