ರಾಜ್ಯ

ಬಕೆಟ್ ಗೆ ಬಿದ್ದು ಮಗು ಮೃತ್ಯು

ಹುಣಸೂರು: ಮನೆಯೊಳಗೆ ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ನೀರು ತುಂಬಿದ್ದ ಬಕೆಟ್ ಒಳಗೆ ಬಿದ್ದು ಮೃತಪಟ್ಟ ಘಟನೆ ನಿನ್ನೆ ನಡೆದಿದೆ. ತರಿಕಲ್ ಗ್ರಾಮದ ಸುಂದರರಾಜ್ ಎಂಬವರ ಎರಡೂವರೆ 2 ವರ್ಷದ ಮಗು ಸಮರ್ಥ್ ಮೃತಪಟ್ಟ ದುರ್ದೈವಿ ಕಂದ. ತನ್ನ ಇಬ್ಬರು ಅಕ್ಕಂದಿರೊಂದಿಗೆ ಆಟವಾಡುತ್ತಿದ್ದ ಮಗು ಇದ್ದಕ್ಕಿದ್ದಂತೆ ಕಾಣೆಯಾಗಿದೆ. ಮನೆಯವರೆಲ್ಲರೂ ಸತ್ತ ಮತ್ತ ಹುಡುಕಾಡಿದ್ದು ಬಾತ್ರೂಮ್ ನ ಬಕೆಟ್ ನಲ್ಲಿ ಮಗು ಪತ್ತೆಯಾಗಿದೆ. ತಕ್ಷಣ ಹೊರತೆಗೆದು ಪ್ರಥಮ ಚಿಕಿತ್ಸೆ ನೀಡಲಾಯಿತಾದರೂ ಅದಾಗಲೇ ಮಗು ಮೃತಪಟ್ಟಿತ್ತು.

ಬಕೆಟ್ ಗೆ ಬಿದ್ದು ಮಗು ಮೃತ್ಯು Read More »

ಪಕ್ಷಕ್ಕಿಂತ ಯಾರೂ ದೊಡ್ಡೋರಲ್ಲ, ಅದು ಸಿಎಂ ಆದ್ರೂ ಅಷ್ಟೇ- ಸಿ.ಟಿ ರವಿ

ಬೆಂಗಳೂರು: ನಮ್ಮದು ಸಿದ್ದಾಂತದಿಂದ ಬಂದ ಪಕ್ಷ. ಇಲ್ಲಿ ಎಲ್ಲರೂ ಸಾಮಾನ್ಯ ಕಾರ್ಯಕರ್ತರೇ. ಪತ್ರಕರ್ತನಾಗಿದ್ದ ಪ್ರತಾಪ್ ಸಿಂಹರನ್ನು ಕರೆದು ಸಂಸದರನ್ನಾಗಿ ಮಾಡಿದೆವು. ನಾನೂ ಸಾಮಾನ್ಯ ಕಾರ್ಯಕರ್ತ, ಪ್ರಹ್ಲಾದ್ ಜೋಶಿ, ಈಶ್ವರಪ್ಪನವರು ಸಾಮಾನ್ಯ ಕಾರ್ಯಕರ್ತರೇ. ಅದೇ ರೀತಿ ಯಡಿಯೂರಪ್ಪನವರು ಸಾಮಾನ್ಯ ಕಾರ್ಯಕರ್ತರೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಪಕ್ಷದಲ್ಲಿ ಯಾರೂ ದೊಡ್ಡವರಿಲ್ಲ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ ಪಕ್ಷದ ಸಿದ್ದಾಂತ ಮೆಚ್ಚಿ ಬಂದವರು ಮಾತ್ರ ಪಕ್ಷದಲ್ಲಿದ್ದೇವೆ. ಬೀದಿಯಲ್ಲಿ ನಿಂತು

ಪಕ್ಷಕ್ಕಿಂತ ಯಾರೂ ದೊಡ್ಡೋರಲ್ಲ, ಅದು ಸಿಎಂ ಆದ್ರೂ ಅಷ್ಟೇ- ಸಿ.ಟಿ ರವಿ Read More »

”ಮದ್ಯದ ಬೆಲೆ ಹೆಚ್ಚಾಗಿದೆ, ಬನ್ನಿ ಕುಳಿತು ಚರ್ಚಿಸೋಣ”

