ರಾಜ್ಯ

ರಾಜ್ಯದಲ್ಲೇ ಮೊದಲು ಟ್ರ‍್ಯಾಕ್ಟರ್ ಲೈಸೆನ್ಸ್ ಪಡೆದಿದ್ದ ಮಹಿಳ ಸಾಧಕಿ ಇನ್ನಿಲ್ಲ

ಚಿತ್ರದುರ್ಗ: ತಾವು ನಂಬಿದ ಕೃಷಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ದಣಿವರಿಯದೆ ದುಡಿಮೆ ಮಾಡುತ್ತಿದ್ದದಲ್ಲದೆ ರಾಜ್ಯದಲ್ಲೇ ಮೊದಲ ಟ್ರ‍್ಯಾಕ್ಟರ್ ಡ್ರೈವಿಂಗ್ ಲೈಸೆನ್ಸ್ ಪಡೆದ ಮಹಿಳೆಯೆಂದು ಹೆಸರು ಪಡೆದ ಸುಮಂಗಲಮ್ಮ ವೀರಭದ್ರಪ್ಪ(೬೯) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿಜಿ ಕೆರೆ ಗ್ರಾಮದ ಕೃಷಿಕ ವೀರಭದ್ರಪ್ಪನವರ ಪತ್ನಿ. ಸುಮಂಗಲಮ್ಮ ವೀರಭದ್ರಪ್ಪ ಅವರ ಅಂತ್ಯಕ್ರಿಯೆ ಅವರ ಕರ್ಮ ಭೂಮಿಯಲ್ಲೆ ಇಂದು ನೆರವೇರಿದ್ದು, ಮೃತರ ನಿಧನಕ್ಕೆ ಜಿಲ್ಲೆಯ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಕೃಷಿಕ ಬಂಧುಗಳು ಕಂಬನಿ ಮಿಡಿದಿದ್ದಾರೆ. ಮಕ್ಕಳಿಗೆ ಶಿಕ್ಷಣ […]

ರಾಜ್ಯದಲ್ಲೇ ಮೊದಲು ಟ್ರ‍್ಯಾಕ್ಟರ್ ಲೈಸೆನ್ಸ್ ಪಡೆದಿದ್ದ ಮಹಿಳ ಸಾಧಕಿ ಇನ್ನಿಲ್ಲ Read More »

ನೊಣಗಳ ಹಾವಳಿಗೆ ಜನ ಸುಸ್ತೋ ಸುಸ್ತು | ವೈರಿಗಳ ಆಟಾಟೋಪಕ್ಕೆ ಜನ ಕಂಗಾಲು

ಗದಗ: ತಾಲೂಕಿನ ಹರ್ತಿ ಗ್ರಾಮದ ಜನರ ಜೀವನ ದುಸ್ತರವಾಗಿದೆ. ನೊಣಗಳ ಕಾಟಕ್ಕೆ ಇಲ್ಲಿನ ಜನ ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಮನೆ ಒಳಗೆ, ಹೊರಗೆ ಎಲ್ಲಿ ಕೂತರು ಸಮಾಧಾನವೇ ಇಲ್ಲದಂತಾಗಿದೆ. ಊಟ, ನಿದ್ರೆ, ವಿಶ್ರಾಂತಿಗೂ ಬಿಡಲ್ಲಾ. ವೈರಿಗಳ ಆಟೋಟಪಕ್ಕೆ ಊರಿನ ಜನ ಬೇಸತ್ತು ಹೋಗಿದ್ದಾರೆ. ಈ ಗ್ರಾಮದ ಜನ ಏನು ತಪ್ಪು ಮಾಡಿರುವರೋ ಗೊತ್ತಿಲ್ಲ. ಗ್ರಾಮೀಣ ಭಾಷೆಯಲ್ಲಿ ಹೇಳುವುದಾದರೆ, ದಂಡಿನ ಗುಂಡಿಗೆ ಹೆದರಲಿಲ್ಲಾ, ದಾಳಿಗೆ ಹೆದರಲಿಲ್ಲಾ, ಆದರೆ ನೊಣಗಳ ಹಿಂಡಿಗೆ ಹೆದರುವಂತಾಗಿದೆ. ಈ ಹಳ್ಳಿಗೆ ವೈರಿಗಳ ದಂಡೊಂದು ಲಗ್ಗೆ ಇಟ್ಟು

