ರಾಜ್ಯ

ರಾಜ್ಯದಲ್ಲಿ ‌ದ್ವಿತೀಯ‌ ಪಿಯುಸಿ ಪರೀಕ್ಷೆ ರದ್ದು: ಸಚಿವ ಸುರೇಶ್ ಕುಮಾರ್

ಬೆಂಗಳೂರು: ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ಪರೀಕ್ಷೆ ಇಲ್ಲದೇ ಗ್ರೇಡ್ ಮೂಲಕ ಬಡ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ‌ದ್ವಿತೀಯ‌ ಪಿಯುಸಿ ಪರೀಕ್ಷೆ ರದ್ದು: ಸಚಿವ ಸುರೇಶ್ ಕುಮಾರ್ Read More »

ಹೀಗೂ ಉಂಟು: ನಾಯಿಯನ್ನು‌ ವರಿಸಿದ ಯುವತಿ: ನಂತರ ಏನಾಯ್ತು ಗೊತ್ತಾ?

ಎಂಥ ಅಚ್ಚರಿಯಲ್ಲವೇ! ಎಲ್ಲಾದರೂ ಉಂಟೇ? ನಮಗೆ ತಿಳಿದಿರುವ ಹಾಗೆ ಮದುವೆ ಎಂದರೆ ಮನುಷ್ಯರ ನಡುವೆ ಆಗುತ್ತದೆ. ಆದರೆ ಇಲ್ಲೊಂದು ವಿಶೇಷ ಸುದ್ದಿ ಇದೆ. ಪ್ರಪಂಚದಲ್ಲಿ ಈ ರೀತಿಯ ವಿಚಿತ್ರಗಳು ನಡೆಯುತ್ತಿರುತ್ತವೆ .ಇಂತಹ ಅನಿರೀಕ್ಷಿತ ಸನ್ನಿವೇಶಗಳು ಸಾಮಾನ್ಯ ಜನರಿಗೆ ಪ್ರೇರೇಪಿಸುತ್ತಿರುತ್ತವೆ. ಇಂತಹ ಸುದ್ದಿ ಗಳನ್ನು ಓದಿದಾಗ ಇಂತಹದ್ದೂ ಸಾಧ್ಯವೇ ಎಂಬ ಪ್ರಶ್ನೆ ಎದುರಾಗುತ್ತದೆ. ಈ ಸಂಗತಿ ಓದಿದರೇ ನಿಜಕ್ಕೂ ಆಶ್ಚರ್ಯವೆನಿಸಬಹುದು. ಈ ಘಟನೆ ಜಾರ್ಖಂಡ್ ನಲ್ಲಿ ಮಂಗಳಿ ಮುಂಡ ಎಂಬ 18 ವರ್ಷದ ಯುವತಿ ನಾಯಿಯೊಂದನ್ನು ಮದುವೆಯಾದ ವಿಚಿತ್ರ

ಹೀಗೂ ಉಂಟು: ನಾಯಿಯನ್ನು‌ ವರಿಸಿದ ಯುವತಿ: ನಂತರ ಏನಾಯ್ತು ಗೊತ್ತಾ? Read More »

ಹಿರಿಯ ನಟಿ ಬಿ.ಜಯಾ ವಿಧಿವಶ: ಕಂಬನಿ ಮಿಡಿದ ಚಿತ್ರರಂಗ

ಬೆಂಗಳೂರು. ಸ್ಯಾಂಡಲ್​ವುಡ್​ ನ ಹಿರಿಯ ನಟಿ ಬಿ. ಜಯಾ ಮೃತರಾಗಿದ್ದಾರೆ. ಗುರುವಾರ (ಜೂನ್​ 3) ಮಧ್ಯಾಹ್ನ 3:30 ಸುಮಾರಿಗೆ ಕೊನೆಯುಸಿರೆಳೆದರು. ಕೆಲ ದಿನದಿಂದ ಜಯಾ ಅವರಿಗೆ ವಯೋಸಹಜ ಅನಾರೋಗ್ಯ ಕಾಡುತ್ತಿತ್ತು. ಹೀಗಾಗಿ ಜಯಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಆರು ದಶಕಗಳ ಕಾಲ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದ ಅವರು, 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಈಗ ಅವರನ್ನು ಚಿತ್ರರಂಗ ಕಳೆದುಕೊಂಡಿದ್ದು, ಅವರ ನಿಧನಕ್ಕೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.

