ರಾಜ್ಯ

ಶಾರ್ಟ್ ಸರ್ಕ್ಯೂಟ್ ಗೆ ಚಾಲಕ ಸಮೇತ ಹೊತ್ತಿ‌ ಉರಿದ ಕಾರು

ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಅಲ್ಟೋ ಕಾರೊಂದು ಹೊತ್ತಿ ಉರಿದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ವಸ್ತಾರೆ ಗ್ರಾಮದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಆರೆನೂರು ಗ್ರಾಮದ ನಿವಾಸಿ ರಘು ಎಂದು ತಿಳಿದು ಬಂದಿದ್ದು ಕಾರಿನಲ್ಲಿ ಒಬ್ಬರೆ ಇದ್ದು ಚಿಕ್ಕಮಗಳೂರಿಗೆ ಹೋಗಿ ಆಲ್ದೂರಿಗೆ ಬರುವ ಮಾರ್ಗ ಮಧ್ಯೆ ಈ ದುರ್ಘಟನೆ ಸಂಭವಿಸಿದೆ. ಕಾರಿಗೆ ಬೆಂಕಿ ಹಬ್ಬಿದ ಕೂಡಲೆ ಸ್ಥಳೀಯರು ಬೆಂಕಿ ನಂದಿಸಲು […]

ಶಾರ್ಟ್ ಸರ್ಕ್ಯೂಟ್ ಗೆ ಚಾಲಕ ಸಮೇತ ಹೊತ್ತಿ‌ ಉರಿದ ಕಾರು Read More »

ಡಿ.ವಿ ಕರ್ನಾಟಕದ ಮುಂದಿನ ಸಿಎಂ!? ಮೌನ ಮುರಿದ ಡಿವಿಎಸ್ ಏನು ಹೇಳಿದ್ರು ಗೊತ್ತಾ?

ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಡಿ.ವಿ ಸದಾನಂದಗೌಡ ಬೆಂಗಳೂರಿಗೆ ವಾಪಸ್​​ ಆಗಿದ್ದು, ಗೌಡರ ಆಗಮನ ಹಿನ್ನೆಲೆಯಲ್ಲಿ ಅವರನ್ನು ನೋಡಿ ಮಾತನಾಡಿಸಲು ಬಿಜೆಪಿ ಕಾರ್ಯಕರ್ತರ ದಂಡು ಡಾಲರ್ಸ್ ಕಾಲೋನಿಯ ಸದಾನಂದಗೌಡರ ನಿವಾಸಕ್ಕೆ ಆಗಮಿಸಿತ್ತು. ನೂರಾರು ಸಂಖ್ಯೆಯ ಕಾರ್ಯಕರ್ತರು ಗೌಡರಿಗೆ ಜೈಕಾರ ಹಾಕಿ, ಮಾಜಿ ಸಚಿವರನ್ನು ಸ್ವಾಗತಿಸಿದ್ದು, ಕಾರ್ಯಕರ್ತರನ್ನು ಉದ್ದೇಶಿಸಿ ಸದಾನಂದಗೌಡರು ಮಾತನಾಡಿದರು. ‘ ನನ್ನ ಮತ್ತು ಪಕ್ಷದ ಕಾರ್ಯಕರ್ತರ ಸಂಬಂಧ ಎಲ್ಲೆ ಇದ್ರು ನಾವೆಲ್ಲರೂ ಒಟ್ಟಾಗಿ ಇದ್ದೇವೆ ಎಂಬ ಸಂದೇಶ ಇದು. ನಾನು ಪಕ್ಷದ

ಡಿ.ವಿ ಕರ್ನಾಟಕದ ಮುಂದಿನ ಸಿಎಂ!? ಮೌನ ಮುರಿದ ಡಿವಿಎಸ್ ಏನು ಹೇಳಿದ್ರು ಗೊತ್ತಾ? Read More »

