ರಾಜ್ಯ

ಈದ್ ಸಾಮೂಹಿಕ ‌ಮೆರವಣಿಗೆಗೆ‌ ನಿಷೇಧ| ವಾಲ್ಮೀಕಿ ಜಯಂತಿ, ಈದ್ ಮಿಲಾದ್ ಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ ರಾಜ್ಯ‌ ಸರ್ಕಾರ|

ಬೆಂಗಳೂರು- ವಾಲ್ಮೀಕಿ ಜಯಂತಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಸರಳವಾಗಿ ಆಚರಿಸಲು ಸೂಚಿಸಿರುವ ರಾಜ್ಯ ಸರ್ಕಾರ ಸಾಮೂಹಿಕ ಮೆರವಣಿಗೆ ನಡೆಸದಂತೆ ನಿಷೇಧಿಸಿದೆ. ಅ.20ರಂದು ನಡೆಯುವ ವಾಲ್ಮೀಕಿ ಜಯಂತಿ ಮತ್ತು ಈದ್ ಮಿಲಾದ್ ಆಚರಣೆ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಕಂದಾಯ ಇಲಾಖೆ ಹೊರಡಿಸಿದ್ದು, ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿ, ಎಸ್‍ಪಿ, ಬಿಬಿಎಂಪಿ ಆಯುಕ್ತರು ಹಾಗೂ ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ. ಹಬ್ಬದ ಅಂಗವಾಗಿ ನಡೆಯುವ ಕಾರ್ಯಕ್ರಮ, ಸಭೆ-ಸಮಾರಂಭಗಳಲ್ಲಿ ನೂರು ಜನಕ್ಕಿಂತ ಹೆಚ್ಚು ಮಂದಿ […]

ಈದ್ ಸಾಮೂಹಿಕ ‌ಮೆರವಣಿಗೆಗೆ‌ ನಿಷೇಧ| ವಾಲ್ಮೀಕಿ ಜಯಂತಿ, ಈದ್ ಮಿಲಾದ್ ಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ ರಾಜ್ಯ‌ ಸರ್ಕಾರ| Read More »

ರೈತರಿಗೆ ಗುಡ್ ನ್ಯೂಸ್| ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಸರ್ಕಾರದ ಚಿಂತನೆ|

ಮೈಸೂರು : ರಾಜ್ಯದ ರೈತ ಸಮುದಾಯಕ್ಕೆ ಸಿಎಂ ಸಿಹಿಸುದ್ದಿ ನೀಡಿದ್ದು, ಎಸ್.ಎಂ.ಕೃಷ್ಣ ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ಜಾರಿ ಮಾಡಿದ್ದ ಯಶಸ್ವಿನಿ ಯೋಜನೆಯ ಮರು ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ಮೈಸೂರು ದಸರಾ ಉದ್ಘಾಟನೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತರಿಗೆ ಅನಾರೋಗ್ಯ ಉಂಟಾದರೆ ಸುಲಭವಾಗಿ, ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ನೀಡುವ ಉದ್ದೇಶದಿಂದ ಯಶಸ್ವಿ ಯೋಜನೆಯನ್ನು ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಜಾರಿಗೆ ತರಲಾಗಿತ್ತು. ಇದೀಗ ಈ ಯೋಜನೆಯನ್ನು ಮರು ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ಸಿಎಂ

ರೈತರಿಗೆ ಗುಡ್ ನ್ಯೂಸ್| ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಸರ್ಕಾರದ ಚಿಂತನೆ| Read More »

