ರಾಜ್ಯ

ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ನಾವೆಲ್ಲಿ ಹೇಳಿದೀವಿ? ಉಲ್ಟಾ ಹೊಡೆದ ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ನಾವು ಎಲ್ಲಿಯೂ ಗೃಹಲಕ್ಷ್ಮಿ ಹಣವನ್ನು ಪ್ರತಿ ತಿಂಗಳೂ ಕೊಡ್ತೀವಿ ಅಂತ ಹೇಳಿಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ. ಬಳ್ಳಾರಿಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶದ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರಿಗೆ ಗೃಹ ಲಕ್ಷ್ಮೀ ಹಣ ಯಾವಾಗ ಬರುತ್ತೆ ಎಂಬುದಾಗಿ ಪತ್ರಕರ್ತರೊಬ್ಬರು ಪ್ರಶ್ನಿಸಿದರು.ಆಗ ಮಾತನಾಡಿದ ಡಿಸಿಎಂ ನೋಡ್ರಿ ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ನಾವು ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ಇರಬೇಕು. ನಾವು ದುಡ್ಡು ಕೊಡ್ತಾ ಇರಬೇಕು ಎಂದರು. […]

ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ನಾವೆಲ್ಲಿ ಹೇಳಿದೀವಿ? ಉಲ್ಟಾ ಹೊಡೆದ ಡಿಸಿಎಂ ಡಿ.ಕೆ ಶಿವಕುಮಾರ್ Read More »

ದಾಂಪತ್ಯಕ್ಕೆ ಕಾಲಿಟ್ಟ ಕಿರುತೆರೆ ನಟ ಶಮಂತ್ ಗೌಡ

ಸಮಗ್ರ ನ್ಯೂಸ್: ಕಿರುತೆರೆ ನಟ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್ 8ರಲ್ಲಿ ಸ್ಪರ್ಧಿ ಶಮಂತ್ ಗೌಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಕ್ಷ್ಮೀ ಬಾರಮ್ಮ ಸೀರಿಯಲ್​ ಖ್ಯಾತಿಯ ಶಮಂತ್ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬ್ರೋ ಗೌಡ ಅವರು ಈ ವರ್ಷ ಫೆಬ್ರವರಿ 14 ಪ್ರೇಮಿಗಳ ದಿನದಂದೇ ನಿಶ್ಚಿತಾರ್ಥ ಮಾಡಿಕೊಂಡು ಎಲ್ಲರಿಗೂ ಶಾಕ್ ಕೊಟ್ಟರು. ಮೇಘನಾ ಪ್ರೊಫೆಷನಲ್ ಮೇಕಪ್ ಆರ್ಟಿಸ್ಟ್ ಆಗಿದ್ದಾರೆ. ಮೊನ್ನೆಯಷ್ಟೆ ಶಮಂತ್​ ಬ್ರೋ ಗೌಡ ಅರಿಶಿಣ ಶಾಸ್ತ್ರದಲ್ಲಿ ಮಿಂದೆದ್ದಿದ್ದರು. ಇದರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ

ದಾಂಪತ್ಯಕ್ಕೆ ಕಾಲಿಟ್ಟ ಕಿರುತೆರೆ ನಟ ಶಮಂತ್ ಗೌಡ Read More »

ಗುಂಡ್ಯ: ಬಸ್ – ಲಾರಿ ನಡುವೆ ಮುಖಾಮುಖಿ ಡಿಕ್ಕಿ| ಚಾಲಕರು ಸೇರಿ ನಾಲ್ಕು ಮಂದಿ ಗಂಭೀರ

ಸಮಗ್ರ ನ್ಯೂಸ್: ಸರ್ಕಾರಿ ಬಸ್ ಹಾಗು ಲಾರಿ ಪರಸ್ಪರ ಡಿಕ್ಕಿಯಾಗಿ ಇಬ್ಬರು ಚಾಲಕರು ಸೇರಿದಂತೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮಂಗಳೂರು – ಬೆಂಗಳೂರು ರಾ.ಹೆದ್ದಾರಿಯ ಶಿರಾಡಿ ಘಾಟ್ ನ ಗುಂಡ್ಯದಲ್ಲಿ ನಡೆದಿದೆ. ಅಪಾಯಕಾರಿ ತಿರುವಿನಲ್ಲಿ ಎದುರುನಿಂದ ವೇಗವಾಗಿ ಲಾರಿ ಬರುತ್ತಿತ್ತು ಈ ವೇಳೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕೆಎಸ್‌ಆರ್ಟಿಸಿ ಬಸ್ ಹಾಗು ಲಾರಿಯ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಲಾರಿ ಮತ್ತು ಬಸ್ ಚಾಲಕರ ಸ್ಥಿತಿ ಗಂಭೀರವಾಗಿದ್ದು ಮಂಗಳೂರು

