ರಾಜ್ಯ

ವೀಕೆಂಡ್ ಕರ್ಪ್ಯೂ ಹಿನ್ನೆಲೆ| ಮಂಗಳೂರು ವಿ.ವಿ ವಾರಾಂತ್ಯ ಪರೀಕ್ಷೆಗಳು ಮುಂದೂಡಿಕೆ

ಮಂಗಳೂರು: ಕೋವಿಡ್ ನಿಯಂತ್ರಣದ ಹಿನ್ನಲೆಯಲ್ಲಿ ಜಿಲ್ಲಾಡಳಿತ ವಾರಾಂತ್ಯ ಕರ್ಫ್ಯೂವನ್ನು ಮುಂದುವರಿಸುವ ನಿರ್ಧಾರ ತೆಗೆದುಕೊಂಡಿದ್ದು ಈ ಹಿನ್ನೆಲೆಯಲ್ಲಿ ಆ.14ರ ಶನಿವಾರ ಹಾಗೂ ಆ.28ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಉಳಿದಂತೆ ಯಾವುದೇ ಪರೀಕ್ಷೆಗಳಲ್ಲಿ ಬದಲಾವಣೆ ಇರುವುದಿಲ್ಲ. ಈ ಹಿಂದೆ ನಿಗದಿಪಡಿಸಿದ ವೇಳಾಪಟ್ಟಿಯಂತೆ ಬಾಕಿ ಉಳಿದ ಪರೀಕ್ಷೆಗಳು ನಡೆಯಲಿದ್ದು ಯಾವುದೇ ಬದಲಾವಣೆ ಇರುವುದಿಲ್ಲ. ವಾರಾಂತ್ಯದ ಪರೀಕ್ಷೆಗಳನ್ನು ಮಾತ್ರ ಬದಲಾವಣೆ ಮಾಡಿರುವುದಾಗಿ ವಿ.ವಿ ಪ್ರಕಟಣೆ ತಿಳಿಸಿದೆ.

ವೀಕೆಂಡ್ ಕರ್ಪ್ಯೂ ಹಿನ್ನೆಲೆ| ಮಂಗಳೂರು ವಿ.ವಿ ವಾರಾಂತ್ಯ ಪರೀಕ್ಷೆಗಳು ಮುಂದೂಡಿಕೆ Read More »

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಮಸೀದಿಯಲ್ಲಿ ಶ್ರಮದಾನ

ಶನಿವಾರಸಂತೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೊಡ್ಲಿಪೇಟೆ ಸ್ವಸಹಾಯ ಸಂಘದ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕೊಡ್ಲಿಪೇಟೆಯ ಜಾಮೀಯಾ ಮಸ್ಜಿದ್‍ನಲ್ಲಿ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಯಿತು. ಈ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೊಡ್ಲಿಪೇಟೆ ವಲಯ ಮೇಲ್ವೀಚಾರಕ ಭರತ್‍ಕುಮಾರ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಹಲವಾರು ಕಾರ್ಯಕ್ರಮಗಳು ಅನುಷ್ಠಾನಗೊಂಡಿದ್ದು ರಾಜ್ಯದಲ್ಲಿ ಸ್ವಸಹಾಯ ಸಂಘಗಳ ಮೂಲಕ ಜನಮನ್ನಣೆಗೊಂಡಿದೆ ಎಂದರು. ಕಳೆದ ಮತ್ತು ಪ್ರಸ್ತುತ ವರ್ಷ ಕೋವಿಡ್ ಸಂಧಿಘ್ನ ಪರಿಸ್ಥಿತಿಯಲ್ಲಿ ಬಡವರಿಗೆ ಆಹಾರ ಕಿಟ್ ವಿತರಣೆ ಮಾಡುವ ಮೂಲಕ ಸಮಾಜ

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಮಸೀದಿಯಲ್ಲಿ ಶ್ರಮದಾನ Read More »

