ರಾಜ್ಯ

ವಿವಾಹ ವಾರ್ಷಿಕೋತ್ಸವ ಆಚರಿಸುವ ಹೃದಯದ ಚೆಕಪ್ ಮಾಡಿಸಿಕೊಳ್ಳಿ| ವೈದ್ಯಕೀಯ ತಪಾಸಣೆಯಿಂದ ಹೃದಯ ಹಗುರಾಗಿಸಿ- ಡಾ| ಸಿ.ಎನ್ .ಮಂಜುನಾಥ್

ಬೆಂಗಳೂರು: 40 ವರ್ಷ ಮೇಲ್ಪಟ್ಟ ಪುರುಷರು ಹಾಗೂ 45 ವರ್ಷ ಮೇಲ್ಪಟ್ಟ ಮಹಿಳೆಯರು ಪ್ರತಿ ವರ್ಷ ತಮ್ಮ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವ ಬದಲು ಮೆಡಿಕಲ್ ಚೆಕಪ್ ವಾರ್ಷಿಕೋತ್ಸವ ಆಚರಿಸಿಕೊಂಡರೆ ಹೃದಯಾಘಾತ ಆಗುವುದರಿಂದ ಬಚಾವ್ ಆಗಬಹುದು ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಇಂದಿಲ್ಲಿ ಹೇಳಿದರು. ಬಿಬಿಎಂಪಿ ಮತ್ತು ಜಯದೇವ ಹೃದ್ರೋಗ ಸಂಸ್ಥೆ ಸಹಯೋಗದಲ್ಲಿ ಬಾಬು ಜಗಜೀವನರಾಮ್ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹೃದಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಒಂದೇ ಜಾಗದಲ್ಲಿ […]

ವಿವಾಹ ವಾರ್ಷಿಕೋತ್ಸವ ಆಚರಿಸುವ ಹೃದಯದ ಚೆಕಪ್ ಮಾಡಿಸಿಕೊಳ್ಳಿ| ವೈದ್ಯಕೀಯ ತಪಾಸಣೆಯಿಂದ ಹೃದಯ ಹಗುರಾಗಿಸಿ- ಡಾ| ಸಿ.ಎನ್ .ಮಂಜುನಾಥ್ Read More »

ದಟ್ಟ ಅರಣ್ಯದೊಳಗೆ ಸುಟ್ಟ ಕಾರು, ಜೊತೆಗೊಂದು ಮೃತದೇಹ| ತನಿಖೆ ಕೈಗೊಂಡ ಪೊಲೀಸರು|

ಶಿವಮೊಗ್ಗ: ಇಲ್ಲಿನ ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅರಣ್ಯದಲ್ಲಿ ಸುಟ್ಟ ಕಾರು ಮತ್ತು ಮೃತದೇಹ ಪತ್ತೆಯಾಗಿದೆ. ಕೆಲವು ದಿನಗಳ ಹಿಂದೆ ಕಾರು ಸುಟ್ಟು ಹೋಗಿರುವ ಶಂಕೆ ಇದ್ದು, ಬುಧವಾರ ಪ್ರಕರಣ ಬೆಳಕಿಗೆ ಬಂದಿದೆ. ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಮಿಟ್ಲುಗೋಡು ಎಂಬ ಹಳ್ಳಿಯ ಸನಿಹದ ದಟ್ಟ ಅರಣ್ಯ ಪ್ರದೇಶದಲ್ಲಿ ಕಾರು ಸುಟ್ಟು ಕರಕಲಾಗಿ ಪತ್ತೆಯಾಗಿದೆ. ಕಾರಿನೊಳಗೆ ಮೃತದೇಹ ಸಹ ಸುಟ್ಟ ಸ್ಥಿತಿಯಲ್ಲಿ ಸಿಕ್ಕಿದೆ. ಕೆಲವು ದಿನಗಳ ಹಿಂದೆ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

ದಟ್ಟ ಅರಣ್ಯದೊಳಗೆ ಸುಟ್ಟ ಕಾರು, ಜೊತೆಗೊಂದು ಮೃತದೇಹ| ತನಿಖೆ ಕೈಗೊಂಡ ಪೊಲೀಸರು| Read More »

