ರಾಜ್ಯ

ಧರ್ಮಸ್ಥಳ ಪ್ರಕರಣದಲ್ಲಿ ಕೊನೆಗೂ ಮೌನ ಮುರಿದ ವೀರೇಂದ್ರ ಹೆಗ್ಗಡೆ| ‘ಇದೊಂದು ವ್ಯವಸ್ಥಿತ ಷಡ್ಯಂತ್ರ’ ಎಂದ ಧರ್ಮಾಧಿಕಾರಿ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಗಳು ಮತ್ತು ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಯ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ತಮ್ಮ ಮೊದಲ ಎಕ್ಸ್‌ಕ್ಲೂಸಿವ್ ಸಂದರ್ಶನದಲ್ಲಿ ಮಾತನಾಡಿದ್ದಾರೆ. PTI ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ, ಈ ಆರೋಪಗಳನ್ನು ‘ಆಧಾರರಹಿತ’ ಮತ್ತು ‘ವ್ಯವಸ್ಥಿತ ಷಡ್ಯಂತ್ರ’ ಎಂದು ಕರೆದಿದ್ದಾರೆ. ಡಾ. ವೀರೇಂದ್ರ ಹೆಗ್ಗಡೆ ಅವರು, ‘ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಗಳು ಸಂಪೂರ್ಣವಾಗಿ ಆಧಾರರಹಿತವಾಗಿವೆ. ಈ ರೀತಿಯ ಆರೋಪಗಳಿಂದ ನಮ್ಮ ಮನಸ್ಸಿಗೆ ತೀವ್ರ ನೋವಾಗಿದೆ. […]

ಧರ್ಮಸ್ಥಳ ಪ್ರಕರಣದಲ್ಲಿ ಕೊನೆಗೂ ಮೌನ ಮುರಿದ ವೀರೇಂದ್ರ ಹೆಗ್ಗಡೆ| ‘ಇದೊಂದು ವ್ಯವಸ್ಥಿತ ಷಡ್ಯಂತ್ರ’ ಎಂದ ಧರ್ಮಾಧಿಕಾರಿ Read More »

ಧರ್ಮಸ್ಥಳ: ಆನೆ ಮಾವುತ ಹಾಗೂ ಸಹೋದರಿಯ ಜೋಡಿಕೊಲೆ ಪ್ರಕರಣ| ಕುಟುಂಬಸ್ಥರಿಂದ ಮತ್ತೆ ನ್ಯಾಯಕ್ಕಾಗಿ ಎಸ್ಐಟಿ ಗೆ ದೂರು

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ 2012ರಲ್ಲಿ ನಡೆದಿದ್ದ ಆನೆಮಾವುತ ನಾರಾಯಣ ಮತ್ತು ಅವರ ಸಹೋದರಿ ಯಮುನಾ ಅವರ ಭೀಕರ ಹತ್ಯೆ ಪ್ರಕರಣ ಮತ್ತೆ ಮುನ್ನಲೆಗೆ ಬಂಧಿದೆ. ಈ ಪ್ರಕರಣದ ಬಗ್ಗೆ ಸ್ಪಷ್ಟತೆ ಸಿಗದೇ, ಆರೋಪಿಗಳು ಇಂದಿಗೂ ಪತ್ತೆಯಾಗದ ಹಿನ್ನೆಲೆಯಲ್ಲಿ, ಮೃತರ ಕುಟುಂಬಸ್ಥರು ಈಗ ಮತ್ತೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಲೇರಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬೂರ್ಜೆ ಪ್ರದೇಶದಲ್ಲಿ ಈ ಅಮಾನುಷ ಎರಡು ಹತ್ಯೆ ನಡೆದಿತ್ತು. ಆ ಸಂದರ್ಭದಲ್ಲಿ, ನಾರಾಯಣ ಹಾಗೂ ಅವರ ಸಹೋದರಿ ಯಮುನಾ ಅವರನ್ನು ದುಷ್ಕರ್ಮಿಗಳು

ಧರ್ಮಸ್ಥಳ: ಆನೆ ಮಾವುತ ಹಾಗೂ ಸಹೋದರಿಯ ಜೋಡಿಕೊಲೆ ಪ್ರಕರಣ| ಕುಟುಂಬಸ್ಥರಿಂದ ಮತ್ತೆ ನ್ಯಾಯಕ್ಕಾಗಿ ಎಸ್ಐಟಿ ಗೆ ದೂರು Read More »

