ರಾಜ್ಯ

ಪುತ್ತೂರು: ಹನಿಟ್ರ್ಯಾಪ್ ಯುವತಿ ಬಂಧನ

ಪುತ್ತೂರು: ಹನಿಟ್ರ್ಯಾಪ್‌ಗೊಳಗಾಗಿ ಲಕ್ಷಾಂತರ ರೂ. ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರು ನಿವಾಸಿ ಯುವಕನೋರ್ವ 7 ಮಂದಿ ವಿರುದ್ಧ ಪೊಲೀಸ್ ದೂರು ನೀಡಿದ್ದು, ಆರೋಪಿಗಳ ಪೈಕಿ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ, ವೃತ್ತಿಯಲ್ಲಿ ಸೇಲ್ಸ್‌ಮ್ಯಾನ್ ಆಗಿರುವ ಅಬ್ದುಲ್ ನಾಸಿರ್ (25) ಹನಿಟ್ರ್ಯಾಪ್‌ಗೆ ಒಳಗಾಗಿ 30 ಲಕ್ಷ ರೂ. ಕಳೆದುಕೊಂಡವರು. ಈ ಬಗ್ಗೆ ನೆಟ್ಟಣಿಗೆ ಮುಡ್ನೂರು ಚೀಚಗದ್ದೆಯ ಹನೀಫ್ ಯಾನೆ ಕೆಎಂವೈ ಹನೀಫ್, ಕೊಟ್ಯಾಡಿಯ ಮುಹಮ್ಮದ್ ಕುಂಞಿ, ಕೊಟ್ಯಾಡಿಯ ಶಾಫಿ, ಸವಣೂರಿನ ಅಝರ್, […]

ಪುತ್ತೂರು: ಹನಿಟ್ರ್ಯಾಪ್ ಯುವತಿ ಬಂಧನ Read More »

ಕೊಡಗಿನಲ್ಲಿ ಜು.19ರವರೆಗೆ ಲಾಕ್ ಡೌನ್ ಕಂಟಿನ್ಯೂ, ಸೀಮಿತ ಸೇವೆಗಳಿಗಷ್ಟೇ ಅವಕಾಶ, ಪ್ರವಾಸಿಗರಿಗೆ‌ ನಿಷೇಧ

ಕೊಡಗು ವರದಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ರೇಟ್ ಕಡಿಮೆಯಾಗದ ಹಿನ್ನೆಲೆ ಕೆಲವು ಸಡಿಲಿಕೆಯೊಂದಿಗೆ ಲಾಕ್‌ಡೌನ್ ಜು19ರವರೆಗೆ ಮುಂದುವರೆಸಲಾಗಿದೆ.ಈ ಹಿಂದೆ ವಾರದ ಮೂರು ದಿನ ಬೆಳಿಗ್ಗೆ 6ರಿಂದ 1ಗಂಟೆಯವರೆಗೆ ಅಗತ್ಯ ಸಾಮಗ್ರಿ ಖರೀದಿಗೆ ಅವಕಾಶ ನೀಡಲಾಗಿತ್ತು. ಸಡಿಲಿಕೆ ಆದೇಶದಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 6 ರಿಂದ 2 ಗಂಟೆಯವರೆಗೆ ಅಗತ್ಯ ಸಾಮಗ್ರಿ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.ಕಂಟೈನ್ಮೇಂಟ್ ವಲಯದಲ್ಲಿ ಯಾವುದೇ ಚಟುವಟಿಕೆ ನಡೆಸಲು ಅವಕಾಶವಿಲ್ಲ. ಅತ್ಯವಶ್ಯಕ ಸೇವೆಗಳಡಿ ಬರುವ ತರಕಾರಿ, ಹಣ್ಣು-ಹಂಪಲು, ದಿನಸಿ, ಕೃಷಿಗೆ ಸಂಬಂಧಿಸಿದ ಅಂಗಡಿ ಮಳಿಗೆ ಮತ್ತು