ವಿಶ್ವವಿಖ್ಯಾತ ದಸರಾ‌ ಉತ್ಸವಕ್ಕೆ ದಿನಗಣನೆ| ಈ ಬಾರಿ ಮಾಜಿ ಸಿಎಂ ಎಸ್ ಎಂ ಕೃಷ್ಣರಿಂದ ನಾಡಹಬ್ಬಕ್ಕೆ ಚಾಲನೆ

ಮೈಸೂರು: ನಾಡ ಹಬ್ಬ ದಸರಾ ಉದ್ಘಾಟಕರ ಹೆಸರು ಘೋಷಣೆಯಾಗಿದ್ದು ಈ ಬಾರಿಯ ದಸರಾ ಹಬ್ಬವನ್ನು ಮಾಜಿ ಸಿಎಂ ಎಸ್‍.ಎಂ ಕೃಷ್ಣ ಉದ್ಘಾಟಿಸಲಿದ್ದಾರೆ. ಮಂಗಳವಾರ (ಸೆ.28) ಸಂಜೆ ದಸರಾ ಹಬ್ಬದ ಸಿದ್ಧತೆ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಹಿರಿಯ ಮುತ್ಸದ್ಧಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರವರಿಗೆ ಆಹ್ವಾನ ನೀಡಲು ರಾಜ್ಯಸರ್ಕಾರ ನಿರ್ಧರಿಸಿದೆ. ಅಕ್ಟೋಬರ್ 7 ರಿಂದ ಪ್ರಾರಂಭವಾಗಲಿರುವ ದಸರಾ

ವಿಶ್ವವಿಖ್ಯಾತ ದಸರಾ‌ ಉತ್ಸವಕ್ಕೆ ದಿನಗಣನೆ| ಈ ಬಾರಿ ಮಾಜಿ ಸಿಎಂ ಎಸ್ ಎಂ ಕೃಷ್ಣರಿಂದ ನಾಡಹಬ್ಬಕ್ಕೆ ಚಾಲನೆ Read More »

ಮತ್ತೆ ಗ್ರಾಹಕರ ಜೇಬಿಗೆ ಕತ್ತರಿ| ಸ್ಥಿರತೆಯಲ್ಲಿದ್ದ ತೈಲ ದರ ಮತ್ತೆ ಏರಿಕೆ|

ನವದೆಹಲಿ: ಕಳೆದ ಮೂರು ವಾರಗಳಿಂದ ಯಥಾಸ್ಥಿತಿ ಕಾಪಾಡಿಕೊಂಡಿದ್ದ ಪೆಟ್ರೋಲ್ ದರವನ್ನು ಇಂದು (ಸೆ.28) ಏರಿಕೆ ಮಾಡಲಾಗಿದ್ದು, ಜೊತೆಗೆ ಡೀಸೆಲ್ ದರ ಕೂಡಾ ಮತ್ತೆ ಏರಿಕೆ ಕಂಡಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಲೀಟರ್ ಪೆಟ್ರೋಲ್ ಬೆಲೆಯಲ್ಲಿ 20ರಿಂದ 25 ಪೈಸೆ ಹೆಚ್ಚಳ ಮಾಡಿದ್ದರೆ, ಕಳೆದ ಐದು ದಿನಗಳಲ್ಲಿ ನಾಲ್ಕನೇ ಬಾರಿಗೆ ಏರಿಕೆ ಕಾಣುತ್ತಿರುವ ಲೀಟರ್ ಡೀಸೆಲ್ ದರ 75 ಪೈಸೆ ಹೆಚ್ಚಳವಾಗಿದೆ. ಮಂಗಳವಾರದ ಇಂಧನ ದರ ಏರಿಕೆಯ ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.39 ರೂಪಾಯಿ

ಮತ್ತೆ ಗ್ರಾಹಕರ ಜೇಬಿಗೆ ಕತ್ತರಿ| ಸ್ಥಿರತೆಯಲ್ಲಿದ್ದ ತೈಲ ದರ ಮತ್ತೆ ಏರಿಕೆ| Read More »

