ರಾಜ್ಯ

ಅಕ್ರಮವಾಗಿ ರಸಗೊಬ್ಬರ ದಾಸ್ತಾನು:47 ಕೆ.ಜಿ.ಯೂರಿಯಾ ಚೀಲ ವಶಕ್ಕೆ

ಹಾಸನ: ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಅಧಿಕಾರಿಗಳು ದಾಳಿ ನಡೆಸಿ 47 ಕೆ.ಜಿ. ರಸಗೊಬ್ಬರವನ್ನು ವಶಪಡಿಸಿಕೊಂಡಿದ್ದಾರೆ.ಜಿಲ್ಲೆಯ ಅರಸೀಕೆರೆ ತಾಲೂಕಿನ ಅಣ್ಣಾಯಕನಹಳ್ಳಿ, ಕೆಳಗಲಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಜಯಶಂಕರ್ ಅವರ ಮನೆಯ ಮುಂಭಾಗ ಯೂರಿಯಾ ರಸಗೊಬ್ಬರವನ್ನು ಹೆಚ್ಚಿನ ಬೆಲೆಗೆ ರೈತರಿಗೆ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ದೂರು ಕೇಳಿ ಬಂದಿತ್ತು. ಈ ಖಚಿತ ಮಾಹಿತಿ ಮೇರೆಗೆ ಸಹಾಯಕ ಕೃಷಿ ನಿರ್ದೇಶಕ ಅಶೋಕ್, ರಸಗೊಬ್ಬರ ನಿರೀಕ್ಷಕ ಪ್ರಭಾವತಿ ಮತ್ತು ಪೆÇಲೀಸರ ತಂಡ […]

ಅಕ್ರಮವಾಗಿ ರಸಗೊಬ್ಬರ ದಾಸ್ತಾನು:47 ಕೆ.ಜಿ.ಯೂರಿಯಾ ಚೀಲ ವಶಕ್ಕೆ Read More »

ಮಂಗಳೂರು: ದುಷ್ಕರ್ಮಿಗಳ ತಂಡದಿಂದ ಯುವಕನಿಗೆ ಚೂರಿ ಇರಿತ

ಮಂಗಳೂರು: ವಕ್ತಿಯೊಬ್ಬನಿಗೆ ತಂಡವೊಂದು ಚೂರಿ ಇರಿದ ಘಟನೆ ಮಂಗಳೂರು ಹೊರವಲಯದ ಎದುರುಪದವು ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ.ಇರಿತಕ್ಕೊಳಗಾದವರನ್ನು ಬಾಗಲಕೋಟೆ ಮೂಲದ ನಿಂಗಣ್ಣ ಎಂದು ಗುರುತಿಸಲಾಗಿದೆ. ಚೂರಿ ಎದುರುಪದವು ನಿವಾಸಿ ದಿವಾಕರ್ ಯಾನೆ ದೀವ ತಂಡದಿಂದ ಈ ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ. ಮದ್ಯಪಾನದ ಅಮಲಿನಲ್ಲಿ ನಿಂಗಣ್ಣ ಹಾಗೂ ತಂಡದೊಂದಿಗೆ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿ ಕೊನೆಗೆ ಚೂರಿ ಇರಿಯುವ ಹಂತಕ್ಕೆ ಹೋಗಿದೆ.ಚೂರಿ ಇರಿತದ ಪರಿಣಾಮ ನಿಂಗಣ್ಣ ತಲೆಗೆ ಗಂಭೀರ ಗಾಯವಾಗಿದ್ದು

ಮಂಗಳೂರು: ದುಷ್ಕರ್ಮಿಗಳ ತಂಡದಿಂದ ಯುವಕನಿಗೆ ಚೂರಿ ಇರಿತ Read More »