ನಾನು ಹೇಳಿದ್ದು ಹೌದು ತಪ್ಪು ಎಂದು ಕ್ಷಮೆಯಾಚಿಸಿದ ಈಶ್ವರಪ್ಪ

ಬೆಳಗಾವಿ: ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಬಳಸಿದಕ್ಕೆ ಸಚಿವ ಈಶ್ವರಪ್ಪ “ನಾನು ಆ ಪದ ಬಳಸಬಾರದಿತ್ತು, ಆದರೆ ಬಳಸಿದ್ದೇಕ್ಕೆ ಕ್ಷಮೆಯನ್ನು ಯಾಚಿಸಿದ್ದೇನೆ” ಎಂದು ಕ್ಷಮೆಯಸಿದ್ದಾರೆ. ಕಾಂಗ್ರೆಸ್‍ನವರ ವಿರುದ್ಧ ಅಶ್ಲೀಲ ಶಬ್ದ ಬಳಸಿದ ವಿಚಾರವಾಗಿ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾನು ಹೇಳಿದ್ದು ಹೌದು, ಆ ಒಂದು ಪದ ಬಳಸಿದ್ದು ತಪ್ಪು. ಸಿಟ್ಟಿನ ಭರದಲ್ಲಿ ಹೇಳಿ ಆ ಪದವನ್ನು ಹಿಂಪಡೆದುಕೊಂಡಿದ್ದೇನೆ. ಆದರೆ ಸುಲಭ್ ಶೌಚಾಲಯಕ್ಕೆ ನರೇಂದ್ರ ಮೋದಿ ಅವರ ಹೆಸರಿಡಬೇಕು ಎಂದು ಹೇಳಿದನ್ನು ಕಾಂಗ್ರೆಸ್ ಅವರು ಒಪ್ಪುತ್ತಾರಾ? ಕಾಂಗ್ರೆಸ್ ಅವರು

ನಾನು ಹೇಳಿದ್ದು ಹೌದು ತಪ್ಪು ಎಂದು ಕ್ಷಮೆಯಾಚಿಸಿದ ಈಶ್ವರಪ್ಪ Read More »

ಬೆಳ್ತಂಗಡಿ : ಅಜ್ಜನ ಜೊತೆಗಿದ್ದ ಮಗು ನಾಪತ್ತೆ ಪ್ರಕರಣ ಎರಡು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆ

ಬೆಳ್ತಂಗಡಿ: ಇಲ್ಲಿನ ಸುಲ್ಕೇರಿ ಗ್ರಾಮದಲ್ಲಿ ಆ.10 ರ ಮಧ್ಯಾಹ್ನ ನಾಪತ್ತೆಯಾಗಿದ್ದ ಎರಡು ವರ್ಷದ ಹೆಣ್ಣು ಮಗು ಇಂದು ಶವವಾಗಿ ಪತ್ತೆಯಾಗಿದೆ. ಜಂತಿಗೂಳಿಯ ಪರಾರಿ ನಿವಾಸಿ ಸಂಜೀವ ಶೆಟ್ಟಿ ಅವರ ಪುತ್ರಿ ಸುಚಿತ್ರ ಮತ್ತು ಸುಭಾಷ್ ದಂಪತಿಯು ತಮ್ಮ ಎರಡು ವರ್ಷದ ಹೆಣ್ಣು ಮಗುವಿನೊಂದಿಗೆ ಸುಲ್ಕೇರಿ ಯ ತವರು ಮನೆಯಲ್ಲಿ ವಾಸವಿದ್ದರು. ಮಂಗಳವಾರ ಮಧ್ಯಾಹ್ನ ಸುಚಿತ್ರಾ ಅವರು ಮಗುವನ್ನು ಅಜ್ಜನೊಂದಿಗೆ ಮನೆಯಲ್ಲಿ ಬಿಟ್ಟು ತಾಯಿಯೊಂದಿಗೆ ಹುಲ್ಲು ತರಲು ಎಂದು ತೋಟಕ್ಕೆ ಹೋಗಿದ್ದರು ಎನ್ನಲಾಗಿದೆ. ಹಿಂತಿರುಗಿ ಬರುವಷ್ಟರಲ್ಲಿ ಮಗು ಕಾಣಿಸದೆ

ಬೆಳ್ತಂಗಡಿ : ಅಜ್ಜನ ಜೊತೆಗಿದ್ದ ಮಗು ನಾಪತ್ತೆ ಪ್ರಕರಣ ಎರಡು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆ Read More »

