ರಾಜ್ಯ

ದೇವಿಗೆ ಕಣ್ಣು ಬಿಡಿಸಿ ಭಕ್ತರ ಕಣ್ಣಿಗೆ ಮಣ್ಣೆರಚಿದ ಪೂಜಾರಿಯ ಚಳಿ ಬಿಡಿಸಿದ ತಹಶೀಲ್ದಾರ್

ಬೆಳಗಾವಿ: ಕಳೆದ ಕೆಲವು ದಿನಗಳ ಹಿಂದೆ ದೇವಸ್ಥಾನವೊಂದರಲ್ಲಿ ದೇವಿ ಕಣ್ಣು ಬಿಟ್ಟಿದ್ದಾಳೆ. ಇನ್ನು ಕೆಲವೇ ಸಮಯದಲ್ಲಿ ಕೋರೋನಾ ಮಹಾಮಾರಿ ಓಡಿಸಲಿದ್ದಾಳೆ. ಹೀಗೆ ಮಾಧ್ಯಮಗಳಲ್ಲಿ ಬಿತ್ತರವಾದ ಸುದ್ದಿ ರಾಜ್ಯದ ಜನರಲ್ಲಿ ಅಚ್ಚರಿ ಮೂಡಿಸಿತ್ತು. ಇದೀಗ ದೇವಿಯ ವಿಗ್ರಹದಲ್ಲಿ ಕಣ್ಣನ್ನು ಸ್ವತಹ ಪೂಜಾರಿಯೇ ಬಿಡಿಸಿದ್ದಾರೆ ಎಂಬ ರಹಸ್ಯ ಬಯಲಾಗಿದೆ. ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದ ದೇವಾಲಯದಲ್ಲಿ ದೇವಿ ಕಣ್ಣು ಬಿಟ್ಟಿದ್ದಾಳೆ ಎಂಬ ಸುದ್ದಿ ತಿಳಿದು ಜನ ತಂಡೋಪತಂಡವಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು. ಈ ವಿಷಯ ಕಾಗವಾಡ ತಹಸಿಲ್ದಾರ್ ಪ್ರಮೀಳಾ […]

ದೇವಿಗೆ ಕಣ್ಣು ಬಿಡಿಸಿ ಭಕ್ತರ ಕಣ್ಣಿಗೆ ಮಣ್ಣೆರಚಿದ ಪೂಜಾರಿಯ ಚಳಿ ಬಿಡಿಸಿದ ತಹಶೀಲ್ದಾರ್ Read More »

“ವೈದ್ಯೋ ನಾರಾಯಣೋ ಹರಿ”, ಜೀವ ರಕ್ಷಕರೇ ನಿಮಗೊಂದು ಸಲಾಂ

ಈ ಮಾತಿನ ನಿಜವಾದ ಅರ್ಥ ಕಳೆದೆರಡು ವರ್ಷಗಳಿಂದ ಜಗತ್ತು ಎದುರಿಸುತ್ತಿರುವ ಸಾಂಕ್ರಾಮಿಕದಿಂದ ಅರಿವಿಗೆ ಬರುತ್ತಿದೆ ಎಂದರೆ ತಪ್ಪಾಗಲ್ಲ. ವೈದ್ಯರಿಲ್ಲದೇ ಈ ಕೊರೊನಾ ಮಹಾಮಾರಿಯನ್ನು ಎದುರಿಸುವ ವಿಚಾರ ಊಹಿಸಿಕೊಳ್ಳಲು ಅಸಾಧ್ಯ. ಅದೇ ರೀತಿ ಪ್ರತಿಯೊಬ್ಬ ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಡಾಕ್ಟರ್ ಗಳ ಪಾತ್ರ ಮಾತಿಗೆ ನಿಲುಕದ್ದು. ಯಾವುದೇ ಪ್ರತಿಫಲವನ್ನು ನಿರೀಕ್ಷಿಸದೇ, ಜನಸೇವೆ ಮಾಡುವ ವೈದ್ಯರು ನಮ್ಮ ನಡುವೆ ಸಾಕಷ್ಟು ಜನರಿದ್ದಾರೆ. ತಮ್ಮ ಅನುಕೂಲತೆಯನ್ನು ಗಣನೆಗೆ ತೆಗೆದುಕೊಳ್ಳದೆ ರೋಗಿಯ ಆರೈಕೆಗೆ ಹೆಚ್ಚು ಕಾಲವನ್ನು ವಿನಿಯೋಗಿಸುವ ವೈದ್ಯರುಗಳು ಸದಾ ದೇವತೆಗಳಿಗೆ ಸಮನಾಗಿರುತ್ತಾರೆ.

