ರಾಜ್ಯ

ಮರಬಿದ್ದು ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಸ್ಥಗಿತ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟ್ ನಲ್ಲಿ ಇಂದು ಮುಂಜಾನೆ ಮರ ಬಿದ್ದು ರಸ್ತೆ ತಡೆ ಉಂಟಾದ ಘಟನೆ ನಡೆದಿದೆ. ತಕ್ಷಣ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಕಾರದಿಂದ ಮರ ತೆರವುಗೊಳಿಸುವ ಕಾರ್ಯ ನಡೆಸಿದರು. ಅತೀ ಹೆಚ್ಚಿನ ವಾಹನಗಳು ಸಂಚರಿಸುವ ಮುಂಜಾನೆ ವೇಳೆ ಈ ಘಟನೆ ನಡೆದ ಕಾರಣ ಎರಡು ಕಡೆ ರಸ್ತೆ ತಡೆ ಉಂಟಾಯಿತು. ಮುಂಜಾನೆ 8.45 ರ ಸುಮಾರಿಗೆ ಮರ ಬಿದ್ದಿದ್ದು, ಇದೀಗ ತೆರವು ಕಾರ್ಯ ಯಶಸ್ವಿಯಾಗಿದೆ. ಸುಮಾರು 100 […]

ಮರಬಿದ್ದು ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಸ್ಥಗಿತ Read More »

ಅಪ್ಘಾನ್ ನಲ್ಲಿ ಸಕ್ರಿಯರಾಗಿದ್ದಾರೆ ಭಾರತದ ಮೋಸ್ಟ್ ವಾಂಟೆಂಡ್ ಟೆರರಿಸ್ಟ್| 25 ಮಂದಿಯಲ್ಲಿ ಕೇರಳದವರೇ ಹೆಚ್ಚು…!

ಕಾಬೂಲ್, ಸೆ.1: ಭಾರತದಲ್ಲಿ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿರುವ 25ಕ್ಕೂ ಹೆಚ್ಚು ಮಂದಿ ಉಗ್ರರು ಅಪ್ಘಾನಿಸ್ತಾನದಲ್ಲಿ ಸಕ್ರಿಯರಾಗಿದ್ದಾರೆ ಎಂಬ ಮಾಹಿತಿಯನ್ನು ಗುಪ್ತಚರ ಮೂಲಗಳು ತಿಳಿಸಿವೆ. ಇತ್ತೀಚೆಗೆ ಕಾಬೂಲನ್ನು ತಾಲಿಬಾನಿಗಳು ವಶಕ್ಕೆ ಪಡೆಯುತ್ತಿದ್ದಂತೆ, ಅಲ್ಲಿನ ಜೈಲಿನಲ್ಲಿದ್ದ ಸಾವಿರಾರು ಕೈದಿಗಳನ್ನು ಹೊರಕ್ಕೆ ಬಿಡಲಾಗಿತ್ತು. ಅದರಲ್ಲಿ ಹಲವು ಭಾರತ ಮೂಲದವರೂ ಇದ್ದರು ಎನ್ನಲಾಗಿದ್ದು, ಇದೀಗ ಅಫ್ಘಾನಿಸ್ತಾನದ ನಂಗರ್ಹರ್ ಪ್ರಾಂತ್ಯದಲ್ಲಿ ಬೀಡುಬಿಟ್ಟಿದ್ದಾರೆ ಎನ್ನಲಾಗುತ್ತಿದೆ. 25 ಮಂದಿಯ ಪೈಕಿ ಹೆಚ್ಚಿನವರು ಭಾರತದ ಕೇರಳದವರು ಎನ್ನುವ ಮಾಹಿತಿಯನ್ನು ಗುಪ್ತಚರ ಪಡೆಗಳು ಹೇಳುತ್ತಿವೆ. ಕಳೆದ ವಾರ ಕಾಬೂಲ್

