ರಾಜ್ಯ

ಯತ್ನಾಳ್ ಗೆ ಬಿಗ್ ಶಾಕ್ ನೀಡಿದ ಬಿಜೆಪಿ| 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ

ಸಮಗ್ರ ನ್ಯೂಸ್: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ನಿನ್ನೆಯಷ್ಟೇ ರಾಜ್ಯದ ಐವರು ಬಿಜೆಪಿ ನಾಯಕರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿ ಶಾಕ್ ಕೊಟ್ಟಿದ್ದ ಬಿಜೆಪಿ ಹೈಕಮಾಂಡ್ ಇಂದು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿ ಆದೇಶ ಹೊರಡಿಸಿದೆ. ಪದೇ ಪದೇ ರಾಜ್ಯದ ಬಿಜೆಪಿ ನಾಯಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದ ಕಾರಣಕ್ಕೆ ಈ ಬೃಹತ್ ನಿರ್ಧಾರವನ್ನು ಬಿಜೆಪಿ ಹೈಕಮಾಂಡ್ ಕೈಗೊಂಡಿದೆ.

ಯತ್ನಾಳ್ ಗೆ ಬಿಗ್ ಶಾಕ್ ನೀಡಿದ ಬಿಜೆಪಿ| 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ Read More »

‘ಸ್ತನ ಹಿಡಿಯುವುದು ಅತ್ಯಾಚಾರ ಯತ್ನವಲ್ಲ’| ಅಲಹಾಬಾದ್ ಹೈಕೋರ್ಟ್ ನ‌ ವಿವಾದಿತ ‌ಆದೇಶಕ್ಕೆ ಸುಪ್ರೀಂ ತಡೆ

ಸಮಗ್ರ ನ್ಯೂಸ್: ಸಂತ್ರಸ್ತ ಬಾಲಕಿಯ ಸ್ತನಗಳನ್ನು ಹಿಡಿದುಕೊಳ್ಳುವುದು, ಆಕೆಯ ಪೈಜಾಮಾದ ದಾರವನ್ನು ಹಿಡಿದು ಎಳೆಯುವುದಷ್ಟೇ ಅತ್ಯಾಚಾರ ಆಗುವುದಿಲ್ಲ ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಿತ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಇಂದು (ಬುಧವಾರ) ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಆಗಸ್ಟೀನ್ ಜಾರ್ಜ್‌ ಮಸೀಹ್ ನೇತೃತ್ವದ ಪೀಠವು ಈ ಕುರಿತು ಪ್ರತಿಕ್ರಿಯಿಸಿದ್ದು, ‘ಇದು ಗಂಭೀರ ವಿಷಯವಾಗಿದೆ. ಇಂತಹ ಆದೇಶಗಳು ಸಂವೇದನಾರಹಿತ, ಅಮಾನವೀಯ ವಿಧಾನವನ್ನು ಪ್ರತಿನಿಧಿಸುತ್ತವೆ’ ಎಂದು ಹೇಳಿದೆ. ಈ ಪ್ರಕರಣ ಕುರಿತಂತೆ ಆದೇಶ ಹೊರಡಿಸಿದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ

‘ಸ್ತನ ಹಿಡಿಯುವುದು ಅತ್ಯಾಚಾರ ಯತ್ನವಲ್ಲ’| ಅಲಹಾಬಾದ್ ಹೈಕೋರ್ಟ್ ನ‌ ವಿವಾದಿತ ‌ಆದೇಶಕ್ಕೆ ಸುಪ್ರೀಂ ತಡೆ Read More »