ಕೆ.ಆರ್.ಎಸ್ ಅಕ್ರಮ ಗಣಿಗಾರಿಕೆ ದಂಧೆ, ಶೀಘ್ರ ದಾಖಲೆ ಬಿಡುಗಡೆ – ಅಶ್ವಥ ನಾರಾಯಣ

ಬೆಂಗಳೂರು: ಮಂಡ್ಯ ಜಿಲ್ಲೆ ಕೆ.ಆರ್‌.ಎಸ್‌ ಸುತ್ತಮುತ್ತ ಸುಮಾರು 40ಕ್ಕೂ ಹೆಚ್ಚು ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಇವುಗಳ ಸಂಪೂರ್ಣ ದಾಖಲೆಗಳನ್ನು ಶೀಘ್ರ ಬಿಡುಗಡೆ ಮಾಡುವುದಾಗಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವಥ ನಾರಾಯಣ ಹೇಳಿದ್ದಾರೆ. ಅಕ್ರಮ ಗಣಿಗಾರಿಕೆಯಿಂದ ಅಣೆಕಟ್ಟು ಮಾತ್ರವಲ್ಲದೆ, ರೈತರ ಜನ ಜೀವನಕ್ಕೂ ತೊಂದರೆ ಆಗಿದೆ. ಈ ಅಕ್ರಮ ದಂಧೆಯ ಸಂಪೂರ್ಣ ದಾಖಲೆಗಳನ್ನು ಮುಂದಿನ ವಾರ ಬಹಿರಂಗಪಡಿಸುವುದಾಗಿ ಅವರು ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಬ್ಬ ವ್ಯಕ್ತಿ ಒಂದು ಗಣಿಗೆ ಪರವಾನಗಿ ಪಡೆದು 8-10 ಅಕ್ರಮ

ಕೆ.ಆರ್.ಎಸ್ ಅಕ್ರಮ ಗಣಿಗಾರಿಕೆ ದಂಧೆ, ಶೀಘ್ರ ದಾಖಲೆ ಬಿಡುಗಡೆ – ಅಶ್ವಥ ನಾರಾಯಣ Read More »

ರೋಗ ಬಾಧೆ, ಕಡಿಮೆ ಬೆಲೆಗೆ ಬೇಸತ್ತ ರೈತನಿಂದ 2ಎಕ್ರೆ ದಾಳಿಂಬೆಗೆ ಕೊಡಲಿ ಪೆಟ್ಟು

ಬೆಳಗಾವಿ: ‘ಸರಿಯಾದ ಬೆಲೆ ಮತ್ತು ಮಾರುಕಟ್ಟೆ ಸಿಗದಿರುವುದು ಹಾಗೂ ರೋಗ ಬಾಧೆಯಿಂದ ಕಂಗೆಟ್ಟು ರೈತನೋರ್ವ‌ಎರಡು‌ ಎಕರೆ ದಾಳಿಂಬೆ ಬೆಳೆಯನ್ನು ಕೊಡಲಿಯಿಂದ ಕತ್ತರಿಸಿದ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಅಜೂರ ಗ್ರಾಮದಲ್ಲಿ ನಡೆದಿದೆ. ರೈತ ನವನಾಥ ಮಾನೆ ಎಂಬವರು ತಮ್ಮ ಎರಡು ಎಕರೆ ಹೊಲದಲ್ಲಿ ದಾಳಿಂಬೆ ಬೆಳೆದಿದ್ದರು. ಹವಾಮಾನ ವೈಪರೀತ್ಯ, ರೋಗ ಬಾಧೆ ಮತ್ತು ಬೆಳೆದ ಬೆಳೆಗೆ ಸರಿಯಾದ ಮಾರುಕಟ್ಟೆ ಸಿಗದೆ ಕಂಗಾಲಾಗಿ ಶುಕ್ರವಾರ ದಾಳಿಂಬೆ ಗಿಡಗಳನ್ನು ಕತ್ತರಿಸಿ ಹಾಕಿದ್ದಾರೆ. ಬೆಳೆಗೆ ವರ್ಷಕ್ಕೆ 2-3 ಲಕ್ಷ ಖರ್ಚಾಗುತ್ತದೆ. ಆದರೆ

