ರಾಜ್ಯ

ಬಿಸ್ಲೆ ಘಾಟ್ ನಲ್ಲಿ ಗುಡ್ಡ ಕುಸಿತ| ರಸ್ತೆ ಸಂಚಾರ ಬಂದ್

ಸಮಗ್ರ ನ್ಯೂಸ್: ಭಾರೀ ಮಳೆ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಸಂಪರ್ಕಿಸುವ ಬಿಸ್ಲೆ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗಿದ್ದು ರಸ್ತೆ ಸಂಚಾರ ಬಂದ್ ಆಗಿದೆ. ಬಿಸಿಲೆ‌ ಘಾಟ್ ರಸ್ತೆಯ ಗಡಿ ಚಾಮುಂಡೇಶ್ವರಿ ಗುಡಿಯ ಸಮೀಪದಲ್ಲಿ ರಸ್ತೆಗೆ ಗುಡ್ಡ ಕುಸಿದಿದ್ದು ವಾಹನ ಸಂಚಾರ ಬಂದ್ ಆಗಿದೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಬಿಸ್ಲೆ ಘಾಟ್ ನಲ್ಲಿ ಗುಡ್ಡ ಕುಸಿತ| ರಸ್ತೆ ಸಂಚಾರ ಬಂದ್ Read More »

ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ| ಏಳು ಮಂದಿ‌ ಆರೋಪಿಗಳ‌ ಬಂಧನ

ಸಮಗ್ರ ನ್ಯೂಸ್: ಸೋಶಿಯಲ್ ಮಿಡಿಯಾದಲ್ಲಿ ಪರಿಚಯವಾದ ವಿಧ್ಯಾರ್ಥಿನಿಯ ಲೈಂಗಿಕವಾಗಿ ಬಳಸಿಕೊಂಡು ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಯುವಕರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾರ್ತಿಕ್, ರಾಕೇಶ್‌ ಸಲ್ಡಾನ, ಜೀವನ್‌, ಸಂದೀಪ್‌, ರಕ್ಷಿತ್, ಶ್ರವಣ್, ಸುರೇಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿರುವ ವಿದ್ಯಾರ್ಥಿನಿಗೆ ಎರಡು ತಿಂಗಳ ಹಿಂದೆ ಕಾರ್ತಿಕ್ ಎಂಬಾತ ಇನ್‌ಸ್ಟಾ ಗ್ರಾಂನಲ್ಲಿ ಪರಿಚಯವಾಗಿದ್ದ. ಪರಿಚಯ ಪ್ರೀತಿಗೆ ತಿರುಗಿದ್ದು ಕಳೆದ ಜೂನ್‌ ತಿಂಗಳಲ್ಲಿ

ಮಂಗಳೂರು: ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ| ಏಳು ಮಂದಿ‌ ಆರೋಪಿಗಳ‌ ಬಂಧನ Read More »

ಅಫ್ಘಾನಿಸ್ತಾನ ಭೂಕಂಪ| ಸಾವಿನ ಸಂಖ್ಯೆ 1400+ ಏರಿಕೆ

ಸಮಗ್ರ ನ್ಯೂಸ್: ಹಿಂದು ಕುಶ್‌ ಪರ್ವತ ಶ್ರೇಣಿಗಳು, ಕುನಾರ್‌ ಕಣಿವೆಯ ಸೊಬಗಿನ ಪೂರ್ವ ಅಫ್ಗಾನಿಸ್ತಾನವು ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ಭೂಕಂಪಕ್ಕೆ ತತ್ತರಿಸಿದೆ. ಭೂಕಂಪದಲ್ಲಿ ಜೀವ ಕಳೆದುಕೊಂಡವರ ಸಂಖ್ಯೆ 1,400ಕ್ಕೂ ಹೆಚ್ಚು. 3 ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಾರ ಸಂಖ್ಯೆಯ ಜನರು ನಿರಾಶ್ರಿತರಾಗಿದ್ದಾರೆ. ರಾತ್ರಿ ಜನರು ನಿದ್ರಿಸುತ್ತಿದ್ದ ವೇಳೆ ಭೂಕಂಪ ಸಂಭವಿಸಿದ್ದರಿಂದ ಅಪಾಯದ ಮುನ್ಸೂಚನೆ ತಿಳಿಯ ದಾಯಿತು. ಮನೆಗಳಿಂದ ಹೊರಗೆ ಓಡಿಬಂದು ಜೀವ ಉಳಿಸಿ ಕೊಳ್ಳಲು ಹೆಚ್ಚಿನ ಜನರಿಗೆ ಆಗಲಿಲ್ಲ. ಹೀಗಾಗಿ ದೊಡ್ಡ ಸಂಖ್ಯೆಯಲ್ಲಿ ಸಾವು-ನೋವು

