ರಾಜ್ಯ

ಬೆಂಗಳೂರು : ನಟಿ ಸೋನಿಯಾ ಮನೆ ಮೇಲೆ ದಾಳಿ 40 ಗ್ರಾಂ ಗಾಂಜಾ ವಶಕ್ಕೆ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಸೆಲೆಬ್ರಿಟಿ ಮಾಡೆಲ್ ಸೋನಿಯಾ ಅಗರ್ವಾಲ್ ಮನೆಯ ಮೇಲೆ ಡಿಜೆ ಹಳ್ಳಿ ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು 40 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ಸಮಯದಲ್ಲಿ ಸೋನಿಯಾ ಅಗರ್ವಾಲ್ ಮನೆಯಲ್ಲಿ ಇರಲಿಲ್ಲ. ಭಾನವಾರ ರಾತ್ರಿ ಪಾರ್ಟಿಗೆ ಹೋಗಿದ್ದ ಆಕೆ ಮನೆಗೆ ಬಂದಿರಲಿಲ್ಲ. ದಾಳಿ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಆಕೆಗೆ ಕರೆ ಮಾಡಿದ್ದಾರೆ. ಈ ವೇಳೆ ಆಕೆ ಕರೆಯನ್ನು ಸ್ವೀಕರಿಸಲಿಲ್ಲ. ಆ ಬಳಿಕ ಆಕೆಯ ತಂದೆಯಿಂದ ಫೋನ್ ಕರೆ ಮಾಡಿಸಿದ್ದಾರೆ. […]

ಬೆಂಗಳೂರು : ನಟಿ ಸೋನಿಯಾ ಮನೆ ಮೇಲೆ ದಾಳಿ 40 ಗ್ರಾಂ ಗಾಂಜಾ ವಶಕ್ಕೆ Read More »

ಪ್ಯಾರಾಲಂಪಿಕ್: ಭಾರತಕ್ಕೆ ಕಂಚು ತಂದು ಕೊಟ್ಟ‌ ವಿನೋದ್ ಕುಮಾರ್

ಟೋಕಿಯೊ: ಜಪಾನ್‌ನ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಡಿಸ್ಕಸ್‌ ಥ್ರೋ ಸ್ಪರ್ಧೆಯಲ್ಲಿ ಭಾರತದ ವಿನೋದ್‌ ಕುಮಾರ್ ಅವರು ಕಂಚಿನ ಪದಕ ಗೆದ್ದುಕೊಂಡಿದ್ದಾರೆ.‌ ಇದರೊಂದಿಗೆ ಭಾರತಕ್ಕೆ ಭಾನುವಾರ ಒಟ್ಟು ಮೂರು ಪದಕಗಳು ಬಂದಂತಾಗಿದೆ. 19.91 ಮೀಟರ್‌ ದೂರ ಎಸೆದು ಪದಕ್ಕೆ ಕೊರಳೊಡ್ಡಿದ್ದೂ ಮಾತ್ರವಲ್ಲದೆ ಏಷಿಯನ್‌ ದಾಖಲೆಯನ್ನೂ ನಿರ್ಮಿಸಿದರು. ಪೋಲೆಂಡ್‌ನ ಪಿಯೋಟರ್‌ ಕೊಸೆವಿಕ್ಜ್‌ (20.02ಮೀ), ಕ್ರೊವೇಷಿಯಾದ ವೆಲಿಮಿರ್‌ ಸ್ಯಾಂಡೊರ್‌ (19.98ಮೀ) ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕ ಬಾಚಿಕೊಂಡರು.