ರೋಗ ಬಾಧೆ, ಕಡಿಮೆ ಬೆಲೆಗೆ ಬೇಸತ್ತ ರೈತನಿಂದ 2ಎಕ್ರೆ ದಾಳಿಂಬೆಗೆ ಕೊಡಲಿ ಪೆಟ್ಟು Read More »

ಕಾರ್ಕಳ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ದೌರ್ಜನ್ಯ ಆರೋಪ, ಮಾಜಿ ಸಿಎಂ ಸಿದ್ದು ಖಂಡ‌ನೆ

ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ ಕೇಳಿಬಂದಿದ್ದು, ಇದೀಗ ಕಾರ್ಯಕರ್ತನ ಸ್ಥಿತಿ ಗಂಭೀರವಾಗಿದೆ. ಹಿರ್ಗಾನ ನಿವಾಸಿ ರಾಧಾಕೃಷ್ಣ ಹಲ್ಲೆಗೆ ಒಳಗಾದವರು. ಇವರು ಸೈನಿಕರ ಬಗ್ಗೆ ಫೇಸ್‌ಬುಕ್‌ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು ಎಂಬ ಆರೋಪದ ಮೇಲೆ ಠಾಣಾಧಿಕಾರಿ ಹಲ್ಲೆ ನಡೆಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ರಾಧಾಕೃಷ್ಣ ಎಂಬವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದು, ತನ್ನ ಫೇಸ್ ಬುಕ್ ನಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪೋಸ್ಟ್ ಗಳನ್ನು ಹಾಕುತ್ತಿದ್ದರು. ಆದರೆ 2020

ಕಾರ್ಕಳ: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ದೌರ್ಜನ್ಯ ಆರೋಪ, ಮಾಜಿ ಸಿಎಂ ಸಿದ್ದು ಖಂಡ‌ನೆ Read More »

ಮಂಗಳೂರು ವಿ.ವಿ ಗ್ರೂಪ್ ನಲ್ಲಿ ಹರಿದಾಡಿತು ಹಸಿಬಿಸಿ ವಿಡಿಯೋ, ಪ್ರೊಫೆಸರ್ ನ ಎಡವಟ್ಟಿಗೆ ಎಲ್ಲೆಡೆ ಆಕ್ರೋಶ

ಮಂಗಳೂರು: ಇಲ್ಲಿನ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ವಿವಿಧ ಕಾಲೇಜುಗಳ ಪ್ರೊಫೆಸರ್ ಮತ್ತು ಉಪನ್ಯಾಸಕರನ್ನು ಒಳಗೊಂಡ ಟೆಲಿಗ್ರಾಮ್ ಗ್ರೂಪಿನಲ್ಲಿ ಕೊಡಗು ಮೂಲದ ಪ್ರೊಫೆಸರ್ ಒಬ್ಬರು ಅಶ್ಲೀಲ ವಿಡಿಯೋ ಪೋಸ್ಟ್ ಮಾಡಿರುವ ಘಟನೆ ನಡೆದಿದ್ದು, ವಿವಿಯಿಂದ ತನಿಖೆಗೆ ಆದೇಶ ಮಾಡಲಾಗಿದೆ. ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ವಿಚಾರದಲ್ಲಿ ಮಂಗಳೂರು ವಿವಿಯಿಂದ ಗ್ರೂಪ್ ರಚಿಸಲಾಗಿತ್ತು. ವಾಟ್ಸಪ್ ಮಾದರಿಯದ್ದೇ ಟೆಲಿಗ್ರಾಮ್ ನಲ್ಲಿ ಗ್ರೂಪ್ ರಚಿಸಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ವ್ಯಾಪ್ತಿಯ ವಿವಿಧ ಕಾಲೇಜುಗಳ ಸಾವಿರಕ್ಕಿಂತಲೂ ಹೆಚ್ಚು ಸದಸ್ಯರನ್ನು ಸೇರಿಸಲಾಗಿತ್ತು.

