ರಾಜ್ಯ

ಲಡಾಕ್’ನಲ್ಲಿ ಬೆಳ್ಳಂಬೆಳಗ್ಗೆ ಭೂಕಂಪನ

ಜಮ್ಮು ಕಾಶ್ಮೀರ: ಲಡಾಖ್ ನ ಲೇಹ್ ನಲ್ಲಿ ಇಂದು ಬೆಳಗಿನ ಜಾವ ಭೂಕಂಪನ ಸಂಭವಿಸಿದೆ. ಯಾವುದೇ ಸಾವು-ನೋವು, ಹಾನಿಯ ಬಗ್ಗೆ ವರದಿಯಾಗಿಲ್ಲ. ಲೇಹ್ ಪ್ರದೇಶದ ನಿವಾಸಿಗಳಿಗೆ ಬೆಳಗಿನ ಜಾವಾ ಭೂಮಿ ನಡುಗಿದ ಅನುಭವಾಗಿದೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ (ಎನ್ ಸಿಎಸ್) ಹೇಳಿದೆ. ಎನ್ಸಿಎಸ್ ಪ್ರಕಾರ ಬೆಳಿಗ್ಗೆ 6:10 ರ ಸುಮಾರಿಗೆ ಕಂಪನದ ಅನುಭವವಾಗಿದೆ. ಲಡಾಖ್ ನ ಲೇಹ್ ನಲ್ಲಿ 4.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿದು […]

ಲಡಾಕ್’ನಲ್ಲಿ ಬೆಳ್ಳಂಬೆಳಗ್ಗೆ ಭೂಕಂಪನ Read More »

ಪೆಲತ್ತರಿ ಅಂತ ತಾತ್ಸಾರ ಮಾಡ್ಬೇಡಿ, ಅದಕ್ಕೂ ಭಾರೀ ರೇಟ್ ಮರಾಯ್ರೆ…!

ಸಾಮಾನ್ಯವಾಗಿ ಏನಾದರೂ ಮಾತನಾಡೋವಾಗ ಪೆಲತ್ತರಿ(ಹಲಸಿನ ಬೀಜ) ಅಂತ ತಾತ್ಸಾರ ಮಾಡ್ತೇವೆ. ಹುರುಳಿಲ್ಲದ ಮಾತಿಗೆ ಈ ರೀತಿ ಹೇಳುವುದುಂಟು. ಹೀಗೆ ಜನರ ಬಾಯಲ್ಲಿ ತಾತ್ಸಾರಗೊಂಡ, ಬೆಲೆಯಿಲ್ಲದ ಹಲಸಿನ ಬೀಜದ ಈಗಿನ ಮಾರ್ಕೆಟ್ ರೇಟ್ ಕೇಳಿದ್ರೆ ನೀವ್ ಬೆಚ್ಚಿ ಬೀಳ್ತೀರ.ಹೌದು, ಲಾಕ್ ಡೌನ್ ನಿಂದಾಗಿ ಎಲ್ಲಾ ವಸ್ತುಗಳು ಆನ್ ಲೈನ್ ನಲ್ಲೇ ಬಿಕರಿಯಾಗುತ್ತಿವೆ. ಈ ಮಾರುಕಟ್ಟೆಗೆ ಈಗ ಎಂಟ್ರಿ ಕೊಟ್ಟಿದೆ ಹಲಸಿನ ಬೀಜ. ಮಲೆನಾಡಲ್ಲಿ ಬಿದ್ದು ಹಾಳಾಗಿ ಹೋಗುವ ಹಲಸಿನ ಬೀಜದ 800 ಗ್ರಾಂ ಪ್ಯಾಕೆಟ್ ಗೆ 800 ರೂ

ಪೆಲತ್ತರಿ ಅಂತ ತಾತ್ಸಾರ ಮಾಡ್ಬೇಡಿ, ಅದಕ್ಕೂ ಭಾರೀ ರೇಟ್ ಮರಾಯ್ರೆ…! Read More »

ರಾಜ್ಯಕ್ಕೆ ಶೀಘ್ರದಲ್ಲೇ ಹೊಸ‌ ಮುಖ್ಯಮಂತ್ರಿ ಸಾಧ್ಯತೆ, ನಾಯಕತ್ವ ಬದಲಾವಣೆ ಕಸರತ್ತು ನಡೆಸುತ್ತಿರುವ ಬಿಜೆಪಿ ಹೈಕಮಾಂಡ್!?