ಹಿರಿಯ ನಟಿ ಬಿ.ಜಯಾ ವಿಧಿವಶ: ಕಂಬನಿ ಮಿಡಿದ ಚಿತ್ರರಂಗ Read More »

ರಾಜ್ಯದಲ್ಲಿ ಜೂ.14ರವರೆಗೆ ಲಾಕ್ ಡೌನ್ ವಿಸ್ತರಣೆ: ಎರಡನೇ ಕೋವಿಡ್ ಪ್ಯಾಕೇಜ್ ಘೋಷಿಸಿದ ಸಿ.ಎಂ

ಬೆಂಗಳೂರು. ಜೂ.3: ಸಾಂಕ್ರಾಮಿಕ ಸೋಂಕನ್ನು ಸಂಪೂರ್ಣ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಕ್ತವೆಂದು ಪರಿಗಣಿಸಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿದ್ದ ಲಾಕ್ ಡೌನ್ ಅನ್ನು ಜೂ.14ರವರೆಗೆ ವಿಸ್ತರಿಸಿ ಸಿಎಂ ಯಡಿಯೂರಪ್ಪ ಆದೇಶಸಿದ್ದಾರೆ. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ ಮೇರೆಗೆ ಮುಂದುವರೆಸೋದು ಸೂಕ್ತ ಎಂದು ಪರಿಗಣಿಸಿ ಜೂ.14ರವರೆಗೆ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ

ರಾಜ್ಯದಲ್ಲಿ ಜೂ.14ರವರೆಗೆ ಲಾಕ್ ಡೌನ್ ವಿಸ್ತರಣೆ: ಎರಡನೇ ಕೋವಿಡ್ ಪ್ಯಾಕೇಜ್ ಘೋಷಿಸಿದ ಸಿ.ಎಂ Read More »

ನವವಿವಾಹಿತೆ ಮತ್ತು ಮಾಜಿ ಪ್ರಿಯಕರ ಆತ್ಮಹತ್ಯೆ,

ಬೆಳಗಾವಿ: ಇವರಿಬ್ಬರು ಒಂದಲ್ಲ, ಎರಡಲ್ಲ ಬರೋಬ್ಬರಿ ಐದು ವರ್ಷದಿಂದ ಪರಸ್ಪರ ಇವರಿಬ್ಬರೂ ಪ್ರೀತಿ ಮಾಡುತ್ತಿದ್ದರು. ಒಬ್ಬರನ್ನೊಬ್ಬರು ಬಿಟ್ಟಿ ಬದುಕಲಾರದಷ್ಟು ಹತ್ತಿರವಾಗಿದ್ದರು. ಆದರೂ ಒಂದು ತಿಂಗಳ ಹಿಂದಷ್ಟೇ ಯುವತಿಯನ್ನ ಕುಟುಂಬಸ್ಥರು ಬೇರೊಬ್ಬನೊಂದಿಗೆ ಮದುವೆ ಮಾಡಿಬಿಟ್ಟರು. ಇದೀಗ ಗಂಡನ ಮನೆಯಲ್ಲಿರಬೇಕಿದ್ದ ನವವಿವಾಹಿತೆ, ಪ್ರಿಯಕರನೊಟ್ಟಿಗೆ ದುರಂತ ಅಂತ್ಯ ಕಂಡಿದ್ದಾಳೆ. ಇಂತಹ ದುರಂತ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಿಂಧೋಗಿಯಲ್ಲಿ ನಡೆದಿದೆ. ಪಂಚಪ್ಪ ಕಣವಿ(25) ಮತ್ತು ಸಕ್ಕುಬಾಯಿ ಕರಿಗಾರ(23) ಮೃತ ಪ್ರೇಮಿಗಳು.ಆದರೂ ಮತ್ತೊಬ್ಬನೊಂದಿಗೆ ಕುಟುಂಬಸ್ಥರು ಸಕ್ಕುಬಾಯಿಗೆ ಒಂದು ತಿಂಗಳ ಹಿಂದೆ ಮದುವೆ ಮಾಡಿದ್ದರು.

ನವವಿವಾಹಿತೆ ಮತ್ತು ಮಾಜಿ ಪ್ರಿಯಕರ ಆತ್ಮಹತ್ಯೆ, Read More »