ನೊಣಗಳ ಹಾವಳಿಗೆ ಜನ ಸುಸ್ತೋ ಸುಸ್ತು | ವೈರಿಗಳ ಆಟಾಟೋಪಕ್ಕೆ ಜನ ಕಂಗಾಲು Read More »

ಕೂಸು ಹುಟ್ಟೋಕು ಮುನ್ನವೇ ಕುಲಾವಿ ಹೊಲಿಯುತ್ತಿರೋ ಕಾಂಗ್ರೆಸ್…! | ಇದು ಎಂತಾ ಮರುಳಯ್ಯಾ….?

ಬೆಂಗಳೂರು : ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಹೇಳಿಕೆಗಳನ್ನು ಸಿದ್ದು ಆಪ್ತ ಬಣದ ಶಾಸಕರು ಪದೇ ಪದೇ ಹೇಳುತ್ತಿದ್ದಾರೆ. ಆದರೆ ಇದಕ್ಕೆ ಕಡಿವಾಣ ಹಾಕಲು ಡಿಕೆಶಿ ಬಣ ತಂತ್ರಗಾರಿಕೆ ನಡೆಸುತ್ತಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ದೆಹಲಿಗೆ ತೆರಳಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ಅವರಿಗೆ ಮುಂದಿನ ಸಿಎಂ ಆಗಬೇಕು ಎಂಬ ಕನಸಿದೆ. ಈ ನಿಟ್ಟಿನಲ್ಲಿ ಪಕ್ಷವನ್ನು ತಮ್ಮದೇ ಆದ ರೀತಿಯಲ್ಲಿ

ಕೂಸು ಹುಟ್ಟೋಕು ಮುನ್ನವೇ ಕುಲಾವಿ ಹೊಲಿಯುತ್ತಿರೋ ಕಾಂಗ್ರೆಸ್…! | ಇದು ಎಂತಾ ಮರುಳಯ್ಯಾ….? Read More »

ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್ | ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಗರಂ ಆದ ಸಿ.ಟಿ.ರವಿ

ಚಿಕ್ಕಮಗಳೂರು: ಮುಖ್ಯಮಂತ್ರಿ ಬದಲಾವಣೆ ಎಂಬುವುದು ಹಾಗೂ ಅರುಣ್ ಸಿಂಗ್ ವರದಿ ನೀಡಿದರು ಎನ್ನುವುದು ಎರಡೂ ಸುಳ್ಳು ಸುದ್ದಿ. ಅವರು ಯಾರೆಂದು ಪತ್ತೆ ಹಚ್ಚುವುದು ಕಷ್ಟದ ಕೆಲಸವಲ್ಲ. ಕಳ್ಳನ ಹೆಂಡತಿ ಯಾವತ್ತಿದ್ದರೂ ಡ್ಯಾಶ್ ಎಂದು ಸಿ.ಟಿ.ರವಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಿಡಿ ಕಾರಿದ್ದಾರೆ. ತಾಲೂಕಿನ ಭದ್ರಾ ನದಿ ಬಳಿ ಕೊರೊನಾದಿಂದ ಸತ್ತವರು ಅಸ್ಥಿ ವಿಸರ್ಜನೆ ಬಳಿಕ ಮಾತನಾಡಿದ ಅವರು, ಕನ್ನಡದಲ್ಲಿ ಒಂದು ಗಾದೆ ಮಾತಿದೆ. ಕಳ್ಳನ ಹೆಂಡತಿ ಡ್ಯಾಶ್ ಅಂತೇಳಿ. ಅವರನ್ನು ಪತ್ತೆ ಹಚ್ಚುವುದು ಕಷ್ಟದ್ದೇನಲ್ಲ. ಎಷ್ಟು

ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್ | ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಗರಂ ಆದ ಸಿ.ಟಿ.ರವಿ Read More »

ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ | ಇಲ್ಲಿದೆ ಸೇವಾ ಸಿಂಧು ಪೋರ್ಟಲ್

ಬೆಂಗಳೂರು: ಕೊರನಾ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಯಾಗಿದ್ದ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರದ ಕಾರ್ಮಿಕರಿಗೆ ಮುಖ್ಯಮಂತ್ರಿ ಯವರು ಘೋಷಿಸಿದ್ದ ವಿಶೇಷ ಆರ್ಥಿಕ ಪ್ಯಾಕೇಜ್ ನೆರವಿಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆನ್ಲೈನ್ ಅರ್ಜಿ ಆಹ್ವಾನಿಸಿದೆ. ರಾಜ್ಯದಲ್ಲಿ ಎರಡನೇ ಅಲೆಯ ವೇಳೆ ಸರ್ಕಾರ ವಿಧಿಸಿದ್ದ ನಿರ್ಬಂಧದಿಂದಾಗಿ ಬಾಧಿತರಾಗಿದ್ದ ಸಮಾಜ ವಿವಿಧ ವರ್ಗದವರಿಗೆ ಮುಖ್ಯಮಂತ್ರಿ ಯವರು 2021ರ ಜೂನ್ 3 ರಂದು ವಿಶೇಷ

ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ | ಇಲ್ಲಿದೆ ಸೇವಾ ಸಿಂಧು ಪೋರ್ಟಲ್ Read More »

ರಾಜ್ಯಾದ್ಯಂತ ಮತ್ತೆ ಕಾಲೇಜು ರಿ-ಓಪನ್ | ಸದ್ಯಕ್ಕಿಲ್ಲ ಶಾಲೆ ಆರಂಭ: ಸಿಎಂ

ಬೆಂಗಳೂರು: ಮೊದಲ ಹಂತದಲ್ಲಿ ಉನ್ನತ ಶಿಕ್ಷಣ ತರಗತಿಗಳನ್ನು ಆರಂಭಿಸಲಾಗುವುದು ಮತ್ತು ಶಾಲಾ ತರಗತಿಗಳನ್ನು ಸದ್ಯಕ್ಕೆ ಕರೆಯಲಾಗುವುದಿಲ್ಲ ಎಂದು ಸಿಎಂ ಬಿಎಸ್ವೈ ಹೇಳಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಣ್ ಆರೋಗ್ಯ ಸಚಿವ ಸುಧಾಕರ್ ಮತ್ತು ತಜ್ಞರ ಸಮಿತಿ ಉಪಸ್ಥಿತಿಯಲ್ಲಿ ನಡೆದ ಸಭೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸದ್ಯ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡಲಾಗುತ್ತಿದೆ. ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಪ್ರಾಧ್ಯಾಪಕರು ಗಳಿಗೆ ವ್ಯಾಕ್ಸಿನೇಷನ್ ಪೂರ್ಣಗೊಂಡ ಬಳಿಕ ಕಾಲೇಜು ಆರಂಭಿಸಲಾಗುವುದು. ಪದವಿ,

ರಾಜ್ಯಾದ್ಯಂತ ಮತ್ತೆ ಕಾಲೇಜು ರಿ-ಓಪನ್ | ಸದ್ಯಕ್ಕಿಲ್ಲ ಶಾಲೆ ಆರಂಭ: ಸಿಎಂ Read More »