ಗುಂಡ್ಯ: ಬಸ್ – ಲಾರಿ ನಡುವೆ ಮುಖಾಮುಖಿ ಡಿಕ್ಕಿ| ಚಾಲಕರು ಸೇರಿ ನಾಲ್ಕು ಮಂದಿ ಗಂಭೀರ Read More »

ರಾಮನಗರದದ ದಿವ್ಯಾಂಗ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಎಫ್ಎಸ್ಎಲ್ ವರದಿಯಲ್ಲಿ ಹೊರಬಿತ್ತು ಸ್ಫೋಟಕ ಮಾಹಿತಿ

ಸಮಗ್ರ ನ್ಯೂಸ್: ರಾಮನಗರದಲ್ಲಿ ನಡೆದಿದ್ದ ದಿವ್ಯಾಂಗ ಬಾಲಕಿಯ ಕೊಲೆ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿತ್ತು. ಮರ್ಡರ್ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಆದರೆ ಇದೀಗ ಮರ್ಡರ್ ಕೇಸ್ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇನೆಂದರೆ ಅತ್ಯಾಚಾರ ನಡೆದಿಲ್ಲವೆಂಬುದು ಎಫ್​ಎಸ್​ಎಲ್ (FSL)​ ವರದಿಯಲ್ಲಿ ಧೃಡಪಟ್ಟಿದೆ. ರಾಮನಗರ ತಾಲೂಕಿನ ಭದ್ರಾಪುರ ‌ಗ್ರಾಮದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದ್ದ 14 ವರ್ಷದ ದಿವ್ಯಾಂಗ ಬಾಲಕಿಯ ಕೊಲೆ ಪ್ರಕರಣಕ್ಕೆ ಬಿಗ್ ಟಿಸ್ಟ್ ಸಿಕ್ಕಿದ್ದು, ಮೇಲ್ನೋಟಕ್ಕೆ ಬಾಲಕಿಯದ್ದು ಕೊಲೆ ಅಲ್ಲ, ರೈಲು

ರಾಮನಗರದದ ದಿವ್ಯಾಂಗ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಎಫ್ಎಸ್ಎಲ್ ವರದಿಯಲ್ಲಿ ಹೊರಬಿತ್ತು ಸ್ಫೋಟಕ ಮಾಹಿತಿ Read More »

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯುವತಿ‌ ಪಂಜಾಬ್​ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವಂತಹ ಘಟನೆ ಮೇ. 17 ರಂದು ಸಂಜೆ ನಡೆದಿದೆ. ಏರೋಸ್ಪೇಸ್​​ನ ಉದ್ಯೋಗಿ ಆಕಾಂಕ್ಷಾ ಎಸ್. ನಾಯರ್(22) ಮೃತ ಯುವತಿ. 3ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಮಗಳ ಸಾವಿನ ವಿಷಯ ತಿಳಿಯುತ್ತಿದ್ದಂತೆ ಮೃತ ಆಕಾಂಕ್ಷಾ ಪೋಷಕರಾದ ಸುರೇಂದ್ರ ಮತ್ತು ಸಿಂಧೂದೇವಿ ನಿನ್ನೆಯೇ ಪಂಜಾಬ್​ಗೆ ತೆರಳಿದ್ದಾರೆ. ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಂಜಾಬ್​ನ ಎಲ್​​.ಸಿ.ಯು ಪಗ್ವಾಡ ಕಾಲೇಜಿನಲ್ಲಿ

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು Read More »

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮುಂದಿನ ೬ ದಿನಗಳ‌ ಕಾಲ ಭಾರೀ ಮಳೆ ಸಾಧ್ಯತೆ| ವಿವಿಧ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ(ಮೇ 19) ಸತತವಾಗಿ ಆರು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ. ಬೀಸಲಿದ್ದು, ಬಹುತೇಕ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ. ಮೇ 19ರಂದು ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಮತ್ತು ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮುಂದಿನ ೬ ದಿನಗಳ‌ ಕಾಲ ಭಾರೀ ಮಳೆ ಸಾಧ್ಯತೆ| ವಿವಿಧ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ Read More »

