ರಾಜ್ಯ

ಆಸ್ತಿ ವಿವಾದ| ಅಳಿಯನ ಮೇಲೆ ಮಾವನಿಂದ ಮಾರಣಾಂತಿಕ ಹಲ್ಲೆ

ಬಂಟ್ವಾಳ : ಜಾಗದ ತಕರಾರಿಗೆ ಸಂಬಂಧಿಸಿದಂತೆ ಸ್ವಂತ ಮಾವನೇ ಅಳಿಯನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಖಂಡಿಗ ಬಳಿ ನಡೆದಿದೆ.ಘಟನೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುರೇಶ್ ಪ್ರಭು ಯಾನೆ ಕಾಳೀಶ್ವರ ಸ್ವಾಮಿ ತನ್ನ ಮಗಳ ಗಂಡನ ಜೊತೆ ಜಮೀನಿನ ವಿಚಾರದಲ್ಲಿ ವೈಮನಸ್ಸು ಹೊಂದಿದ್ದ ಎಂದು ಹೇಳಲಾಗಿದ್ದು ಇದೇ ವಿಚಾರದಲ್ಲಿ ಕಾಳೀಶ್ವರ ಸ್ವಾಮಿ ಮತ್ತು ಆತನ ಸಹಚರರು ಮಗಳು ಕಿರಣ ಮತ್ತು ಆಕೆಯ ಪತಿ ಸುಳ್ಯ ಅಲೆಟ್ಟಿಯ ಪಟಕ್ಕುಂಜ […]

ಆಸ್ತಿ ವಿವಾದ| ಅಳಿಯನ ಮೇಲೆ ಮಾವನಿಂದ ಮಾರಣಾಂತಿಕ ಹಲ್ಲೆ Read More »

ಮಾನಸಗಂಗೋತ್ರಿ ತಿರುಗಾಟ‌ ನಿಷೇಧ ಸುತ್ತೋಲೆ ವಾಪಸ್ ಪಡೆದ‌ ಮೈಸೂರು ವಿವಿ

ಮೈಸೂರು: ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6.30ರ ನಂತರ ವಿದ್ಯಾರ್ಥಿನಿಯರ ತಿರುಗಾಟಕ್ಕೆ ನಿರ್ಬಂಧ ವಿಧಿಸಿ ಹೊರಡಿಸಿದ್ದ ಸುತ್ತೋಲೆಯನ್ನು ಮೈಸೂರು ವಿಶ್ವವಿದ್ಯಾಲಯ ಶನಿವಾರ ವಾಪಸ್‌ ಪಡೆದಿದೆ. ಸಾಂಸ್ಕೃತಿಕ ನಗರಿಯಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಹಿನ್ನೆಲೆಯಲ್ಲಿ ಆ.26ರಂದು ಕುಲಸಚಿವ ಪ್ರೊ.ಆರ್‌.ಶಿವಪ್ಪ ಅವರು ನಿರ್ಬಂಧ ವಿಧಿಸಿ ಸುತ್ತೋಲೆ ಹೊರಡಿಸಿದ್ದರು. ‘ಕ್ಯಾಂಪಸ್‌ನಲ್ಲಿ ಸಂಜೆ 6.30ರ ನಂತರ ಹೆಣ್ಣು ಮಕ್ಕಳು ಒಂಟಿಯಾಗಿ ತಿರುಗಾಡುವುದನ್ನು ಹಾಗೂ ಕೂರುವುದನ್ನು ನಿಷೇಧಿಸಲಾಗಿದೆ. ಪೊಲೀಸ್‌ ಇಲಾಖೆಯ ಮೌಖಿಕ ನಿರ್ದೇಶನದ ಮೇರೆಗೆ ಈ ಸುತ್ತೋಲೆ ಹೊರಡಿಸಲಾಗಿದೆ’ ಎಂದು ಉಲ್ಲೇಖಿಸಿದ್ದರು.

ಮಾನಸಗಂಗೋತ್ರಿ ತಿರುಗಾಟ‌ ನಿಷೇಧ ಸುತ್ತೋಲೆ ವಾಪಸ್ ಪಡೆದ‌ ಮೈಸೂರು ವಿವಿ Read More »

ಶಿಕ್ಷಕರ ದಿನಾಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೋವಿಡ್ ಹಿನ್ನಲೆ ಸೆ.5ರಂದು ನಡೆವುವ ಶಿಕ್ಷಕರ ದಿನಾಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷಾ ದೃಷ್ಠಿಯಿಂದ ಸರ್ಕಾರವು ಈ ಸಾಲಿನ ಶಿಕ್ಷಕರ ದಿನಾಚರಣೆಯನ್ನು ಈ ಕೆಳಕಂಡ ಮಾರ್ಗಸೂಚಿಯಂತೆ ಸರಳವಾಗಿ ಮತ್ತು ಸುರಕ್ಷಿತವಾಗಿ ಆಚರಿಸಲು ಸೂಚಿಸಿದೆ. 1.ಜಿಲ್ಲಾ ಮಟ್ಟದ ವೇದಿಕೆಯ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸತ್ ಸದಸ್ಯರು, ವಿಧಾನಸಭಾ, ಪರಿಷತ್

