ರಾಜ್ಯ

ಜನರು ಹೀಗೆ ವರ್ತಿಸಿದಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುವುದು

”ಜನರು ಹೀಗೆ ವರ್ತಿಸಿದಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುವುದು” ಮಂಡ್ಯ: ಸತತ ಲಾಕ್‌ಡೌನ್‌ನಿಂದ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗಿರುವ ಕಾರಣ ಜಿಲ್ಲೆಯನ್ನು ಇಂದಿನಿಂದ ಅನ್‌ಲಾಕ್ ಮಾಡಲಾಗಿದೆ. ಜನರು ಮುಂದಿನ ದಿನಗಳಲ್ಲಿ ಕೊರೊನಾ ಮಾರ್ಗ ಸೂಚಿಗಳನ್ನು ಅನುಸರಿಸದೇ ಇದ್ದರೆ ಮತ್ತೆ ಲಾಕ್‌ಡೌನ್ ಮಾಡುವುದುದಾಗಿ ಜಿಲ್ಲಾಧಿಕಾರಿ ಅಶ್ವಥಿ ಅವರು ಎಚ್ಚರಿಕೆ ನೀಡಿದ್ದಾರೆ. ಇಂದು ಜಿಲ್ಲೆಯನ್ನು ಅನ್‌ಲಾಕ್ ಮಾಡಿರುವ ಕಾರಣ ಮಂಡ್ಯ ನಗರ ಸೇರಿದಂತೆ ತಾಲೂಕು ಕೇಂದ್ರಗಳಲ್ಲಿ ಜನಜಂಗುಳಿ ನಿರ್ಮಾಣವಾಗಿತ್ತು. ಬಟ್ಟೆ, ಚಿನ್ನ, ಮೊಬೈಲ್ ಅಂಗಡಿಗಳು ಸೇರಿದಂತೆ ಇತರೆ […]

ಜನರು ಹೀಗೆ ವರ್ತಿಸಿದಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುವುದು Read More »

ಸೋಂಕಿತರ ಸಾವಿಗೆ ಬಿಜೆಪಿ ಸರ್ಕಾರ ಕಾರಣ |ಸಿಎಂ ಬಿ.ಎಸ್.ವೈ ಅಧಿಕಾರದಿಂದ ಎಷ್ಟು ಬೇಗ ತೊಲಗುತ್ತಾರೋ ಅಷ್ಟು ರಾಜ್ಯಕ್ಕೆ ಒಳ್ಳೆಯದಾಗುತ್ತದೆ: ಸಿದ್ದು

ಕೊಪ್ಪಳ: ‘ರಾಜ್ಯದಲ್ಲಿ ಕೊರೊನ ಸೋಂಕಿತರ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರವೇ ಕಾರಣ, ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದಿಂದ ಏಷ್ಟು ಬೇಗ ತೊಲಗುತ್ತಾರೋ ಅಷ್ಟು ರಾಜ್ಯಕ್ಕೆ ಒಳ್ಳೆಯದಾಗುತ್ತದೆ. ರಾಜ್ಯ ಬಿಜೆಪಿಯಲ್ಲಿ ಗೊಂದಲ ಇಲ್ಲದೇ ಅರುಣ್ ಸಿಂಗ್ ಅವರು ಸುಮ್ನೆ ಬಂದಿದ್ದರಾ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ‘ಶಾಸಕ ಜಮೀರ್ ಅಹ್ಮದ್ ನಾನು ಸಿಎಂ ಆಗ್ಬೇಕು ಎನ್ನುವ ಹೇಳಿದ ವಿಚಾರದ ಕುರಿತಂತೆ ವೈಯುಕ್ತಿಕ ಅಭಿಪ್ರಾಯ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ.

ಸೋಂಕಿತರ ಸಾವಿಗೆ ಬಿಜೆಪಿ ಸರ್ಕಾರ ಕಾರಣ |ಸಿಎಂ ಬಿ.ಎಸ್.ವೈ ಅಧಿಕಾರದಿಂದ ಎಷ್ಟು ಬೇಗ ತೊಲಗುತ್ತಾರೋ ಅಷ್ಟು ರಾಜ್ಯಕ್ಕೆ ಒಳ್ಳೆಯದಾಗುತ್ತದೆ: ಸಿದ್ದು Read More »

ಮತ್ತೆ ಆರು ಜಿಲ್ಲೆಗಳು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ | 7 ಜಿಲ್ಲೆಗಳಿಗೆ ಮಾತ್ರ ಬೀಗ