ಕೊಡಗಿನಲ್ಲಿ ಜು.19ರವರೆಗೆ ಲಾಕ್ ಡೌನ್ ಕಂಟಿನ್ಯೂ, ಸೀಮಿತ ಸೇವೆಗಳಿಗಷ್ಟೇ ಅವಕಾಶ, ಪ್ರವಾಸಿಗರಿಗೆ‌ ನಿಷೇಧ Read More »

ಮಡಿಕೇರಿ: ಎರಡು ಕಾಡಾನೆಗಳ ಕಳೇಬರ ಪತ್ತೆ, ಹುಲಿ ದಾಳಿಯ ಶಂಕೆ

ಮಡಿಕೇರಿ: ಪ್ರತ್ಯೇಕ ಪ್ರಕರಣಗಳಲ್ಲಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಮತ್ತು ವಡ್ಡರಮಾಡು ಎಂಬಲ್ಲಿ ಎರಡು ಕಾಡಾನೆಗಳ ಕಳೇಬರ ಪತ್ತೆಯಾಗಿದೆ. ಕುಟ್ಟ ಗ್ರಾಮದ ಪೂಜೆಕಲ್ ಎಂಬಲ್ಲಿ ಕಾಕೇರ ಕಾಳಪ್ಪ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ ಸುಮಾರು 12 ವರ್ಷದ ಗಂಡು ಕಾಡಾನೆ ಕಳೇಬರ ಭಾನುವಾರ ಮುಂಜಾನೆ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿದು ಬಂದಿಲ್ಲ. ಶನಿವಾರ ರಾತ್ರಿ ಸಾವಿಗೀಡಾಗಿರಬಹುದು ಎಂದು ಅಂದಾಜಿಸಲಾಗಿದೆ. ನಾಗರಹೊಳೆ ಉದ್ಯಾನವನ ವ್ಯಾಪ್ತಿಯ ವಡ್ಡರಮಾಡು ಎಂಬಲ್ಲಿ ಹುಲಿ ದಾಳಿಗೆ 1 ತಿಂಗಳು ಪ್ರಾಯದ ಕಾಡಾನೆ ಮರಿ

ಮಡಿಕೇರಿ: ಎರಡು ಕಾಡಾನೆಗಳ ಕಳೇಬರ ಪತ್ತೆ, ಹುಲಿ ದಾಳಿಯ ಶಂಕೆ Read More »

ಅನುಪಯುಕ್ತ ಕಟ್ಟಡಗಳಲ್ಲಿ ಅಕ್ರಮ ಚಟುವಟಿಕೆ; ಇಲ್ಲಿ ಸರ್ಕಾರಿ ಕಟ್ಟಡಗಳು ಪೋಲಿಗಳ ಅಡ್ಡೆ

ವಿಜಯನಗರ: ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿರುವ ಸರ್ಕಾರಿ ಅನುಪಯುಕ್ತ ಕಟ್ಟಡಗಳು, ಅಕ್ರಮ ಚಟುವಟಿಕೆಯ ಅಡ್ಡೆಯಾಗುತ್ತಿದೆ ಹಾಗೂ ಕೆಲವೆಡೆಗಳಲ್ಲಿ ಜಾಗ ಒತ್ತುವರಿಗೆ ಸಂಚು ನಡೆದಿದೆ ಎಂದು ನಾಗರೀಕರು ದೂರಿದ್ದಾರೆ. ಪಟ್ಟಣದ ಸಂತೆ ಮೈದಾನದಲ್ಲಿರುವ ಆಸ್ಪತ್ರೆ ಸಿಬ್ಬಂದಿಯ ಹಳೇ ನಿವೇಶನಗಳು, ಹಳೇ ಸಾರ್ವಜನಿಕ ಆಸ್ಪತ್ರೆ, ಅರ್ಧಬಂರ್ದ ಬಿದ್ದಿರುವ ಚಾವಡಿಯ ಅನುಪಯುಕ್ತ ಕಟ್ಟಡ ಸೇರಿದಂತೆ ಇನ್ನೂ ಕೆಲವು ಇಂತಹ ಕೆಲ ಸರ್ಕಾರಿ ಅನುಪಯುಕ್ತ ಕಟ್ಟಡಗಳು ಅಕ್ರಮ ಚಟುವಟಿಕೆಗಳ ತಾಣಗಳಾಗಿವೆ. ಅಕ್ರಮ ಕೋರರ ಅಡ್ಡೆಯಾಗಿದ್ದು ಕೆಲವು ಕಟ್ಟಡಗಳು ಕಸ ಸಂಗ್ರಹ ಕೇಂದ್ರಗಳಾಗಿವೆ. ಬಯಲು ಶೌಚಾಲಯಗಳಾಗಿದ್ದು

