ರಾಜ್ಯ

ಮೂವರ ಬದುಕಿಗೆ ಆಸರೆಯಾದ ಸಂಚಾರಿ ವಿಜಯ್

ಬೆಂಗಳೂರು: ಬೈಕ್‌ ಅಪಘಾತದಲ್ಲಿ ಮೃತಪಟ್ಟ ನಟ ಸಂಚಾರಿ ವಿಜಯ್‌ ಅವರ ಅಂಗಾಂಗಗಳನ್ನು ಅಗತ್ಯ ಇರುವವರಿಗೆ ನೀಡುವ ಕುಟುಂಬಸ್ಥರು ದಾನ ಮಾಡಿದ್ದಾರೆ.ವಿಜಯ್‌ ಅವರ ಮೂತ್ರಪಿಂಡಗಳನ್ನು ಲಗ್ಗೆರೆ ಮೂಲದ 34 ವರ್ಷದ ಮಹಿಳೆಯೊಬ್ಬರಿಗೆ ಚಿಕಿತ್ಸೆ ಮೂಲಕ ಜೋಡಣೆ ಮಾಡಲಾಗಿದೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂದು ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.ವಿಜಯ್‌ ಅವರ ಬ್ಲಡ್ ಗ್ರೂಪ್ , ಡಿ ಎನ್ ಎ , ಕಿಡ್ನಿ ಸೈಜ್ ಎಲ್ಲವೂ ಮಹಿಳೆಗೆ ಮ್ಯಾಚ್ ಆಗಿತ್ತು. ಈ ಹಿನ್ನೆಲೆಯಲ್ಲಿ ವಿಜಯ್ […]

ಮೂವರ ಬದುಕಿಗೆ ಆಸರೆಯಾದ ಸಂಚಾರಿ ವಿಜಯ್ Read More »

ಸಿಎಂ ಯಡಿಯೂರಪ್ಪಗೆ ಮತ್ತೆ ಇಡಿ ಸಂಕಟ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ, ಅಧಿಕಾರ ದುರುಪಯೋಗ ಪಡಿಸಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಹಾಗೂ ಕುಟುಂಬದ 6 ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ದೂರು ನೀಡಲಾಗಿದೆ.ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಎಂಬುವವರು ಸಿಎಂ ಕುಟುಂಬದ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಇಡಿಗೆ ದೂರು ನೀಡಿದ್ದು, 2020 ನವೆಂಬರ್ 27ರಂದೇ ಈ ಬಗ್ಗೆ ಇಡಿ ದೂರು ಸ್ವೀಕರಿಸಿದೆ. ಇದೀಗ ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಸಿಎಂ ಯಡಿಯೂರಪ್ಪನವರಿಗೆ

ಸಿಎಂ ಯಡಿಯೂರಪ್ಪಗೆ ಮತ್ತೆ ಇಡಿ ಸಂಕಟ Read More »

ಆಂಬುಲೆನ್ಸ್ ಡಿಕ್ಕಿ: ಮೂವರು ಬೈಕ್ ಸವಾರರ ಸಾವು

ಚಿತ್ರದುರ್ಗ: ಆಂಬ್ಯುಲೆನ್ಸ್ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗ ಹೊರವಲಯದ ಹೊಳಲ್ಕೆರೆ ಸಮೀಪ ಸೋಮವಾರ ರಾತ್ರಿ ಅಪಘಾತ ಸಂಭವಿಸಿದೆ. ಮೃತರನ್ನು ಕಾಂತರಾಜ (22), ಶ್ರೀಕಾಂತ (20), ನಂಜುಂಡ (20) ವರ್ಷದ ಯುವಕರು ಎಂದು ಗುರುತಿಸಲಾಗಿದೆ. ಆಂಬ್ಯುಲೆನ್ಸ್ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದೇ ಸ್ಕೂಟಿಯಲ್ಲಿ ಮೂವರು ಯುವಕರು ತ್ರಿಬಲ್ ರೈಡಿಂಗ್ ಮೂಲಕ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಮೃತಪಟ್ಟ ಯುವಕರು ಚಿತ್ರದುರ್ಗ

ಆಂಬುಲೆನ್ಸ್ ಡಿಕ್ಕಿ: ಮೂವರು ಬೈಕ್ ಸವಾರರ ಸಾವು Read More »