ನಂಜನಗೂಡು ದೇಗುಲ ತೆರವು ಪ್ರಕರಣ| ತಹಶಿಲ್ದಾರ್ ತಲೆದಂಡ|

ಮೈಸೂರು : ಮೈಸೂರು ಜಿಲ್ಲೆಯ ನಂಜನಗೂಡು ದೇವಸ್ಥಾನ ತೆರವುಗೊಳಿಸಿದ ತಹಶೀಲ್ದಾರ್ ವರ್ಗಾವಣೆಗೊಳಿಸಲಾಗಿದೆ. ಹುಚ್ಚಗಣಿ ಮಹದೇವಮ್ಮ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿಯನ್ನು ವರ್ಗಾಣೆಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಚ್ಚಗಣಿ ದೇವಾಲಯ ತೆರವು ವಿಚಾರ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು, ರಾಜ್ಯ ಸರ್ಕಾರದ ವಿರುದ್ಧ ಭಾರೀ ಆಕ್ರೋಶದ ಕೂಗು ಕೇಳಿಬಂದಿತ್ತು, ಇದೀಗ ಮೈಸೂರು ಜಿಲ್ಲೆಯ ನಂಜನಗೂಡು ದೇವಸ್ಥಾನ ತೆರವುಗೊಳಿಸಿದ ತಹಶೀಲ್ದಾರ್ ವರ್ಗಾವಣೆಗೊಳಿಸಿ ರಾಜ್ಯ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.ಸುಪ್ರೀಂ

ನಂಜನಗೂಡು ದೇಗುಲ ತೆರವು ಪ್ರಕರಣ| ತಹಶಿಲ್ದಾರ್ ತಲೆದಂಡ| Read More »

ಬೆಂಗಳೂರು| ಕಣ್ಣೆದುರಲ್ಲೇ ಕುಸಿದು ಬಿದ್ದ ಕಟ್ಟಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದುರಂತವೊಂದು ಸಂಭವಿಸಿದ್ದು, ಮೂರು ಅಂತಸ್ತಿನ ಕಟ್ಟಡ ಕಣ್ಣೆದುರಲ್ಲೇ ಕುಸಿದು ಬಿದ್ದಿರುವ ಘಟನೆ ಲಕ್ಕಸಂದ್ರದಲ್ಲಿ ನಡೆದಿದೆ. ಮೆಟ್ರೋ ಕಾಮಗಾರಿಗೆ ಆಗಮಿಸಿದ್ದ ಕಾರ್ಮಿಕರು ವಾಸವಾಗಿದ್ದ ಬಹುಮಹಡಿ ಕಟ್ಟಡ ಸಂಪೂರ್ಣ ನೆಲಸಮವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 1974ರಲ್ಲಿ ನಿರ್ಮಿಸಲಾಗಿದ್ದ ಹಳೆ ಕಟ್ಟಡ ಇದಾಗಿದ್ದು, ಮೂರು ಅಂತಸ್ಥಿನ ಕಟ್ಟಡವಾಗಿತ್ತು. ಕಟ್ಟಡ ತೆರವುಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ತೆರವುಗೊಳಿಸುವುದಕ್ಕಿಂತಲೂ ಮೊದಲೇ ಕಟ್ಟಡ ನೋಡನೋಡುತ್ತಿದ್ದಂತೆಯೇ ಕುಸಿದು ಬಿದ್ದಿದೆ. ಕಟ್ಟಡ ಕುಸಿಯುವ ಅಪಾಯವಿರುವುದರಿಂದ ಮೆಟ್ರೋ ಕಾರ್ಮಿಕರನ್ನು ತೆರವುಗೊಳಿಸಲಾಗಿತ್ತು ಎನ್ನಲಾಗಿದೆ. ಹಾಗಾಗಿ ಯಾವುದೇ

ಬೆಂಗಳೂರು| ಕಣ್ಣೆದುರಲ್ಲೇ ಕುಸಿದು ಬಿದ್ದ ಕಟ್ಟಡ Read More »

ಕೇಸ್ ಹಿಂಪಡೆಯಲೊಪ್ಪದ‌ ಪತ್ನಿಯ ಮೂಗು‌ ಕತ್ತರಿಸಿದ ಪತಿರಾಯ! ಕೋಪದಲ್ಲಿ ತುಂಡಾಗಿದ್ದು ಮತ್ತೆ ಬಂದೀತೇ?