ಮೈಸೂರು ವಿವಿ ಪದವಿ ಪರೀಕ್ಷೆಗಳು ಮುಂದೂಡಿಕೆ

ಮೈಸೂರು: ಶುಕ್ರವಾರದಿಂದ (ಸೆ.3) ಆರಂಭವಾಗಬೇಕಿದ್ದ ಮೈಸೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ಒಂದೇ ದಿನ ಎರಡು ವಿಷಯದ ಪರೀಕ್ಷೆ ನಿಗದಿಯಾಗಿತ್ತು. ಹೀಗಾಗಿ ಪರೀಕ್ಷಾ ದಿನಾಂಕ ಬದಲಿಸುವಂತೆ ವಿದ್ಯಾರ್ಥಿಗಳ ಮನವಿ ಸಲ್ಲಿಸಿದ್ದರು. ಹೀಗಾಗಿ ಶುಕ್ರವಾರದ ಬದಲು ಸೆಪ್ಟೆಂಬರ್ 13ರಿಂದ ಪದವಿ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆ ಮುಂದೂಡಿಕೆ ಬಗ್ಗೆ ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಜ್ಞಾನಪ್ರಕಾಶ್ ಅಧಿಕೃತ ಮಾಹಿತಿ ನೀಡಿದ್ದಾರೆ. “ಪದವಿ ವಿದ್ಯಾರ್ಥಿಗಳ ಹಿತದೃಷ್ಟಿ ನಮಗೆ ಮುಖ್ಯ. ಆದ್ದರಿಂದ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿದೆ. ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಆದಷ್ಟು ಬೇಗ

ಮೈಸೂರು ವಿವಿ ಪದವಿ ಪರೀಕ್ಷೆಗಳು ಮುಂದೂಡಿಕೆ Read More »

ಮರಬಿದ್ದು ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಸ್ಥಗಿತ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟ್ ನಲ್ಲಿ ಇಂದು ಮುಂಜಾನೆ ಮರ ಬಿದ್ದು ರಸ್ತೆ ತಡೆ ಉಂಟಾದ ಘಟನೆ ನಡೆದಿದೆ. ತಕ್ಷಣ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಕಾರದಿಂದ ಮರ ತೆರವುಗೊಳಿಸುವ ಕಾರ್ಯ ನಡೆಸಿದರು. ಅತೀ ಹೆಚ್ಚಿನ ವಾಹನಗಳು ಸಂಚರಿಸುವ ಮುಂಜಾನೆ ವೇಳೆ ಈ ಘಟನೆ ನಡೆದ ಕಾರಣ ಎರಡು ಕಡೆ ರಸ್ತೆ ತಡೆ ಉಂಟಾಯಿತು. ಮುಂಜಾನೆ 8.45 ರ ಸುಮಾರಿಗೆ ಮರ ಬಿದ್ದಿದ್ದು, ಇದೀಗ ತೆರವು ಕಾರ್ಯ ಯಶಸ್ವಿಯಾಗಿದೆ. ಸುಮಾರು 100

ಮರಬಿದ್ದು ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಸ್ಥಗಿತ Read More »

ಅಪ್ಘಾನ್ ನಲ್ಲಿ ಸಕ್ರಿಯರಾಗಿದ್ದಾರೆ ಭಾರತದ ಮೋಸ್ಟ್ ವಾಂಟೆಂಡ್ ಟೆರರಿಸ್ಟ್| 25 ಮಂದಿಯಲ್ಲಿ ಕೇರಳದವರೇ ಹೆಚ್ಚು…!

