ಧರ್ಮಸ್ಥಳ ಪ್ರಕರಣದಲ್ಲಿ ಕೊನೆಗೂ ಮೌನ ಮುರಿದ ವೀರೇಂದ್ರ ಹೆಗ್ಗಡೆ| ‘ಇದೊಂದು ವ್ಯವಸ್ಥಿತ ಷಡ್ಯಂತ್ರ’ ಎಂದ ಧರ್ಮಾಧಿಕಾರಿ
ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಗಳು ಮತ್ತು ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆಯ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ತಮ್ಮ ಮೊದಲ ಎಕ್ಸ್ಕ್ಲೂಸಿವ್ ಸಂದರ್ಶನದಲ್ಲಿ ಮಾತನಾಡಿದ್ದಾರೆ. PTI ನ್ಯೂಸ್ಗೆ ನೀಡಿದ ಸಂದರ್ಶನದಲ್ಲಿ, ಈ ಆರೋಪಗಳನ್ನು ‘ಆಧಾರರಹಿತ’ ಮತ್ತು ‘ವ್ಯವಸ್ಥಿತ ಷಡ್ಯಂತ್ರ’ ಎಂದು ಕರೆದಿದ್ದಾರೆ. ಡಾ. ವೀರೇಂದ್ರ ಹೆಗ್ಗಡೆ ಅವರು, ‘ಧರ್ಮಸ್ಥಳದಲ್ಲಿ ಶವಗಳನ್ನು ಹೂಳಲಾಗಿದೆ ಎಂಬ ಆರೋಪಗಳು ಸಂಪೂರ್ಣವಾಗಿ ಆಧಾರರಹಿತವಾಗಿವೆ. ಈ ರೀತಿಯ ಆರೋಪಗಳಿಂದ ನಮ್ಮ ಮನಸ್ಸಿಗೆ ತೀವ್ರ ನೋವಾಗಿದೆ. […]









