ರಾಜ್ಯ

ಪಿಯುಸಿ ಫಲಿತಾಂಶಕ್ಕೆ ಎಸ್ ಎಸ್ ಎಲ್ ಸಿ ಅಂಕವನ್ನೂ ಪರಿಗಣಿಸಲಾಗುವುದು: ಸುರೇಶ್ ಕುಮಾರ್

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶಕ್ಕೆ, ವಿದ್ಯಾರ್ಥಿಗಳ ಎಸ್ ಎಸ್ ಎಲ್ ಸಿ ಅಂಕಗಳನ್ನೂ ಪರಿಗಣಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ, ರಾಜ್ಯ ಸರ್ಕಾರ ನಿನ್ನೆ ಆದೇಶ ಹೊರಡಿಸಿತ್ತು. ಇದಕ್ಕೆ ಮಾನದಂಡವಾಗಿ ಪ್ರಥಮ ಪಿಯುಸಿ ಅಂಕ ಆಧರಿಸಿ, ಪಾಸ್ ಮಾಡುವುದಾಗಿ ಶಿಕ್ಷಣ ಸಚಿವರು ತಿಳಿಸಿದ್ದರು. ಅದರ ಬೆನ್ನಲ್ಲೆ ಇಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತೊಂದು ಶುಭ ಸುದ್ದಿ ನೀಡಿಲಾಗಿದ್ದು, […]

ಪಿಯುಸಿ ಫಲಿತಾಂಶಕ್ಕೆ ಎಸ್ ಎಸ್ ಎಲ್ ಸಿ ಅಂಕವನ್ನೂ ಪರಿಗಣಿಸಲಾಗುವುದು: ಸುರೇಶ್ ಕುಮಾರ್ Read More »

ದೇಶದಲ್ಲಿ ಒಂದೇ ದಿನ 1.2 ಲಕ್ಷ ಕೋವಿಡ್ ಸೋಂಕು ಪ್ರಕರಣ ಪತ್ತೆ

ನವದೆಹಲಿ : ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಕೊಂಚ ಕೊಂಚವಾಗಿ ಇಳಿಕೆಯಾಗುತ್ತಿದೆ. ಇದೀಗ ಕಳೆದ 24 ಗಂಟೆಗಳಲ್ಲಿ, ಭಾರತವು ಕೋವಿಡ್-19 ರ 1.2 ಲಕ್ಷ ಹೊಸ ಪ್ರಕರಣಗಳನ್ನು ದಾಖಲಿಸಿದೆ, ಇದು ಕಳೆದ 58 ದಿನಗಳಲ್ಲಿ ಪ್ರಕರಣಗಳ ಕನಿಷ್ಠ ಏಕ ದಿನದ ಹೆಚ್ಚಳವಾಗಿದೆ. ದೇಶದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳು 15,55,248. ದೇಶಾದ್ಯಂತ ಕೋವಿಡ್ ಸೋಂಕಿನಿಂದ ಈವರೆಗೆ ೨.೬೭ ಕೋಟಿಗೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ, ಕಳೆದ ೨೪ ಗಂಟೆಗಳಲ್ಲಿ 1,97,894 ಜನರು ಚೇತರಿಸಿಕೊಂಡಿದ್ದಾರೆ.ದೈನಂದಿನ ಪಾಸಿಟಿವಿಟಿ ದರವು ಶೇಕಡಾ 5.78 ಕ್ಕೆ

ದೇಶದಲ್ಲಿ ಒಂದೇ ದಿನ 1.2 ಲಕ್ಷ ಕೋವಿಡ್ ಸೋಂಕು ಪ್ರಕರಣ ಪತ್ತೆ Read More »