ಅಫ್ಘಾನಿಸ್ತಾನ ಭೂಕಂಪ| ಸಾವಿನ ಸಂಖ್ಯೆ 1400+ ಏರಿಕೆ Read More »

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ತಿರುವು| ಹತ್ಯೆಗೀಡಾದವರ ಸಮಾಧಿ ತೋರಿಸಲು ಸಿದ್ದ ಎಂದು ಎಸ್ಐಟಿ ಗೆ ಪತ್ರ ಬರೆದ ಗ್ರಾಮಸ್ಥರು

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣ ಮತ್ತೊಂದು ತಿರುವು ಪಡೆದುಕೊಳ್ಳುತ್ತಿದ್ದು, ಹತ್ಯೆಗೀಡಾದವರ ಸಮಾಧಿ ತೋರಿಸಲು ಸಿದ್ಧ ಎಂದು ಧರ್ಮಸ್ಥಳ ಗ್ರಾಮಸ್ಥರ ಗುಂಪೊಂದು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕೆ ಪತ್ರ ಬರೆದಿದೆ. ಗ್ರಾಮಸ್ಥರ ಪರವಾಗಿ ಧರ್ಮಸ್ಥಳ ನಿವಾಸಿ ತುಕಾರಾಮ ಗೌಡ ಎಂಬುವವರು ಎಸ್‌ಐಟಿಗೆ ಪತ್ರ ಸಲ್ಲಿಸಿದ್ದಾರೆ. ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಾವು ಭಯದಲ್ಲಿ ಬದುಕುವಂತಾಗಿದೆ. ಆದರೆ, ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಎಸ್‌ಐಟಿ ರಚಿಸಿರುವುದು ನಮ್ಮ ವಿಶ್ವಾಸ ಹೆಚ್ಚಾಗುವಂತೆ ಮಾಡಿದೆ. ಮಾಧ್ಯಮಗಳಲ್ಲಿ ತೋರಿಸಲಾಗಿರುವ

ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ತಿರುವು| ಹತ್ಯೆಗೀಡಾದವರ ಸಮಾಧಿ ತೋರಿಸಲು ಸಿದ್ದ ಎಂದು ಎಸ್ಐಟಿ ಗೆ ಪತ್ರ ಬರೆದ ಗ್ರಾಮಸ್ಥರು Read More »

ಪುತ್ತೂರು: ಅಕ್ರಮ-ಸಕ್ರಮ ಮಂಜೂರಾತಿಗೆ ಲಂಚ ಪಡೆದ ಆರೋಪ| 47 ಜನ ಲಂಚ ನೀಡಿದವರನ್ನು ಕರೆತನ್ನಿ ಎಂದು ಶಾಸಕ ರೈಗೆ ಬಿಜೆಪಿ ಟಾಂಗ್

ಸಮಗ್ರ ನ್ಯೂಸ್: ಅಕ್ರಮ-ಸಕ್ರಮ ಮಂಜೂರಾತಿಗೆ ಮಾಜಿ ಶಾಸಕ ಲಂಚ ಪಡೆದಿದ್ದು ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ಹಣ ಪಡೆದಿಲ್ಲ ಎಂದು ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದ ಪುತ್ತೂರು ಶಾಸಕ ಅಶೋಕ್ ರೈ ಹೇಳಿಕೆಗೆ ಇದೀಗ ಬಿಜೆಪಿ ಪ್ರತಿಸವಾಲು ಹಾಕಿದ್ದು, ಶಾಸಕರು ಲಂಚ ನೀಡಿದ್ದ 47 ಜನರನ್ನು ಕರೆದುಕೊಂಡು ಬರಲಿ ಎಂದಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರ್ ಪುತ್ತೂರು ಶಾಸಕರು ನೀಡಿದ ಸವಾಲನನ್ನು ಸ್ವೀಕರಿಸುವುದಾಗಿ ಹೇಳಿದ್ದು, ಶಾಸಕರು ಲಂಚ ನೀಡಿದ 47

ಪುತ್ತೂರು: ಅಕ್ರಮ-ಸಕ್ರಮ ಮಂಜೂರಾತಿಗೆ ಲಂಚ ಪಡೆದ ಆರೋಪ| 47 ಜನ ಲಂಚ ನೀಡಿದವರನ್ನು ಕರೆತನ್ನಿ ಎಂದು ಶಾಸಕ ರೈಗೆ ಬಿಜೆಪಿ ಟಾಂಗ್ Read More »

