ರಾಜ್ಯ

ಸರ್ಕಾರ ಎಷ್ಟೇ ಮುಚ್ಚಿಟ್ಟರೂ ನನಗೆ ಮಾಹಿತಿ ಸಿಗುತ್ತದೆ: ಡಿಕೆಶಿ

ಬೆಂಗಳೂರು: ಬಿಜೆಪಿ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಎಷ್ಟೇ ಪ್ರಯತ್ನ ಪಟ್ಟರೂ ಎಲ್ಲೆಲ್ಲಿ, ಯಾವ ಆಸ್ಪತ್ರೆಯಲ್ಲಿ ಏನೆಲ್ಲಾ ಅನಾಹುತ ನಡೆಯುತ್ತಿದೆ ಎಂಬ ಮಾಹಿತಿ ನನಗೆ ಸಿಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ ಬೆಂಗಳೂರಿನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ‘ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರು. ಇದು ಸಂವಿಧಾನ ಬದ್ಧವಾಗಿ ಬಂದಿರುವ ಹುದ್ದೆ, ಅಧಿಕಾರ. ಯಡಿಯೂರಪ್ಪನವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಜಿಲ್ಲೆ ಪ್ರವಾಸ ಮಾಡಿ ಅಧಿಕಾರಿಗಳ ಜತೆ ಸಭೆ ಮಾಡಿಲ್ಲವೇ? ಈ ಸಂಕಷ್ಟದ ಸಮಯದಲ್ಲಿ […]

ಸರ್ಕಾರ ಎಷ್ಟೇ ಮುಚ್ಚಿಟ್ಟರೂ ನನಗೆ ಮಾಹಿತಿ ಸಿಗುತ್ತದೆ: ಡಿಕೆಶಿ Read More »

ಕ್ರೈಸ್ತರ ಅವಹೇಳನ ; ಸಂಸದೆ ಶೋಭಾ ವಿರುದ್ಧ ಎಫ್ಐಆರ್

ಮಂಗಳೂರು, ಮೇ 20: ಕ್ರೈಸ್ತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಮುಖಂಡ, ಎಐಸಿಸಿ ಕಾರ್ಯದರ್ಶಿ ಐವನ್ ಡಿ’ಸೋಜ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಲಸಿಕೆ ಪಡೆಯದಂತೆ ಕ್ರೈಸ್ತ ಸಮುದಾಯಕ್ಕೆ ಚರ್ಚ್ ಕಡೆಯಿಂದ ಸೂಚನೆ ನೀಡಲಾಗಿದೆ ಎಂದು ಸಂಸದೆ ಶೋಭಾ ಹೇಳಿಕೆ ನೀಡಿದ್ದಾಗಿ ಸುದ್ದಿಯಾಗಿತ್ತು. ಈ ಬಗ್ಗೆ ಕ್ರೈಸ್ತ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮಾಜಿ ಎಂಎಲ್ಸಿ ಐವನ್ ಡಿಸೋಜ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ನಿಯೋಗ

ಕ್ರೈಸ್ತರ ಅವಹೇಳನ ; ಸಂಸದೆ ಶೋಭಾ ವಿರುದ್ಧ ಎಫ್ಐಆರ್ Read More »

ಆನೆಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಸುರಿದ ಆರ್ಥಿಕ ಪ್ಯಾಕೇಜ್

ಕಳೆದೆರಡು ವಾರದಿಂದ ಕೊರೊನ ಕಂಟ್ರೋಲ್ ಗಾಗಿ ರಾಜ್ಯ ಸರ್ಕಾರ ಲಾಕ್ ಡೌನ್ ಹೇರಿದ್ದು, ಹಲವು ವರ್ಗಗಳ ಜನರ, ಕಾರ್ಮಿಕರ ಜೀವನ ದುರ್ಬರವಾಗಿದೆ. ಹಲವಾರು ಕುಟುಂಬಗಳು ತುತ್ತು ಅನ್ನಕ್ಕಾಗಿ ಬೀದಿಗೆ ಬಂದಿದ್ದರೆ, ಮಧ್ಯಮ ವರ್ಗದ ಜನ ಅತ್ತ ನುಂಗಲೂ ಆಗದೆ, ಇತ್ತ ಉಗುಳಲೂ ಆಗದೇ ಕಷ್ಟ ಪಡುತ್ತಿದ್ದಾರೆ. ಹಲವು ಯುವಬಳಗ ಕೆಲಸ ಕಳೆದು ಬೀದಿಗೆ ಬಂದಿದ್ದು, ಈ ಹೊತ್ತಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಂಕಷ್ಟಕ್ಕೊಳಗಾದ ವರ್ಗಕ್ಕೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದು, ಈ ಪ್ಯಾಕೇಜ್ ಮೊಣಕೈಗೆ ತುಪ್ಪ ಸವರಿದಂತಾಗಿದೆ. ಬೆಂಗಳೂರು

ಆನೆಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಸುರಿದ ಆರ್ಥಿಕ ಪ್ಯಾಕೇಜ್ Read More »

ಮೇ ಅಂತ್ಯಕ್ಕೆ ಬೆಂಗಳೂರು ತಲುಪಲಿದೆ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ

ಬೆಂಗಳೂರು:  ಬಹುನಿರೀಕ್ಷಿತ ರಷ್ಯಾದ ಸ್ಫುಟ್ನಿಕ್ ವಿ ಲಸಿಕೆ ಮೇ ಅಂತ್ಯ ವೇಳೆಗೆ ಬೆಂಗಳೂರಿನಲ್ಲಿ ಲಭ್ಯವಾಗುವ ನಿರೀಕ್ಷೆಗಳಿವೆ. ರಾಜ್ಯದಲ್ಲಿ ಲಸಿಕೆ ಕೊರತೆ ಎದ್ದು ಕಾಣುತ್ತಿದ್ದು, ರಷ್ಯಾದ ಲಸಿಕೆ ಲಭ್ಯವಾದರೆ ಲಸಿಕೆಯ ಕೊರತೆ ಸ್ವಲ್ಪ ಮಟ್ಟಿಗೆ ಸುಧಾರಿಸಬಹುದು ಎಂದು ಅಭಿಪ್ರಾಯಿಸಲಾಗಿದೆ ಸ್ಪುಟ್ನಿಕ್ ಲಸಿಕೆ ಅಭಿಯಾನವನ್ನು ಆರಂಭಿಸುವ ಸಂಬಂಧ ಅಪೋಲೋ ಆಸ್ಪತ್ರೆ ಸಮೂಹ ಹಾಗೂ ಡಾ. ರೆಡ್ಡೀಸ್ ಲ್ಯಾಬ್ ಸೋಮವಾರ ಒಪ್ಪಂದ ಮಾಡಿಕೊಂಡಿದ್ದು, ಶೀಘ್ರದಲ್ಲೇ ಬೆಂಗಳೂರಿನಲ್ಲಿರುವ ಎಲ್ಲಾ ಅಪೋಲೋ ಆಸ್ಪತ್ರೆಗಳಲ್ಲೂ ಲಸಿಕೆ ಲಭ್ಯವಾಗಲಿದೆ. ಲಸಿಕೆಯ ದರ ರೂ.1,200 ರಿಂದ 1,250 ರಲ್ಲಿ

ಮೇ ಅಂತ್ಯಕ್ಕೆ ಬೆಂಗಳೂರು ತಲುಪಲಿದೆ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ Read More »

ಲಾಕ್ ಡೌನ್ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ: ಬಡ, ಶ್ರಮಿಕವರ್ಗದ ನೆರವಿಗೆ ನಿಂತ ಮುಖ್ಯಮಂತ್ರಿ

ಬೆಂಗಳೂರು:ಮೇ.19: ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆಯಿಂದ ಜನ ಕಂಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 1,250 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ಸಹಾಯಧನ, ಹಣ್ಣು, ತರಕಾರಿ ನಷ್ಟಕ್ಕೆ ಪ್ರತಿ ಹೆಕ್ಟೇರ್ 10 ಸಾವಿರ, ಹಣ್ಣು ತರಕಾರಿ ಬೆಳೆಗೆ ಒಂದು ಹೆಕ್ಟೇರ್ ಗೆ ಕನಿಷ್ಠ 10 ಸಾವಿರ ಸಹಾಯಧನ, ಆಟೋ, ಕ್ಯಾಬ್ ಚಾಲಕ

ಲಾಕ್ ಡೌನ್ ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ: ಬಡ, ಶ್ರಮಿಕವರ್ಗದ ನೆರವಿಗೆ ನಿಂತ ಮುಖ್ಯಮಂತ್ರಿ Read More »

