ರಾಜ್ಯ

ಆರೋಗ್ಯ ರಕ್ಷಣೆಗೆ ಸೈಕಲ್ ತುಳಿಯೋಣ : ವಿಶ್ವ ಸೈಕಲ್ ದಿನ ವಿಶೇಷ

ಕಳೆದೆರಡು ವರ್ಷದಿಂದ ಕೊರೋನಾ ಮಹಾಮಾರಿ ಹಾವಳಿಯಲ್ಲಿ ಬೈಸಿಕಲ್‌ನ ಟ್ರಿಣ್‌ ಟ್ರಿಣ್‌ ಬೆಲ್‌ ಸದ್ದು ಜಗತ್ತಿನಾದ್ಯಂತ ಬಲು ಜೋರಾಗಿ ಕೇಳಿಸುತ್ತಿದೆ! ಸದೃಢ ಶ್ವಾಸಕೋಶ ಕೊರೋನಾ ವೈರಸ್‌ ಅನ್ನು ಹಿಮ್ಮೆಟ್ಟಿಸುತ್ತದೆ ಎನ್ನುವ ಸತ್ಯ ಗೊತ್ತಾಗುತ್ತಿದ್ದಂತೆ ಬಡವರು, ಶ್ರೀಮಂತರು ಎನ್ನುವ ಭೇದ ಬದಿಗಿಟ್ಟು ಜನತೆ ಬೈಸಿಕಲ್‌ ತುಳಿಯುತ್ತಿದ್ದಾರೆ. ಸೈಕಲ್‌ ರೈಡ್ ವೈರಸ್‌ ಸೋಂಕಿಗೆ ಒಳಗಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ. ರಕ್ತದಲ್ಲಿನ ಕೊಲೆಸ್ಟ್ರಾಲ್‌ ಮಟ್ಟವನ್ನು ಕಡಿಮೆ ಮಾಡುತ್ತದೆ ಎನ್ನುತ್ತಾರೆ ತಜ್ಞರು. ಹಿಂದೆ ಮನೆಗಳಲ್ಲಿ ಎಲ್ಲಾ ವಯೋಮಾನದರು ಬಳಸುವ ಏಕೈಕ ಸಾಧನವಾಗಿದ್ದ ಸೈಕಲ್‌ ಸ್ಥಾನವನ್ನು […]

ಆರೋಗ್ಯ ರಕ್ಷಣೆಗೆ ಸೈಕಲ್ ತುಳಿಯೋಣ : ವಿಶ್ವ ಸೈಕಲ್ ದಿನ ವಿಶೇಷ Read More »

ಲಾಕ್ ಡೌನ್ ಭವಿಷ್ಯ ಶನಿವಾರಕ್ಕೆ ಮುಂದೂಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಜೂನ್​ 7ರ ನಂತರ ಬಿಗಿ ಕ್ರಮದೊಂದಿಗೆ ಲಾಕ್​ಡೌನ್ ಮುಂದುವರಿಕೆ ಖಚಿತವಾಗಿದ್ದು, ಎಷ್ಟು ದಿನ ವಿಸ್ತರಣೆ ಎಂಬ ನಿರ್ಧಾರವನ್ನು ಶನಿವಾರ ಮತ್ತೊಂದು ಸುತ್ತಿನ ಮಾತುಕತೆ ಬಳಿಕ ಪ್ರಕಟಿಸಲಾಗುವುದು ಎಂದು ಸಿ.ಎಂ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ತಜ್ಞರ ಸಮಿತಿ ಮುಖ್ಯಸ್ಥರು, ಸಚಿವರು, ಹಾಗೂ ಪ್ರಮುಖ ಅಧಿಕಾರಿ ವರ್ಗದವರ ಜೊತೆ ಸಭೆ ನಡೆಸಿದ ಬಳಿಕ ಈ ವಿಚಾರ ತಿಳಿಸಿದ್ದಾರೆ. ನಾಳೆಯಿಂದ ರಫ್ತು ಆಧಾರಿತ ಕೈಗಾರಿಕೆಗಳಿಗೆ ಅವಕಾಶ ನೀಡಲಾಗಿದೆ. ಅಲ್ಲದೇ ಇನ್ನೆರಡು ದಿನಗಳಲ್ಲಿ ಎರಡನೇ ಪ್ಯಾಕೇಜ್ ಘೋಷಣೆ ಎಂದು ತಿಳಿಸಿದ್ದಾರೆ.ಅಗತ್ಯ

ಲಾಕ್ ಡೌನ್ ಭವಿಷ್ಯ ಶನಿವಾರಕ್ಕೆ ಮುಂದೂಡಿದ ಸಿಎಂ Read More »

ಎಕ್ಸ್ ಕ್ಲೂಸಿವ್ ಸಮಾಚಾರ : ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ | ಸೈಲೆಂಟ್ ಸಚಿವರಿಗೆ ಗೇಟ್ ಪಾಸ್.!

ಬೆಂಗಳೂರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಾದ ಚರ್ಚೆ ನಡೆದಿರುವ ಹೊತ್ತಲ್ಲೇ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದಿಢೀರ್ ದೆಹಲಿಗೆ ತೆರಳಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೊಂದಿಗೆ ರಹಸ್ಯ ಚರ್ಚೆ ನಡೆಸಿದ್ದು, ಹಲವು ಸಚಿವರು ಮನೆಗೆ ತೆರಳುವ ಸಾಧ್ಯತೆ ಇದೆ. ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಕುರಿತಾಗಿ ಅವರು ಸಮಾಲೋಚನೆ ನಡೆಸಿದ್ದು, ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಚಿವ ಸಂಪುಟ ಪುನಾರಚನೆ, ರಾಜ್ಯ ಬಿಜೆಪಿ ಪದಾಧಿಕಾರಿಗಳ ಬದಲಾವಣೆ ಕುರಿತಾಗಿ ಚರ್ಚೆ ನಡೆದಿದೆ ಎಂದು

ಎಕ್ಸ್ ಕ್ಲೂಸಿವ್ ಸಮಾಚಾರ : ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ಸಾಧ್ಯತೆ | ಸೈಲೆಂಟ್ ಸಚಿವರಿಗೆ ಗೇಟ್ ಪಾಸ್.! Read More »

ಬ್ರೇಕಿಂಗ್ ಸಮಾಚಾರ | ಜಾರಕಿಹೋಳಿ ಕಾಮಕಾಂಡ: ದಿನಕ್ಕೊಂದು ತಿರುವು ಪಡೆಯುತ್ತಿರುವ ಪ್ರಕರಣ | ಆರೋಪಿಗಳ ಜಾಮೀನು ಅರ್ಜಿ ಏನಾಯ್ತು ಗೊತ್ತಾ?

ಬೆಂಗಳೂರು : ಈಗಾಗಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾಮಪುರಾಣ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮದು ಒಪ್ಪಿತ ಸಂಬಂಧವಾಗಿತ್ತು ಎಂಬುದಾಗಿ ತಿಳಿಸಿದ್ದರು. ಈ ಮೂಲಕ ಸ್ಪೋಟಕ ಟ್ವಿಸ್ಟ್ ನೀಡಿದ್ದರು. ಇದಾದ ಬಳಿಕ ಈಗ ಮತ್ತೆ ಸಿಡಿ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಪಡೆದಿದೆ. ಎಸ್‌ಐಟಿ ಅಧಿಕಾರಿಗಳು, ಆರೋಪಿಗಳಿಗೆ ಜಾಮೀನು ನೀಡದಂತೆ ಕೋರ್ಟ್ ಗೆ ಸಲ್ಲಿಸಿರುವಂತ ಮನವಿ, ಅಚ್ಚರಿ ಮೂಡಿಸಿದೆ.ಹೌದು.. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ದಿನಕ್ಕೊಂದು ತಿರುವು ಪಡೆಯುತ್ತಿದೆಪ್ರಕರಣದ ಪ್ರಮುಖ ಆರೋಪಿಗಳಾದ ನರೇಶ್ ಗೌಡ,

ಬ್ರೇಕಿಂಗ್ ಸಮಾಚಾರ | ಜಾರಕಿಹೋಳಿ ಕಾಮಕಾಂಡ: ದಿನಕ್ಕೊಂದು ತಿರುವು ಪಡೆಯುತ್ತಿರುವ ಪ್ರಕರಣ | ಆರೋಪಿಗಳ ಜಾಮೀನು ಅರ್ಜಿ ಏನಾಯ್ತು ಗೊತ್ತಾ? Read More »