ಶಿಕ್ಷಕರಿಗೆ ಲಾಕ್ಡೌನ್ ತೆರವಾದ ಬಳಿಕ ಭೌತಿಕವಾಗಿ ಹಾಜರಾಗಲು ಅವಕಾಶ : ಸುರೇಶ್ ಕುಮಾರ್

ಬೆಂಗಳೂರು: ಲಾಕ್ಡೌನ್ ತೆರವಾದ ಬಳಿಕ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಿ ಪ್ರಸಕ್ತ ವರ್ಷದ ಶೈಕ್ಷಣಿಕ ಕೆಲಸವನ್ನು ಪ್ರಾರಂಭಿಸಲು ಶಿಕ್ಷಕರಿಗೆ ಅವಕಾಶ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಜುಲೈ 1 ರಿಂದಲೇ 2021-22 ಸಾಲಿನ ಶಾಲಾ ತರಗತಿ ಆರಂಭವಾಗಲಿದೆ. ನಾಳೆ (ಜೂ.15) ರಿಂದಲೇ ಪ್ರಸಕ್ತ ವರ್ಷದ ಶೈಕ್ಷಣಿಕ ಕೆಲಸ ಪ್ರಾರಭಿಸಬೇಕೆಂದು ಇಂದು ಶಿಕ್ಷಣ ಆಯುಕ್ತರು ಆದೇಶಿಸಿದ್ದರು.ಇನ್ನೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಾಕ್ಡೌನ್ ಇರುವುದರಿಂದ ಈ ಬಗ್ಗೆ ಶಿಕ್ಷಕರಲ್ಲಿ ಗೊಂದಲ ಉಂಟಾಗಿತ್ತು.ಈ ಹಿನ್ನಲೆಯಲ್ಲಿ ಇಂದು ಸಂಜೆ ವಿಧಾನಸೌಧದಲ್ಲಿ

ಶಿಕ್ಷಕರಿಗೆ ಲಾಕ್ಡೌನ್ ತೆರವಾದ ಬಳಿಕ ಭೌತಿಕವಾಗಿ ಹಾಜರಾಗಲು ಅವಕಾಶ : ಸುರೇಶ್ ಕುಮಾರ್ Read More »

ಕಡೂರಿನ ವಿಜಯ ಕುಮಾರ್ `ಸಂಚಾರಿ’ ಯಾಗಿದ್ದು ಹೇಗೆ? ರಾಷ್ಟ್ರಪ್ರಶಸ್ತಿ ವಿಜೇತ ‘ಸಂಚಾರಿ ವಿಜಯ್’ ರ ಲೈಪ್ ಕಹಾನಿ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಅದ್ಭುತ ನಟನೆಯ ಮೂಲಕ ಎಲ್ಲಾರ ಗಮನ ಸೆಳೆದ ನಟ ಸಂಚಾರಿ ವಿಜಯ್‌ರವರು ಇಂದು ನಿಧನರಾಗಿದ್ದಾರೆ. ಇವರು ಇಷ್ಟೊಂದು ಹೆಸರುವಾಸಿಯಾಗಲು ನಡೆದು ಬಂದ ಹಾದಿಯನ್ನು ಗಮನಸಿದರೆ ಅವರು ಪಟ್ಟ ಶ್ರಮ ಎಷ್ಟಿದೆ ಎನ್ನುವ ವಿಚಾರ ಇಲ್ಲಿದೆ. ನಟನೆ ಹಾಗೂ ಸಮಾಜಮುಖಿ ಕೆಲಸ ಎರಡರಲ್ಲೂ ಸೈ ಎನ್ನಿಸಿಕೊಂಡಿದ್ದ ವಿಜಯ್ 37ನೇ ವಯಸ್ಸಿಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಅವರ ಅಕಾಲಿಕ ವಿದಾಯ ಎಲ್ಲರಲ್ಲೂ ಶೋಕ ಮಡುಗಟ್ಟುವಂತೆ ಮಾಡಿದೆ. ಇವರ ನಿಧನಕ್ಕೆ ಚಿತ್ರರಂಗ, ಅಭಿಮಾನಿಗಳು, ಗಣ್ಯರು ಕಂಬನಿಯನ್ನು ಮಿಡಿದಿದ್ದಾರೆ. ಇವರು ಜುಲೈ

