Uncategorized

ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ತಡೆ

ಸಮಗ್ರ ನ್ಯೂಸ್: ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಸುಮಾರು ನಾಲ್ಕು ದಶಕಗಳಿಂದ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ರಾಜ್ಯ ಸರ್ಕಾರ ಮುಸ್ಲಿಮರ ಮೀಸಲಾತಿ ಕಿತ್ತುಕೊಂಡು ಒಕ್ಕಲಿಗ ಮತ್ತು ಲಿಂಗಾಯತರಿಗೆ ತಲಾ ಶೇ. 2ರಷ್ಟು ಮೀಸಲಾತಿ ಹಂಚಿಕೆ ಮಾಡಿತ್ತು. ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್ ಅವರ ನೇತೃತ್ವದ […]

ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ತಡೆ Read More »

ಸುರತ್ಕಲ್: “ಡಬಲ್ ಇಂಜಿನ್ ಸರಕಾರದ ಇಂಜಿನ್ ಮಾತ್ರ ಇಲ್ಲಿದೆ, ಬೋಗಿ ಯುಪಿ, ಗುಜರಾತ್ ನಲ್ಲಿದೆ” -ಇನಾಯತ್ ಅಲಿ

Samagra news “ಜನರು ಕೋವಿಡ್ ಬಳಿಕ ಬೆಲೆ ಏರಿಕೆಯಿಂದ ತತ್ತರಿಸಿಹೋಗಿದ್ದಾರೆ. ಅದೆಷ್ಟೋ ವಿದ್ಯಾವಂತ ಯುವಜನತೆ ಉದ್ಯೋಗ ಕಳೆದುಕೊಂಡಿದ್ದಾರೆ. ಬಿಜೆಪಿಯವರು ತಮ್ಮದು ಡಬಲ್ ಇಂಜಿನ್ ಸರಕಾರ ಅಂತ ಹೇಳ್ತಾರೆ. ಆದರೆ ಅದರ ಇಂಜಿನ್ ಮಾತ್ರ ಇಲ್ಲಿದೆ, ಬೋಗಿ ದೂರದ ಯುಪಿ, ಗುಜರಾತ್ ಕಡೆಗೆ ಹೊರಟುಹೋಗಿದೆ. ಅಭಿವೃದ್ಧಿ ಮಾಡುವುದನ್ನು ಬಿಟ್ಟು ಸಮಾಜದಲ್ಲಿ ಜಾತಿ ಮತಗಳ ಮಧ್ಯೆ ಹುಳಿ ಹಿಂಡುವ ಕೆಲಸವನ್ನು ಬಿಜೆಪಿ ನಾಯಕರು ಮಾಡಿದ್ದಾರೆ. ಈ ಬಾರಿ ಜನರು ಬಿಜೆಪಿ ಸರಕಾರದಿಂದ ಭ್ರಮ ನಿರಸನಗೊಂಡು ಕಾಂಗ್ರೆಸ್ ಕೈಹಿಡಿಯಲಿದ್ದಾರೆ. ಈ ಮೂಲಕ

ಸುರತ್ಕಲ್: “ಡಬಲ್ ಇಂಜಿನ್ ಸರಕಾರದ ಇಂಜಿನ್ ಮಾತ್ರ ಇಲ್ಲಿದೆ, ಬೋಗಿ ಯುಪಿ, ಗುಜರಾತ್ ನಲ್ಲಿದೆ” -ಇನಾಯತ್ ಅಲಿ Read More »

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ

Samagra news: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು, ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿ, ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಆರೋಪಿಸಿದ್ದಾರೆ. ನಗರದ ಯಲಂಹಕದಲ್ಲಿ ಚುನಾವಣಾ ಪ್ರಚಾರ ಹಾಗೂ ರೋಡ್ ಶೋದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ 8 ಸಾವಿರ ಕೋಟಿ ರೂ. ಅಕ್ರಮ ಮಾಡಿದ್ದಾರೆ. ಬಿಡಿಎ, ಇಂಧನ ಹಾಗೂ ನೀರಾವರಿಯಲ್ಲಿ ಅಕ್ರಮ ಮಾಡಿದ್ದಾರೆಂದು ಆರೋಪಿಸಿದರು. ಸಿದ್ದರಾಮಯ್ಯನವರ ಆಡಳಿತದಲ್ಲಿ ಶಿಕ್ಷಕರ ನೇಮಕಾತಿ, ಪ್ರಶ್ನೆಪತ್ರಿಕೆ ಸೋರಿಕೆ, ರೀಡೂ ಮುಂತಾದಂತಹ ಹಗರಣಗಳು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಡೀ ಬೆಂಗಳೂರನ್ನೇ ಲೂಟಿ ಮಾಡಿದ್ದಾರೆ: ಬಸವರಾಜ ಬೊಮ್ಮಾಯಿ Read More »

