ರಾಜ್ಯ

ಧರ್ಮಸ್ಥಳ-ಸುಬ್ರಹ್ಮಣ್ಯ ಯಾತ್ರಾರ್ಥಿಗಳು ಗುಂಡ್ಯದಿಂದ ವಾಪಸ್

ಸುಬ್ರಹ್ಮಣ್ಯ: ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರಗಳ ಭೇಟಿಗೆ ನಿರ್ಬಂಧವಿದ್ದರೂ ಹೊರಜಿಲ್ಲೆಗಳಿಂದ ಜಿಲ್ಲೆಗೆ ಆಗಮಿಸುತ್ತಿರುವ ಭಕ್ತರನ್ನು ಗುಂಡ್ಯ ಚೆಕ್’ಪೋಸ್ಟ್ ನಿಂದಲೇ ವಾಪಸ್ ಕಳುಹಿಸುವ ಕಾರ್ಯ ನಡೆಯುತ್ತಿದೆ. ಅಗತ್ಯ ದಾಖಲೆಗಳನ್ನು ಹೊಂದಿದವವರನ್ನು ಮಾತ್ರ ಜಿಲ್ಲೆಯ ಒಳಬರಲು ಬಿಡಲಾಗುತ್ತಿದೆ. ಶಿರಾಡಿ ಘಾಟ್ ಮೂಲಕ ಜಿಲ್ಲೆಯ ಧರ್ಮಸ್ಥಳ ಮತ್ತು ಸುಬ್ರಮಣ್ಯ ಪುಣ್ಯಕ್ಷೇತ್ರಗಳಿಗೆ ಭಕ್ತರು ಆಗಮಿಸುತ್ತಿದ್ದಾರೆ. ನಿನ್ನೆ ಒಂದೇ ದಿನ ತೀರ್ಥಯಾತ್ರೆ ಆಗಮಿಸಿದ್ದ ಬರೋಬ್ಬರಿ 69 ವಾಹನಗಳನ್ನು ವಾಪಸ್ ಕಳುಹಿಸಲಾಗಿದೆ. ಮುಂದಿನ ಎರಡು ವಾರಗಳ ಕಾಲ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳನ್ನು ಕರೆಯಲಾಗುವುದಿಲ್ಲ. ಅಂತರ್ ಜಿಲ್ಲಾ ಗಡಿಗಳಲ್ಲಿ […]

ಧರ್ಮಸ್ಥಳ-ಸುಬ್ರಹ್ಮಣ್ಯ ಯಾತ್ರಾರ್ಥಿಗಳು ಗುಂಡ್ಯದಿಂದ ವಾಪಸ್ Read More »

ಅಪ್ಪನ ಕಸಿದ ಕೊರೊನ, ಎತ್ತಿ ಮುದ್ದಾಡೋರು, ಹೊರಗಡೆ ಕರೆದೊಯ್ಯುವವರಾರು?

ಬೆಂಗಳೂರು: ‘ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಅಪ್ಪ ಮನೆಗೆ ಬಂದು ಒಂದೂವರೆ ವರ್ಷವಾಗಿತ್ತು. ಅವರು ಹೊರಗಡೆ ಕರೆದೊಯ್ದು, ಇಷ್ಟವಾದ ತಿನಿಸು ಹಾಗೂ ವಸ್ತುಗಳನ್ನು ಕೊಡಿಸುತ್ತಿದ್ದರು. ಕೋವಿಡ್‌ ಕಾಯಿಲೆಯು ಅಪ್ಪನನ್ನು ನಮ್ಮಿಂದ ದೂರ ಮಾಡಿತು. ಈಗ ಹೊರಗಡೆ ಕರೆದೊಯ್ಯುವವರು ಯಾರು?’ ಇದು ಎಂಟೂವರೆ ವರ್ಷದ ಬಾಲಕಿಯ ಪ್ರಶ್ನೆ. ಮೂರನೇ ತರಗತಿ ಓದುತ್ತಿರುವ ಪೂರ್ವಿಕಾ ಕಳೆದ ಏಪ್ರಿಲ್‌ನಲ್ಲಿ ತಂದೆಯನ್ನು ಕಳೆದುಕೊಂಡಿದ್ದಾಳೆ. ಅವಳ ತಾಯಿ ಶುಶ್ರೂಷಕಿಯಾಗಿದ್ದು, ರಾಜೀವ್‌ಗಾಂಧಿ ಎದೆರೋಗಗಳ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಸ್ಪತ್ರೆಗೆ ದಾಖಲಾದ ಹಲವಾರು ಕೊರೊನಾ ಸೋಂಕಿತರ ಆರೈಕೆ ಮಾಡಿದ್ದ

