ರಾಜ್ಯ

ನಿನ್ನ ವಾಹನದಿಂದ ಬೆಳೆ ಉಳಿಸು – ಗಣಪತಿಗೆ ಜೀವಂತ ಇಲಿ ನೀಡಿ ಬೇಡಿಕೊಂಡ ರೈತ

ಚಿಕ್ಕಮಗಳೂರು: ಗಣಪತಿ ಹಬ್ಬದಂದು ರೈತನೊಬ್ಬ ಜೀವಂತ ಇಲಿಯನ್ನು ಗಣೇಶನಿಗೆ ನೀಡಿ, ಬೆಳೆಗಳನ್ನು ಉಳಿಸು ಎಂದು ಬೇಡಿಕೊಂಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದಲ್ಲಿ ನಡೆದಿದೆ. ಮರ್ಕಲ್ ಗ್ರಾಮದ ರೈತ ನಿತಿನ್ ಅವರ ಹೊಲದಲ್ಲಿ ಇಲಿಗಳ ಕಾಟ ಯಥೇಚ್ಛವಾಗಿತ್ತು. ಯಾವುದೇ ಔಷಧಿ ಇಟ್ಟರೂ, ಏನೇ ಮಾಡಿದರೂ ಇಲಿಗಳ ಹಾವಳಿ ನಿಯಂತ್ರಣಕ್ಕೆ ಬರುತ್ತಿರಲಿಲ್ಲ. ಕಷ್ಟಪಟ್ಟು ಬೆಳೆದ ಬೆಳೆಯೂ ಇಲಿ ಹಾಗೂ ಮಣ್ಣು ಪಾಲಾಗುತ್ತಿತ್ತು. ಇದರಿಂದ ಮನನೊಂದ ರೈತ ನಿನ್ನ ವಾಹನದಿಂದ ನಮ್ಮ ಬೆಳೆಗಳು ನಾಶವಾಗುತ್ತವೆ, ಬೆಳೆಗಳನ್ನ ಉಳಿಸಿಕೊಳ್ಳುವುದೇ ಕಷ್ಟವಾಗಿದೆ […]

ನಿನ್ನ ವಾಹನದಿಂದ ಬೆಳೆ ಉಳಿಸು – ಗಣಪತಿಗೆ ಜೀವಂತ ಇಲಿ ನೀಡಿ ಬೇಡಿಕೊಂಡ ರೈತ Read More »

ಶಾಲಾ ಮಕ್ಕಳಿಗೆ ದಸರಾ ಹಾಗೂ ಬೇಸಿಗೆ ರಜೆ ಘೋಷಣೆ

ಬೆಂಗಳೂರು :‌ 2021-22ನೇ ಸಾಲಿನ‌ ಶೈಕ್ಷಣಿಕ ವರ್ಷದ ದಸರಾ ರಜೆ ಹಾಗೂ ಬೇಸಿಗೆ ರಜೆಯನ್ನು ರಾಜ್ಯ ಶಿಕ್ಷಣ ಇಲಾಖೆ ಘೋಷಿಸಿ ಆದೇಶ ಹೊರಡಿಸಿದೆ. ಅದ್ರಂತೆ, ಆಕ್ಟೋಬರ್ 10 ರಿಂದ ಈ ದಸರಾ ರಜೆ ಪ್ರಾರಂಭವಾಗಲಿದ್ದು, 20 ರವರೆಗೆ ಇರಲಿದೆ. ಅಂದರೆ ಬರೋಬ್ಬರಿ 10 ದಿನಗಳ ದಸರಾ ರಜೆ ಘೋಷಿಸಲಾಗಿದೆ. ಈ ರಜೆ ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಶಾಲೆ, ಅನುದಾನ ರಹಿತ ಶಾಲೆಗಳಿಗೆ ಅನ್ವಯಿಸಲಿದೆ. ಇದರ ಜೊತೆಗೆ ಬೇಸಿಗೆ ರಜೆಯನ್ನೂ ಘೋಷಣೆ ಮಾಡಿದ್ದು, ಮುಂದಿನ ವರ್ಷ

ಶಾಲಾ ಮಕ್ಕಳಿಗೆ ದಸರಾ ಹಾಗೂ ಬೇಸಿಗೆ ರಜೆ ಘೋಷಣೆ Read More »

