ರಾಜ್ಯ

ಶೀಘ್ರದಲ್ಲೇ ಪ್ರಾಥಮಿಕ ತರಗತಿಗಳೂ ಪ್ರಾರಂಭ – ಮಕ್ಕಳಿಗೆ ಕೋವಿಡ್ ವರದಿ ಕಡ್ಡಾಯವಲ್ಲ – ಶಿಕ್ಷಣ ಸಚಿವ ಬಿ.ಸಿ ನಾಗೇಶ್.

ಮೈಸೂರು: ವಿದ್ಯಾರ್ಥಿಗಳಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ ಒಂದು ವೇಳೆ ವಿದ್ಯಾರ್ಥಿಗಳಿಗೆ ಕೊರೋನಾ ದೃಢಪಟ್ಟರೆ ಒಂದು ವಾರ ತರಗತಿ ಅಮಾನತು ಮಾಡಲಾಗುತ್ತದೆ. ಸ್ಯಾನಿಟೈಸ್ ಮಾಡಿ ವಾರದ ನಂತರ ಮತ್ತೆ ತರಗತಿಗಳನ್ನು ಆರಂಭಿಸಲಾಗುವುದು. ಶಾಲೆ ಆರಂಭಿಸುವುದರಲ್ಲಿ ತೊಂದರೆ ಇದೆ ಆದರೂ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ತಜ್ಞರ ಅಭಿಪ್ರಾಯದಂತೆ ಶಾಲೆಗಳನ್ನು ಆರಂಭ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಕೊರೋನಾ ಮಕ್ಕಳ ಮೇಲೆ ದೊಡ್ಡ ಪರಿಣಾಮ ಬೀರುವುದಿಲ್ಲ. ಪ್ರಾಣಹಾನಿಯಂತಹ […]

ಶೀಘ್ರದಲ್ಲೇ ಪ್ರಾಥಮಿಕ ತರಗತಿಗಳೂ ಪ್ರಾರಂಭ – ಮಕ್ಕಳಿಗೆ ಕೋವಿಡ್ ವರದಿ ಕಡ್ಡಾಯವಲ್ಲ – ಶಿಕ್ಷಣ ಸಚಿವ ಬಿ.ಸಿ ನಾಗೇಶ್. Read More »

ದೇವಾಲಯಗಳಲ್ಲಿ ಆನೆಗಳನ್ನು ಬಳಸುವುದಕ್ಕೆ ಹೈಕೋರ್ಟ್ ವಿರೋಧ

ಬೆಂಗಳೂರು: ನಗರದ ವಿದ್ಯಾರಣ್ಯಪುರದ ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ಕೆ ಬಳಸಲು ಆನೆಯನ್ನು ಇರಿಸಿಕೊಂಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೈಕೋರ್ಟ್‌, ಆನೆಗಳು ಕಾಡಿನಲ್ಲಿ ಇರಬೇಕು ಹೊರತು ದೇವಸ್ಥಾನದಲ್ಲಿ ಅಲ್ಲ.ಪೂಜಾ ಕಾರ್ಯಕ್ರಮಕ್ಕೆ ಆನೆಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ ಆಗುತ್ತದೆ ಎಂದು ತೀಕ್ಷ್ಣವಾಗಿ ಹೇಳಿತು. ಈ ಕುರಿತು ಸಲ್ಲಿಸಿದ್ದ ಅರ್ಜಿಯು ಮುಖ್ಯ ನ್ಯಾ. ಎ.ಎಸ್.ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನವು ಖಾಸಗಿ ದೇವಾಲಯವಾಗಿದೆ.