ಅಪ್ಪನ ಕಸಿದ ಕೊರೊನ, ಎತ್ತಿ ಮುದ್ದಾಡೋರು, ಹೊರಗಡೆ ಕರೆದೊಯ್ಯುವವರಾರು? Read More »

ಹಾಸನ ಕಾರು ಲಾರಿ ಭೀಕರ ಅಪಘಾತ ಬೆಳ್ತಂಗಡಿ ಮೂಲದ ಮೂವರು ಸಾವು | ಓರ್ವ ಗಂಭೀರ

ಬೆಳ್ತಂಗಡಿ: ಹಾಸನದಲ್ಲಿ ಲಾರಿ ಗೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಹೋದರರರು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ. ಮೃತಪಟ್ಟ ಇಬ್ಬರನ್ನು ತಾಲೂಕಿನ ಇಂದ್ರಬೆಟ್ಟು ಗ್ರಾಮದ ಕುತ್ರಬೆಟ್ಟುವಿನ ಜಯಪ್ರಕಾಶ್ (25) ಯೋಗೀಶ್(23) ಎಂದು ಗುರುತಿಸಲಾಗಿದೆ. ಮೃತಪಟ್ಟ ಇನ್ನೊಬ್ಬರು ಮತ್ತು ಗಾಯಗೊಂಡ ಒಬ್ಬರ ಮಾಹಿತಿ ತಿಳಿದುಬಂದಿಲ್ಲ.ಹಾಸನ ಹೊರವಲಯದ ಕೆಂಚಟ್ಟಿ ಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿದ್ದ ಹಂಪ್ ಕಂಡು ಲಾರಿ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ

ಹಾಸನ ಕಾರು ಲಾರಿ ಭೀಕರ ಅಪಘಾತ ಬೆಳ್ತಂಗಡಿ ಮೂಲದ ಮೂವರು ಸಾವು | ಓರ್ವ ಗಂಭೀರ Read More »

ಮತ್ತೆ 13 ಜಿಲ್ಲೆಗಳಲ್ಲಿ ಲಾಕ್ಡೌನ್ ಕಂಟಿನ್ಯೂ | ದಕ್ಷಿಣಕನ್ನಡಕ್ಕಿಲ್ಲ ರಿಲೀಫ್ ಭಾಗ್ಯ

ಬೆಂಗಳೂರು: ಕೋವಿಡ್ ಪಾಸಿಟಿವಿಟಿ ದರ ಶೇಕಡ 5 ಕ್ಕಿಂತ ಕೆಳಕ್ಕೆ ಇಳಿಯದ 13 ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರಿಸಲು ರಾಜ್ಯಸರ್ಕಾರ ನಿರ್ಧರಿಸಿದೆ. ಇನ್ನುಳಿದಂತೆ ಪಾಸಿಟಿವಿಟಿ ದರ ಇಳಿಕೆ ಕಂಡಿರುವ 16 ಜಿಲ್ಲೆಗಳಲ್ಲಿ ಲಾಕ್ಡೌನ್ ತೆರವುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪಾಸಿಟಿವಿಟಿ ದರದ ಆಧಾರದ ಮೇಲೆ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಸೇರಿದಂತೆ ಗದಗ, ರಾಯಚೂರು, ಬಾಗಲಕೋಟೆ, ಕಲಬುರ್ಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಸೇರಿದಂತೆ 16 ಜಿಲ್ಲೆಗಳಲ್ಲಿ, ಈ