ಬೆಂಗಳೂರು: ಕೊರೋನಾ ಸೋಂಕು ಕಡಿಮೆಯಾದ ಹಿನ್ನಲೆ 6 ಜಿಲ್ಲೆಗಳಲ್ಲಿ ಅನ್​ಲಾಕ್​ ಮಾಡಿ ಸಿಎಂ ಬಿಎಸ್​ ಯಡಿಯೂರಪ್ಪ ಆದೇಶಿಸಿದ್ದಾರೆ. ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರದಲ್ಲಿ ಅನ್​ಲಾಕ್​ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಈ ಸಮಯದಲ್ಲಿ ಸಾರಿಗೆ ಸಂಚಾರ ಇರಲಿದ್ದು, ಹೊಟೇಲ್​, ಅಂಗಡಿ ಮುಗ್ಗಟ್ಟುಗಳು ಕೂಡ ಸಂಜೆವರೆಗೆ ಕಾರ್ಯನಿರ್ವಹಿಸಲಿದೆ. ರಾತ್ರಿ 7 ಗಂಟೆ ಬಳಿಕ ಎಂದಿನಂತೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ವಿಕೇಂಡ್​

ಮತ್ತೆ ಆರು ಜಿಲ್ಲೆಗಳು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ | 7 ಜಿಲ್ಲೆಗಳಿಗೆ ಮಾತ್ರ ಬೀಗ Read More »

ತಾತ ಆಗಲು ರೆಡಿಯಾಗಿದ್ದಾರೆ ಎಚ್ಡಿಕೆ : ಸಂಭ್ರಮದಲ್ಲಿ ಗೌಡರ ಕುಟುಂಬ

ಬೆAಗಳೂರು: ಮಾಜಿ ಸಿಎಂ ಕುಮಾರಸ್ವಾಮಿಯವರ ನಿವಾಸಕ್ಕೆ ಶೀಘ್ರವೇ ಹೊಸ ಅತಿಥಿಯೊಬ್ಬರು ಬರಲಿದ್ದಾರೆ. ಅಷ್ಟಕ್ಕೂ ಅದು ಯಾರುಪ್ಪಾಂತ ನೀವು ಯೋಚಿಸ್ತಿದ್ದೀರಾ. ಹೌದು ನಟ ನಿಖಿಲ್ ಕುಮಾರ್ ಸ್ವಾಮಿಯವರು ತಂದೆಯಾಗಲಿದ್ದಾರೆ. ಇಂದು ನಿಖಿಲ್ ಮನದರಸಿ ರೇವತಿಯವರ ಹುಟ್ಟುಹಬ್ಬವಿದ್ದು, ಪ್ರೀತಿಯ ಪತ್ನಿಗೆ ನಿಖಿಲ್ ಸೋಶಿಯಲ್ ಮೀಡಿಯಾ ಮೂಲಕ ವಿಶ್ ಮಾಡಿದ್ದರು. ಇದೀಗ ಮಾಜಿ ಸಿಎಂ ಕುಮಾರ ಸ್ವಾಮಿಯವರ ಸೊಸೆ ರೇವತಿಯವರು 5 ತಿಂಗಳ ಗಂರ್ಭಿಣಿಯಾಗಿದ್ದಾರೆ. ನಿಖಿಲ್- ರೇವತಿ ದಂಪತಿಗಳು ಅಪ್ಪ- ಅಮ್ಮ ಆಗುತ್ತಿರುವ ಸಂತಸದಲ್ಲಿದ್ದರೆ, ಈ ಸಿಹಿ ಸುದ್ದಿ ಕೇಳಿ ಇಡೀ

ತಾತ ಆಗಲು ರೆಡಿಯಾಗಿದ್ದಾರೆ ಎಚ್ಡಿಕೆ : ಸಂಭ್ರಮದಲ್ಲಿ ಗೌಡರ ಕುಟುಂಬ Read More »

ನಾವು ಕರ್ನಾಟಕದವರು, ತುಳುರಾಜ್ಯ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ | ಒಡಕಿನ ಮಾತುಗಳನ್ನು ಮಹಾರಾಷ್ಟ್ರ ದುರುಪಯೋಗ ಮಾಡುವ ಸಾಧ್ಯತೆಯಿದೆ : ಕರಂದ್ಲಾಜೆ

ಉಡುಪಿ: ತುಳುವಿಗೆ ಸಂವಿಧಾನದ ಮಾನ್ಯತೆ ಸಿಗಬೇಕು. ಸಂಸತ್ತಿನಲ್ಲೂ ನಾನು ಈ ಬಗ್ಗೆ ಮಾತನಾಡಿದ್ದೇನೆ. ನಾವು ಕರ್ನಾಟಕದವರು. ಆದರೆ ತುಳುರಾಜ್ಯ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಪ್ರಧಾನಿ ಮೋದಿಯನ್ನು ಭೇಟಿಯಾಗಿ ಮಾತನಾಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿ ನಾನು ಮನವಿ ಸಲ್ಲಿಸಿದ್ದೇನೆ. ಎರಡು ಬಾರಿ ಸಂಸತ್ ನಲ್ಲಿ ಪ್ರಸ್ತಾಪ ಮಾಡಿದ್ದೇನೆ. ತುಳುವನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಏನೆಲ್ಲ ಮಾಡಬೇಕು ಆ