ಜೂ.7 ಕ್ಕೆ ಮುಗಿಯಲ್ಲ ಲಾಕ್ ಡೌನ್! ಸುಳಿವು ನೀಡಿದ ಬಿಎಸ್ ವೈ

ಬೆಂಗಳೂರು (ಜೂನ್ 2): ದೇಶಾದ್ಯಂತ ಕೊರೋನಾ ಅಬ್ಬರ ಹೆಚ್ಚಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಜೂನ್ 7ರವರೆಗೆ ಲಾಕ್​ಡೌನ್ ಜಾರಿಯಲ್ಲಿದೆ. ಅದಾದ ಬಳಿಕವೂ ಕರ್ನಾಟಕದಲ್ಲಿ ಲಾಕ್​ಡೌನ್ ವಿಸ್ತರಿಸಬೇಕೇ? ಬೇಡವೇ?, ಲಾಕ್​ಡೌನ್ ವಿಸ್ತರಣೆ ಮಾಡಿದರೆ ಅದರಿಂದ ಆಗುವ ತೊಂದರೆಗಳೇನು? ಮಾಡದಿದ್ದರೆ ಆಗುವ ಪರಿಣಾಮಗಳೇನು? ಎಂಬ ಬಗ್ಗೆ ತಜ್ಞರು ಮತ್ತು ತಾಂತ್ರಿಕ ಸಲಹಾ ಸಮಿತಿಯವರು ಈಗಾಗಲೇ ಸಿಎಂ ಯಡಿಯೂರಪ್ಪನವರಿಗೆ ವರದಿ ನೀಡಿದ್ದಾರೆ. ಇಂದು ಉನ್ನತ ಮಟ್ಟದ ತಜ್ಞರ ಜೊತೆ ತಮ್ಮ ಕೃಷ್ಣಾ ನಿವಾಸದಲ್ಲಿ ಸಂಜೆ 4.30ಕ್ಕೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ಬಳಿಕ,

ಜೂ.7 ಕ್ಕೆ ಮುಗಿಯಲ್ಲ ಲಾಕ್ ಡೌನ್! ಸುಳಿವು ನೀಡಿದ ಬಿಎಸ್ ವೈ Read More »

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ | ತಿರಸ್ಕಾರ ಭಾವನೆಯಿಂದ ಮನನೊಂದು ಕೃತ್ಯವೆಸಗಿದರೆ…?

ಚಾಮರಾಜನಗರ: ತಂದೆ-ತಾಯಿ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಮನೆಯ ನಾಲ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಮೂಕಹಳ್ಳಿ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಮಹದೇವಪ್ಪ(46), ಇವರ ಪತ್ನಿ ಮಂಗಳಮ್ಮ (35), ಮಕ್ಕಳಾದ ಜ್ಯೋತಿ (14) ಮತ್ತು ಶ್ರುತಿ (12) ಆತ್ಮಹತ್ಯೆ ಮಾಡಿಕೊಂಡವರು. ಇಂದು ಬೆಳಿಗ್ಗೆ ಮಹಾದೇವಪ್ಪ ಕೆಲಸಕ್ಕೆ ತೆರಳುವ ಮನೆಯವರು ಕೆಲಸಕ್ಕೆಂದು ಕರೆಯಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ಮದುವೆಯಾಗಿರುವ ತನ್ನ ಮಗಳಿಗೆ ಕರೆ ಮಾಡಿದ್ದ ಮಹದೇವಪ್ಪ ಸದ್ಯಕ್ಕೆ ಈ ಕಡೆ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ | ತಿರಸ್ಕಾರ ಭಾವನೆಯಿಂದ ಮನನೊಂದು ಕೃತ್ಯವೆಸಗಿದರೆ…? Read More »

ಶಿವಮೊಗ್ಗ: ನಿರ್ಬಂಧವಿದ್ದರೂ ಮೈದಾನಕ್ಕೆ ವಾಕಿಂಗ್ ಬಂದರು | ಪೊಲೀಸರಿಂದ ವಾಹನ ಸೀಜ್ | ವಾಕರ್ಸ್ ಲಾಕ್

ಶಿವಮೊಗ್ಗ: ನಿರ್ಬಂಧದ ನಡುವೆ ವಾಕಿಂಗ್ ಗೆ ಬಂದವರನ್ನು ಪೊಲೀಸರು ಬಂಧಿಸಿ ವಾಹನಗಳನ್ನು ವಶಪಡಿಸಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ನೆಹರು ಸ್ಟೇಡಿಯಮ್ ಅನ್ನು ಲಾಕ್ ಡೌನ್ ನಿಮಿತ್ತ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಾಮಾನ್ಯ ದಿನಗಳಲ್ಲಿ ಮೈದಾನದಲ್ಲಿ ಬೆಳಗಿನ ಜಾವ ವಾಕಿಂಗ್ ಮಾಡುತ್ತಿದ್ದವರು ಇಂದು ಸ್ಟೇಡಿಯಂ ಪಕ್ಕದಲ್ಲಿ ವಾಕಿಂಗ್ ಮಾಡಿದ್ದಾರೆ. ಇದು ಪೊಲೀಸರ ಗಮನಕ್ಕೆ ಬಂದಿದ್ದು, ಕೋವಿಡ್ ನಿಯಮ ಉಲ್ಲಂಘಿಸಿ ವಾಕಿಂಗ್ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿ ಅವರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು

ಶಿವಮೊಗ್ಗ: ನಿರ್ಬಂಧವಿದ್ದರೂ ಮೈದಾನಕ್ಕೆ ವಾಕಿಂಗ್ ಬಂದರು | ಪೊಲೀಸರಿಂದ ವಾಹನ ಸೀಜ್ | ವಾಕರ್ಸ್ ಲಾಕ್ Read More »

ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸಿ | ನೂತನ ವೈದ್ಯರಿಗೆ ಸಚಿವ ಸುಧಾಕರ್ ಕರೆ

ಬೆಂಗಳೂರು: ನೂತನವಾಗಿ ನೇಮಕಗೊಂಡ ಸರಕಾರಿ ವೈದ್ಯರುಗಳಿಗೆ ಆರೋಗ್ಯ ಸಚಿವ ಡಾ. ಸುಧಾಕರ್ ಸ್ವಾಗತ ಕೋರಿ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯವ್ಯಾಪಿ ಸರಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸಲು ಸರ್ಕಾರದ ವತಿಯಿಂದ ನೇಮಕವಾದ 715 ಹಿರಿಯ ತಜ್ಞ ವೈದ್ಯರು ಮತ್ತು 1,048 ಸಾಮಾನ್ಯ ವೈದ್ಯಾಧಿಕಾರಿಗಳನ್ನು ಉದ್ದೇಶಿಸಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಭಾಷಣ ಮಾಡಿದ್ದು, ಆರೋಗ್ಯ ಇಲಾಖೆಗೆ ಬರಮಾಡಿಕೊಂಡಿದ್ದಾರೆ. ಇಂದು ವರ್ಚುವಲ್ ವೇದಿಕೆಯ ಭಾಷಣದ ಮೂಲಕ ವೈದ್ಯರನ್ನು ಸ್ವಾಗತಿಸಿದ ಸಚಿವರು, ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸಿ ವೃತ್ತಿ ಘನತೆಯನ್ನು

ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸಿ | ನೂತನ ವೈದ್ಯರಿಗೆ ಸಚಿವ ಸುಧಾಕರ್ ಕರೆ Read More »

ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ವ್ಯತ್ಯಯ

ಬೆಂಗಳೂರು: ಮಾಜಿ ಸಿಎಂ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ವೈದ್ಯರ ಪರೀಕ್ಷೆಗೆ ಒಳಪಟ್ಟಿದ್ದಾರೆ. ನಿನ್ನೆ ರಾತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿತ್ತು. ನಂತರ ಅವರ ಆಪ್ತ ವೈದ್ಯ ಡಾ. ರವಿಕುಮಾರ್ ಅವರನ್ನು ಪರೀಕ್ಷಿಸಿದ್ದು, ಮನೆಯಲ್ಲಿಯೇ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಸಿದ್ದರಾಮಯ್ಯ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ವ್ಯತ್ಯಯ Read More »

ಮುಂದಿನ ವರ್ಷ 20,810 ಕೋಟಿ ಬೆಳೆಸಾಲ ಗುರಿ ಸಚಿವ ಸೋಮಶೇಖರ್

ಬೆಂಗಳೂರು: ಮುಂದಿನ ವರ್ಷ ರೈತರಿಗೆ 20,810 ಕೋಟಿಗೂ ಅಧಿಕ ನೀಡುವ ಗುರಿ ಹೊಂದಲಾಗಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಕಳೆದ ವರ್ಷ ಅಂದರೆ 2020-21 ನೇ ಸಾಲಿನಲ್ಲಿ 15,400 ಕೋಟಿಗೂ ಅಧಿಕ ಬೆಳೆಸಾಲ ವಿತರಿಸಲಾಗಿತ್ತು. ಈ ಬಾರಿ ಅಂದರೆ 2021-22 ನೇ ಸಾಲಿಗೆ ಈಗಾಗಲೇ ಗುರಿ ನಿಗದಿಪಡಿಸಲಾಗಿದ್ದು ಈ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಕೇಂದ್ರ ಸಹಕಾರಿ ಬ್ಯಾಂಕುಗಳಿಗೆ ನಿರ್ದೇಶನ ನೀಡಲಾಗಿದೆ. ಮೂರು ಕೋಟಿಗೂ ಅಧಿಕ ರೈತರು ಫಲಾನುಭವಿಗಳಾಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ ಎಂದು ಸಚಿವರು

ಮುಂದಿನ ವರ್ಷ 20,810 ಕೋಟಿ ಬೆಳೆಸಾಲ ಗುರಿ ಸಚಿವ ಸೋಮಶೇಖರ್ Read More »