ರಾಜ್ಯ

‘ರಾಜ್ಯದಲ್ಲಿ ಲವ್ ಜಿಹಾದ್ ಕಾಯ್ದೆ ಜಾರಿಗೆ ಚಿಂತನೆ’ ಸಚಿವ ಸುನಿಲ್ ಕುಮಾರ್

ಬೆಳಗಾವಿ : ರಾಜ್ಯದಲ್ಲಿ ಲವ್ ಜಿಹಾದ್ ನಿಷೇಧ ಕಾಯ್ದೆ ಜಾರಿಗೆ ತರುತ್ತೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾಯ್ದೆ ಜಾರಿಗೆ ತರುತ್ತೇವೆ. ಗೋಹತ್ಯೆ ನಿಷೇಧ ತರುವುದಾಗಿ ಹೇಳಿದ್ದೇವು. ತಂದಿದ್ದೇವೆ. ಅದೇ ರೀತಿ ಮತಾಂತರ ನಿಷೇಧ ಕಾಯ್ದೆ ತರುತ್ತೇವೆ ಎಂದು ಹೇಳಿದ್ದೇವೆ. ಅದನ್ನು ಜಾರಿಗೆ ತರುತ್ತಿದ್ದೇವೆ. ಇದೀಗ ಲವ್ ಜಿಹಾದ್ ವಿರುದ್ಧ ಕಾಯ್ದೆ ಜಾರಿಗೆ ತರುತ್ತೇವೆ ಎಂದರು. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್ […]

‘ರಾಜ್ಯದಲ್ಲಿ ಲವ್ ಜಿಹಾದ್ ಕಾಯ್ದೆ ಜಾರಿಗೆ ಚಿಂತನೆ’ ಸಚಿವ ಸುನಿಲ್ ಕುಮಾರ್ Read More »

ವಾಯುಭಾರ ಕುಸಿತ| ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ|

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಡಿ.15ರವರೆಗೆ ಮಳೆ ಸುರಿಯಲಿದೆ. ಕರ್ನಾಟಕದ ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ತುಮಕೂರು, ರಾಮನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ವಾಯುಭಾರ ಕುಸಿತ| ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ| Read More »

ಕೇರಳದಲ್ಲೂ ಪತ್ತೆಯಾಯ್ತು ಮೊದಲ ‘ಓಮಿಕ್ರಾನ್’| 37 ಕ್ಕೆ ಏರಿಕೆಯಾದ ಪ್ರಕರಣ

ಕೊಚ್ಚಿ: ಕೇರಳವು ಕೊಚ್ಚಿಯಿಂದ ಒಮಿಕ್ರಾನ್ ಕೋವಿಡ್ -19 ರೂಪಾಂತರದ ಮೊದಲ ಪ್ರಕರಣವನ್ನು ವರದಿ ಮಾಡಿದೆ. ಸೋಂಕಿತ ರೋಗಿಯು ಯುಕೆಯಿಂದ ಡಿಸೆಂಬರ್ 6 ರಂದು ಕೇರಳಕ್ಕೆ ಹಿಂದಿರುಗಿದ್ದಾರೆ. ಅವರಿಗೆ ಡಿಸೆಂಬರ್ 8 ರಂದು ಕೋವಿಡ್ -19 ಟೆಸ್ಟ್‌ ಮಾಡಿಸಲಾಗಿದ್ದು, ಅದರ ವರದಿ ಇಂದು,ಕೇರಳದ ಆರೋಗ್ಯ ಸಚಿವ ವೀಣಾ ಜಾರ್ಜ್ ಹೇಳಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿನ ಹೊಸ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಮತ್ತೊಂದು ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಕರ್ನಾಟಕದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ

ಕೇರಳದಲ್ಲೂ ಪತ್ತೆಯಾಯ್ತು ಮೊದಲ ‘ಓಮಿಕ್ರಾನ್’| 37 ಕ್ಕೆ ಏರಿಕೆಯಾದ ಪ್ರಕರಣ Read More »

ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಲ್ಕದಲ್ಲಿ ಹೆಚ್ಚಳ

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಮಾರ್ಗಸೂಚಿ ಅನುಸರಿಸಿದ್ದರಿಂದ ಹೊರೆಯಾದ ವೆಚ್ಚ ಸರಿದೂಗಿಸಲು ಹಾಗೂ ಪರೀಕ್ಷಾ ಪ್ರಕ್ರಿಯೆ ವೆಚ್ಚ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎಸ್ ಎಸ್‌ಎಲ್‌ಸಿ ಪರೀಕ್ಷಾ ಶುಲ್ಕವನ್ನು 100 ರು. ಹೆಚ್ಚಿಸಿ ಶಿಕ್ಷಣ ಇಲಾಖೆ ದೇಶ ಹೊರಡಿಸಿದೆ. ಅದರಿಂದಾಗಿ ಶುಲ್ಕ 485 ರು.ನಿಂದ 585 ರು.ಗೆ ಏರಿಕೆಯಾಗಿದೆ. ಪುನರಾವರ್ತಿತ ಶಾಲಾ, ಖಾಸಗಿ ಅಭ್ಯರ್ಥಿಗಳು ಒಂದು ವಿಷಯಕ್ಕೆ ಕಟ್ಟಬೇಕಿದ್ದ ಶುಲ್ಕವನ್ನು 320 ರಿಂದ 370 ಕ್ಕೆ ಹೆಚ್ಚಳ ಮಾಡಲಾಗಿದೆ. 2 ವಿಷಯಕ್ಕೆ 386 ರು. ಪಾವತಿಸಬೇಕಿದ್ದ ವಿದ್ಯಾರ್ಥಿಗಳು 461 ರು. ಹಾಗೂ