ಬೆಂಗಳೂರು : ನಾಯಕತ್ವದ ಬದಲಾಣೆಗಾಗಿ ಶುರುವಾಗಿದ್ದ ರಾಜ್ಯ ಬಿಜೆಪಿಯೊಗಿನ ಭಿನ್ನಮತದ ಬೆಂಕಿ ಈಗಲೂ ಬೂದಿ ಮುಚ್ಚಿದ ಕೆಂಡದಂತಿದೆ. ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಭೇಟಿಯ ಬೆನ್ನಲೇ ಎಲ್ಲವೂ ತಣ್ಣಗಾದಂತೆ ಕಂಡರೂ, ಮತ್ತೆ ರಾಜ್ಯ ಬಿಜೆಪಿಯಲ್ಲಿ ಈಗ ಕುತೂಹಲಕಾರಿ ಬೆಳವಣಿಗೆಗಳು ನಡೆದಿವೆ. ಬಿಜೆಪಿ ಹೈಕಮಾಂಡ್‌ ರಾಜ್ಯ ಬಿಜೆಪಿ ನಾಯಕತ್ವದ ಬದಲಾವಣೆಗೆ ತೆರೆಮರೆಯಲ್ಲೇ ಕಸರತ್ತು ನಡೆಸುತ್ತಿರುವುದು ಸಚಿವ ಹಾಗೂ ರಾಜ್ಯ ಬಿಜೆಪಿ ಭಿನ್ನರ ಬಣದ ಮುಖಂಡ ಸಿ.ಪಿ.ಯೋಗೇಶ್ವರ್‌ ಅವರ ಹೇಳಿಕೆಗಳ ಮೂಲಕ ತೋರಿಸಿದೆ.ಮೂಲಗಳ ಪ್ರಕಾರ ಅತೀ ಶೀಘ್ರದಲ್ಲೇ ರಾಜ್ಯ ಬಿಜೆಪಿ

ರಾಜ್ಯಕ್ಕೆ ಶೀಘ್ರದಲ್ಲೇ ಹೊಸ‌ ಮುಖ್ಯಮಂತ್ರಿ ಸಾಧ್ಯತೆ, ನಾಯಕತ್ವ ಬದಲಾವಣೆ ಕಸರತ್ತು ನಡೆಸುತ್ತಿರುವ ಬಿಜೆಪಿ ಹೈಕಮಾಂಡ್!? Read More »

ಜಾಲತಾಣಗಳಲ್ಲಿ ಕ್ಲಬ್ ಹೌಸ್ ದೇ ಮಾತು | ಹಾಗಿದ್ರೆ ಏನಿದು ಕ್ಲಬ್ ಹೌಸ್? | ಇಲ್ಲಿದೆ ಸಂಪೂರ್ಣ ಮಾಹಿತಿ

ಸಾಮಾಜಿಕ ಜಾಲತಾಣಗಳಲ್ಲಿ ಈಗ ಕ್ಲಬ್ ಹೌಸ್ ಬಗ್ಗೆಯೇ ಮಾತು ಹೆಚ್ಚುತ್ತಿದೆ. ಈ ಕ್ಲಬ್‌ನಲ್ಲಿ ಇವತ್ತು ಈ ನಟಿ, ನಿರ್ದೇಶಕ ಬಂದಿದ್ದರು. ಬಹಳ ಚೆನ್ನಾಗಿ ಮಾತನಾಡಿದರು ಎಂಬ ಮಾತುಗಳನ್ನು ನೀವು ಕೇಳಿರಬಹುದು. ಹೀಗಾಗಿ ನಾನು ಕ್ಲಬ್ ಹೌಸ್ ಸೇರಬೇಕು, ಮಾತನಾಡಬೇಕು ಎಂದು ಅನಿಸಿದ್ದರೂ ಜಾಯಿನ್ ಆಗುವುದು ಹೇಗೆ? ಜಾಯಿನ್ ಆದ ನಂತರ ಮಾತನಾಡುವುದು ಹೇಗೆ? ಕ್ಲಬ್ ಸೃಷ್ಟಿ ಮಾಡುವುದು ಹೇಗೆ? ಹೀಗೆ ಹಲವು ಪ್ರಶ್ನೆಗಳು ನಿಮ್ಮಲ್ಲಿ ಮೂಡುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಲು ಇಲ್ಲಿ ಸರಳವಾಗಿ