ಅಪ್ಘಾನ್ ನಲ್ಲಿ ಸಕ್ರಿಯರಾಗಿದ್ದಾರೆ ಭಾರತದ ಮೋಸ್ಟ್ ವಾಂಟೆಂಡ್ ಟೆರರಿಸ್ಟ್| 25 ಮಂದಿಯಲ್ಲಿ ಕೇರಳದವರೇ ಹೆಚ್ಚು…! Read More »

ರಾಜ್ಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಬ್‌ ಇನ್ಸ್​ಪೆಕ್ಟರ್​ ಹುದ್ದೆಗಳ ನೇಮಕಾತಿಗೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆ ದಿನಾಂಕವನ್ನು ತಾಂತ್ರಿಕ ಸಮಸ್ಯೆಯಿಂದ ಇಲಾಖೆ ಮುಂದೂಡಿದೆ. 545 ಸಬ್​ ಇನ್ಸ್​ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 26ಕ್ಕೆ ಲಿಖಿತ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದ ಅಂದು ಪರೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ. ಬದಲಿಗೆ ಅಕ್ಟೋಬರ್ 3ರ ಬೆಳಗ್ಗೆ 10.30 ರಿಂದ 12 ಗಂಟೆ ವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 1.30ರಿಂದ 3 ಗಂಟೆ ವರೆಗೆ ಪತ್ರಿಕೆ-2 ನಡೆಸಲು ನಿರ್ಧರಿಸಲಾಗಿದೆ ಎಂದು ಪೊಲೀಸ್

ರಾಜ್ಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರೀಕ್ಷೆ ಮುಂದೂಡಿಕೆ Read More »

ಅಡುಗೆ ಮನೆಗೆ ಮತ್ತೆ ಗ್ಯಾಸ್ ಬೆಲೆ ಏರಿಕೆ ಬಿಸಿ| ಸಿಲಿಂಡರ್ ಬೆಲೆ 25 ರೂ. ಹೆಚ್ಚಳ

ಬೆಂಗಳೂರು: ಪೆಟ್ರೋಲಿಯಂ ಕಂಪೆನಿಗಳು ಗ್ಯಾಸ್ ಸಿಲಿಂಡರ್ ಬೆಲೆಯನ್ನು 25 ರೂ. ಏರಿಕೆ ಮಾಡಿದ್ದು, ಸಾಮಾನ್ಯ ಜನರಿಗೆ ಕೊರೊನಾ ಸಂದರ್ಭದಲ್ಲಿ ಮತ್ತೊ ಹೊಡೆತ ನೀಡಿದೆ.ಇದರಿಂದಾಗಿ ರಾಜಧಾನಿ ದೆಹಲಿಯಲ್ಲಿ ಈಗ ಸಬ್ಸಿಡಿಯೇತರ ಅಡುಗೆ ಅನಿಲ ಬೆಲೆ 14.2 ಕೆಜೆ ತೂಕದ ಸಿಲೆಂಡರ್ ಗೆ 884 ರೂ. 50 ಪೈಸೆಯಾಗಿದೆ. ಹೊಸ ದರ ಇಂದೇ ಜಾರಿಗೆ ಬರಲಿದೆ. ಇನ್ನು 19 ಕೆಜಿ ಕಮರ್ಷಿಯಲ್ ಸಿಲೆಂಡರ್ ಬೆಲೆ 75 ರೂಪಾಯಿ ಹೆಚ್ಚಳವಾಗಿದ್ದು ಅದಕ್ಕೆ ಗ್ರಾಹಕರು ಸಾವಿರದ 693 ರೂಪಾಯಿಯಷ್ಟು ದೆಹಲಿಯಲ್ಲಿ ದರವಿದೆ.ಕಳೆದ 15

ಅಡುಗೆ ಮನೆಗೆ ಮತ್ತೆ ಗ್ಯಾಸ್ ಬೆಲೆ ಏರಿಕೆ ಬಿಸಿ| ಸಿಲಿಂಡರ್ ಬೆಲೆ 25 ರೂ. ಹೆಚ್ಚಳ Read More »