ಬ್ಯಾಂಕ್ ನೌಕರರಿಗೆ ಗುಡ್ ನ್ಯೂಸ್| ವಾರ್ಷಿಕ ಸರ್ಪ್ರೈಜ್ ರಜೆ ಗಿಪ್ಟ್ ನೀಡಿದ ಆರ್ ಬಿ ಐ|

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಉದ್ಯೋಗಿಗಳಿಗೆ ವಾರ್ಷಿಕ 10 ದಿನಗಳ ವಾರ್ಷಿಕ ರಜೆಯ ಸರ್ಪ್ರೈಜ್ ಗಿಫ್ಟ್ ನೀಡಿದೆ. ವಾಣಿಜ್ಯ ಬ್ಯಾಂಕುಗಳು, ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳು ಮತ್ತು ಸಹಕಾರಿ ಬ್ಯಾಂಕುಗಳಿಗೆ ಅನ್ವಯವಾಗುವಂತೆ ಪ್ರತಿ ವರ್ಷ ಕನಿಷ್ಠ 10 ದಿನಗಳ ಅನಿರೀಕ್ಷಿತ ನೀಡಬಹುದಾಗಿದೆ. ಟ್ರೆಜರಿ ಆಪರೇಷನ್, ಕರೆನ್ಸಿ, ರಿಸ್ಕ್ ಮಾಡೆಲಿಂಗ್ ಮೊದಲಾದ ಅತಿಸೂಕ್ಷ್ಮ ವಿಭಾಗಗಳಲ್ಲಿ ಕೆಲಸ ಮಾಡುವವರಿಗೆ ಪ್ರತಿವರ್ಷ 10 ದಿನಗಳ ರಜೆ ನೀಡಲಾಗುವುದು. ಇಂತಹ ರಜೆಗಳನ್ನು ನೀಡುವ ಬಗ್ಗೆ ಮೊದಲೇ ತಿಳಿಸುವುದಿಲ್ಲ. ಅನಿರೀಕ್ಷಿತ ರಜೆ ನೀಡಲಾಗುತ್ತದೆ. ಬ್ಯಾಂಕ್

ಬ್ಯಾಂಕ್ ನೌಕರರಿಗೆ ಗುಡ್ ನ್ಯೂಸ್| ವಾರ್ಷಿಕ ಸರ್ಪ್ರೈಜ್ ರಜೆ ಗಿಪ್ಟ್ ನೀಡಿದ ಆರ್ ಬಿ ಐ| Read More »

ಪಿಯುಸಿ ದಾಖಲಾತಿಗೆ ಗ್ರೀನ್ ಸಿಗ್ನಲ್ | ಸುತ್ತೋಲೆ ಹೊರಡಿಸಿದ ಪ.ಪೂ.ಶಿಕ್ಷಣ ಇಲಾಖೆ

ಬೆಂಗಳೂರು: ಎಸ್‌ಎಸ್‌ಎಲ್ಸಿ ಪರೀಕ್ಷೆ ಫಲಿತಾಂಶದ ಬೆನ್ನಲ್ಲೇ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಆಗಸ್ಟ್ 30 ರ ವರೆಗೆ ದಂಡ ಶುಲ್ಕವಿಲ್ಲದೆ ದಾಖಲಾತಿಗೆ ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 1 ರಿಂದ 11 ರವರೆಗೆ ವಿಳಂಬ ಶುಲ್ಕ ನೀಡಿ ಪ್ರವೇಶ ಪಡೆಯಬಹುದು. 670 ರೂಪಾಯಿ ವಿಳಂಬ ಶುಲ್ಕ ಪಾವತಿಸಿ ದಾಖಲಾತಿ ಮಾಡಿಕೊಳ್ಳಬಹುದಾಗಿದೆ. ಸೆ. 11 ರವರೆಗೆ ಪ್ರವೇಶ ಪಡೆಯದವರಿಗೆ 2890 ರೂಪಾಯಿ ವಿಶೇಷ ದಂಡದೊಂದಿಗೆ ಪ್ರವೇಶ ನೀಡಲಾಗುವುದು. 2890 ರೂಪಾಯಿ ದಂಡ ಪಾವತಿಸಿ ಸೆಪ್ಟೆಂಬರ್ 13 ರಿಂದ 25ರವರೆಗೆ ದಾಖಲಾತಿ

ಪಿಯುಸಿ ದಾಖಲಾತಿಗೆ ಗ್ರೀನ್ ಸಿಗ್ನಲ್ | ಸುತ್ತೋಲೆ ಹೊರಡಿಸಿದ ಪ.ಪೂ.ಶಿಕ್ಷಣ ಇಲಾಖೆ Read More »

ಕ್ರೀಡಾ ಪ್ರೇಮಿಗಳಿಗೆ ಗುಡ್ ನ್ಯೂಸ್|ಒಲಿಂಪಿಕ್ ನಲ್ಲಿ ಇನ್ಮುಂದೆ ಕ್ರಿಕೆಟ್ ಕೂಡಾ‌ ಸೇರ್ಪಡೆ|

ಹಲವು ವರ್ಷಗಳಿಂದ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿರುವ ಘಳಿಗೆ 2028ರಲ್ಲಿ ಕೂಡಿಬರುತ್ತಿದ್ದು, 2028ರಲ್ಲಿ ಲಾಸ್​ ಎಂಜಲೀಸ್​ನಲ್ಲಿ ನಡೆಯಲಿರುವ ಒಲಿಂಪಿಕ್ಸ್​​ನಲ್ಲಿ ಕ್ರಿಕೆಟ್ ಸೇರ್ಪಡೆ ಮಾಡಲು ಬಿಡ್​ ಮಾಡಿರೋದಾಗಿ ಐಸಿಸಿ ಹೇಳಿದೆ. ಐಸಿಸಿ ಈಗಾಗಲೇ ವರ್ಕಿಂಗ್ ಗ್ರೂಪ್​ನ್ನು ರಚನೆ ಮಾಡಿದೆ. ಈ ಮೂಲಕ ಕ್ರಿಕೆಟ್ ಪ್ರಿಯರಿಗೆ ಭರ್ಜರಿಗೆ ಗುಡ್ ನ್ಯೂಸ್ ನೀಡಿದೆ.. ಇನ್ನೂ 2028ರ ಲಾಸ್ ​ಏಂಜಲೀಸ್​ ಒಲಂಪಿಕ್ ​ನಲ್ಲಿ ಕ್ರಿಕೆಟ್​ ಸೇರ್ಪಡೆ ಮಾಡಿದಲ್ಲಿ ಟೀಂ ಇಂಡಿಯಾ ಕೂಡ ಸ್ಪರ್ಧೆಗೆ ಇಳಿಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ, ಹೇಳಿದ್ರು. ಈ