ಜಾಲತಾಣಗಳಲ್ಲಿ ಕ್ಲಬ್ ಹೌಸ್ ದೇ ಮಾತು | ಹಾಗಿದ್ರೆ ಏನಿದು ಕ್ಲಬ್ ಹೌಸ್? | ಇಲ್ಲಿದೆ ಸಂಪೂರ್ಣ ಮಾಹಿತಿ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ದ್ವಾದಶ ರಾಶಿಗಳ ಜೂ.27 ರಿಂದ ಜುಲೈ.3ರವರೆಗಿನ ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ. ಮೇಷರಾಶಿ:-ಖಾಸಗಿ ಕಂಪನಿ ಕೆಲಸದಲ್ಲಿದ್ದರೆ,ಸ್ವಲ್ಪ ಕೆಲಸದ ಒತ್ತಡ ಇರುತ್ತದೆ ಹಾಗೂ ಸರ್ಕಾರಿ ಕೆಲಸದವರಿಗೆ ಈ ವಾರ ಉತ್ತಮವಾಗಿದೆ. ವ್ಯಾಪಾರಸ್ಥರಿಗೆ ಉತ್ತಮವಾದ ದಿನವಾಗಿದೆ ಹಾಗೂ ಉತ್ತಮ ಲಾಭ ಸಿಗುತ್ತದೆ ಸ್ವಲ್ಪ ಹಣದ ವಿಚಾರದಲ್ಲಿ ನೋಡಿಕೊಂಡು ಖರ್ಚು ಮಾಡಬೇಕು ಹಾಗೂ ಆರೋಗ್ಯದ ಬಗ್ಗೆ ಸ್ವಲ್ಪ ಗಮನ ಕೊಡಬೇಕು

ದ್ವಾದಶ ರಾಶಿಗಳ ವಾರ ಭವಿಷ್ಯ Read More »

30 ವರ್ಷದ ಹಿಂದೆ ಮುಳುಗಡೆಯಾಗಿದ್ದ ಹಡಗಿನ ಅವಶೇಷ ಪತ್ತೆ

ಕಾರವಾರ: ಅಂದಾಜು ಮೂವತ್ತು ವರ್ಷಗಳ ಹಿಂದೆ ಕಾರವಾರದ ಸಮುದ್ರ ಭಾಗದಲ್ಲಿ ಮುಳುಗಡೆಯಾಗಿದ್ದ ಸಿಂಗಾಪುರ ದೇಶದ ಚೆರಿಮಾಜು ಎಂಬ ಹೆಸರಿನ ಸರಕು ಸಾಗಾಣಿಕೆ ಹಡಗಿನ ಅವಶೇಷಗಳು ಇಂದು ಕಾರವಾರ ಕಡಲತೀರದಲ್ಲಿ ಪತ್ತೆಯಾಗಿದೆ. 1981 ರಲ್ಲಿ ಸಿಂಗಾಪುರದಿಂದ ಕಾರವಾರದ ಬಂದರಿಗೆ ಬಂದಿದ್ದ ಈ ಹಡಗು 14.418 ಟನ್ ಡಾಂಬರ್ ಅನ್ನು ಹೊತ್ತು ತಂದಿತ್ತು. ಈ ವೇಳೆ ಕಡಲಬ್ಬರಕ್ಕೆ ಸಿಲುಕಿದ್ದ ಈ ಹಡಗು ಇಲ್ಲಿಯೇ ಸಂಪೂರ್ಣ ಸಮುದ್ರದಾಳಕ್ಕೆ ಸೇರಿ ಹೋಗಿತ್ತು. ಈ ವೇಳೆ ಹಡಗಿನಲ್ಲಿದ್ದ 30 ನಾವಿಕರನ್ನು ರಕ್ಷಣೆ ಮಾಡಲಾಗಿತ್ತು. ಹುದುಗಿ

30 ವರ್ಷದ ಹಿಂದೆ ಮುಳುಗಡೆಯಾಗಿದ್ದ ಹಡಗಿನ ಅವಶೇಷ ಪತ್ತೆ Read More »

ಮತ್ತೆ ಅಬ್ಬರಿಸಲಿದ್ದಾನೆ ವರುಣ; ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ.

ಬೆಂಗಳೂರು : ಮುಂಗಾರು ಆಗಮನದ ಬಳಿಕ ಬಿರುಸಾಗಿದ್ದ ಮಳೆ, ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೊಂಚ ಕಡಿಮೆಯಾಗಿದೆ. ಆದರೆ, ಇಂದಿನಿಂದ ಮತ್ತೆ ಮಳೆಯ ಆರ್ಭಟ ಶುರುವಾಗಲಿದ್ದು, 3 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಜೂನ್ 27ರಿಂದ ರಾಜ್ಯಾದ್ಯಂತ ಬಹುತೇಕ ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಲಿದೆ. ಜೂನ್ 30ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ

ಮತ್ತೆ ಅಬ್ಬರಿಸಲಿದ್ದಾನೆ ವರುಣ; ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ. Read More »

ಬೆಂಗಳೂರು : ಸಲಿಂಗಕಾಮಕ್ಕೆ ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸುತಿದ್ದ ಮುಖ್ಯ ಶಿಕ್ಷಕ ಬಂಧನ