ಕಾಬೂಲ್, ಸೆ.1: ಭಾರತದಲ್ಲಿ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿರುವ 25ಕ್ಕೂ ಹೆಚ್ಚು ಮಂದಿ ಉಗ್ರರು ಅಪ್ಘಾನಿಸ್ತಾನದಲ್ಲಿ ಸಕ್ರಿಯರಾಗಿದ್ದಾರೆ ಎಂಬ ಮಾಹಿತಿಯನ್ನು ಗುಪ್ತಚರ ಮೂಲಗಳು ತಿಳಿಸಿವೆ. ಇತ್ತೀಚೆಗೆ ಕಾಬೂಲನ್ನು ತಾಲಿಬಾನಿಗಳು ವಶಕ್ಕೆ ಪಡೆಯುತ್ತಿದ್ದಂತೆ, ಅಲ್ಲಿನ ಜೈಲಿನಲ್ಲಿದ್ದ ಸಾವಿರಾರು ಕೈದಿಗಳನ್ನು ಹೊರಕ್ಕೆ ಬಿಡಲಾಗಿತ್ತು. ಅದರಲ್ಲಿ ಹಲವು ಭಾರತ ಮೂಲದವರೂ ಇದ್ದರು ಎನ್ನಲಾಗಿದ್ದು, ಇದೀಗ ಅಫ್ಘಾನಿಸ್ತಾನದ ನಂಗರ್ಹರ್ ಪ್ರಾಂತ್ಯದಲ್ಲಿ ಬೀಡುಬಿಟ್ಟಿದ್ದಾರೆ ಎನ್ನಲಾಗುತ್ತಿದೆ. 25 ಮಂದಿಯ ಪೈಕಿ ಹೆಚ್ಚಿನವರು ಭಾರತದ ಕೇರಳದವರು ಎನ್ನುವ ಮಾಹಿತಿಯನ್ನು ಗುಪ್ತಚರ ಪಡೆಗಳು ಹೇಳುತ್ತಿವೆ. ಕಳೆದ ವಾರ ಕಾಬೂಲ್

ಅಪ್ಘಾನ್ ನಲ್ಲಿ ಸಕ್ರಿಯರಾಗಿದ್ದಾರೆ ಭಾರತದ ಮೋಸ್ಟ್ ವಾಂಟೆಂಡ್ ಟೆರರಿಸ್ಟ್| 25 ಮಂದಿಯಲ್ಲಿ ಕೇರಳದವರೇ ಹೆಚ್ಚು…! Read More »

ರಾಜ್ಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಬ್‌ ಇನ್ಸ್​ಪೆಕ್ಟರ್​ ಹುದ್ದೆಗಳ ನೇಮಕಾತಿಗೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆ ದಿನಾಂಕವನ್ನು ತಾಂತ್ರಿಕ ಸಮಸ್ಯೆಯಿಂದ ಇಲಾಖೆ ಮುಂದೂಡಿದೆ. 545 ಸಬ್​ ಇನ್ಸ್​ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 26ಕ್ಕೆ ಲಿಖಿತ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದ ಅಂದು ಪರೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ. ಬದಲಿಗೆ ಅಕ್ಟೋಬರ್ 3ರ ಬೆಳಗ್ಗೆ 10.30 ರಿಂದ 12 ಗಂಟೆ ವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 1.30ರಿಂದ 3 ಗಂಟೆ ವರೆಗೆ ಪತ್ರಿಕೆ-2 ನಡೆಸಲು ನಿರ್ಧರಿಸಲಾಗಿದೆ ಎಂದು ಪೊಲೀಸ್

ರಾಜ್ಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರೀಕ್ಷೆ ಮುಂದೂಡಿಕೆ Read More »

