ರಾಜ್ಯ

ರಾಜ್ಯ‌ ಉಳಿಸ್ಬೇಕಂದ್ರೆ ಕಾಂಗ್ರೆಸ್ ಕಿತ್ತೋಡಿಸ್ಬೇಕು…! ಆವೇಶದಲ್ಲಿ ಎಡವಟ್ಟು ಹೇಳಿಕೆ ಕೊಟ್ಟ ಸಿದ್ದು

ತುಮಕೂರು: ಸುದ್ದಿಗೊಷ್ಠಿ ವೇಳೆ ಎಡವಟ್ಟು ಮಾಡಿಕೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯ ಉಳಿಸಲು ಕಾಂಗ್ರೆಸ್ ಪಕ್ಷವನ್ನೇ ತೆಗೆಯಬೇಕು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಆವೇಶದಲ್ಲಿ ಬಿಜೆಪಿಯನ್ನು ತೆಗೆಯಬೇಕು ಎಂದು ಹೇಳುವ ಬದಲು ಬಾಯಿತಪ್ಪಿನಿಂದ ಕಾಂಗ್ರೆಸ್ ಪಕ್ಷವನ್ನು ರಾಜ್ಯದಿಂದ ತೆಗೆಯಬೇಕು ಎಂದು ಹೇಳಿದ್ದಾರೆ. ಎಸ್.ಆರ್. ಪಾಟೀಲ್ ಹೇಳಿದ ಬಳಿಕ ತಕ್ಷಣ ಸರಿಪಡಿಸಿಕೊಂಡು ಬಿಜೆಪಿಯನ್ನು ರಾಜ್ಯದಿಂದ ತೆಗೆಯಬೇಕು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಭ್ರಷ್ಟ ಬಿಜೆಪಿ […]

ರಾಜ್ಯ‌ ಉಳಿಸ್ಬೇಕಂದ್ರೆ ಕಾಂಗ್ರೆಸ್ ಕಿತ್ತೋಡಿಸ್ಬೇಕು…! ಆವೇಶದಲ್ಲಿ ಎಡವಟ್ಟು ಹೇಳಿಕೆ ಕೊಟ್ಟ ಸಿದ್ದು Read More »

ಅಂಗನವಾಡಿಯ ಮೊಟ್ಟೆಗೆ ‘ಜೊಲ್ಲು’ ಸುರಿಸಿದ ಸಚಿವೆ| ರಾಜೀನಾಮೆ ಆಗ್ರಹಿಸಿ‌ ಕಾಂಗ್ರೆಸ್ ಪ್ರತಿಭಟನೆ| ವರದಿ ಕೇಳಿದ ಕೇಂದ್ರ|

ಬೆಂಗಳೂರು : ಅಂಗನವಾಡಿ ಮೂಲಕ ವಿತರಿಸಲಾಗಿರುವ ಮೊಟ್ಟೆ ಪೂರೈಕೆ ಟೆಂಡರ್ ಗಾಗಿ ದೊಡ್ಡ ಸೀಲ್ ನಡೆದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರೇ ಈ ಡೀಲ್ ಗೆ ಒಪ್ಪಿಕೊಂಡಿದ್ದಾರೆ ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ. ಗರ್ಭಿಣಿಯರಿಗೆ, ಅಪೌಷ್ಟಿಕ ಮಕ್ಕಳಿಗೆ ನೀಡಲಾಗುವ ಮಾತೃಪೂರ್ಣ ಮೊಟ್ಟೆ ಟೆಂಡರ್ ಪ್ರಕ್ರಿಯೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿತ್ತು. ಆದರೆ ಈ ಟೆಂಡರ್ ನ್ನು ತಮಗೆ ಬೇಕಾದವರಿಗೆ ನೀಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ

ಅಂಗನವಾಡಿಯ ಮೊಟ್ಟೆಗೆ ‘ಜೊಲ್ಲು’ ಸುರಿಸಿದ ಸಚಿವೆ| ರಾಜೀನಾಮೆ ಆಗ್ರಹಿಸಿ‌ ಕಾಂಗ್ರೆಸ್ ಪ್ರತಿಭಟನೆ| ವರದಿ ಕೇಳಿದ ಕೇಂದ್ರ| Read More »