ಕರಾವಳಿಯ ಮೂವರು ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಬಹುತೇಕ ಡೌಟ್| ಸುಳ್ಯ, ಪುತ್ತೂರು, ಮೂಡಬಿದ್ರೆಗೆ ಹೊಸಮುಖ!?

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಕರಾವಳಿ ಭಾಗದಲ್ಲೂ ಗೆಲುವಿಗೆ ಬಿಜೆಪಿ ‘ಹೊಸ’ ತಂತ್ರ ರೂಪಿಸುತ್ತಿದೆ.‌ ಇದರ ಮುಂದುವರಿದ ಭಾಗವಾಗಿ ಬಿಜೆಪಿ ಭದ್ರಕೋಟೆಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಲು ಕೇಸರಿಪಡೆ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆಗೆ ಬಿಜೆಪಿ ಮುಂದಾಗಿದೆ. ಹಾಗಾದರೆ, ಯಾರಿಗೆ ಟಿಕೆಟ್​​ ಕೈತಪ್ಪುವ ಸಾಧ್ಯತೆ ಇದೆ ಎಂಬ ವಿವರ ಇಲ್ಲಿದೆ. ಯಾರಿಗೆ ಟಿಕೆಟ್​​ ಡೌಟ್​!ಬಿಜೆಪಿಯ ಭದ್ರಕೋಟೆ ಸುಳ್ಯದಲ್ಲಿ ಒಂಬತ್ತನೇ‌ ಬಾರಿಗೆ ಸ್ಪರ್ಧಿಸಲು ಸಚಿವ

ಕರಾವಳಿಯ ಮೂವರು ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಬಹುತೇಕ ಡೌಟ್| ಸುಳ್ಯ, ಪುತ್ತೂರು, ಮೂಡಬಿದ್ರೆಗೆ ಹೊಸಮುಖ!? Read More »

ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ| ಆಲ್ ದ ಬೆಸ್ಟ್ ಸ್ಟೂಡೆಂಟ್ಸ್

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಗದ್ದಲದ ನಡುವೆಯೇ ಇಂದಿನಿಂದ (ಮಾರ್ಚ್ 31) ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಆರಂಭಗೊಳ್ಳುತ್ತಿದ್ದು, ಏಪ್ರಿಲ್​ 15ರವರೆಗೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ​ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳನ್ನು ಬಂದ್​ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಇನ್ನು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್‌ ಫೋನ್, ಸ್ಮಾರ್ಟ್‌ವಾಚ್​​, ಇಯರ್‌ಫೋನ್, ಎಲೆಕ್ಟ್ರಾನಿಕ್ಸ್ ಉಪಕರಣ ತರುವಂತಿಲ್ಲ. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ

ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ| ಆಲ್ ದ ಬೆಸ್ಟ್ ಸ್ಟೂಡೆಂಟ್ಸ್ Read More »

ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ|ಮೂಡಿಗೆರೆ ಜೆಡಿಎಸ್‍ನಲ್ಲಿ ಭಿನ್ನಮತ ಸ್ಪೋಟ