ಕೊಪ್ಪಳ: ಲಾಕ್‌ಡೌನ್ ನೆಪವಾಗಿಟ್ಟುಕೊಂಡು ಅಧಿಕ ದರದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪವಿದೆ. ಈ ಆರೋಪಕ್ಕೆ ಪುಷ್ಠಿ ಕೊಡುವಂತೆ ಕೊಪ್ಪಳ ಜಿಲ್ಲೆಯ ಹೊಸಹಳ್ಳಿಯಲ್ಲಿ ದುಪ್ಪಟ್ಟು ದರಕ್ಕೆ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಬೇಸತ್ತ ಮದ್ಯಪ್ರೀಯರು ಗ್ರಾಮದಲ್ಲಿರುವ ಎಲ್ಲಾ ಕುಡುಕರು ಒಂದು ಕಡೆ ಚರ್ಚಿಸೋಣ ಬನ್ನಿ ಎಂದು ಡಂಗುರ ಸಾರಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ನಮ್ಮ ಗ್ರಾಮದಲ್ಲಿ ಹಾಗೂ ಗಂಗಾವತಿಯಲ್ಲಿ ದುಪ್ಪಟ್ಟು ದರಕ್ಕೆ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಬಡವರಿಗೆ ತೊಂದರೆಯಾಗುತ್ತಿದೆ. ಲಾಕ್‌ಡೌನ್ ನೆಪ ಹೇಳಿಕೊಂಡು 50

”ಮದ್ಯದ ಬೆಲೆ ಹೆಚ್ಚಾಗಿದೆ, ಬನ್ನಿ ಕುಳಿತು ಚರ್ಚಿಸೋಣ” Read More »

ಪ್ರಪಾತಕ್ಕೆ ಬಿದ್ದ ಹಸುಗಳನ್ನು ರಕ್ಷಿಸಿದ ಮುಸ್ಲಿಂ ಯುವಕರು

ಕೊಪ್ಪಳ: ಗುಡ್ಡದ ಪ್ರಪಾತಕ್ಕಿಳಿದಿದ್ದ ನಾಲ್ಕು ಗೋವುಗಳು ನಾಲ್ಕು ಐದು ದಿನಗಳಿಂದ ಮೇಲಕ್ಕೆ ಬರಲು ಆಗದೆ ಪರದಾಡುತ್ತಿದ್ದವು. ಈ ಸಂದರ್ಭದಲ್ಲಿ ಮುಸ್ಲಿಂ ಯುವಕರ ತಂಡ ಶತಪ್ರಯತ್ನ ಮಾಡಿ ಎರಡು ಹಸುಗಳನ್ನು ರಕ್ಷಿಸಿದ್ದು ಎರಡು ಹಸುಗಳು ಹಸಿವಿನಿಂದ ನಿತ್ರಾಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕೊಪ್ಪಳ ನಗರದ ಹುಲಿಕೆರೆಯ ಬಳಿಯ ವಳಕಲ್ಲು ಗುಡ್ಡದ ಬಳಿ ಮೇಯಲು ಹೋಗಿದ್ದ ನಾಲ್ಕು ಹಸುಗಳು ಸುಮಾರು 300 ಆಳದ ಪ್ರಪಾತಕ್ಕೆ ಇಳಿದಿದ್ದವು. ನಗರದ ಗೋವು ಶಾಲೆಯಲ್ಲಿ ಗೋವುಗಳು ಐದು ದಿನಗಳ ಹಿಂದೆ ಗುಡ್ಡ ಪ್ರದೇಶದಲ್ಲಿ ಮೇಯಲು ಹೋಗಿದ್ದವು.