ಹೇಳಿಕೊಟ್ಟಿದ್ದು ಒಂದು, ಕೇಳಿದ್ದು ಮತ್ತೊಂದು : ಎಕ್ಸಾಂ ಎಡವಟ್ಟಿನಲ್ಲಿ ಮಕ್ಳೆಲ್ಲಾ ಫೇಲ್

ಸಮಾಚಾರ ವರದಿ: ಸಾಮಾನ್ಯವಾಗಿ ಪರೀಕ್ಷೆಗಳು ಅಂದಾಗ ಮಕ್ಕಳಿಗೆ ಕಲಿಸಿದ್ದನ್ನೇ ಪ್ರಶ್ನೆಗಳನ್ನಾಗಿ ಕೇಳಿ ಉತ್ತರ ಪಡೆದುಕೊಳ್ತಾರೆ. ಸರಿ ಉತ್ತರ ಬರೆದವ್ನು ಪಾಸ್ ಆದ್ರೆ ಉತ್ತರ ಸರಿ ನೀಡದವ್ನಿಗೆ ಕಡಿಮೆ ಅಂಕವೋ ಅಥವಾ ಫೇಲೋ ಆಗ್ತಾನೆ. ಆದ್ರೆ ಎಕ್ಸಾಮಿನರ್ ತಪ್ಪು ಪ್ರಶ್ನೆ ಕೇಳಿ ಸರಿ ಉತ್ತರ ನಿರೀಕ್ಷಿಸಿದರೆ ಆಗೋದೇನು? ಇಲ್ಲಿ ಆಗಿದ್ದು ಅದೇ.ಪಾಠದಲ್ಲಿ ಇಲ್ಲದ ಪ್ರಶ್ನೆ ಕೇಳಿದ್ದು, ಮಕ್ಕಳಿಗೆ ಉತ್ತರಿಸಲಾಗದೇ ಹೆಚ್ಚೂ ಕಮ್ಮಿ ಎಲ್ಲಾ ಮಕ್ಕಳು ಫೇಲಾದ ಪ್ರಸಂಗ ನಡೆದಿದೆ. ಅಂದ ಹಾಗೆ ಈ ಪರೀಕ್ಷೆ ನಡೆದದ್ದು ಅಂತಿಮ ಸೆಮಿಸ್ಟರ್

ಹೇಳಿಕೊಟ್ಟಿದ್ದು ಒಂದು, ಕೇಳಿದ್ದು ಮತ್ತೊಂದು : ಎಕ್ಸಾಂ ಎಡವಟ್ಟಿನಲ್ಲಿ ಮಕ್ಳೆಲ್ಲಾ ಫೇಲ್ Read More »

ಕೆ ಎಸ್ ಆರ್ ಟಿ ಸಿ ಹೆಸರು ಕೇರಳ ಪಾಲು ಸತ್ಯಕ್ಕೆ ದೂರವಾದ ಮಾತು | ವ್ಯವಸ್ಥಾಪಕ ನಿರ್ದೇಶಕರ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಕಳೆದೆರಡು ದಿನಗಳಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆ “ಕೆಎಸ್‌ಆರ್‌ಟಿಸಿ” ಎಂಬ ಹೆಸರು ಬಳಸುವಂತಿಲ್ಲವೆಂದು, ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟರಿರವರು ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದಾರೆ. ಎರಡು ರಾಜ್ಯಗಳ ನಡುವಿನ ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಂತಿದೆ ಎಂಬ ಮಾಧ್ಯಮಗಳ ವರದಿಯನ್ನು ನೋಡಿ ಆಶ್ಚರ್ಯವಾಗಿದೆ. ಇದು ವಸ್ತುಷಃ ಸತ್ಯಕ್ಕೆ ದೂರವಾದ ವರದಿಯಾಗಿದೆ ಎಂದು ಕ ರಾ ರ ಸಾ ನಿ ವ್ಯವಸ್ಥಾಪಕ ನಿರ್ದೇಶಕರಾದ ಶಿವಯೋಗಿ ಸಿ ಕಳಸದ ಸ್ಪಷ್ಟೀಕರಣ ನೀಡಿದ್ದಾರೆ.

ಕೆ ಎಸ್ ಆರ್ ಟಿ ಸಿ ಹೆಸರು ಕೇರಳ ಪಾಲು ಸತ್ಯಕ್ಕೆ ದೂರವಾದ ಮಾತು | ವ್ಯವಸ್ಥಾಪಕ ನಿರ್ದೇಶಕರ ಸ್ಪಷ್ಟನೆ Read More »

ವಿವಿಧ ಬೇಡಿಕೆಗಳ‌ ಈಡೇರಿಕೆಗೆ ಒತ್ತಾಯಿಸಿ ಜೂ.5ರಂದು ಅತಿಥಿ ಉಪನ್ಯಾಸಕರಿಂದ ಆನ್ಲೈನ್ ಚಳುವಳಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಪ.ಪೂ ಅತಿಥಿ ಉಪನ್ಯಾಸಕರ ಸಂಘವು ಜೂ.5 ರಂದು ಆನ್ ಲೈನ್ ಚಳುವಳಿ ನಡೆಸಲಿದೆ.ರಾಜ್ಯದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರ ಬಾಕಿ ಇರುವ 2021 ನೇ ಶೈಕ್ಷಣಿಕ ಸಾಲಿನ ಎಲ್ಲಾ ಮಾಸಿಕ ವೇತನವನ್ನು ಬಿಡುಗಡೆ ಮಾಡಬೇಕು. ಕೋವಿಡ್ ವಿಶೇಷ ಪ್ಯಾಕೇಜ್ ನೀಡಬೇಕು. ಸೇವಾ ಭದ್ರತೆಯನ್ನು ಖಾತ್ರಿ ಮತ್ತು ಈ ಹಿಂದೆ ಕಾರ್ಯನಿರ್ವಹಿಸುತ್ತಾ ಇದ್ದ ಅತಿಥಿ ಉಪನ್ಯಾಸಕರನ್ನು ಮುಂದಿನ ದಿನಗಳಲ್ಲಿ ಸೇವೆಗೆ ನೇಮಕಾತಿ ಮಾಡಿಕೊಳ್ಳವುದು, 2021 ನೇ ಶೈಕ್ಷಣಿಕ ವರ್ಷದಲ್ಲಿ ಸರಕಾರಿ

