Uncategorized

ಚಿರು ನಟನೆಯ ಕೊನೆಯ ಸಿನಿಮಾ ರಾಜಮಾರ್ತಾಂಡ ಅಕ್ಟೋಬರ್ 6 ಕ್ಕೆ ರಿಲೀಸ್

ಸಮಗ್ರ ನ್ಯೂಸ್: ಚಿರಂಜೀವಿ ಸರ್ಜಾ ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ‘ರಾಜಮಾರ್ತಾಂಡ’. ಈ ಚಿತ್ರ ಅಕ್ಟೋಬರ್ 6ರಂದು ರಿಲೀಸ್ ಆಗಲಿದೆ. ಚಿರು ಕೊನೆಯ ಸಿನಿಮಾ ಆದ ಕಾರಣಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ.ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ‘ರಾಜಮಾರ್ತಾಂಡ’. ಈ ಚಿತ್ರ ಅಕ್ಟೋಬರ್ 6ರಂದು ರಿಲೀಸ್ ಆಗಲಿದೆ. ಅಂದು ಧ್ರುವ ಸರ್ಜಾ ಜನ್ಮದಿನ. ಈ ಕಾರಣದಿಂದಲೇ ಚಿರು ಕೊನೆಯ ಸಿನಿಮಾ ರಿಲೀಸ್ ಆಗುತ್ತಿದೆ. ಶಿವಕುಮಾರ್ ‘ರಾಜಮಾರ್ತಾಂಡ’ ಚಿತ್ರವನ್ನು ನಿರ್ಮಿಸಿದ್ದಾರೆ. ರಾಮನಾರಾಯಣ್ ನಿರ್ದೇಶಿಸಿದ್ದಾರೆ. ಅರ್ಜುನ್ ಜನ್ಯ […]

ಚಿರು ನಟನೆಯ ಕೊನೆಯ ಸಿನಿಮಾ ರಾಜಮಾರ್ತಾಂಡ ಅಕ್ಟೋಬರ್ 6 ಕ್ಕೆ ರಿಲೀಸ್ Read More »

ಕೇರಳ: ತಿರುಓಣಂ ಬಂಪರ್​ ಲಾಟರಿಯಲ್ಲಿ ಕೋಟಿ ಗೆದ್ದ ಪಾಲಕ್ಕಾಡ್​ ವ್ಯಕ್ತಿ

ಸಮಗ್ರ ನ್ಯೂಸ್: ಕೇರಳ ರಾಜ್ಯ ಲಾಟರಿ ಇಲಾಖೆಯು ಸೆ. 20ರಂದುಮಧ್ಯಾಹ್ನ ಈ ವರ್ಷದ ತಿರುಓಣಂ ಬಂಪರ್ ಬಿಆರ್ 93 ಲಾಟರಿಯ ಲಕ್ಕಿ ಡ್ರಾ ವಿಜೇತರ ಲಾಟರಿ ಟಿಕೆಟ್ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ತಿರುವನಂತಪುರಂನ ಗೋರ್ಕಿ ಭವನದಲ್ಲಿ ನಡೆದ ಲಾಟರಿ ಡ್ರಾ ಸಮಾರಂಭದಲ್ಲಿ ಕೇರಳದ ಹಣಕಾಸು ಸಚಿವ ಕೆ.ಎನ್.ಬಾಲಗೋಪಾಲ್ ಅವರು ಬಂಪರ್ ಲಾಟರಿ 2023 ವಿಜೇತರನ್ನು ಘೋಷಿಸಿದ್ದಾರೆ. ಈ ಅದೃಷ್ಟದ ಡ್ರಾದಲ್ಲಿ ಟಿಕೆಟ್ ಸಂಖ್ಯೆ TE 230662 ಪ್ರಥಮ ಬಹುಮಾನವನ್ನು ಗಳಿಸಿದ್ದು, ಈ ಟಿಕೆಟ್​ಗೆ 25 ಕೋಟಿ ರೂಪಾಯಿ

ಕೇರಳ: ತಿರುಓಣಂ ಬಂಪರ್​ ಲಾಟರಿಯಲ್ಲಿ ಕೋಟಿ ಗೆದ್ದ ಪಾಲಕ್ಕಾಡ್​ ವ್ಯಕ್ತಿ Read More »

ತಲಕಾವೇರಿಯಲ್ಲಿ ತಾಯಿ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ| ಯಾವಾಗ ಗೊತ್ತಾ ಮಾತೆ ದರ್ಶನ ಭಾಗ್ಯ?