ದೇವಾಲಯಗಳಲ್ಲಿ ಆನೆಗಳನ್ನು ಬಳಸುವುದಕ್ಕೆ ಹೈಕೋರ್ಟ್ ವಿರೋಧ Read More »

ಮುಸ್ಲಿಂ ಮಹಿಳೆಯರ ‘ಹೃದಯ’ ಕದ್ದ ಸಚಿವೆ ಜೊಲ್ಲೆ| ಆರೋಗ್ಯಕ್ಕಾಗಿ ವಿಶೇಷ ಸಹಾಯಧನ|

ಬೆಂಗಳೂರು : ರಾಜ್ಯ ಸರ್ಕಾರವು ಮುಸ್ಲಿಂ ಮಹಿಳೆಯರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಮುಸ್ಲಿಂ ಮಹಿಳೆಯರಿಗೆ ಹೃದಯ ಹಾಗೂ ಕ್ಯಾನ್ಸರ್ ರೋಗ ಚಿಕಿತ್ಸೆಗೆ 1 ಲಕ್ಷ ರೂ. ಸಹಾಯಧನ ನೀಡಲಾಗುವುದು ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ವಕ್ಫ್ ಮತ್ತು ಹಜ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ಕಮಿಟಿಯಲ್ಲಿ 105 ಕೋಟಿ ಅನುದಾನ ಇದೆ. ಬಡ ಮುಸ್ಲೀಂ ಸಮುದಾಯದವರಿಗೆ ಶೇ 5 %

ಮುಸ್ಲಿಂ ಮಹಿಳೆಯರ ‘ಹೃದಯ’ ಕದ್ದ ಸಚಿವೆ ಜೊಲ್ಲೆ| ಆರೋಗ್ಯಕ್ಕಾಗಿ ವಿಶೇಷ ಸಹಾಯಧನ| Read More »

ಕುಕ್ಕೆಯಲ್ಲಿ ಆ.30ರವರೆಗೆ ಎಲ್ಲಾ ಸೇವೆಗಳೂ ರದ್ದು| ದರ್ಶನಕ್ಕೆ ಮಾತ್ರ ಅವಕಾಶ

ಕೇರಳಕ್ಕೆ ಹೊಂದಿಕೊಂಡಿರುವ ದ.ಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ರಾಜ್ಯದ ಪ್ರಸಿದ್ದ ದೇವಸ್ಥಾನ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಆ.30 ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ದೇವಳದಲ್ಲಿ ಶ್ರೀ ದೇವರ ದರ್ಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ ವಾರಾಂತ್ಯದ ದಿನಗಳಲ್ಲಿ ಶ್ರೀ ದೇವರ ದರುಶನಕ್ಕೆ ಕೂಡಾ ಅವಕಾಶ ನಿರ್ಬಂಧಿಸಲಾಗಿದೆ ಎಂದು ಶ್ರೀ ದೇವಳದ ಪ್ರಕಟಣೆ

ಕುಕ್ಕೆಯಲ್ಲಿ ಆ.30ರವರೆಗೆ ಎಲ್ಲಾ ಸೇವೆಗಳೂ ರದ್ದು| ದರ್ಶನಕ್ಕೆ ಮಾತ್ರ ಅವಕಾಶ Read More »

ರಕ್ಷಣಾ ಪರೀಕ್ಷೆಯಲ್ಲಿ ಮಹಿಳೆಯರಿಗೂ ಅನುಮತಿ – ಸೇನೆಗೆ ಚಾಟಿ ಬೀಸಿದ ಸುಪ್ರೀಂ

ನವದೆಹಲಿ : ರಾಷ್ಟ್ರೀಯ ರಕ್ಷಣಾ ಅಕಾಡೆಮಿ ವತಿಯಿಂದ ನಡೆಸಲಾಗುವ ಎನ್ ಡಿಎ ಪರೀಕ್ಷೆಯಲ್ಲಿ ಭಾಗವಹಿಸಲು ಮಹಿಳೆಯರಿಗೆ ಇದುವರೆಗೆ ಅವಕಾಶವಿರಲಿಲ್ಲ. ಈ ಕುರಿತಂತೆ ಸುಪ್ರೀಂ ಕೋರ್ಟ್‌ ಗೆ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ನ್ಯಾಯಪೀಠವು, ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಪರೀಕ್ಷೆಗೆ ಮಹಿಳೆಯರಿಗೂ ಅನುಮತಿ ನೀಡಿದೆ. ಸೆಪ್ಟೆಂಬರ್ 5ರಂದು ನಿಗದಿಯಾಗಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್ ಡಿಎ) ಪರೀಕ್ಷೆಯನ್ನು ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಬುಧವಾರ ಮಹಿಳೆಯರಿಗೆ ಅನುಮತಿ ನೀಡಿದೆ. ಪ್ರವೇಶಗಳು ನ್ಯಾಯಾಲಯದ ಅಂತಿಮ ಆದೇಶಗಳಿಗೆ ಒಳಪಟ್ಟಿರುತ್ತವೆ