ಪ್ಯಾರಾಲಂಪಿಕ್: ಭಾರತಕ್ಕೆ ಕಂಚು ತಂದು ಕೊಟ್ಟ‌ ವಿನೋದ್ ಕುಮಾರ್ Read More »

ಅಪ್ರಾಪ್ತೆಯ ಅತ್ಯಾಚಾರಗೈದ ಆರೋಪಿ ಠಾಣೆಯಲ್ಲಿ ನೇಣಿಗೆ ಶರಣು| ಲಾಕಪ್ ಡೆತ್ ಎಂದು ಆರೋಪಿಸಿದ ಕುಟುಂಬಿಕರು| ಪ್ರಕರಣ ಸಿಐಡಿ‌ ತನಿಖೆಗೆ ಆಗ್ರಹ|

ವಿಜಯಪುರ; ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿಯೇ ಸಾವನ್ನಪ್ಪಿದ್ದಾನೆ.ಈತನ ಸಾವನ್ನು‌ ಲಾಕ್‌ಅಪ್ ಡೆತ್ ಎಂದು ಪೋಷಕರು ಆರೋಪ ಮಾಡುತ್ತಿದ್ದು, ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸರು ಶನಿವಾರ ರಾತ್ರಿ ದೇವಿಂದ ಸಂಗೋಗಿ ಎಂಬ ಆರೋಪಿಯನ್ನು ಬಂಧಿಸಿದ್ದರು. ಭಾನುವಾರ ಬೆಳಗ್ಗೆ ಆರೋಪಿ ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿಯ ಪೋಷಕರು, ಸಂಬಂಧಿಕರು ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಪ್ರಾಪ್ತೆಯ ಅತ್ಯಾಚಾರಗೈದ ಆರೋಪಿ ಠಾಣೆಯಲ್ಲಿ ನೇಣಿಗೆ ಶರಣು| ಲಾಕಪ್ ಡೆತ್ ಎಂದು ಆರೋಪಿಸಿದ ಕುಟುಂಬಿಕರು| ಪ್ರಕರಣ ಸಿಐಡಿ‌ ತನಿಖೆಗೆ ಆಗ್ರಹ| Read More »

ರಾಜ್ಯದಲ್ಲಿ ಮುಂದುವರಿಯಲಿದೆ ವರುಣಾರ್ಭಟ| ಹತ್ತು‌ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ‌ನೀಡಿದ ಹವಾಮಾನ ಇಲಾಖೆ|

ಬೆಂಗಳೂರು: ರಾಜ್ಯದಲ್ಲಿ ಮತ್ತೆ 2 ದಿನಗಳ ಕಾಲ ಮಳೆ ಆರ್ಭಟ ಮುಂದುವರೆಯಲ್ಲಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಜೋರಾಗಿ ಮಳೆ ಸುರಿಯುತ್ತಿದೆ. ಬೆಂಗಳೂರಿನಲ್ಲಿ ಕೂಡ ಸಂಜೆಯ ವೇಳೆಗೆ ಮಳೆಯಾಗುತ್ತಿದೆ. ಇನ್ನೆರಡು ದಿನ ಕರಾವಳಿಯ

ರಾಜ್ಯದಲ್ಲಿ ಮುಂದುವರಿಯಲಿದೆ ವರುಣಾರ್ಭಟ| ಹತ್ತು‌ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ‌ನೀಡಿದ ಹವಾಮಾನ ಇಲಾಖೆ| Read More »

ಚಲಿಸುತ್ತಿದ್ದಂತೆ ನಡುರಸ್ತೆಯಲ್ಲೇ ಹೊತ್ತಿ‌ ಉರಿದ ಕಾರು

ಬೆಂಗಳೂರು: ಚಲಿಸುತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಣಚಿನಕುಪ್ಪೆ ಬಳಿ ನಡೆದಿದೆ. ರಸ್ತೆ ಮಧ್ಯೆಯೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರನ್ನು ರಸ್ತೆ ಪಕ್ಕ ತಂದು ನಿಲ್ಲಿಸಲಾಗಿದೆ. ಕ್ಷಣಾರ್ಧದಲ್ಲಿ ಏಕಾಏಕಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ನಾಲ್ವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ. ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಸ್ಥಳಕ್ಕೆ ನೆಲಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಚಲಿಸುತ್ತಿದ್ದಂತೆ ನಡುರಸ್ತೆಯಲ್ಲೇ ಹೊತ್ತಿ‌ ಉರಿದ ಕಾರು Read More »