ರಾತ್ರಿಯಾಗ್ತಿದ್ದಂತೆ ರಸ್ತೆಗಿಳಿಯೋ ಮೊಸಳೆ

ಮಂಡ್ಯ: ರಾತ್ರಿಯಾಗ್ತಿದ್ದಂತೆ ಭಾರೀ ಗಾತ್ರದ ಮೊಸಳೆಯೊಂದು ರಸ್ತೆಯಲ್ಲಿ ಕಾಣಿಸಿಕೊಂಡು ಜನರಲ್ಲಿ ಆತಂಕ ಮೂಡಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ಬಳಿಯ ಪಾಲಹಳ್ಳಿ ಗ್ರಾಮದ ಬಳಿ ನಡೆದಿದೆ. ಕಳೆದ ಒಂದು ತಿಂಗಳಿನಿಂದ ರಂಗನತಿಟ್ಟು ಪಕ್ಷಿಧಾಮದ ಪಾಲಹಳ್ಳಿ ಗ್ರಾಮದ ಬಳಿಯ ವಿರಿಜಾ ನಾಲೆಯಲ್ಲಿ ಮೊಸಳೆಯೊಂದು ಸೇರಿಕೊಂಡಿದ್ದು, ಈಗಾಗಲೇ ನಾಲೆಯಿಂದ ಮೇಲೆ ಬಂದ ಮೂರ್ನಾಲ್ಕು ಕುರಿ ಮೇಕೆಗಳನ್ನು ತಿಂದಿದೆ. ಇದೀಗ ಮತ್ತೊಮ್ಮೆ ಭಾರೀ ಗಾತ್ರದ ಈ ಮೊಸಳೆ ವಿರಿಜಾ ನಾಲೆಯ ಪಕ್ಕದಲ್ಲೇ ರಾತ್ರಿಯಲ್ಲಿ ರಸ್ತೆಗೆ ಬಂದು ಆಹಾರಕ್ಕಾಗಿ

ರಾತ್ರಿಯಾಗ್ತಿದ್ದಂತೆ ರಸ್ತೆಗಿಳಿಯೋ ಮೊಸಳೆ Read More »

ಸೆ12ರ ವರೆಗೆ ಕರಾವಳಿಯಲ್ಲಿ ಮುಂದುವರಿಯಲಿದೆ ಮಳೆ| ಎಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಇನ್ನು ಮುಂದುವರೆದಿದ್ದು, ಕಳೆದ ವಾರದಿಂದ ಸುರಿಯುತ್ತಿರುವ ಮಳೆ ಸೆಪ್ಟೆಂಬರ್ 12 ರವರೆಗೆ ಮಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆಯ ಪ್ರಕಾರ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇಲಾಖೆಯ ಪ್ರಕಾರ ಸೆಪ್ಟೆಂಬರ್‌ 12ರವರೆಗೆ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ರಾಜ್ಯದಲ್ಲಿ ಬಿದ್ದ ಮಳೆಯನುಸಾರ ಉಡುಪಿಯ ಕೊಲ್ಲೂರು ಭಾಗದಲ್ಲಿ 9 ಮಿ.ಮೀ , ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4 ರಿಂದ 5 ಮಿ.ಮೀ. ಮಳೆಯಾಗಿದೆ.ಬುಧವಾರದಿಂದ ಗುರುವಾರ ಬೆಳಗ್ಗೆವರೆಗೆ ಜಿಲ್ಲೆಯಲ್ಲಿ

ಸೆ12ರ ವರೆಗೆ ಕರಾವಳಿಯಲ್ಲಿ ಮುಂದುವರಿಯಲಿದೆ ಮಳೆ| ಎಲ್ಲೋ ಅಲರ್ಟ್ ಘೋಷಣೆ Read More »

ಕರ್ನಾಟಕದ ಎಲ್ಲಾ ಗಡಿಜಿಲ್ಲೆಗಳಲ್ಲೂ ವೀಕೆಂಡ್ ಕರ್ಪ್ಯೂ ರದ್ದು

ಬೆಂಗಳೂರು: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನದಲ್ಲಿ ಇದುವರೆಗ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂವನ್ನು ತೆರವುಗೊಳಿಸಲು ಆದೇಶಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಕಂಡುಬಂದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಕೊವಿಡ್ ಸೋಂಕು ಹೆಚ್ಚಳವಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕರ್ಫ್ಯೂ ಜಾರಿಗೊಳಿಸಬಹುದಾಗಿದೆ.