ರಕ್ಷಣಾ ಪರೀಕ್ಷೆಯಲ್ಲಿ ಮಹಿಳೆಯರಿಗೂ ಅನುಮತಿ – ಸೇನೆಗೆ ಚಾಟಿ ಬೀಸಿದ ಸುಪ್ರೀಂ Read More »

ಮೊತ್ತ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ ಬಿ.ವಿ ನಾಗರತ್ನ

ನವದೆಹಲಿ: 2027 ರಲ್ಲಿ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು ಭಾರತದ ಮುಖ್ಯ ನ್ಯಾಯಮೂರ್ತಿಯಾಗುವ ಮೊದಲ ಮಹಿಳೆಯಾಗಲಿದ್ದಾರೆ ಎನ್ನಲಾಗಿದೆ. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರು 2027 ರಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯಾಗುವ ಮೊದಲ ಮಹಿಳೆಯಾಗಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದಲ್ಲಿ, ಸುಪ್ರೀಂ ಕೋರ್ಟ್ ಕೊಲಿಜಿಯಂ ಒಂಬತ್ತು ನ್ಯಾಯಾಧೀಶರ ಹೆಸರನ್ನು ಉನ್ನತ ನ್ಯಾಯಾಲಯದ ಮುಖ್ಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಿದೆ. ಪ್ರಸ್ತುತ ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರನ್ನು ಸಹ ಕೊಲಿಜಿಯಂ ಶಿಫಾರಸು ಮಾಡಿದೆ. ನ್ಯಾಯಮೂರ್ತಿ ಹಿಮಾ

ಮೊತ್ತ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ ಬಿ.ವಿ ನಾಗರತ್ನ Read More »

ಕರ್ನಾಟಕಕ್ಕೆ ಆಗಮಿಸುವ ಕೇರಳದ ರೋಗಿಗಳನ್ನು ಗಡಿಯಲ್ಲಿ ತಡೆಯುವಂತಿಲ್ಲ- ಕೇರಳ ಹೈಕೋರ್ಟ್ ಆದೇಶ

ಕಾಸರಗೋಡು: ಕರ್ನಾಟಕದ ಆಸ್ಪತ್ರೆಗಳಿಗೆ ತೆರಳುವ ರೋಗಿಗಳನ್ನು ಗಡಿಯಲ್ಲಿ ತಡೆಯದಂತೆ ಕೇರಳ ಹೈಕೋರ್ಟ್ ಕರ್ನಾಟಕಕ್ಕೆ ಆದೇಶ ನೀಡಿದೆ. ಈ ಕುರಿತು ಮಂಗಳವಾರ ಮಧ್ಯಂತರ ಆದೇಶ ನೀಡಿರುವ ಹೈಕೋರ್ಟ್ ಅಗತ್ಯ ದಾಖಲೆಗಳು ಇದ್ದಲ್ಲಿ ಆಸ್ಪತ್ರೆಗೆ ತೆರಳುವ ವರನ್ನು ತಡೆಯುವಂತಿಲ್ಲ. ಅಂಬ್ಯುಲೆನ್ಸ್, ಖಾಸಗಿ ವಾಹನಗಳಲ್ಲಿ ತೆರಳುವ ರೋಗಿಗಳನ್ನು ತಡೆಯಬಾರದು ಎಂದು ನ್ಯಾಯಾಲಯ ಆದೇಶಿಸಿದೆ. ಪ್ರಕರಣವನ್ನು ಆಗಸ್ಟ್ 25 ರಂದು ಮತ್ತೆ ವಿಚಾರಣೆಗೆ ಬರಲಿದೆ. ಸಿಪಿಎಂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಆರ್. ಜಯಾನಂದ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ

ಕರ್ನಾಟಕಕ್ಕೆ ಆಗಮಿಸುವ ಕೇರಳದ ರೋಗಿಗಳನ್ನು ಗಡಿಯಲ್ಲಿ ತಡೆಯುವಂತಿಲ್ಲ- ಕೇರಳ ಹೈಕೋರ್ಟ್ ಆದೇಶ Read More »

ಭಯ, ಆತಂಕಕ್ಕೆ ಬಲಿಯಾದ ದಂಪತಿ| ವಿಧಿಯೇ….ಈ ಸಾವು ನ್ಯಾಯವೇ…?

ಮಂಗಳೂರು: ಕೊರೊನಾ ಭಯದಲ್ಲಿ ಸಾವಿಗೆ ಶರಣಾಗಿರುವ ದಂಪತಿಯ ಪ್ರಕರಣ ಕರಾವಳಿಯಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಕೊರೊನಾ ಸೋಂಕಿನ ಎರಡನೇ ಅಲೆಯಲ್ಲಿ ಉಸಿರಾಟದ ತೊಂದರೆ, ಬ್ಲಾಕ್ ಫಂಗಸ್ ಕಂಡುಬಂದಿದ್ದರೂ, ಮೂರೇ ತಿಂಗಳಲ್ಲಿ ಸೋಂಕಿನ ತೀವ್ರತೆ ಕಡಿಮೆಯಾಗಿತ್ತು. ಸೋಂಕು ಕಡಿಮೆಗೊಂಡು ಜನಜೀವನ ಸಹಜಸ್ಥಿತಿಗೆ ಬರುತ್ತಿರುವಾಗಲೇ ದಂಪತಿ ಅನ್ಯಾಯವಾಗಿ ಸಾವು ಕಂಡಿರುವುದು ಕರಾವಳಿ‌ ಮುಮ್ಮಲ ಮರುಗುವಂತೆ ಮಾಡಿದೆ. ಪಡುಬಿದ್ರಿ ಮೂಲದ ರಮೇಶ್ ಸುವರ್ಣ (45) ಉದ್ಯಮಿಯಾಗಿದ್ದರೂ ಕೊರೊನಾ ಕಾರಣದಿಂದ ಅವರಿಗೇನೂ ದೊಡ್ಡ ನಷ್ಟ ಆಗಿರಲಿಲ್ಲ. ಮದುವೆಯಾಗಿ 21 ವರ್ಷ ಆಗಿದ್ದರೂ ಮಕ್ಕಳಾಗಿಲ್ಲ

ಭಯ, ಆತಂಕಕ್ಕೆ ಬಲಿಯಾದ ದಂಪತಿ| ವಿಧಿಯೇ….ಈ ಸಾವು ನ್ಯಾಯವೇ…? Read More »