ಅನುಪಯುಕ್ತ ಕಟ್ಟಡಗಳಲ್ಲಿ ಅಕ್ರಮ ಚಟುವಟಿಕೆ; ಇಲ್ಲಿ ಸರ್ಕಾರಿ ಕಟ್ಟಡಗಳು ಪೋಲಿಗಳ ಅಡ್ಡೆ Read More »

ದ್ವಿತೀಯ ಪಿಯು ರಿಪೀಟರ್ಸ್ ಗೆ ಗುಡ್ ನ್ಯೂಸ್: ಪರೀಕ್ಷೆ ಇಲ್ಲದೇ ಪಾಸ್

ಬೆಂಗಳೂರು: ಕೊರೊನಾ ಕಾರಣದಿಂದಾಗಿ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಿದ್ದ ಸರ್ಕಾರಕ್ಕೆ ರಿಪೀಟರ್ಸ್ ಗಳದ್ದೇ ತಲೆನೋವಾಗಿತ್ತು. ನಮ್ಮನ್ನು ಯಾಕೆ ಪಾಸ್ ಮಾಡಿಲ್ಲ ಎಂದು ರಿಪೀಟರ್ಸ್ ವಿದ್ಯಾರ್ಥಿಗಳು ಕೋರ್ಟ್ ಮೊರೆ ಹೋಗಿದ್ದರು. ಬಳಿಕ ಕೋರ್ಟ್ ಸೆಕೆಂಡ್ ಪಿಯು ಫಲಿತಾಂಶ ಪ್ರಕಟಕ್ಕೆ ತಡೆ ನೀಡಿತ್ತು. ಇದೀಗ ರಿಪೀರ್ಟರ್ಸ್ನ್ನು ಪಾಸ್ ಮಾಡಲು ಮುಂದಾಗಿದೆ. ಈ ಬಾರಿ ದ್ವಿತೀಯ ಪಿಯು ಫ್ರೆಶರ್ಸ್ ವಿದ್ಯಾರ್ಥಿಗಳಂತೆ, ರಿಪೀಟರ್ಸ್ಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲು ನಿರ್ಧರಿಸಿದೆ. ರಿಪೀಟರ್ಸ್ ಗೆ ಗ್ರೇಸ್ ಮಾರ್ಕ್ಸ್ ಕೊಟ್ಟು ಪಾಸ್ ಮಾಡಲು ಪಿಯು

ದ್ವಿತೀಯ ಪಿಯು ರಿಪೀಟರ್ಸ್ ಗೆ ಗುಡ್ ನ್ಯೂಸ್: ಪರೀಕ್ಷೆ ಇಲ್ಲದೇ ಪಾಸ್ Read More »

ಮುಜುರಾಯಿ ಇಲಾಖೆಯ ನಿರ್ಲಕ್ಷ್ಯ, ಅಧಿಕಾರಿಗಳ ಬೇಜವಾಬ್ದಾರಿ. 13 ವರ್ಷಗಳಿಂದ ಮಳೆನೀರಿಗೆ ಮೈಯೊಡ್ಡುತ್ತಿದ್ದಾನೆ ಕುಕ್ಕೆ ಪುರದೊಡೆಯ ಶ್ರೀಸುಬ್ರಹ್ಮಣ್ಯ