ಕರ್ನಾಟಕದ ಎಲ್ಲಾ ಗಡಿಜಿಲ್ಲೆಗಳಲ್ಲೂ ವೀಕೆಂಡ್ ಕರ್ಪ್ಯೂ ರದ್ದು Read More »

”ಗಣೇಶ” ಹೆಸರಿರುವವರಿಗೆ ಬಂಪರ್ ಆಫರ್ – ವಂಡರ್ ಲಾದಿಂದ 100 ಮಂದಿಗೆ ಉಚಿತ ಪಾಸ್

ಬೆಂಗಳೂರು: ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ವಂಡರ್ ಲಾದಿಂದ ಈ ಬಾರಿ ಗಣೇಶ ಹಬ್ಬಕ್ಕೆ ಬಂಪರ್ ಆಫರ್ ನೀಡಿದೆ. ಗಣೇಶ ಚತುರ್ಥಿ ದಿನದ ಅಂಗವಾಗಿ ವಂಡರ್ ಲಾ ವತಿಯಿಂದ ವಿಶೇಷ ಕೊಡುಗೆ ನೀಡಲಾಗಿದೆ. ಭಗವಾನ್ ಶ್ರೀ ಗಣೇಶನ 108 ಹೆಸರುಗಳ ಪೈಕಿ ಯಾವುದೇ ಹೆಸರು ನೀವು ಇಟ್ಟುಕೊಂಡಿದ್ದರೆ, ಅವರಿಗೆ ಸೆಪ್ಟೆಂಬರ್ 10ರ ಗಣೇಶ ಹಬ್ಬದಂದು ಉಚಿತ ಪಾಸ್ ನೀಡುತ್ತಿದೆ. ಇಂಥ 100 ಪಾಸ್ ನೀಡಲು ನಿರ್ಧರಿಸಿದೆ. ಶ್ರೀ ಗಣೇಶನ ವಿವಿಧ ಹೆಸರು ಹೊಂದಿರುವ ಜನರು

”ಗಣೇಶ” ಹೆಸರಿರುವವರಿಗೆ ಬಂಪರ್ ಆಫರ್ – ವಂಡರ್ ಲಾದಿಂದ 100 ಮಂದಿಗೆ ಉಚಿತ ಪಾಸ್ Read More »

ಲಾರಿಯನ್ನು ಅಡ್ಡಗಟ್ಟಿ ಕಬ್ಬು ಸವಿದ ಗಜಪಡೆ

ಚಾಮರಾಜನಗರ: ಜಿಲ್ಲೆಯ ಗಡಿ ಭಾಗ, ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಿಯಾನೆ ಸೇರಿದಂತೆ ಮೂರು ಆನೆಗಳು ಕಬ್ಬಿನ ಲಾರಿಯೊಂದನ್ನು ತಡೆದು ಅದರಲ್ಲಿರುವ ಕಬ್ಬನ್ನು ತಿನ್ನುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬೆಂಗಳೂರು-ದಿಂಡಿಗಲ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೆಪಾಲಂ ಬಳಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಹೆದ್ದಾರಿಯಲ್ಲಿ ಲಾರಿಗಳು ತಮಿಳನಾಡಿಗೆ ಕಬ್ಬು ತೆಗೆದುಕೊಂಡು ಹೋಗುತ್ತವೆ. ರಸ್ತೆ ಬದಿಯಲ್ಲಿ ನಿಂತಿರುವ ಆನೆಗಳು ಕಬ್ಬಿನ ಲಾರಿ ಸಾಗುವಾಗ ಸೊಂಡಿಲು ಹಾಕಿ ಕಬ್ಬಿನ

ಲಾರಿಯನ್ನು ಅಡ್ಡಗಟ್ಟಿ ಕಬ್ಬು ಸವಿದ ಗಜಪಡೆ Read More »

ಹಬ್ಬದ ಸುಲಿಗೆಗೆ ರೆಡಿಯಾಗಿವೆ ಖಾಸಗಿ ಬಸ್ ಗಳು| ವಿಮಾನಕ್ಕಿಂತ ಬಸ್ ಪ್ರಯಾಣವೇ ದುಬಾರಿ…!

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರು ಇಂದೇ ಹೋಗಿಬಿಡಿ. ನಾಳೆ ಹೋಗುವ ಪ್ಲಾನ್ ಇದ್ದರೆ ದುಪ್ಪಟ್ಟು ಹಣ ಖರ್ಚಾಗೋದು ಪಕ್ಕ. ಹಬ್ಬದ ಲಾಭ ಪಡೆಯಲು ಮುಂದಾದ ಖಾಸಗಿ ಬಸ್ಗಳು ಪ್ರಯಾಣಿಕರ ಬಳಿ ಹೆಚ್ಚಿನ ಟಿಕೆಟ್ ಚಾರ್ಜ್ ಮಾಡಲು ಮುಂದಾಗಿದೆ. ನಾಳೆಯಿಂದ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರು ಹೆಚ್ಚಿನ ಹಣ ನೀಡಿ ಪ್ರಯಾಣಿಸಬೇಕು. ಊರಿಗೆ ಹೋಗುವವರಿಗೆ ಟಿಕೆಟ್ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಇಂದು ಪ್ರಯಾಣ ಮಾಡಿದ್ರೆ ಟಿಕೆಟ್ ದರ ಕಡಿಮೆ ಇರಲಿದ್ದು ನಾಡಿದ್ದು ಊರಿಗೆ‌ ಹೋಗುವವರು