ವಿವಿಧ ಬೇಡಿಕೆಗಳ‌ ಈಡೇರಿಕೆಗೆ ಒತ್ತಾಯಿಸಿ ಜೂ.5ರಂದು ಅತಿಥಿ ಉಪನ್ಯಾಸಕರಿಂದ ಆನ್ಲೈನ್ ಚಳುವಳಿ Read More »

ಎಸ್ಸೆಸ್ಸೆಲ್ಸಿ ಮಕ್ಕಳು ಭಯಪಡಬೇಕಿಲ್ಲ : ಪರೀಕ್ಷೆ ಕುರಿತು ಅಭಯ ನೀಡಿದ ಸಿ.ಎಂ

ಬೆಳಗಾವಿ: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಕುರಿತಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಘೋಷಣೆ ಮಾಡಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಕೋವಿಡ್ ನಿಯಂತ್ರಣಕ್ಕೆ ಬಂದರೆ ಮಾತ್ರ ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದರೆ ಮಾತ್ರ ಪರೀಕ್ಷೆ ನಡೆಸಲಾಗುವುದು. ಇಲ್ಲವಾದಲ್ಲಿ ಈ ವರ್ಷ ಪರೀಕ್ಷೆ ನಡೆಸುವುದಿಲ್ಲ ಎಂದು ಅಭಯ ನೀಡಿದರು. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ

ಎಸ್ಸೆಸ್ಸೆಲ್ಸಿ ಮಕ್ಕಳು ಭಯಪಡಬೇಕಿಲ್ಲ : ಪರೀಕ್ಷೆ ಕುರಿತು ಅಭಯ ನೀಡಿದ ಸಿ.ಎಂ Read More »

ಸೆಕ್ಸ್‌ದಂಧೆಯಿಂದ ಲಕ್ಷ ಲಕ್ಷ ಆದಾಯ ಸಿಗ್ತಿತ್ತಂತೆ | ದಿನಕ್ಕೊಂದು ಭಯಾನಕ ಸತ್ಯ ಬಾಯ್ಬಿಡ್ತಿದಾರೆ ಬಾಂಗ್ಲಾ ಯುವತಿಯ ರೇಪಿಸ್ಟ್ ಗಳು

ಬೆಂಗಳೂರು: ಕಳೆದ ವಾರ ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿಯ ಮೇಲೆ ನಡೆದಿದ್ದ ಭಯಾನಕ ಹಾಗೂ ವಿಕೃತ ಗ್ಯಾಂಗ್‌ರೇಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಆರೋಪಿಗಳಿಂದ ಭಯಾನಕ ಸತ್ಯಗಳು ಹೊರಬೀಳುತ್ತಿವೆ. ಈಗಾಗಲೇ ಕೆಲವು ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ಅವರ ವಿಚಾರಣೆಯನ್ನು ತೀವ್ರಗೊಳಿಸುತ್ತಿದ್ದಂತೆಯೇ ಒಂದೊಂದೇ ಸತ್ಯವನ್ನು ಹೊರಹಾಕುತ್ತಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ವಾರ ಬಾಂಗ್ಲಾ ಯುವತಿಯ ಮೇಲೆ ಬೆಂಗಳೂರಿನಲ್ಲಿ ಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ಬಾಟಲಿ ತುರುಕಿ ಅದರ ವಿಡಿಯೋ ಮಾಡಿ ಹರಿಬಿಟ್ಟ ಭಯಾನಕ ಘಟನೆ ಇದಾಗಿದೆ. ಇಡೀ ದೇಶಾದ್ಯಂತ ಈ ಘಟನೆ

ಸೆಕ್ಸ್‌ದಂಧೆಯಿಂದ ಲಕ್ಷ ಲಕ್ಷ ಆದಾಯ ಸಿಗ್ತಿತ್ತಂತೆ | ದಿನಕ್ಕೊಂದು ಭಯಾನಕ ಸತ್ಯ ಬಾಯ್ಬಿಡ್ತಿದಾರೆ ಬಾಂಗ್ಲಾ ಯುವತಿಯ ರೇಪಿಸ್ಟ್ ಗಳು Read More »