ಮಂಗಳೂರು, ಜುಲೈ 3: ನಂಬಿದವರ ಇಷ್ಟಾರ್ಥವನ್ನು ಸಿದ್ಧಿಗೊಳಿಸುವ, ಅಭೀಷ್ಠೆಗಳನ್ನು ಪೂರೈಸುವ ದಕ್ಷಿಣ ಭಾರತದ ಪರಮ ಪವಿತ್ರ ಪುಣ್ಯಕ್ಷೇತ್ರ ಸುಬ್ರಹ್ಮಣ್ಯ ದೇವರು ಮಳೆಗೆ ಮೈ ಒಡ್ಡಿ 13 ವರ್ಷಗಳೇ ಕಳೆದುಹೋಗಿದೆ. ಅಧಿಕಾರಿಗಳ ಬೇಜವಾಬ್ದಾರಿ, ಮುಜುರಾಯಿ‌ ಇಲಾಖೆಯ ದಿವ್ಯ ನಿರ್ಲಕ್ಷ್ಯದಿಂದ ರಾಜ್ಯದ ಪ್ರಸಿದ್ಧ ಯಾತ್ರಾಕ್ಷೇತ್ರಕ್ಕೆ ಪ್ರತೀವರ್ಷ ಪ್ಲಾಸ್ಟಿಕ್ ಹೊದಿಕೆ ಹಾಕಲಾಗುತ್ತಿದೆ. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಹಾಗೂ ರಾಜ್ಯದ ಅತೀ ಶ್ರೀಮಂತ ದೇವಸ್ಥಾನ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ದೇವರ ಸನ್ನಿಧಿ ಮಳೆಗಾಲದಲ್ಲಿ ಸೋರಲಾರಂಭಿಸಿ ಹದಿಮೂರು ವರ್ಷಗಳಾಗಿವೆ. ಸುಬ್ರಹ್ಮಣ್ಯ ಸ್ವಾಮಿಯ ದೇವರ

ಮುಜುರಾಯಿ ಇಲಾಖೆಯ ನಿರ್ಲಕ್ಷ್ಯ, ಅಧಿಕಾರಿಗಳ ಬೇಜವಾಬ್ದಾರಿ. 13 ವರ್ಷಗಳಿಂದ ಮಳೆನೀರಿಗೆ ಮೈಯೊಡ್ಡುತ್ತಿದ್ದಾನೆ ಕುಕ್ಕೆ ಪುರದೊಡೆಯ ಶ್ರೀಸುಬ್ರಹ್ಮಣ್ಯ Read More »

ಜು.5ರಿಂದ ರಾಜ್ಯದಲ್ಲಿ ಅನ್ ಲಾಕ್ 3.0 ಜಾರಿ; ಹಲವು ನಿರ್ಬಂಧ ಸಡಿಲಿಕೆ, ಮಾಲ್, ಶ್ರದ್ದಾಕೇಂದ್ರಗಳು ಓಪನ್

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು, ಅಧಿಕಾರಿಗಳು ತಜ್ಞರೊಂದಿಗೆ ಸಭೆ ನಡೆಸಿ ಜುಲೈ 5 ರಿಂದ 19 ರ ವರೆಗೆ 15 ದಿನಗಳ ಕಾಲ ಅನೇಕ ನಿರ್ಬಂಧ ಸಡಿಲಿಕೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಸೋಮವಾರದಿಂದ ಕಚೇರಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆ, ಮಾಲ್ ತೆರೆಯಲು ಅವಕಾಶವಿದೆಸರ್ಕಾರಿ, ಖಾಸಗಿ ಕಚೇರಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆ ಶೇಕಡ 100 ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು.ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗಿದ್ದು, ಮೆಟ್ರೋ ಸೇರಿ ಸಾರ್ವಜನಿಕ ಸಾರಿಗೆ ಶೇಕಡ 100 ಪ್ರಯಾಣಿಕರೊಂದಿಗೆ ಕಾರ್ಯಾಚರಣೆ