ಸಮಗ್ರ ನ್ಯೂಸ್: ಕೊಡಗಿನ ಪ್ರಸಿದ್ಧ ಸ್ಥಳಗಳಲ್ಲಿ ತಲಕಾವೇರಿಯೂ ಒಂದಾಗಿದೆ. ಇಂತಹ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್.17ರಂದು ಮಧ್ಯರಾತ್ರಿ 1.27ಕ್ಕೆ ತಿರ್ಥೋದ್ಭವ ಆಗಲಿದೆ. ಈ ಬಗ್ಗೆ ಭಾಗಮಂಡಲದ ತಲಕಾವೇರಿ ದೇವಾಲಯ ಸಮಿತಿಯಿಂದ ಮಾಹಿತಿ ನೀಡಲಾಗಿದ್ದು, ತಲಕಾವೇರಿಯ ಕಾವೇರಿ ಉಗಮ ಸ್ಥಾನದಲ್ಲಿ ಅಕ್ಟೋಬರ್ 17ರಂದು ಮಧ್ಯರಾತ್ರಿ 1.27ಕ್ಕೆ ಕರ್ಕಾಟಕ ಲಗ್ನದಲ್ಲಿ ತೀರ್ಥೋದ್ಭವ ಉಂಟಾಗಲಿದೆ ಎಂದು ಹೇಳಿದೆ. ಕೊಡವರ ಕುಲದೇವತೆಯಾದ ಕಾವೇರಿಯು, ಪ್ರತಿವರ್ಷವೂ ತುಲಾ ಸಂಕ್ರಮಣದಂದು ಇಲ್ಲಿ ನೀರು ಬುಗ್ಗೆಗಳಾಗಿ ಕಾಣಿಸಿಕೊಳ್ಳುತ್ತಾಳೆ. ಇದನ್ನು ‘ತೀರ್ಥೋದ್ಭವ’ ಎನ್ನುವರು.

ತಲಕಾವೇರಿಯಲ್ಲಿ ತಾಯಿ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ| ಯಾವಾಗ ಗೊತ್ತಾ ಮಾತೆ ದರ್ಶನ ಭಾಗ್ಯ? Read More »

ಕೊಡಗು: ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಪತ್ತೆ

ಸಮಗ್ರ ನ್ಯೂಸ್: ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಪತ್ತೆಯಾದ ಘಟನೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿರಾಜಪೇಟೆಯ ಮಾಕುಟ್ಟ ಚೆಕ್ ಪೋಸ್ಟ್ ನಿಂದ 5 ಕಿ. ಮೀ. ದೂರದ ಅರಣ್ಯದಂಚಿನಲ್ಲಿ ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಅರಣ್ಯ ಸಿಬ್ಬಂದಿಗಸ್ತು ತಿರುಗುವ ಸಮಯದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಕೊಡಗು ಎಸ್ ಪಿ ರಾಮರಾಜನ್ ಭೇಟಿನೀಡಿ ತನಿಖೆ ಮುಂದುವರೆದಿದೆ.

ಕೊಡಗು: ಟ್ರಾಲಿ ಬ್ಯಾಗ್ ನಲ್ಲಿ ಕೊಳೆತ ಶವ ಪತ್ತೆ Read More »

ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು ಜ್ವರ

ಸಮಗ್ರ ನ್ಯೂಸ್:ನಿಫಾ ವೈರಸ್, ಆರ್.ಯನ್.ಎ(RNA) ಗುಂಪಿಗೆ ಸೇರಿದ ಪಾರಾಮಿಕ್ಸೊ ವೈರಾಣು ಪ್ರಭೇಧಕ್ಕೆ ಸೇರಿದ ವೈರಾಣು ಆಗಿರುತ್ತದೆ. 1999ರಲ್ಲಿ ಮಲೇಷಿಯಾದ ಒಂದು ಸಣ್ಣ ಹಳ್ಳಿಯಾದ ಸಂಗೈ ನಿಫಾ ಎಂಬ ಜಾಗದಲ್ಲಿ ಮೊದಲು ಕಾಣಿಸಿಕೊಂಡ ಕಾರಣದಿಂದ “ನಿಫಾ ವೈರಸ್” ಎಂದು ಕರೆಯಲ್ಪಡುತ್ತದೆ. ಈ ಹಳ್ಳಿಯ ಹಂದಿ ಸಾಕುವ ರೈತರಲ್ಲಿ ಮೊದಲು ಈ ಜ್ವರ ಕಾಣಿಸಿಕೊಂಡು ಮೆದುಳಿನ ಊರಿಯೂತ ಮತ್ತು ಉಸಿರಾಟದ ತೊಂದರೆ ಉಂಟುಮಾಡಿ, ನೂರಾರು ಮಂದಿ ಅಸುನೀಗಿದ್ದರು. 300 ಮಂದಿಗೆ ರೋಗ ತಗುಲಿ 100 ಮಂದಿ ಅಸುನೀಗಿದ್ದರು. ರೋಗ ಪೀಡಿತ

ನಡುಕ ಹುಟ್ಟಿಸುತ್ತಿರುವ ನಿಫಾ ವೈರಾಣು ಜ್ವರ Read More »

ಶಾಲಾ ಮಕ್ಕಳ ಮೇಲೆ ಹರಿದ ಯಮಸ್ವರೂಪಿ ಬಸ್| ಇಬ್ಬರು ಮಕ್ಕಳು ಗಂಭೀರ; ಐವರು ಕೂದಲೆಳೆಯಲ್ಲಿ ಪಾರು

ಸಮಗ್ರ ನ್ಯೂಸ್: ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ಸೊಂದು ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಆತಂಕಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ. ತುಳಸಿ (15) ನಿವೇದಿತ (14) ಎಂಬ ಇಬ್ಬರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದೆ. ಇವರನ್ನು ತಕ್ಷಣವೇ ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ರವಾನಿಸಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಓವರ್ ಸ್ಪೀಡ್ ನಿಂದ

ಶಾಲಾ ಮಕ್ಕಳ ಮೇಲೆ ಹರಿದ ಯಮಸ್ವರೂಪಿ ಬಸ್| ಇಬ್ಬರು ಮಕ್ಕಳು ಗಂಭೀರ; ಐವರು ಕೂದಲೆಳೆಯಲ್ಲಿ ಪಾರು Read More »

ಬಂಟ್ವಾಳ:ಪರವಾನಗಿ ಇಲ್ಲದೆ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟ| ಪ್ರಕರಣ ದಾಖಲು

ಸಮಗ್ರ ನ್ಯೂಸ್:ಯಾವುದೇ ಪರವಾನಿಗೆ ಇಲ್ಲದೇ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿ ಗೋಕಳ್ಳ ಜಿಹಾದಿಗಳನ್ನು ಬೆಂಡೆತ್ತಿದ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯದಲ್ಲಿ ನಡೆದಿದೆ. ಪಾತೂರು ಗ್ರಾಮದ ಮಂಜೇಶ್ವರ ನಿವಾಸಿ ಮೂಸಾ ಎಂಬವರು ಮೂವರ ಜೊತೆ ಗೂಡ್ಸ್ ವಾಹನದಲ್ಲಿ ಮುಳಿಯ ಎಂಬಲ್ಲಿಂದ 5 ಜಾನುವಾರುಗಳನ್ನು ಖರೀದಿ ಮಾಡಿಕೊಂಡು ಗೂಡ್ಸ್ ವಾಹನದಲ್ಲಿ ಕಜೆ ಎಂಬಲ್ಲಿಗೆ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಜಯ ಪ್ರಶಾಂತ, ಲಕ್ಷೀಶ ಹಾಗೂ ಇತರ ಮೂರು ಮೋಟಾರು ಸೈಕಲ್

ಬಂಟ್ವಾಳ:ಪರವಾನಗಿ ಇಲ್ಲದೆ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟ| ಪ್ರಕರಣ ದಾಖಲು Read More »

ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ| ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪದಲ್ಲಿ ಅನ್ಯಕೋಮಿನ ಕಾರು ಚಾಲಕನ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಮಹಿಳೆಯನ್ನು ತನ್ನ ಕಾರಲ್ಲಿ ಕರೆದೊಯ್ಯುತ್ತಿದ್ದ ಎಂಬ ಕಾರಣಕ್ಕೆ ಕಾರಲ್ಲಿ ಹೋಗುತ್ತಿದ್ದ ಅನ್ಯಕೋಮಿನ ವ್ಯಕ್ತಿಗೆ ಕೆಲ ಯುವಕರು ತಡೆದು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನದಿಂದ ವರದಿಯಾಗಿದೆ. ಸದ್ಯ ಸುಳ್ಯ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ತಾಲೂಕಿ‌ನ ಅರಂತೋಡು ಕಡೆ ಟ್ಯಾಪಿಂಗ್ ಕೆಲಸ ವಹಿಸಿಕೊಂಡು ಮಾಡುತ್ತಿದ್ದ ಅನ್ಯಕೋಮಿನ ವ್ಯಕ್ತಿ ಮಹಿಳೆಯೊಬ್ಬರನ್ನು ತನ್ನ ಕಾರಲ್ಲಿ ಸುತ್ತಾಡಿಸುತ್ತಿದ್ದಾನೆ ಎಂಬ ಅನುಮಾನದಿಂದ ಕೆಲ ಯುವಕರು ಕಾರನ್ನು ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ. ಇಂದು ಸಂಜೆ ಆತ ಮಹಿಳೆಯನ್ನು ಸುಳ್ಯಕ್ಕೆ

ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ| ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪದಲ್ಲಿ ಅನ್ಯಕೋಮಿನ ಕಾರು ಚಾಲಕನ ಮೇಲೆ ಹಲ್ಲೆ Read More »

‘ಗೃಹಲಕ್ಷ್ಮಿ’ ಯೋಜನೆ ಮತ್ತೆ ಮುಂದೂಡಿಕೆ| ತಿಂಗಳಾಂತ್ಯಕ್ಕೆ ಸಿಗಲಿದೆ ₹2000

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದ್ದು, ಆಗಸ್ಟ್ 29 ಅಥವಾ ಆ.30ಕ್ಕೆ ಚಾಲನೆ ನೀಡುತ್ತೇವೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 29 ಅಥವಾ 30 ಕ್ಕೆ ಚಾಲನೆ ನೀಡಲಾಗುವುದು ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರು ಈಗಾಗಲೇ ಈಡೇರಿಸಲಾಗಿದೆ. ಗೃಹಲಕ್ಷ್ಮೀ ಈ ಮಾಹೆಯಲ್ಲಿ ಜಾರಿಗೆ ತರಲಾಗುತ್ತಿದ್ದು, ಐದನೇ ಗ್ಯಾರಂಟಿ

‘ಗೃಹಲಕ್ಷ್ಮಿ’ ಯೋಜನೆ ಮತ್ತೆ ಮುಂದೂಡಿಕೆ| ತಿಂಗಳಾಂತ್ಯಕ್ಕೆ ಸಿಗಲಿದೆ ₹2000 Read More »

ಮಂಗಳೂರು: ಮಾಜಿ ಉಪಕುಲಪತಿ ಕೆ.ಬೈರಪ್ಪ ನಿಧನ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಬೈರಪ್ಪ(69) ಅವರು ಜು .31 ರಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು 2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಉಪ ಕುಲಪತಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಬಳಿಕ ನಿವೃತ್ತಿ ಹೊಂದಿ ಆದಿ ಚುಂಚನ ಗಿರಿಯಲ್ಲಿ ಸಹಕುಲಪತಿಗಳಾಗಿ ಕಾರ್ಯ ನಿರ್ವಹಿಸುತಿದ್ದರು. ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಗೊಂಡು ಕೊನೆಯುಸಿರೆಳೆದಿದ್ದಾರೆ.

ಮಂಗಳೂರು: ಮಾಜಿ ಉಪಕುಲಪತಿ ಕೆ.ಬೈರಪ್ಪ ನಿಧನ Read More »