ಮಂಗಳೂರು ವಿ.ವಿ ಗ್ರೂಪ್ ನಲ್ಲಿ ಹರಿದಾಡಿತು ಹಸಿಬಿಸಿ ವಿಡಿಯೋ, ಪ್ರೊಫೆಸರ್ ನ ಎಡವಟ್ಟಿಗೆ ಎಲ್ಲೆಡೆ ಆಕ್ರೋಶ Read More »

ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿಗೆ ಗ್ರಾಮ ಪಂಚಾಯತ್ ನಲ್ಲಿ ಅವಕಾಶ

ಬೆಂಗಳೂರು: ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರಗಳನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಆರಂಭಿಸಲು ಈಗಾಗಲೇ ಆದೇಶ ಹೊರಬಿದ್ದಿದೆ. ಆಧಾರ್ ಕಾರ್ಡ್ ಇಂದು ಬಹುತೇಕ ಎಲ್ಲ ಸೇವೆಗಳಿಗೆ ಅನಿವಾರ್ಯವಾಗಿದೆ. ಆದರೆ ಆಧಾರ್ ಕಾರ್ಡ್ ನೊಂದಣಿ ಮಾಡಲು ಅಥವಾ ತಿದ್ದುಪಡಿ ಮಾಡಲು ನಗರ ಪ್ರದೇಶಗಳಿಗೆ ಅಲೆದಾಡ ಬೇಕಾಗುತ್ತದೆ. ಇದೀಗ ಅದೆಕೆಲ್ಲ ಬ್ರೇಕ್ ಹಾಕಲು ಸರಕಾರಿ ನಿರ್ಧರಿಸಿದ್ದು ಗ್ರಾಮೀಣ ಮಟ್ಟದಲ್ಲಿ ನೋಂದಣಿ ಮತ್ತು ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿದೆ. ಇನ್ನೂ ಕೊರೊನಾ ಲಸಿಕೆ ಪಡೆಯಲು ಸಹ ಆಧಾರ್ ಸಂಖ್ಯೆ ಅನಿವಾರ್ಯವಾಗಿದ್ದು

ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿಗೆ ಗ್ರಾಮ ಪಂಚಾಯತ್ ನಲ್ಲಿ ಅವಕಾಶ Read More »

ಪಕ್ಷನಿಷ್ಠೆ, ಜವಾಬ್ದಾರಿ ನಿರ್ವಹಣೆಗೆ ಕೇಂದ್ರ ಸಚಿವೆ ಸ್ಥಾನ. ಇದು‌ ಲಕ್ ಅಲ್ಲ, ಪರಿಶ್ರಮದ ಪ್ರತಿಫಲ

ಶೋಭಾ ಕರಂದ್ಲಾಜೆ, ಕರಾವಳಿಯ ಈ ಹೆಣ್ಣು‌ಮಗಳು ಈಗ ರಾಷ್ಟ್ರೀಯ ರಾಜಕಾರಣಕ್ಕೆ ಸಕ್ರಿಯವಾಗಿ‌ ಎಂಟ್ರಿಕೊಟ್ಟಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಕೃಷಿ ಹಾಗೂ ರೈತಕಲ್ಯಾಣ ಸಹಾಯಕ ಸಚಿವೆಯಾಗಿ ನಿನ್ನೆಯಷ್ಟೇ ಅಧಿಕಾರ ವಹಿಸಿಕೊಂಡರು. ಇವರ ಈ ಆಯ್ಕೆ ರಾಜಕೀಯ ವಲಯದಲ್ಲಿ ಅಚ್ಚರಿ ಹಾಗೂ ಆಶ್ಚರ್ಯಕ್ಕೆ ಎಡೆಮಾಡಿಕೊಟ್ಟಿತ್ತು. ಶೋಭಾ ಕರಂದ್ಲಾಜೆಯವರ ರಾಜಕೀಯ ಗುರು ಡಿ.ವಿ ಸದಾನಂದ ಗೌಡರನ್ನೇ ಕೈಬಿಟ್ಟು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಈ ಸಂಸದೆಯನ್ನು ಆಯ್ಕೆ ಮಾಡಿರುವುದು ಇವರ ರಾಜಕೀಯ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಎಂಬುದು ಬಿಜೆಪಿ