ಪದವಿ ತರಗತಿಯಲ್ಲಿ ಕನ್ನಡ ಕಡ್ಡಾಯ- ಹೈಕೋರ್ಟ್ ಆದೇಶ

ಬೆಂಗಳೂರು : ಪದವಿ ಕೋರ್ಸ್‌ಗೆ ದಾಖಲಾಗುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿಯು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ವಿಷಯವನ್ನಾಗಿ ಅಧ್ಯಯನ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. “ಇದು ಸೂಕ್ಷ್ಮ ವಿಚಾರ” ಎಂದು ಗಮನಿಸಿದ ಕರ್ನಾಟಕ ಉಚ್ಚ ನ್ಯಾಯಾಲಯವು ಇಂದು ಎರಡು ಸರ್ಕಾರಿ ಆದೇಶಗಳ ಕಾರ್ಯಾಚರಣೆಯನ್ನು ತಡೆಹಿಡಿಯಲು ಕೋರಿ ಸಲ್ಲಿಸಲಾಗಿರುವ ಅರ್ಜಿಯಲ್ಲಿ ಮಧ್ಯಂತರ ಪರಿಹಾರಕ್ಕಾಗಿ ಪ್ರಾರ್ಥನೆಯನ್ನು ಪರಿಗಣಿಸುವುದಾಗಿ ಹೇಳಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ವಿಭಾಗೀಯ ಪೀಠವು “ರಾಜ್ಯ

ಪದವಿ ತರಗತಿಯಲ್ಲಿ ಕನ್ನಡ ಕಡ್ಡಾಯ- ಹೈಕೋರ್ಟ್ ಆದೇಶ Read More »

ನಾಯಿಯಿಂದ ಮತ್ತೊಂದು ನಾಯಿಗೆ ರಕ್ತದಾನ| ಇದು ಪ್ರಕೃತಿಯ ಅಚ್ಚರಿ|

ಧಾರವಾಡ: ಒಂದು ನಾಯಿಯಿಂದ ಮತ್ತೊಂದು ನಾಯಿಗೆ ರಕ್ತದಾನ ಮಾಡಿದ ಪ್ರಸಂಗ ಧಾರವಾಡದಲ್ಲಿ ನಡೆದಿದೆ. ವಿಜಯಪುರ ಮೂಲದ 7 ತಿಂಗಳ ರಾಟ್ ವಿಲ್ಲರ್ ತಳಿ ನಾಯಿಗೆ ಹೊಟ್ಟೆ ನೋವಿನ ಸಮಸ್ಯೆ ಇದ್ದ ಕಾರಣ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಈ ವೇಳೆ ಆ ನಾಯಿದ ಹೊಟ್ಟೆಯಲ್ಲಿ ರಕ್ತ ಸ್ರಾವವಾಗಿದ್ದರಿಂದ ಬದುಕುಳಿಯುವ ಸಾಧ್ಯತೆ ಕಡಿಮೆ ಇತ್ತು. ಹೀಗಾಗಿ ರಾಟ್ ವಿಲ್ಲರ್ ಮಾಲಿಕ ಧಾರವಾಡ ಕೃಷಿ ವಿವಿಯಲ್ಲಿರುವ ಪಶು ಆಸ್ಪತ್ರೆಗೆ ತಂದಿದ್ದರು. ಕೃಷಿ ವಿವಿಯ ಪಶು ಆಸ್ಪತ್ರೆ ವೈದ್ಯ ಅನಿಲ್ ಪಾಟೀಲ್ ರಾಟ್

ನಾಯಿಯಿಂದ ಮತ್ತೊಂದು ನಾಯಿಗೆ ರಕ್ತದಾನ| ಇದು ಪ್ರಕೃತಿಯ ಅಚ್ಚರಿ| Read More »

ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್| ಬಿಡುಗಡೆ ದಿನವೇ ದಾಖಲೆ ಸೃಷ್ಟಿ|