ಶಿಕ್ಷಕರ ದಿನಾಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ Read More »

ಅತ್ಯಾಚಾರ ಪ್ರಕರಣ ವಿಷಯದಲ್ಲಿ ಎಚ್ಚರಿಕೆಯಿಂದ ಮಾತಾಡಿ: ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ : ಸಿಎಂ

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರ. ಹಾಗಾಘಿ ಈ ಪ್ರಕರಣದ ವಿಷಯದಲ್ಲಿ ಎಚ್ಚರಿಕೆಯಿಂದ ಮಾತನಾಡಿ ಎಂದು ಸಂಪುಟ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ. ಈ ರೀತಿ ಘಟನೆ ಆದಾಗ ವಿಪಕ್ಷದವರು ಟೀಕೆ ಮಾಡೋದು ಸಹಜ. ಹಾಗಂತ ಏನೋ ಮಾತಾಡಿ, ಗೊಂದಲ ಮಾಡ್ಕೊಳ್ಳೋದು ಬೇಡ. ಅತ್ಯಾಚಾರ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ ಎಂದು ಹೇಳಿದ್ದಾರೆ. ಬಳಿಕ ಅವರು ನಿಮ್ಮ

ಅತ್ಯಾಚಾರ ಪ್ರಕರಣ ವಿಷಯದಲ್ಲಿ ಎಚ್ಚರಿಕೆಯಿಂದ ಮಾತಾಡಿ: ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ : ಸಿಎಂ Read More »

ಕಾಸರಗೋಡು: ಆನ್‍ಲೈನ್ ತರಗತಿಗಾಗಿ ಮರವೇರಿದ ವಿದ್ಯಾರ್ಥಿ ಕೆಳಕ್ಕೆ ಬಿದ್ದು ಗಂಭೀರ| ಇದು ನೆಟ್‍ವರ್ಕ್ ಹುಡುಕಾಡುತ್ತಿರುವ ವಿದ್ಯಾರ್ಥಿಗಳ ಪಾಡು

ಕಾಸರಗೋಡು: ಆನ್‍ಲೈನ್ ತರಗತಿಗೆ ವೇಳೆ ಮೊಬೈಲ್ ನೆಟ್‍ವರ್ಕ್ ಸಿಗದಿರುವ ಹಿನ್ನಲೆಯಲ್ಲಿ ಮರ ಹತ್ತಿದ ವಿದ್ಯಾರ್ಥಿ ಕೆಳಬಿದ್ದು ಗಂಭೀರ ಗಾಯಗೊಂಡ ಘಟನೆ ಕಣ್ಣೂರು ಕಣ್ಣವ ಬಳಿ ನಿನ್ನೆ ಸಂಜೆ ನಡೆದಿದೆ. ಅನಂತು ಬಾಬು ಗಾಯಗೊಂಡ ವಿದ್ಯಾರ್ಥಿ. ಪ್ಲಸ್‍ವನ್ ಅಲೋಟ್ ಮೆಂಟ್ ವೀಕ್ಷಿಸಲು ಈತ ಮನೆ ಸಮೀಪದ ಮರ ಏರಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಮೊಬೈಲ್ ರೇಂಜ್ ಲಭಿಸದಿರುವುದರಿಂದ ಮರವೇರಿ ರೆಂಬೆಯಲ್ಲಿ ಕುಳಿತು ವೀಕ್ಷಿಸುತ್ತಿದ್ದಾಗ ಆಕಸ್ಮಿಕವಾಗಿ ಕೆಳಬಿದ್ದು ಈ ಘಟನೆ ನಡೆದಿದೆ. ಸದ್ಯ ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ

ಕಾಸರಗೋಡು: ಆನ್‍ಲೈನ್ ತರಗತಿಗಾಗಿ ಮರವೇರಿದ ವಿದ್ಯಾರ್ಥಿ ಕೆಳಕ್ಕೆ ಬಿದ್ದು ಗಂಭೀರ| ಇದು ನೆಟ್‍ವರ್ಕ್ ಹುಡುಕಾಡುತ್ತಿರುವ ವಿದ್ಯಾರ್ಥಿಗಳ ಪಾಡು Read More »