ಮತ್ತೆ 13 ಜಿಲ್ಲೆಗಳಲ್ಲಿ ಲಾಕ್ಡೌನ್ ಕಂಟಿನ್ಯೂ | ದಕ್ಷಿಣಕನ್ನಡಕ್ಕಿಲ್ಲ ರಿಲೀಫ್ ಭಾಗ್ಯ Read More »

ಅಮಿತ್ ಶಾ ಸಮಾವೇಶದಲ್ಲಿ ರೂಲ್ಸ್ ಬ್ರೇಕ್ | ಬೆಳಗಾವಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ತಾರಾಟೆ

ಬೆಂಗಳೂರು: ಬೆಳಗಾವಿಯಲ್ಲಿ ನಡೆದಿದ್ದ ಸಮಾವೇಶವೊಂದರಲ್ಲಿ ಕೋವಿಡ್ ನಿಯಮ ಉಲ್ಲಂಘಹಿಸಲಾಗಿದೆ ಎಂದು ನಾಗರಿಕರೊಬ್ಬರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಬೆಳಗಾವಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಬೆಳಗಾವಿಯಲ್ಲಿ ಜನವರಿ 17ರಂದು ಬೆಳಗಾವಿಯಲ್ಲಿ ಜನಸೇವಕ ಸಮಾವೇಶ ನಡೆದಿತ್ತು. ಈ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ ವಿಚಾರ ಸಂಬಂಧ ರಾಘವೇಂದ್ರ ಎಂಬುವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ನಡೆಸಿತು. ಸಮಾವೇಶ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಮಿತ್ ಶಾ ಸಮಾವೇಶದಲ್ಲಿ ರೂಲ್ಸ್ ಬ್ರೇಕ್ | ಬೆಳಗಾವಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ತಾರಾಟೆ Read More »

ಶಾಲಾ ಮಕ್ಕಳಿಗೆ ಸಿಗಲಿದೆ ಕೆನೆಭರಿತ ಹಾಲಿನ ಪುಡಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲಿನಹುಡಿ ವಿತರಿಸಲು ನಿರ್ಧಾರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಈಗಾಗಲೇ ಲಾಕ್ಡೌನ್ ಸಮಯದಲ್ಲಿ ಮನೆಲ್ಲಿರುವ ವಿದ್ಯಾರ್ಥಿಗಳಿಗೆ ಅಕ್ಕಿ, ಅಡುಗೆ ಎಣ್ಣೆ ಇನ್ನಿತರ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ಇನ್ನು ಮುಂದೆ ಮಾನ್ಯ ಮುಖ್ಯಮಂತ್ರಿಗಳ ಆಶಯದಂತೆ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೆನೆಭರಿತ ಹಾಲಿನ ಪುಡಿ ವಿತರಿಸಲಾಗುವುದು. ಪ್ರತಿ ತಿಂಗಳಿಗೆ ಪ್ರತಿ

ಶಾಲಾ ಮಕ್ಕಳಿಗೆ ಸಿಗಲಿದೆ ಕೆನೆಭರಿತ ಹಾಲಿನ ಪುಡಿ Read More »