ಫಿಲ್ಮ್ ಡೆಸ್ಕ್: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಶಿವಕಾರ್ತಿಕ್ ನಿರ್ದೇಶನದ ಬಹುನಿರೀಕ್ಷೆಯ ‘ಕೋಟಿಗೊಬ್ಬ3’ ಸಿನಿಮಾ ಟ್ರೈಲರ್ ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ 30 ನಿಮಿಷಗಳಲ್ಲಿ 1 ಲಕ್ಷದ 50 ಸಾವಿರ ವೀಕ್ಷಣೆ ಪಡೆದುಕೊಂಡಿದ್ದು ಹೊಸ ಟ್ರೆಂಡ್ ಸೃಷ್ಟಿಸಿದೆ. ಆ್ಯಕ್ಷನ್ ಥ್ರಿಲ್ಲರ್ ಆಧಾರಿತ ಈ ಚಿತ್ರವನ್ನು ಸೂರಪ್ಪ ಬಾಬು ನಿರ್ಮಾಣ ಮಾಡಿದ್ದು ಮಡೋನ್ನಾ ಸೆಬಾಸ್ಟಿಯನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಈ

ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಟ್ರೈಲರ್ ರಿಲೀಸ್| ಬಿಡುಗಡೆ ದಿನವೇ ದಾಖಲೆ ಸೃಷ್ಟಿ| Read More »

ಕಾನೂನು ಪದವೀಧರರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ

ನವದೆಹಲಿ: ಭಾರತೀಯ ಸೇನೆಯಲ್ಲಿ ಕಾನೂನು ಪದವಿ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಹ‌ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೇನೆಯಲ್ಲಿ ಕೆಲಸ ಮಾಡಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಕಾನೂನು ಪದವಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಕಂಡ ಮಾರ್ಗಗಳನ್ನು ಅನುಸರಿಸಬೇಕು. ಒಟ್ಟು 7 ಕಾನೂನು ಪದವಿ ಉದ್ಯೋಗಗಳು ಖಾಲಿ ಇದ್ದು, ಕಾನೂನು ಪದವೀಧರರು ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಸೆಪ್ಟೆಂಬರ್ 29ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅಕ್ಟೋಬರ್ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ

ಕಾನೂನು ಪದವೀಧರರಿಗೆ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶ Read More »

ಶಬರಿಮಲೆ ಯಾತ್ರೆ ಹೊರಡುವ ಭಕ್ತರಿಗೆ ಮಿತಿನಿಗದಿ| ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಕೇರಳ ಸರ್ಕಾರ|

ತಿರುವನಂತಪುರಂ: ತೀರ್ಥಕ್ಷೇತ್ರ ಶಬರಿಮಲೆಯಲ್ಲಿ ನವೆಂಬರ್‌ 16 ರಿಂದ ಮಂಡಲ-ಮಕರವಿಳಕ್ಕು ಕಾರ್ಯಕ್ರಮ ನಡೆಯಲಿರುವುದರಿಂದ ಕೇರಳ ಸರಕಾರವು ಯಾತ್ರಿಗಳಿಗೆ ಸಲಹೆ ನೀಡಿದ್ದು, ಭಕ್ತಾದಿಗಳ ದರ್ಶನಕ್ಕೆ ದೈನಂದಿನ ಮಿತಿ ನಿಗದಿಪಡಿಸಿದೆ. ಪ್ರಾರಂಭದ ದಿನಗಳಲ್ಲಿ ದೈನಂದಿನ 25 ಸಾವಿರ ಮಂದಿ ಭಕ್ತಾದಿಗಳಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿಕೆ ನೀಡಿದ್ದಾರೆ. “ಒಂದು ವೇಳೆ ಭಕ್ತಾದಿಗಳ ಸಂಖ್ಯೆಯಲ್ಲಿ ಏನಾದರೂ ಏರಿಳಿತಗಳನ್ನು ಮಾಡಬೇಕಾದ ಅವಶ್ಯಕತೆ ಉಂಟಾದಲ್ಲಿ ಆ ಕುರಿತು ಚರ್ಚೆ ನಡೆಸಿದ ಬಳಿಕ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದು ಅವರು ಹೇಳಿಕೆ