ಒಂದೆಡೆ ಧರ್ಮಸ್ಥಳಕ್ಕೆ ಜೈ, ಮತ್ತೊಂದೆಡೆ ಸೌಜನ್ಯ ಪರ, ಬಿಜೆಪಿಯವರ ನಿಲುವೇ ದ್ವಂದ್ವ ರಾಜಕೀಯ – ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡಿರುವುದು ಧರ್ಮಯಾತ್ರೆ ಅಲ್ಲ, ರಾಜಕೀಯ ಯಾತ್ರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರದಿಗಾರರಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಈಗ ಧರ್ಮಸ್ಥಳ ಪ್ರಕರಣವನ್ನು ಈಗ ಎನ್. ಐ. ಎ ತನಿಖೆ ಮಾಡಿಸಿ ಎಂದು ಹೇಳುತ್ತಿದ್ದಾರೆ. ಎಸ್.ಐ.ಟಿ ಅವರೂ ಪೊಲೀಸರು, ಎನ್‌.ಐ.ಎ ಅವರೂ ಪೊಲೀಸರು. ನಮ್ಮ ಪೊಲೀಸರ ಮೇಲೆ ಬಿಜೆಪಿಗೆ ನಂಬಿಕೆ ಇಲ್ಲವೇ ? ಬಿಜೆಪಿ ಮೊದಲು ತನಿಖೆ ಮಾಡಿ ಎಂದು ಹೇಳಲೇ ಇಲ್ಲ. ಉತ್ಖನನ ಕಾರ್ಯ ನಡೆದ ಮೇಲೆ

ಒಂದೆಡೆ ಧರ್ಮಸ್ಥಳಕ್ಕೆ ಜೈ, ಮತ್ತೊಂದೆಡೆ ಸೌಜನ್ಯ ಪರ, ಬಿಜೆಪಿಯವರ ನಿಲುವೇ ದ್ವಂದ್ವ ರಾಜಕೀಯ – ಸಿಎಂ ಸಿದ್ದರಾಮಯ್ಯ Read More »

‘ಡೂ ಯು ನೋ ಕನ್ನಡ?’ ಎಂದ ಸಿಎಂ ಸಿದ್ದರಾಮಯ್ಯ| ಹೃದಯ ಗೆದ್ದ ರಾಷ್ಟ್ರಪತಿ ಮುರ್ಮು ಉತ್ತರ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನಡುವೆ ಸೋಮವಾರ ಭಾಷಾ ಜುಗಲ್ ಬಂದಿ ನಡೆಯಿತು. ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯಲ್ಲಿ ಸೋಮವಾರ ನಡೆದ ವಜ್ರ ಮಹೋತ್ಸವ ಸಮಾರಂಭದಲ್ಲಿ ಈ ಘಟನೆ ಜರುಗಿತು. ಮೊದಲಿಗೆ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಭಾಷಣ ಪ್ರಾರಂಭಿಸುವ ಮುನ್ನ ‘ಯು ನೋ ಕನ್ನಡ?(ನಿಮಗೆ ಕನ್ನಡ ಬರುತ್ತದೆಯೇ?)’ ಎಂದು ರಾಷ್ಟ್ರಪತಿಗಳಿಗೆ ತಮಾಷೆಯಿಂದ ಕೇಳಿದರು. ಸಿಎಂ ಪ್ರಶ್ನೆಗೆ ರಾಷ್ಟ್ರಪತಿ ಹಾಗೂ ವೇದಿಕೆಯ ಆಹ್ವಾನಿತರು ನಕ್ಕರು. ಬಳಿಕ

‘ಡೂ ಯು ನೋ ಕನ್ನಡ?’ ಎಂದ ಸಿಎಂ ಸಿದ್ದರಾಮಯ್ಯ| ಹೃದಯ ಗೆದ್ದ ರಾಷ್ಟ್ರಪತಿ ಮುರ್ಮು ಉತ್ತರ Read More »

ಧರ್ಮಸ್ಥಳ: ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ| ‘ಮಗಳ ಹೆಸರಲ್ಲಿ ‌ಹಣ ಮಾಡಿ ಮನೆ ಕಟ್ಟಿಸಿದೆ’ ಎಂದು ನಿಮ್ಮ ಪಕ್ಷದವರೇ ಟೀಕಿಸುತ್ತಾರೆ ಎಂದ ಕುಸುಮಾವತಿ

ಸಮಗ್ರ ನ್ಯೂಸ್: 2012ರಲ್ಲಿ ಅತ್ಯಾಚಾರ ಒಳಗಾಗಿ ಕೊಲೆಯಾದ ಸೌಜನ್ಯ ಮನೆಗೆ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ನೀಡಿ, ನ್ಯಾಯಕ್ಕಾಗಿ ಸೌಜನ್ಯ ಕುಟುಂಬ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಧರ್ಮಸ್ಥಳದಲ್ಲಿ ನಡೆದ ಬಿಜೆಪಿ ಸಮಾವೇಶದ ಬಳಿಕ ವಿಜಯೇಂದ್ರ ಅವರು ನೇರವಾಗಿ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿರುವ ಸೌಜನ್ಯ ಮನೆಗೆ ತೆರಳಿದರು. ಅಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರೊಂದಿಗೆ ಮಾತುಕತೆ ನಡೆಸಿದರು. ತಮ್ಮ ಮಗಳ ಸಾವಿಗೆ ನ್ಯಾಯ ಕೇಳಿದ್ದಕ್ಕಾಗಿ ತಮ್ಮನ್ನು ಗುರಿಯಾಗಿಸಲಾಗುತ್ತಿದೆ ಎಂದು ಕುಸುಮಾವತಿ