ರಾಜ್ಯದಲ್ಲಿ ಕಾಣಿಸಿಕೊಂಡ‌ ಕೊರೊನ ‘ಡೆಲ್ಟಾ ಪ್ಲಸ್’, ಇಬ್ಬರಿಗೆ ತಗುಲಿದ‌ ಸೋಂಕು

ಬೆಂಗಳೂರು : ಕೊರೋನಾ ಸೋಂಕಿನ 2ನೇ ಅಲೆಯಿಂದ ನಲುಗಿರುವಂತ ಜನರಿಗೆ, ಬ್ಲ್ಯಾಕ್ ಫೆಂಗಸ್ ಕಾಟ ಹೆಚ್ಚಾಗಿತ್ತು. ಕೊರೋನಾ, ಬ್ಲ್ಯಾಕ್ ಫಂಗಸ್ ರೋಗದ ನಡುವೆಯೂ ಈಗ ಅನೇಕ ದೇಶ, ರಾಜ್ಯಗಳಲ್ಲಿ ಕಾರಣಿಸಿಕೊಂಡಿದ್ದಂತ ಡೆಲ್ಟಾ ಪ್ಲಸ್ ರೋಗವು, ರಾಜ್ಯಕ್ಕೂ ಕಾಲಿಟ್ಟಿದೆ. ಈ ಮೂಲಕ ಜನರಲ್ಲಿ ಮತ್ತಷ್ಟು ಆತಂಕವನ್ನು ಉಂಟು ಮಾಡಿದೆ.ಕೊರೋನಾ 2ನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿರುವ ಹೊತ್ತಿನಲ್ಲಿಯೇ, ಕೊರೋನಾ 3ನೇ ಅಲೆಯ ಭೀತಿ ರಾಜ್ಯದಲ್ಲಿ ಆರಂಭಗೊಂಡಿದೆ. ಕೊರೋನಾ 3ನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎನ್ನುವ ಕಾರಣಕ್ಕಾಗಿ,

ರಾಜ್ಯದಲ್ಲಿ ಕಾಣಿಸಿಕೊಂಡ‌ ಕೊರೊನ ‘ಡೆಲ್ಟಾ ಪ್ಲಸ್’, ಇಬ್ಬರಿಗೆ ತಗುಲಿದ‌ ಸೋಂಕು Read More »

ನಾನು ಹಿಂದುತ್ವಕ್ಕಾಗಿ ಹೋರಾಡಿದ್ರೂ ನನ್ನ ಬೆಂಬಲಕ್ಕೆ ಯಾರು ಇಲ್ಲ | ದಯಾಮರಣ ಕೋರಿ ರಾಜ್ಯಪಾಲರಿಗೆ ಪತ್ರ ಬರೆದ ಮಧುಗಿರಿ ಮೋದಿ

ಬೆಂಗಳೂರು: ಫೇಸ್ ಬುಕ್ ಲೈವ್ ನಲ್ಲಿ ಮೋದಿ ಪರ, ಬಲಪಂಥೀಯ ಪರ ಮಾತನಾಡುತ್ತಿದ್ದ , ಪ್ರವಾದಿ ವಿರುದ್ಧ ನಿಂದಿಸಿ ವಿವಿಧ ಠಾಣೆಗಳಲ್ಲಿ ಕೇಸ್ ಹಾಕಿಸಿಕೊಂಡಿದ್ದ ಮಧುಗಿರಿ ಮೋದಿ ದಯಾಮರಣವನ್ನು ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಲವ್ ಜಿಹಾದ್, ಗೋಹತ್ಯೆ,ಅತ್ಯಾಚಾರದ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದೇನೆ. ಆದರೆ ಜಿಲ್ಲಾ ಪೊಲೀಸ್ ಇಲಾಖೆ ವಿಚಾರಣೆ ನೆಪದಲ್ಲಿ ದೌರ್ಜನ್ಯ ನಡೆಸುತ್ತಿದೆ. ಪೊಲೀಸರು ಸುಳ್ಳು ಕೇಸ್ ಹಾಕಿದ್ದಾರೆ. ನನಗೆ ಇದು ಸಹಿಸಲು ಅಸಾಧ್ಯ. ಅತ್ಯಾಚಾರಿಗಳು, ಭ್ರಷ್ಟರಿಗೆ ಇಲ್ಲದ ಕಿರುಕುಳ ನನಗೆ ಮಾತ್ರ ಯಾಕೆ