ಪಕ್ಷನಿಷ್ಠೆ, ಜವಾಬ್ದಾರಿ ನಿರ್ವಹಣೆಗೆ ಕೇಂದ್ರ ಸಚಿವೆ ಸ್ಥಾನ. ಇದು‌ ಲಕ್ ಅಲ್ಲ, ಪರಿಶ್ರಮದ ಪ್ರತಿಫಲ Read More »

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿಂಗಂ ಅಣ್ಣಾಮಲೈ

ದೆಹಲಿ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ನೇಮಿಸಿ ಬಿಜೆಪಿ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದೆ.ಕಳೆದ ಬಾರಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಅಣ್ಣಾಮಲೈ ಅವರಿಗೆ ಇದೀಗ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಗಳನ್ನು ಕೇಂದ್ರೀಕರಿಸಿ ಬಿಜೆಪಿ ಪಕ್ಷವು ಪ್ರಸ್ತುತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್. ಮುರುಗನ್ ಅವರನ್ನು ಮೀನುಗಾರಿಕೆ, ಪಶುಸಂಗೋಪನೆ ಮತ್ತು

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿಂಗಂ ಅಣ್ಣಾಮಲೈ Read More »

ವಾಹನ ಸವಾರರಿಗೆ ಗುಡ್ ನ್ಯೂಸ್, ಪೊಲೀಸ್ ತಪಾಸಣೆಗೆ ಡಿಜಿಟಲ್ ‌ದಾಖಲೆ‌ ಸಾಕು

ಬೆಂಗಳೂರು, ಜು.8- ಇನ್ನು ಮುಂದೆ ಪೊಲೀಸರ ತಪಾಸಣೆಯ ವೇಳೆ ವಾಹನ ಸವಾರರು ಡಿಜಿಟಲ್ ದಾಖಲೆಗಳನ್ನೇ ಪ್ರದರ್ಶನ ಮಾಡಬಹುದು ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಸ್ಪಷ್ಟಪಡಿಸಿದ್ದಾರೆ. ಡಿಜಿಟಲ್ ಕ್ರಾಂತಿ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದು , ಬೆಂಗಳೂರು ನಗರ ಪೊಲೀಸ್ ವಿಭಾಗವು ಡಿಜಿಟಿಲೀಕರಣದ ಮುಂಚೂಣಿಯಲ್ಲಿದೆ. ವಾಹನ ಸವಾರರಿಗೆ ಎಲ್ಲಾ ಸಮಯದಲ್ಲಿಯೂ ಅಗತ್ಯ ದಾಖಲಾತಿಗಳನ್ನು ಭೌತಿಕವಾಗಿ ತೆಗೆದುಕೊಂಡು ಹೋಗುತ್ತಿರುವ ಕಿರಿಕಿರಿಯಾಗುತ್ತಿರುವ ಹಿನ್ನೆಲೆಯಲ್ಲಿ ಡಿಜಿಟಲ್ ರೂಪದ ದಾಖಲೆಗಳನ್ನು ಹಾಜರುಪಡಿಸಲು ಅವಕಾಶ ನೀಡಲಾಗಿದೆ. ಕೇಂದ್ರ ಹೆದ್ದಾರಿ ಮತ್ತು ರಸ್ತೆ

ವಾಹನ ಸವಾರರಿಗೆ ಗುಡ್ ನ್ಯೂಸ್, ಪೊಲೀಸ್ ತಪಾಸಣೆಗೆ ಡಿಜಿಟಲ್ ‌ದಾಖಲೆ‌ ಸಾಕು Read More »