ರಾಜ್ಯ

ಮಗುವಿನೊಂದಿಗೆ ಚಿಕಿತ್ಸೆಗೆ ಹೊರಟ ಮಹಿಳೆಯನ್ನು ಆಸ್ಪತ್ರೆಗೆ ತಲುಪಿಸಿದ ಪೊಲೀಸರು

ಹಾವೇರಿ: ತನ್ನ ಎರಡು ತಿಂಗಳ ಹಸುಗೂಸಿನೊಂದಿಗೆ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಲು ರಸ್ತೆ ಬದಿ ವಾಹನಕ್ಕಾಗಿ ಕಾಯುತ್ತಿದ್ದ ಮಹಿಳೆಯನ್ನು ಪೊಲೀಸರು ಆಸ್ಪತ್ರೆಗೆ ತಲುಪಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸಂಪೂರ್ಣ ಲಾಕ್ಡೌನ್ ಹೇರಲಾಗಿದ್ದು, ಯಾವುದೇ ವಾಹನ ಓಡಾಟವಿಲ್ಲದ ಸಮಯದಲ್ಲಿ ಮಗುವನ್ನು ಎತ್ತಿಕೊಂಡು ಆಸ್ಪತ್ರೆಗೆ ತೆರಳಲು ರಸ್ತೆ ಬದಿ ನಿಂತಿದ್ದ ಮಹಿಳೆಗೆ ಪೊಲೀಸರ ಸಹಕರಿಸಿ ಮಾನವೀಯತೆ ಮೆರೆದಿದ್ದಾರೆ.

ಮಗುವಿನೊಂದಿಗೆ ಚಿಕಿತ್ಸೆಗೆ ಹೊರಟ ಮಹಿಳೆಯನ್ನು ಆಸ್ಪತ್ರೆಗೆ ತಲುಪಿಸಿದ ಪೊಲೀಸರು Read More »

ಅಂದಿನ ಕಾರು ಚಾಲಕ ಇಂದಿನ ಸಾವಿರಾರು ಬಸ್ ಗಳ ಒಡೆಯ ಎಸ್ ಆರ್ ಎಸ್ ಬಸ್ ಮಾಲೀಕ ರಾಜಶೇಖರ್ ನಿಧನ

ರಾಮನಗರ: ಎಸ್ ಆರ್ ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥೆಯ ಸಂಸ್ಥಾಪಕ ಕೆ.ಟಿ. ರಾಜಶೇಖರ್ ನಿನ್ನೆ ನಿಧನ ಹೊಂದಿದ್ದಾರೆ. ಕಳೆದ ಹತ್ತು ದಿನಗಳ ಹಿಂದೆ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿತ್ತು,  ನಂತರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ಮೃತಪಟ್ಟಿದ್ದಾರೆ. 1943 ರಲ್ಲಿ ಜನಿಸಿದ ರಾಜಶೇಖರ್ ಆಟೋಮೊಬೈಲ್ ಡಿಪ್ಲೋಮಾ ವ್ಯಾಸಂಗದ ಬಳಿಕ ಆಟೋಮೊಬೈಲ್ ಕ್ಷೇತ್ರದಲ್ಲಿ ಹಲವು ಕಡೆ ದುಡಿದಿದ್ದರು. ಕೆಲವೆಡೆ ಚಾಲಕರಾಗಿಯೂ ದುಡಿದಿದ್ದ ಅವರು 1971 ರಲ್ಲಿ ಎಸ್ಆರ್ಎಸ್ ಎಂಬ ಹೆಸರಿನ ಸಾರಿಗೆ

ಅಂದಿನ ಕಾರು ಚಾಲಕ ಇಂದಿನ ಸಾವಿರಾರು ಬಸ್ ಗಳ ಒಡೆಯ ಎಸ್ ಆರ್ ಎಸ್ ಬಸ್ ಮಾಲೀಕ ರಾಜಶೇಖರ್ ನಿಧನ Read More »

