ರಾಜ್ಯ

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್​ ನಿಧನ

ಬೆಂಗಳೂರು: ಬಬ್ರುವಾಹನ ಖ್ಯಾತಿಯ ಸ್ಯಾಂಡಲ್​ವುಡ್​ನ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್​ ವಿಧಿವಶರಾಗಿದ್ದಾರೆ.ಅವರಿಗೆ 69 ವರ್ಷ ವಯಸ್ಸಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಕೆಳದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಚಂದ್ರಶೇಖರ ಅವರು ಹುಲಿ ಹಾಲಿನ ಮೇವು, ಬಬ್ರುವಾಹನ ಸೇರಿದಂತೆ ಹಲವು ಸಿನಿಮಾಗಳ ನಿರ್ದೇಶಕರಾಗಿ ಖ್ಯಾತರಾಗಿದ್ದರು. ಅದಲ್ಲದೆ ಸಿನಿಮಾ ವಿತರಕರಾಗಿ ಹಾಗೂ ಕರ್ನಾಟಕ ಫಿಲಂ ಛೇಂಬರ್ ಮತ್ತು SIFCCRIPನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇಂದು ಬೆಳಗ್ಗೆಯಿಂದ ಶಿವಾನಂದ ಸರ್ಕಲ್ ಬಳಿಯ […]

ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್​ ನಿಧನ Read More »

ನಾನು ಸಿಎಂ ಆದ್ರೆ ಭ್ರಷ್ಟಾಚಾರಿಗಳಿಗೆ ಜೈಲೂಟ ಗ್ಯಾರೆಂಟಿ – ವಾಟಾಳ್

ಮೈಸೂರು: ನಾನು ಮುಖ್ಯಮಂತ್ರಿಯಾದರೆ ಭೂಗಳ್ಳರು, ಖನಿಜ ಕಳ್ಳರನ್ನು ಜೈಲಿಗಟ್ಟಿ, ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ತನಿಖೆ ನಡೆಸುತ್ತೇನೆ. ನನಗೆ 5 ವರ್ಷಗಳ ಕಾಲಾವಕಾಶ ಬೇಕಿಲ್ಲ, ಕೇವಲ 5 ತಿಂಗಳು ಅವಕಾಶ ಕೊಟ್ಟರೆ ಸಾಕು ಎಂದು ಮಾಜಿ ಶಾಸಕ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದಾರೆ. ಮೈಸೂರಿನಲ್ಲಿ ಭೂ ಮಾಫಿಯಾ ವಿರುದ್ಧ ಪ್ರತಿಭಟನೆ ನಡೆಸಿದ ಅವರು, ಮೂಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ವಿರುದ್ಧವೂ ಭೂ ಹಗರಣ ಆರೋಪ ಕೇಳಿಬಂದಿದೆ. ಹೀಗಾಗಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಅಕ್ರಮಗಳನ್ನು ತಡೆಗಟ್ಟುವ

ನಾನು ಸಿಎಂ ಆದ್ರೆ ಭ್ರಷ್ಟಾಚಾರಿಗಳಿಗೆ ಜೈಲೂಟ ಗ್ಯಾರೆಂಟಿ – ವಾಟಾಳ್ Read More »

ಎರಡು ತಿಂಗಳ ಲಾಕ್ ಡೌನ್ ಗ್ರಹಣ ನಾಳೆಯಿಂದ ವಿಮೋಚನೆ; ಆದ್ರೂ ಎಚ್ಚರ ತಪ್ಪಂಗಿಲ್ಲ, ಹೊಸ ರೂಲ್ಸ್ ಇರುತ್ತೆ.