ಕಡೂರಿನ ವಿಜಯ ಕುಮಾರ್ `ಸಂಚಾರಿ’ ಯಾಗಿದ್ದು ಹೇಗೆ? ರಾಷ್ಟ್ರಪ್ರಶಸ್ತಿ ವಿಜೇತ ‘ಸಂಚಾರಿ ವಿಜಯ್’ ರ ಲೈಪ್ ಕಹಾನಿ Read More »

ಜೂನ್‌ 21ರಿಂದ ನಡೆಯಬೇಕಿದ್ದ SSLC ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಜೂನ್‌ 21 ರಿಂದ ಜುಲೈ 5ರವೆಗೆ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗದೆ ಎಂದು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ.‌ ಈ ಕುರಿತು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, “ರಾಜ್ಯದಲ್ಲಿ ಜೂನ್‌ 21 ರಿಂದ ಜುಲೈ 5ರವೆಗೆ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನ ಮುಂದೂಡಿಕೆ ಮಾಡಲಾಗದೆ. ಇನ್ನು ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಪರೀಕ್ಷೆಗೂ ಮೊದಲು ಪರೀಕ್ಷಾ ಸಿಬ್ಬಂದಿಗೆ ಲಸಿಕೆ ಹಾಕಲಾಗುವುದು” ಎಂದಿದೆ.

ಜೂನ್‌ 21ರಿಂದ ನಡೆಯಬೇಕಿದ್ದ SSLC ಪರೀಕ್ಷೆ ಮುಂದೂಡಿಕೆ Read More »

ನೀವ್ ಬೆಂಗಳೂರಿಗೆ ಹೋಗ್ತಿದೀರಾ? ಹಾಗಿದ್ರೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಗಣನೀಯವಾಗಿ ಇಳಿಮುಖವಾಗುತ್ತಿದೆ. ಈಗ ಕೇವಲ 2 ರಿಂದ 3 ಸಾವಿರ ಕೋವಿಡ್ ಪ್ರಕರಣಗಳಷ್ಟೇ ಪತ್ತೆಯಾಗುತ್ತಿದೆ. ನಗರದಲ್ಲಿ ಸರ್ಕಾರ ಲಾಕ್‌ಡೌನ್ ಸಡಿಲಿಸಿ ಅನ್‌ಲಾಕ್ ಮಾಡಿದ ಪರಿಣಾಮದಿಂದ ಕೊರೊನಾ ಸೋಂಕಿನಲ್ಲಿ ಹೆಚ್ಚಳವಾಗುವ ಸಾಧ್ಯತೆಯಿರು ಕಾರಣ ಕಠಿಣ ನಿಯಮಗಳನ್ನು ಹೊರಡಿಸಲಾಗಿದೆ. ಬೇರೆ ಬೇರೆ ರಾಜ್ಯಗಳು ಮತ್ತು ಇತರ ಜಿಲ್ಲೆಗಳಿಂದ ಕಾರ್ಮಿಕರು, ಉದ್ಯೋಗಿಗಳು ಬೆಂಗಳೂರಿನತ್ತ ದೌಡಾಯಿಸುತ್ತಿದ್ದಾರೆ. ಜೂನ್ 14 ರಿಂದ ಬೆಂಗಳೂರು ಅನ್‌ಲಾಕ್ ಆಗಿರುವ ಕಾರಣ ಬಹುತೇಕರು ತಮ್ಮ ತಮ್ಮ ಕೆಲಸ ಮತ್ತು ಉದ್ಯೋಗಗಳಿಗೆ ಮತ್ತೆ ಮರಳುತ್ತಿದ್ದಾರೆ.