ನಂದಿನಿ ಹಾಲು ಮತ್ತಷ್ಟು ತುಟ್ಟಿ ಸಾಧ್ಯತೆ

ಸಮಗ್ರ ನ್ಯೂಸ್: ಬೆಲೆ ಏರಿಕೆ ಬಿಸಿ ನಡುವೆಯೇ ರಾಜ್ಯದ ಜನತೆಗೆ ಮತ್ತೊಂದು ಶಾಕ್‌ ಕಾದಿದೆ. ನಂದಿನಿ ಹಾಲಿನ ದರದಲ್ಲಿ ಮತ್ತೆ ಏರಿಕೆ ಆಗುವ ಸಾಧ್ಯತೆ ಇದೆ. ಒಂದೂವರೆ ತಿಂಗಳ ಹಿಂದೆಯಷ್ಟೇ ಹಾಲಿನ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಗಾಯದ ಮೇಲೆ ಬರೆ ಎಳೆಯಲು ರೆಡಿಯಾಗಿದೆ. ಹೀಗಾಗಿ ಶೀಘ್ರವೇ ಹಾಲಿನ ದರ ಏರಿಕೆ ಮಾಡಿ ಆದೇಶ ಹೊರಡಿಸುವ ಸಾಧ್ಯತೆ ದಟ್ಟವಾಗಿದೆ. ಕಳೆದ ತಿಂಗಳು ರಾಜ್ಯದಲ್ಲಿ ಹಾಲು, ಮೊಸರಿನ ಬೆಲೆಯನ್ನು ಸರ್ಕಾರ ಲೀಟರ್‌ಗೆ 4 ರೂ. ಏರಿಕೆ

ನಂದಿನಿ ಹಾಲು ಮತ್ತಷ್ಟು ತುಟ್ಟಿ ಸಾಧ್ಯತೆ Read More »

ಚರಂಡಿಯಲ್ಲಿ‌ ಸಿಕ್ಕಿದ ಮೂರು ದಿನದ ಹಸುಗೂಸನ್ನು ಸಾಕಿದಳು| 13ನೇ ವರ್ಷ ಅದೇ ಮಗಳಿಂದ ಆಕೆ ಕೊಲೆಯಾದಳು!!

ಸಮಗ್ರ ನ್ಯೂಸ್: ಅದು 13 ವರ್ಷದ ಹಿಂದಿನ ಕಥೆ ಒಡಿಶಾದ ಮಹಿಳೆಯೊಬ್ಬಳು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ ಚರಂಡಿಯಲ್ಲಿ ಬಿದ್ದಿದ್ದ ನವಜಾತ ಶಿಶುವನ್ನು ಕಂಡಿದ್ದಳು. ಹುಟ್ಟಿ ಬಹುಶಃ ಮೂರು ದಿನಗಳಾಗಿತ್ತು. ಆ ಮಗುವನ್ನು ತನ್ನ ಮಗುವಿನ ರೀತಿಯಲ್ಲೇ ಆಕೆ ಸಾಕಿದ್ದಳು. ಆದರೆ, 13 ವರ್ಷಗಳ ನಂತರ ಅದೇ ಹುಡುಗಿ ತನ್ನ ಇಬ್ಬರು ಬಾಯ್‌ಫ್ರೆಂಡ್‌ಗಳ ಸಹಾಯದಿಂದ ದತ್ತು ತಾಯಿಯನ್ನೇ ಕೊಂದಿರುವ ದಾರುಣ ಘಟನೆ ನಡೆದಿದೆ. ಪೊಲೀಸರ ಪ್ರಕಾರ, 13 ವರ್ಷದ 8 ನೇ ತರಗತಿಯ ವಿದ್ಯಾರ್ಥಿನಿ ತನ್ನ ಇಬ್ಬರು

ಚರಂಡಿಯಲ್ಲಿ‌ ಸಿಕ್ಕಿದ ಮೂರು ದಿನದ ಹಸುಗೂಸನ್ನು ಸಾಕಿದಳು| 13ನೇ ವರ್ಷ ಅದೇ ಮಗಳಿಂದ ಆಕೆ ಕೊಲೆಯಾದಳು!! Read More »

ಪತ್ನಿಯ ದ್ವಿಪತಿತ್ವ ಕಂಡು ಹಿಡಿಯಲು ತಾನೇ ಗೂಢಾಚಾರನಾದ ಟೆಕ್ಕಿ| ಸಿನಿಮೀಯ ಶೈಲಿಯಲ್ಲಿ ಮಂಗಳೂರು ಮೂಲದ ಯುವತಿಯ ಮೋಸ‌ ಬಯಲಿಗೆಳೆದ ಪತಿ