ಜು.5ರಿಂದ ರಾಜ್ಯದಲ್ಲಿ ಅನ್ ಲಾಕ್ 3.0 ಜಾರಿ; ಹಲವು ನಿರ್ಬಂಧ ಸಡಿಲಿಕೆ, ಮಾಲ್, ಶ್ರದ್ದಾಕೇಂದ್ರಗಳು ಓಪನ್ Read More »

ಸಿಡಿ ಇದೆಯೆಂದು ಗೌಡರು ಸ್ವತಃ ಒಪ್ಪಿಕೊಂಡಂತಾಗಿದೆ | “ಕಳ್ಳನ ಮನಸ್ಸು ಹುಳ್ಳುಳ್ಳಗೆ” |ಕಂಡವರ ಬೆಡ್’ರೂಮ್’ಲ್ಲಿ ಕ್ಯಾಮರಾ ಇಡುವ ಚಾಳಿ ಇವರದ್ದು | “ಸಿಡಿ ಪಾರ್ಟಿ ಬಿಜೆಪಿ” : ಕಾಂಗ್ರೆಸ್ ಲೇವಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿ.ಡಿ ಇತ್ತೀಚೆಗೆ ಬಿಡುಗಡೆಯಾಗಿದ್ದು, ರಾಜಕೀಯ ವಲಯದಲ್ಲಿ ಭಾರೀ ದೊಡ್ಡ ಸದ್ದು ಮಾಡಿತ್ತು. ಸಿಡಿ ವಿಷಯ ಹಿಡಿದುಕೊಂಡು ವಿರೋಧ ಪಕ್ಷ ಬಿಜೆಪಿಯ ವಿರುದ್ಧ ಟೀಕೆಗಳ ಸುರಿಮಳೆಗೈದಿತ್ತು. ಅಲ್ಲದೆ, ರಾಷ್ಟ್ರಾದ್ಯಂತ ಬ್ಯೂಜೆಪಿ ಎಂಬ ಹ್ಯಾಷ್‌ಟ್ಯಾಗ್ ಟ್ರೆಂಡ್ ಸೃಷ್ಟಿಯಾಗಿತ್ತು. ಇದರ ಬೆನ್ನಿಗೆ ಆರೋಗ್ಯ ಸಚಿವ ಡಾ. ಸುಧಾಕರ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಶಾಸಕರು ತಮ್ಮ ಸಿಡಿ ಬಿಡುಗಡೆಯಾಗದಂತೆ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದರು. ಈ ವಿಚಾರ ಸಹ ದೊಡ್ಡ ಮಟ್ಟದ ಸುದ್ದಿಗೆ

ಸಿಡಿ ಇದೆಯೆಂದು ಗೌಡರು ಸ್ವತಃ ಒಪ್ಪಿಕೊಂಡಂತಾಗಿದೆ | “ಕಳ್ಳನ ಮನಸ್ಸು ಹುಳ್ಳುಳ್ಳಗೆ” |ಕಂಡವರ ಬೆಡ್’ರೂಮ್’ಲ್ಲಿ ಕ್ಯಾಮರಾ ಇಡುವ ಚಾಳಿ ಇವರದ್ದು | “ಸಿಡಿ ಪಾರ್ಟಿ ಬಿಜೆಪಿ” : ಕಾಂಗ್ರೆಸ್ ಲೇವಡಿ Read More »