ಮಂಗಳೂರು: ಟಿ.ವಿ ನೋಡಲು ಬಂದ ಬಾಲಕಿಗೆ ಲೈಂಗಿಕ ಕಿರುಕುಳ ಮನೆ ಮಾಲೀಕನ ಬಂಧನ

ಮಂಗಳೂರು: ಪಕ್ಕದ ಮನೆಗೆ ಟಿ.ವಿ ನೋಡಲು ಬಂದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮನೆ ಮಾಲೀಕನನ್ನು ಮಹಿಳಾ ಠಾಣೆಯ ಪೋಲಿಸರು ಬಂಧಿಸಿದ್ದಾರೆ. ಪೆರ್ಮುದೆ ನಿವಾಸಿ ರಾಮಕೃಷ್ಣ ಬಂಧಿತ ಆರೋಪಿ. ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ರಾಮಕೃಷ್ಣನ ಬಾಡಿಗೆ ಮನೆಯಲ್ಲಿ ಮೂವರು ಮಕ್ಕಳೊಂದಿಗೆ ವಾಸವಿದ್ದರು. ಆಗಸ್ಟ್ 21ರಂದು ತುರ್ತು ಕೆಲಸಕ್ಕಾಗಿ ತಾಯಿ ಶಿವಮೊಗ್ಗಕ್ಕೆ ಮಕ್ಕಳನ್ನು ಬಿಟ್ಟು ಹೋಗಿದ್ದರು. ಮಕ್ಕಳನ್ನು ನೋಡಿಕೊಳ್ಳುವಂತೆ ಆರೋಪಿಯ ಪತ್ನಿಗೆ ಹೇಳಿದ್ದರು. ಸಂಜೆಯ ವೇಳೆಗೆ ಮೂವರು ಮಕ್ಕಳು ಆರೋಪಿಯ ಮನೆಗೆ ಟಿವಿ ನೋಡಲು ಹೋಗಿದ್ದು, ಆಗ

ಮಂಗಳೂರು: ಟಿ.ವಿ ನೋಡಲು ಬಂದ ಬಾಲಕಿಗೆ ಲೈಂಗಿಕ ಕಿರುಕುಳ ಮನೆ ಮಾಲೀಕನ ಬಂಧನ Read More »

ಶಾಲಾರಂಭ, ಸಮವಸ್ತ್ರ, ಪಠ್ಯಪುಸ್ತಕ ಕುರಿತು ಶಿಕ್ಷಣ ಸಚಿವರು ಏನ್ ಹೇಳಿದ್ದಾರೆ ಗೊತ್ತಾ?

ಬೆಂಗಳೂರು: ರಾಜ್ಯದಲ್ಲಿ ಒಂದೂವರೆ ವರ್ಷದ ನಂತರ 9 ರಿಂದ 12 ನೇ ತರಗತಿ ಆರಂಭವಾಗಿದ್ದು, ಕಳೆದ ಸೋಮವಾರದಿಂದ ಪ್ರೌಢಶಾಲೆ ಮತ್ತು ಪಿಯುಸಿ ಕಾಲೇಜ್ ಶುರುವಾಗಿವೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ಹೋಗಿ ಬರಲು ಬಸ್ ಗಳಿಲ್ಲದೆ ಸಮಸ್ಯೆಯಾಗಿದೆ. ಇದನ್ನು ಮನಗಂಡು ಕೂಡಲೇ ಶಾಲಾ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ವಿದ್ಯಾರ್ಥಿಗಳು ಶಾಲಾ, ಕಾಲೇಜಿಗೆ ಹೋಗಿ ಬರುವ ಸಮಯಕ್ಕೆ ಅನುಕೂಲವಾಗುವಂತೆ KSRTC ಬಸ್ ಗಳನ್ನು ಓಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಬಿ.ಸಿ.

ಶಾಲಾರಂಭ, ಸಮವಸ್ತ್ರ, ಪಠ್ಯಪುಸ್ತಕ ಕುರಿತು ಶಿಕ್ಷಣ ಸಚಿವರು ಏನ್ ಹೇಳಿದ್ದಾರೆ ಗೊತ್ತಾ? Read More »

ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರಿಂದಲೇ ರಾಜೀನಾಮೆ| ಬಿಜೆಪಿ ಸಮರ್ಥಕರಿಗೆ ಇದು ಪಾಠವೇ?