ಉಳ್ಳಾಲ| ಕಾರಿನ ನಂಬರ್ ಪ್ಲೇಟ್ ನಲ್ಲಿ ಕೊರಗಜ್ಜನ ಭಾವಚಿತ್ರಕ್ಕೆ ಪೊಲೀಸರಿಂದ ಆಕ್ಷೇಪ| ಪೊಲೀಸರ ನಡೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ| ಸ್ಥಳದಲ್ಲಿ ಬಿಗುವಿನ ವಾತಾವರಣ

ಮಂಗಳೂರು : ಕಾರಿನ ನಂಬರ್ ಪ್ಲೇಟ್‌ ಬಳಿ ಕೊರಗಜ್ಜನ ಭಾವಚಿತ್ರ ಇದೆ ಎಂದು ಆಕ್ಷೇಪಿಸಿದ ಪೊಲೀಸ್‌ ಸಿಬ್ಬಂದಿಯ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರ ಹೊರವಲಯದ ತೊಕ್ಕೊಟ್ಟು ಫ್ಲೈಓವರ್‌ ಬಳಿ ಇಂದು ನಡೆದಿದೆ. ನಗರದ ಸಂಚಾರಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರ ಮಾರುತಿ 800 ವಾಹನದಲ್ಲಿ ನೋಂದಣಿ ಸಂಖ್ಯೆಯ ಬಳಿ ಕೊರಗಜ್ಜನ ಭಾವಚಿತ್ರವಿತ್ತು. ಆ ಭಾವಚಿತ್ರ ತೆಗೆಯುವಂತೆ ಪೊಲೀಸ್‌ ಸಿಬ್ಬಂದಿ ಸೂಚಿಸಿದ್ದು, ಈ ವೇಳೆ ದೈವದ ಭಾವಚಿತ್ರ ತೆಗೆಯಲು ಕಾರಿನ ಮಾಲೀಕ ಹಾಗೂ

ಉಳ್ಳಾಲ| ಕಾರಿನ ನಂಬರ್ ಪ್ಲೇಟ್ ನಲ್ಲಿ ಕೊರಗಜ್ಜನ ಭಾವಚಿತ್ರಕ್ಕೆ ಪೊಲೀಸರಿಂದ ಆಕ್ಷೇಪ| ಪೊಲೀಸರ ನಡೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ| ಸ್ಥಳದಲ್ಲಿ ಬಿಗುವಿನ ವಾತಾವರಣ Read More »

ಬಾರಿಯಂಡ ದೀಪಕ್ ಜೋಯಪ್ಪರಿಗೆ ಜರ್ನಲಿಸಂನಲ್ಲಿ ಪಿಹೆಚ್.ಡಿ.

ಮಡಿಕೇರಿ: ಕೊಡಗಿನ ಮದೆನಾಡು ಗ್ರಾಮದ ಬಾರಿಯಂಡ ದೀಪಕ್ ಜೋಯಪ್ಪ ಅವರು ಸಂಶೋಧಸಿದ ’ಇಂಗ್ಲಿಷ್ ಮತ್ತು ಕನ್ನಡ ನ್ಯೂಸ್ ವೆಬ್‌ಸೈಟ್ಸ್: ಸ್ಟಡಿ ಆನ್ ದೇರ್ ಪೊಟೆನ್‌ಷ್ಯಾಲಿಟಿ ಆಂಡ್ ಸಸ್ಟೈನೇಬಿಲಿಟಿ’ ಎಂಬ ಮಹಾಪ್ರಬಂಧಕ್ಕೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್(ಮಾಹೆ) ಸಂಸ್ಥೆಯು ಡಾಕ್ಟರೇಟ್ ನೀಡಿದೆ. ದೀಪಕ್ ಅವರು ಈ ಸಂಸ್ಥೆಯು ಕೊಡುವ ಪ್ರತಿಷ್ಠಿತ ’ಡಾ. ಟಿಎಂಎ ಪೈ’ ವಿದ್ಯಾರ್ಥಿ ವೇತನದಲ್ಲಿ ಸಂಶೋಧನೆ ನಡೆಸಿದ್ದರು. ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಂಸ್ಥೆಯ ಪ್ರೊಫೆಸರ್ ಮತ್ತು ನಿರ್ದೇಶಕರಾದ ಡಾ. ಪದ್ಮ ರಾಣಿ ಅವರ