ಆಸ್ತಿ ವಿಚಾರದಲ್ಲಿ ಕಲಹ| ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮಧುರಖಂಡಿ ಗ್ರಾಮದಲ್ಲಿ ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ನಾಲ್ವರು ಸಹೋದರರನ್ನು ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಒಂದೇ ಕುಟುಂಬದ ಸಹೋದರರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಧುರಖಂಡಿ ಗ್ರಾಮದ ತೋಟದ ಮನೆಯಲ್ಲಿ ಇದ್ದ ಹನುಮಂತ ಉದಗಟ್ಟಿ(45) ಮಲ್ಲಪ್ಪ ಉದಗಟ್ಟಿ(35), ಬಸಪ್ಪ ಉದಗಟ್ಟಿ(37) ಈಶ್ವರ ಉದಗಟ್ಟಿ(35) ಅವರನ್ನು ಕೊಲೆ ಮಾಡಲಾಗಿದೆ. ತೋಟದ ಮನೆಯಲ್ಲಿ ಈ ನಾಲ್ವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆನ್ನಲಾಗಿದ್ದು, ಪುಟಾಣಿ ಎಂಬುವರ ಮನೆಯವರ ವಿರುದ್ಧ ಕೊಲೆ ಆರೋಪ

ಆಸ್ತಿ ವಿಚಾರದಲ್ಲಿ ಕಲಹ| ಒಂದೇ ಕುಟುಂಬದ ನಾಲ್ವರನ್ನು ಕೊಚ್ಚಿ ಕೊಲೆ Read More »

ಆಸ್ತಿ ವಿವಾದ| ಅಳಿಯನ ಮೇಲೆ ಮಾವನಿಂದ ಮಾರಣಾಂತಿಕ ಹಲ್ಲೆ

ಬಂಟ್ವಾಳ : ಜಾಗದ ತಕರಾರಿಗೆ ಸಂಬಂಧಿಸಿದಂತೆ ಸ್ವಂತ ಮಾವನೇ ಅಳಿಯನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಖಂಡಿಗ ಬಳಿ ನಡೆದಿದೆ.ಘಟನೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುರೇಶ್ ಪ್ರಭು ಯಾನೆ ಕಾಳೀಶ್ವರ ಸ್ವಾಮಿ ತನ್ನ ಮಗಳ ಗಂಡನ ಜೊತೆ ಜಮೀನಿನ ವಿಚಾರದಲ್ಲಿ ವೈಮನಸ್ಸು ಹೊಂದಿದ್ದ ಎಂದು ಹೇಳಲಾಗಿದ್ದು ಇದೇ ವಿಚಾರದಲ್ಲಿ ಕಾಳೀಶ್ವರ ಸ್ವಾಮಿ ಮತ್ತು ಆತನ ಸಹಚರರು ಮಗಳು ಕಿರಣ ಮತ್ತು ಆಕೆಯ ಪತಿ ಸುಳ್ಯ ಅಲೆಟ್ಟಿಯ ಪಟಕ್ಕುಂಜ

ಆಸ್ತಿ ವಿವಾದ| ಅಳಿಯನ ಮೇಲೆ ಮಾವನಿಂದ ಮಾರಣಾಂತಿಕ ಹಲ್ಲೆ Read More »