ಲಸಿಕೆಗೆ ಬಗ್ಗೆ ಅಪಪ್ರಚಾರ, ಜನರಿಗೆ ಭಯ ಹುಟ್ಟಿಸಿದ್ದೇ ಕಾಂಗ್ರೇಸ್: ಕುಮಾರಸ್ವಾಮಿ

ಬೆಂಗಳೂರು: ದೇಶದಲ್ಲಿ ಲಸಿಕೆ ಅಭಿಯಾನ ಸರಿಯಾಗಿ ಆಗದೇ ಇರೋದಕ್ಕೆ ಮತ್ತು ಅಪಪ್ರಚಾರ ಮಾಡಿದ್ದು, ಜನರಿಗೆ ಭಯ ಹುಟ್ಟಲು ಕಾಂಗ್ರೆಸ್ ಕಾರಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕೆ ನೀಡಲು ೧೦೦ ಕೋಟಿ ರೂ. ಕೊಡುವುದಾಗಿ ಹೇಳುತ್ತಿರೋ ಕಾಂಗ್ರೆಸ್ ವರ್ತನೆಗೆ ಕಿಡಿಕಾರಿದರು. ಕಾಂಗ್ರೆಸ್ ಶಾಸಕರು ಅ ಹಣವನ್ನು ಕೈಯಿಂದ ಕೊಡುತ್ತಿಲ್ಲ. ಶಾಸಕರ ಕ್ಷೇತ್ರ ಅಭಿವೃದ್ಧಿ ಹಣ ಕೊಡುತ್ತೇವೆ ಎಂದು ಹೇಳುತ್ತಿದ್ದಾರೆ. ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಿದರು. ಆದರೆ ಲಸಿಕೆ

ಲಸಿಕೆಗೆ ಬಗ್ಗೆ ಅಪಪ್ರಚಾರ, ಜನರಿಗೆ ಭಯ ಹುಟ್ಟಿಸಿದ್ದೇ ಕಾಂಗ್ರೇಸ್: ಕುಮಾರಸ್ವಾಮಿ Read More »

ಲಾಕ್‍ಡೌನ್ ಹೇರಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ‌ಜಿಲ್ಲೆಗೆ ಅನುಗುಣವಾಗುವಂತೆ ಕ್ರಮ ಕೈಗೊಳ್ಳಿ ಎಂದು ಹೇಳುವ ಮೂಲಕ ಲಾಕ್ ಡೌನ್ ಸಂಬಂಧ ಸಂಪೂರ್ಣ ಅಧಿಕಾರವನ್ನು ಡಿಸಿಗಳ ನೀಡಿದ್ದಾರೆ. ಜಿಲ್ಲಾಡಳಿತಕ್ಕೆ ಜಿಲ್ಲೆಯ ಪರಿಸ್ಥಿತಿ ಚೆನ್ನಾಗಿ ಗೊತ್ತಿರುತ್ತದೆ. ಹೀಗಾಗಿ ಜಿಲ್ಲೆಗೆ ಅನುಗುಣವಾಗಿ ಜಿಲ್ಲಾಧಿಕಾರಿಗಳೇ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು ಎಂದು ಕರ್ನಾಟಕದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆ ಬಳಿಕ ಮಾತನಾಡಿದ ಪ್ರಧಾನಿ ತಿಳಿಸಿದ್ದಾರೆ. ಜಿಲ್ಲೆಗಳಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದರೆ ಇಡೀ ದೇಶ ಗೆದ್ದಂತೆ. ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ. ಇಂದಿನ ಸಭೆಯಲ್ಲಿ

ಲಾಕ್‍ಡೌನ್ ಹೇರಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಂಪೂರ್ಣ ಅಧಿಕಾರ: ಪ್ರಧಾನಿ ಮೋದಿ Read More »

ಸುಳ್ಳೇ ನಿಮ್ಮನೆ ದೇವರು. ಮಾನಗೆಟ್ಟ ಸರ್ಕಾರ, ಸಚಿವರನ್ನು ಇದುವರೆಗೆ ಕಂಡಿಲ್ಲ ಎಂದು ಛೇಡಿಸಿದ ಸಿದ್ದು

ಕೋಲಾರ: ಕೊರೊನಾ ತಜ್ಞರು ವರದಿ ಕೊಟ್ಟಿದ್ದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈ ಸರ್ಕಾರ ಸತ್ತೇ ಹೋಗಿದೆ. ಸರ್ಕಾರದ ಬಳಿ ಬರೀ ಸುಳ್ಳಿನ ಕಂತೆಯೇ ತುಂಬಿದೆ. ರಾಜ್ಯದಲ್ಲಿ ಯಡಿಯೂರಪ್ಪರಂತಹ ಮುಖ್ಯಮಂತ್ರಿಯನ್ನು ನೋಡೇ ಇಲ್ಲ. ಇಂತಹ ಮಾನಗೆಟ್ಟ ಸರ್ಕಾರ, ಸಚಿವರನ್ನು ಇಲ್ಲಿವರೆಗೂ ನೋಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಕೋಲಾರ ಜಿಲ್ಲೆ ಕೆಜಿಎಫ್ ನಗರದ ಮುನ್ಸಿಪಲ್ ಮೈದಾನದಲ್ಲಿ ನಡೆದ ಫುಡ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯ ಸರ್ಕಾರಕ್ಕೆ ಕೊರೊನಾ ಎರಡನೇ ಅಲೆ ಬರುವ