ಎಸ್ಸೆಸ್ಸೆಲ್ಸಿ ಪರೀಕ್ಷೆ ಶುಲ್ಕದಲ್ಲಿ ಹೆಚ್ಚಳ Read More »

ಸಿಎಂ ಬಸವರಾಜ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಕಾಡಿದ ಲ್ಯಾಂಡಿಂಗ್ ಸಮಸ್ಯೆ

ಹುಬ್ಬಳ್ಳಿ: ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಲ್ಯಾಂಡಿಂಗ್ ಸಮಸ್ಯೆಯಾಗಿದೆ. ಇದರಿಂದಾಗಿ ಅರ್ಧ ಗಂಟೆ ವಿಮಾನ ಆಗಸದಲ್ಲಿ ಸುತ್ತು‌ ಹೊಡೆದಿದೆ. ಲ್ಯಾಂಡಿಂಗ್ ಗೆ ಕ್ಲಿಯರೆನ್ಸ್ ಸಿಗದ ಕಾರಣ ಅರ್ಧ ಗಂಟೆಯಿಂದ ವಿಮಾನ ಹಾರಾಟ ನಡೆಸಿದೆ. ದಟ್ಟ ಮಂಜು ಆವರಿಸಿದ ಹಿನ್ನೆಲೆಯಲ್ಲಿ ಈ ಸಮಸ್ಯೆ ಎದುರಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದು, ಆದರೆ ದಟ್ಟ ಮಂಜು ಸಮಸ್ಯೆಯ ಕಾರಣ ಆಕಾಶದಲ್ಲಿ ವಿಮಾನ

ಸಿಎಂ ಬಸವರಾಜ ಬೊಮ್ಮಾಯಿ ಪ್ರಯಾಣಿಸುತ್ತಿದ್ದ ವಿಮಾನಕ್ಕೆ ಕಾಡಿದ ಲ್ಯಾಂಡಿಂಗ್ ಸಮಸ್ಯೆ Read More »

ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ| ವಿದ್ಯಾರ್ಥಿಗಳೇ ಈ ಮಾಹಿತಿ ಖಂಡಿತಾ ತಿಳ್ಕೊಳ್ಳಿ

ಬೆಂಗಳೂರು : ಈ ಬಾರಿ ಎಸ್‌ಎಸ್ ಎಲ್ ಸ(SSLC exam) ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಈ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲು ತೀರ್ಮಾನಿಸಿದೆ. ರಾಜ್ಯದಲ್ಲಿ 10 ನೇ ತರಗತಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಈ ಬಾರಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲಾಗಿದೆ. ಹೀಗಾಗಿ ವಿದ್ಯಾರ್ಥಿಗಳು ವಿವರಣಾತ್ಮಕ ಉತ್ತರಗಳನ್ನು ಬರೆಯಲು ತಯಾರಿ ಮಾಡಬೇಕಾಗುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2021 ಬೋರ್ಡ್ ಪರೀಕ್ಷೆಗಳಲ್ಲಿ ಅಳವಡಿಸಲಾದ ಬಹು

ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ| ವಿದ್ಯಾರ್ಥಿಗಳೇ ಈ ಮಾಹಿತಿ ಖಂಡಿತಾ ತಿಳ್ಕೊಳ್ಳಿ Read More »

ಇಂದು ಪರಿಷತ್ ಚುನಾವಣೆ| 25 ಸ್ಥಾನಕ್ಕೆ 90 ಅಭ್ಯರ್ಥಿಗಳು ಕಣದಲ್ಲಿ| ಡಿ. 14ರಂದು ಫಲಿತಾಂಶ

ಬೆಂಗಳೂರು: ಇಪ್ಪತ್ತು ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಇಂದು (ಡಿ.9) ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಒಟ್ಟು 90 ಅಭ್ಯರ್ಥಿಗಳು ಕಣದಲ್ಲಿದ್ದು, ಡಿಸೆಂಬರ್‌ 14ರಂದು ಫಲಿತಾಂಶ ಹೊರ ಬರಲಿದೆ. ಬುಧವಾರ ಸಂಜೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಗುರುವಾರ ಮತದಾರರನ್ನು ನೇರವಾಗಿ ಭೇಟಿಯಾಗಿ ಮತ ಯಾಚಿಸುವ ಕೊನೆಯ ಕ್ಷಣದ ಕಸರತ್ತು ನಡೆಯಿತು. ನವೆಂಬರ್‌ 16ರಿಂದ ಚುನಾವಣಾ ಪ್ರಕ್ರಿಯೆ ಆರಂಭವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ತಲಾ 20 ಕ್ಷೇತ್ರಗಳಲ್ಲಿ ಪೈಪೋಟಿಯಲ್ಲಿವೆ.