ಮಾನಸಗಂಗೋತ್ರಿ ತಿರುಗಾಟ‌ ನಿಷೇಧ ಸುತ್ತೋಲೆ ವಾಪಸ್ ಪಡೆದ‌ ಮೈಸೂರು ವಿವಿ

ಮೈಸೂರು: ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6.30ರ ನಂತರ ವಿದ್ಯಾರ್ಥಿನಿಯರ ತಿರುಗಾಟಕ್ಕೆ ನಿರ್ಬಂಧ ವಿಧಿಸಿ ಹೊರಡಿಸಿದ್ದ ಸುತ್ತೋಲೆಯನ್ನು ಮೈಸೂರು ವಿಶ್ವವಿದ್ಯಾಲಯ ಶನಿವಾರ ವಾಪಸ್‌ ಪಡೆದಿದೆ. ಸಾಂಸ್ಕೃತಿಕ ನಗರಿಯಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಹಿನ್ನೆಲೆಯಲ್ಲಿ ಆ.26ರಂದು ಕುಲಸಚಿವ ಪ್ರೊ.ಆರ್‌.ಶಿವಪ್ಪ ಅವರು ನಿರ್ಬಂಧ ವಿಧಿಸಿ ಸುತ್ತೋಲೆ ಹೊರಡಿಸಿದ್ದರು. ‘ಕ್ಯಾಂಪಸ್‌ನಲ್ಲಿ ಸಂಜೆ 6.30ರ ನಂತರ ಹೆಣ್ಣು ಮಕ್ಕಳು ಒಂಟಿಯಾಗಿ ತಿರುಗಾಡುವುದನ್ನು ಹಾಗೂ ಕೂರುವುದನ್ನು ನಿಷೇಧಿಸಲಾಗಿದೆ. ಪೊಲೀಸ್‌ ಇಲಾಖೆಯ ಮೌಖಿಕ ನಿರ್ದೇಶನದ ಮೇರೆಗೆ ಈ ಸುತ್ತೋಲೆ ಹೊರಡಿಸಲಾಗಿದೆ’ ಎಂದು ಉಲ್ಲೇಖಿಸಿದ್ದರು.

ಮಾನಸಗಂಗೋತ್ರಿ ತಿರುಗಾಟ‌ ನಿಷೇಧ ಸುತ್ತೋಲೆ ವಾಪಸ್ ಪಡೆದ‌ ಮೈಸೂರು ವಿವಿ Read More »

ಶಿಕ್ಷಕರ ದಿನಾಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೋವಿಡ್ ಹಿನ್ನಲೆ ಸೆ.5ರಂದು ನಡೆವುವ ಶಿಕ್ಷಕರ ದಿನಾಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಆರೋಗ್ಯ ಮತ್ತು ಸುರಕ್ಷಾ ದೃಷ್ಠಿಯಿಂದ ಸರ್ಕಾರವು ಈ ಸಾಲಿನ ಶಿಕ್ಷಕರ ದಿನಾಚರಣೆಯನ್ನು ಈ ಕೆಳಕಂಡ ಮಾರ್ಗಸೂಚಿಯಂತೆ ಸರಳವಾಗಿ ಮತ್ತು ಸುರಕ್ಷಿತವಾಗಿ ಆಚರಿಸಲು ಸೂಚಿಸಿದೆ. 1.ಜಿಲ್ಲಾ ಮಟ್ಟದ ವೇದಿಕೆಯ ಮೇಲೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸತ್ ಸದಸ್ಯರು, ವಿಧಾನಸಭಾ, ಪರಿಷತ್

ಶಿಕ್ಷಕರ ದಿನಾಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ Read More »

ಅತ್ಯಾಚಾರ ಪ್ರಕರಣ ವಿಷಯದಲ್ಲಿ ಎಚ್ಚರಿಕೆಯಿಂದ ಮಾತಾಡಿ: ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ : ಸಿಎಂ

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರ. ಹಾಗಾಘಿ ಈ ಪ್ರಕರಣದ ವಿಷಯದಲ್ಲಿ ಎಚ್ಚರಿಕೆಯಿಂದ ಮಾತನಾಡಿ ಎಂದು ಸಂಪುಟ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ. ಈ ರೀತಿ ಘಟನೆ ಆದಾಗ ವಿಪಕ್ಷದವರು ಟೀಕೆ ಮಾಡೋದು ಸಹಜ. ಹಾಗಂತ ಏನೋ ಮಾತಾಡಿ, ಗೊಂದಲ ಮಾಡ್ಕೊಳ್ಳೋದು ಬೇಡ. ಅತ್ಯಾಚಾರ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ ಎಂದು ಹೇಳಿದ್ದಾರೆ. ಬಳಿಕ ಅವರು ನಿಮ್ಮ

ಅತ್ಯಾಚಾರ ಪ್ರಕರಣ ವಿಷಯದಲ್ಲಿ ಎಚ್ಚರಿಕೆಯಿಂದ ಮಾತಾಡಿ: ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ : ಸಿಎಂ Read More »