ರಾಜ್ಯ

ಕೊರೊನಾ ಹೆಚ್ಚಳ ಹಿನ್ನಲೆ| ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಬ್ರೇಕ್|

ಬೆಂಗಳೂರು: ರಾಜ್ಯದಲ್ಲಿ ಕರೋನ ಕೇಸ್‌ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಬ್ರೇಕ್‌ ಹಾಕುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಮೈಸೂರು, ಧಾರವಾಡ ಮತ್ತು ಬೆಂಗಳೂರಿನಲ್ಲಿ ಇತ್ತೀಚಿನ ಕೋವಿಡ್ -19 ಕೇಸ್‌ ಹೆಚ್ಚಳವಾದ ಹಿನ್ನಲೆಯಲ್ಲಿ, ಕರ್ನಾಟಕ ಸರ್ಕಾರವು ಭಾನುವಾರ ಶಿಕ್ಷಣ ಸಂಸ್ಥೆಗಳಲ್ಲಿ ಕಠಿಣ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತರಲು ನಿರ್ಧರಿಸಿದೆ. ನಂತರ ಕರ್ನಾಟಕ ಸರ್ಕಾರವು ತನ್ನ ಸಲಹೆಯಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುವ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು, ಸಮ್ಮೇಳನಗಳು, ವಿಚಾರಗೋಷ್ಠಿಗಳು, ಶೈಕ್ಷಣಿಕ ಕಾರ್ಯಕ್ರಮಗಳು ಇತ್ಯಾದಿಗಳನ್ನು ಎರಡು ತಿಂಗಳ […]

ಕೊರೊನಾ ಹೆಚ್ಚಳ ಹಿನ್ನಲೆ| ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಬ್ರೇಕ್| Read More »

ಒಮಿಕ್ರಾನ್ ಸೋಂಕಿನ ರೋಗ ಲಕ್ಷಣಗಳೇನು ಗೊತ್ತಾ..?

ಕೊರೊನಾ ವೈರಸ್ ಜಗತ್ತಿನ ಚಿತ್ರಣವನ್ನು ಬದಲಿಸಿದೆ. ಹೊಸ ಹೊಸ ರೂಪಾಂತರಗಳು ಆತಂಕಕ್ಕೆ ಕಾರಣವಾಗ್ತಿದೆ. ಡೆಲ್ಟಾ ವೈರಸ್ ಮೂಲಕ ಕೊರೊನಾ ಎರಡನೇ ಅಲೆ ಸಾಕಷ್ಟು ವಿನಾಶಕ್ಕೆ ಕಾರಣವಾಗಿತ್ತು, ಈಗ ಒಮಿಕ್ರಾನ್ ಮತ್ತೊಂದು ಅನಾಹುತಕ್ಕೆ ಮುನ್ನುಡಿ ಬರೆಯುತ್ತಿದೆ. ಒಮಿಕ್ರಾನ್ ರೂಪಾಂತರದ ಮೊದಲ ಪ್ರಕರಣ ದಕ್ಷಿಣ ಆಫ್ರಿಕಾದಲ್ಲಿ ವರದಿಯಾಗಿದೆ. ಹಾಂಕಾಂಗ್ ಮತ್ತು ಬೆಲ್ಜಿಯಂನಲ್ಲಿ ಇದೇ ರೀತಿಯ ಪ್ರಕರಣಗಳು ವರದಿಯಾಗಿವೆ. ಆರೋಗ್ಯ ಸಂಸ್ಥೆ ಇದ್ರ ಬಗ್ಗೆ ಎಚ್ಚರಿಕೆ ನೀಡಿದೆ. ಈ ರೂಪಾಂತರವು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತದೆ. ಈಗಾಗಲೇ ಚೇತರಿಸಿಕೊಂಡಿರುವ ಕೊರೊನಾ ರೋಗಿಗಳಲ್ಲಿ ಮರುಸೋಂಕಿನ

ಒಮಿಕ್ರಾನ್ ಸೋಂಕಿನ ರೋಗ ಲಕ್ಷಣಗಳೇನು ಗೊತ್ತಾ..? Read More »