ವಯಸ್ಸಾದಂತೆ ಇಲ್ಲಿ ಅವಳು ಅವನಾಗುತ್ತಾನೆ: ಲಾ ಸಲಿನಾಸ್ ಎಂಬ ವಿಚಿತ್ರ ಗ್ರಾಮ

ವಯಸ್ಸಾದಂತೆ ಜನರ ಲಿಂಗ ಬದಲಾಗುವ ಸ್ಥಳದ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ! ಡೊಮಿನಿಕನ್ ರಿಪಬ್ಲಿಕ್ನಲ್ಲಿ ಹುಡುಗಿಯರು ಹುಡುಗರಾಗಿ ಬೆಳೆಯುವ ಗ್ರಾಮವೊಂದಿದೆ. ಲಾ ಸಲಿನಾಸ್ ಹೆಸರಿನ ಈ ಗ್ರಾಮವನ್ನು ಜನರು ಶಾಪಗ್ರಸ್ತ ಗ್ರಾಮವೆಂದು ಪರಿಗಣಿಸುತ್ತಾರೆ. ಲಾ ಸೆಲಿನಾಸ್ (La Salinas) ಹೆಸರಿನ ಈ ಗ್ರಾಮದ ಹುಡುಗಿಯರು ತನ್ನ ವಯಸ್ಸಿನ 12 ವರ್ಷಕ್ಕೆ ತಿರುಗುತ್ತಿದ್ದಂತೆ ಯುವಕರಾಗಿ ಪರಿವರ್ತನೆಯಾಗುತ್ತಾರಂತೆ. (Girls to turn into Boys). ಈ ಗ್ರಾಮದ ಜನಸಂಖ್ಯೆ ಕೇವಲ 6 ಸಾವಿರ ಮಾತ್ರ. ಆದರೂ ಕೂಡ ಈ ಚಿಕ್ಕ

ವಯಸ್ಸಾದಂತೆ ಇಲ್ಲಿ ಅವಳು ಅವನಾಗುತ್ತಾನೆ: ಲಾ ಸಲಿನಾಸ್ ಎಂಬ ವಿಚಿತ್ರ ಗ್ರಾಮ Read More »

ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ: ಸಿಎಂ

ಬೆಂಗಳೂರು: ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರಿಗೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿದೆ. ಹಾಗಾಗಿ ಇದಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಿದ್ದೇವೆ. ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗುತ್ತಿದ್ದು ಸರ್ಕಾರ ಚಿಕಿತ್ಸಾ ವೆಚ್ಚ ಭರಿಸಲಿದೆ ಎಂದು ಅವರು ಹೇಳಿದ್ದಾರೆ. ‘ಸಾರ್ವಜನಿಕರು ಕೋವಿಡ್ ಹರಡುವಿಕೆ ತಡೆಯಲು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ

ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ: ಸಿಎಂ Read More »

ಮತ್ತೆ 15 ದಿನ ರಾಜ್ಯ ಲಾಕ್: ಏನೇನಿರುತ್ತೆ? ಏನಿರಲ್ಲ?ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು.ಮೇ21: ರಾಜ್ಯದಲ್ಲಿ ಮೇ.24ರಿಂದ ಜೂನ್ 7ರವರೆಗೆ ವಿಸ್ತರಣೆಗೊಂಡಿರುವಂತ ಸಂಪೂರ್ಣ ಲಾಕ್ ಡೌನ್ ಸಂದರ್ಭದಲ್ಲಿ ಯಾವುದಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಸಂಪೂರ್ಣ ಮಾಹಿತಿ. ಯಾವುದಕ್ಕೆ ಅನುಮತಿ: ಕೋವಿಡ್ ಸುರಕ್ಷಾ ನಿಯಮಗಳೊಂದಿಗೆ ಎಲ್ಲಾ ಬಗೆಯ ನಿರ್ಮಾಣ, ದುರಸ್ತಿ ಚಟುವಟಿಕೆಗಳಿಗೆ ಅನುಮತಿ.ಮುಂಗಾರು ಪೂರ್ವ ಕೃಷಿ ಚಟುವಟಿಕೆಗಳಿಗೂ ಯಾವುದೇ ನಿರ್ಬಂಧವಿಲ್ಲ.ಎಲ್ಲಾ ಬಗೆಯ ಕೈಗಾರಿಕೆಗಳು, ಸಂಸ್ಥೆಗಳು, ಉತ್ಪಾದನಾ ಘಟಕಗಳು ಕಾರ್ಯನಿರ್ವಹಿಸಬಹುದು.ಸಿಬ್ಬಂದಿ ಓಡಾಟಕ್ಕೆ ಸಂಸ್ಥೆಗಳಿಂದ ಪಡೆದುಕೊಂಡ ಐಡಿ ಕಾರ್ಡ್ ತೋರಿಸುವುದು ಕಡ್ಡಾಯ.ಪಡಿತರ ಅಂಗಡಿ ಹಾಗೂ ದಿನಸಿ, ಹಣ್ಣು ತರಕಾರಿ, ಹಾಲಿನ ಬೂತ್, ಮೀನು-ಮಾಂಸ, ಪಶು

ಮತ್ತೆ 15 ದಿನ ರಾಜ್ಯ ಲಾಕ್: ಏನೇನಿರುತ್ತೆ? ಏನಿರಲ್ಲ?ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಬ್ರೇಕಿಂಗ್ ಸಮಾಚಾರ: ರಾಜ್ಯದಲ್ಲಿ ಜೂ.7ರ ವರೆಗೆ ಮತ್ತೆ ಲಾಕ್ ಡೌನ್ ವಿಸ್ತರಣೆ