ನಾವು ಕರ್ನಾಟಕದವರು, ತುಳುರಾಜ್ಯ ಕುಚೋದ್ಯದ ಬೇಡಿಕೆಗೆ ನಮ್ಮ ಬೆಂಬಲ ಇಲ್ಲ | ಒಡಕಿನ ಮಾತುಗಳನ್ನು ಮಹಾರಾಷ್ಟ್ರ ದುರುಪಯೋಗ ಮಾಡುವ ಸಾಧ್ಯತೆಯಿದೆ : ಕರಂದ್ಲಾಜೆ Read More »

ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನೇ ಹೊರತು ಯಾವುದೇ ಗುಂಪಿನ ನಾಯಕನಲ್ಲ

ನವದೆಹಲಿ: ಪಕ್ಷದಲ್ಲಿ ಯಾವುದೇ ಗುಂಪಿಲ್ಲ. ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನೇ ಹೊರತು, ಯಾವುದೇ ಗುಂಪಿನ ನಾಯಕನಲ್ಲ. ಗುಂಪುಗಾರಿಕೆಗೆ ಅವಕಾಶವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನದು ಯಾವ ಗುಂಪು ಇಲ್ಲ, ಬೇರೆಯವರ ಗುಂಪೂ ಇಲ್ಲ. ಇರುವುದು ಒಂದೇ ಗುಂಪು, ಅದು ಕಾಂಗ್ರೆಸ್. ಎಲ್ಲರೂ ಇದೇ ಹಾದಿಯಲ್ಲಿ ಸಾಗುತ್ತಾರೆ. ಸಣ್ಣ-ಪುಟ್ಟ ವಿಚಾರಗಳನ್ನು ನಾನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ನನ್ನ ಹೆಸರನ್ನು ಯಾರೂ ಹೇಳಬಾರದು. ಸದ್ಯ ಮುಂಬರುವ ಚುನಾವಣೆಗಳಲ್ಲಿ ಗೆಲ್ಲಬೇಕು. ಕೊರೊನಾ ಸಮಯದಲ್ಲಿ ಜನರನ್ನು

ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನೇ ಹೊರತು ಯಾವುದೇ ಗುಂಪಿನ ನಾಯಕನಲ್ಲ Read More »

ಜನನಾಂಗವಿಲ್ಲದೆ ಹುಟ್ಟಿದ ಮಗು ಕೆಲವೇ ನಿಮಿಷಗಳಲ್ಲಿ ಸಾವು

ಹುಬ್ಬಳ್ಳಿ: ಹುಬ್ಬಳ್ಳಿ ಕಿಮ್ಸ್ ನಲ್ಲಿ ವಿಚಿತ್ರ ಮಗುವೊಂದು ಜನ್ಮ ತಾಳಿದ್ದು, ವೈದ್ಯರನ್ನೇ ಅಚ್ಚರಿಗೊಳಿಸಿದೆ. ಅಲ್ಲದೆ ಹುಟ್ಟಿದ ಮಗು ಕೆಲವೇ ನಿಮಿಷದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮಗುವಿಗೆ ಹುಟ್ಟುವಾಗ ಜನನಾಂಗ ಮತ್ತು ಒಂದು ಕಾಲು ಇರಲಿಲ್ಲ. ಹುಬ್ಬಳ್ಳಿಯ ಹುಸೇನ್ ಸಾಬ್-ರೇಷ್ಮಾ ಬಾನು ದಂಪತಿಗೆ ಈ ವಿಚಿತ್ರ ಮಗು ಹುಟ್ಟಿದೆ. ಮಗು ಹುಟ್ಟಿದ 20 ನಿಮಿಷಕ್ಕೆ ಮೃತಪಟ್ಟಿದೆ. 7 ತಿಂಗಳಲ್ಲಿ ರೇಷ್ಮಾ ಬಾನುವಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಇದರಿಂದಾಗಿ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆರಿಗೆಯ ಮೊದಲು ರೇಶ್ಮಾ

ಜನನಾಂಗವಿಲ್ಲದೆ ಹುಟ್ಟಿದ ಮಗು ಕೆಲವೇ ನಿಮಿಷಗಳಲ್ಲಿ ಸಾವು Read More »