ನಾಳೆಯಿಂದ ರಾಜ್ಯಕ್ಕೆ ಮುಂಗಾರಿನ ಸಿಂಚನ | ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಕೇರಳಕ್ಕೆ ಈಗಾಗಲೇ ಮುಂಗಾರು ಪ್ರವೇಶ ಮಾಡಿದ್ದು, ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ನಾಳೆಯಿಂದ ರಾಜ್ಯದಲ್ಲಿ ಗುಡುಗು -ಮಿಂಚು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಸದ್ಯ ಅರಬ್ಬಿ ಸಮುದ್ರದ ಮಧ್ಯ ಭಾಗದಲ್ಲಿ ಮೇಲ್ಮೆ ಸುಳಿಗಾಳಿ ತೀವ್ರವಾಗಿರುವುದರಿಂದ ಕರ್ನಾಟಕದ ಕೆಲವೆಡೆ ಜೂನ್ 1ರಿಂದ ಮಳೆಯಾಗುತ್ತಿದೆ.

ನಾಳೆಯಿಂದ ರಾಜ್ಯಕ್ಕೆ ಮುಂಗಾರಿನ ಸಿಂಚನ | ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ Read More »

ಸೆಕ್ಸ್ ಸಿಡಿ‌ ಪ್ರಕರಣ: ಜಾರಕಿಹೋಳಿಗೆ ಮತ್ತೆ ನಿರಾಸೆ

ಬೆಂಗಳೂರು : ಸಿಡಿ ಪ್ರಕರಣದಲ್ಲಿ ಕ್ಲೀನ್ ಚಿಟ್ ​ ಖುಷಿಯಲ್ಲಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ನಿರಾಸೆಯಾಗಿದೆ . ಸದ್ಯ ನಡೆಯುತ್ತಿರುವ ಸಂಪುಟ ಪುನರ್ ​ ರಚನೆ ಪ್ರಕ್ರಿಯೆಯಲ್ಲಿ ಮತ್ತೆ ಮಂತ್ರಿಯಾಗುವ ಆಸೆ ರಮೇಶ್ ಜಾರಕಿಹೊಳಿ ಇಟ್ಟುಕೊಂಡಿದ್ದರು ಎನ್ನಲಾಗಿತ್ತು . ಆದ್ರೆ ಪ್ರಕರಣದಲ್ಲಿ ಬಿ ರಿಪೋರ್ಟ್ ಪ್ರಕ್ರಿಯೆಯನ್ನ ಎಸ್ ‌ ಐಟಿ ಮುಂದೂಡಿಕೆ ಮಾಡಿದೆ . ಪ್ರಕರಣದ ಪ್ರಗತಿ ವರದಿಯನ್ನ ಹೈಕೋರ್ಟ್ ​​ ಗೆ ನೀಡಲಾಗಿದ್ದು ಮುಂದಿನ 17 ನೇ ತಾರೀಕು ಮತ್ತೊಂದು ಸ್ಟೇಟಸ್ ರಿಪೋರ್ಟ್ ನೀಡಬೇಕಿದೆ

ಸೆಕ್ಸ್ ಸಿಡಿ‌ ಪ್ರಕರಣ: ಜಾರಕಿಹೋಳಿಗೆ ಮತ್ತೆ ನಿರಾಸೆ Read More »

ಜು.1 ರಿಂದಲೇ ಶೈಕ್ಷಣಿಕ ವರ್ಷಾರಂಭ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್​ ಮಾಡುವುದಾಗಿ ಶುಕ್ರವಾರ ಮಹತ್ವದ ನಿರ್ಧಾರ ಪ್ರಕಟಿಸಿದೆ ರಾಜ್ಯ ಶಿಕ್ಷಣ ಇಲಾಖೆ. ದ್ವಿತೀಯ ಪಿಯುಸಿ ಎಕ್ಸಾಂ ರದ್ದಾಗಿರುವುದು ಇತಿಹಾಸದಲ್ಲೇ ಇದೇ ಮೊದಲ ಬಾರಿ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಾದರೂ ಪರೀಕ್ಷೆಗೆ ಹಾಜರಾದ ಎಲ್ಲ ಮಕ್ಕಳನ್ನೂ ಪಾಸ್​ ಮಾಡಲಾಗುತ್ತೆ. ಇದರ ಜತೆಗೆ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಯಾವಾಗ ಆರಂಭ ಆಗುತ್ತೆ ಎಂಬ ಗೊಂದಲಕ್ಕೂ ಇಂದು ತೆರೆಬಿದ್ದಿದೆ. ಜುಲೈ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ

ಜು.1 ರಿಂದಲೇ ಶೈಕ್ಷಣಿಕ ವರ್ಷಾರಂಭ Read More »