ಬೆಂಗಳೂರು: ನಾಳೆಯಿಂದ ರಾಜ್ಯದ ಕಂಪ್ಲೀಟ್ ಚಿತ್ರಣ ಬದಲಾಗಲಿದೆ. ರಾಜಧಾನಿ ಬೆಂಗಳೂರು ಹಾಗೂ ಜಿಲ್ಲೆಗಳಿಗೆ ಕಳೆದೆರಡು ತಿಂಗಳಿಂದ ಹಿಡಿದಿರೋ ಲಾಕ್ಡೌನ್ ಗ್ರಹಣಕ್ಕೆ ನಾಳೆ ಸೂರ್ಯೋದಯದೊಂದಿಗೆ ಮುಕ್ತಿ ಸಿಗಲಿದೆ. ನಾಳೆಯಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಹಾಫ್ ಅನ್ಲಾಕ್ ಜಾರಿಗೆ ಬರಲಿದೆ. 60 ದಿನಗಳ ಮನೆವಾಸದಿಂದ ಕಂಗೆಟ್ಟಿರೋ ಜನ್ರಿಗೆ ಅರ್ಧ ರಿಲೀಫ್ ಸಿಗಲಿದೆ. ನಾಳೆಯಿಂದ ಕೆಲ ಜಿಲ್ಲೆಗಳಿಗೆ ಲಾಕ್ಡೌನ್ನಿಂದ ಮುಕ್ತಿ ಕೊರೊನಾ ಕಡಿಮೆ ಮಾಡಲು ಕಳೆದೆರಡು ತಿಂಗಳಿಂದ ಜಾರಿಮಾಡಲಾಗಿರೋ ಲಾಕ್ಡೌನ್ಗೆ ನಾಳೆಯಿಂದ ಮೊದಲ ಹಂತದ ರಿಲೀಫ್ ಸಿಗಲಿದೆ. ಕೊರೊನಾ ಪಾಸಿಟಿವಿಟಿ ರೇಟ್

ಎರಡು ತಿಂಗಳ ಲಾಕ್ ಡೌನ್ ಗ್ರಹಣ ನಾಳೆಯಿಂದ ವಿಮೋಚನೆ; ಆದ್ರೂ ಎಚ್ಚರ ತಪ್ಪಂಗಿಲ್ಲ, ಹೊಸ ರೂಲ್ಸ್ ಇರುತ್ತೆ. Read More »

ಮತ್ತೆ ಮುಂದುವರೆಯಲಿದೆಯಂತೆ ಅರ್ಧಕ್ಕೆ ನಿಂತ ಕನ್ನಡ ಬಿಗ್ ಬಾಸ್​ ಸೀಸನ್​ 8..!

ಕೊರೋನಾ ಲಾಕ್​ಡೌನ್​ನಿಂದಾಗಿ ಚಿತ್ರೀಕರಣಕ್ಕೆ ಬ್ರೇಕ್​ ಬಿದ್ದಿದೆ. ಇದೇ ಕಾರಣದಿಂದಾಗಿ ಬಿಗ್​ ಬಾಸ್​ ಸೀಸನ್​ 8ನ್ನೂ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈಗ ಬಿಗ್​ ಬಾಸ್​ ಪ್ರೇಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಿಗ್ ಬಾಸ್​ ಕಾರ್ಯಕ್ರಮ ಮತ್ತೆ ಆರಂಭವಾಗಲಿದೆಯಂತೆ. ಕನ್ನಡದ ಕಿರುತೆಯಲ್ಲಿ ಪ್ರಸಾರವಾಗುತ್ತಿದ್ದ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​​ 8 ಕೊನೆಗೊಳ್ಳಲು 29 ದಿನಗಳು ಬಾಕಿ ಇತ್ತು. ಆಗಲೇ ಕಾರ್ಯಕ್ರಮ ಅರ್ಧಕ್ಕೆ ಕೊನೆಗೊಳ್ಳಲಿದೆ ಅನ್ನೋ ಸುದ್ದಿ ಹೊರ ಬಿದ್ದಿತ್ತು. ಕಿಚ್ಚ ಸುದೀಪ್​ ಅವರ ನಿರೂಪಣೆಯಲ್ಲಿ ಮೂಡಿಬರುತ್ತಿದ್ದ ಕಾರ್ಯಕ್ರಮ ಕೊರೋನಾ ಕಾರಣದಿಂದ

ಮತ್ತೆ ಮುಂದುವರೆಯಲಿದೆಯಂತೆ ಅರ್ಧಕ್ಕೆ ನಿಂತ ಕನ್ನಡ ಬಿಗ್ ಬಾಸ್​ ಸೀಸನ್​ 8..! Read More »

ಯಾವೊಬ್ಬ ವಿದ್ಯಾರ್ಥಿಯೂ ಫೇಲ್ ಆಗಲ್ಲ…! | ಸರಳ ರೀತಿಯಲ್ಲಿ ನಡೆಯಲಿದೆ SSLC ಪರೀಕ್ಷೆ

ಬೆಂಗಳೂರು: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯನ್ನು ರಾಜ್ಯ ಸರ್ಕಾರ ಸರಳವಾಗಿ ನಡೆಸಲು ನಿರ್ಧರಿಸಿದ್ದು, ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಗೊಳಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನದ ಅಂಕಗಳನ್ನು ಅಪ್ಲೋಡ್ ಮಾಡಲು ಎಲ್ಲಾ ಶಾಲೆಯ ಮುಖ್ಯಸ್ಥರಿಗೆ ಸೂಚಿಸಲಾಗಿದೆ. ಪ್ರಥಮ ಭಾಷೆಗೆ 25 ಅಂಕ ಹಾಗೂ ಉಳಿದಂತೆ 5 ವಿಷಯಗಳಿಗೆ ತಲಾ 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ನಡೆಸಲಾಗಿದೆ. ಅದರಲ್ಲಿ ಒಟ್ಟು 125 ಅಂಕಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕವನ್ನು