ರೀಲ್ಸ್ ಗಾಗಿ ಮಾರಕಾಸ್ತ್ರ ಬಳಕೆ ಪ್ರಕರಣ| ವಿನಯ್ ಗೌಡ, ರಜತ್ ಕಿಶನ್ ಗೆ ಜೈಲು

ಸಮಗ್ರ ನ್ಯೂಸ್: ಬಿಗ್ ಬಾಸ್ ಮಾಜಿ ಸ್ಪರ್ಧಿಗಳು ವಿನಯ್ ಗೌಡ ಹಾಗೂ ರಜತ್ ಕಿಶನ್ ಇಬ್ಬರು ರೀಲ್ಸ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವು ದಿನಗಳ ಹಿಂದೆ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿದ್ದಂತೆ ಬೆಂಗಳೂರಿನ ಬಸವೇಶ್ವರನಗರ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದರು.ಬಳಿಕ ಇಬ್ಬರನ್ನು ರಿಲೀಸ್ ಮಾಡಿದ್ದರು. ಆದ್ರೀಗ ಮತ್ತೆ ಬಂಧಿಸಿ, ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ವಿನಯ್ ಗೌಡ ಹಾಗೂ ರಜತ್ ಕಿಶನ್ ಇಬ್ಬರನ್ನೂ ಪೊಲೀಸರು ಮತ್ತೆ ಬಂಧಿಸಿದ್ದರು. ವಿಚಾರಣೆ

ರೀಲ್ಸ್ ಗಾಗಿ ಮಾರಕಾಸ್ತ್ರ ಬಳಕೆ ಪ್ರಕರಣ| ವಿನಯ್ ಗೌಡ, ರಜತ್ ಕಿಶನ್ ಗೆ ಜೈಲು Read More »

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಆಲಿಕಲ್ಲು ಸಹಿತ ಉತ್ತಮ ಮಳೆ| ಮಾ.26ರಂದು ಮತ್ತೆ ಮಳೆಯಾಗುವ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಮಂಗಳವಾರ ಸಂಜೆ ಮಳೆಯಾಗಿದೆ. ಕಲ್ಮಡ್ಕದಲ್ಲಿ ಆಲಿಕಲ್ಲು ಮಳೆಯಾಗಿದೆ. ಪುತ್ತೂರಿನಲ್ಲೂ ಉತ್ತಮ ಮಳೆಯಾಗಿದೆ. ಸಂಜೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಸುರಿಯಿತು. ಮಂಗಳೂರಿನಲ್ಲಿ ಗರಿಷ್ಠ 33.1 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ 24.6 ಡಿ.ಸೆ. ದಾಖಲಾಗಿದೆ. ಬುಧವಾರವೂ ಕರಾವಳಿಗೆ ಎಲ್ಲೋ ಅಲರ್ಟ್‌ ನೀಡಲಾಗಿದ್ದು, ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳ್ತಂಗಡಿ ತಾಲೂಕಿನ

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಆಲಿಕಲ್ಲು ಸಹಿತ ಉತ್ತಮ ಮಳೆ| ಮಾ.26ರಂದು ಮತ್ತೆ ಮಳೆಯಾಗುವ ಸಾಧ್ಯತೆ Read More »