ಹಬ್ಬದ ಸುಲಿಗೆಗೆ ರೆಡಿಯಾಗಿವೆ ಖಾಸಗಿ ಬಸ್ ಗಳು| ವಿಮಾನಕ್ಕಿಂತ ಬಸ್ ಪ್ರಯಾಣವೇ ದುಬಾರಿ…! Read More »

ಹಬ್ಬದ ಸುಲಿಗೆಗೆ ರೆಡಿಯಾಗಿವೆ ಖಾಸಗಿ ಬಸ್ ಗಳು| ವಿಮಾನಕ್ಕಿಂತ ಬಸ್ ಪ್ರಯಾಣವೇ ದುಬಾರಿ…!

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರು ಇಂದೇ ಹೋಗಿಬಿಡಿ. ನಾಳೆ ಹೋಗುವ ಪ್ಲಾನ್ ಇದ್ದರೆ ದುಪ್ಪಟ್ಟು ಹಣ ಖರ್ಚಾಗೋದು ಪಕ್ಕ. ಹಬ್ಬದ ಲಾಭ ಪಡೆಯಲು ಮುಂದಾದ ಖಾಸಗಿ ಬಸ್ಗಳು ಪ್ರಯಾಣಿಕರ ಬಳಿ ಹೆಚ್ಚಿನ ಟಿಕೆಟ್ ಚಾರ್ಜ್ ಮಾಡಲು ಮುಂದಾಗಿದೆ. ನಾಳೆಯಿಂದ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರು ಹೆಚ್ಚಿನ ಹಣ ನೀಡಿ ಪ್ರಯಾಣಿಸಬೇಕು. ಊರಿಗೆ ಹೋಗುವವರಿಗೆ ಟಿಕೆಟ್ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಇಂದು ಪ್ರಯಾಣ ಮಾಡಿದ್ರೆ ಟಿಕೆಟ್ ದರ ಕಡಿಮೆ ಇರಲಿದ್ದು ನಾಡಿದ್ದು ಊರಿಗೆ‌ ಹೋಗುವವರು

ಹಬ್ಬದ ಸುಲಿಗೆಗೆ ರೆಡಿಯಾಗಿವೆ ಖಾಸಗಿ ಬಸ್ ಗಳು| ವಿಮಾನಕ್ಕಿಂತ ಬಸ್ ಪ್ರಯಾಣವೇ ದುಬಾರಿ…! Read More »

ಗುಡ್ ನ್ಯೂಸ್| ನಿಟ್ಟುಸಿರು ಬಿಟ್ಟ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವಿಟಿ ದರ‌ 2 ಕ್ಕಿಂತ ಕಡಿಮೆ|

ಬೆಂಗಳೂರು: ಕೊರೋನಾ ಸೋಂಕು ಹೆಚ್ಚಿರುವ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಶೇ. 1.99 ಮತ್ತು ಕೊಡಗು ಜಿಲ್ಲೆಯಲ್ಲಿ ಶೇ. 1.95 ಕೊರೋನಾ ಪಾಸಿಟಿವಿಟಿ ದರ ದಾಖಲಾಗುವುದರೊಂದಿಗೆ ರಾಜ್ಯದ ಎಲ್ಲ ಜಿಲ್ಲೆಗಳ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆಯಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿನ ಪಾಸಿಟಿವಿಟಿ ದರ ಗಣನೀಯವಾಗಿ ಕಡಿಮೆಯಾಗಿದ್ದರೂ ಸಹ ದಕ್ಷಿಣ ಕನ್ನಡ ಮತ್ತು ಕೊಡಗು, ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚು ಕಂಡು ಬಂದ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಈಗ

ಗುಡ್ ನ್ಯೂಸ್| ನಿಟ್ಟುಸಿರು ಬಿಟ್ಟ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಾಸಿಟಿವಿಟಿ ದರ‌ 2 ಕ್ಕಿಂತ ಕಡಿಮೆ| Read More »