ಬಾರಿಯಂಡ ದೀಪಕ್ ಜೋಯಪ್ಪರಿಗೆ ಜರ್ನಲಿಸಂನಲ್ಲಿ ಪಿಹೆಚ್.ಡಿ. Read More »

ಉಡುಪಿ| ಚೂರಿ‌ ಇರಿತಕ್ಕೊಳಗಾದ ಯುವತಿ‌ ಸಾವು| ಜೀವನ್ಮರಣ ಸ್ಥಿತಿಯಲ್ಲಿ ಭಗ್ನ ಪ್ರೇಮಿ| ಘಟನೆ ನಡೆದಿದ್ದು ಯಾಕೆ? ಇಲ್ಲಿದೆ ಫುಲ್ ಡೀಟೈಲ್

ಉಡುಪಿ: ನಗರದ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಯುವಕನೋರ್ವ ಯುವತಿಗೆ ಚೂರಿ ಇರಿತವನ್ನು ಮಾಡಿದ್ದು ಬಳಿಕ ತಾನು ಕೂಡ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣದಲ್ಲಿ ಯುವತಿ ಮೃತಪಟ್ಟಿದ್ದಾಳೆ. ಯುವತಿಯನ್ನು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ ಜೀವನ್ಮರಣ ಸ್ಥಿತಿಯಲ್ಲಿ ಹೋರಾಟ‌ ನಡೆಸುತ್ತಿದ್ದಾನೆ. ಅಂಬಾಗಿಲು ಸಮೀಪದ ಕಕ್ಕುಂಜೆ ನಿವಾಸಿ ವಿಠಲ ಭಂಡಾರಿ ಹಾಗೂ ಸುಶೀಲಾ ದಂಪತಿಯ ಪುತ್ರಿ ಸೌಮ್ಯಶ್ರೀ(26) ಕೊಲೆಯಾಗಿದ್ದು, ಕೃತ್ಯ ಎಸಗಿರುವ ಆರೋಪಿ ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್(26)

ಉಡುಪಿ| ಚೂರಿ‌ ಇರಿತಕ್ಕೊಳಗಾದ ಯುವತಿ‌ ಸಾವು| ಜೀವನ್ಮರಣ ಸ್ಥಿತಿಯಲ್ಲಿ ಭಗ್ನ ಪ್ರೇಮಿ| ಘಟನೆ ನಡೆದಿದ್ದು ಯಾಕೆ? ಇಲ್ಲಿದೆ ಫುಲ್ ಡೀಟೈಲ್ Read More »

ದ.ಕ, ಕೊಡಗು, ಉಡುಪಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ ಮುಂದುವರಿಕೆ| ರಾಜ್ಯಾದ್ಯಂತ ನೈಟ್ ಕರ್ಪ್ಯೂ ಕಂಟಿನ್ಯೂ| ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ – ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ

ಬೆಂಗಳೂರು: ರಾಜ್ಯಾದ್ಯಂತ ನೈಟ್ ಕರ್ಫ್ಯೂ ಮುಂದುವರೆಸಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗಿನ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಮುಂದುವರೆಯಲಿದ್ದು, ಮೂರು ಜಿಲ್ಲೆಗಳಲ್ಲಿ ಮಾತ್ರ ವಾರಾಂತ್ಯ ಕರ್ಫ್ಯೂ ಇರಲಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯ ನಂತರ ಕಂದಾಯ ಸಚಿವ ಆರ್. ಅಶೋಕ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದ್ದಾರೆ. 400 ಜನರಿಗೆ ಅವಕಾಶ: ಕಲ್ಯಾಣ ಮಂಟಪಗಳಲ್ಲಿ ಸಭೆ-ಸಮಾರಂಭಗಳಿಗೆ ಅವಕಾಶ