ಅಡುಗೆ ಮನೆಗೆ ಮತ್ತೆ ಗ್ಯಾಸ್ ಬೆಲೆ ಏರಿಕೆ ಬಿಸಿ| ಸಿಲಿಂಡರ್ ಬೆಲೆ 25 ರೂ. ಹೆಚ್ಚಳ

ಬೆಂಗಳೂರು: ಪೆಟ್ರೋಲಿಯಂ ಕಂಪೆನಿಗಳು ಗ್ಯಾಸ್ ಸಿಲಿಂಡರ್ ಬೆಲೆಯನ್ನು 25 ರೂ. ಏರಿಕೆ ಮಾಡಿದ್ದು, ಸಾಮಾನ್ಯ ಜನರಿಗೆ ಕೊರೊನಾ ಸಂದರ್ಭದಲ್ಲಿ ಮತ್ತೊ ಹೊಡೆತ ನೀಡಿದೆ.ಇದರಿಂದಾಗಿ ರಾಜಧಾನಿ ದೆಹಲಿಯಲ್ಲಿ ಈಗ ಸಬ್ಸಿಡಿಯೇತರ ಅಡುಗೆ ಅನಿಲ ಬೆಲೆ 14.2 ಕೆಜೆ ತೂಕದ ಸಿಲೆಂಡರ್ ಗೆ 884 ರೂ. 50 ಪೈಸೆಯಾಗಿದೆ. ಹೊಸ ದರ ಇಂದೇ ಜಾರಿಗೆ ಬರಲಿದೆ. ಇನ್ನು 19 ಕೆಜಿ ಕಮರ್ಷಿಯಲ್ ಸಿಲೆಂಡರ್ ಬೆಲೆ 75 ರೂಪಾಯಿ ಹೆಚ್ಚಳವಾಗಿದ್ದು ಅದಕ್ಕೆ ಗ್ರಾಹಕರು ಸಾವಿರದ 693 ರೂಪಾಯಿಯಷ್ಟು ದೆಹಲಿಯಲ್ಲಿ ದರವಿದೆ.ಕಳೆದ 15

ಅಡುಗೆ ಮನೆಗೆ ಮತ್ತೆ ಗ್ಯಾಸ್ ಬೆಲೆ ಏರಿಕೆ ಬಿಸಿ| ಸಿಲಿಂಡರ್ ಬೆಲೆ 25 ರೂ. ಹೆಚ್ಚಳ Read More »

ಉಳ್ಳಾಲ| ಕಾರಿನ ನಂಬರ್ ಪ್ಲೇಟ್ ನಲ್ಲಿ ಕೊರಗಜ್ಜನ ಭಾವಚಿತ್ರಕ್ಕೆ ಪೊಲೀಸರಿಂದ ಆಕ್ಷೇಪ| ಪೊಲೀಸರ ನಡೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ| ಸ್ಥಳದಲ್ಲಿ ಬಿಗುವಿನ ವಾತಾವರಣ

ಮಂಗಳೂರು : ಕಾರಿನ ನಂಬರ್ ಪ್ಲೇಟ್‌ ಬಳಿ ಕೊರಗಜ್ಜನ ಭಾವಚಿತ್ರ ಇದೆ ಎಂದು ಆಕ್ಷೇಪಿಸಿದ ಪೊಲೀಸ್‌ ಸಿಬ್ಬಂದಿಯ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರ ಹೊರವಲಯದ ತೊಕ್ಕೊಟ್ಟು ಫ್ಲೈಓವರ್‌ ಬಳಿ ಇಂದು ನಡೆದಿದೆ. ನಗರದ ಸಂಚಾರಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರ ಮಾರುತಿ 800 ವಾಹನದಲ್ಲಿ ನೋಂದಣಿ ಸಂಖ್ಯೆಯ ಬಳಿ ಕೊರಗಜ್ಜನ ಭಾವಚಿತ್ರವಿತ್ತು. ಆ ಭಾವಚಿತ್ರ ತೆಗೆಯುವಂತೆ ಪೊಲೀಸ್‌ ಸಿಬ್ಬಂದಿ ಸೂಚಿಸಿದ್ದು, ಈ ವೇಳೆ ದೈವದ ಭಾವಚಿತ್ರ ತೆಗೆಯಲು ಕಾರಿನ ಮಾಲೀಕ ಹಾಗೂ

ಉಳ್ಳಾಲ| ಕಾರಿನ ನಂಬರ್ ಪ್ಲೇಟ್ ನಲ್ಲಿ ಕೊರಗಜ್ಜನ ಭಾವಚಿತ್ರಕ್ಕೆ ಪೊಲೀಸರಿಂದ ಆಕ್ಷೇಪ| ಪೊಲೀಸರ ನಡೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ| ಸ್ಥಳದಲ್ಲಿ ಬಿಗುವಿನ ವಾತಾವರಣ Read More »

ಬಾರಿಯಂಡ ದೀಪಕ್ ಜೋಯಪ್ಪರಿಗೆ ಜರ್ನಲಿಸಂನಲ್ಲಿ ಪಿಹೆಚ್.ಡಿ.

