ಡಿ.31ರ ಕರ್ನಾಟಕ ಬಂದ್ ರದ್ದು| ಮತ್ತೊಂದು ದಿನ ನಿಗದಿಗೊಳಿಸಿದ ವಾಟಾಳ್ ನಾಗರಾಜ್| ಸಿಎಂ ಮನವೊಲಿಕೆ ಯಶಸ್ವಿ|
ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ವಾಪಸ್ ಪಡೆದಿದ್ದಾರೆ. ಬದಲಿಗೆ ಮತ್ತೊಂದು ದಿನಾಂಕವನ್ನು ಫಿಕ್ಸ್ ಮಾಡಿದ್ದಾರೆ. ರಾಜ್ಯದಲ್ಲಿ ಎಂಇಎಸ್ ಬ್ಯಾನ್ ಮಾಡುವಂತೆ ಒತ್ತಾಯಿಸಿ ನಾಳೆ ಅಂದ್ರೆ ಡಿಸೆಂಬರ್ 31ರಂದು ಕರ್ನಾಟಕ ಬಂದ್ಗೆ ಕರೆ ಕೊಟ್ಟಿದ್ದರು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನವಿ ಮೇರೆಗೆ ವಾಟಾಳ್ ನಾಗರಾಜ್ ಬಂದ್ ವಾಪಸ್ ಪಡೆದುಕೊಂಡಿದ್ದು, ಜನವರಿ 22ರಂದು ಕರ್ನಾಟಕ ಬಂದ್ ಮಾಡುತ್ತೇವೆ ಎಂದು ವಾಟಾಳ್ ಸಿಎಂ ಭೇಟಿ ಬಳಿಕೆ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದರು. ಕರ್ನಾಟಕ […]