ನಟಿ ರಮ್ಯಾಗೆ ಅಶ್ಲೀಲ ಸಂದೇಶ| ಉಡುಪಿ ‌ಮೂಲದ ಇಬ್ಬರು ಅರೆಸ್ಟ್

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನಟಿ ರಮ್ಯಾ ದರ್ಶನ ಕುರಿತಂತೆ ಹಾಕಿದ ಪೋಸ್ಟ್ ಗೆ ಅಶ್ಲೀಲವಾಗಿ ಕಮೆಂಟ್ ಮಾಡಿದ ಉಡುಪಿ ಮೂಲದ ಇಬ್ಬರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಬಂಧಿತರನ್ನು ಉಡುಪಿ ಮೂಲದವರಾದ ಸುಜನ್ ಮತ್ತು ಆದರ್ಶ್ ಎಂದು ಗುರುತಿಸಲಾಗಿದೆ. ಇದಕ್ಕೂ ಮುನ್ನ ಸಿಸಿಬಿ ಪೊಲೀಸರು ಮಂಜುನಾಥ, ಭುವನ್ ಗೌಡ, ಪವನ್, ಓಬಣ್ಣ ಮತ್ತು ಗಂಗಾಧರ್ ಸೇರಿ ಒಟ್ಟು 9 ಯುವಕರನ್ನು ಬಂಧಿಸಿದ್ದರು. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ

ನಟಿ ರಮ್ಯಾಗೆ ಅಶ್ಲೀಲ ಸಂದೇಶ| ಉಡುಪಿ ‌ಮೂಲದ ಇಬ್ಬರು ಅರೆಸ್ಟ್ Read More »

ಧರ್ಮಸ್ಥಳ ಪ್ರಕರಣ| ತಮಿಳುನಾಡಿನಲ್ಲಿ ಗುಂಪೊಂದು ಮುಸುಕುಧಾರಿಯನ್ನು ಸಂಪರ್ಕಿಸಿತ್ತೇ? ಎಸ್ಐಟಿ ಅಧಿಕಾರಿಗಳ ಸ್ಪಷ್ಟನೆ ಏನು?

ಸಮಗ್ರ ನ್ಯೂಸ್: ತಮಿಳುನಾಡಿನಲ್ಲಿದ್ದ ವೇಳೆ ಗುಂಪೊಂದು ತನ್ನನ್ನು ಸಂಪರ್ಕಿಸಿತ್ತು ಎಂದು ಸಾಕ್ಷಿ-ದೂರುದಾರ ಹೇಳಿಲ್ಲ ಎಂದು ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಸೋಮವಾರ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ‘ಸುವರ್ಣ ನ್ಯೂಸ್’ ನ ಅಂಗಸಂಸ್ಥೆ ‘ಕನ್ನಡಪ್ರಭ’ ವರದಿ ಮಾಡಿದೆ 2014ರ ನಂತರ ತಮಿಳುನಾಡಿನಲ್ಲಿದ್ದೆ. 2023ರಲ್ಲಿ ಒಂದು ಗುಂಪು ನನ್ನನ್ನು ಸಂಪರ್ಕಿಸಿತ್ತು. ಧರ್ಮಸ್ಥಳದಲ್ಲಿ ಶವ ಹೂತಿರುವ ಬಗ್ಗೆ ನನ್ನನ್ನು ಕೇಳಿತ್ತು. ನಾನು ಕಾನೂನು ಪ್ರಕಾರವೇ ಶವಗಳನ್ನು ಹೂತಿರುವುದಾಗಿ ಹೇಳಿದ್ದೇ. ಆದರೆ ಈ ಗುಂಪು ತಪ್ಪು ಹೇಳಿಕೆ ನೀಡುವಂತೆ ಒತ್ತಡ

ಧರ್ಮಸ್ಥಳ ಪ್ರಕರಣ| ತಮಿಳುನಾಡಿನಲ್ಲಿ ಗುಂಪೊಂದು ಮುಸುಕುಧಾರಿಯನ್ನು ಸಂಪರ್ಕಿಸಿತ್ತೇ? ಎಸ್ಐಟಿ ಅಧಿಕಾರಿಗಳ ಸ್ಪಷ್ಟನೆ ಏನು? Read More »

