ರಾಜ್ಯ

ಶಾಸಕ ಎನ್ ಮಹೇಶ್ ಗೆ ಪತ್ನಿ‌ ವಿಯೋಗ|

ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್.ಮಹೇಶ್‌ಗೆ ಪತ್ನಿ ವಿಯೋಗವಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಾ ಮಹೇಶ್(66) ತಡರಾತ್ರಿ 11ಗಂಟೆ ವೇಳೆಗೆ ನಿಧನರಾಗಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದ ಬಳಿ ಇರುವ ಕಾನ್ಶ್ ಫೌಂಡೇಶನ್‌ನಲ್ಲಿ ಶಾಸಕ ಎನ್.ಮಹೇಶ್‌ರ ಪತ್ನಿ ವಿಜಯಾ ಮಹೇಶ್ ಅಂತ್ಯಕ್ರಿಯೆ ನೆರವೇರಲಿದೆ. ಶಾಸಕ ಎನ್.ಮಹೇಶ್‌ ಮತ್ತು ವಿಜಯಾ ಇಬ್ಬರದ್ದು ಲವ್ ಕಂ ಅರೇಂಜ್ ಮ್ಯಾರೇಜ್. ಇವರಿಬ್ಬರು ಒಂದೇ ಕಡೆ ವಿದ್ಯಾಭ್ಯಾಸ ಮಾಡುತ್ತಿದ್ದಾಗ ಪ್ರೀತಿ ಹುಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ಸುಮಾರು 37 ವರ್ಷಗಳ ಸುಖಕರ ದಾಂಪತ್ಯ […]

ಶಾಸಕ ಎನ್ ಮಹೇಶ್ ಗೆ ಪತ್ನಿ‌ ವಿಯೋಗ| Read More »

ಅಚ್ಚರಿ ಮೂಡಿಸಿದ ತ್ರಿಕೋನ ಪ್ರೇಮ – ಲಾಟರಿಯ ಮೂಲಕ ಪ್ರೇಯಸಿಯ ಆಯ್ಕೆ – ಹೀಗೂ….ಉಂಟೇ….

ಹಾಸನ: ಯುವಕೊನಬ್ಬ ಇಬ್ಬರು ಯುವತಿಯರನ್ನು ಪ್ರೀತಿಸಿ ಕೊನೆಗೆ ಇಬ್ಬರ ಕೈಗೆ ಸಿಕ್ಕಿ ಬಿದ್ದು ಮದೆಯಾಗಳು ಕುಟುಬಂಸ್ಥರು ಲಾಟರಿ ಪ್ರಯೋಗಕ್ಕೆ ಮುಂದಾದ ಪ್ರಸಂಗವೊಂದು ಸಕಲೇಶಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.ಯುವಕನಿಗೆ ಯುವತಿಯ ಮೇಲೆ, ಯುವತಿಗೆ ಯುವಕನ ಮೇಲೆ ಮೋಹ ಉಂಟಾಗುವುದು ಸಹಜ. ಅದರೆ ಕೆಲವು ಯುವತಿ/ಯುವಕರಿಗೆ ತನಗೊಬ್ಬ ಪೀಯತಮ/ಪ್ರೀಯತಮೆ ಇದ್ದರೂ ಇನ್ನೂಂದು ಯುವತಿಯನ್ನು /ಯುವಕನನ್ನು ಕಂಡಾಗ ಆಕೆ ಮೇಳೆ ಸೆಳೆತ ಉಂಟಾಗುವುದು ಸಾಮನ್ಯ. ಅದರೆ ಇಲ್ಲೊಬ್ಬ ಯುವಕ ಇಬ್ಬರೂ ಯುವತಿಯರನ್ನು ಪ್ರೀತಿಸುತ್ತಿದ್ದ. ಆಕೆಗೆ ಈಕೆಯ ವಿಚಾರ ತಿಳಿಯದಂತೆ , ಈಕೆಗೆ