ಪ್ರಿಪೇರ್ ಎಜುಟೆಕ್: ಕನ್ನಡ ವಿದ್ಯಾರ್ಥಿಗಳಿಗೆ ಹೊಸ ಆಶಾಕಿರಣ

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್‌ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ ಕಷ್ಟಪಡುವುದುಂಟು. ಈ ಲೆಕ್ಚರರ್ ಕನ್ನಡದಲ್ಲಿ ಒಂದೂ ವರ್ಡ್ ಹೇಳೋದಿಲ್ಲ ಎನ್ನುವುದು ವಿದ್ಯಾರ್ಥಿಗಳ ದೂರು. ಕನ್ನಡ ವಿದ್ಯಾರ್ಥಿಗಳೇ ಭಯಬೇಡ ಆರಂಭಿಕ ಶಿಕ್ಷಣದಲ್ಲಿ

ಪ್ರಿಪೇರ್ ಎಜುಟೆಕ್: ಕನ್ನಡ ವಿದ್ಯಾರ್ಥಿಗಳಿಗೆ ಹೊಸ ಆಶಾಕಿರಣ Read More »

ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ಸಾಮಾಜಿಕ ಜಾಲತಾಣಗಳಲ್ಲಿ ತೆಜೋವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ. ಸೂಲಿಬೆಲೆ ಅವರು, ತನ್ನ ಫೇಸ್ಬುಕ್ ಪೇಜ್ ನಲ್ಲಿ, ‘ದುರದೃಷ್ಟವೇನು ಗೊತ್ತೇ ? ಮೋದಿಯನ್ನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್ಸು ಆಕ್ಸಿಜೆನ್ ಜನರಿಗೆ ಸಿಗದಂತೆ ದಾಸ್ತಾನು ಮಾಡಿಕೊಂಡಿತು . ವ್ಯಾಕ್ಸಿನ್‌ಗಳನ್ನು ಜನರಿಗೆ ನೀಡದೇ ಕಸದಬುಟ್ಟಿಗೆಸೆಯಿತು. ಆಸ್ಪತ್ರೆಗಳಲ್ಲಿ ಬೆಡ್‌ಗಳನ್ನು ಬ್ಲಾಕ್ ಮಾಡಿಕೊಂಡು ಜನ ಸಾಯುವಂತೆ ನೋಡಿಕೊಂಡಿತು. ಕೊನೆಗೆ ಅಮಾಯಕರ ಸಾವನ್ನು ವೈಭವೀಕರಿಸಿ

ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಪ್ರಕರಣ ದಾಖಲು Read More »

ಉಪ್ಪಿನಂಗಡಿ : ಆಕಸ್ಮಿಕವಾಗಿ ವಿಷ ತಿಂದು 2 ವರ್ಷದ ಮಗು ಸಾವು

ಉಪ್ಪಿನಂಗಡಿ : ಆಕಸ್ಮಿಕವಾಗಿ ವಿಷ ತಿಂದು 2 ವರ್ಷದ ಮಗು ಸಾವು ಉಪ್ಪಿನಂಗಡಿ : ಇಲಿ ವಿಷ ತಿಂದು 2ವರ್ಷದ ಮಗು ಮೃತಪಟ್ಟಿರುವ ಘಟನೆ ನೆಲ್ಯಾಡಿಯ ಬಜತ್ತೂರಿನಲ್ಲಿ ನಡೆದಿದೆ. ಬಜತ್ತೂರಿನ ಕೆಮ್ಮಾರದ ನಿವೃತ್ತ ಸೈನಿಕ ಸೈಜು ಎಂಬವರು ಪುತ್ರಿ ಶ್ರೇಯಾ (2) ಮೃತಪಟ್ಟ ಮಗು. ಶ್ರೇಯಾ ತಂದೆ-ತಾಯಿ ಮನೆಯಲ್ಲಿ ಹಳೇ ವಸ್ತುಗಳನ್ನು ಕ್ಲೀನ್ ಮಾಡುತ್ತಿದ್ದರು. ಪಕ್ಕದಲ್ಲೇ ಇದ್ದ ಶ್ರೇಯಾ ಇಲಿ ವಿಷ ತೆಗೆದು ತಿಂದಿದ್ದಾಳೆ. ಇದು ಪೋಷಕರ ಗಮನಕ್ಕೆ ಬರುವುದು ಕೊಂಚ ತಡವಾಗಿದ್ದು, ಮಗು ವಿಷ ತಿಂದಿರುವುದನ್ನು ತಿಳಿದ ತಕ್ಷಣ

ಉಪ್ಪಿನಂಗಡಿ : ಆಕಸ್ಮಿಕವಾಗಿ ವಿಷ ತಿಂದು 2 ವರ್ಷದ ಮಗು ಸಾವು Read More »