ನೆಲಮಂಗಲ: ವಿಶೇಷ ಮಕ್ಕಳ ವಸತಿ ಶಾಲೆಯಲ್ಲಿ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿಯ ಜೊತೆ ವಿಕೃತಿ ಮೆರೆದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದ ಘಟನೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ವಿಶೇಷ ಮಕ್ಕಳ ವಸತಿ ಶಾಲೆಯಲ್ಲಿ ನಡೆದಿದೆ. ಮುಖ್ಯ ಶಿಕ್ಷಕ ಎಸ್.ರಂಗನಾಥ್ ಬಂಧಿತ ಆರೋಪಿ. ಈತ ಸಲಿಂಗಕಾಮಕ್ಕೆ ವಿದ್ಯಾರ್ಥಿ ಬಟ್ಟೆ ಬಿಚ್ಚಿಸುತ್ತಿದ್ದ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಬಗ್ಗೆ ವಸತಿ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ಶಿಕ್ಷಕ ರಂಗನಾಥ್, ಒತ್ತಾಯದ ಸಲಿಂಗಕಾಮ ಐಪಿಸಿ 377

ಬೆಂಗಳೂರು : ಸಲಿಂಗಕಾಮಕ್ಕೆ ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸುತಿದ್ದ ಮುಖ್ಯ ಶಿಕ್ಷಕ ಬಂಧನ Read More »

ಮಹಿಳಾ ಮಿಲಿಟರಿ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಸೇನೆ ಸೇರ ಬಯಸುವ ಮಹಿಳಾ ಅಭ್ಯರ್ಥಿಗಳಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಸ್ಸಾಂ ರೆಜಿಮೆಂಟ್‍ನ ಹಿರಿಯ ಅಭಿಲೇಖಾಲಯ ಕಛೇರಿ ವತಿಯಿಂದ ಮಹಿಳಾ ಮಿಲಿಟರಿ ಪೊಲೀಸ್ ನೇಮಕಾತಿ ರ್ಯಾಲಿಯನ್ನು ರಾಜ್ಯದಲ್ಲಿ ಆಯೋಜಿಸಲಾಗುತ್ತಿದೆ. ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು ಆನ್‍ಲೈನ್ ನಲ್ಲಿ ಅರ್ಜಿಯನ್ನು ಜು. 20 ರ ಒಳಗೆ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಾಲತಾಣ www.joinindianarmy.nic.in ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಮಹಿಳಾ ಮಿಲಿಟರಿ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ Read More »

ತುಳುವ ಯುವಕರ ದನಿಯಾದ ಸಂಸದ ಪ್ರಜ್ವಲ್ ರೇವಣ್ಣ

ಹಾಸನ: ಮಂಗಳೂರಿನ ಎಂಆರ್ಪಿಎಲ್ ನಲ್ಲಿ ಸ್ಥಳೀಯರಿಗೆ ಯಾವುದೇ ಆದ್ಯತೆ ನೀಡದೆ ಉತ್ತರ ಭಾರತದ ಯುವಕರನ್ನು ಕೆಲಸಕ್ಕೆ ನೇಮಿಸಿಕೊಂಡ ಬಗ್ಗೆ ಆಕ್ರೋಶ ಹೊರಹಾಕಿರುವ ಹಾಸನ ಕ್ಷೇತ್ರದ ಯುವ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಸ್ಥಳೀಯರಿಂದ ಮತ್ತು ರಾಜ್ಯ ಸರ್ಕಾರದಿಂದ ಮಂಗಳೂರಿನಲ್ಲಿ ಭೂಮಿ ಪಡೆದು ಎತ್ತರಕ್ಕೆ ಬೆಳೆದಿರುವ ಸಂಸ್ಥೆ ಎಂಆರ್ಪಿಎಲ್. ತುಳುನಾಡ ಜನರ ಸಹಯೋಗದಲ್ಲಿ ಬೆಳೆದು ಇಲ್ಲಿನ ಯುವಕರನ್ನು ಎಂಆರ್ಪಿಎಲ್ ಕಡೆಗಣಿಸಿರುವುದು ಸರಿಯಲ್ಲ. ಇದು ಪ್ರಾದೇಶಿಕತೆಯ ಭಾವನೆಗೆ ದ್ರೋಹ ಮಾಡಿದೆ. ಮುಂದಿನ ನೇಮಕಾತಿ ವೇಳೆ ತುಳುನಾಡನ್ನು ಕಡೆಗಣಿಸಿದರೆ

ತುಳುವ ಯುವಕರ ದನಿಯಾದ ಸಂಸದ ಪ್ರಜ್ವಲ್ ರೇವಣ್ಣ Read More »