ಸಮಗ್ರ ನ್ಯೂಸ್:ಮೂಡಿಗೆರೆ ಜೆಡಿಎಸ್‍ನಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ಸ್ವಪಕ್ಷದ ಮುಖಂಡರು, ಕಾರ್ಯಕರ್ತರು ಬಿ.ಬಿ ನಿಂಗಯ್ಯ ಅವರಿಗೆ ಟಿಕೇಟ್ ನೀಡಲು ವಿರೋಧ ವ್ಯಕ್ತಪಡಿಸಿದ್ದಾರೆ. ಸೋಮವಾರ ಬಣಕಲ್‍ನಲ್ಲಿ ಜೆಡಿಎಸ್ ಪಕ್ಷದ ಬಿ.ಬಿ ನಿಂಗಯ್ಯ ವಿರೋಧಿ ಬಣದಿಂದ ಬಹಿರಂಗ ಸಭೆ ನಡೆದಿದ್ದು ಸಭೆಯಲ್ಲಿ ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಲಕ್ಷ್ಮಣಗೌಡ ಮಾತನಾಡಿ, ಬಿ.ಬಿ ನಿಂಗಯ್ಯ ಅವರು ಕಾರ್ಯಕರ್ತರಿಗೆ ಸರಿಯಾಗಿ ಸ್ಪಂದಿಸುವುದಿಲ್ಲ. ಶಾಸಕರಾಗಿದ್ದ ಸಂದರ್ಭದಲ್ಲಿ ತಾಲ್ಲೂಕಿಗೆ ಯಾವುದೇ ಕೊಡುಗೆ ನೀಡಲಿಲ್ಲ. ಹೆಚ್.ಡಿ ಕುಮಾರಸ್ವಾಮಿ

ಬಿ.ಬಿ ನಿಂಗಯ್ಯಗೆ ಟಿಕೇಟ್ ನೀಡಲು ಸ್ವಪಕ್ಷದಲ್ಲಿ ವಿರೋಧ|ಮೂಡಿಗೆರೆ ಜೆಡಿಎಸ್‍ನಲ್ಲಿ ಭಿನ್ನಮತ ಸ್ಪೋಟ Read More »

ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ‌ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಲಂಚ ಪಡೆದ ಆರೋಪಕ್ಕೆ ಗುರಿಯಾಗಿ ಬಂಧನದ ಭೀತಿ ಎದುರಿಸುತ್ತಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಸಂಬಂಧ ವಿರೂಪಾಕ್ಷಪ್ಪ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ಮನವಿಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ಮಂಗಳವಾರ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಕೆ.ಸುಮನ್ ಅವರು, “ಎಫ್ ಐ ಆರ್ ನಲ‌್ಲಿ ಅರ್ಜಿದಾರರ ವಿರುದ್ಧ

ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ‌ ಬಿಗ್ ರಿಲೀಫ್ ನೀಡಿದ ಹೈಕೋರ್ಟ್ Read More »

ಹಾರ್ಟ್ ಅಟ್ಯಾಕ್ ಸಂಭವಿಸುವ ಮೊದಲ ಸೂಚನೆಗಳಿವು| ಈ ಲಕ್ಷಣಗಳಿದ್ರೆ ನಿಮ್ಮ ಹೃದಯ ಜೋಪಾನ..!

ಸಮಗ್ರ ನ್ಯೂಸ್: ಈ ಹಿಂದೆಲ್ಲಾ ಹೃದಯಕ್ಕೆ ಸಂಬಂಧಿಸಿದ ಕೆಲ ಕಾಯಿಲೆಗಳನ್ನು ಅದರಲ್ಲೂ ಹೃದಯಾಘಾತವನ್ನು ಸಾಮಾನ್ಯವಾಗಿ ವೃದ್ಧರ ಕಾಯಿಲೆ ಎಂದು ಪರಿಗಣಿಸಲಾಗಿತ್ತು. ವಯಸ್ಸಾದವರಲ್ಲಿ ಈ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದವು. ಆದರೆ ಈಗ ವಯಸ್ಸಿನ ಯಾವುದೇ ಮಿತಿ ಇಲ್ಲದೇ ಹಠಾತ್‌ ಸಾವಿಗೆ ಕಾರಣವಾಗಿರುವ ಕೆಲ ಹೃದಯ ರೋಗಗಳು ಸಂಭವಿಸುತ್ತಿವೆ. ಇಂದು ಚಿಕ್ಕ ಮಕ್ಕಳಿಂದ ಹಿಡಿದು ಹದಿಹರೆಯದವರಲ್ಲಿ ಹೃದಯಾಘಾತ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಸಾಮಾನ್ಯ ಎನಿಸಿವೆ. ಹೀಗಾಗಿ ವಯಸ್ಸಿನ ಬಗ್ಗೆ ಯೋಚಿಸದೇ ಈಗ ಹೃದಯವನ್ನು ಕಾಳಜಿ ಮಾಡುವುದು ಮುಖ್ಯವಾಗಿದೆ. ಯಾವುದೇ ರೋಗ