ವಾರ್ಷಿಕ ಹಣಕಾಸು ವರ್ಷಾಂತ್ಯದ ಹಿನ್ನಲೆ| ಮಾ. 31ರ ಬ್ಯಾಂಕ್ ರಜಾದಿನ ರದ್ದುಗೊಳಿಸಿದ RBI

ಸಮಗ್ರ ನ್ಯೂಸ್: ದೇಶದ ಹೆಚ್ಚಿನ ಭಾಗಗಳಲ್ಲಿ ಸಾರ್ವಜನಿಕ ರಜಾದಿನವಾಗಿದ್ದರೂ, ಸರ್ಕಾರಿ ವಹಿವಾಟುಗಳನ್ನು ನಿರ್ವಹಿಸುವ ಎಲ್ಲಾ ಏಜೆನ್ಸಿ ಬ್ಯಾಂಕುಗಳು ಮಾರ್ಚ್ 31, 2025 ರಂದು ತೆರೆದಿರಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಘೋಷಿಸಿದೆ. ಈ ನಿರ್ಧಾರವು 2024-25ರ ಹಣಕಾಸು ವರ್ಷಕ್ಕೆ ಸಂಬಂಧಿಸಿದ ಎಲ್ಲಾ ಹಣಕಾಸು ವಹಿವಾಟುಗಳು ಅದೇ ಹಣಕಾಸು ಅವಧಿಯಲ್ಲಿ ಪೂರ್ಣಗೊಳ್ಳುವುದನ್ನು ಖಚಿತಪಡಿಸುತ್ತದೆ. ಆರ್‌ಬಿಐ ಪ್ರಕಾರ, ಸರ್ಕಾರಕ್ಕೆ ಸಂಬಂಧಿಸಿದ ಪಾವತಿಗಳು ಮತ್ತು ರಶೀದಿಗಳನ್ನು ಸುಗಮಗೊಳಿಸಲು ಭಾರತ ಸರ್ಕಾರ ಮಾರ್ಚ್ 31 ರಂದು ಬ್ಯಾಂಕುಗಳು ತೆರೆದಿರಬೇಕೆಂದು ವಿನಂತಿಸಿದೆ. ಇದರಲ್ಲಿ

ವಾರ್ಷಿಕ ಹಣಕಾಸು ವರ್ಷಾಂತ್ಯದ ಹಿನ್ನಲೆ| ಮಾ. 31ರ ಬ್ಯಾಂಕ್ ರಜಾದಿನ ರದ್ದುಗೊಳಿಸಿದ RBI Read More »

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅವಹೇಳನಕಾರಿ ಹೇಳಿಕೆ, ಪ್ರಚಾರ ವಿರುದ್ಧ ‘ಜಾನ್ ಡೋ’ ಆದೇಶ| ನ್ಯಾಯಾಲಯದಿಂದ ಮತ್ತೆ ನಿರ್ಬಂಧ ಜಾರಿ

ಸಮಗ್ರ ನ್ಯೂಸ್: ಧರ್ಮಸ್ಥಳ ಕ್ಷೇತ್ರ ಹಾಗೂ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನ-ಅಪಪ್ರಚಾರ ಮಾಡುವವರ ವಿರುದ್ಧ ಬೆಂಗಳೂರು ನಗರ ಸಿವಿಲ್‌ ನ್ಯಾಯಾಲಯವು ಜಾನ್ ಡೋ (ಅಶೋಕ ಕುಮಾರ್) ಆದೇಶ ನೀಡಿದೆ. ಒಎಸ್ 2145/2025 ಪ್ರಕರಣದಲ್ಲಿ ನ್ಯಾಯಾಲಯ ಆದೇಶ ನೀಡಿದೆ. ಈ ಆದೇಶದನ್ವಯ ಯಾರೇ ಆಗಲಿ ಧರ್ಮಸ್ಥಳ ಕ್ಷೇತ್ರ, ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ, ಅವರ ಕುಟುಂಬದ ಸದಸ್ಯರು ಮತ್ತು ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿತ ಸಂಸ್ಥೆಗಳ ವಿರುದ್ಧ ಅವಹೇಳನಾಕಾರಿ ಮತ್ತು ಅಪಪ್ರಚಾರ ಮಾಡುವ ಮಾಹಿತಿಯನ್ನು ಪ್ರಕಟಿಸಲು ಅಥವಾ

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅವಹೇಳನಕಾರಿ ಹೇಳಿಕೆ, ಪ್ರಚಾರ ವಿರುದ್ಧ ‘ಜಾನ್ ಡೋ’ ಆದೇಶ| ನ್ಯಾಯಾಲಯದಿಂದ ಮತ್ತೆ ನಿರ್ಬಂಧ ಜಾರಿ Read More »