ಶಬರಿಮಲೆ ಯಾತ್ರೆ ಹೊರಡುವ ಭಕ್ತರಿಗೆ ಮಿತಿನಿಗದಿ| ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಕೇರಳ ಸರ್ಕಾರ| Read More »

ಸಿಲಿಕಾನ್ ಸಿಟಿಯಲ್ಲಿ 11 ಕಂದಮ್ಮಗಳು ಸೇಲ್| 60- 80 ಸಾವಿರಕ್ಕೆ ಪಡೆದು 6 ಲಕ್ಷಕ್ಕೆ ಮಾರಾಟ|

ಬೆಂಗಳೂರು: ಮಕ್ಕಳು ಬೇಕು ಎಂದು ಹಪಹಪಿಸುವ ಅಮಾಯಕ ದಂಪತಿಯನ್ನು ಬಂಡವಾಳವಾಗಿಸಿಕೊಂಡು ಮಕ್ಕಳನ್ನು ಮಾರಾಟ ಮಾಡುತ್ತಿದ್ದ ಖದೀಮರನ್ನು ಇದೀಗ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ದೇವಿ ಷಣ್ಮುಗಮ್ಮ, ಮಹೇಶ್, ರಜನಿ, ಜನಾರ್ಧನ್ ಮತ್ತು ಧನಲಕ್ಷ್ಮೀ ಎಂದು ಗುರುತಿಸಲಾಗಿದೆ. ಬಾಡಿಗೆ ತಾಯ್ತನದ ಮೂಲಕ ಮಕ್ಕಳನ್ನು ನೀಡುತ್ತೇವೆ ಎಂದು ಆರೋಪಿಗಳು ಮಕ್ಕಳಿಲ್ಲದ ಕೆಲ ಜನರನ್ನು ಪತ್ತೆ ಹಚ್ಚುತ್ತಿದ್ದರು. ಬಳಿಕ ಅವರ ಆರ್ಥಿಕ ಪರಿಸ್ಥಿತಿ ಕಂಡು ಇಂತಿಷ್ಟು ಹಣ ಆಗುತ್ತೆ ಎಂದು ಪಿಕ್ಸ್ ಮಾಡುತ್ತಿದ್ದರು. ಪೋಷಕರಿಂದ ಜೈವಿಕ ಅಂಶಗಳನ್ನು

ಸಿಲಿಕಾನ್ ಸಿಟಿಯಲ್ಲಿ 11 ಕಂದಮ್ಮಗಳು ಸೇಲ್| 60- 80 ಸಾವಿರಕ್ಕೆ ಪಡೆದು 6 ಲಕ್ಷಕ್ಕೆ ಮಾರಾಟ| Read More »

ಮಡಿಕೇರಿ ಕಂದಾಯ ಪ್ರದೇಶದಲ್ಲಿ ಸುಳ್ಯ ಅರಣ್ಯಾಧಿಕಾರಿಗಳ ದಾಂದಲೆ| ಕೃ಼ಷಿಕನಿಗೆ ಜೀವ ಬೆದರಿಕೆ| ಮಡಿಕೇರಿ ಪೊಲೀಸರಿಂದ ಕೇಸು ದಾಖಲು|