ಮಡಿಕೇರಿ: ಕೊಡಗಿನ ಮದೆನಾಡು ಗ್ರಾಮದ ಬಾರಿಯಂಡ ದೀಪಕ್ ಜೋಯಪ್ಪ ಅವರು ಸಂಶೋಧಸಿದ ’ಇಂಗ್ಲಿಷ್ ಮತ್ತು ಕನ್ನಡ ನ್ಯೂಸ್ ವೆಬ್‌ಸೈಟ್ಸ್: ಸ್ಟಡಿ ಆನ್ ದೇರ್ ಪೊಟೆನ್‌ಷ್ಯಾಲಿಟಿ ಆಂಡ್ ಸಸ್ಟೈನೇಬಿಲಿಟಿ’ ಎಂಬ ಮಹಾಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್(ಮಾಹೆ) ಸಂಸ್ಥೆಯು ಡಾಕ್ಟರೇಟ್ ನೀಡಿದೆ. ದೀಪಕ್ ಅವರು ಈ ಸಂಸ್ಥೆಯು ಕೊಡುವ ಪ್ರತಿಷ್ಠಿತ ’ಡಾ. ಟಿಎಂಎ ಪೈ’ ವಿದ್ಯಾರ್ಥಿ ವೇತನದಲ್ಲಿ ಸಂಶೋಧನೆ ನಡೆಸಿದ್ದರು. ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಂಸ್ಥೆಯ ಪ್ರೊಫೆಸರ್ ಮತ್ತು ನಿರ್ದೇಶಕರಾದ ಡಾ. ಪದ್ಮ ರಾಣಿ ಅವರ

ಬಾರಿಯಂಡ ದೀಪಕ್ ಜೋಯಪ್ಪರಿಗೆ ಜರ್ನಲಿಸಂನಲ್ಲಿ ಪಿಹೆಚ್.ಡಿ. Read More »

ಉಡುಪಿ| ಚೂರಿ‌ ಇರಿತಕ್ಕೊಳಗಾದ ಯುವತಿ‌ ಸಾವು| ಜೀವನ್ಮರಣ ಸ್ಥಿತಿಯಲ್ಲಿ ಭಗ್ನ ಪ್ರೇಮಿ| ಘಟನೆ ನಡೆದಿದ್ದು ಯಾಕೆ? ಇಲ್ಲಿದೆ ಫುಲ್ ಡೀಟೈಲ್

ಉಡುಪಿ: ನಗರದ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯುವಕನೋರ್ವ ಯುವತಿಗೆ ಚೂರಿ ಇರಿತವನ್ನು ಮಾಡಿದ್ದು ಬಳಿಕ ತಾನು ಕೂಡ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಯುವತಿ ಮೃತಪಟ್ಟಿದ್ದಾಳೆ. ಯುವತಿಯನ್ನು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ ಜೀವನ್ಮರಣ ಸ್ಥಿತಿಯಲ್ಲಿ ಹೋರಾಟ‌ ನಡೆಸುತ್ತಿದ್ದಾನೆ. ಅಂಬಾಗಿಲು ಸಮೀಪದ ಕಕ್ಕುಂಜೆ ನಿವಾಸಿ ವಿಠಲ ಭಂಡಾರಿ ಹಾಗೂ ಸುಶೀಲಾ ದಂಪತಿಯ ಪುತ್ರಿ ಸೌಮ್ಯಶ್ರೀ(26) ಕೊಲೆಯಾಗಿದ್ದು, ಕೃತ್ಯ ಎಸಗಿರುವ ಆರೋಪಿ ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್(26)

ಉಡುಪಿ| ಚೂರಿ‌ ಇರಿತಕ್ಕೊಳಗಾದ ಯುವತಿ‌ ಸಾವು| ಜೀವನ್ಮರಣ ಸ್ಥಿತಿಯಲ್ಲಿ ಭಗ್ನ ಪ್ರೇಮಿ| ಘಟನೆ ನಡೆದಿದ್ದು ಯಾಕೆ? ಇಲ್ಲಿದೆ ಫುಲ್ ಡೀಟೈಲ್ Read More »