ಇಂದು ಪರಿಷತ್ ಚುನಾವಣೆ| 25 ಸ್ಥಾನಕ್ಕೆ 90 ಅಭ್ಯರ್ಥಿಗಳು ಕಣದಲ್ಲಿ| ಡಿ. 14ರಂದು ಫಲಿತಾಂಶ Read More »

ನೈಟ್ ಕರ್ಪ್ಯೂ, ಶಾಲೆಗಳ ಬಂದ್ ಸದ್ಯಕ್ಕಿಲ್ಲ| ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ಕೊರೊನಾ ರೂಪಾಂತರಿ ತಳಿ ಓಮಿಕ್ರಾನ್ ಕುರಿತು ಜನರು ಆತಂಕಗೊಳ್ಳುವ ಅವಶ್ಯಕತೆ ಇಲ್ಲ. ಎಲ್ಲರೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸದ್ಯಕ್ಕೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವುದಿಲ್ಲ. ವಾರದ ಬಳಿಕ ಈ ಕುರಿತು ಪರಿಸ್ಥಿತಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು ನೈಟ್ ಕರ್ಫ್ಯೂ ಸದ್ಯಕ್ಕಿಲ್ಲ, ಒಂದು ವಾರದ ಬಳಿಕ ನಿರ್ಧಾರ ಮಾಡಲಾಗುವುದು. ನರ್ಸಿಂಗ್ ವಿದ್ಯಾರ್ಥಿಗಳಿಗೆ ಎರಡು ಡೋಸ್ ಕಡ್ಡಾಯ. ಕ್ರಿಸ್ಮಸ್, ಹೊಸ

ನೈಟ್ ಕರ್ಪ್ಯೂ, ಶಾಲೆಗಳ ಬಂದ್ ಸದ್ಯಕ್ಕಿಲ್ಲ| ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ Read More »

ರಾಜ್ಯದಲ್ಲಿ ಕೊರೊನಾ ಹೆಚ್ಚಳ| ಇಂದು‌ ಸಿಎಂ‌ ನೇತ್ರತ್ವದಲ್ಲಿ ಸಚಿವ ಸಂಪುಟ ಸಭೆ| ನೈಟ್ ಕರ್ಪ್ಯೂ,ಹೊಸ ಮಾರ್ಗಸೂಚಿ ಪ್ರಕಟ ಸಾಧ್ಯತೆ|

ಬೆಂಗಳೂರು : ಕೊರೊನಾ ರೂಪಾಂತರ ಒಮಿಕ್ರಾನ್ ಸೋಂಕಿನ ಆತಂಕ ಮತ್ತು ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ನಡೆಯಲಿದ್ದು, ಸಭೆಯಲ್ಲಿ ಕೋವಿಡ್ ಸ್ಥಿತಿಗತಿ ಚರ್ಚೆಯ ಬಳಿಕ ಕೋವಿಡ್ ನಿಯಂತ್ರಣದ ಹೊಸ ನಿಯಮಗಳನ್ನು ಜಾರಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಬುಧವಾರ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಕೋವಿಡ್ ನಿರ್ವಹಣೆ

ರಾಜ್ಯದಲ್ಲಿ ಕೊರೊನಾ ಹೆಚ್ಚಳ| ಇಂದು‌ ಸಿಎಂ‌ ನೇತ್ರತ್ವದಲ್ಲಿ ಸಚಿವ ಸಂಪುಟ ಸಭೆ| ನೈಟ್ ಕರ್ಪ್ಯೂ,ಹೊಸ ಮಾರ್ಗಸೂಚಿ ಪ್ರಕಟ ಸಾಧ್ಯತೆ| Read More »

ಮಾಜಿ ಸಚಿವ ಎಸ್.ಆರ್‌ ಮೋರೆ ವಿಧಿವಶ

ಧಾರವಾಡ : ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಸ್.ಆರ್. ಮೋರೆ (84) ಅವರು ಇಂದು ಮುಂಜಾನೆ ಧಾರವಾಡದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆ ಎಸ್.ಆರ್ ಮೋರೆ ಅವರನ್ನು ಧಾರವಾಡದ ಎಸ್.ಡಿ.ಎಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಮಾಜಿ ಮುಖ್ಯಮಂತ್ರಿಗಳಾದ ಬಂಗಾರಪ್ಪ, ಧರ್ಮಸಿಂಗ್ ಅವಧಿಯಲ್ಲಿ ಎರಡು ಬಾರಿ ಸಚಿವರಾಗಿ ಅಧಿಕಾರವನ್ನು ಮಾಡಿದ್ದರು.

ಮಾಜಿ ಸಚಿವ ಎಸ್.ಆರ್‌ ಮೋರೆ ವಿಧಿವಶ Read More »