ರಾಜ್ಯಾದ್ಯಂತ ಭಾರೀ ವರ್ಷಧಾರೆ| ಹಲವು ಜಿಲ್ಲೆಗಳ ಶಾಲೆಗಳಿಗೆ ಇಂದೂ(ಆ.19) ರಜೆ ಘೋಷಣೆ| ಇನ್ನೆರಡು ದಿನವೂ ಮುಂದುವರಿಯಲಿದೆ ಮಳೆ

ಸಮಗ್ರ ನ್ಯೂಸ್: ಕೊಡಗು, ಮಲೆನಾಡು, ಉತ್ತರ ಕರ್ನಾಟಕ, ಕರಾವಳಿ ಸೇರಿ ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾವೇರಿ, ತುಂಗಾ, ತುಂಗಭದ್ರಾ, ಶರಾವತಿ, ನೇತ್ರಾವತಿ, ಕೃಷ್ಣಾ ಸೇರಿ ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ರಾಜ್ಯದಲ್ಲಿ ಮಳೆಯ ಕಾರಣದಿಂದ ಸುಮಾರು 5 ಲಕ್ಷ ಹೆಕ್ಟೇರ್‌ ಬೆಳೆ ನಾಶವಾಗಿದ್ದು, 150 ಮನೆ ಧರೆಗೆ ಉರುಳಿವೆ. ಹಂಪಿಯ ಸ್ಮಾರಕಗಳು, ಶೃಂಗೇರಿಯ ಕಪ್ಪೆ ಶಂಕರ ದೇಗುಲ, ಶ್ರೀರಂಗಪಟ್ಟಣದ ರಂಗನತಿಟ್ಟು ಪಕ್ಷಿಧಾಮ ಸೇರಿ ಹಲವು ಪ್ರವಾಸಿ ತಾಣಗಳು ಜಲಾವೃತಗೊಂಡಿವೆ. ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ

ರಾಜ್ಯಾದ್ಯಂತ ಭಾರೀ ವರ್ಷಧಾರೆ| ಹಲವು ಜಿಲ್ಲೆಗಳ ಶಾಲೆಗಳಿಗೆ ಇಂದೂ(ಆ.19) ರಜೆ ಘೋಷಣೆ| ಇನ್ನೆರಡು ದಿನವೂ ಮುಂದುವರಿಯಲಿದೆ ಮಳೆ Read More »

ಉಪರಾಷ್ಟ್ರಪತಿ ಸ್ಥಾನಕ್ಕೆ ಸಿ.ಪಿ ರಾಧಾಕೃಷ್ಣನ್ ಎನ್ ಡಿಎ ಅಭ್ಯರ್ಥಿ

ಸಮಗ್ರ ನ್ಯೂಸ್: ಜಗದೀಪ್ ಧನ್ಕರ್ ರಾಜೀನಾಮೆಯಿಂದ ತೆರವಾಗಿರುವ ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಸಮೀಪಿಸುತ್ತಿದೆ. ಅಭ್ಯರ್ಥಿ ಆಯ್ಕೆ ಕುರಿತು ಸಭೆ ಸೇರಿದ್ದ ಬಿಜೆಪಿ ಸುದೀರ್ಘ ಚರ್ಚೆ ಬಳಿಕ ಅಭ್ಯರ್ಥಿ ಘೋಷಿಸಿದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಹೆಸರು ಘೋಷಿಸಲಾಗಿದೆ. ತಮಿಳುನಾಡು ಮೂಲದ ಸಿಪಿ ರಾಧಕೃಷ್ಣನ್ ಹೆಸರು ಘೋಷಣೆಗೆ ಎನ್‌ಡಿಎ ಮಿತ್ರಪಕ್ಷಗಳು ಬೆಂಬಲ ಸೂಚಿಸಿದೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಗಮನಸೆಳೆದಿದ್ದ ಸಿಪಿ ರಾಧಾಕೃಷ್ಣನ್ ಬಳಿಕ ಕೊಯಂಬತ್ತೂರಿನಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ರಾಜಕೀಯ ಜೀವನದ ನಿಸ್ವಾರ್ಥ

ಉಪರಾಷ್ಟ್ರಪತಿ ಸ್ಥಾನಕ್ಕೆ ಸಿ.ಪಿ ರಾಧಾಕೃಷ್ಣನ್ ಎನ್ ಡಿಎ ಅಭ್ಯರ್ಥಿ Read More »

ಸಿಎಂ ಸಿದ್ದರಾಮಯ್ಯ ಮೇಲೆ‌ ಕೊಲೆ ಆರೋಪ| ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಲು ಸೂಚನೆ