ಧರ್ಮಸ್ಥಳ ಠಾಣಾ ಸಬ್ ಇನ್ಸ್‌ಪೆಕ್ಟರ್ ನಿಂದ ವರದಕ್ಷಿಣೆ ಕಿರುಕುಳ| ಕಿರಾತಕನ ಹಣದಾಹಕ್ಕೆ ಆಸ್ಪತ್ರೆ ಪಾಲಾದ ಪತ್ನಿ

ಸಮಗ್ರ ನ್ಯೂಸ್: ಜನರಿಗೆ ನ್ಯಾಯ ಕೊಡಿಸಬೇಕಿದ್ದ ಪೊಲೀಸಪ್ಪನೇ ಹೆಂಡತಿಯ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಧರ್ಮಸ್ಥಳ ಸಬ್ ಇನ್ಸ್ ಪೆಕ್ಟರ್ ಕಿಶೋರ್ ವಿರುದ್ಧ ಚಂದ್ರಲೇಔಟ್ ಠಾಣೆಯಲ್ಲಿ ಎಫ್ ಐಆರ್ ದಾಖಲು ಮಾಡಲಾಗಿದೆ. 2024ರಲ್ಲಿ ಮೂಡಿಗೆರೆ ಸಬ್ ಇನ್ಸ್ ಪೆಕ್ಟರ್ ʼರನ್ನು ವರ್ಷ ಮದುವೆಯಾಗಿದ್ದರು. ವರದಕ್ಷಿಣೆಗಾಗಿ 10 ಲಕ್ಷ ನಗದು,22 ಲಕ್ಷದ ಕ್ರೇಟಾ ಕಾರು,135 ಗ್ರಾಂ ಚಿನ್ನ ನೀಡಿದ್ರು. ಅಲ್ಲದೆ ವರ್ಷಾಳಿಗೆ ಪೋಷಕರು 900 ಗ್ರಾಂ ಚಿನ್ನ ನೀಡಿದ್ದರು. ಜೊತೆಗೆ ಒಂದು ಕೋಟಿ ಖರ್ಚು ಮಾಡಿ

ಧರ್ಮಸ್ಥಳ ಠಾಣಾ ಸಬ್ ಇನ್ಸ್‌ಪೆಕ್ಟರ್ ನಿಂದ ವರದಕ್ಷಿಣೆ ಕಿರುಕುಳ| ಕಿರಾತಕನ ಹಣದಾಹಕ್ಕೆ ಆಸ್ಪತ್ರೆ ಪಾಲಾದ ಪತ್ನಿ Read More »

ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್| ಮಾ.31ರ ಬಳಿಕ ಎರಡು ಕಂತಿನ ಹಣ ಜಮೆ – ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ನಂತರ ಬಿಡುಗಡೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮಾರ್ಚ್ 31ರ ನಂತರ ಫಲಾನುಭವಿಗಳ ಖಾತೆಗೆ ಒಟ್ಟಿಗೆ ಎರಡು ತಿಂಗಳ ಹಣ ಜಮಾ ಆಗಲಿದೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2,000 ರೂ. ಹೆಚ್ಚಳ ಮಾಡಲಾಗಿತ್ತು. ನಂತರ ಯಾವುದೇ ಸರ್ಕಾರಗಳು ಗೌರವಧನ ಹೆಚ್ಚಳ ಮಾಡಿರಲಿಲ್ಲ. ಈ ಬಜೆಟ್ ನಲ್ಲಿ

ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್| ಮಾ.31ರ ಬಳಿಕ ಎರಡು ಕಂತಿನ ಹಣ ಜಮೆ – ಲಕ್ಷ್ಮೀ ಹೆಬ್ಬಾಳ್ಕರ್ Read More »

ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೂ ಏನಾಗಲ್ಲ!! ಶಾಲೆಯಲ್ಲಿ ವ್ಯವಸ್ಥಿತವಾದ ಮೌಡ್ಯ ಬಿತ್ತನೆ ವಿಡಿಯೋ ವೈರಲ್

