ರಾಜ್ಯ

ಸಂಪುಟ ರಚನೆಗಾಗಿ ಹೈಕಮಾಂಡ್ ಸಂದೇಶಕ್ಕೆ ವೈಟಿಂಗ್- ಸಿಎಂ ಬೊಮ್ಮಾಯಿ

ಬೆಂಗಳೂರು: ಇಂದು ಅಥವಾ ನಾಳೆ ಸಂಪುಟ ರಚನೆ ಮಾಡಲಾಗುತ್ತದೆ. ಹೈಕಮಾಂಡ್ ಸಂದೇಶದ ನಿರೀಕ್ಷೆಯಲ್ಲಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಪ್ರವಾಹ ಸ್ಥಿತಿ, ಪರಿಹಾರ ಕಾರ್ಯಗಳ ಬಗ್ಗೆ ಸಿಎಸ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ಮಾಡುತ್ತೇನೆ. ಎಲ್ಲಾ ಡಿಸಿಗಳಿಂದ ವರದಿ ತರಿಸಿಕೊಳ್ಳುತ್ತಿದ್ದೇನೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡಿ ಅಗತ್ಯ ಹಣಕಾಸು ಬಿಡುಗಡೆ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ ಎಂದು ತಿಳಿಸಿದರು. ಇತ್ತ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು […]

ಸಂಪುಟ ರಚನೆಗಾಗಿ ಹೈಕಮಾಂಡ್ ಸಂದೇಶಕ್ಕೆ ವೈಟಿಂಗ್- ಸಿಎಂ ಬೊಮ್ಮಾಯಿ Read More »

ಕೋವಿಡ್ ಮೂರನೇ ಅಲೆ : ಬೆಂಗಳೂರಿನಲ್ಲಿ ತೀವ್ರ ಕಟ್ಟೆಚ್ಚರ

ಬೆಂಗಳೂರು : ಕೇರಳದಲ್ಲಿ ಕೊರೊನಾ ಆವಳಿ ಹೆಚ್ಚಾಗಿದ್ದು, ಮೂರನೇ ಅಲೆ ಕಾಣಿಸಿಕೊಂಡಿದ್ಯಾ ಅನ್ನೋ ಚರ್ಚೆಗಳು ನಡೆಯುತ್ತಿರುವಾಗಲೇ ರಾಜ್ಯದಲ್ಲೂ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗ ತೊಡಗಿದೆ. ರಾಜ್ಯದಲ್ಲಿ ನಿಧಾನವಾಗಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಇದು ಮೂರನೇ ಅಲೆಯ ಎಚ್ಚರಿಕೆಯ ಗಂಟೆ ಎಂದು ಅಂದಾಜಿಸಲಾಗುತ್ತಿದೆ. ಈ ಹಿನ್ನೆಲೆ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದೆ. ಮೈಕ್ರೋಕಂಟೈನ್ ಮೆಂಟ್, ನಿಗದಿತ ಗುಂಪುಗಳಿಗೆ ವ್ಯಾಕ್ಸಿನೇಷನ್ ಹೆಚ್ಚಿಸುವ, ಗಡಿ ಭಾಗಗಳಲ್ಲಿಯೂ ಹೆಚ್ಚಿನ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಕೋವಿಡ್ ಮೂರನೇ ಅಲೆ : ಬೆಂಗಳೂರಿನಲ್ಲಿ ತೀವ್ರ ಕಟ್ಟೆಚ್ಚರ Read More »

ಗಡಿಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಳ- ಸಿಎಂ ಕಳವಳ- ಇಂದು ವಿಡಿಯೋ ಕಾನ್ಫರೆನ್ಸ್