ಪ್ರಪಾತಕ್ಕೆ ಬಿದ್ದ ಹಸುಗಳನ್ನು ರಕ್ಷಿಸಿದ ಮುಸ್ಲಿಂ ಯುವಕರು Read More »

ಕನ್ನಡಿಗ ಬಾಲಕನಿಗೆ ಪ್ರಧಾನಿಯಿಂದ ಪ್ರಶಂಸಾ ಪತ್ರ

ಧಾರವಾಡ: ಪ್ರಧಾನಿ ನರೇಂದ್ರ ಮೋದಿಯವರ ಚಿತ್ರವನ್ನು ಅದ್ಭುತವಾಗಿ ಬಿಡಿಸಿ ಅವರಿಗೆ ಟ್ವೀಟ್ ಮಾಡಿದ್ದ ಧಾರವಾಡ ಮೂಲದ ಬಾಲಕನಿಗೆ ಪ್ರಧಾನಿ ಪ್ರಶಂಸಾ ಪತ್ರ ಕಳುಹಿಸಿದ್ದಾರೆ. ಜಿಲ್ಲೆಯ ಮಾಡರಗಿ ಗ್ರಾಮದ ವಿದ್ಯಾರ್ಥಿ 16 ವರ್ಷದ ಸಚಿನ್ ಮೋದಿಯವರಿಂದ ಮೆಚ್ಚುಗೆ ಪಡೆದ ಬಾಲಕ. ಈತ ಇದುವರೆಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ, ಮಹಾತ್ಮಾ ಗಾಂಧೀಜಿ, ಸ್ವಾಮಿ ವಿವೇಕಾನಂದ ಸೇರಿದಂತೆ ಹಲವಾರು ಮಹನೀಯರ ಪೆನ್ಸಿಲ್ ಸ್ಕೆಚ್ ಚಿತ್ರ ಬಿಡಿಸಿದ್ದಾನೆ. ಚಿಕ್ಕಂದಿನಿಂದಲೇ ಚಿತ್ರಕಲೆಯತ್ತ ಮನಸ್ಸು ಮಾಡಿದ್ದ ಸಚಿನ, ಬಾಲ್ಯದಲ್ಲಿ ಗೋಡೆಗಳಲ್ಲಿ ಗೀಚುತ್ತಿದ್ದನು. ಶಾಲೆಯಲ್ಲಿ ಚಿತ್ರಕಲೆ ತರಗತಿಯಲ್ಲೂ

ಕನ್ನಡಿಗ ಬಾಲಕನಿಗೆ ಪ್ರಧಾನಿಯಿಂದ ಪ್ರಶಂಸಾ ಪತ್ರ Read More »

ಲೂಟಿ ಹಣದ ಪಾಲು ಪಡೆಯಲು ಅರುಣ್ ಸಿಂಗ್ ರಾಜ್ಯಕ್ಕೆ ಬಂದಿದ್ದಾರೆ: ಎಚ್ ಡಿ ಕೆ

ಮಂಡ್ಯ: ರಾಜ್ಯ ಸರ್ಕಾರ ಕೊರೋನಾ ಹೆಸರಿನಲ್ಲಿ ಮಾಡಿದ ಲೂಟಿ ಹಣದಲ್ಲಿ ಪಾಲು ಕೊಂಡೊಯ್ಯಲು ಅರುಣ್ ಸಿಂಗ್ ರಾಜ್ಯಕ್ಕೆ ಬಂದಿದ್ದಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಜಿಲ್ಲೆಯ ಮದ್ದೂರಿನಲ್ಲಿ ನಡೆದ ದಿನಸಿ ಕಿಟ್ ವಿತರಣಾ ಕಾರ್ಯಕ್ರಮವೊಂದನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು. ಕಳೆದೊಂದು ವರ್ಷಗಳಿಂದ ರಾಜ್ಯ ಸರ್ಕಾರ ಕೊರೋನದಿಂದ ಸಂಕಷ್ಟಕ್ಕೊಳಗಾಗಿರುವ ಜನರ ಹೆಸರಲ್ಲಿ ರಾಜ್ಯದ ಬೊಕ್ಕಸವನ್ನು ನಿರಂತರವಾಗಿ ದೋಚುತ್ತಿದೆ. ಅದರಲ್ಲಿ ಕೇಂದ್ರಕ್ಕೆ ಪಾಲು ಕೊಡಲಾಗುತ್ತದೆ. ಆ ಪಾಲನ್ನು ದೆಹಲಿ ಕೊಂಡೊಯ್ಯಲು ಬಿಜೆಪಿ ರಾಜ್ಯ ಉಸ್ತುವಾರಿ

ಲೂಟಿ ಹಣದ ಪಾಲು ಪಡೆಯಲು ಅರುಣ್ ಸಿಂಗ್ ರಾಜ್ಯಕ್ಕೆ ಬಂದಿದ್ದಾರೆ: ಎಚ್ ಡಿ ಕೆ Read More »

19 ಜಿಲ್ಲೆಗಳಲ್ಲಿ ‌ಇಂದಿನಿಂದ ವೀಕೆಂಡ್ ‌ಕರ್ಪ್ಯೂ ಜಾರಿ. ಏನಿರುತ್ತೆ? ಏನಿರಲ್ಲ?