ಬೆಂಗಳೂರು: ಮೇ.21: ರಾಜ್ಯದಲ್ಲಿ ಇನ್ನೂ ನಿರೀಕ್ಷಿತ ಮಟ್ಟದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್​ಡೌನ್​​ನ ವಿಸ್ತರಿಸಿದೆ. ಮೇ 24ರವರೆಗೆ ಲಾಕ್​ಡೌನ್​ ಘೋಷಿಸಿದ್ದ ಸಿಎಂ ಬಿ.ಎಸ್​. ಯಡಿಯೂರಪ್ಪ ಈಗ ಲಾಕ್​​ಡೌನ್​​ನ ಜೂ.7ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಸಚಿವರ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಎದುರು ಮತ್ತೆ 14 ದಿನಗಳ ಕಾಲ ರಾಜ್ಯಾದ್ಯಂತ ಟಫ್​ ಲಾಕ್​ಡೌನ್​ ಮುಂದುವರೆಯಲಿದೆ ಎಂದು ಘೋಷಿಸಿದರು. ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಲಾಕ್‌ಡೌನ್ ವಿಚಾರದಲ್ಲಿ ಕೆಲ ನಿರ್ಧಾರ

ಬ್ರೇಕಿಂಗ್ ಸಮಾಚಾರ: ರಾಜ್ಯದಲ್ಲಿ ಜೂ.7ರ ವರೆಗೆ ಮತ್ತೆ ಲಾಕ್ ಡೌನ್ ವಿಸ್ತರಣೆ Read More »

ರಾಜ್ಯದಲ್ಲಿ ಮತ್ತೆರಡು ವಾರ ಲಾಕ್ ಡೌನ್!? ಸಂಜೆ ಸಭೆಯಲ್ಲಿ ನಿರ್ಧಾರ ಸಾದ್ಯತೆ

ಬೆಂಗಳೂರು.ಮೇ.21: ರಾಜ್ಯದಲ್ಲಿ ಕೊರೋನಾ ಮಹಾಮಾರಿ ಮುಂದುವರಿದಿದ್ದು ಈ ನಿಟ್ಟಿನಲ್ಲಿ ಮುಂದಿನ ಎರಡು ವಾರ ಲಾಕ್ ಡೌನ್ ಮಾಡುವುದು ಬಹುತೇಕ ಖಚಿತವಾಗಿದೆ.ವಿಧಾನಸೌಧದಲ್ಲಿಂದು ರಾಜ್ಯದ ಸ್ಥಿತಿಗತಿಗಳ ಬಗ್ಗೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಮಹತ್ವದ ಸಭೆ ನಡೆದಿದ್ದು, ಈ ಸಭೆಯಲ್ಲಿ ಒಮ್ಮತ ಅಭಿಪ್ರಾಯ ವ್ಯಕ್ತವಾಗಿದೆ. ವಿಪತ್ತು ನಿರ್ವಹಣಾ ಸಮಿತಿ ಯ ಅಧಿಕಾರಿಗಳು ರಾಜ್ಯದ ಸ್ಥಿತಿಗತಿಯ ಬಗ್ಗೆ ಗಂಭೀರ ಪ್ರಸ್ತಾಪ ಮಾಡಿದ್ದು, ರಾಜ್ಯದ ಭವಿಷ್ಯದ ದೃಷ್ಟಿಯಿಂದ 15 ದಿನ ಲಾಕ್ ಡೌನ್ ಬೇಕು ಎಂದು ಒತ್ತಾಯಿಸಿದ್ದಾರೆ. ಲಾಕ್ ಡೌನ್ ತೆರವಿನಿಂದ

ರಾಜ್ಯದಲ್ಲಿ ಮತ್ತೆರಡು ವಾರ ಲಾಕ್ ಡೌನ್!? ಸಂಜೆ ಸಭೆಯಲ್ಲಿ ನಿರ್ಧಾರ ಸಾದ್ಯತೆ Read More »