ಅಚ್ಚರಿ ಮೂಡಿಸಿದ ತ್ರಿಕೋನ ಪ್ರೇಮ – ಲಾಟರಿಯ ಮೂಲಕ ಪ್ರೇಯಸಿಯ ಆಯ್ಕೆ – ಹೀಗೂ….ಉಂಟೇ…. Read More »

ಸಾರ್ವಜನಿಕ ಗಣೇಶೋತ್ಸವ ಕ್ಕೆ ಷರತ್ತುಬದ್ದ ಅನುಮತಿ

ಬೆಂಗಳೂರು : ರಾಜ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಕ್ಕೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು ಷರತ್ತುಬದ್ಧ ಅನುಮತಿ ನೀಡಲಾಗಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದ್ದು, ಸಾರ್ವಜನಿಕ ಗಣೇಶೋತ್ಸವ ಕೇವಲ ಮೂರು ದಿನ ಮಾತ್ರ ಅವಕಾಶ ನೀಡಲಾಗಿದೆ.ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ವರದಿ ಆಧರಿಸಿ ಸಿಎಂ ಈ ನಿರ್ಧಾರ ಕೈಗೊಂಡಿದ್ದು, ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ 3 ದಿನ

ಸಾರ್ವಜನಿಕ ಗಣೇಶೋತ್ಸವ ಕ್ಕೆ ಷರತ್ತುಬದ್ದ ಅನುಮತಿ Read More »

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ| ಬಾಲಕನ ಬಲಿ ಪಡೆದ ಬಾವಲಿ ಜ್ವರ

ಕೋಝಿಕೋಡ್: ಕೇರಳದಲ್ಲಿ ಆತಂಕ ಮೂಡಿಸಿದ್ದ ನಿಫಾ ವೈರಸ್ ಮತ್ತೆ ಕಾಣಿಸಿಕೊಂಡಿದೆ. ರಾಜ್ಯದ ಕೋಳಿಕೋಡ್ ನಲ್ಲಿ 13 ವರ್ಷದ ಬಾಲಕ ನಿಫಾ ವೈರಸ್ ನಿಂದ ಸಾವನ್ನಪ್ಪಿದ್ದಾನೆ ಎಂದು ಆರೋಗ್ಯ ಇಲಾಖೆ ಮೂಲಗಳು ಭಾನುವಾರ ತಿಳಿಸಿವೆ. ಸೋಂಕಿಗೊಳಗಾಗಿರುವ ಬಾಲಕ ಛತಮಂಗಳಂ ಹತ್ತಿರ ಬಳಿಯಿರುವ ಚುಲೂರ್ ಮೂಲದವನೆಂದು ತಿಳಿದುಬಂದಿದೆ.ಪುಣೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾದ ಹುಡುಗನ ಮಾದರಿಗಳು ನಿಫಾ ವೈರಸ್ ಇರುವಿಕೆಯನ್ನು ದೃಢಪಡಿಸಿವೆ. ಕೇಂದ್ರ ಸರ್ಕಾರವು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದ ತಂಡವನ್ನು ರಾಜ್ಯಕ್ಕೆ ರವಾನಿಸಿದೆ, ಅದು ಭಾನುವಾರ ತಲುಪಲಿದೆ.

ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ| ಬಾಲಕನ ಬಲಿ ಪಡೆದ ಬಾವಲಿ ಜ್ವರ Read More »