ಸುಳ್ಳೇ ನಿಮ್ಮನೆ ದೇವರು. ಮಾನಗೆಟ್ಟ ಸರ್ಕಾರ, ಸಚಿವರನ್ನು ಇದುವರೆಗೆ ಕಂಡಿಲ್ಲ ಎಂದು ಛೇಡಿಸಿದ ಸಿದ್ದು Read More »

ಬಿಜೆಪಿ ಅಧಿಕಾರದಲ್ಲಿರದಿದ್ದರೆ ಕೊರೊನ ನಿರ್ವಹಣೆ ಕಷ್ಟವಾಗುತ್ತಿತ್ತು – ನಳೀನ್ ಕುಮಾರ್ ಕಟೀಲ್

ಬೆಂಗಳೂರು: ದೇಶದಲ್ಲಿ ಕೊರೊನಾ ವಿಷಮ ಪರಿಸ್ಥಿತಿಯಲ್ಲಿ ಬಿಜೆಪಿ ಹೊರತು ಬೇರಾವುದೇ ಪಕ್ಷ ಅಧಿಕಾರದಲ್ಲಿದ್ದಿದ್ದರೆ ಪರಿಸ್ಥಿತಿ ನಿರ್ವಹಣೆ ಕಷ್ಟವಾಗುತಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಿಜೆಪಿ ಕರ್ನಾಟಕದ ಅಧಿಕೃತ ಟ್ವಿಟರ್ ಖಾತೆಯಲ್ಲಿ ನಳೀನ್ ಕುಮಾರ್ ಕಟೀಲ್ ಸರಣಿ ಟ್ವಿಟ್ ಗಳ ಮೂಲಕ ಇಂತಹ ಹೇಳಿಕೆ ನೀಡಿದ್ದಾರೆ. ಆರೋಗ್ಯ ತುರ್ತು ಪರಿಸ್ಥಿತಿ ಸಮಯದಲ್ಲಿಯೂ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಕಟೀಲ್ ರ ಸಮರ್ಥನೆ ಈಗ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ.ದೇಶವನ್ನು ಬಹುಕಾಲ ಆಳಿದ

ಬಿಜೆಪಿ ಅಧಿಕಾರದಲ್ಲಿರದಿದ್ದರೆ ಕೊರೊನ ನಿರ್ವಹಣೆ ಕಷ್ಟವಾಗುತ್ತಿತ್ತು – ನಳೀನ್ ಕುಮಾರ್ ಕಟೀಲ್ Read More »

ಸಾಯೋರು ಎಲ್ಲಾದರೂ ಸಾಯಲಿ: ಬಿಜೆಪಿ ಶಾಸಕ

ಚಿತ್ರದುರ್ಗ: ನಾನು ಇಲ್ಲಿ ಆಸ್ಪತ್ರೆ ಮಾಡೋದಿಲ್ಲ. ನನಗೆ ಅವಶ್ಯಕತೆ ಇಲ್ಲ. ಸಾಯೋರು ಎಲ್ಲಾದರೂ ಸಾಯಲಿ ಎಂದು ಉಡಾಫೆಯ ಉತ್ತರ ನೀಡುವ ಮೂಲಕ ಹೊಳಲ್ಕೆರೆ ಬಿಜೆಪಿ ಶಾಸಕ ಹಾಗೂ ಸಾರಿಗೆ ನಿಗಮ ಅಧ್ಯಕ್ಷ ಎಂ.ಚಂದ್ರಪ್ಪ ಅವರು ಟೀಕೆಗೆ ಗುರಿಯಾಗಿದ್ದಾರೆ.ಜಿಲ್ಲೆಯಲ್ಲಿ ಕೋವಿಡ್ ವಾರ್ಡ್ ನಿರ್ಮಾಣದ ಕುರಿತಾಗಿ ಎಂ.ಚಂದ್ರಪ್ಪ, ಡಿಹೆಚ್‌ಓ ಡಾ.ಪಾಲಾಕ್ಷಗೆ ಹೇಳಿದ ವೀಡಿಯೋ ಸಂಭಾಷಣೆ ಇದಾಗಿದ್ದು, ಹೊಳಲ್ಕೆರೆ ತಾಲೂಕು ಆಸ್ಪತ್ರೆಯಲ್ಲಿ ೫೦ ಬೆಡ್‌ನ ಕೋವಿಡ್ ವಾರ್ಡ್ ನಿರ್ಮಾಣದ ಕುರಿತಾಗಿ ಶಾಸಕರು ತಿಳಿಸಿದ್ದರು. ಆದರೆ ೧೦ ಆಕ್ಸಿಜನ್ ಬೆಡ್ ನಿರ್ಮಾಣದ ಬಗ್ಗೆ

ಸಾಯೋರು ಎಲ್ಲಾದರೂ ಸಾಯಲಿ: ಬಿಜೆಪಿ ಶಾಸಕ Read More »