“ವೈದ್ಯೋ ನಾರಾಯಣೋ ಹರಿ”, ಜೀವ ರಕ್ಷಕರೇ ನಿಮಗೊಂದು ಸಲಾಂ Read More »

ದೇಶದಲ್ಲೇ ಪ್ರಥಮ ಪ್ರಯೋಗ, ಇನ್ಮುಂದೆ ಬ್ಯಾಗ್ ನಲ್ಲಿ ಸಿಗಲಿದೆ ಮರಳು- ಸಚಿವ ನಿರಾಣಿ

ಬೆಂಗಳೂರು, ಜೂ. 30: ದೇಶದಲ್ಲೇ ಪ್ರಪ್ರಥಮ ಬಾರಿಗೆ ಗ್ರಾಹಕರಿಗೆ ಸುಲಭವಾಗಿ ಸಿಗುವಂತೆ ಅನುಕೂಲವಾಗಲು ಇನ್ನು ಮುಂದೆ ಬ್ಯಾಗ್ ಗಳಲ್ಲಿ ಮರಳು ಮಾರಾಟ ಮಾಡುವ ವಿನೂತನ ಯೋಜನೆಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಆರಂಭಿಸಲಿದೆ. ಬ್ಯಾಗ್ ಗಳಲ್ಲಿ ಮಾರಾಟ ಮಾಡುವ ಉದ್ದೇಶವೇನೆಂದರೆ ಸರಕಾರದ ವತಿಯಿಂದಲೇ ಕೈಗೆಟುಕವ ದರದಲ್ಲಿ ಜನಸಾಮಾನ್ಯರು ಹಾಗೂ ಎಲ್ಲಾ ವರ್ಗದವರಿಗೂ ಮರಳು ಸಿಗಲಿದ್ದು ಇದರ ಪ್ರಸ್ತಾವನೆಯು ಸಹಾ ಸಿದ್ದವಾಗಿದೆ. ಇದರಿಂದಾಗಿ ಮನೆ ಕಟ್ಟುವವರು ಹಾಗೂ ಇತರರಿಗೆ ಸುಲಭ ಮಾರ್ಗದಲ್ಲಿ ಮರಳು ಲಭ್ಯವಾಗಲಿದೆ. ಬುಧವಾರ ವಿಕಾಸಸೌಧದಲ್ಲಿ

ದೇಶದಲ್ಲೇ ಪ್ರಥಮ ಪ್ರಯೋಗ, ಇನ್ಮುಂದೆ ಬ್ಯಾಗ್ ನಲ್ಲಿ ಸಿಗಲಿದೆ ಮರಳು- ಸಚಿವ ನಿರಾಣಿ Read More »

ಅತ್ತೆ ಮೇಲೆ ಕುದಿಯುವ ಎಣ್ಣೆ ಎರಚಿದ ಪಾಪಿ ಸೊಸೆ!. ಕಾರಣ ಕೇಳಿದ್ರೆ ಶಾಕ್ ಆಗ್ತೀರಾ.