ಈ ಪುಟ್ಟ ಕೈ ಹಾವು ಹಿಡಿಯೋದಕ್ಕೂ ಸೈ| ಆರರ ಪೋರಿಯ ಉರಗ ಪ್ರೇಮ ಕಂಡರೆ ಅಚ್ಚರಿಯಾಗುತ್ತೆ

ಮಡಿಕೇರಿ: ಆರು ವರ್ಷದ ಬಾಲಕಿಯೊಬ್ಬಳು ಮನೆಯಂಗಳಕ್ಕೆ ಬಂದ ಹಾವನ್ನು ಹಿಡಿದಿದು ಗ್ರಾಮಸ್ಥರಿಗೆ ಅಚ್ಚರಿ ಮೂಡಿಸಿರುವ ಘಟನೆ ವೀರಾಜಪೇಟೆ ತಾಲೂಕಿನ ಕಾವಾಡಿ ಗ್ರಾಮದಲ್ಲಿ ನಡೆದಿದೆ. ಈಕೆ ಕಾವಾಡಿ ಗ್ರಾಮದ ರೋಷನ್ ಎಂಬವರ ಆರು ವರ್ಷದ ಮಗಳು ತನುಷಾ. ತನ್ನ ಎರಡು ವರ್ಷದ ತಂಗಿಯೊಂದಿಗೆ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಹಾವೊಂದು ಬರುತ್ತಿರುವುದನ್ನು ಕಂಡಿದ್ದಾಳೆ. ನೋಡುತ್ತಿದ್ದಂತೆ ಅದು ಮನೆಯ ಸಮೀಪದಲ್ಲೇ ಇರುವ ಪೊದೆಯೊಳಕ್ಕೆ ಹೋಗುತ್ತಿದ್ದನ್ನು ತನುಷಾ ನೋಡಿದ್ದಾಳೆ. ಕೂಡಲೇ ಮನೆಯೊಳಗಿದ್ದ ಅಮ್ಮನನ್ನು ಕೂಗಿ ಕರೆದು ಅಮ್ಮ ಹಾವು ಬಂದಿದೆ ಎಂದು ಹೇಳಿದ್ದಾಳೆ.

ಈ ಪುಟ್ಟ ಕೈ ಹಾವು ಹಿಡಿಯೋದಕ್ಕೂ ಸೈ| ಆರರ ಪೋರಿಯ ಉರಗ ಪ್ರೇಮ ಕಂಡರೆ ಅಚ್ಚರಿಯಾಗುತ್ತೆ Read More »

ಶಾಸಕರಿಗೆ ಪುಷ್ಪವೃಷ್ಟಿ ಸುರಿಸಿದ ಪೊಲೀಸರು| ಎಸ್ಪಿಯಿಂದ ಶೋಕಾಸ್ ನೋಟಿಸ್ ಜಾರಿ|

ಬೆಳಗಾವಿ: ಎರಡು ದಿನಗಳ ಹಿಂದೆ ಜನ್ಮ ದಿನ ಆಚರಿಸಿಕೊಂಡ ಕಿತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಹಾಂತೇಶ ದೊಡ್ಡಗೌಡರ ದಂಪತಿ ಮೇಲೆ ಪೊಲೀಸರು ಪುಷ್ಪವೃಷ್ಟಿ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಟೀಕೆಗೊಳಗಾಗಿದೆ. ಪಟ್ಟಣದಲ್ಲಿರುವ ಅವರ ಮನೆಯಲ್ಲಿ ಶಾಸಕ ಮತ್ತು ಅವರ ಪತ್ನಿ ಮಂಜುಳಾ ಅವರನ್ನು ರಾಜ-ಮಹಾರಾಣಿಯಂತೆ ಕೂರಿಸಿ ಪುಷ್ಪವೃಷ್ಟಿ ಮಾಡಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ‘ಶಾಸಕರು ಪೊಲೀಸರಿಂದ ಹೂಗುಚ್ಚ ಸ್ವೀಕರಿಸಬೇಕಿತ್ತು. ಅದರ ಬದಲಾಗಿ ಪುಷ್ಪವೃಷ್ಟಿ

ಶಾಸಕರಿಗೆ ಪುಷ್ಪವೃಷ್ಟಿ ಸುರಿಸಿದ ಪೊಲೀಸರು| ಎಸ್ಪಿಯಿಂದ ಶೋಕಾಸ್ ನೋಟಿಸ್ ಜಾರಿ| Read More »