ಕುಂದಾಪುರ: ನಾಪತ್ತೆಯಾಗಿದ್ದ ಆಟೋ ಚಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಂದಾಪುರ: ನಾಪತ್ತೆಯಾಗಿದ್ದ ಆಟೋ ಚಾಲಕ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದು, ಮಂಗಳವಾರ ಕುಂದಾಪುರ ತಾಲೂಕಿನ ವಕ್ವಾಡಿ-ಕಾಳಾವರ ರಸ್ತೆ ಸಮೀಪದ ಸರಕಾರಿ ಹಾಡಿಯಲ್ಲಿ ಯುವಕನ ಶವ ಪತ್ತೆಯಾಗಿದೆ.ವಕ್ವಾಡಿ ನವನಗರ ನಿವಾಸಿ ರವಿಚಂದ್ರ ಕುಲಾಲ್ (33) ಆತ್ಮಹತ್ಯೆಗೈದ ಯುವಕ.ವಕ್ವಾಡಿಯಲ್ಲಿ ಆಟೋ ಚಾಲಕರಾಗಿದ್ದ ರವಿಚಂದ್ರ ಕುಲಾಲ್ ಸೋಮವಾರ ಮಧ್ಯಾಹ್ನದ ಸುಮಾರಿಗೆ ತನ್ನ ಆಟೋ ರಿಕ್ಷಾವನ್ನು ವಕ್ವಾಡಿ ನವನಗರ ತಿರುವಿನಲ್ಲಿ ನಿಲ್ಲಿಸಿ ನಾಪತ್ತೆಯಾಗಿದ್ದರು. ತನ್ನ ವಾಟ್ಸಾಪ್ ಸ್ಟೇಟಸ್’ನಲ್ಲಿ ಗುಡಾರ್ಥದ ಬರಹಗಳನ್ನು ಬರೆದುಕೊಂಡಿದ್ದರಿಂದ ಅನುಮಾನಗೊಂಡ ಸ್ನೇಹಿತರು ಹಾಗೂ ಕುಟುಂಬದವರು ನಿರಂತರವಾಗಿ ಕರೆ ಮಾಡಿದ್ದಾರೆ.

ಕುಂದಾಪುರ: ನಾಪತ್ತೆಯಾಗಿದ್ದ ಆಟೋ ಚಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ತಮಿಳು ಚಿತ್ರರಂಗದತ್ತ ಪೃಥ್ವಿ ಅಂಬರ್| ಕಾಲಿವುಡ್ ನಲ್ಲಿ ಮಿಂಚಲಿರುವ ಕರಾವಳಿ ಪ್ರತಿಭೆ|

‘ದಿಯಾ’ ಚಿತ್ರದ ಮೂಲಕ ಗಡಿ ದಾಟಿ ಜನಪ್ರಿಯತೆ ಗಳಿಸಿರುವ ಕರಾವಳಿಯ ಪ್ರತಿಭೆ ಪೃಥ್ವಿ ಅಂಬರ್ ಇದೀಗ ತಮಿಳು ಚಿತ್ರರಂಗ ಪ್ರವೇಶಿಸಲು ಸಜ್ಜಾಗಿದ್ದಾರೆ. ಅವರ ನಟಿಸಲಿರುವ ತಮಿಳು ಚಿತ್ರದಲ್ಲಿ ಡಾಲಿ ಧನಂಜಯ್ ಸಹ ನಟಿಸುತ್ತಿದ್ದಾರೆ ಎನ್ನುವುದು ಮತ್ತೊಂದು ವಿಶೇಷ. ವಿಜಯ್ ಮಿಲ್ಟನ್ ನಿರ್ದೇಶನದ “ಮಲೈ ಪಿಡಿಕ್ಕಾದ ಮಣಿದನ್” ಚಿತ್ರದ ಮೂಲಕ ಪೃಥ್ವಿ ಅಂಬರ್ ತಮಿಳು ಚಲನಚಿತ್ರ ರಂಗಕ್ಕೆ ಕಾಲಿಡುತ್ತಿದ್ದಾರೆ. ನಿರ್ದೇಶಕರಾಗಿ ಸಾಕಷ್ಟು ಹೆಸರು ಮಾಡಿರುವ ವಿಜಯ್ ಮಿಲ್ಟನ್ ಪ್ರಸ್ತುತ ಶಿವರಾಜ್ ಕುಮಾರ್, ಪೃಥ್ವಿ ಅಂಬರ್ ಮತ್ತು ಧನಂಜಯ್ ಅಭಿನಯದ

ತಮಿಳು ಚಿತ್ರರಂಗದತ್ತ ಪೃಥ್ವಿ ಅಂಬರ್| ಕಾಲಿವುಡ್ ನಲ್ಲಿ ಮಿಂಚಲಿರುವ ಕರಾವಳಿ ಪ್ರತಿಭೆ| Read More »