ಸಮಗ್ರ ನ್ಯೂಸ್: ಶಾಲೆಗಳಲ್ಲಿ ಚಿಕ್ಕವಯಸ್ಸಿನಿಂದಲೇ ಮಕ್ಕಳಿಗೆ ವ್ಯವಸ್ಥಿತವಾಗಿ ಬ್ರೈನ್‌ ವಾಶ್ ಮಾಡಲಾಗುತ್ತಿದೆಯಾ? ಏನೂ ಅರಿಯದ ಎಳೆವಯಸ್ಸಿನ ಮಕ್ಕಳ ಮೆದುಳಿನಲ್ಲಿ ಧರ್ಮಾಂಧತೆ, ಮೌಢ್ಯ ತುಂಬಲಾಗುತ್ತಿದೆಯಾ? ಚಾಮರಾಜನಗರ ಖಾಸಗಿ ಶಾಲೆಯೊಂದರಲ್ಲಿ ನಡೆದಿದೆ ಎನ್ನಲಾದ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬುರ್ಖಾ ಧರಿಸೋದ್ರಿಂದ ಸತ್ತಮೇಲೆ ಶವಕ್ಕೆ ಏನೂ ಆಗೋಲ್ಲ, ತುಂಡು ಉಡುಗೆ ತೊಟ್ಟರೆ ನರಕಕ್ಕೆ ಹೋಗುವುದರ ಜೊತೆಗೆ ನಿಮ್ಮ ದೇಹವನ್ನ ಹಾವು ಚೇಳು ತಿನ್ನುತ್ತವೆ’ ಎಂಬ ಈ ಮಾತು ಹೇಳಿದ್ದು ವಯಸ್ಕ ಮಹಿಳೆಯಲ್ಲ ಬದಲಾಗಿ ಶಾಲೆಗೆ ಹೋಗುತ್ತಿರುವ ಚಿಕ್ಕ

ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೂ ಏನಾಗಲ್ಲ!! ಶಾಲೆಯಲ್ಲಿ ವ್ಯವಸ್ಥಿತವಾದ ಮೌಡ್ಯ ಬಿತ್ತನೆ ವಿಡಿಯೋ ವೈರಲ್ Read More »

ದೆಹಲಿ ರಾಜ್ಯ ಬಜೆಟ್‌/ ಮಹಿಳೆಯರಿಗೆ ₹5,100 ಕೋಟಿ ಮೀಸಲು

ಸಮಗ್ರ ನ್ಯೂಸ್‌: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಇಂದು 2025 26ನೇ ಹಣಕಾಸು ವರ್ಷದ ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ ಬಜೆಟ್ ಮಂಡಿಸಿದ್ದು, ಸರ್ಕಾರವು ಬಂಡವಾಳ ವೆಚ್ಚವನ್ನು ₹28,000 ಕೋಟಿಗಳಿಗೆ ದ್ವಿಗುಣಗೊಳಿಸುವುದರೊಂದಿಗೆ ಭ್ರಷ್ಟಾಚಾರ ಮತ್ತು ಅದಕ್ಷತೆಯ ಯುಗ ಮುಗಿದಿದೆ ಎಂದು ಹೇಳಿದ್ದಾರೆ. ಕಲ್ಯಾಣ ಕ್ರಮದಲ್ಲಿ, ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500 ರೂ ಒದಗಿಸಲು ₹5,100 ಕೋಟಿ ಮೀಸಲಿಡಲಾಗಿದೆ. ರಾಜಧಾನಿಯಲ್ಲಿ ಆರೋಗ್ಯ ಸೇವೆಗಳನ್ನು ಬಲಪಡಿಸುವ ಗುರಿಯನ್ನು ಹೊಂದಿರುವ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗೆ ₹2.144 ಕೋಟಿ

ದೆಹಲಿ ರಾಜ್ಯ ಬಜೆಟ್‌/ ಮಹಿಳೆಯರಿಗೆ ₹5,100 ಕೋಟಿ ಮೀಸಲು Read More »