ವಿಜಯವಾಡ: ನೆರೆಯ ರಾಜ್ಯ ಆಂಧ್ರಪ್ರದೇಶದಲ್ಲಿ ಅತ್ತೆ-ಸೊಸೆ ಜಗಳ ವಿಕೋಪಕ್ಕೆ ತಿರುಗಿದ್ದು, ಕುದಿಯುವ ಎಣ್ಣೆಯನ್ನು ಅತ್ತೆಯ ಮೇಲೆ ಸೊಸೆ ಎರಚಿರುವ ಘಟನೆ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಅತ್ತೆಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಸರ್ಕಾರದಿಂದ ಬಂದ ಹಣದ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿದೆ. ಜಗನ್​​ ಚೆಯುತಾ ಯೋಜನೆಯಡಿ ಹಣ ಬಂದಿತ್ತು. ಹಣ ಹಂಚಿಕೆ ವಿಚಾರದಲ್ಲಿ ಅತ್ತೆ-ಸೊಸೆ ಮಧ್ಯೆ ವಾಗ್ವಾನ ನಡೆದಿದೆ. ಅತ್ತೆಯ ಮಾತುಗಳಿಂದ ಕುಪಿತಗೊಂಡ ಸೊಸೆ ಈ ಕೃತ್ಯವೆಸಗಿದ್ದಾಳೆ. ಗುಡಿವಾಡದ ನಿವಾಸಿಗಳಾದ ಅತ್ತೆ ಲಕ್ಷ್ಮಿ(55) ಹಾಗೂ

ಅತ್ತೆ ಮೇಲೆ ಕುದಿಯುವ ಎಣ್ಣೆ ಎರಚಿದ ಪಾಪಿ ಸೊಸೆ!. ಕಾರಣ ಕೇಳಿದ್ರೆ ಶಾಕ್ ಆಗ್ತೀರಾ. Read More »

ಯೂತ್ ಕಾಂಗ್ರೇಸ್ ನಲ್ಲಿ ನೆಲೆ‌ ಸಿಗದ ನಲಪಾಡ್, ರಕ್ಷಾ ರಾಮಯ್ಯಗೆ ಶ್ರೀರಕ್ಷೆ

ಬೆಂಗಳೂರು: ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬದಲಾವಣೆ ವಿವಾದಕ್ಕೆ ಕೊನೆಗೂ ಕಾಂಗ್ರೆಸ್ ತೆರೆ ಎಳೆದಿದ್ದು, ಅಧಿಕಾರ ಹಸ್ತಾಂತರ ಎಂಬುದು ಸುಳ್ಳು ಸುದ್ದಿ. ಅಂತಹ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದೆ. ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಅವರನ್ನು ಕೆಳಗಿಳಿಸಿ ಮೊಹಮ್ಮದ್ ನಲಪಾಡ್ ಗೆ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಭಾರಿ ಚರ್ಚೆ ನಡೆದಿತ್ತು. ಅಲ್ಲದೇ ಡಿಸೆಂಬರ್ ಅಂತ್ಯದವರೆಗೆ ರಕ್ಷಾ ರಾಮಯ್ಯ ಅಧಿಕಾರದಲ್ಲಿರಲು ಗಡುವು ನೀಡಲಾಗಿದೆ ಎಂಬ ಮಾತು ಕೇಳಿ ಬಂದಿತ್ತು. ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಬಣ

ಯೂತ್ ಕಾಂಗ್ರೇಸ್ ನಲ್ಲಿ ನೆಲೆ‌ ಸಿಗದ ನಲಪಾಡ್, ರಕ್ಷಾ ರಾಮಯ್ಯಗೆ ಶ್ರೀರಕ್ಷೆ Read More »

ಮೆಟ್ರೋ ರೈಲಿನಲ್ಲಿ ಶೀಘ್ರವೇ ಟೋಕನ್ ವ್ಯವಸ್ಥೆ ಆರಂಭ

ಬೆಂಗಳೂರು: ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ಕರ್ನಾಟಕದಲ್ಲಿ ಹೇರಲಾಗಿದ್ದ ಲಾಕ್‌ಡೌನ್ ಹಂತಹಂತವಾಗಿ ಸಡಿಲಿಯಾಗುತ್ತಿದೆ. ಸದ್ಯ ಸುಮಾರು ೨ ತಿಂಗಳ ನಂತರ ಮೆಟ್ರೋ ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿದ್ದರೂ ಟೋಕನ್ ವ್ಯವಸ್ಥೆ ಸ್ಥಗಿತಗೊಳಿಸಲಾಗಿತ್ತು. ಸದ್ಯ ಈಗ ಮತ್ತೆ ಮೆಟ್ರೋ ರೈಲಿನಲ್ಲಿ ಟೋಕನ್ ವ್ಯವಸ್ಥೆ ಆರಂಭಿಸಲು ಚಿಂತನೆ ನಡೆಯುತ್ತಿದೆ. ಸ್ಮಾರ್ಟ್ ಕಾರ್ಡ್ ಕಡ್ಡಾಯದಿಂದ ಆದಾಯಕ್ಕೆ ಭಾರಿ ಹೊಡೆತ ಬಿದ್ದಿದೆ. ಹೀಗಾಗಿ ಕೊವಿಡ್ ಆತಂಕದಿಂದ ಸ್ಥಗಿತಗೊಂಡಿದ್ದ ಟೋಕನ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲು BMRCL ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ಕೊವಿಡ್ ಪೂರ್ವದಲ್ಲಿ ನಿತ್ಯ ೫