ಸಮಗ್ರ ನ್ಯೂಸ್: ಸೌಜನ್ಯ ಕೊಲೆ ಪ್ರಕರಣಕ್ಕೆ ಧ್ವನಿಯಾಗಿರುವ ಮಹೇಶ್‌ ಶೆಟ್ಟಿ ತಿಮರೋಡಿ ಅವರು ಸಿಎಂ ಸಿದ್ದರಾಮಯ್ಯ 24 ಕೊಲೆಗಳನ್ನು ಮಾಡಿದ್ದಾರೆ ಎಂದು ಹೇಳಿಕೆಯನ್ನು ನೀಡಿದ್ದು, ಇದೀಗ ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ತಿಮರೋಡಿಯನ್ನು ಬಂಧಿಸುವಂತೆ ಸೂಚನೆ ನೀಡಿದೆ. ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಮರೋಡಿಯವರ ವಿರುದ್ಧ ಒಂದೇ ದಿನದಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಲು ಮುಂದಾಗಿದ್ದು, ಕೂಡಲೇ ಮಹೇಶ್ ಶೆಟ್ಟಿ ತಿಮ್ಮರೋಡಿಯ ಮೇಲೆ ಎಫ್‌ಐಆರ್ ದಾಖಲಿಸುವಂತೆ ಸದನದಲ್ಲಿಯೇ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿ

ಸಿಎಂ ಸಿದ್ದರಾಮಯ್ಯ ಮೇಲೆ‌ ಕೊಲೆ ಆರೋಪ| ಮಹೇಶ್ ಶೆಟ್ಟಿ ತಿಮರೋಡಿಯನ್ನು ಬಂಧಿಸಲು ಸೂಚನೆ Read More »

ಭಾರೀ ಮಳೆ ಹಿನ್ನಲೆ| ಹಲವು ಜಿಲ್ಲೆಗಳ ಶಾಲೆ ಕಾಲೇಜುಗಳಿಗೆ ಇಂದು ರಜೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇಂದು ಕೊಡಗು ಜಿಲ್ಲೆಯಾಧ್ಯಂತ ಆರೆಂಜ್ ಅಲರ್ಟ್ ನೀಡಲಾಗಿದೆ. ಜೋರು ಗಾಳಿ ಮಳೆಯ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ವೆಂಕಟರಾಜಾ ಆದೇಶಿಸಿದ್ದಾರೆ. ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಇಂದು

ಭಾರೀ ಮಳೆ ಹಿನ್ನಲೆ| ಹಲವು ಜಿಲ್ಲೆಗಳ ಶಾಲೆ ಕಾಲೇಜುಗಳಿಗೆ ಇಂದು ರಜೆ Read More »

ದ.ಕ‌‌ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನಲೆ| ಆ.18ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಆ.18ರಂದು ದ.ಕ. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದ.ಕ‌‌ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನಲೆ| ಆ.18ರಂದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ‌ ಹಿನ್ನಲೆ| ಚಿಕ್ಕಮಗಳೂರು ಜಿಲ್ಲೆಯ ‌ಈ ತಾಲೂಕಿನ ಶಾಲೆಗಳಿಗೆ ಆ.18ರಂದು ರಜೆ

ಸಮಗ್ರ ನ್ಯೂಸ್: ಕಾಫಿನಾಡು ಮಲೆನಾಡ ಭಾಗದಲ್ಲಿ ಭಾರೀ ಗಾಳಿ-ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮಲೆನಾಡು ಭಾಗದ ಶಾಲೆಗಳಿಗೆ ಸೋಮವಾರ(ಆ.18) ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ಆದೇಶ ಹೊರಡಿಸಿದ್ದಾರೆ. ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್‌ಆರ್ ಪುರ, ಕಳಸ ತಾಲೂಕಿನಲ್ಲಿ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ಜಾಗರ ಹೋಬಳಿಗೆ ನಾಳೆ ಒಂದು ದಿನ ರಜೆ ಘೋಷಿಸಲಾಗಿದೆ. ಇನ್ನು ಪಶ್ಚಿಮ ಘಟ್ಟ ಹಾಗೂ ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು,

ಭಾರೀ ಮಳೆ‌ ಹಿನ್ನಲೆ| ಚಿಕ್ಕಮಗಳೂರು ಜಿಲ್ಲೆಯ ‌ಈ ತಾಲೂಕಿನ ಶಾಲೆಗಳಿಗೆ ಆ.18ರಂದು ರಜೆ Read More »