ನೀವ್ ಬೆಂಗಳೂರಿಗೆ ಹೋಗ್ತಿದೀರಾ? ಹಾಗಿದ್ರೆ ಈ ನಿಯಮ ಪಾಲನೆ ಕಡ್ಡಾಯ Read More »

ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ | ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ

ಬೆಂಗಳೂರು: ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು ಜುಲೈ 1ರಿಂದ ಶಾಲೆಗಳು ಆರಂಭವಾಗಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದಾರೆ. ಶೈಕ್ಷಣಿಕ ವರ್ಷದ ಆರಂಭದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾಳೆಯಿಂದಲೇ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಜೊತೆಗೆ ಜುಲೈ 1ರಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾಗಲಿದೆ ಎಂದು ಅನ್ಬುಕುಮಾರ್ ತಿಳಿಸಿದ್ದಾರೆ. ನಾಳೆಯಿಂದ ಮಕ್ಕಳ ಶಾಲಾ ದಾಖಲಾತಿಯನ್ನು ಪ್ರಾರಂಭಿಸಿ, ಆಗಸ್ಟ್ 31ರ ಒಳಗೆ ದಾಖಲಾತಿ ಮುಕ್ತಾಯಗೊಳಿಸಬೇಕು. ಲಾಕ್‌ಡೌನ್

ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ | ನಾಳೆಯಿಂದಲೇ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ Read More »

ಬಿಪಿಎಲ್ ಕುಟುಂಬಕ್ಕೆ ಗುಡ್ ನ್ಯೂಸ್: ಕೊರೊನಾದಿಂದ ಮೃತಪಟ್ಟವರಿಗೆ ಲಕ್ಷ ರೂಪಾಯಿ ಪರಿಹಾರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೊನಾ ವಿಚಾರವಾಗಿ ಇಂದು ಮಹತ್ವದ ಸುದ್ದಿಗೋಷ್ಠಿ ನಡೆಸಿ ಕೊರೊನಾಗೆ ಬಲಿಯಾದವರ ಕುಟುಂಬಕ್ಕೆ ಒಂದು ಲಕ್ಷ ರೂ ಪರಿಹಾರ ನೀಡಲಾಗುವುದು. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗುತ್ತೆ ಎಂದು ಸಿಎಂ ಯಡಿಯೂರಪ್ಪ ಪ್ರಕಟಿಸಿದ್ದಾರೆ.ಕೋವಿಡ್ ಸೊಂಕಿನಿಂದ ದುಡಿಯುವ ವ್ಯಕ್ತಿಗಳು ಮೃತ ಪಟ್ಟು ಅನೇಕ ಕುಟುಂಬಗಳು ಕಷ್ಟಪಡುತ್ತಿದ್ದಾರೆ. ಇದನ್ನು ಮನಗಂಡು ದುಡಿಯುವ ವ್ಯಕ್ತಿ ಮೃತ ಪಟ್ಟರೇ ಒಂದು ಕುಟುಂಬಕ್ಕೆ ಒಬ್ಬರಂತೆ ಒಂದು ಲಕ್ಷ ರೂ ನೀಡಲಾಗುತ್ತದೆ. ಬಿಪಿಎಲ್ ಕುಟುಂಬಗಳ ವಯಸ್ಕರು ಮೃತ ಪಟ್ಟಿದ್ರೆ ಒಂದು

ಬಿಪಿಎಲ್ ಕುಟುಂಬಕ್ಕೆ ಗುಡ್ ನ್ಯೂಸ್: ಕೊರೊನಾದಿಂದ ಮೃತಪಟ್ಟವರಿಗೆ ಲಕ್ಷ ರೂಪಾಯಿ ಪರಿಹಾರ Read More »

ಬದುಕಿನ ಸಂಚಾರಯಾತ್ರೆ ಮುಗಿಸಿದ ಸಂಚಾರಿ ವಿಜಯ್

ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಕೋಮಾದಲ್ಲಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ. ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ ನಿಷ್ಕ್ರಿಯವಾಗಿದ್ದರಿಂದ ಚಿಕಿತ್ಸೆ ಫಲಿಸದೇ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸಂಚಾರಿ ವಿಜಯ್‌ಗೆ ಚಿಕಿತ್ಸೆ ಶುರುವಾಗಿ ೩೬ ಗಂಟೆಗೆ ಆಗಿದ್ದು ಆಸ್ಪತ್ರೆಗೆ ಬಂದಾಗ ಅವರ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಆಸ್ಪತ್ರೆಗೆ ಬಂದ ಕೆಲವೇ ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಸದ್ಯ ಅವರ ಬ್ರೈನ್ ಫೇಲ್ಯೂರ್

ಬದುಕಿನ ಸಂಚಾರಯಾತ್ರೆ ಮುಗಿಸಿದ ಸಂಚಾರಿ ವಿಜಯ್ Read More »