ಮೆಟ್ರೋ ರೈಲಿನಲ್ಲಿ ಶೀಘ್ರವೇ ಟೋಕನ್ ವ್ಯವಸ್ಥೆ ಆರಂಭ Read More »

ಲಾಕ್ ಡೌನ್ ನಿಂದ‌ ಕೆಲಸ ಕಳ್ಕೊಂಡ ಪತಿ‌ ಮಾಡಿದ ಕಾರ್ಯಕ್ಕೆ ಡೈವೋರ್ಸ್ ಕೇಳಿದ ಪತ್ನಿ! | ಅಷ್ಟಕ್ಕೂ ಆತ ಮಾಡಿದ್ದೇನು?

ಬೆಂಗಳೂರು: ಬೆಂಗಳೂರು ಮೂಲದ 24 ವರ್ಷದ ಮಹಿಳೆಯೊಬ್ಬಳು ತನ್ನ ಪತಿ ಎರಡು ವರ್ಷಗಳ ಕಾಲ ಲೈಂಗಿಕ ಕಾರ್ಯಕರ್ತನಾಗಿ ಕೆಲಸ ಮಾಡುವುದು ತಿಳಿದ ಬಳಿಕ ಈಗ ಡೈವೋರ್ಸ್‌ಗೆ ಅರ್ಜಿ ಸಲ್ಲಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಪಿಓ ಉದ್ಯೋಗಿಯಾಗಿದ್ದ ಈ ವ್ಯಕ್ತಿ ಲಾಕ್‌ಡೌನ್ ಸಮಯದಲ್ಲಿ ಕೆಲಸ ಕಳೆದುಕೊಂಡು ಲೈಂಗಿಕ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಈ ನಡುವೆ ತನ್ನ ಗಂಡನ ಕೆಲಸದ ಬಗ್ಗೆ ಅನುಮಾನಗೊಂಡ ಆತ ಪತ್ನಿ, ತನ್ನ ತಮ್ಮ ಸಹಾಯದಿಂದ ಆತನ ಲ್ಯಾಪ್‌ಟಾಪ್‌ ಅನ್ನು ನೋಡಿದ ವೇಳೆಯಲ್ಲಿ ಆತ

ಲಾಕ್ ಡೌನ್ ನಿಂದ‌ ಕೆಲಸ ಕಳ್ಕೊಂಡ ಪತಿ‌ ಮಾಡಿದ ಕಾರ್ಯಕ್ಕೆ ಡೈವೋರ್ಸ್ ಕೇಳಿದ ಪತ್ನಿ! | ಅಷ್ಟಕ್ಕೂ ಆತ ಮಾಡಿದ್ದೇನು? Read More »

ಜಿಲ್ಲೆಗೆ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ: ಎಂಎಲ್’ಸಿ ಶಾಂತೆಯಂಡ ವೀಣಾ ಅಚ್ಚಯ್ಯ ಒತ್ತಾಯ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಾರದೆ ಇರುವುದರಿಂದ ಹೊರ ಭಾಗದಿಂದ ಜಿಲ್ಲೆಗೆ ಆಗಮಿಸುವ ಕಾರ್ಮಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ ಒತ್ತಾಯಿಸಿದ್ದಾರೆ. ಇಷ್ಟು ದಿನಗಳೇ ಕಳೆದರೂ ಕೊಡಗು ಕೋವಿಡ್ ಮುಕ್ತವಾಗುತ್ತಿಲ್ಲ. ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಪಾಸಿಟಿವಿಟಿ ಪ್ರಮಾಣ ಶೇ.೫ ಕ್ಕಿಂತ ಕೆಳಗಿಳಿಯುತ್ತಿಲ್ಲ. ಪರಿಸ್ಥಿತಿ ಹೀಗಿದ್ದರೂ ಹೊರ ಜಿಲ್ಲೆಗಳಿಂದ ಗುಂಪು ಗುಂಪಾಗಿ ಕಾರ್ಮಿಕರನ್ನು ಕರೆ ತರಲಾಗುತ್ತಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೆ ಇರಲು ಇದೂ ಕೂಡ ಒಂದು ಕಾರಣವೆಂದು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲೆಗೆ ಆಗಮಿಸುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿ: ಎಂಎಲ್’ಸಿ ಶಾಂತೆಯಂಡ ವೀಣಾ ಅಚ್ಚಯ್ಯ ಒತ್ತಾಯ Read More »