ಜೂ. 14ರವರೆಗೆ ರಾಜ್ಯದಲ್ಲಿ ಲಾಕ್ ಡೌನ್? ಏನಿರುತ್ತೆ? ಏನಿರಲ್ಲ…

ಬೆಂಗಳೂರು, ಜೂನ್ 3: ಕೋವಿಡ್19 ಎರಡನೇ ಅಲೆ ನಿಯಂತ್ರಣಕ್ಕಾಗಿ ಕರ್ನಾಟಕದಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ವಿಸ್ತರಣೆ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದ್ದು, ಈ ಕುರಿತಂತೆ ಅಧಿಕೃತ ಪ್ರಕಟಣೆ, ಮಾರ್ಗಸೂಚಿ ಶೀಘ್ರವೇ ಹೊರ ಬರಲಿದೆ. ಇಂದು ಸಂಜೆ 5 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿವರವಾಗಿ ತಿಳಿಸಲಿದ್ದಾರೆ. ಕರ್ನಾಟಕದಲ್ಲಿ ಕೊರೊನಾ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ಮೇ 10 ರಿಂದ 14ರ ತನಕ ಲಾಕ್‌ಡೌನ್ ಮಾಡಲಾಗಿತ್ತು. ಪುನಃ ಮೇ 24ರಿಂದ ಜೂನ್ 7ರ ತನಕ ಲಾಕ್‌ಡೌನ್ ಮುಂದುವರೆದಿದೆ. ಈಗ

ಜೂ. 14ರವರೆಗೆ ರಾಜ್ಯದಲ್ಲಿ ಲಾಕ್ ಡೌನ್? ಏನಿರುತ್ತೆ? ಏನಿರಲ್ಲ… Read More »

“ಕೆ”ಎಸ್ಆರ್ಟಿಸಿ ಕೇರಳ ಪಾಲು | ಹೆಸರು ಬದಲಾಯಿಸಿಕೊಳ್ಳಬೇಕೇ ಕರ್ನಾಟಕ ಸಾರಿಗೆ ಸಂಸ್ಥೆ..?

ಬೆಂಗಳೂರು: ಕೇರಳ ರಾಜ್ಯ ಸಾರಿಗೆ ಸಂಸ್ಥೆ ಮಾತ್ರ ಕೆ ಎಸ್ ಆರ್ ಟಿ ಸಿ ಲೋಗೋ ಮತ್ತು ಹೆಸರು ಬಳಸಬಹುದೆಂದು ಭಾರತ ಸರಕಾರದ ಟ್ರೇಡ್ಮಾರ್ಕ್ ರಿಜಿಸ್ಟ್ರಿ ಆದೇಶ ಹೊರಡಿಸಿದೆ. ಇದರಿಂದ ಕರ್ನಾಟಕ ಸಾರಿಗೆ ಸಂಸ್ಥೆ ಗೆ ಕೆಎಸ್ಆರ್ಟಿಸಿ ಹೆಸರು ಮತ್ತು ಲೋಗೋ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಕೇರಳ ಕೆಎಸ್ಆರ್ಟಿಸಿ ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು, ಇನ್ನು ಕರ್ನಾಟಕ ಕೆಎಸ್ಆರ್ಟಿಸಿ ಅಧಿಕಾರಿಗಳು ನಮಗಿನ್ನೂ ಯಾವುದೇ ಮಾಹಿತಿ ಬಂದಿಲ್ಲ ಎಂದು ತಿಳಿಸಿದ್ದಾರೆ. ಒಂದು ವೇಳೆ ಈ ಆದೇಶ ಅಧಿಕೃತವೇ

“ಕೆ”ಎಸ್ಆರ್ಟಿಸಿ ಕೇರಳ ಪಾಲು | ಹೆಸರು ಬದಲಾಯಿಸಿಕೊಳ್ಳಬೇಕೇ ಕರ್ನಾಟಕ ಸಾರಿಗೆ ಸಂಸ್ಥೆ..? Read More »

ಆರೋಗ್ಯ ರಕ್ಷಣೆಗೆ ಸೈಕಲ್ ತುಳಿಯೋಣ : ವಿಶ್ವ ಸೈಕಲ್ ದಿನ ವಿಶೇಷ

ಕಳೆದೆರಡು ವರ್ಷದಿಂದ ಕೊರೋನಾ ಮಹಾಮಾರಿ ಹಾವಳಿಯಲ್ಲಿ ಬೈಸಿಕಲ್‌ನ ಟ್ರಿಣ್‌ ಟ್ರಿಣ್‌ ಬೆಲ್‌ ಸದ್ದು ಜಗತ್ತಿನಾದ್ಯಂತ ಬಲು ಜೋರಾಗಿ ಕೇಳಿಸುತ್ತಿದೆ! ಸದೃಢ ಶ್ವಾಸಕೋಶ ಕೊರೋನಾ ವೈರಸ್‌ ಅನ್ನು ಹಿಮ್ಮೆಟ್ಟಿಸುತ್ತದೆ ಎನ್ನುವ ಸತ್ಯ ಗೊತ್ತಾಗುತ್ತಿದ್ದಂತೆ ಬಡವರು, ಶ್ರೀಮಂತರು ಎನ್ನುವ ಭೇದ ಬದಿಗಿಟ್ಟು ಜನತೆ ಬೈಸಿಕಲ್‌ ತುಳಿಯುತ್ತಿದ್ದಾರೆ. ಸೈಕಲ್‌ ರೈಡ್ ವೈರಸ್‌ ಸೋಂಕಿಗೆ ಒಳಗಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ. ರಕ್ತದಲ್ಲಿನ ಕೊಲೆಸ್ಟ್ರಾಲ್‌ ಮಟ್ಟವನ್ನು ಕಡಿಮೆ ಮಾಡುತ್ತದೆ ಎನ್ನುತ್ತಾರೆ ತಜ್ಞರು. ಹಿಂದೆ ಮನೆಗಳಲ್ಲಿ ಎಲ್ಲಾ ವಯೋಮಾನದರು ಬಳಸುವ ಏಕೈಕ ಸಾಧನವಾಗಿದ್ದ ಸೈಕಲ್‌ ಸ್ಥಾನವನ್ನು