ಯಾವೊಬ್ಬ ವಿದ್ಯಾರ್ಥಿಯೂ ಫೇಲ್ ಆಗಲ್ಲ…! | ಸರಳ ರೀತಿಯಲ್ಲಿ ನಡೆಯಲಿದೆ SSLC ಪರೀಕ್ಷೆ Read More »

ಪರಿಶಿಷ್ಟರ ಕಲ್ಯಾಣಕ್ಕೆ 26 ಸಾವಿರ ಕೋಟಿ ಅನುದಾನ: ಸಚಿವ ಶ್ರೀರಾಮುಲು

ಬೆಂಗಳೂರು: ರಾಜ್ಯದ ಪರಿಶಿಷ್ಟರ ಕಲ್ಯಾಣಕ್ಕಾಗಿ 26,005 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಅನುಮೋದನೆ ಬಾಕಿ ಇದೆ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ. ವಿಕಾಸಸೌಧದಲ್ಲಿ ಎರಡು ದಿನಗಳ ಕಾಲ ನಡೆದ ವರ್ಚುವಲ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ಪ್ರಸಕ್ತ 2021-22ನೇ ಸಾಲಿನಲ್ಲಿ ಎಸ್‌ಸಿಎಸ್‌ಟಿ ಮತ್ತು ಟಿಎಸ್‌ಪಿ ಯೋಜನೆಯಡಿ 26,005 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ರಾಜ್ಯ

ಪರಿಶಿಷ್ಟರ ಕಲ್ಯಾಣಕ್ಕೆ 26 ಸಾವಿರ ಕೋಟಿ ಅನುದಾನ: ಸಚಿವ ಶ್ರೀರಾಮುಲು Read More »

ಆನ್ಲೈನ್ ನಲ್ಲಿ ಮಗು ಖರೀದಿಸಿದ ದಂಪತಿ | ಸಿಕ್ಕಿಬಿದ್ದಳು 1.5 ಲಕ್ಷಕ್ಕೆ ಡೆಲಿವರಿ ಕೊಟ್ಟ ಮಹಾತಾಯಿ

ಎಚ್.ಡಿ. ಕೋಟೆ: ಅಕ್ರಮವಾಗಿ ತನ್ನ ಕರುಳಕುಡಿಯನ್ನೇ ಹಣದಾಸೆಗೆ ಮಾರಾಟ ಮಾಡಿ ತಾಯಿಯೊಬ್ಬಳು ಪೊಲೀಸರ ಅತಿಥಿಯಾದ ಘಟನೆ ನಡೆದಿದೆ. ಆನ್ಲೈನ್ ಮೂಲಕ ಗಿಡಮೂಲಿಕೆ ತೈಲ, ಕೇಶ ತೈಲ ಇತ್ಯಾದಿ ಮಾರಾಟ ಮಾಡುತ್ತಿದ್ದ ಹಾಸನ ಮೂಲದ ರೋಜಾ ಎಂಬಾಕೆಯೇ ಮಗು ಮಾರಾಟ ಮಾಡಿ ಸಿಕ್ಕಿ ಬಿದ್ದವಳು. ಆಕೆಗೆ ವ್ಯವಹಾರದ ಸಮಯದಲ್ಲಿ ಎಚ್ ಡಿ ಕೋಟೆ ಸಮೀಪದ ಟೈಗರ್‌ಬ್ಲಾಕ್‌ನ ನಿವಾಸಿಗಳಾದ ಅಂಬರೀಶ್‌ ಹಾಗೂ ಮಧುಮಾಲತಿ ದಂಪತಿಯ ಪರಿಚವಾಗಿದೆ. ಆಗಾಗ ರೋಜಾ ಬಳಿ ವ್ಯವಹಾರ ನಡೆಸುತ್ತಿದ್ದ ದಂಪತಿಗೆ 7 ತಿಂಗಳ ಹಿಂದೆ ಆಕೆಗೆ