ಪುಲ್ವಾಮಾ: ಉಗ್ರರೊಂದಿಗೆ ಸೆಣಸಾಡುತ್ತಾ ರಾಜ್ಯದ ಯೋಧ ಹುತಾತ್ಮ

ಜಮ್ಮು ಕಾಶ್ಮೀರ: ಪುಲ್ವಾಮಾದಲ್ಲಿ ಯೋಧರು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕರುನಾಡಿನ ಯೋಧ ಹುತಾತ್ಮರಾಗಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಯೋಧ ಕಾಶಿರಾಯ ಶಂಕರೆಪ್ಪ ಬೊಮ್ಮನಹಳ್ಳಿ (44) ಅವರು ವೀರಮರಣ ಹೊಂದಿದವರು. ನಿನ್ನೆ ಮುಂಜಾನೆ ಮೂರು ಗಂಟೆ ಸುಮಾರಿಗೆ ರಜಪೂತ್‌- ಪೆರೆಂಟ್‌ ಯುನಿಟ್‌- 38 ಅಸಾಲ್ಟ್‌ ಎಂಜಿನಿಯರ್‌ ರೆಜಿಮೆಂಟ್‌ ಯೋಧರು ಪುಲ್ವಾಮಾದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಹುಡುಕಾಟ ಆರಂಭಿಸಿದ್ದರು. ಈ ವೇಳೆ ಉಗ್ರರು ಇವರಿಗೆ ಎದುರಾಗಿದ್ದು

ಪುಲ್ವಾಮಾ: ಉಗ್ರರೊಂದಿಗೆ ಸೆಣಸಾಡುತ್ತಾ ರಾಜ್ಯದ ಯೋಧ ಹುತಾತ್ಮ Read More »

ಮನೆಯ ಮಗಳಿಗೆ ಮಾಡುವಂತೆ ಶಾಸ್ತ್ರೋಕ್ತವಾಗಿ ಹಸುವಿಗೆ ಸೀಮಂತ ಕಾರ್ಯ | ಇಲ್ಲಿಯ ವಿಶೇಷತೆ ನೀವೆ ಓದಿ

ಗದಗ: ಚೊಚ್ಚಲು ಗರ್ಭಿಣಿಯರಿಗೆ ಆರತಿ ಬೆಳಗಿ, ಹೂ ಗಳಿಂದ ಅಲಂಕರಿಸಿ, ಬಾಗಿನ ತುಂಬಿ ಸೀಮಂತ ಕಾರ್ಯಕ್ರಮ ಮಾಡುವುದು ಸಾಮಾನ್ಯ. ಆದರೆ ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ಗೋವಿಗೂ ಸೀಮಂತ ಮಾಡಲಾಗಿದೆ. ಮೆಣಸಗಿ ಗ್ರಾಮದ ಶ್ರೀಕಾಂತ್ ಗೂರಮ್ಮಣ್ಣವರ್ ಎಂಬವರ ಮನೆಯಲ್ಲಿ ಸಾಕಿದ್ದ ಗೌರಿ ಎಂಬ ಹಸುವಿಗೆ ಅದ್ಧೂರಿಯಾಗಿ ಸೀಮಂತ ಮಾಡಿದ್ದಾರೆ. ಮನೆಯ ಮಗಳಿಗೆ ತವರು ಮನೆಯವರು ಬಳುವಳಿಯಾಗಿ ಕರು ನೀಡಿದ್ದರು. ಸದ್ಯ 7 ವರ್ಷದ ನಂತರ ಗೌರಿ ಗರ್ಭ ಧರಿಸಿರುವುದರಿಂದ ಮನೆ ಮಂದಿಗೆಲ್ಲಾ ಸಂತಸ ತಂದಿದೆ.

ಮನೆಯ ಮಗಳಿಗೆ ಮಾಡುವಂತೆ ಶಾಸ್ತ್ರೋಕ್ತವಾಗಿ ಹಸುವಿಗೆ ಸೀಮಂತ ಕಾರ್ಯ | ಇಲ್ಲಿಯ ವಿಶೇಷತೆ ನೀವೆ ಓದಿ Read More »