ಬೆಂಗಳೂರು : ಕೊರೊನಾ ವೈರಸ್ ನಿಯಂತ್ರಣಕ್ಕೆ ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಇಂದು ರಾತ್ರಿ 7 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಪ್ಯೂ ಜಾರಿ ಇರಲಿದೆ.ಅಗತ್ಯ ವಸ್ತುಗಳ ಪೂರೈಕೆ ಹಾಗೂ ವೈದ್ಯಕೀಯ ಸೇವಾ ವಲಯ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ. ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ. ಮಧ್ಯಾಹ್ನ 2 ಗಂಟೆಯವರೆಗೆ ಹಾಲು, ಹಣ್ಣು, ತರಕಾರಿ, ಮಾಂಸ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಅಗತ್ಯ ವಸ್ತುಗಳ ಉತ್ಪಾದನೆಯ ಎಲ್ಲಾ ಕೈಗಾರಿಕೆಗಳು, ಸಂಸ್ಥೆಗಳಿಗೆ

19 ಜಿಲ್ಲೆಗಳಲ್ಲಿ ‌ಇಂದಿನಿಂದ ವೀಕೆಂಡ್ ‌ಕರ್ಪ್ಯೂ ಜಾರಿ. ಏನಿರುತ್ತೆ? ಏನಿರಲ್ಲ? Read More »

ತಬ್ಲೀಘಿ ಜಮಾತ್ ಗುರಿಯಾಗಿರಿಸಿ ಕಾರ್ಯಕ್ರಮ ಆರೋಪ | ಸುವರ್ಣ ನ್ಯೂಸ್ ಮತ್ತು ನ್ಯೂಸ್ 18 ಕನ್ನಡ ಮೇಲೆ ದಂಡ | ಕ್ಷಮೆಯಾಚಿಸಲು ಆದೇಶ

ಬೆಂಗಳೂರು: ತಬ್ಲಿಘಿ ಜಮಾತ್ ಗುರಿಯಾಗಿರಿಸಿ ಅಸಂಬದ್ಧವಾಗಿ ಕಾರ್ಯಕ್ರಮ ಬಿತ್ತರಿಸಿದ ಕನ್ನಡದ ನ್ಯೂಸ್ ಚಾನೆಲ್ ಗಳಾದ ಸುವರ್ಣನ್ಯೂಸ್ ಮತ್ತು ನ್ಯೂಸ್ 18 ಕನ್ನಡಕ್ಕೆ 1.5 ಲಕ್ಷ ದಂಡ ವಿಧಿಸಿ ಕ್ಷಮೆಯಾಚಿಸಲು ಆದೇಶಿಸಲಾಗಿದೆ. ಕೊರೋನಾ ಆಕ್ರಮಣ ಆರಂಭದ ದಿನಗಳಲ್ಲಿ ಸರ್ಕಾರದ ಅನುಮತಿ ಮೇರೆಗೆ ತಬ್ಲೀಘಿ ಜಮಾತ್ ಕಾರ್ಯಕ್ರಮ ನಡೆದಿತ್ತು. ಇನ್ನು ಆ ಸಮಯದಲ್ಲಿ ಕೋವಿಡ್ ವೈರಸ್ ವ್ಯಾಪಕವಾಗಿ ಹರಡಲು ಆರಂಭಿಸಿದ್ದರಿಂದ ನ್ಯೂಸ್ ಚಾನೆಲ್ ಗಳು ತಮ್ಮ ಚಾನೆಲ್ ನಲ್ಲಿ ತಬ್ಲಿಘಿ ಜಮಾತ್ ನ್ನು ಕೊರೋನ ಹರಡಿಸಲು ಏರ್ಪಡಿಸಲಾಗಿದೆ ಎಂದು ಬಿಂಬಿಸಿದ್ದವು.