ಗುಡ್ ನ್ಯೂಸ್| ಕುಸಿತ ಕಂಡ ಟೊಮ್ಯಾಟೊ ದರ|

ಕೋಲಾರ: ಕಳೆದ ಕೆಲ ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿದ್ದ ಟೊಮ್ಯಾಟೊ ದರದಲ್ಲಿ ಕುಸಿತ ಕಂಡಿದೆ. ಮೂರ್ನಾಲ್ಕು ದಿನಗಳಿಂದ ಕೋಲಾರ ಮಾರುಕಟ್ಟೆಯಲ್ಲಿ ದರ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದೆ. ದರ ಏರಿಕೆಯಾಗುತ್ತಿದ್ದಂತೆ ಮಾರುಕಟ್ಟೆಗೆ ಟೊಮೇಟೊ ಆವಕ ಹೆಚ್ಚಾಗಿದೆ. ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಸ್ಥಳೀಯ ರೈತರು ಹೊಲದಲ್ಲಿದ್ದ ಟೊಮೇಟೊ ಕೊಯ್ಲು ಮಾಡಿ ಮಾರುಕಟ್ಟೆಗೆ ತರಲಾರಂಭಿಸಿದ್ದಾರೆ. ಇದರ ಜೊತೆಗೆ ನೆರೆಯ ಆಂಧ್ರಪ್ರದೇಶ, ತಮಿಳುನಾಡು ಮತ್ತು ನಾಸಿಕ್ನಿಂದಲೂ ರಾಜ್ಯದ ಮಾರುಕಟ್ಟೆಗೆ ಆವಕವಾಗುತ್ತಿದೆ. ಇದರಿಂದಾಗಿ ದರ ಕುಸಿತವಾಗುತ್ತಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಟೊಮೇಟೊ ಬೆಳೆಗೆ ತೀವ್ರ ಹಾನಿಯಾಗಿತ್ತು. ತೋಟಗಳಲ್ಲಿ

ಗುಡ್ ನ್ಯೂಸ್| ಕುಸಿತ ಕಂಡ ಟೊಮ್ಯಾಟೊ ದರ| Read More »

ಕೆಎಸ್ ಆರ್ ಟಿಸಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ಸರ್ಕಲ್ ಬಳಿ ನಡೆದಿದೆ. ಕಾವೇರಿ ಭವನದಿಂದ ದೊಡ್ಡಬಳ್ಳಾಪುರಕ್ಕೆ ತೆರಳುತ್ತಿದ್ದ ಕೆಎ 40, ಎಫ್ 0994 ನಂಬರಿನ ಬಸ್​, ಕೆಎ 43, ವಿ 8208 ನಂಬರಿನ ಡಿಯೋ ಸ್ಕೂಟರ್​ ಮೇಲೆ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತವಾಗುತ್ತಿದ್ದಂತೆ ಕೆಎಸ್​ಆರ್​ಟಿಸಿ ಬಸ್​ ಚಾಲಕ ಹಾಗೂ ಕಂಡಕ್ಟರ್ ಪರಾರಿಯಾಗಿದ್ದಾರೆ. ಮೃತ ಸವಾರನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹೆಬ್ಬಾಳ ಸಂಚಾರಿ ಪೊಲೀಸರು ಭೇಟಿ ನೀಡಿ

ಕೆಎಸ್ ಆರ್ ಟಿಸಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು Read More »

ನ.30ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಬುಧವಾರದವರೆಗೂ ಮಳೆ ಜೋರಾಗಿರಲಿದೆ. ಬೆಂಗಳೂರು ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನ ಮತ್ತು ಕರಾವಳಿ ಪ್ರದೇಶದ ಹಲವು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ನವೆಂಬರ್ 30ರವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಆಂಧ್ರಪ್ರದೇಶದಲ್ಲೂ ವಿಪರೀತ ಮಳೆಯಾಗುತ್ತಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಅಬ್ಬರಿಸಲಿದೆ. ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವಿದೆ ಮತ್ತು ತಮಿಳುನಾಡು ಕರಾವಳಿ

ನ.30ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ Read More »

ಹೊಟ್ಟೆನೋವು ಎಂದ ಮಗಳನ್ನು ಆಸ್ಪತ್ರೆಗೆ ಕೊಂಡೊಯ್ದರು| ಆದರೆ ಆಸ್ಪತ್ರೆಯಲ್ಲಿ ಆಗಿದ್ದೇ ಬೇರೆ…! ಪೋಷಕರಿಗೆ ಕಾದಿತ್ತು ಬಿಗ್ ಶಾಕ್|