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಆಧಾರ್ ಕಡ್ದಾಯ

ಕುಂದಾಪುರ: ಇನ್ನು ಮುಂದೆ ಕೊಲ್ಲೂರು ಶ್ರೀಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಆಧಾರ್ ಕಡ್ಡಾಯವಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪಿ.ಬಿ. ಮಹೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೋವಿಡ್-19 ಹಿನ್ನೆಲೆ ಪ್ರಸ್ತುತ ವಿದ್ಯಾಮಾನಗಳನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಆದೇಶದಂತೆ ಸೆಪ್ಟಂಬರ್ 4ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ದೇವಾಲಯ ಪ್ರವೇಶದ್ವಾರದಲ್ಲಿ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾದಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಹೆಸರು,ಊರು ಹಾಗೂ ಸಂಪರ್ಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ. ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಆಧಾರ್ ಕಡ್ದಾಯ Read More »

ಪ್ರವಾಹಕ್ಕೆ ತತ್ತರಿಸಿದ ಅಮೇರಿಕಾ: ಸಾವು ನೋವಿನ ಪ್ರಮಾಣ ಏರಿಕೆ -ಮಹಿಳೆ ನರಳಾಟವನ್ನು ಕಂಡು ಹೋದ ಕನ್ನಡಿಗ ದುರ್ಮರಣ

ಬೆಂಗಳೂರು: ಅಮೇರಿಕಾದಲ್ಲಿ ಉಂಟಾದ ಭೀಕರ ಪ್ರವಾಹದಲ್ಲಿ ಮಹಿಳೆಯೋರ್ವರನ್ನು ರಕ್ಷಿಸಲು ಹೋಗಿ ಕನ್ನಡಿಗನೊಬ್ಬ ಸಾವನಪ್ಪಿದ ಸುದ್ದಿಯನ್ನು ಅಮೇರಿಕಾದ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಚಿಕ್ಕಬಳ್ಳಾಪುರ, ಚಿಂತಾಮಣಿ ತಾಲೂಕಿನ ಬೊಮ್ಮೆಪಲ್ಲಿ ನಿವಾಸಿ ಧನುಷ್ ರೆಡ್ಡಿ(31) ಮೃತ ವ್ಯಕ್ತಿ. ಇವರು ಕಳೆದ ಬುಧವಾರ ಪ್ರವಾಹದಲ್ಲಿ ಸಿಲುಕಿದ್ದ ಮಹಿಳೆಯ ನರಳಾಟವನ್ನು ಕೇಳಿ ರಕ್ಷಿಸಲು ಮುಂದಾದ ಗಿದ್ದರು. ಅದರೆ ಇದೇ ವೇಳೆ ಪ್ರವಾಹದ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಬೃಹತ್ ಗಾತ್ರದ ಪೈಪ್ ಲೈನಲ್ಲಿ ಕೊಚ್ಚಿ ಹೋದ ಧನುಷ್ ರೆಡ್ಡಿ ಮೃತ ದೇಹ ಒಂದು ದಿನದ

ಪ್ರವಾಹಕ್ಕೆ ತತ್ತರಿಸಿದ ಅಮೇರಿಕಾ: ಸಾವು ನೋವಿನ ಪ್ರಮಾಣ ಏರಿಕೆ -ಮಹಿಳೆ ನರಳಾಟವನ್ನು ಕಂಡು ಹೋದ ಕನ್ನಡಿಗ ದುರ್ಮರಣ Read More »

BPL ಕಾರ್ಡ್ ದಾರರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ| ವಾರ್ಷಿಕ 1.20 ಲಕ್ಷ ರೂ. ಆದಾಯ ಹೊಂದಿರುವವರ ಕಾರ್ಡ್ ರದ್ದು…!