ತಬ್ಲೀಘಿ ಜಮಾತ್ ಗುರಿಯಾಗಿರಿಸಿ ಕಾರ್ಯಕ್ರಮ ಆರೋಪ | ಸುವರ್ಣ ನ್ಯೂಸ್ ಮತ್ತು ನ್ಯೂಸ್ 18 ಕನ್ನಡ ಮೇಲೆ ದಂಡ | ಕ್ಷಮೆಯಾಚಿಸಲು ಆದೇಶ Read More »

ಪದವಿಯಲ್ಲಿ ಕನ್ನಡ ಕಲಿಕೆ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಡಿಸಿಎಂ ಡಾ. ಅಶ್ವಥ್ ನಾರಾಯಣ್

ಬೆಂಗಳೂರು: ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಮೊಟಕುಗೊಳಿಸುವ ಯಾವುದೇ ಚಿಂತನೆ ಅಥವಾ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ. ಗುರುವಾರ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸ್ಥಳೀಯ ಹಾಗೂ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚು ಮನ್ನಣೆ ನೀಡಿ ಆ ಭಾಷೆಗಳಲ್ಲೇ ವೃತ್ತಿಪರ ಶಿಕ್ಷಣ ಸೇರಿ ಎಲ್ಲ ವಿಭಾಗದ ಉನ್ನತ ಶಿಕ್ಷಣವನ್ನು ಬೋಧಿಸಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ. ಈ ಅಂಶಕ್ಕೆ ಶಿಕ್ಷಣ ನೀತಿಯಲ್ಲಿ

ಪದವಿಯಲ್ಲಿ ಕನ್ನಡ ಕಲಿಕೆ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಡಿಸಿಎಂ ಡಾ. ಅಶ್ವಥ್ ನಾರಾಯಣ್ Read More »

ಮಡಿಕೇರಿ:ತನ್ನ ಕಾಲನ್ನು ತಾನೇ ಕಡಿದುಕೊಂಡ ಮದ್ಯಪ್ರಿಯ

ವಿರಾಜಪೇಟೆ: ಮದ್ಯ ಸಿಗಲಿಲ್ಲವೆಂದು ಕುಪಿತಗೊಂಡ ವ್ಯಕ್ತಿಯೊಬ್ಬ ತನ್ನ ಕಾಲನ್ನು ತಾನೇ ಕಡಿದುಕೊಂಡ ಘಟನೆ ತಾಲೂಕಿನ ಅಮ್ಮತ್ತಿ ಎಂಬಲ್ಲಿ ನಡೆದಿದೆ. ಅಮ್ಮತ್ತಿ ಕಾರ್ಮಾಡು ನಿವಾಸಿ 42 ವರ್ಷದ ಪಾಪಣ್ಣ ಕಾಲು ಕತ್ತರಿಸಿಕೊಂಡ ವ್ಯಕ್ತಿ. ಪಾಪಣ್ಣ ಮದ್ಯವ್ಯಸನಿಯಾಗಿದ್ದ. ನಿತ್ಯ ಬೆಳಗಾದಂತೆ ಕಾಫಿ ಕುಡಿಯುವ ಬದಲು ಎಣ್ಣೆ ಹೊಡೆಯುವುದೇ ಈತನ ಅಭ್ಯಾಸವಾಗಿತ್ತು. ಇನ್ನು ಕೆಲದಿನಗಳಿಂದ ಈತನಿಗೆ ಯಾವುದೋ ಕಾರಣದಿಂದ ಮದ್ಯ ಸಿಗುತ್ತಿರಲಿಲ್ಲ ಎನ್ನಲಾಗಿದೆ. ಮದ್ಯ ಸಿಗದೇ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಪಾಪಣ್ಣ ದಿನಾಲು ತಾಯಿಯೊಂದಿಗೆ ಜಗಳವಾಡುತ್ತಿದ್ದ. ಕಳೆದೆರಡು ದಿನಗಳ ಹಿಂದೆ ಕುಪಿತಗೊಂಡು

ಮಡಿಕೇರಿ:ತನ್ನ ಕಾಲನ್ನು ತಾನೇ ಕಡಿದುಕೊಂಡ ಮದ್ಯಪ್ರಿಯ Read More »