ರಾಜ್ಯಾದ್ಯಂತ ವರುಣಾಘಾತ: 9 ಮಂದಿ ಬಲಿ, ಇಂದೂ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯಾದ್ಯಂತ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಮುಂದಿನ 24 ಗಂಟೆಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮತ್ತೆ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಗದಗ, ಕಲಬುರಗಿ, ಹಾವೇರಿ, ಯಾದಗಿರಿಯಲ್ಲಿ ಮಳೆಯಾಗುವ ಸಾಧ್ಯತೆ

ರಾಜ್ಯಾದ್ಯಂತ ವರುಣಾಘಾತ: 9 ಮಂದಿ ಬಲಿ, ಇಂದೂ ಭಾರೀ ಮಳೆ ಸಾಧ್ಯತೆ Read More »

ಕೊಡಗು: ಭಾರೀ ಮಳೆ, ಹಲವಡೆ ಪ್ರವಾಹ ಭೀತಿ| ಸಂಪಾಜೆ ಘಾಟ್ ಸಂಪರ್ಕ ಕಡಿತ ಸಾಧ್ಯತೆ|

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವರುಣ ಅಬ್ಬರಕ್ಕೆ ಜನಜೀವನ ತತ್ತರಿಸುತ್ತಿದ್ದು, ಜಿಲ್ಲೆಯ ಹಲೆವೆಡೆ ಮತ್ತೊಮ್ಮ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ನಿರಂತರ ಮಳೆಯಿಂದ ನದಿ ತೊರೆಗಳು ತುಂಬಿ ಹರಿಯುತ್ತಿದೆ. ಕೊಡಗಿನ ಪ್ರಮುಖ ನದಿಗಳಾದ ಕಾವೇರಿ ಹಾಗೂ ಲಕ್ಷ್ಮಣತೀರ್ಥ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ತ್ರಿವೇಣಿ ಸಂಗಮ ಜಲಾವೃತವಾಗಿದೆ. ಮಡಿಕೇರಿ ಕಸಬಾ ೬೯.೪೦, ನಾಪೋಕ್ಲು ೧೪೭.೨೦, ಸಂಪಾಜೆ ೫೩.೫೦, ಭಾಗಮಂಡಲ ೧೬೫.೪೦, ವಿರಾಜಪೇಟೆ ಕಸಬಾ ೧೧೦.೪೦,

ಕೊಡಗು: ಭಾರೀ ಮಳೆ, ಹಲವಡೆ ಪ್ರವಾಹ ಭೀತಿ| ಸಂಪಾಜೆ ಘಾಟ್ ಸಂಪರ್ಕ ಕಡಿತ ಸಾಧ್ಯತೆ| Read More »

ಆಗಸ್ಟ್ 2 ರಿಂದ ಶಾಲಾ ಕಾಲೇಜುಗಳು ರೀ ಓಪನ್!ಅನುಮತಿ‌ ನೀಡಲಿದೆಯೇ ಶಿಕ್ಷಣ ಇಲಾಖೆ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳನ್ನು ಹಂತ ಹಂತವಾಗಿ ಆರಂಭಿಸಲು ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರಿಗೆ ವಿಸ್ತೃತ ವರದಿಯನ್ನು ಸಲ್ಲಿಸಲಾಗಿದ್ದು, ಇನ್ನೂ ಎರಡು ದಿನಗಳ ಒಳಗೆ ರಾಜ್ಯ ಸರ್ಕಾರದ ಅಧಿಕೃತ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜ್ಯದಲ್ಲಿ ಮೊದಲ ಹಂತದಲ್ಲಿ 9,10,11, 12 ನೇ ತರಗತಿಗಳಿಗೆ ಭೌತಿಕ ತರಗತಿಗಳನ್ನು ಆರಂಭಿಸುವ ಯೋಚನೆ ಶಿಕ್ಷಣ ಇಲಾಖೆ ಮುಂದಿದ್ದು,

ಆಗಸ್ಟ್ 2 ರಿಂದ ಶಾಲಾ ಕಾಲೇಜುಗಳು ರೀ ಓಪನ್!ಅನುಮತಿ‌ ನೀಡಲಿದೆಯೇ ಶಿಕ್ಷಣ ಇಲಾಖೆ? Read More »

ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಲಿ – ಬಿಜೆಪಿಗೆ ಸಿದ್ದು ಸವಾಲ್

ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶೀಘ್ರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಬಿಜೆಪಿಯಲ್ಲಿ ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಸವಾಲು ಹಾಕಿದ್ದಾರೆ. ನಗರದಲ್ಲಿ‌ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲು ಇತ್ತೀಚೆಗೆ ಕಾಂಗ್ರೆಸ್ ದಲಿತ ಸಿಎಂ ಅಭ್ಯರ್ಥಿಯನ್ನು ಘೋಷಿಸಲಿ ಎಂದು ಹೇಳಿದ್ದರು. ಇದೀಗ ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಬೀಳಲಿದೆ. ನಳಿನ್ ನಮಗೆ ಹೇಳುವ ಬದಲು ಅವರೇ

ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಲಿ – ಬಿಜೆಪಿಗೆ ಸಿದ್ದು ಸವಾಲ್ Read More »

ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತ: ರಸ್ತೆ ಸಂಪರ್ಕ ಕಡಿತದ ಆತಂಕ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಮಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ 73 ಮಾರ್ಗದ ಘಾಟಿಯ ಆರನೇ ತಿರುವಿನಲ್ಲಿ ಕುಸಿತ ಉಂಟಾಗಿದೆ. ಇನ್ನು ಶಿರಾಢಿ ಘಾಟ್ ಬಂದ್ ಆಗಿರುವುದರಿಂದ ಸದ್ಯ ಚಾರ್ಮಾಡಿ ಘಾಟ್​ನಲ್ಲಿ ವಾಹನ ಸಂಚಾರ ಮುಂದುವರಿದಿದ್ದು, ಈಗಾಗಲೇ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಡ್ಡ ಕುಸಿತ ಇನ್ನು ಹೆಚ್ಚಾಗುವ ಭೀತಿ ಎದುರಾಗಿದ್ದು, ಚಾರ್ಮಾಡಿ ಘಾಟ್ ಕೂಡ​ ಬಂದ್ ಆಗುವ ಸಾಧ್ಯತೆಯಿದೆ.

ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತ: ರಸ್ತೆ ಸಂಪರ್ಕ ಕಡಿತದ ಆತಂಕ Read More »

ವಾಯುಭಾರ ಕುಸಿತ| ಕರಾವಳಿ, ದಕ್ಷಿಣ ಒಳನಾಡಲ್ಲಿ ಭಾರೀ‌ ಮಳೆ, ಅಲರ್ಟ್ ಘೋಷಣೆ

ಮಂಗಳೂರು : ಜುಲೈ 23ರೊಳಗೆಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶಉಂಟಾಗುವ ಸಾಧ್ಯತೆ ಇರುವುದರಿಂದ ಮುಂಗಾರು ಮಳೆ ಪ್ರಮಾಣ ಹೆಚ್ಚಾಗಲಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರದ ಮೇಲೆ ಮತ್ತಷ್ಟು ಪ್ರಭಾವ ಬೀರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ತೀರ ಮತ್ತು ದಕ್ಷಿಣ ಭಾಗಗಳಲ್ಲಿಮುಂದಿನ 5 ದಿನಗಳವರೆಗೂ ಮಳೆಮುಂದುವರಿಯಲಿದ್ದು, ಉತ್ತರ ಕರ್ನಾಟಕದ ಭಾಗಗಳಲ್ಲಿ 24ರಿಂದ ಮಳೆರಾಯನ ಆರ್ಭಟ

ವಾಯುಭಾರ ಕುಸಿತ| ಕರಾವಳಿ, ದಕ್ಷಿಣ ಒಳನಾಡಲ್ಲಿ ಭಾರೀ‌ ಮಳೆ, ಅಲರ್ಟ್ ಘೋಷಣೆ Read More »