ಕೊಪ್ಪಳ: ಹೊಟ್ಟೆನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಪರೀಕ್ಷಿಸಿದ ವೈದ್ಯರು ಗರ್ಬಿಣಿಯಾಗಿರುವುದನ್ನು ತಿಳಿಸಿದ್ದಾರೆ. 17 ವರ್ಷದ ಅಪ್ರಾಪ್ತೆಗೆ ಹೆರಿಗೆಯಾಗಿದ್ದು ಜನಿಸಿದ ಕೆಲವೇ ಕ್ಷಣದಲ್ಲಿ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ಕಾರಟಗಿಯಲ್ಲಿ 17 ವರ್ಷದ ಬಾಲಕಿಗೆ ನವೆಂಬರ್ 23ರಂದು ತೀವ್ರತರವಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಪೋಷಕರು ಆಕೆಯನ್ನು ಕಾರಟಗಿಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ತಪಾಸಣೆ ಮಾಡಿದ ವೈದ್ಯರು ಗರ್ಭಿಣಿಯಾಗಿರುವುದನ್ನು ತಿಳಿಸಿದ್ದಾರೆ. ಇದರಿಂದ ಆತಂಕಗೊಂಡ ಪೋಷಕರು ಪುತ್ರಿಯನ್ನು ವಿಚಾರಿಸಿದಾಗ ಆಕೆ ಯಾವುದೇ

ಹೊಟ್ಟೆನೋವು ಎಂದ ಮಗಳನ್ನು ಆಸ್ಪತ್ರೆಗೆ ಕೊಂಡೊಯ್ದರು| ಆದರೆ ಆಸ್ಪತ್ರೆಯಲ್ಲಿ ಆಗಿದ್ದೇ ಬೇರೆ…! ಪೋಷಕರಿಗೆ ಕಾದಿತ್ತು ಬಿಗ್ ಶಾಕ್| Read More »

ರೂಪಾಂತರಿ ವೈರಸ್ ಹಿನ್ನಲೆ| ರಾಜ್ಯದ ಗಡಿ ಜಿಲ್ಲೆಗಳಲ್ಲಿ ಬಿಗಿಕ್ರಮಕ್ಕೆ ಸಿಎಂ ಸೂಚನೆ|

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ಹೊಸ ರೂಪಾಂತರಿ ವೈರಸ್ ಭೀತಿ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ 24 ಗಂಟೆಗಳ ಬಿಗಿ ಕ್ರಮಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ತುರ್ತು ಸಭೆ ನಡೆಸಿದ ಸಿಎಂ, ಕಳೆದ ಒಂದು ವಾರದಲ್ಲಿನ ಕೋವಿಡ್ ಪಾಸಿಟಿವಿಟಿ ರೇಟ್ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ರಾಜ್ಯದಲ್ಲಿ ಕೋವಿಡ್ ಟೆಸ್ಟ್, ನಿಯಂತ್ರಣದ ಬಗ್ಗೆ ವಿವರ ಪಡೆದ ಸಿಎಂ

ರೂಪಾಂತರಿ ವೈರಸ್ ಹಿನ್ನಲೆ| ರಾಜ್ಯದ ಗಡಿ ಜಿಲ್ಲೆಗಳಲ್ಲಿ ಬಿಗಿಕ್ರಮಕ್ಕೆ ಸಿಎಂ ಸೂಚನೆ| Read More »

ಓಮಿಕ್ರಾನ್ ವೈರಸ್ ಹಿನ್ನಲೆ| ದ.ಆಫ್ರಿಕಾದಲ್ಲಿ ನಡೆಯಬೇಕಿದ್ದ ಮಹಿಳಾ ವಿಶ್ವಕಪ್ ಕ್ರಿಕೆಟ್ ಅರ್ಹತಾ ಪಂದ್ಯ ರದ್ದು|

ಸ್ಪೋರ್ಟ್ಸ್ ಡೆಸ್ಕ್: ಆಫ್ರಿಕನ್ ಪ್ರದೇಶದಲ್ಲಿ ಹೊಸ COVID-19 ರೂಪಾಂತರ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ, ಹರಾರೆಯಲ್ಲಿ ಮುಂದಿನ ವರ್ಷದ ಮಹಿಳಾ ODI ವಿಶ್ವಕಪ್‌ಗಾಗಿ ನಡೆಯುತ್ತಿರುವ ಅರ್ಹತಾ ಪಂದ್ಯವನ್ನು ICC ಶನಿವಾರ ರದ್ದುಗೊಳಿಸಿದೆ. ದಕ್ಷಿಣ ಆಫ್ರಿಕಾದಲ್ಲಿ ಹೊಸ ರೂಪಾಂತರವನ್ನು ಪತ್ತೆಹಚ್ಚಿದ ಬಳಿಕ ಪ್ರಪಂಚದಾದ್ಯಂತ ಉಂಟಾಗಿರುವ ಭಯವನ್ನು ಆಫ್ರಿಕನ್ ದೇಶಗಳಿಂದ ಬರುವವರ ಪ್ರಯಾಣ ನಿರ್ಬಂಧಗಳನ್ನು ಅನೇಕ ದೇಶದಲ್ಲಿ ಹೇರಲಾಗಿದೆ. ಹೀಗಾಗಿ ನಾವು ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಅಂತ ಐಸಿಸಿ ಹೇಳಿದೆ. ಒಂಬತ್ತು-ತಂಡಗಳ ಪಂದ್ಯಾವಳಿಯ ಪ್ರಾಥಮಿಕ ಲೀಗ್ ಹಂತದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಓಮಿಕ್ರಾನ್ ವೈರಸ್ ಹಿನ್ನಲೆ| ದ.ಆಫ್ರಿಕಾದಲ್ಲಿ ನಡೆಯಬೇಕಿದ್ದ ಮಹಿಳಾ ವಿಶ್ವಕಪ್ ಕ್ರಿಕೆಟ್ ಅರ್ಹತಾ ಪಂದ್ಯ ರದ್ದು| Read More »