ಮಂಗಳೂರು (ಜು. 30): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಕಡಿಮೆಯಾಯ್ತು ಎನ್ನುವಷ್ಟರಲ್ಲಿ ಮೂರನೇ ಅಲೆ ಶುರುವಾಗುವ ಆತಂಕ ಎದುರಾಗಿದೆ. ಪಕ್ಕದ ಕೇರಳ ರಾಜ್ಯದಲ್ಲಿ ಕೊರೊನಾ ಕೇಸ್ ಭಾರೀ ಸಂಖ್ಯೆಯಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣಕನ್ನಡದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಸಿ.ಎಂ ಬಸವರಾಜ ಬೊಮ್ಮಾಯಿ ಸೂಚನೆ ಹಿನ್ನಲೆಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೆ ಗಡಿಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನಲೆ ಆತಂಕ ವ್ಯಕ್ತಪಡಿಸಿರುವ ಸಿಎಂ ಸೋಂಕು ನಿಯಂತ್ರಣ ಸಂಬಂಧ ನಾಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಗಡಿಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಳ- ಸಿಎಂ ಕಳವಳ- ಇಂದು ವಿಡಿಯೋ ಕಾನ್ಫರೆನ್ಸ್ Read More »

ಹೆಡ್‌ಲೈಟ್ ಡಿಮ್‌ಡಿಪ್ ಮಾಡದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮಾರಾಮಾರಿ

ಚಿಕ್ಕಮಗಳೂರು: ಬೈಕಿನ ಹೆಡ್‌ಲೈಟ್ ಡಿಮ್ ಅಂಡ್ ಡಿಪ್ ಮಾಡಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಸೇರಿ ನಾಲ್ವರ ತಂಡ ಬಜರಂಗದಳದ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದ ಹೊರಹೊಲಯದಲ್ಲಿ ನಡೆದಿದೆ. ಬಜರಂಗದಳ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಪ್ರದೀಪ್ ಹಾಗೂ ನಿತಿನ್ ಎಂಬ ಯುವಕರು ಕೊಪ್ಪ ತಾಲೂಕಿನ ಗುಣವಂತೆ ಸಮೀಪ ವಾಷಿಂಗ್ ಮೆಷಿನ್ ರಿಪೇರಿ ಕೆಲಸಕ್ಕೆ ಹೋಗಿದ್ದರು. ಕೆಲಸ ಮುಗಿಸಿಕೊಂಡು ಮಕ್ಕಿಮನೆ ಮಾರ್ಗವಾಗಿ ವಾಪಸ್ ಬರುತ್ತಿದ್ದಾಗÀ ಕೊಪ್ಪ ಪಟ್ಟಣದಲ್ಲಿ ಈ ಘಟನೆ

ಹೆಡ್‌ಲೈಟ್ ಡಿಮ್‌ಡಿಪ್ ಮಾಡದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಮಾರಾಮಾರಿ Read More »

‘ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ’ ಹಿರಿಯರ ಅಸಮಾಧಾನವೇ ಮೂಲ ಕಾರಣವಂತೆ! ಸಿಎಂ ಬೊಮ್ಮಾಯಿ ಹೆಸರಿಂದ ಸಿಡಿ ತನಿಖೆ ವಿಳಂಬ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎನ್ನುವ ಕಾರಣಕ್ಕೆ ಸಚಿವಾಕಾಂಕ್ಷಿಗಳು ನಿತ್ಯ ಸಿಎಂ ಮನೆಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ನೇರವಾಗಿ ಸಚಿವ ಸಂಪುಟ ವಿಸ್ತರಣೆ ಮಾಡಿದರೆ ಕೋಪದ ಕಟ್ಟೆ ಒಡೆಯಲಿದೆ ಎನ್ನುವ ಅನುಮಾನ ಹೈಕಮಾಂಡ್‌ಗೆ ಇದೆ. ಇದೆಕ್ಕೆಲ್ಲ ಮಾಜಿ ಸಚಿವರಲ್ಲಿರುವ ಅಸಮಾಧಾನವೇ ಇದಕ್ಕೆಲ್ಲಾ ಮೂಲ ಕಾರಣವಾಗಿದೆ. ಹಾಗಾಗಿ ಎಲ್ಲರ ಸಮಾಧಾನವಾದ ಬಳಿಕ ಸಚಿವ ಸಂಪುಟ ವಿಸ್ತರೆಣೆ ಮಾಡುವ ಬಗ್ಗೆ ಸಿಎಂ ನಿರ್ದರಿಸಿದ್ದಾರೆ.ಇನ್ನೂ ಕೆಲವು ಶಾಸಕರು ಸಚಿವ ಸಂಪುಟ ವಿಸ್ತರಣೆ ಆಗುವ ಮೊದಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಹೈಕಮಾಂಡ್ ನಾಯಕರನ್ನು