ಸಮಗ್ರ ನ್ಯೂಸ್: ಹೆಂಡತಿ ಮೊದಲ ಮದುವೆಯ ವಿಷ್ಯ ಕಂಡುಹಿಡಿಯಲೇ ತಾನೇ ಗೂಢಾಚಾರಕನಾದ ಮಂಗಳೂರು ಟೆಕ್ಕಿಯ ಕಥೆ ಇದು. ಆತ ಸಾಫ್ಟ್‌ವೇರ್ ಇಂಜಿನಿಯರ್, ಕೈತುಂಬ ಸಂಬಳ ತೆಗೆದುಕೊಂಡು ಆರಾಮ ಬದುಕು ಕಟ್ಟಿಕೊಂಡಿದ್ದ. ಆದರೆ ಆತನ ಬದುಕಿಗೆ ಒಬ್ಬ ಹೆಣ್ಣು ಬಂದಳು. ಆಕೆ ಕೂಡ ಟೆಕ್ಕಿಯಾಗಿದ್ದಳು. ಮದುವೆಯಾದ ಬಳಿಕ ಹೆಂಡತಿಯ ಚಲನವಲನದ ಮೇಲೆ ಗಂಡನಿಗೆ ಅನುಮಾನ ಬಂದಿದೆ. ಹೀಗಾಗಿ ಉದ್ಯೋಗದ ಸೋಗಿನಲ್ಲಿ ಝೂಮ್‌ ಮೀಟಿಂಗ್‌ ನಲ್ಲಿ ಪತ್ನಿಯನ್ನು ಅಪರಿಚಿತನಂತೆ ಮಾತನಾಡಿಸಿದಾಗ ಅದಾಗಲೇ ಆಕೆಗೆ ಮೊದಲು ಮದುವೆಯಾಗಿದೆ ಎಂಬುದನ್ನು ಕಂಡು ಹಿಡಿದಿದ್ದಾನೆ.

ಪತ್ನಿಯ ದ್ವಿಪತಿತ್ವ ಕಂಡು ಹಿಡಿಯಲು ತಾನೇ ಗೂಢಾಚಾರನಾದ ಟೆಕ್ಕಿ| ಸಿನಿಮೀಯ ಶೈಲಿಯಲ್ಲಿ ಮಂಗಳೂರು ಮೂಲದ ಯುವತಿಯ ಮೋಸ‌ ಬಯಲಿಗೆಳೆದ ಪತಿ Read More »

ರಾಷ್ಟ್ರಪತಿಗಳ ನಿರ್ಧಾರಕ್ಕೆ ಕಾಲಮಿತಿ/ ಸುಪ್ರೀಂ ಗೆ 14 ಪ್ರಶ್ನೆಗಳನ್ನು ಹಾಕಿದ ಮುರ್ಮು.

ಸಮಗ್ರ ನ್ಯೂಸ್: ವಿಧೇಯಕಗಳ ಕುರಿತು ನಿರ್ಧಾರ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ ಕಾಲಮಿತಿ ನಿಗದಿಪಡಿಸಿರುವ ನ್ಯಾಯಾಲಯದ ಆದೇಶಕ್ಕೆ ಸಂಬಂಧಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೀಗ ಸುಪ್ರೀಂ ಕೋರ್ಟ್‌ನ ಮುಂದೆ 14 ಪ್ರಶ್ನೆಗಳನ್ನು ಇರಿಸಿದ್ದಾರೆ. ಸಂವಿಧಾನದಲ್ಲಿ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಲು ಅವಕಾಶ ಇಲ್ಲದಿದ್ದರೂ ನ್ಯಾಯಾಲಯದ ನೀಡಿರುವ ಆದೇಶ ಪ್ರಶ್ನಿಸಿರುವ ರಾಷ್ಟ್ರಪತಿ, ತಮ್ಮ ವಿಶೇಷಾಧಿಕಾರ ಬಳಸಿ ಸುಪ್ರೀಂಗೆ 14 ಪ್ರಶ್ನೆ ಕೇಳಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌.ರವಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಏ.8ರಂದು ಮಹತ್ವದ

ರಾಷ್ಟ್ರಪತಿಗಳ ನಿರ್ಧಾರಕ್ಕೆ ಕಾಲಮಿತಿ/ ಸುಪ್ರೀಂ ಗೆ 14 ಪ್ರಶ್ನೆಗಳನ್ನು ಹಾಕಿದ ಮುರ್ಮು. Read More »