ದ.ಕ, ಕೊಡಗು, ಉಡುಪಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ ಮುಂದುವರಿಕೆ| ರಾಜ್ಯಾದ್ಯಂತ ನೈಟ್ ಕರ್ಪ್ಯೂ ಕಂಟಿನ್ಯೂ| ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ – ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ Read More »

ಅಪ್ರಾಪ್ತ ಬಾಲಕರಿಂದ ಅಪ್ರಾಪ್ತೆ ಬಾಲಕಿಯ ಸಾಮೂಹಿಕ ಅತ್ಯಾಚಾರ| ವಿಕೃತರಾಗ್ತಿದಾರಾ ನವಪೀಳಿಗೆ…?

ಜಾರ್ಖಂಡ್‌: ರಾಜಧಾನಿ ರಾಂಚಿ ಜಿಲ್ಲೆಯಲ್ಲಿ ಬಾಲಕಿಯ ಮೇಲೆ ಏಳು ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಎಲ್ಲಾ ಆರೋಪಿಗಳೂ ಸಹ ಅಪ್ರಾಪ್ತ ಬಾಲಕರೇ ಆಗಿದ್ದು, ಪರಿಚಯಸ್ಥ ಹುಡುಗರಿಂದಲೇ ಇಂತಹ ಹೀನ ಕೃತ್ಯ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇತರರನ್ನು ಬಂಧಿಸಲು ಶೋಧಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಸಂತ್ರಸ್ತ ಬಾಲಕಿಯ ಪರಿಚಯದವನಾದ ಒಬ್ಬ ಆರೋಪಿ ತನ್ನ ಬೈಕಿನಲ್ಲಿ ಬಾಲಕಿಯನ್ನು ಸುತ್ತಾಡಿಸುವ ನೆಪದಲ್ಲಿ ಕರೆದುಕೊಂಡು ಹೋಗಿದ್ದಾನೆ.

ಅಪ್ರಾಪ್ತ ಬಾಲಕರಿಂದ ಅಪ್ರಾಪ್ತೆ ಬಾಲಕಿಯ ಸಾಮೂಹಿಕ ಅತ್ಯಾಚಾರ| ವಿಕೃತರಾಗ್ತಿದಾರಾ ನವಪೀಳಿಗೆ…? Read More »

ತುಮಕೂರು : ಮನೆಯಲ್ಲೇ ವೇಶ್ಯಾವಾಟಿಕೆ: ಐವರ ಪೊಲೀಸ್ ವಶಕ್ಕೆ

ತುಮಕೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ಕೆಲವು ದಿನಗಳಿಂದ ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿತ್ತು ಎನ್ನುವ ಖಚಿತ ಮಾಹಿತಿ ಮೇರೆಗೆ ಚಿಕ್ಕನಾಯಕನಹಳ್ಳಿ ಪೋಲಿಸರು ದಾಳಿ ನಡೆಸಿದ್ದಾರೆ. ವೇಶ್ಯವಾಟಿಕೆಯಲ್ಲಿ ತೊಡಗಿದ್ದರು ಎನ್ನಲಾದ ಮೂವರು ಮಹಿಳೆಯರು ಸೇರಿ ಒಟ್ಟು ಐವರನ್ನು ಸದ್ಯ ಬಂಧಿಸಲಾಗಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

ತುಮಕೂರು : ಮನೆಯಲ್ಲೇ ವೇಶ್ಯಾವಾಟಿಕೆ: ಐವರ ಪೊಲೀಸ್ ವಶಕ್ಕೆ Read More »