ಭೋಪಾಲ್: ಮೂಗು ಮನುಷ್ಯನ ಸೌಂದರ್ಯಕ್ಕೆ ಹಿಡಿದ ಕೈಗನ್ನಡಿ. ಅಂತಹ‌ ಮೂಗು ಇಲ್ಲವಾದರೆ ಆ ದೃಶ್ಯ ಊಹಿಸಲೂ ಆಗದು. ಆದರೆ ಕೋಪದಲ್ಲೊಬ್ಬ ಪತಿ ಮಹಾಶಯ ತನ್ನ ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸುವುದೇ? ಇಂತಹ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಲ್ಲಿನ ರಾತ್ಲಾಮ್ ಜಿಲ್ಲೆಯಲ್ಲಿ ಘಟನೆ ನಡೆದಿದೆ.ತನ್ನ ಇಬ್ಬರು ಹೆಣ್ಣು ಮಕ್ಕಳ ಎದುರಲ್ಲೇ ಪತ್ನಿಯ ಮೂಗನ್ನು ಕಚ್ಚಿದ ಪತಿ ಕ್ರೌರ್ಯ ಮೆರೆದಿದ್ದು, ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಆಲೌಟ್ ಆಂಜುಮನ್ ಕಾಲೋನಿಯಯಲ್ಲಿರುವ ಪತ್ನಿ

ಕೇಸ್ ಹಿಂಪಡೆಯಲೊಪ್ಪದ‌ ಪತ್ನಿಯ ಮೂಗು‌ ಕತ್ತರಿಸಿದ ಪತಿರಾಯ! ಕೋಪದಲ್ಲಿ ತುಂಡಾಗಿದ್ದು ಮತ್ತೆ ಬಂದೀತೇ? Read More »

17 ಕಾರುಗಳ ಗಾಜು ಒಡೆದು ಪುಂಡಾಟ| 5 ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅರೆಸ್ಟ್ |

ಬೆಂಗಳೂರು: ಎರಡು ದಿನಗಳ ಹಿಂದೆ ಮನೆ ಮುಂದೆ ನಿಲ್ಲಿಸಿದ್ದ 17ಕ್ಕೂ ಹೆಚ್ಚು ಕಾರುಗಳ ಗಾಜನ್ನು ಒಡೆದು ದುಷ್ಕರ್ಮಿಗಳು ಪುಂಡಾಟ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 5 ಜನ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರ್.ಆರ್. ನಗರ ಹಾಗೂ ಕೆಂಗೇರಿಗಳಲ್ಲಿ ಎರಡು ದಿನಗಳ ಹಿಂದೆ ಮಧ್ಯ ರಾತ್ರಿ 2 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ಮನೆಗಳ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ದೊಣ್ಣೆಯಿಂದ ಒಡೆದು ಪುಡಿ ಪುಡಿ ಮಾಡಿ ತೆರಳಿದ್ದರು. ಈ ದೃಶ್ಯ ಸಿಸಿ ಟಿವಿ

17 ಕಾರುಗಳ ಗಾಜು ಒಡೆದು ಪುಂಡಾಟ| 5 ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅರೆಸ್ಟ್ | Read More »