‘ಸದ್ಯಕ್ಕಿಲ್ಲ ಸಂಪುಟ ವಿಸ್ತರಣೆ’ ಹಿರಿಯರ ಅಸಮಾಧಾನವೇ ಮೂಲ ಕಾರಣವಂತೆ! ಸಿಎಂ ಬೊಮ್ಮಾಯಿ ಹೆಸರಿಂದ ಸಿಡಿ ತನಿಖೆ ವಿಳಂಬ Read More »

ರಾಜ್ಯದ ಜನತೆಗೆ ಬೊಮ್ಮಾಯಿ ಗಿಪ್ಟ್| ರೈತರ ಮಕ್ಕಳಿಗೆ ವಿಶೇಷ ಶಿಷ್ಯವೇತನ|ಅಶಕ್ತರ ಮಾಸಾಶನದಲ್ಲಿ ಏರಿಕೆ

ಬೆಂಗಳೂರು: ರಾಜ್ಯದ 30 ನೇ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕೆಳವು ಯೋಜನೆಗಳನ್ನು ಘೋಷನೆ ಮಾಡಿದ್ದಾರೆ. ಇದು ಮುಖ್ಯ ಮಂತ್ರಿಯಾದ ನಂತರದ ಮೊದಲ ಯೋಜನೆಯಾಗಿದೆ.ಎಲ್ಲಾ ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಒಂದು ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ಬಸವರಾಜ ಬೊಮ್ಮಾಯಿ ಅವರು ನೂತನ ಕೊಠಡಿಯಲ್ಲಿ ಸರಳವಾಗಿ ಪೂಜೆ ಸಲ್ಲಿಸಿದರು. ನಂತರ ಅಧಿಕಾರಿಗಳ

ರಾಜ್ಯದ ಜನತೆಗೆ ಬೊಮ್ಮಾಯಿ ಗಿಪ್ಟ್| ರೈತರ ಮಕ್ಕಳಿಗೆ ವಿಶೇಷ ಶಿಷ್ಯವೇತನ|ಅಶಕ್ತರ ಮಾಸಾಶನದಲ್ಲಿ ಏರಿಕೆ Read More »

ರಾಜ್ಯಕ್ಕೆ ‌ಮತ್ತೆ ಮೂವರು‌ ನೂತನ ಡಿಸಿಎಂಗಳ ನೇಮಕ

ಬೆಂಗಳೂರು : ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತ್ರ, ನೂತನ ಉಪ ಮುಖ್ಯಮಂತ್ರಿಗಳಾಗಿಆರ್ ಅಶೋಕ್, ಬಿ.ಶ್ರೀರಾಮುಲು ಹಾಗೂ ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರ, ಈಗ ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯನ್ನು ಇಂದಿನ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಒಕ್ಕೊರಲಿನಿಂದ ಘೋಷಣೆ ಮಾಡಲಾಗಿದೆ. ಈ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ನೇಮಕಗೊಂಡಿದ್ದಾರೆ. ಆದರೆ ಈ ಕುರಿತಂತೆ ಸಂಸದೀಯ ಮಂಡಳಿಯ ಸಭೆಯಲ್ಲಿ

ರಾಜ್ಯಕ್ಕೆ ‌ಮತ್ತೆ ಮೂವರು‌ ನೂತನ ಡಿಸಿಎಂಗಳ ನೇಮಕ Read More »

ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ, ನಾಳೆಯೇ ಪ್ರಮಾಣವಚನ

ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ರಾಜೀನಾಮೆಯಿಂದ ತೆರವಾಗಿರುವಂತ ಮುಖ್ಯಮಂತ್ರಿ ಸ್ಥಾನಕ್ಕೆ, ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ನೂತನ ಸಿಎಂ ಆಯ್ಕೆ ಕುರಿತಂತೆ ರಾಜ್ಯಕ್ಕೆ ಕೇಂದ್ರದಿಂದ ವೀಕ್ಷಕರಾಗಿ ಕೇಂದ್ರ ಸಚಿವರಾದಂತ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ , , ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತ್ರತ್ವದಲ್ಲಿ ಹಂಗಾಮಿ ಸಿಎಂ ಯಡಿಯೂರಪ್ಪ ನೂತನ ಮುಖ್ಯಮಂತ್ರಿಗಳನ್ನು ಘೋಷಿಸಿದ್ದಾರೆ. ಬೆಂಗಳೂರಿನ ಕ್ಯಾಪಿಟಲ್ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಯ್ಕೆಯ ಕುರಿತಂತೆ ಚರ್ಚೆ ನಡೆದಿದ್ದು, ಸಭೆಯ

ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ, ನಾಳೆಯೇ ಪ್ರಮಾಣವಚನ Read More »

ತಂದೆಯ ಮರಣದ‌ ನಡುವೆಯೂ ಪ್ರಮಾಣವಚನ ಸ್ವೀಕರಿಸಿದವರಿಗೆ ಕಣ್ಣೀರಿನ‌ ಅರ್ಥ‌ ತಿಳಿವುದೇ? – ಡಿಕೆಶಿಗೆ ಬಿಜೆಪಿ ತಿರುಗೇಟು

ಬೆಂಗಳೂರು: ‘ತಂದೆ ಮರಣಹೊಂದಿದ ದಿನವೇ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಇತಿಹಾಸ ನಿಮ್ಮದು’ ಎಂದು ಟ್ವೀಟ್‌ ಮಾಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಬಿಜೆಪಿ ತಿರುಗೇಟು ನೀಡಿದೆ. ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜೀನಾಮೆ ನೀಡುವ ವಿಷಯ ಪ್ರಸ್ತಾಪಿಸುವಾಗ ಕಣ್ಣೀರು ಹಾಕಿದ್ದಾರೆ. ಇದು ಕೇವಲ ಒಬ್ಬ ವ್ಯಕ್ತಿಯ ಕಣ್ಣೀರಲ್ಲ. ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರು. ಇದರ ಹಿಂದಿನ ನೋವೇನು? ಆ ನೋವು ಕೊಟ್ಟವರು ಯಾರು? ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು’ ಎಂದು ಡಿಕೆಶಿ ಹೇಳಿಕೆ ನೀಡಿದ್ದರು. ಡಿಕೆಶಿ ಹೇಳಿಕೆಗೆ

ತಂದೆಯ ಮರಣದ‌ ನಡುವೆಯೂ ಪ್ರಮಾಣವಚನ ಸ್ವೀಕರಿಸಿದವರಿಗೆ ಕಣ್ಣೀರಿನ‌ ಅರ್ಥ‌ ತಿಳಿವುದೇ? – ಡಿಕೆಶಿಗೆ ಬಿಜೆಪಿ ತಿರುಗೇಟು Read More »

ನಳಿನ್ ಮನಸ್ಸು ಮಾಡಿದ್ದಲ್ಲಿ ಅಂಗಾರ ಸಿಎಂ ಆಗ್ಬಹುದು- ರಮಾನಾಥ ರೈ

ಮಂಗಳೂರು: ಬಿಜೆಪಿಯವರ ಒಳ ಜಗಳದಿಂದಾಗಿ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ನಳಿನ್ ಕುಮಾರ್ ಕಟೀಲ್ ಮನಸ್ಸು ಮಾಡಿದ್ದಲ್ಲಿ ಸಚಿವ ಎಸ್. ಅಂಗಾರ ಅವರನ್ನು ಸಿಎಂ ಮಾಡಬಹುದು ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿಯವರು ನುಡಿದಂತೆ ನಡೆಯುವುದಿಲ್ಲ. ಬಿಜೆಪಿಯ ಸಂಪೂರ್ಣ ಮಂತ್ರಿ ಮಂಡಲ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮುಂದೆ ಯಾರೇ ಬಂದ್ರೂ ಸರಿಯಾಗದ ಸ್ಥಿತಿಯಲ್ಲಿದೆ. ಜನತಾ ಪರಿವಾರದಲ್ಲಿ ಇಲ್ಲಿಯ ತನಕ ದುರ್ಬಲ ವರ್ಗದವರನ್ನು ಸಿಎಂ ಮಾಡಿಲ್ಲ. ಆದರೆ,

ನಳಿನ್ ಮನಸ್ಸು ಮಾಡಿದ್ದಲ್ಲಿ ಅಂಗಾರ ಸಿಎಂ ಆಗ್ಬಹುದು- ರಮಾನಾಥ ರೈ Read More »