ನಾನು ಹಿಂದುತ್ವಕ್ಕಾಗಿ ಹೋರಾಡಿದ್ರೂ ನನ್ನ ಬೆಂಬಲಕ್ಕೆ ಯಾರು ಇಲ್ಲ | ದಯಾಮರಣ ಕೋರಿ ರಾಜ್ಯಪಾಲರಿಗೆ ಪತ್ರ ಬರೆದ ಮಧುಗಿರಿ ಮೋದಿ Read More »

ಮಾನನಷ್ಟ ಮೊಕದ್ದಮೆ: 2 ಕೋಟಿ ಪರಿಹಾರ ಕೊಡಲು ದೇವೇಗೌಡರಿಗೆ ಆದೇಶ

ಬೆಂಗಳೂರು: ಖಾಸಗಿ ಕಂಪನಿಯೊಂದಕ್ಕೆ 2 ಕೋಟಿ ರೂ. ಮನನಷ್ಟ ಪರಿಹಾರ ನೀಡಲು ಮಾಜಿ ಪ್ರಧಾನ ಮಂತ್ರಿ ದೇವೇಗೌಡರಿಗೆ ನ್ಯಾಯಾಲಯ ಆದೇಶ ನೀಡಿದೆ. ನಂದಿ ಇನ್​ಫ್ರಾ ಸ್ಟ್ರಕ್ಚರ್ ಕಾರಿಡಾರ್ (NICE) ಕಂಪನಿಯ ವಿರುದ್ಧ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರು ಆರೋಪವೊಂದನ್ನು ಮಾಡಿದ್ದರು. ಇದೀಗ ಅದನ್ನು ಸಾಬೀತುಪಡಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಹೀಗಾಗಿ ನೈಸ್ ಕಂಪನಿಗೆ ₹ 2 ಕೋಟಿ ಪರಿಹಾರ ಕೊಡಬೇಕು ಎಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ. ದೇವೇಗೌಡರು ಕಂಪನಿಯ ವಿರುದ್ಧ ಮಾಡಿದ್ದ ಆರೋಪ ಸಾಬೀತುಪಡಿಸುವಲ್ಲಿ ವಿಫಲರಾದಾಗ

ಮಾನನಷ್ಟ ಮೊಕದ್ದಮೆ: 2 ಕೋಟಿ ಪರಿಹಾರ ಕೊಡಲು ದೇವೇಗೌಡರಿಗೆ ಆದೇಶ Read More »

ಇಹಲೋಕ‌ ತ್ಯಜಿಸಿದ ‘ಕಾರ್ಣಿಕ’ ಮೂರ್ತಿ ಗೊರವಯ್ಯ

ವಿಜಯನಗರ: ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಮಂಗಳವಾರ ಬೆಳಗಿನಜಾವ ನಿಧನರಾದರು. 31 ವರ್ಷ ಕಾಲ ಕಾರ್ಣಿಕ ನುಡಿದಿದ್ದ ಮಾಲತೇಶಪ್ಪ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರು. ಸಂಕಷ್ಟದಲ್ಲಿದ್ದ ಗೊರವಯ್ಯ ಮಾಲತೇಶಪ್ಪ ಅವರಿಗೆ ಮನೆ ನಿರ್ಮಿಸಿಕೊಡಲು ನಾಡಿನ ಜನರು ಸಹಾಯಹಸ್ತ ಚಾಚಿದ್ದರು. ಆದರೆ ಮನೆ ನಿರ್ಮಾಣ ಆಗುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ.

ಇಹಲೋಕ‌ ತ್ಯಜಿಸಿದ ‘ಕಾರ್ಣಿಕ’ ಮೂರ್ತಿ ಗೊರವಯ್ಯ Read More »