ಖಾಸಗಿ ಆಂಬ್ಯುಲೆನ್ಸ್ ಗಳಿಗೆ ಪ್ರತಿ ಕಿಲೋಮಿಟರ್‌ಗೆ ದರ ನಿಗದಿ

ಬೆಂಗಳೂರು, ಮೇ ೨೧: ಕೊರೊನಾ ವೈರಸ್‌ನ ಎರಡನೇ ಅಲೆಯಲ್ಲಿ ನಲುಗಿರುವ ಸಂದರ್ಭದಲ್ಲಿ ಕೆಲ ಖಾಸಗಿ ಆಂಬ್ಯುಲೆನ್ಸ್ಗಳು ಬೇಕಾ ಬಿಟ್ಟಿ ಬಾಡಿಗೆಗಳನ್ನು ಪಡೆದುಕೊಳ್ಳುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಉದ್ದೇಶದಿಂದ ಖಾಸಗಿ ಆಂಬ್ಯುಲೆನ್ಸ್ಗಳಿಗೆ ರಾಜ್ಯಸರ್ಕಾರ ದರವನ್ನು ನಿಗದಿಪಡಿಸಿ ಆದೇಶವನ್ನು ಹೊರಡಿಸಿದೆ. ಎರಡು ವಿಭಾಗದಲ್ಲಿ ಆಂಬ್ಯುಲೆನ್ಸ್ಗಳಿಗೆ ದರವನ್ನು ನಿಗದಿ ಪಡಿಸಲಾಗಿದ್ದು, ಸಾಮಾನ್ಯ ಆಂಬ್ಯುಲೆನ್ಸ್ಗಳಿಗೆ (ಪೇಶೆಂಟ್ ಟ್ರಾನ್ಸ್ಪೋರ್ಟ್ ಆಂಬ್ಯುಲೆನ್ಸ್)ಮೊದಲ ೧೦ ಕಿ.ಮೀಟರ್‌ಗಳಿಗೆ ೧೫೦೦ ರೂ.ಗರಿಷ್ಟದರವನ್ನು ನಿಗದಿಗೊಳಿಸಲಾಗಿದೆ. ೧೦ ನಂತರದ ಪ್ರಯಾಣಕ್ಕೆ ಪ್ರತಿ ಕಿ.ಮೀಗೆ ೧೨೦ ರೂಪಾಯಿ ನಿಗದಿಗೊಳಿಸಲಾಗಿದೆ. ಇದು ಆಮ್ಲಜನಕ, ಪಿಪಿಇ ಕಿಟ್,

ಖಾಸಗಿ ಆಂಬ್ಯುಲೆನ್ಸ್ ಗಳಿಗೆ ಪ್ರತಿ ಕಿಲೋಮಿಟರ್‌ಗೆ ದರ ನಿಗದಿ Read More »

ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪಿಣರಾಯಿ, ಶೈಲಜಾ ಟೀಚರ್ ಗಿಲ್ಲ ಸಚಿವ ಸ್ಥಾನ….!

ತಿರುವನಂತಪುರಂ: ಕೇರಳ ರಾಜ್ಯದ ಮುಖ್ಯಮಂತ್ರಿ ಎರಡನೇ ಬಾರಿಗೆ ಪಿಣರಾಯಿ ವಿಜಯನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆ ತಿರುವನಂತಪುರಂನ ಸ್ಟೇಡಿಯಂ ಒಂದರಲ್ಲಿ ಕೇರಳ ಹೈಕೋರ್ಟ್ ಆದೇಶದಂತೆ ಸರಳವಾಗಿ ನಡೆದ ಸಮಾರಂಭದಲ್ಲಿ ಎಲ್ ಡಿ ಎಫ್ ಮೈತ್ರಿಕೂಟದ ಇತರೆ 20 ಸಚಿವರೊಂದಿಗೆ ವಿಜಯನ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿರೋಧ ಪಕ್ಷ ಯುಡಿಎಫ್ ಸದಸ್ಯರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದು, ಕೋರ್ಟ್ ಆದೇಶವನ್ನು ಪಾಲಿಸುವ ದೃಷ್ಟಿಯನ್ನು ಹಾಜರಾಗಿಲ್ಲ ಎಂದು ವಿರೋಧ ಪಕ್ಷದ ನಾಯಕರೊಬ್ಬರು ಸ್ಪಷ್ಟೀಕರಿಸಿದ್ದಾರೆ. ಹೊಸಬರಿಗೆ ಸಚಿವಸ್ಥಾನ ನೀಡಲಾಗಿದ್ದರೂ, ಕಳೆದ ಬಾರಿ ರಾಜ್ಯ ಸರ್ಕಾರದಲ್ಲಿ ಆರೋಗ್ಯ

ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಪಿಣರಾಯಿ, ಶೈಲಜಾ ಟೀಚರ್ ಗಿಲ್ಲ ಸಚಿವ ಸ್ಥಾನ….! Read More »

ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ವಿಧಿವಶ

ಬೆಳಗಾವಿ: ಮಾಜಿ ಕೇಂದ್ರ ಸಚಿವ, ರೈತ ನಾಯಕ ಬಾಬಾಗೌಡ ಪಾಟೀಲ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಬಾಬಾಗೌಡ ಪಾಟೀಲ್ ಕಳೆದ 15 ದಿನಗಳಿಂದ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ. ಬಾಬಾಗೌಡ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. ಬೆಳಗಾವಿಯ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಪಾಟೀಲ್ ಅವರ ಅಂತ್ಯಕ್ರಿಯೆ ನಡೆಯಲಿದೆ.

ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್ ವಿಧಿವಶ Read More »