ಎಸ್ಸೆಸ್ಸೆಲ್ಸಿ ‌ಪರೀಕ್ಷೆ‌‌ ನಡೆಸಲು ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್’ಸಿ ಪರೀಕ್ಷೆಯನ್ನು ಸರಳೀಕರಿಸಿ ಕೇವಲ ಎರಡು ದಿನ ಮಾತ್ರ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿದೆ. ಪರೀಕ್ಷೆ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿ ಪ್ರಕಟಿಸಿರುವ ಶಿಕ್ಷಣ ಇಲಾಖೆ, ಕೋವಿಡ್ ನಿಂದ ಎಸ್‌ಎಸ್‌ಎಲ್’ಸಿ ವಿದ್ಯಾರ್ಥಿಗಳ ಹಿಂದಿನ ಸಾಲಿನ (9ನೇ ತರಗತಿ) ಪರೀಕ್ಷೆ ನಡೆದಿಲ್ಲ. ಎಸ್‌ಎಸ್‌ಎಲ್’ಸಿ ಪ್ರಿಪರೇಟರಿ ಸೇರಿ ಯಾವುದೇ ಪರೀಕ್ಷೆಗಳೂ ನಡೆದಿಲ್ಲ. ಹೀಗಾಗಿ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ. ಪರೀಕ್ಷೆ ಸರಳೀಕರಿಸಿ ಒಂದು ದಿನ ಕೋರ್

ಎಸ್ಸೆಸ್ಸೆಲ್ಸಿ ‌ಪರೀಕ್ಷೆ‌‌ ನಡೆಸಲು ಮಾರ್ಗಸೂಚಿ ಪ್ರಕಟ Read More »

ಕಾಂಗ್ರೆಸಿಗರು ಸಿಎಂ ಆಗಲು ಸೂಟ್ ಹೊಲಿಸಿಕೊಂಡು ತುದಿಗಾಲಿನಲ್ಲಿ ನಿಂತಿದ್ದಾರೆ: ಎಚ್.ಡಿ.ಕೆ

ಕೋಲಾರ: ಕಾಂಗ್ರೆಸ್‌ನಲ್ಲೂ ಸೂಟ್ ಹೊಲಿಸಿಕೊಂಡು ಮುಖ್ಯಮಂತ್ರಿ ಆಗುವುದಕ್ಕೆ ರೆಡಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿಕೆಯನ್ನು ನೀಡಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್‌ನಲ್ಲೂ ಮುಖ್ಯಮಂತ್ರಿಯಾಗಲು ಸೂಟ್ ಹೊಲಿಸಿಕೊಂಡು ತುದಿಗಾಲಿನಲ್ಲಿ ನಿಂತಿದ್ದಾರೆ. 2023ರಲ್ಲಿ ಏನು ಆಗುತ್ತದೆ ಎಂದು ಗೊತ್ತಾಗುತ್ತದೆ ಎಂದು ಹೇಳಿದ್ದಾರೆ. ಬಿಜೆಪಿ ಪಕ್ಷದ ಶಾಸಕರಲ್ಲೇ ಹೊಂದಾಣಿಕೆ ಇಲ್ಲ. ನಾಯಕತ್ವ ಗೊಂದಲ ಒಂದು ದುರಾದೃಷ್ಟಕರ. ಈಗಾಗಲೇ ಒಬ್ಬ ಶಾಸಕ ಭ್ರಷ್ಟಾಚಾರದ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಕೇವಲ ನೀರಾವರಿ ಇಲಾಖೆಯಲ್ಲಿ ಮಾತ್ರ

ಕಾಂಗ್ರೆಸಿಗರು ಸಿಎಂ ಆಗಲು ಸೂಟ್ ಹೊಲಿಸಿಕೊಂಡು ತುದಿಗಾಲಿನಲ್ಲಿ ನಿಂತಿದ್ದಾರೆ: ಎಚ್.ಡಿ.ಕೆ Read More »