ಬೆಂಗಳೂರು: ದ.ಆಫ್ರಿಕಾದಿಂದ ಬಂದ ಇಬ್ಬರಲ್ಲಿ ಕೊರೊನಾ ‌ಸೋಂಕು| ಹೆಚ್ಚಿದ ಆತಂಕ

ದೇವನಹಳ್ಳಿ : ಸೌತ್​ ಆಫ್ರಿಕಾದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್ ಮಾಡಲಾಗಿದ್ದು, ಮತ್ತೊಬ್ಬರನ್ನು ಖಾಸಗಿ ಹೋಟೆಲ್​​​ನಲ್ಲಿ ಕ್ವಾರಂಟೈನ್ ಮಾಡಲಾಗಿದೆ.

ಬೆಂಗಳೂರು: ದ.ಆಫ್ರಿಕಾದಿಂದ ಬಂದ ಇಬ್ಬರಲ್ಲಿ ಕೊರೊನಾ ‌ಸೋಂಕು| ಹೆಚ್ಚಿದ ಆತಂಕ Read More »

‘ಶಬರಿಮಲೆ ಯಾತ್ರೆ ಮಾಡುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ| ಆರ್‌ಟಿಪಿಸಿಆರ್ ಪರೀಕ್ಷೆ ಅನಿವಾರ್ಯವಲ್ಲ

ತಿರುವನಂತಪುರಂ: ಶಬರಿಮಲೆ ಯಾತ್ರೆ ಮಾಡುವ ಮಕ್ಕಳಿಗೆ ಆರ್‌ಟಿಪಿಸಿಆರ್‌ ಪರೀಕ್ಷಾ ವರದಿ ಕಡ್ಡಾಯವಿಲ್ಲ ಎಂದು ಕೇರಳ ಸರ್ಕಾರ ತಿಳಿಸಿದೆ. ಹೊಸ ಆದೇಶ ಹೊರಡಿಸಿರುವ ಕೇರಳ ಸರ್ಕಾರ, “ಮಕ್ಕಳಿಗೆ ಆರ್‌ಟಿಪಿಸಿಆರ್‌ ಪರೀಕ್ಷೆ ಆನಿವಾರ್ಯವಿಲ್ಲ. ಪೋಷಕರು ಮಾಸ್ಕ್‌ ಸೇರಿದಂತೆ ಸ್ಯಾನಿಟೈಸರ್‌‌ಗಳನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿದೆ. ಇದರೊಂದಿಗೆ ಸಾಮಾಜಿಕ ಅಂತರ ಕಾಪಾಡುವುದು ಮುಖ್ಯ” ಎಂದು ಹೇಳಿದೆ. “ಶಬರಿಮಲೆಗೆ ತೆರಳುವ ಯಾತ್ರಾರ್ಥಿಗಳು 72 ಗಂಟೆಗಳ ಒಳಗೆ ಎರಡು ಡೋಸ್‌ ವ್ಯಾಕ್ಸಿನೇಷನ್‌‌ ಪಡೆದಿರುವ ಪ್ರಮಾಣಪತ್ರ ಅಥವಾ ಆರ್‌ಟಿಪಿಸಿಆರ್‌ ನೆಗೆಟಿವ್‌‌‌ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯ” ಎಂದು ತಿಳಿಸಿದೆ.

‘ಶಬರಿಮಲೆ ಯಾತ್ರೆ ಮಾಡುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ| ಆರ್‌ಟಿಪಿಸಿಆರ್ ಪರೀಕ್ಷೆ ಅನಿವಾರ್ಯವಲ್ಲ Read More »