ಆರೋಗ್ಯ ರಕ್ಷಣೆಗೆ ಸೈಕಲ್ ತುಳಿಯೋಣ : ವಿಶ್ವ ಸೈಕಲ್ ದಿನ ವಿಶೇಷ Read More »

ಲಾಕ್ ಡೌನ್ ಭವಿಷ್ಯ ಶನಿವಾರಕ್ಕೆ ಮುಂದೂಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಜೂನ್​ 7ರ ನಂತರ ಬಿಗಿ ಕ್ರಮದೊಂದಿಗೆ ಲಾಕ್​ಡೌನ್ ಮುಂದುವರಿಕೆ ಖಚಿತವಾಗಿದ್ದು, ಎಷ್ಟು ದಿನ ವಿಸ್ತರಣೆ ಎಂಬ ನಿರ್ಧಾರವನ್ನು ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ಬಳಿಕ ಪ್ರಕಟಿಸಲಾಗುವುದು ಎಂದು ಸಿ.ಎಂ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ತಜ್ಞರ ಸಮಿತಿ ಮುಖ್ಯಸ್ಥರು, ಸಚಿವರು, ಹಾಗೂ ಪ್ರಮುಖ ಅಧಿಕಾರಿ ವರ್ಗದವರ ಜೊತೆ ಸಭೆ ನಡೆಸಿದ ಬಳಿಕ ಈ ವಿಚಾರ ತಿಳಿಸಿದ್ದಾರೆ. ನಾಳೆಯಿಂದ ರಫ್ತು ಆಧಾರಿತ ಕೈಗಾರಿಕೆಗಳಿಗೆ ಅವಕಾಶ ನೀಡಲಾಗಿದೆ. ಅಲ್ಲದೇ ಇನ್ನೆರಡು ದಿನಗಳಲ್ಲಿ ಎರಡನೇ ಪ್ಯಾಕೇಜ್ ಘೋಷಣೆ ಎಂದು ತಿಳಿಸಿದ್ದಾರೆ.ಅಗತ್ಯ

ಲಾಕ್ ಡೌನ್ ಭವಿಷ್ಯ ಶನಿವಾರಕ್ಕೆ ಮುಂದೂಡಿದ ಸಿಎಂ Read More »

ಎಕ್ಸ್ ಕ್ಲೂಸಿವ್ ಸಮಾಚಾರ : ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ | ಸೈಲೆಂಟ್ ಸಚಿವರಿಗೆ ಗೇಟ್ ಪಾಸ್.!

ಬೆಂಗಳೂರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಾದ ಚರ್ಚೆ ನಡೆದಿರುವ ಹೊತ್ತಲ್ಲೇ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದಿಢೀರ್ ದೆಹಲಿಗೆ ತೆರಳಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ರಹಸ್ಯ ಚರ್ಚೆ ನಡೆಸಿದ್ದು, ಹಲವು ಸಚಿವರು ಮನೆಗೆ ತೆರಳುವ ಸಾಧ್ಯತೆ ಇದೆ. ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಕುರಿತಾಗಿ ಅವರು ಸಮಾಲೋಚನೆ ನಡೆಸಿದ್ದು, ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಚಿವ ಸಂಪುಟ ಪುನಾರಚನೆ, ರಾಜ್ಯ ಬಿಜೆಪಿ ಪದಾಧಿಕಾರಿಗಳ ಬದಲಾವಣೆ ಕುರಿತಾಗಿ ಚರ್ಚೆ ನಡೆದಿದೆ ಎಂದು

ಎಕ್ಸ್ ಕ್ಲೂಸಿವ್ ಸಮಾಚಾರ : ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ | ಸೈಲೆಂಟ್ ಸಚಿವರಿಗೆ ಗೇಟ್ ಪಾಸ್.! Read More »