ಶಿವಮೊಗ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿ ಮುಖಂಡರೊಬ್ಬರು ತಮ್ಮ ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಅಚ್ಚರಿ ಮೂಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ತವರು ಜಿಲ್ಲೆಯಲ್ಲಿ ನಡೆದ ಈ ಘಟನೆ ಈಗ ಚರ್ಚಾಗ್ರಾಸವಾಗಿದೆ. ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಬೆಲೆ ಏರಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ, ಶಿವಮೊಗ್ಗ ನಗರದ ಶೇಖರ್ ಎನ್ನುವರು ಬೂತ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಗರದ ಅಶೋಕನಗರದಲ್ಲಿ ಬಿಜೆಪಿ ವತಿಯಿಂದ ವಾರ್ಡ್ ಅಧ್ಯಕ್ಷರ ಮನೆ ಬಾಗಿಲಿಗೆ ತೆರಳಿ ನಾಮಫಲಕವನ್ನು ವಿತರಿಸುವ

ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರಿಂದಲೇ ರಾಜೀನಾಮೆ| ಬಿಜೆಪಿ ಸಮರ್ಥಕರಿಗೆ ಇದು ಪಾಠವೇ? Read More »

ಮಡದಿಯ ಅಗಲಿಕೆ ಸಹಿಸದೆ ಚಿತೆಯೇರಿದ ಗಂಡ| ಸತಿಯಲ್ಲ ಇದು ‘ಪತಿಸಹಗಮನ’

ಭವಾನಿಪಟ್ನಾ (ಒಡಿಶಾ): ಹಿಂದೆಲ್ಲಾ ಸತಿಸಹಗಮನ ಪದ್ಧತಿ ಜಾರಿಯಲ್ಲಿತ್ತು. ಪತಿ ಮೃತಪಟ್ಟ ತಕ್ಷಣ ಆತನ ಚಿತೆಯನ್ನು ಪತ್ನಿಯಾದವಳು ಏರಬೇಕಿತ್ತು. ಮನಸ್ಸಿಲ್ಲದಿದ್ದರೂ ಒತ್ತಾಯಪೂರ್ವಕವಾಗಿ ಆಕೆಯನ್ನು ಚಿತೆಯ ಮೇಲೆ ಕುಳ್ಳರಿಸಲಾಗುತ್ತಿತ್ತು. ಈ ಅನಿಷ್ಠ ಪದ್ಧತಿ ತೊಗಲಿ ಹಲವಾರು ದಶಕಗಳು ನಡೆದರೂ ಅಲ್ಲಲ್ಲಿ ಇಂಥ ಘಟನೆಗಳು ಕೇಳಿಬರುತ್ತಲೇ ಇರುತ್ತವೆ.ಆದರೆ ಒಡಿಶಾದಲ್ಲಿ ನಡೆದದ್ದು ಮಾತ್ರ ಇದಕ್ಕೆ ವಿರುದ್ಧವಾಗಿರುವ ಘಟನೆ. ಇಲ್ಲಿ ಪತಿಯೇ ಪತ್ನಿಯ ಚಿತೆಯನ್ನು ಏರಿ ಪ್ರಾಣ ಬಿಟ್ಟಿದ್ದಾರೆ. ಪ್ರೀತಿಯ ಪತ್ನಿಯ ಅಗಲಿಕೆಯನ್ನು ಸಹಿಸದ ಅವರು, ಉರಿಯುವ ಚಿತೆಯನ್ನೇರಿದ್ದಾರೆ. ಇಂಥ ಘಟನೆ ನಡೆದಿರುವುದು ಕಾಲಹಂದಿ

ಮಡದಿಯ ಅಗಲಿಕೆ ಸಹಿಸದೆ ಚಿತೆಯೇರಿದ ಗಂಡ| ಸತಿಯಲ್ಲ ಇದು ‘ಪತಿಸಹಗಮನ’ Read More »

ಹೆದ್ದಾರಿಯಿಂದ 40 ಮೀ. ಒಳಗಡೆ ಕಟ್ಟಡ ನಿರ್ಮಿಸುವಂತಿಲ್ಲ – ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯಿಂದ 40 ಮೀ.ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ. ರಾಷ್ಟ್ರೀಯ, ರಾಜ್ಯ ಹೆದ್ದಾರಿಯ ಮಧ್ಯಭಾಗದಿಂದ 40 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ. ಜಿಲ್ಲಾ ಹೆದ್ದಾರಿಯ 25 ಮೀ. ಒಳಗೆ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಈ ಹಿಂದೆ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಕಟ್ಟಡ ರಹಿತ ವಲಯವಾಗಿ ಅಂತರ ಕಾಯ್ದುಕೊಳ್ಳಬೇಕು ಎಂದು 1999 ರಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಈ ಬಗ್ಗೆ ಆದೇಶಿಸಿತ್ತು.ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಹೇಳಿದ್ದರೂ ಉಡುಪಿಯ ಕಾಪು ಬಳಿ

ಹೆದ್ದಾರಿಯಿಂದ 40 ಮೀ. ಒಳಗಡೆ ಕಟ್ಟಡ ನಿರ್ಮಿಸುವಂತಿಲ್ಲ – ಹೈಕೋರ್ಟ್ ಮಹತ್ವದ ಆದೇಶ Read More »