ಬೆಂಗಳೂರು: ರಾಜ್ಯ ಸರ್ಕಾರ BPL ಕಾರ್ಡ್ ಹೊಂದಿರುವವರಿಗೆ ದೊಡ್ಡ ಶಾಕ್ ನೀಡಿದೆ. ಇತ್ತೀಚೆಗೆ ಫ್ರಿಡ್ಜ್ , ಟಿವಿ ಬೈಕ್ ಇದ್ದವರ ಬಿಪಿಎಲ್ ಕಾರ್ಡ್ ಕ್ಯಾನ್ಸಲ್ ಮಾಡುವುದಾಗಿ ಸುಳಿವು ನೀಡಿದ್ದ ಸರ್ಕಾರದ ನಡೆ ವಿರುದ್ಧ ವಿಪಕ್ಷಗಳು ಹಾಗೂ ಮಧ್ಯಮ ವರ್ಗದ ಜನರು ತೀವ್ರ ಆಕ್ರೋಶ ಹೊರಹಾಕಿದ್ದರು. ಇದೀಗ ರಾಜ್ಯದಲ್ಲಿ ವಾರ್ಷಿಕ 1.20 ಲಕ್ಷ ರೂ. ಆದಾಯ ಹೊಂದಿರುವವರ ಬಿಪಿಎಲ್ ಕಾರ್ಡ್ ದಾರರ ಕಾರ್ಡ್ ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ. ಅಲ್ಲದೇ ಸಾಕಷ್ಟು

BPL ಕಾರ್ಡ್ ದಾರರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ| ವಾರ್ಷಿಕ 1.20 ಲಕ್ಷ ರೂ. ಆದಾಯ ಹೊಂದಿರುವವರ ಕಾರ್ಡ್ ರದ್ದು…! Read More »

ಹೆಡ್ ಕಾನ್‍ಸ್ಟೇಬಲ್ ಸರಕ್ಕೆ ಕನ್ನ ಹಾಕಿದ ಖದೀಮರು

ಮೈಸೂರು: ಹೆಡ್ ಕಾನ್‍ಸ್ಟೇಬಲ್ ಸರ ಕದ್ದು ಪರಾರಿಯಾಗಿರುವ ಘಟನೆ ನಗರದ ಸಂತ ಫಿಲೋಮಿನಾ ಚರ್ಚ್ ಬಳಿ ಗುರುವಾರ ರಾತ್ರಿ ನಡೆದಿದೆ. ಇಲಿಯಾಸ್ ಸರ ಕಳೆದುಕೊಂಡ ಹೆಡ್ ಕಾನ್‍ಸ್ಟೇಬಲ್. ಇವರು ಮಫ್ತಿಯಲ್ಲಿದ್ದಾಗ ಕಳ್ಳರು ಸರವನ್ನು ಕದ್ದು ಪರಾರಿಯಾಗಿದ್ದರು. 32 ಗ್ರಾಂ. ಚಿನ್ನದ ಸರ ಕಸಿದ ಕಳ್ಳರು, ನಂತರ ಓಡಲಾಗದೆ ಮಿಲಾದ್ ಪಾರ್ಕ್‍ನಲ್ಲಿ ಇಬ್ಬರು ಕಳ್ಳರು ಅಡಗಿದ್ದರು. ತಕ್ಷಣ ಸಾರ್ವಜನಿಕರು ಇಬ್ಬರನ್ನೂ ಹಿಡಿದು ಸರ ಸಮೇತ ಪೆÇಲೀಸರ ವಶಕ್ಕೆ ನೀಡಿದ್ದಾರೆ.ಲಷ್ಕರ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಯನ್ನು ಪೆÇಲೀಸರು

ಹೆಡ್ ಕಾನ್‍ಸ್ಟೇಬಲ್ ಸರಕ್ಕೆ ಕನ್ನ ಹಾಕಿದ ಖದೀಮರು Read More »