ಕೃಷಿ‌ಕಾಯ್ದೆ ವಿರೋದಿಸಿ ನಾಳೆ ‘ಭಾರತ್ ಬಂದ್’| ರೈತಪರ ಸಂಘಟನೆಗಳಿಂದ ದೇಶಾದ್ಯಂತ ಹೋರಾಟ| ಬಂದ್ ಹೆಸರಲ್ಲಿ ತೊಂದರೆ ಕೊಡಬೇಡಿ- ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು: ಕೇಂದ್ರದ 3 ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸೆಪ್ಟೆಂಬರ್ 27ರಂದು ಸಂಯುಕ್ತ ಕಿಸಾನ್ ಮೋರ್ಚಾ ಭಾರತ ಬಂದ್‌ಗೆ ಕರೆ ಕೊಟ್ಟಿದೆ. ದೇಶಾದ್ಯಂತ ಬಂದ್ ಪ್ರಯುಕ್ತ ಪ್ರತಿಭಟನೆಗಳು ನಡೆಯಲಿರುವ ಸರ್ಕಾರ ಅಗತ್ಯ‌ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಬಂದ್ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘಟಣೆಗಳು ಕರ್ನಾಟಕ ಬಂದ್ ನಡೆಸಲು ಮುಂದಾಗಿದ್ದು ಬಂದ್ ಯಶಸ್ಸಿಗೆ ಎಲ್ಲಾ ಸಂಘಟನೆಗಳ ಬೆಂಬಲ ವ್ಯಕ್ತವಾಗಿದೆ ಎಂದು ರೈತ ಸಂಘದ ಮುಖಂಡ ಬಡಗಲಪುರ ನಾಗೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಹತ್ತು ತಿಂಗಳಿನಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ

ಕೃಷಿ‌ಕಾಯ್ದೆ ವಿರೋದಿಸಿ ನಾಳೆ ‘ಭಾರತ್ ಬಂದ್’| ರೈತಪರ ಸಂಘಟನೆಗಳಿಂದ ದೇಶಾದ್ಯಂತ ಹೋರಾಟ| ಬಂದ್ ಹೆಸರಲ್ಲಿ ತೊಂದರೆ ಕೊಡಬೇಡಿ- ಸಿಎಂ ಬೊಮ್ಮಾಯಿ ಮನವಿ Read More »

ಸಮಾಧಿಯಲ್ಲಿದ್ದ ಶವ ಮಾಯ|ಅಂತ್ಯಕ್ರೀಯೆ ಬಳಿಕ ರಾತ್ರೋರಾತ್ರಿ ಆ ಸ್ಮಶಾನದಲ್ಲಿ ‌ನಡೆದಿದ್ದೇನು?

ಹಾಸನ: ಅಂತ್ಯಕ್ರಿಯೆ ನಡೆದು ಮೂರು ತಿಂಗಳ ಬಳಿಕ ಮೃತದೇಹ ನಾಪತ್ತೆಯಾಗಿದ್ದು, ಸಮಾಧಿಯನ್ನು ಅಗೆದು ಶವ ತೆಗೆದುಕೊಂಡು ಹೋಗಲಾಗಿದೆ. ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಯಾದಾಪುರ ಗ್ರಾಮದಲ್ಲಿ ಸಮಾಧಿಯಲ್ಲಿದ್ದ ಮಹಿಳೆಯ ಮೃತದೇಹ ನಾಪತ್ತೆಯಾಗಿದೆ. ಕಳೆದ ಜೂನ್ ನಲ್ಲಿ ವಯೋಸಹಜ ಕಾಯಿಲೆಯಿಂದ ಲಕ್ಷ್ಮಮ್ಮ ಅವರು ಮೃತಪಟ್ಟಿದ್ದರು. ಅವರ ಜಮೀನಿನಲ್ಲಿ ಕುಟುಂಬದವರು ಅಂತ್ಯಕ್ರಿಯೆ ನೆರವೇರಿಸಿದ್ದರು. ಸೆಪ್ಟೆಂಬರ್ 21 ರಂದು ರಾತ್ರಿ ಮೃತದೇಹವನ್ನು ಹೊತ್ತುಕೊಂಡು ಹೋಗಲಾಗಿದೆ. ವಾಮಾಚಾರಕ್ಕಾಗಿ ಶವ ತೆಗೆದುಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪುತ್ರ ಮೃತದೇಹ ಹುಡುಕಿಕೊಡುವಂತೆ ಅರಸೀಕೆರೆ ಗ್ರಾಮಾಂತರ ಠಾಣೆ

ಸಮಾಧಿಯಲ್ಲಿದ್ದ ಶವ ಮಾಯ|ಅಂತ್ಯಕ್ರೀಯೆ ಬಳಿಕ ರಾತ್ರೋರಾತ್ರಿ ಆ ಸ್ಮಶಾನದಲ್ಲಿ ‌ನಡೆದಿದ್ದೇನು? Read More »