ಸುಳ್ಯ:ಅಪರೂಪದ ಪ್ರಕರಣವೊಂದರಲ್ಲಿ ತಮ್ಮ ಕಾರ್ಯ ವ್ಯಾಪ್ತಿಯ ಹೊರತಾದ ಪ್ರದೇಶಕ್ಕೆ ದಾಳಿ ನಡೆಸಿ ಅಕ್ರಮ ಕೃಷಿ ಚಟುವಟಿಕೆ ನಡೆಸಿರುವುದೆಂದು ಆರೋಪಿಸಿ ಕಾನೂನು ಬಾಹಿರವಾಗಿ ಕಡಿದು ನಾಶಗೊಳಿಸಿದ ಅರಣ್ಯಾಧಿಕಾರಿ ಸಹಿತ ನಾಲ್ವರ ವಿರುದ್ದ ಪೊಲೀಸ್ ಕೇಸು ದಾಖಲಾದ ಘಟನೆ ಮಡಿಕೇರಿ ಗ್ರಾಮಾಂತರ ವ್ಯಾಪ್ತಿಯಲ್ಲಿ ನಡೆದಿದೆ. ಸುಳ್ಯ ಫಾರೆಸ್ಟರ್ ಚಂದ್ರ ಶೇಖರ ( ಚಂದ್ರು), ಗಾರ್ಡ್ ಚಿದಾನಂದ ಹಾಗು ಅರಣ್ಯವೀಕ್ಷಕರಾದ ಸುಂದರ ಕೆ.ಮತ್ತು ಮನೋಜ್ ವಿರುದ್ದ ಮಡಿಕೇರಿ ಗ್ರಾಮಾಂತರ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆ: ಕಳೆದೊಂದು ವರ್ಷದ ಹಿಂದೆ ಮಡಿಕೇರಿ ತಾಲೂಕು

ಮಡಿಕೇರಿ ಕಂದಾಯ ಪ್ರದೇಶದಲ್ಲಿ ಸುಳ್ಯ ಅರಣ್ಯಾಧಿಕಾರಿಗಳ ದಾಂದಲೆ| ಕೃ಼ಷಿಕನಿಗೆ ಜೀವ ಬೆದರಿಕೆ| ಮಡಿಕೇರಿ ಪೊಲೀಸರಿಂದ ಕೇಸು ದಾಖಲು| Read More »

ಅಶ್ಲೀಲ ವರ್ತನೆ ತೋರಿದ ಯುವಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು ಕೋಲು ಕೊಟ್ಟು ಪೆಟ್ಟು ತಿಂದರು..!

ಮಂಗಳೂರು: ನಗರದಲ್ಲಿ ನೈತಿಕ ಪೋಲಿಸ್ ಗಿರಿ ಹೆಚ್ಚಾಗುತ್ತಿದೆ ಎಂಬ ಆರೋಪದ ನಡುವೆಯೇ ಅಶ್ಲೀಲವಾಗಿ ವರ್ತಿಸುತ್ತಿದ್ದ ಜೋಡಿಗಳಿಗೆ ಬುದ್ದಿವಾದ ಹೇಳಲು ಹೋದ ಇಬ್ಬರು ಭಜರಂಗದಳ ಕಾರ್ಯಕರ್ತರನ್ನೇ ಪೋಲಿಸರು ಬಂಧಿಸಿರುವ ಘಟನೆ ನಡೆದಿದೆ‌. ಕದ್ರಿ ಠಾಣಾ ವ್ಯಾಪ್ತಿಯ ಸೈಂಟ್ ಆಗ್ನೆಸ್ ಬಳಿ ರಾತ್ರಿ ವೇಳೆ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ಜೋಡಿಗಳನ್ನು ಗಮನಿಸಿದ ಬಜರಂಗದಳದ ಕಾರ್ಯಕರ್ತರು ಬುದ್ದಿವಾದ ಹೇಳಿ ಪೋಲೀಸರಿಗೆ ಒಪ್ಪಿಸಿದ್ದರು. ಆದರೆ ಜೋಡಿಗಳ ಜೊತೆ ಪೋಲೀಸ್ ಸ್ಟೇಷನ್ ಗೆ ತೆರಳಿದ ಕಾರ್ಯಕರ್ತರ ವಿರುದ್ಧವೇ ಆ ಜೋಡಿ ತಿರುಗಿಬಿದ್ದಿದ್ದು, ಬಜರಂಗದಳದ ಕಾರ್ಯಕರ್ತರು

ಅಶ್ಲೀಲ ವರ್ತನೆ ತೋರಿದ ಯುವಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು ಕೋಲು ಕೊಟ್ಟು ಪೆಟ್ಟು ತಿಂದರು..! Read More »