ಕ್ರೀಡಾ ಪ್ರೇಮಿಗಳಿಗೆ ಗುಡ್ ನ್ಯೂಸ್|ಒಲಿಂಪಿಕ್ ನಲ್ಲಿ ಇನ್ಮುಂದೆ ಕ್ರಿಕೆಟ್ ಕೂಡಾ‌ ಸೇರ್ಪಡೆ| Read More »

ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ

ಬೆಂಗಳೂರು: ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಸಹಕಾರಿ ಬ್ಯಾಂಕ್ ಗೆ ನೀಡಿದ್ದ 5.2ಕೋಟಿ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಸಹಕಾರಿ ಬ್ಯಾಂಕ್ ಖಾಸಗಿ ದೂರು ದಾಖಲಿಸಿತ್ತು. ಆದರೆ ಬ್ಯಾಂಕ್ ಪರ ವಕೀಲರು ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಚಿಕ್ಕೋಡಿ ನ್ಯಾಯಾಲಯ ಪ್ರಕರಣ ವಜಾಗೊಳಿಸಿ ಆದೇಶ ನೀಡಿತ್ತು. ಈ ಆದೇಶ

ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ Read More »

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ನಿಷೇಧ – ಸಿ ಎಸ್ ರವಿ‌ ಆದೇಶ

ಬೆಂಗಳೂರು : ಸರ್ಕಾರದ ಸಭೆ -‌ ಸಮಾರಂಭಗಳಲ್ಲಿ ಹೂಗುಚ್ಚ, ಹಾರ-ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿ ಇತ್ಯಾದಿಗಳನ್ನು ನೀಡುವುದನ್ನು ನಿಷೇಧಿಸಿ‌ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು, ಈ ಮೂಲಕ ನಿರ್ದೇಶಿಸಿದೆ. ಈ ನಿರ್ದೇಶನವನ್ನು

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ನಿಷೇಧ – ಸಿ ಎಸ್ ರವಿ‌ ಆದೇಶ Read More »

ಕೋವಿಡ್ ಏರಿಕೆ ಪ್ರಭಾವ| ಆ.15ರಿಂದ ರಾಜ್ಯದಲ್ಲಿ ಮತ್ತೆ ಕರ್ಪ್ಯೂ ಭೀತಿ…?

ಬೆಂಗಳೂರು: ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದ ರಾಜ್ಯಕ್ಕೆ ವಲಸಿಗರ ಪ್ರಮಾಣ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಆ.15ರ ಸ್ವಾತಂತ್ರ್ಯ ದಿನಾಚರಣೆ ನಂತರ ರಾಜಧಾನಿ ಬೆಂಗಳೂರು ಸೇರಿದಂತೆ ನೆರೆ ರಾಜ್ಯಗಳಿಗೆ ಗಡಿ ಹಂಚಿಕೊಂಡಿರುವ ಎಂಟು ಜಿಲ್ಲೆಗಳು ಹಾಗೂ ಕೋವಿಡ್-19 ಹೆಚ್ಚಾಗಿರುವ ಜಿಲ್ಲೆಗಳಲ್ಲೂ ಬಿಗಿಕ್ರಮ ಜಾರಿಯಾಗುವ ಸಂಭವವಿದೆ. ಈ ಬಗ್ಗೆ ಈಗಾಗಲೇ ಸುಳಿವು ಕೊಟ್ಟಿರುವ ಕಂದಾಯ ಸಚಿವ ಆರ್.ಅಶೋಕ್ ಅವರು ಆ.15ರ ನಂತರ ಬೆಂಗಳೂರು ಮತ್ತಿತರ ಕಡೆ ಕೆಲವು ಕಠಿಣ ನಿಯಮಗಳನ್ನು

ಕೋವಿಡ್ ಏರಿಕೆ ಪ್ರಭಾವ| ಆ.15ರಿಂದ ರಾಜ್ಯದಲ್ಲಿ ಮತ್ತೆ ಕರ್ಪ್ಯೂ ಭೀತಿ…? Read More »