ಸತ್ತ ವ್ಯಕ್ತಿ 20 ನಿಮಿಷಗಳ ಬಳಿಕ ಮತ್ತೆ ಹುಟ್ಟಿದ | ಆ 20 ನಿಮಿಷಗಳಲ್ಲಿ ಆಗಿದ್ದೇನು..?

ಸತ್ತ ನಂತರ ನಾವು ಎಲ್ಲಿಗೆ ಹೋಗುತ್ತೇವೆ..? ಸ್ವರ್ಗ ನರಕ ಎಂಬುದು ಇದೆಯಾ..? ದೇಹ ಬಿಟ್ಟ ಮೇಲೂ ಆತ್ಮ ಕ್ಕೆ ಸುತ್ತ – ಮುತ್ತ ನಡೆಯುವ ಘಟನೆಗಳು ಗೋಚರಿಸುತ್ತವೆಯೇ..? ದೇಹವನ್ನು ಆಗಲಿದೆ ಮೇಲೆ ಆತ್ಮ ನಾವಿದ್ದಲ್ಲೇ ಇರುತ್ತದೆಯ…? ಎರಡನೇ ಜನ್ಮ ಇದೆಯೇ….? ಮರಣದ ನಂತರದ ಪ್ರಯಾಣವನ್ನು ಕರ್ಮದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆಯೇ…? ಇಂತಹ ಎಲ್ಲಾ ಪ್ರಶ್ನೆಗಳು ನಮ್ಮನಿಮ್ಮೆಲ್ಲರ ಮನಸ್ಸಿನಲ್ಲಿ ಆಗಾಗ ಉದ್ಭವಿಸುತ್ತಿರುತ್ತವೆ. ಆದರೆ ಆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದಂತಾಗಿದೆ. ಇಲ್ಲೊಬ್ಬ ವ್ಯಕ್ತಿ ಸತ್ತು ಸ್ವಲ್ಪ ಸಮಯದಲ್ಲಿ ಮತ್ತೆ

ಸತ್ತ ವ್ಯಕ್ತಿ 20 ನಿಮಿಷಗಳ ಬಳಿಕ ಮತ್ತೆ ಹುಟ್ಟಿದ | ಆ 20 ನಿಮಿಷಗಳಲ್ಲಿ ಆಗಿದ್ದೇನು..? Read More »

ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕೋವಿಡ್ ಕಾರಣದಿಂದ ಈ ಬಾರಿ ವಿಶೇಷವಾಗಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಬಾರಿ ಎರಡು ದಿನ ಪರೀಕ್ಷೆ ನಡೆಯಲಿದೆ. ಜು.19ರಂದು ಕೋರ್ ವಿಷಯಗಳ ಪರೀಕ್ಷೆ (ಸಮಾಜ ವಿಜ್ಞಾನ, ಗಣಿತ, ವಿಜ್ಞಾನ) ಜು. 22ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು. ಕರ್ನಾಟಕದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ತೀರ್ಮಾನಿಸಿರುವ ಶಿಕ್ಷಣ ಇಲಾಖೆ ಇಂದು ಮಹತ್ವದ ಸಭೆ ನಡೆಸಿ ನಿರ್ಧಾರ ಕೈಗೊಂಡಿದೆ. ಜುಲೈ ತಿಂಗಳ ಮೂರನೇ ವಾರದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಯ ಅಧಿಕೃತ

ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ Read More »