ಧರ್ಮಸ್ಥಳ: ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ| ‘ಮಗಳ ಹೆಸರಲ್ಲಿ ‌ಹಣ ಮಾಡಿ ಮನೆ ಕಟ್ಟಿಸಿದೆ’ ಎಂದು ನಿಮ್ಮ ಪಕ್ಷದವರೇ ಟೀಕಿಸುತ್ತಾರೆ ಎಂದ ಕುಸುಮಾವತಿ Read More »

ಇತಿಹಾಸದ ಪುಟ ಸೇರಿದ ಬಿಬಿಎಂಪಿ| ಇಂದಿನಿಂದ ‘ಗ್ರೇಟರ್ ಬೆಂಗಳೂರು’ ಆಡಳಿತ

ಸಮಗ್ರ ನ್ಯೂಸ್: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆಡಳಿತ ಮಂಗಳವಾರದಿಂದ ಚಾಲನೆಗೆ ಬರುತ್ತಿರುವ ಹಿನ್ನೆಲೆಯಲ್ಲಿ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ನಿಯಮ ರೂಪಿಸಿರುವ ರಾಜ್ಯ ಸರ್ಕಾರ ಅಧಿಸೂಚನೆ ಪ್ರಕಟಿಸಿದೆ. ಹಾಗಾಗಿ ಇಷ್ಟು ದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಂದು ಗುರುತಿಸಲ್ಪಡುತ್ತಿದ್ದದ್ದು ಇದೀಗ ಇತಿಹಾಸದ ಪುಟ ಸೇರಿದೆ. ಬಿಬಿಎಂಪಿ ಆಡಳಿತ ವ್ಯಾಪ್ತಿಯನ್ನು 5 ನಗರ ಪಾಲಿಕೆಗಳಿಗೆ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೆ ಈ ನಗರ ಪಾಲಿಕೆಗಳ ಮೇಲೆ ನಿಗಾ ವಹಿಸಲು ಜಿಬಿಎ ರಚಿಸಲಾಗಿದ್ದು, ಮಂಗಳವಾರದಿಂದ

ಇತಿಹಾಸದ ಪುಟ ಸೇರಿದ ಬಿಬಿಎಂಪಿ| ಇಂದಿನಿಂದ ‘ಗ್ರೇಟರ್ ಬೆಂಗಳೂರು’ ಆಡಳಿತ Read More »

ಅಪಘಾನಿಸ್ತಾನದಲ್ಲಿ ಭಾರೀ ಭೂಕಂಪ| 250 ಮಂದಿ ಸಾವು; ಅಪಾರ ನಷ್ಟ

ಸಮಗ್ರ ನ್ಯೂಸ್: ಅಫ್ಘಾನಿಸ್ತಾನದ ಆಗ್ನೇಯ ಭಾಗದಲ್ಲಿ ಭಾನುವಾರ 6.0 ತೀವ್ರತೆಯ ಭೂಕಂಪ ಸಂಭವಿಸಿದ್ದು, 250 ಕ್ಕೂ ಹೆಚ್ಚು ಜೋರು ಸಾವನ್ನಪ್ಪಿದ್ದಾರೆ ಮತ್ತು 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ದೇಶದ ಮಾಹಿತಿ ಸಚಿವಾಲಯ ವರದಿ ಮಾಡಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಪ್ರಕಾರ, ಭೂಕಂಪವು 00:47:41 IST ಕ್ಕೆ ಸಂಭವಿಸಿದೆ, ಇದರ ಕೇಂದ್ರಬಿಂದು ಅಕ್ಷಾಂಶ 34.50N ಮತ್ತು ರೇಖಾಂಶ 70.81E ನಲ್ಲಿ 160 ಕಿ.ಮೀ ಆಳದಲ್ಲಿ ಪತ್ತೆ ಮಾಡಲಾಗಿದೆ. ನಂಗರ್ಹಾರ್ ಸಾರ್ವಜನಿಕ ಆರೋಗ್ಯ ಇಲಾಖೆಯ ವಕ್ತಾರ

ಅಪಘಾನಿಸ್ತಾನದಲ್ಲಿ ಭಾರೀ ಭೂಕಂಪ| 250 ಮಂದಿ ಸಾವು; ಅಪಾರ ನಷ್ಟ Read More »