ಆನ್ಲೈನ್ ನಲ್ಲಿ ಮಗು ಖರೀದಿಸಿದ ದಂಪತಿ | ಸಿಕ್ಕಿಬಿದ್ದಳು 1.5 ಲಕ್ಷಕ್ಕೆ ಡೆಲಿವರಿ ಕೊಟ್ಟ ಮಹಾತಾಯಿ Read More »

ಮಾತೃಪಕ್ಷಕ್ಕೆ ಜಂಪ್ ಹೊಡೆದ ಮುಕುಲ್ ರಾಯ್ , ಬಿಜೆಪಿಗೆ ಆಘಾತ

ತೃಣ ಮೂಲ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಜಿಗಿದು ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಇಂದು ಟಿಎಂಸಿ ಪಕ್ಷ ಸೇರ್ಪಡೆಯಾಗುವ ಮೂಲಕ ಮರಳಿ ಗೂಡಿಗೆ ಸೇರ್ಪಡೆಯಾಗಿದ್ದಾರೆ.ಮುಕುಲ್ ರಾಯ್ ಮತ್ತು ಅವರ ಪುತ್ರ ಸುಬ್ರಾಂಶು ರಾಯ್ ಅವರು ಕೋಲ್ಕತ್ತಾ ದಲ್ಲಿರುವ ಟಿಎಂಸಿ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಸೇರ್ಪಡೆಯಾದರು.ವಿಧಾನಸಭಾ ಚುನಾವಣೆಗೂ ಮುನ್ನ ಟಿಎಂಸಿ ಇಂದ ಬಿಜೆಪಿಗೆ ಜಿಗಿದ ಅನೇಕ ಮುಖಂಡರು ಇದೀಗ ಮರಳಿ ಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ತುದಿಗಾಲ ಮೇಲೆ ನಿಂತಿದ್ದಾರೆ. ಅದಕ್ಕೆ ಮುಕುಲ್ ರಾಯ್ ಆರಂಭ ನೀಡಿದ್ದಾರೆ.ಒಂದು

ಮಾತೃಪಕ್ಷಕ್ಕೆ ಜಂಪ್ ಹೊಡೆದ ಮುಕುಲ್ ರಾಯ್ , ಬಿಜೆಪಿಗೆ ಆಘಾತ Read More »

ಕನ್ನಡ ಚಿತ್ರರಂಗದ ಹಿರಿಯ ನಟ, ಪತ್ರಕರ್ತ ಸುರೇಶ್ಚಂದ್ರ ಕೊರೋನಾಗೆ ಬಲಿ

ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಸುರೇಶ್ಚಂದ್ರ ಇಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೆಲದಿನಗಳ ಹಿಂದೆ ಇವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಹಿನ್ನೆಲೆಯಲ್ಲಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐವತ್ತಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ನಟಿಸಿರುವ ಸುರೇಶ್ಚಂದ್ರ ಚೆಲುವಿನ ಚಿತ್ತಾರ ಚಿತ್ರದಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಅವರು 80ರ ದಶಕದಲ್ಲಿ ಸಂಜೆವಾಣಿ ಪತ್ರಿಕೆಯಲ್ಲಿ ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದರು.

ಕನ್ನಡ ಚಿತ್ರರಂಗದ ಹಿರಿಯ ನಟ, ಪತ್ರಕರ್ತ ಸುರೇಶ್ಚಂದ್ರ ಕೊರೋನಾಗೆ ಬಲಿ Read More »

ಹೆಸರಾಂತ ಸಾಹಿತಿ, ಕವಿ ಡಾ. ಸಿದ್ದಲಿಂಗಯ್ಯ ಕೊರೊನಾಗೆ ಬಲಿ

ಬೆಂಗಳೂರು, ಜೂನ್ 11: ದಲಿತ ಕವಿ, ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ (67) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿದ್ದಲಿಂಗಯ್ಯ ಅವರು ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ 1954ರಲ್ಲಿ ಜನಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು. ಇಂದು ಸಂಜೆ 4.45ರ ಸುಮಾರಿಗೆ ಸಿದ್ದಲಿಂಗಯ್ಯ ಅವರು ನಿಧನರಾಗಿದ್ದು, ಇಂದೇ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ

ಹೆಸರಾಂತ ಸಾಹಿತಿ, ಕವಿ ಡಾ. ಸಿದ್ದಲಿಂಗಯ್ಯ ಕೊರೊನಾಗೆ ಬಲಿ Read More »