ಮಡಿಕೇರಿ: ಅಂಚೆ ಕಛೇರಿ ಬಳಿ ನಿರಂತರ ಭೂಕುಸಿತ | ಕಾಟಾಚಾರಕ್ಕೆ ನೋಟೀಸ್ ಕೊಟ್ಟಿದ್ದ ಅಧಿಕಾರಿಗಳು

ಮಡಿಕೇರಿ: ಅಂಚೆ ಕಚೇರಿ ಸಮೀಪ ಇರುವ ಹಾಪ್ ಕಾಮ್ಸ್ ಕಟ್ಟಡದ ಸಮೀಪ ಭೂಕುಸಿತ ಉಂಟಾಗಿದೆ. ಸ್ಥಳದಲ್ಲಿ ಖಾಸಗಿ ಕಟ್ಟಡ ನಿರ್ಮಾಣದ ಸಂದರ್ಭ ಸುಮಾರು 30ರಿಂದ 40 ಅಡಿ ಎಷ್ಟು ಮಣ್ಣು ತೆಗೆದು ತೆಗೆದಿರುವುದು ಇದಕ್ಕೆ ಕಾರಣ ಎನ್ನಲಾಗಿದೆ. ಮಣ್ಣು ತೆಗೆಯುವ ಸಂದರ್ಭ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆ ಸಂದರ್ಭದಲ್ಲಿ ಅಧಿಕಾರಿಗಳು ಕಾಟಾಚಾರಕ್ಕೆ ನೋಟಿಸು ಕೊಟ್ಟು ಕಟ್ಟಡದ ಕಾಮಗಾರಿಯನ್ನು ಮುಂದುವರಿಸಲು ಅವಕಾಶ ಮಾಡಿಕೊಟ್ಟಿದ್ದರು. ಈ ಹಿಂದೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ತಡೆಗೋಡೆ ನಿರ್ಮಿಸಿದ ನಂತರವೇ ಕಟ್ಟಡದ ಕಾಮಗಾರಿಯನ್ನು ಮುಂದುವರಿಸುವಂತೆ

ಮಡಿಕೇರಿ: ಅಂಚೆ ಕಛೇರಿ ಬಳಿ ನಿರಂತರ ಭೂಕುಸಿತ | ಕಾಟಾಚಾರಕ್ಕೆ ನೋಟೀಸ್ ಕೊಟ್ಟಿದ್ದ ಅಧಿಕಾರಿಗಳು Read More »

ಸಿದ್ದರಾಮಯ್ಯರೇನು ಮಹಾನ್ ಹರಿಶ್ಚಂದ್ರರೇ…? ಕುಮಾರಸ್ವಾಮಿ ಆಕ್ರೋಶ

ಕೋಲಾರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರು ಮಹಾನ್ ಹರಿಶ್ಚಂದ್ರರೇ? ರಾಜಕೀಯವನ್ನು ನಾನು ಅವರಿಂದ ಕಲಿಯಬೇಕಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲಾರದ ಮಾಲೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರು‌ ನಗರದಲ್ಲಿ 400 ಎಕರೆ ರೀಡೋ(Re Do) ಮಾಡಿದ್ರಲ್ಲಾ, ಕೆಂಪಣ್ಣ ಅಯೋಗ ವರದಿ ಮಾಡಿದ್ರಲ್ಲ, ಏನಾಯ್ತು ಅದು? 400-500 ಕೋಟಿ ರೂಪಾಯಿ ಲೂಟಿ ಹೊಡೆದ , ಅವರೇನ್ ಸಾಚಾನ?, ಸಿದ್ದರಾಮಯ್ಯರಿಂದ ರಾಜಕೀಯ ಮಾಡೋದನ್ನ ನಾನು ಕಲಿಯಬೇಕಿಲ್ಲ ಎಂದು ಎಚ್. ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. 2008ರ ಚುನಾವಣೆಯಲ್ಲಿ ಯಡಿಯೂರಪ್ಪ

ಸಿದ್ದರಾಮಯ್ಯರೇನು ಮಹಾನ್ ಹರಿಶ್ಚಂದ್ರರೇ…? ಕುಮಾರಸ್ವಾಮಿ ಆಕ್ರೋಶ Read More »