ಪ್ರಧಾನಿಯ ಚಾರಿತ್ರ್ಯವಧೆ ಮಾಡುವ ಮುನ್ನ ಎಚ್ಚರ | ಆಧಾರರಹಿತ ಸುದ್ದಿ ಬಿತ್ತರಿಸದಂತೆ TV 5 ಮಾಧ್ಯಮಕ್ಕೆ ಕೋರ್ಟ್ ಆದೇಶ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅಥವಾ ಅವರು ಪ್ರತಿನಿಧಿಸುತ್ತಿರುವ ಪಕ್ಷದ ವಿರುದ್ಧ ಆಧಾರರಹಿತವಾಗಿ ಯಾವುದೇ ಸುದ್ದಿ ಪ್ರಸಾರ ಮಾಡಬಾರದು ಎಂದು tv5 ಮಾದ್ಯಮಕ್ಕೆ ನ್ಯಾಯಾಲಯ ಆದೇಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಧ್ಯಮವು ‘ಆರ್ ವಿ ಸ್ಟುಪ್ಪಿಡ್’ ಎಂಬ ಕಾರ್ಯಕ್ರಮದ ಮೂಲಕ ಸುಳ್ಳು ಸುದ್ದಿ ಬಿತ್ತರಿಸುತ್ತಿದೆ. ಈ ಆರೋಪಗಳಿಗೆ ಮಾಧ್ಯಮದ ಬಳಿ ಯಾವುದೇ ಸಾಕ್ಷ್ಯಧಾರವಿಲ್ಲ. ಎಂದು ಬಿಜೆಪಿ ಕಾನೂನು ಪ್ರಕೋಷ್ಠದ ಸದಸ್ಯರಾದ ಆರ್ ಹರೀಶ್ ಕುಮಾರ್ ಎಂಬವರು ಮೊಕದ್ದಮೆ ಹೂಡಿದ್ದರು. ಟಿವಿ 5 ಕನ್ನಡ ಸುದ್ದಿ

ಪ್ರಧಾನಿಯ ಚಾರಿತ್ರ್ಯವಧೆ ಮಾಡುವ ಮುನ್ನ ಎಚ್ಚರ | ಆಧಾರರಹಿತ ಸುದ್ದಿ ಬಿತ್ತರಿಸದಂತೆ TV 5 ಮಾಧ್ಯಮಕ್ಕೆ ಕೋರ್ಟ್ ಆದೇಶ Read More »

ಆಗಸ್ಟ್ 10ರ ಒಳಗೆ ಎಸ್ಸೆಸ್ಸೆಲ್ಸಿ ಫಲಿತಾಂಶ- ಸಚಿವ ಸುರೇಶ್ ಕುಮಾರ್

ಬೆಂಗಳೂರು: ಈ ಬಾರಿಯ ಹತ್ತನೇ ತರಗತಿ ಪರೀಕ್ಷೆಗಳು ಪೂರ್ಣಗೊಂಡಿದ್ದು, ಆಗಸ್ಟ್ 10ರ ಒಳಗೆ ಫಲಿತಾಂಶ ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡು ದಿನಗಳ ಕಾಲ ನಡೆದ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿದ್ದು, ಪರೀಕ್ಷೆ ಬರೆದ ಮಕ್ಕಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇವತ್ತು ಭಾಷಾ ವಿಷಯಗಳಿಗೆ ಪರೀಕ್ಷೆ ನಡೆಸಲಾಯಿತು. ಇಂದು ನಡೆದ ಪರೀಕ್ಷೆಗೆ ಶೇಕಡಾ 99.65ರಷ್ಟು ಹಾಜರಾತಿಯಿತ್ತು. ಪ್ರಥಮ ಭಾಷೆಗೆ ಒಟ್ಟು 8,19,694 ವಿದ್ಯಾರ್ಥಿಗಳ ನೋಂದಣಿ ಮಾಡಿಕೊಂಡಿದ್ದರು. ಪ್ರಥಮ ಭಾಷೆ ಪರೀಕ್ಷೆಗೆ 7,83,881ವಿದ್ಯಾರ್ಥಿಗಳು ಹಾಜರಾಗಿದ್ದರು.ಪ್ರಥಮ

ಆಗಸ್ಟ್ 10ರ ಒಳಗೆ ಎಸ್ಸೆಸ್ಸೆಲ್ಸಿ ಫಲಿತಾಂಶ- ಸಚಿವ ಸುರೇಶ್ ಕುಮಾರ್ Read More »