ಹಾರ್ಟ್ ಅಟ್ಯಾಕ್ ಸಂಭವಿಸುವ ಮೊದಲ ಸೂಚನೆಗಳಿವು| ಈ ಲಕ್ಷಣಗಳಿದ್ರೆ ನಿಮ್ಮ ಹೃದಯ ಜೋಪಾನ..! Read More »

ಮೇಕಪ್ ಮಾಡಲು ಹೋಗಿ ಎಡವಟ್ಟು| ಮುಖ ವಿರೂಪಗೊಂಡು ಮದುವೆಯೇ ಕ್ಯಾನ್ಸಲ್

ಸಮಗ್ರ ನ್ಯೂಸ್: ಪಾರ್ಲರ್‌ಗೆ ತೆರಳಿ ಮುಖವನ್ನು ಅಂದಗೊಳಿಸಲು ಹೋಗಿ ಮುಖವೇ ವಿರೂಪಗೊಂಡು ಮದುವೆ ಕ್ಯಾನ್ಸಲ್ ಆದ ದುರಂತ ಘಟನೆ ಹಾಸನದ ಅರಸೀಕೆರೆಯಲ್ಲಿ ನಡೆದಿದೆ. ಮದುವೆಯಾಗಬೇಕಿದ್ದ ವಧು ನವೀನ ಮಾದರಿಯ ಮೇಕಪ್‍ ಮಾಡಿಕೊಳ್ಳಲು ಹೋಗಿ ಯಡವಟ್ಟು ಮಾಡಿಕೊಂಡಿದ್ದಾಳೆ. ಮೇಕಪ್ ಮಾಡುವುದಾಗಿ ಹೇಳಿ ಸ್ಟೀಮ್ ತೆಗೆದುಕೊಂಡಿದ್ದು, ಇದಾದ ಬಳಿಕ ವಧುವಿನ ಮುಖ ಊದಿಕೊಂಡು, ಸುಟ್ಟಂತೆ ಕಪ್ಪಾಗಿದೆ. ಯುವತಿಯ ಮುಖ ನೋಡಿ ಮದುವೆಯಾಗಲು ವರ ಹಾಗೂ ವರನ ಕುಟುಂಬ ನಿರಾಕರಿಸಿದ್ದು, ಮದುವೇ ಕ್ಯಾನ್ಸಲ್‌ ಆಗಿದ್ದು ವಧುನಿನ ಕುಟುಂಬಸ್ಥರು ಬೇಸರಗೊಂಡು ಕಂಗಾಲಾಗಿದ್ದಾರೆ. ಮುಖವನ್ನು

ಮೇಕಪ್ ಮಾಡಲು ಹೋಗಿ ಎಡವಟ್ಟು| ಮುಖ ವಿರೂಪಗೊಂಡು ಮದುವೆಯೇ ಕ್ಯಾನ್ಸಲ್ Read More »

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ| ಇಂದಿನಿಂದಲೇ ಹೊಸ ದರ ಜಾರಿ

ಸಮಗ್ರ ನ್ಯೂಸ್: ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ಪ್ರತಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಿದೆ. 14.2 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆ 1103 ರೂ. ಆಗಿದ್ದು, ಎಂಟು ತಿಂಗಳ ಬಳಿಕ ಗೃಹ ಬಳಕೆಯ ಸಿಲಿಂಡರ್ ಬೆಲೆ 50 ರೂ. ಏರಿಕೆಯಾಗಿದೆ. ಜುಲೈ 6

ಗೃಹಬಳಕೆಯ ಎಲ್ ಪಿಜಿ ದರದಲ್ಲಿ ಭಾರೀ ಏರಿಕೆ| ಇಂದಿನಿಂದಲೇ ಹೊಸ ದರ ಜಾರಿ Read More »